Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಶಿಕ್ಷಕರ ದಿನಾಚರಣೆ ಅಂಗವಾಗಿ ಶಾಲಾ ಶಿಕ್ಷಣ ಇಲಾಖೆ ಯಿಂದ ಪ್ರದಾನ ಮಾಡಲಾಗುವ 2025-26ನೇ ಸಾಲಿನ ‘ರಾಜ್ಯ ಮಟ್ಟದ ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಪ್ರಾಥಮಿಕ ಶಾಲಾ ವಿಭಾಗದ 20 ಶಿಕ್ಷಕರು ಹಾಗೂ ಪ್ರೌಢಶಾಲಾ ವಿಭಾಗದಿಂದ 11 ಶಿಕ್ಷಕರು ಸೇರಿ 31 ಶಿಕ್ಷಕರು ಆಯ್ಕೆಯಾಗಿ ದ್ದಾರೆ. ಪಿಯು ವಿಭಾಗದಲ್ಲಿ 10 ಉಪನ್ಯಾಸಕರು, ಪ್ರಾಂಶುಪಾಲರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಉತ್ತಮ ಶಿಕ್ಷಕರು ಪಟ್ಟಿಯಲ್ಲಿನ ಇಬ್ಬರು ಶಿಕ್ಷಕಿಯರಿಗೆ ‘ಸಾವಿತ್ರಿಬಾಯಿ ಪುಲೆ’ ಹೆಸರಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿಯು 25,000 ರು. ನಗದು ಮತ್ತು ಫಲಕ ಒಳಗೊಂಡಿದೆ. ಸೆ.5ರಂದು ವಿಧಾನಸೌಧದ ಬ್ಯಾಕ್ವೆಂಟ್ ಹಾಲ್ನಲ್ಲಿ ನಡೆಯುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗಾಗಿ ಪ್ರಾಥಮಿಕ ಶಾಲಾ ವಿಭಾಗದಿಂದ 20 ಶಿಕ್ಷಕರು ಮತ್ತು ಪ್ರೌಢಶಾಲಾ ವಿಭಾಗದಿಂದ 11 ಶಿಕ್ಷಕರನ್ನು (ಓರ್ವ ವಿಶೇಷ ಶಿಕ್ಷಕರೂ ಒಳಗೊಂಡಂತೆ) 2025-26 ನೇ ಸಾಲಿಗೆ ಈ ಕೆಳಕಂಡಂತೆ ಆಯ್ಕೆ ಮಾಡಲಾಗಿದೆ. ರಾಜ್ಯ…
ಬೆಂಗಳೂರು: ಚಿನ್ನದಂಘಡಿಗೆ ನುಗ್ಗಿದ್ದ ಕಳ್ಳರ ಗ್ಯಾಂಗ್ ಪ್ಲಾಸ್ಟಿಕ್ ಗನ್ ತೋರಿಸಿ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮೊಹಮ್ಮದ್ ರಫಿಕ್, ಮೊಹಮ್ಮದ್ ಇಬ್ತೇಕರ್, ರಂಶಾದ್ ಬಂಧಿತ ಆರೋಪಿಗಳು. ನಾಲ್ವರ ಪೈಕಿ ಮೂವರು ಆರೋಪಿಗಳನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಇವರು 50ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಬಂಧಿತರು ಉಡುಪಿ, ಒಡಿಶಾ, ಮಂಗಳೂರು ಮೂಲದ ಆರೋಪಿಗಳು ಎನ್ನಲಾಗಿದೆ. ಜೂನ್ 25ರಂದು ಮಾಗಡಿ ರಸ್ತೆಯ ಮಾಚೇನಹಳ್ಳಿಯಲ್ಲಿ ಜ್ಯುವೆಲ್ಲರಿ ಶಾಪ್ ಗೆ ಗ್ಯಾಂಗ್ ವೊಂದು ನುಗ್ಗಿತ್ತು. ಪ್ಲಾಸ್ಟಿಕ್ ಗನ್ ಹಿಡಿದು ಅಂಗಡಿ ಮಾಲೀಕನನ್ನು ಬೆದರಿಸಿ 90 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಸದ್ಯ ಬಂಧಿತ ಆರೋಪಿಗಳಿಂದ 90 ಗ್ರಾಂ ಚಿನ್ನ, ಎರಡು ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ.
