Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ಮೇ ತಿಂಗಳ ಬ್ಯಾಂಕ್ ರಜೆ ದಿನಗಳ ಪಟ್ಟಿಯನ್ನು ಭಾರತೀಯ ರಿಸರ್ವ್ ಬ್ಯಾಂಕ್ ಪ್ರಕಟಿಸಿದ್ದು, ಮೇ ತಿಂಗಳಲ್ಲಿ ಒಟ್ಟು 12 ಬ್ಯಾಂಕ್ ರಜಾದಿನಗಳಿವೆ. ಇದರಲ್ಲಿ ವಾರದ ರಜಾದಿನಗಳು ಮತ್ತು ಎರಡನೇ ಮತ್ತು ನಾಲ್ಕನೇ ಶನಿವಾರಗಳು ಸೇರಿದಂತೆ ಹಬ್ಬಗಳು ಸೇರಿವೆ. ವಿವಿಧ ರಾಜ್ಯಗಳಿಗೆ ಅನುಗುಣವಾಗಿ ರಜಾದಿನಗಳನ್ನು ಘೋಷಿಸಲಾಗುತ್ತದೆ. ರಜಾ ದಿನಗಳ ಪಟ್ಟಿಯನ್ನು ಆರ್ಬಿಐ ಬಿಡುಗಡೆ ಮಾಡುತ್ತದೆ. ಇದರಲ್ಲಿ ಕಾರ್ಮಿಕ ದಿನ, ಎರಡನೇ ಮತ್ತು ನಾಲ್ಕನೇ ಶನಿವಾರಗಳು, ವಾರದ ರಜಾದಿನಗಳು ಸೇರಿವೆ. ಬ್ಯಾಂಕ್ ರಜಾ ದಿನಗಳ ಸಂಪೂರ್ಣ ಪಟ್ಟಿ ಮೇ 1 — ಕಾರ್ಮಿಕ ದಿನ ಮೇ 4 – ಭಾನುವಾರ ಮೇ 9 – ರವೀಂದ್ರನಾಥ ಟ್ಯಾಗೋರ್ ಅವರ ಜನ್ಮ ವಾರ್ಷಿಕೋತ್ಸವ – ಕೋಲ್ಕತ್ತಾ ಮೇ 10 – ಎರಡನೇ ಶನಿವಾರ – ಎಲ್ಲೆಡೆ ಮೇ 11 – ಭಾನುವಾರ – ಎಲ್ಲೆಡೆ ಮೇ ೧೨ – ಬುದ್ಧ ಪೂರ್ಣಿಮೆ ಮೇ 16 – ರಾಜ್ಯ ದಿನ – ಗ್ಯಾಂಗ್ಟಾಕ್ ಮೇ…
ಮೇ 1, 2025 ರಿಂದ ಭಾರತದಲ್ಲಿ ಬ್ಯಾಂಕಿಂಗ್, ತೆರಿಗೆ ಮತ್ತು ದೈನಂದಿನ ಹಣಕಾಸು ಸೇವೆಗಳಿಗೆ ಸಂಬಂಧಿಸಿದ ಹಲವು ಹೊಸ ನಿಯಮಗಳನ್ನು ಜಾರಿಗೆ ತರಲಾಗುವುದು. ಈ ಬದಲಾವಣೆಗಳು ಸಾಮಾನ್ಯ ಮನುಷ್ಯನ ಜೇಬು ಮತ್ತು ಅವನ ಸೇವೆಗಳ ಮೇಲೆ ನೇರವಾಗಿ ಪರಿಣಾಮ ಬೀರುತ್ತವೆ. ವ್ಯವಸ್ಥೆಯನ್ನು ಹೆಚ್ಚು ಸುರಕ್ಷಿತ, ಪಾರದರ್ಶಕ ಮತ್ತು ಡಿಜಿಟಲ್ ಮಾಡುವ ಗುರಿಯನ್ನು ಹೊಂದಿರುವ ಬ್ಯಾಂಕ್ ಖಾತೆ, ಎಟಿಎಂ ವಹಿವಾಟುಗಳು, ಜಿಎಸ್ಟಿ ನಿಯಮಗಳು ಮತ್ತು ಇತರ ಹಲವು ನಿಯಮಗಳಲ್ಲಿ ಬದಲಾವಣೆಗಳನ್ನು ಮಾಡಲಾಗುತ್ತಿದೆ. ಈ ಹೊಸ ನಿಯಮಗಳ ಅನುಷ್ಠಾನದೊಂದಿಗೆ, ನಿಮ್ಮ ಬ್ಯಾಂಕಿಂಗ್ ಪದ್ಧತಿಗಳು, ವೆಚ್ಚಗಳು ಮತ್ತು ತೆರಿಗೆ ಯೋಜನೆಯಲ್ಲಿ ನೀವು ಬದಲಾವಣೆಗಳನ್ನು ಮಾಡಬೇಕಾಗಬಹುದು. ಈ ಬದಲಾವಣೆಗಳ ಪರಿಣಾಮವು ಮೆಟ್ರೋ ನಗರಗಳಿಗೆ ಮಾತ್ರ ಸೀಮಿತವಾಗಿರದೆ, ಗ್ರಾಮೀಣ ಪ್ರದೇಶದ ಖಾತೆದಾರರು ಮತ್ತು ಸಣ್ಣ ಉದ್ಯಮಿಗಳ ಮೇಲೂ ಪರಿಣಾಮ ಬೀರುತ್ತದೆ. ಡಿಜಿಟಲ್ ವಹಿವಾಟುಗಳನ್ನು ಉತ್ತೇಜಿಸಲು, ವಂಚನೆಯನ್ನು ತಡೆಗಟ್ಟಲು ಮತ್ತು ಗ್ರಾಹಕರ ಅನುಭವವನ್ನು ಸುಧಾರಿಸಲು ಈ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ನೀವು ಬ್ಯಾಂಕಿಂಗ್, ಎಟಿಎಂ ಅಥವಾ ಜಿಎಸ್ಟಿಯಂತಹ ಸೇವೆಗಳನ್ನು ಸಹ ಬಳಸುತ್ತಿದ್ದರೆ,…
ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಒಂದು ವಾರ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಮೇ. 6 ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇಂದಿನಿಂದ ಮೇ. 6 ರವರೆಗೆ ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, , ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ, ಯಾದಗಿರಿ, ಬಳ್ಳಾರಿ, , ಚಾಮರಾಜನಗರದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗುಡುಗು-ಸಿಡಿಲು ಸಂದರ್ಭದಲ್ಲಿ ತಪ್ಪದೇ ಈ ಸಲಹೆ ಸೂಚನೆಗಳನ್ನು ಪಾಲಿಸಿ.! ಹೊರಗೆ ಹೋಗುವ ಅನಿವಾರ್ಯವಿದ್ದಲ್ಲಿ ಹವಾಮಾನ ಮುನ್ಸೂಚನೆ ಹಾಗೂ Common Alerting Protocol (CAP) ಮುಖಾಂತರ ಬರುವ Alerts / ಸಂದೇಶಗಳನ್ನು ಮೊಬೈಲ್ ನಲ್ಲಿ ಗಮನಿಸುವುದು. ಪ್ರತಿಕೂಲ ಹವಾಮಾನದ ಸಮಯದಲ್ಲಿ…
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಬರ್ಬರ ಹತ್ಯೆಯಾಗಿದ್ದು, ನೈಜೀರಿಯನ್ ಮಹಿಳೆಯನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕೊಲೆ ನಡೆದಿದೆ. ಬೇರೆಡೆ ಮಹಿಳೆಯನ್ನು ಕೊಲೆ ಮಾಡಿ ಇಲ್ಲಿಗೆ ತಂದು ಹಾಕಿರುವ ಶಂಕೆ ವ್ಯಕ್ತವಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ನವದೆಹಲಿ: ಲಷ್ಕರ್-ಎ-ತೈಬಾ ಮುಖ್ಯಸ್ಥ ಮತ್ತು 26/11 ಮುಂಬೈ ದಾಳಿಯ ಮಾಸ್ಟರ್ ಮೈಂಡ್, ಹಫೀಜ್ ಸಯೀದ್ ಪ್ರಸ್ತುತ ಪಾಕಿಸ್ತಾನ ಸರ್ಕಾರದ ಬಿಗಿ ಭದ್ರತೆಯಲ್ಲಿ ಲಾಹೋರ್ನ ಜೋರಾಮ್ ಟೌನ್ ಪ್ರದೇಶದಲ್ಲಿ ವಾಸಿಸುತ್ತಿದ್ದಾನೆ. ವರದಿಗಳ ಪ್ರಕಾರ, ಅವರ ಭದ್ರತೆಯನ್ನು ಮೂರು ಹಂತಗಳಲ್ಲಿ ಒದಗಿಸಲಾಗುತ್ತಿದೆ ಮತ್ತು ಅವರ ವೈಯಕ್ತಿಕ ಭದ್ರತಾ ತಂಡವನ್ನು ದಿನದ 24 ಗಂಟೆಯೂ ನಿಯೋಜಿಸಲಾಗಿದೆ. ಮಾಧ್ಯಮಗಳಲ್ಲಿ ಕಾಣಿಸಿಕೊಂಡಿರುವ ಚಿತ್ರಗಳು ಮತ್ತು ವೀಡಿಯೊಗಳು ಹಫೀಜ್ ಸಯೀದ್ ತನ್ನ ಕುಟುಂಬದೊಂದಿಗೆ ಸುರಕ್ಷಿತ ಕಟ್ಟಡದಲ್ಲಿ ವಾಸಿಸುತ್ತಿದ್ದಾನೆ ಎಂದು ಬಹಿರಂಗಪಡಿಸಿವೆ. ಈ ಕಟ್ಟಡದ ಮುಂದೆಯೇ ಒಂದು ಖಾಸಗಿ ಉದ್ಯಾನವನವೂ ಇದೆ, ಇದನ್ನು ಸಯೀದ್ ಮತ್ತು ಅವನ ಜನರು ಮಾತ್ರ ಬಳಸುತ್ತಾರೆ. ಗುಪ್ತಚರ ಮಾಹಿತಿಯ ಪ್ರಕಾರ, ಅದೇ ಸಂಕೀರ್ಣದ ಎರಡನೇ ಸಂಖ್ಯೆಯ ಕಟ್ಟಡದಲ್ಲಿ ಒಂದು ದೇವಾಲಯ ಮತ್ತು ಮದರಸಾ ಇದ್ದು, ಅದರ ಅಡಿಯಲ್ಲಿ ಬಂಕರ್ ನಿರ್ಮಿಸಲಾಗಿದೆ. ಈ ಬಂಕರ್ ಹಫೀಜ್ ಸಯೀದ್ ನ ಭದ್ರತಾ ತಂಡದ ಅಡಗುತಾಣವಾಗಿದ್ದು, ಇಲ್ಲಿಂದಲೇ ಅವನು ತನ್ನ ಕಾರ್ಯಾಚರಣೆಗಳನ್ನು ನಡೆಸುತ್ತಾನೆ. ವಿಶ್ವಸಂಸ್ಥೆಯು ಈಗಾಗಲೇ ಹಫೀಜ್ ಸಯೀದ್ ನನ್ನು…
ನವದೆಹಲಿ : ಮೇ ತಿಂಗಳಲ್ಲಿ ಬ್ಯಾಂಕಿಂಗ್ ಕ್ಷೇತ್ರಕ್ಕೆ ಸಂಬಂಧಿಸಿದ ಹಲವು ಬದಲಾವಣೆಗಳು ಸಂಭವಿಸಲಿವೆ. ಬ್ಯಾಂಕ್ ರಜಾದಿನಗಳಾಗಲಿ ಅಥವಾ ಎಟಿಎಂಗಳಿಂದ ಹಣವನ್ನು ಹಿಂಪಡೆಯಲು ಶುಲ್ಕಗಳಾಗಲಿ, ಬ್ಯಾಂಕಿಂಗ್ಗೆ ಸಂಬಂಧಿಸಿದ ಹಲವು ನಿಯಮಗಳು ಮೇ 1 ರಿಂದ ಬದಲಾಗುತ್ತವೆ. ಸರ್ಕಾರವು ಒಂದು ರಾಜ್ಯ-ಒಂದು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ನೀತಿಗೆ ಹಸಿರು ನಿಶಾನೆ ತೋರಿಸಿದೆ. ಇದರ ಅಡಿಯಲ್ಲಿ, ಈಗ ಮೇ 1 ರಿಂದ 15 ಗ್ರಾಮೀಣ ಬ್ಯಾಂಕುಗಳು ವಿಲೀನಗೊಳ್ಳಲಿವೆ. ಮೇ 1 ರಿಂದ 43 ಆರ್ಆರ್ಬಿ ಬ್ಯಾಂಕುಗಳಲ್ಲಿ 15 