Author: kannadanewsnow57

ಬೆಂಗಳೂರು: ನಗರದಲ್ಲಿನ ನಮ್ಮ ಮೆಟ್ರೋ ಸೇವೆಯಲ್ಲಿ ಹಸಿರು ಮಾರ್ಗದಲ್ಲಿ ಸಂಚಾರ ವ್ಯತ್ಯಯ ಉಂಟಾಗಲಿದೆ. ಆಗಸ್ಟ್ 20 ರ ಇಂದಿನಿಂದ ವಿವಿಧ ದಿನಾಂಕಗಳಂದು ಐದು ದಿನಗಳ ಕಾಲ ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ಸಂಚಾರವನ್ನು ಸ್ಥಗಿತಗೊಳಿಸಲಾಗುತ್ತಿದೆ. ಈ ಕುರಿತಂತೆ ಬಿಎಂಆರ್ ಸಿಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು,  ವಿಸ್ತರಿಸಿದ ಹಸಿರು ಮಾರ್ಗದ ನಾಗಸಂದ್ರದಿಂದ ಮಾದವರ ನಡುವೆ ಸಿಗ್ನಲಿಂಗ್ ಸಂಬಂಧಿತ ಪರೀಕ್ಷೆಯನ್ನು ಮುಂದುವರಿಸಲು, ಕೆಲವು ದಿನಗಳಂದು ರೈಲು ಸೇವೆಯ ಸಮಯ ಮತ್ತು ಕಾರ್ಯಾಚರಣೆಗಳಲ್ಲಿ ಬದಲಾವಣೆಯಾಗಲಿದೆ ಎಂದಿದೆ. ಈ ಕೆಳಗಿನ ವಿವರಗಳಂತೆ, ಪೀಣ್ಯ ಇಂಡಸ್ಟ್ರಿ ಮತ್ತು ನಾಗಸಂದ್ರ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗುತ್ತದೆ. ದಿನಾಂಕ 20, 23, 30ನೇ ಆಗಸ್ಟ್ 2024 ಹಾಗೂ 6 ಮತ್ತು 11ನೇ ಸೆಪ್ಟೆಂಬರ್ 2024 ರಂದು ಪೂರ್ಣ ದಿನ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗುತ್ತದೆ. ನಾಗಸಂದ್ರ ಮೆಟ್ರೋ ನಿಲ್ದಾಣದಿಂದ ಪೀಣ್ಯ ಇಂಡಸ್ಟ್ರಿ ಕಡೆಗೆ:  ದಿನಾಂಕ 24ನೇ ಆಗಸ್ಟ್ 2024 ರಂದು ಕೊನೆಯ ರೈಲು ಸೇವೆಯು ರಾತ್ರಿ 11.05 ಕ್ಕೆ…

Read More

ನವದೆಹಲಿ : ದೇಶದಲ್ಲಿ ರೈತರು ಎದುರಿಸುತ್ತಿರುವ ಮತ್ತೊಂದು ಸಮಸ್ಯೆಯನ್ನು ಪರಿಹರಿಸಲು ಸರ್ಕಾರ ಹೊಸ ನಿಯಮವನ್ನು ತಂದಿದೆ. ಹಳ್ಳಿಗಳಲ್ಲಿನ ಅನೇಕ ರೈತರು ಇನ್ನೂ ಕೃಷಿಯನ್ನು ಅವಲಂಬಿಸಿದ್ದಾರೆ ಮತ್ತು ಕೃಷಿ ಚಟುವಟಿಕೆಗಳನ್ನು ನಡೆಸಲು ಅವರ ಹೊಲಗಳಿಗೆ ಪ್ರವೇಶವು ನಿರ್ಣಾಯಕವಾಗಿದೆ.  ಆದಾಗ್ಯೂ, ಹಲವು ಕಾರಣದಿಂದಾಗಿ, ನೆರೆಹೊರೆಯ ಭೂ ಮಾಲೀಕರು ತಮ್ಮ ಭೂಮಿಯ ಮೂಲಕ ಹಾದುಹೋಗಲು ಕಷ್ಟಪಡುತ್ತಾರೆ ಮತ್ತು ಕೆಲವು ರೈತರು ಈ ಕಾರಣದಿಂದಾಗಿ ಅನಿರೀಕ್ಷಿತ ಸವಾಲುಗಳನ್ನು ಎದುರಿಸುತ್ತಾರೆ. ನೆರೆಹೊರೆಯವರನ್ನು ಮೀರಿ ತಮ್ಮ ಹೊಲಗಳನ್ನು ತಲುಪಲು ಅವರು ತೊಂದರೆಗಳನ್ನು ಎದುರಿಸುತ್ತಾರೆ. ಇದಕ್ಕಾಗಿ ಕೇಂದ್ರ ಸರ್ಕಾರವು ಮರಂ ಹಕ್ಕನ್ನು ಪರಿಚಯಿಸಿದೆ. ಈಜಿಮೆಂಟ್ ಕಾಯ್ದೆಯು ಇದರ ಮಹತ್ವವನ್ನು ಎತ್ತಿ ತೋರಿಸುತ್ತದೆ. ನೆರೆಹೊರೆ ಅಥವಾ ಅದಕ್ಕಿಂತ ಹೆಚ್ಚಿನ ಭೂ ಮಾಲೀಕರ ಅನುಕೂಲಕ್ಕಾಗಿ ರೈತರಿಗೆ ಹೊಸ ನಿಯಮಗಳು ಒಬ್ಬ ರೈತನ ಜಮೀನು ಬೇರೊಂದು ಜಮೀನಿನ ಹಿಂದೆ ಇದ್ದರೆ. ಮುಂಭಾಗದ  ಜಮೀನಿನ ಮಾಲೀಕರು ಹಿಂಭಾಗದಲ್ಲಿ ತಮ್ಮ ಜಮೀನನ್ನು ಪ್ರವೇಶಿಸುವ ಮಾರ್ಗವನ್ನು ತೋರಿಸಬೇಕು. ಇದು ಕಾನೂನು ಆಶ್ರಯವನ್ನು ಒದಗಿಸುತ್ತದೆ. ನೆರೆಹೊರೆಯ ಭೂ ಮಾಲೀಕರು ಪ್ರವೇಶ ನೀಡಲು…