ಬೆಂಗಳೂರು :: ಅಪಘಾತದಲ್ಲಿ ಗಾಯಗೊಂಡವರು, ಸುಟ್ಟ ಗಾಯಾಳುಗಳು, ಅಪರಾಧ ಕಾನೂನು ಸಂಘರ್ಷದಂತಹ ಪ್ರಕರಣದಲ್ಲಿ(ಸಂಭಾವ್ಯ ಸೇರಿ) ರಾಜ್ಯದ ಆಸ್ಪತ್ರೆಗಳು ಮುಂಗಡ ಹಣ ಪಾವತಿಗೆ ಒತ್ತಾಯಿಸಿದೆ ವಿಳಂಬ ಮಾಡದೆ ಮೊದಲು ಚಿಕಿತ್ಸೆ ನೀಡಬೇಕು ಎಂದು ರಾಜ್ಯ ಸರ್ಕಾರ ಮಹತ್ವದ ಸುತ್ತೋಲೆ ಹೊರಡಿಸಿದೆ. ಬುಧವಾರ ಹೊರಡಿಸಲಾದ ಸುತ್ತೋಲೆಯಲ್ಲಿ, “ಕರ್ನಾಟಕದಲ್ಲಿ ಅಪಘಾತಕ್ಕೊಳಗಾದವರ ಚಿಕಿತ್ಸೆಗೆ ಸಂಬಂಧಿಸಿದಂತೆ ಜಾರಿ ಸಂಸ್ಥೆಗಳು ಮತ್ತು ಅಪಘಾತಕ್ಕೊಳಗಾದವರಿಗೆ ಚಾಲ್ತಿಯಲ್ಲಿರುವ ಕಾನೂನು ಮತ್ತು ಯೋಜನೆಗಳ ನಿಬಂಧನೆಗಳ ಬಗ್ಗೆ ಪುನರುಚ್ಚರಿಸುವುದು ಮತ್ತು ನಿರ್ದೇಶಿಸುವುದು ಅಗತ್ಯವೆಂದು ಪರಿಗಣಿಸಲಾಗಿದೆ” ಎಂದು ಹೇಳಲಾಗಿದೆ. ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆ, 2007ರ ಅಡಿಯಲ್ಲಿ, ‘ಅಪಘಾತಕ್ಕೆ ಬಲಿಯಾದವರು’ ಎಂಬ ಪದವು ರಸ್ತೆ ಅಪಘಾತಗಳನ್ನು ಮಾತ್ರವಲ್ಲದೆ “ಆಕಸ್ಮಿಕ ಅಥವಾ ಪ್ರೇರಿತ ಸುಟ್ಟಗಾಯಗಳು ಅಥವಾ ವಿಷಪ್ರಾಶನ ಅಥವಾ ಕ್ರಿಮಿನಲ್ ಹಲ್ಲೆಗಳು ಮತ್ತು ವೈದ್ಯಕೀಯ ಕಾನೂನು ಅಥವಾ ಸಂಭಾವ್ಯ ವೈದ್ಯಕೀಯ ಕಾನೂನು ಪ್ರಕರಣಗಳಂತಹವುಗಳನ್ನು” ಸಹ ಒಳಗೊಂಡಿದೆ ಎಂದು ಸುತ್ತೋಲೆ ಸ್ಪಷ್ಟಪಡಿಸಿದೆ. “ಅಂತಹ ಅಪಘಾತಕ್ಕೆ ಒಳಗಾದ ವ್ಯಕ್ತಿ ವೈದ್ಯಕೀಯ ಸಂಸ್ಥೆಗೆ ಬಂದಾಗ ಅಥವಾ ವೈದ್ಯಕೀಯ ಸಂಸ್ಥೆಯ ಮುಂದೆ ಕರೆತಂದಾಗ,…
ಜುನಾಗಢ್ : ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳಿಂದ ಪೈಶಾಚಿಕ ಕೃತ್ಯವೊಂದು ನಡೆದಿದ್ದು, ಸಹಪಾಠಿ ವಿದ್ಯಾರ್ಥಿಗೆ ಚಿತ್ರಹಿಂಸೆ ನೀಡಿ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಗುಜರಾತ್ ನಲ್ಲಿ ನಡೆದಿದ್ದು, ಸದ್ಯ ಈ ಘಟನೆಯ ವಿಡಿಯೋ ವೈರಲ್ ಆಗಿದೆ. ಗುಜರಾತ್ ನ ಜುನಾಗಢ್ ಅಧಿಕಾರಿಗಳು ಆಲ್ಫಾ ಇಂಟರ್ನ್ಯಾಷನಲ್ ಶಾಲೆಯಲ್ಲಿ ನಡೆದ ಗಂಭೀರ ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ, ವೀಡಿಯೊದಲ್ಲಿ ಐದರಿಂದ ಆರು ಹಾಸ್ಟೆಲ್ ಸಹಪಾಠಿಗಳ ಗುಂಪು ವಿದ್ಯಾರ್ಥಿಯೊಬ್ಬನನ್ನು ಥಳಿಸಿದೆ. ಈ ಘಟನೆ ಜುಲೈ 26, 2025 ರಂದು ನಡೆದಿದ್ದು, 11 ಮತ್ತು 12 ನೇ ತರಗತಿಯ ವಿದ್ಯಾರ್ಥಿಗಳು ಕ್ರೀಡೆಗೆ ಸಂಬಂಧಿಸಿದ ವಿಷಯಕ್ಕಾಗಿ ಜಗಳವಾಡಿದ್ದಾರೆ. ಒಬ್ಬ ವಿದ್ಯಾರ್ಥಿಯನ್ನು ಅವನ ಸಹಪಾಠಿಗಳ ಗುಂಪೊಂದು ದೈಹಿಕವಾಗಿ ಹಲ್ಲೆ ನಡೆಸಿದೆ. ಹಾಸ್ಟೆಲ್ ಮತ್ತು ಶಾಲಾ ಅಧಿಕಾರಿಗಳ ನಿರ್ಲಕ್ಷ್ಯ ಇದಕ್ಕೆ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ. ಘಟನೆಯ ಬಗ್ಗೆ ಆ ಸಮಯದಲ್ಲಿ ವರದಿಯಾಗಿಲ್ಲ ಅಥವಾ ಸಮರ್ಪಕವಾಗಿ ಗಮನಹರಿಸಿಲ್ಲ ಎಂದು ಆರೋಪಿಸಿದ್ದಾರೆ. ಕುಟುಂಬವು ಹಾಸ್ಟೆಲ್ಗೆ ತೆರಳಿ ಪ್ರತಿಭಟನೆ ನಡೆಸಿದೆ ಮತ್ತು ಅಪರಾಧಿಗಳ ವಿರುದ್ಧ ಕಠಿಣ…
ನವದೆಹಲಿ : ಪ್ರಸ್ತುತ ದೇಶದಲ್ಲಿ ಎಲ್ಲೆಡೆ ಡಿಜಿಟಲ್ ವಹಿವಾಟುಗಳು ನಡೆಯುತ್ತಿವೆ. ಹತ್ತು ರೂಪಾಯಿ ಅಥವಾ ಒಂದು ಲಕ್ಷ ರೂಪಾಯಿ ಆಗಿರಲಿ, UPI ಮೂಲಕ ಪಾವತಿಸುವುದು ಸಾಮಾನ್ಯವಾಗಿದೆ. UPI ಪಾವತಿಗಳಲ್ಲಿ ಭಾರತ ಜಗತ್ತಿಗೆ ಒಂದು ಮಾದರಿಯಾಗುತ್ತಿದೆ. ಸಾಮಾನ್ಯವಾಗಿ ದಿನಕ್ಕೆ ಒಂದು ಲಕ್ಷ ರೂಪಾಯಿಗಳಿಗೆ ಸೀಮಿತವಾಗಿದ್ದ UPI ವಹಿವಾಟುಗಳ ಮಿತಿ ಮಿತಿಯನ್ನು ಈಗ ಹೆಚ್ಚಿಸಲಾಗಿದೆ. ಭಾರತೀಯ ರಾಷ್ಟ್ರೀಯ ಪಾವತಿ ನಿಗಮ ತೆಗೆದುಕೊಂಡ ಈ ಇತ್ತೀಚಿನ ನಿರ್ಧಾರದಿಂದ, ತೆರಿಗೆಗಳು, ವಿಮಾ ಕಂತುಗಳು, ಸಾಲದ EMIಗಳು ಮತ್ತು ಷೇರು ಮಾರುಕಟ್ಟೆ ಹೂಡಿಕೆಗಳಂತಹ ಪ್ರಮುಖ ಪಾವತಿಗಳು ಈಗ ಸುಲಭವಾಗುತ್ತವೆ. ಎಷ್ಟು ಹೆಚ್ಚಳ..? ಸೆಪ್ಟೆಂಬರ್ 15 ರಿಂದ, ಕೆಲವು ರೀತಿಯ ವಹಿವಾಟುಗಳಿಗೆ ಏಕಕಾಲದಲ್ಲಿ 5 ಲಕ್ಷ ರೂ.ಗಳವರೆಗೆ ಮತ್ತು ದಿನಕ್ಕೆ 10 ಲಕ್ಷ ರೂ.ಗಳವರೆಗೆ ಪಾವತಿಸಲು ಸಾಧ್ಯವಾಗಿದೆ. ಈ ಹಣಕಾಸು ವರ್ಷದ ತೆರಿಗೆ ಪಾವತಿ ಗಡುವು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಈ ಬದಲಾವಣೆಯು ತೆರಿಗೆದಾರರಿಗೆ ತುಂಬಾ ಸಹಾಯಕವಾಗಲಿದೆ. ಹಿಂದಿನ ಮಿತಿಯಿಂದಾಗಿ ಏಕಕಾಲದಲ್ಲಿ ದೊಡ್ಡ ಪ್ರಮಾಣದ ತೆರಿಗೆಗಳನ್ನು ಪಾವತಿಸಲು ಸಾಧ್ಯವಾಗದವರಿಗೆ ಇದು ದೊಡ್ಡ…