Read More

ಬೆಂಗಳೂರು : 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಆಗಸ್ಟ್ 27 ರಂದು ಒಂದು ದಿನದ ವಿಶೇಷ ‘ಸಾಂದರ್ಭಿಕ ರಜೆ’ ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆಯನ್ನು 2:27.08.20240 ಮಂಗಳವಾರದಂದು ನಡೆಸಲು ಕರ್ನಾಟಕ ಲೋಕಸೇವಾ ಆಯೋಗವು ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ಸದರಿ ಪರೀಕ್ಷೆಗೆ ಅನುವಾಗುವ 214 ಸರ್ಕಾರಿ, 189 ಅನುದಾನಿತ ಮತ್ತು 161 ಶಾಸಗಿ ಶಾಲಾ-ಕಾಲೇಜುಗಳು ಸೇರಿದಂತೆ, ಒಟ್ಟಾರೆ 564 ಪರೀಕ್ಷಾ ಉಪ ಕೇಂದ್ರಗಳಿಗೆ, ಅನ್ವಯಿಸಿದಂತೆ ಒಂದು ದಿನದ (ದಿನಾಂಕ: 27.08.2024) ವಿಶೇಷ/ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ. ಸದರಿ ದಿನಾಂಕವನ್ನು ಸಾರ್ವತ್ರಿಕ ರಜೆಯನ್ನಾಗಿ Negotiable Instrument Act 1881ರ ಅಡಿಯಲ್ಲಿ ಘೋಷಿಸಲಾಗಿದೆ. ಮುಂದುವರೆದು, ಮೇಲೆ ತಿಳಿಸಿರುವ ಪರೀಕ್ಷಾ ಉಪ ಕೇಂದ್ರಗಳಲ್ಲಿ ದಿನಾಂಕ:27.08.2024ರಂದು ಯಾವುದೇ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಅತ್ಯಾಚಾರ ಸಂತ್ರಸ್ತೆಯ ವಿರುದ್ಧವೇ ಆಟೋ ಚಾಲಕರೊಬ್ಬರು ದೂರು ನೀಡಿರುವ ಘಟನೆ ನಡೆದಿದೆ. ಬೆಂಗಳೂರಿನ ಹೆಚ್ ಎಸ್ ಆರ್ ಲೇ ಔಟ್ ನಲ್ಲಿ ಯುವತಿ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣ ಸಂಬಂಧ ಇದೀಗ ಆಡುಗೋಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಯುವತಿ ಮೇಲೆಯೇ ಇದೀಗ ದೂರು ದಾಖಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಬಳಿಕ ಸಂತ್ರಸ್ತೆಯ ವಿಚಾರಣೆ ನಡೆಯಲಿದೆ. ಘಟನೆ ನಡೆದ ದಿನ ಗೆಳಯನ ಜೊತೆಗೆ ಕೋರಮಂಗಲಕ್ಕೆ ಹೋಗಿದ್ದ ಯುವತಿ ಊಟ ಮುಗಿಸಿಕೊಂಡು ಬರುವಾಗ ತಾನೇ ಕಾರು ಚಾಲನೆ ಮಾಡಿದ್ದಾಳೆ. ಈ ವೇಳೆ ಮಂಗಳ ಜಂಕ್ಷನ್ ನಲ್ಲಿ ಸರಣಿ ಅಪಘಾತ ಎಸಗಿದ್ದಾರೆ.  2 ಕಾರು, 1 ಬೈಕ್ ಗೆ ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ್ದಾಳೆ. ಈ ವೇಳೆ ಆಟೋ ಚಾಲಕ, ಬೈಕ್ ಸವಾರರು ಯುವತಿಯನ್ನು ಅಡ್ಡಗಟ್ಟಿ ಆಕ್ಸಿಡೆಂಟ್ ಗೆ ಪರಿಹಾರ ಕೊಡುವಂತೆ ಕೇಳಿದ್ದಾರೆ. ಆದರೆ ಯುವತಿ ಕಾರನ್ನು ಅಲ್ಲೇ ಬಿಟ್ಟು ಹೋಗಿದ್ದಾರೆ. ಹೀಗಾಗಿ ಅತ್ಯಾಚಾರ ಸಂತ್ರಸ್ತೆ ಯುವತಿ ವಿರುದ್ಧ ಆಟೋಗೋಡಿ ಸಂಚಾರಿ…

Read More

ಬೆಂಗಳೂರು : ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡುವವರಿಗೆ ಕೇಂದ್ರ ಚುನಾವಣಾ ಆಯೋಗ ಸಿಹಿಸುದ್ದಿ ನೀಡಿದ್ದು, ಮತದಾರರ ಪಟ್ಟಿ ಪರಿಷ್ಕರಣೆ ವೇಳಾಪಟ್ಟಿ ಪ್ರಕಟಿಸಿದೆ. ಭಾರತ ಚುನಾವಣಾ ಆಯೋಗವು ಅರ್ಹತಾ ದಿನಾಂಕ: 01.01.2025 ರಂತೆ ಭಾವಚಿತ್ರ ಸಹಿತ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025 ರ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಪೂರ್ವ ಪರಿಷ್ಕರಣೆ ಚಟುವಟಿಕೆಗಳ ಸಮಯದಲ್ಲಿ ರಾಜ್ಯದ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳು ಪ್ರತಿ ಮನೆಗೂ ಭೇಟಿ ನೀಡಿ ಪರಿಶೀಲನೆ ಕೈಗೊಳ್ಳುತ್ತಾರೆ. ಈ ಸಮಯದಲ್ಲಿ ಸಾರ್ವಜನಿಕರು ಯಾವುದೇ ರೀತಿಯ ತಿದ್ದುಪಡಿಗಳು, ಹೆಸರು ನೋಂದಣಿ, ಮೃತ ಮತ್ತು ಸ್ಥಳಾಂತರಗೊಂಡ ಮತದಾರರ ಹೆಸರುಗಳ ತೆಗೆದು ಹಾಕುವಿಕೆ ಮತ್ತು ಮುಂಬರುವ ಅರ್ಹತಾ ದಿನಾಂಕಗಳಂತೆ 18 ವರ್ಷ ತುಂಬುವ ಯುವ ಮತದಾರರ ಹೆಸರು ಸೇರ್ಪಡೆ ಕುರಿತು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹಕ್ಕು ಮತ್ತು ಆಕ್ಷೇಪಣೆಗಳ ಅವಧಿಯಲ್ಲಿ ವಿಶೇಷ ಅಭಿಯಾನ ದಿನಾಂಕಗಳನ್ನು ನಿಗಧಿಪಡಿಸಲಾಗಿದೆ. ಸಾರ್ವಜನಿಕರು ವಿಶೇಷ ಅಭಿಯಾನಗಳ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಹಾಗೂ ಅವಶ್ಯವಿರುವ ತಿದ್ದುಪಡಿ, ಸೇರ್ಪಡೆ ಹಾಗೂ ತೆಗೆದುಹಾಕುವಿಕೆಗಳಿಗೆ ಅರ್ಜಿಗಳನ್ನು ಸಲ್ಲಿಸುವಂತೆ ಮುಖ್ಯ…

Read More

ಹಾಸನ : ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿ-ಜೆಡಿಎಸ್ ಷಡ್ಯಂತ್ರ ನಡೆಸಿವೆ ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿ-ಜೆಡಿಎಸ್ ಷಡ್ಯಂತ್ರ ನಡೆಸಿದ್ದಾರೆ. ನಾವು ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ.  ಇನ್ನೂ ಹೆಚ್ಚಿನ ಹಣ ಬಡವರಿಗೆ ನೀಡುತ್ತೇವೆ ಎಂದರು. ರಾಜ್ಯಪಾಲರ ಮೂಲಕ ಸರ್ಕಾರವನ್ನು ಅಭದ್ರಗೊಳಿಸಲು ಹೊರಟಿದ್ದಾರೆ.  ಯಾವುದೇ ಕಾರಣಕ್ಕೂ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಆಗಲ್ಲ. ಕೇಂದ್ರ ಸರ್ಕಾರ ಕೂಡಲೇ ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Read More