ಕೃಷಿ ಇಲಾಖೆ ವತಿಯಿಂದ 2025-26 ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ಅರ್ಹ ರೈತರಿಂದ ಅರ್ಜಿ ಅಹ್ವಾನಿಸಲಾಗಿದೆ. ರೈತರು ಕೃಷಿ ಭಾಗ್ಯಯೋಜನೆಯಡಿ ಆರು ಘಟಕಗಳಾದ ಕೃಷಿ ಹೊಂಡ, ತಂತಿಬೇಲಿ, ಟಾರ್ಪಲ್ ಹೊದಿಕೆ, ಕ್ಷೇತ್ರ ಬದು, ಡಿಸೇಲ್ ಇಂಜನ್ ಹಾಗೂ ತುಂತುರು ನೀರಾವರಿಗೆ ಪ್ಯಾಕೇಜ್ ಮಾದರಿಯಲ್ಲಿ ಸಹಾಯಧನ ಪಡೆಯಲು ಲಭ್ಯವಿದ್ದು, ಎಲ್ಲಾ ವರ್ಗದ ಅರ್ಹ ರೈತರು ಅರ್ಜಿ ಸಲ್ಲಿಸಬಹುದಾಗಿದೆ. ಸೂಕ್ಷ್ಮ ನೀರಾವರಿ ಯೋಜನೆಯಡಿ ತುಂತುರು ನೀರಾವರಿ ಘಟಕಗಳಿಗೆ ಮತ್ತು ಹನಿ ನೀರಾವರಿ ಘಟಕಗಳಿಗೆ (ಕೃಷಿ ಬೆಳೆಗಳಿಗೆ ಮಾತ್ರ) ಎಲ್ಲಾ ವರ್ಗದ ರೈತರಿಗೆ ಶೇ.90 ರಷ್ಟು ಸಹಾಯಧನ ನೀಡಲಾಗುತ್ತದೆ. ಕೊಳವೆ ಬಾವಿ ಅಥವಾ ನೀರಾವರಿ ಮೂಲ ಹೊಂದಿರುವ ಮತ್ತು ಕನಿಷ್ಠ 1 ಎಕರೆ ಜಮೀನು ಹೊಂದಿರುವ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು. ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರೀಕರಣ ಯೋಜನೆಯಡಿ ಆಹಾರ ಸಂಸ್ಕರಣಾ ಘಟಕಗಳನ್ನು ಹೊಸದಾಗಿ ಪ್ರಾರಂಭಿಸಲು ಮತ್ತು ಚಾಲ್ತಿಯಲ್ಲಿರುವ ಆಹಾರ ಸಂಸ್ಕರಣಾ ಘಟಕಗಳನ್ನು ಉನ್ನತೀಕರಿಸಲು ಮತ್ತು ವಿಸ್ತರಿಸಲು ಅವಕಾಶ…
ಬೆಂಗಳೂರು: ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗಾಗಿ ಪ್ರಾಥಮಿಕ ಶಾಲಾ ವಿಭಾಗದಿಂದ 20 ಶಿಕ್ಷಕರು ಮತ್ತು ಪ್ರೌಢಶಾಲಾ ವಿಭಾಗದಿಂದ 11 ಶಿಕ್ಷಕರನ್ನು (ಓರ್ವ ವಿಶೇಷ ಶಿಕ್ಷಕರೂ ಒಳಗೊಂಡಂತೆ) 2025-26 ನೇ ಸಾಲಿಗೆ ಈ ಕೆಳಕಂಡಂತೆ ಆಯ್ಕೆ ಮಾಡಲಾಗಿದೆ. ರಾಜ್ಯ ಮಟ್ಟದ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ ಈ ಪುರಸ್ಕೃತರ ಪಟ್ಟಿಯಲ್ಲಿನ ಮಹಿಳಾ ಶಿಕ್ಷಕರುಗಳಿಗೆ ಅಕ್ಷರ ಮಾತೆ “ಸಾವಿತ್ರಿಬಾಯಿ ಫುಲೆ” ಇವರ ಹೆಸರಿನಲ್ಲಿ ದಿನಾಂಕ:05.09.2025 ರಂದು ನಡೆಯುವ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆಯಂದು ಪ್ರಶಸ್ತಿ ಪ್ರದಾನ ಮಾಡಲು ಅನುಮತಿ ನೀಡಲಾಗಿದೆ.