ನವದೆಹಲಿ : ಕೋಲ್ಕತ್ತಾದ ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಇತ್ತೀಚೆಗೆ ಮಹಿಳಾ ತರಬೇತಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಇಡೀ ದೇಶವನ್ನು ಬೆಚ್ಚಿಬೀಳಿಸಿದೆ.  ಕಳೆದ ಶುಕ್ರವಾರ, ಸರ್ಕಾರಿ ಆಸ್ಪತ್ರೆಯ ಸೆಮಿನಾರ್ ಹಾಲ್ನಲ್ಲಿ 31 ವರ್ಷದ ಸ್ನಾತಕೋತ್ತರ ತರಬೇತಿ ವೈದ್ಯರ ಕ್ರೂರ ದೇಹವು ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ನ್ಯಾಷನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೋ (ಎನ್ಸಿಆರ್ಬಿ) ಯ ಇತ್ತೀಚಿನ ವರದಿಯು ಭಾರತದಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳ ಕಠೋರ ಚಿತ್ರವನ್ನು ಬಹಿರಂಗಪಡಿಸಿದೆ. 2022 ರಲ್ಲಿ, ದೇಶವು 4,45,256 ಪ್ರಕರಣಗಳನ್ನು ದಾಖಲಿಸಿದೆ, ಅಂದರೆ ಪ್ರತಿ ಗಂಟೆಗೆ 51 ಪ್ರಕರಣಗಳು. ಎನ್ಸಿಆರ್ಬಿ ವರದಿಯ ಪ್ರಕಾರ, ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳಲ್ಲಿ ‘ಗಂಡಂದಿರು ಅಥವಾ ಅವರ ಸಂಬಂಧಿಕರಿಂದ ಕ್ರೌರ್ಯ’, ‘ಮಹಿಳೆಯರನ್ನು ಅಪಹರಿಸುವುದು ಮತ್ತು ಬಲವಂತವಾಗಿ ತೆಗೆದುಕೊಳ್ಳುವುದು’, ‘ಮಹಿಳೆಯರ ಮೇಲಿನ ಹಲ್ಲೆ’ ಮತ್ತು ‘ಅತ್ಯಾಚಾರ’ ಸೇರಿವೆ. ಎನ್ಸಿಆರ್ಬಿ ವರದಿಯ ಪ್ರಕಾರ, ಭಾರತದಲ್ಲಿ ಪ್ರತಿ 16 ನಿಮಿಷಕ್ಕೆ ಒಬ್ಬ ಮಹಿಳೆಯೊಂದಿಗೆ ಅತ್ಯಾಚಾರದಂತಹ ಅಸಹ್ಯಕರ ಘಟನೆ ನಡೆಯುತ್ತದೆ.  ರಾಜ್ಯಗಳಲ್ಲಿ ಅತ್ಯಾಚಾರ ಪ್ರಕರಣಗಳು…

Read More

ಬಾಗಲಕೋಟೆ : ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡರುವ ಪ್ರಾಸಿಕ್ಯೂಷನ್ ವಿರೋಧಿಸಿ ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು, ಸಿಎಂ ಸಿದ್ದರಾಮಯ್ಯ ಅಭಿಮಾನಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಬಾಗಲಕೋಟೆಯ ಜಿಲ್ಲಾಧಿಕಾರಿಗಳ ಸರ್ಕಲ್ ನಲ್ಲಿ ನಡೆದ ಪ್ರತಿಭಟನೆ ವೇಳೆ ರಾಜ್ಯಪಾಲರ ಪ್ರತಿಕೃತಿ ದಹನದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅಭಿಮಾನಿ ದ್ಯಾಮಪ್ಪ ಎಂಬುವರಿಗೆ ಬೆಂಕಿ ತಗುಲಿದ್ದು, ಮುಖ,ಎದೆ, ಭುಜಕ್ಕೆ ಸುಟ್ಟ ಗಾಯಗಳಾಗಿವೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಹಲವಡೆ ಟೈರ್ ಗಳಿಗೆ ಬೆಂಕಿ ಹಚ್ಚಲಾಗಿದ್ದು, ಮಂಗಳೂರಿನಲ್ಲಿ ಖಾಸಗಿ ಬಸ್ ಮೇಲೆ ಕಲ್ಲು ತೂರಾಟ ಕೂಡ ನಡೆದಿದೆ ಎನ್ನಲಾಗಿದೆ.

Read More

ಕೋಲ್ಕತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಪ್ರಚೋದನಕಾರಿ ಸಾಮಾಜಿಕ ಮಾಧ್ಯಮ ಪೋಸ್ಟ್ಗಾಗಿ ಎರಡನೇ ವರ್ಷದ ಬಿಕಾಂ ವಿದ್ಯಾರ್ಥಿಯನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ “ಕೀರ್ತಿಸೋಷಿಯಲ್” ಹ್ಯಾಂಡಲ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆರೋಪಿ ಕೀರ್ತಿ ಶರ್ಮಾ, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹತ್ಯೆಯನ್ನು ನೆನಪಿಸುವ ರೀತಿಯಲ್ಲಿ ಮುಖ್ಯಮಂತ್ರಿಯನ್ನು ಹತ್ಯೆ ಮಾಡಲು ಇತರರನ್ನು ಪ್ರೋತ್ಸಾಹಿಸಿದ ಆರೋಪ ಎದುರಿಸುತ್ತಿದ್ದಾನೆ. ಘಟನೆಯ ಬಗ್ಗೆ ಕೋಲ್ಕತಾ ಪೊಲೀಸರು ಹೇಳಿಕೆ ಬಿಡುಗಡೆ ಮಾಡಿದ್ದು, “ಆರ್ಜಿ ಕಾರ್ ಆಸ್ಪತ್ರೆಯಲ್ಲಿ ಇತ್ತೀಚೆಗೆ ನಡೆದ ಘಟನೆಗೆ ಸಂಬಂಧಿಸಿದ ಮೂರು ಇನ್ಸ್ಟಾಗ್ರಾಮ್ ಕಥೆಗಳನ್ನು ಅಪ್ಲೋಡ್ ಮಾಡಿದ ಇನ್ಸ್ಟಾಗ್ರಾಮ್ ಐಡಿ ‘ಕೀರ್ತಿಸೋಷಿಯಲ್’ ಹೊಂದಿರುವ ಆರೋಪಿ ವ್ಯಕ್ತಿಯ ಬಗ್ಗೆ ದೂರು ಬಂದಿದೆ. ಪೋಸ್ಟ್ಗಳು ಬಲಿಪಶುವಿನ ಚಿತ್ರ ಮತ್ತು ಗುರುತನ್ನು ಬಹಿರಂಗಪಡಿಸಿವೆ, ಇದು ಸ್ವಭಾವದಲ್ಲಿ ಹೆಚ್ಚು ಆಕ್ರಮಣಕಾರಿಯಾಗಿದೆ. ಇದಲ್ಲದೆ, ಆರೋಪಿಗಳು ಪಶ್ಚಿಮ ಬಂಗಾಳದ ಗೌರವಾನ್ವಿತ ಮುಖ್ಯಮಂತ್ರಿಯ ವಿರುದ್ಧ ಆಕ್ಷೇಪಾರ್ಹ ಕಾಮೆಂಟ್ಗಳು ಮತ್ತು ಜೀವ ಬೆದರಿಕೆಗಳನ್ನು ಹೊಂದಿರುವ ಎರಡು ಕಥೆಗಳನ್ನು ಹಂಚಿಕೊಂಡಿದ್ದಾರೆ. ಈ ಹೇಳಿಕೆಗಳು…

Read More

ಬೆಂಗಳೂರು: ರಾಜ್ಯದಲ್ಲಿ ದಾಂದಲೆ, ಹಲ್ಲೆಗಳಾದ್ರೆ ರಾಜ್ಯಪಾಲರೇ ನೇರ ಹೊಣೆ ಎಂದು ಸಚಿವ ಜಮೀರ್ ಅಹಮದ್ ಖಾನ್ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು ಕಾಂಗ್ರೆಸ್ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಮಾತನಾಡಿದ ಸಚಿವ ಜಮೀರ್ ಅಹಮದ್ ಖಾನ್, ರಾಜ್ಯದಲ್ಲಿ ದಾಂದಲೆ, ಹಲ್ಲೆಗಳಾದ್ರೆ ರಾಜ್ಯಪಾಲರೇ ನೇರ ಹೊಣೆ, ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರವಿಲ್ಲ. ಸಿಎಂ ಸ್ಥಾನದಿಂದ ಕೆಳಗಿಳಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ಹಿಂದುಳಿದ ನಾಯಕ ಸಿದ್ದರಾಮಯ್ಯರನ್ನು ಕೆಳಗಿಳಿಸಲು ಬಿಜೆಪಿಯಿಂದ ಷಡ್ಯಂತ್ರ ನಡೆಯುತ್ತಿದೆ. ಸಿಎಂ ವಿರುದ್ಧ ಸಂವಿಧಾನದ ವಿರುದ್ಧವಾಗಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲಾಗಿದೆ. ರಾಜ್ಯಪಾಲರ ಕಚೇರಿ ಬಿಜೆಪಿ ಕಚೇರಿ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

Read More