ಮೈಸೂರು : ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಭರ್ಜರಿ ಸಿದ್ಧತೆ ನಡೆದಿದ್ದು, ಮೈಸೂರಿನಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಸಂದೇಶವನ್ನೊಳಗೊಂಡ ನಾಡಹಬ್ಬ ದಸರಾ ಮಹೋತ್ಸವದ ಅಧಿಕೃತ ಆಹ್ವಾನ ಪತ್ರಿಕೆಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ವಿಶ್ವವಿಖ್ಯಾತ ಮೈಸೂರು ದಸರಾ- ಸಿಎಂ ಸಿದ್ದರಾಮ್ಯಯ ಶುಭಸಂದೇಶ ನಾಡಿನ ಸಮಸ್ತ ಜನತೆಗೆ ನಾಡಹಬ್ಬ ಮೈಸೂರು ದಸರಾದ ಹಾರ್ದಿಕ ಶುಭಾಶಯಗಳು. ನಮ್ಮ ರಾಜ್ಯದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಹೊನಲಿನಲ್ಲಿ ಪ್ರಕಾಶಮಾನವಾಗಿರುವ ನಾಡಹಬ್ಬ ಮೈಸೂರು ದಸರಾ ಮಹೋತ್ಸವವು ಕರ್ನಾಟಕದ ಹೆಮ್ಮೆ ಶಕ್ತಿಯ ಆರಾಧನೆ, ಕಲಾ ಸಂಸ್ಕೃತಿಯ ಪೋಷಣೆ ಮತ್ತು ಸಮೂಹ ಸೌಹಾರ್ದತೆಯ ಪ್ರತೀಕವಾಗಿದೆ, ನ್ಯಾಯದ ಸ್ಥಾಪನೆಯ ಸಂಕೇತವಾಗಿದೆ. ಈ ದಸರಾ ಹಬ್ಬದ ಸಂದರ್ಭದಲ್ಲಿ ಚಾಮುಂಡೇಶ್ವರಿ ದೇವಿಯ ಕೃಪೆ ಎಲ್ಲರ ಮೇಲೂ ಇರಲಿ. ನಾಡಿನಲ್ಲಿ ಶಾಂತಿ, ಸಮೃದ್ಧಿ ಮತ್ತು ಸೌಭಾಗ್ಯ ಮೇಲೈಸಲಿ ಎಂಬುದೇ ನನ್ನ ಹಾರೈಕೆ. ವೈಭವೋಪೇತ ಮೈಸೂರು ದಸರಾ ಹಬ್ಬವು ನಾಡಿನ ವೈಶಿಷ್ಟ್ಯತೆ, ಜನಪದ ಕಲಾಪರಂಪರೆ…
ಬೆಂಗಳೂರು : ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, `ಆಶಾ ಕಿರಣ ಯೋಜನೆ ಎಲ್ಲಾ ಜಿಲ್ಲೆಗಳಲ್ಲಿಯೂ ಅನುಷ್ಠಾನ ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಸಚಿವ ಸಂಪುಟ ಸಭೆ ಬಳಿಕ ಹೆಚ್.ಕೆ.ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಈ ಬಗ್ಗೆ ಮಾಹಿತಿ ನೀಡಿದ್ದು, ಆಶಾ ಕಿರಣ ಯೋಜನೆ ಎಲ್ಲಾ ಜಿಲ್ಲೆಗಳಲ್ಲಿಯೂ ಅನುಷ್ಠಾನಗೊಳಿಸಲು 52.85 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ತಿಳಿಸಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ರಾಯಸಂದ್ರ ಗ್ರಾಮದಲ್ಲಿ ಹೊಸ `ಮೆಡಿಕಲ್ ಕಾಲೇಜು ಸ್ಥಾಪನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ತಾಲೂಕಿನ ರಾಯಸಂದ್ರ ಗ್ರಾಮದಲ್ಲಿ ಹೊಸ `ಮೆಡಿಕಲ್ ಕಾಲೇಜು ಸ್ಥಾಪನೆಗೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಕರ್ನಾಟಕ ಗೃಹ ಮಂಡಳಿಯಿಂದ 65 ಕೋಟಿ ರೂ. ಮೊತ್ತದಲ್ಲಿ 25 ಎಕರೆ ಜಮೀನು ಖರೀದಿಸಲು ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ ಎಂದು ಮಾಹಿತಿ ನೀಡಿದ್ದಾರೆ.
ಬೆಂಗಳೂರು : ರಾಜ್ಯ ಸರ್ಕಾರವು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸಿಹಿಸುದ್ದಿ ನೀಡಿದ್ದು, ವೇತನ ಬಡ್ತಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹೌದು, ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪದವಿ ಮತ್ತು TET Certification ಶಾಲಾ ಶಿಕ್ಷಕರುಗಳಿಗೆ ಸಂಚಿತ ಪರಿಣಾಮ ಹೊಂದಿಲ್ಲದಂತೆ ಒಂದು ಬಾರಿಯ ವೇತನ ಬಡ್ತಿಯನ್ನು ನೀಡಲು 6 ಮತ್ತು 7ನೇ ತರಗತಿಗಳಿಗೆ ಬೋಧಿಸಲು ಅವಕಾಶ ನೀಡಲು ಮತ್ತು ಮುಖ್ಯ ಶಿಕ್ಷಕರ ಹುದ್ದೆಗೆ ಮುಂಬಡ್ತಿ ನೀಡಲು ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಹೀಗಿವೆ ಸಚಿವ ಸಂಪುಟ ಸಭೆಯ ಮುಖ್ಯಾಂಶಗಳು ರೈತರು, ಕನ್ನಡಪರ ಹೋರಾಟಗಾರರ ವಿರುದ್ಧದ 60 ಪ್ರಕರಣಗಳನ್ನು ವಾಪಸ್ ಪಡೆಯಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಮೆಟ್ರೋ ಎಲಿವೇಟೆಡ್ ಕಾರಿಡಾರ್ ಗೆ ಸಚಿವ ಸಂಪುಟ ಅನುಮೋದನೆ ನೀಡಿದೆ, ಮೆಟ್ರೋ ಹಂತ-3, ಜೆಪಿನಗರ 4ನೇ ಹಂತದಿಂದ ಹೆಬ್ಬಾಳದವರೆಗೆ ಹೊಸಹಳ್ಳಿಯಿಂದ…