ವಿಲೀನಗೊಳ್ಳಲಿವೆ. ಬ್ಯಾಂಕುಗಳನ್ನು ಏಕೆ ವಿಲೀನಗೊಳಿಸಲಾಗುತ್ತಿದೆ? ಈ ವಿಲೀನದೊಂದಿಗೆ, ದೇಶದಲ್ಲಿ ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳ ಸಂಖ್ಯೆ 43 ರಿಂದ 28 ಕ್ಕೆ ಇಳಿಯಲಿದೆ. ವಿಲೀನಗೊಳ್ಳಲಿರುವ 15 ಬ್ಯಾಂಕುಗಳಲ್ಲಿ ಆಂಧ್ರಪ್ರದೇಶ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಬಿಹಾರ, ಗುಜರಾತ್, ಜಮ್ಮು ಮತ್ತು ಕಾಶ್ಮೀರ, ಕರ್ನಾಟಕ, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ ಮತ್ತು ರಾಜಸ್ಥಾನದ ಗ್ರಾಮೀಣ ಬ್ಯಾಂಕುಗಳು ಸೇರಿವೆ. ಬ್ಯಾಂಕುಗಳ ವಿಲೀನವು ಬ್ಯಾಂಕಿಂಗ್ ವ್ಯವಸ್ಥೆಯನ್ನು ಸುಧಾರಿಸುತ್ತದೆ. ಏಕೀಕೃತ IFSC ಮತ್ತು MICR ಕೋಡ್ಗಳನ್ನು…
ದಾವಣಗೆರೆ : ಮೊಬೈಲ್ ನಲ್ಲಿ ಮಾತನಾಡುತ್ತ ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿಯಾಗಿ ಯುವತಿ ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆಯ ಹರಿಹರ ರೈಲು ನಿಲ್ದಾಣದಲ್ಲಿ ಶ್ರಾವಣಿ (23) ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ. ಎಂಬಿಎ ಓದುತ್ತಿದ್ದ ಬಳ್ಳಾರಿಯ ಶ್ರಾವಣಿ, ಹರಿಹರಕ್ಕೆ ಸಂಬಂಧಿಕರ ಮನೆಗೆ ಬಂದಿದ್ದರು. ಮೊಬೈಲ್ ನಲ್ಇ ಮಾತನಾಡುತ್ತ ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೆಂಗಳೂರು : ಬಿಸಿಲ ಬೇಗೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಂತಹ ಸಂದರ್ಭದಲ್ಲಿ ಆರೋಗ್ಯದ ಕಾಳಜಿ ಬಗ್ಗೆ ನಿಗಾವಹಿಸುವುದು ಅತ್ಯಗತ್ಯವಾಗಿದೆ. ಬಿಸಿಲ ಬೇಗೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಉರಿ ಬಿಸಿಲು, ಬಿಸಿಗಾಳಿಯಿಂದ ಹಗಲಿನಲ್ಲಿ ಓಡಾಡುವುದು ಕಷ್ಟವೆನಿಸುತ್ತಿದೆ. ತಲೆನೋವು, ಆಯಾಸ, ಮೈಯುರಿಯಂತಹ ಸಮಸ್ಯೆಗಳು ಉದ್ಭವಿಸುತ್ತಿವೆ. ಬಿಸಿಲಾಘಾತದಂತಹ ಗಂಭೀರ ಸಮಸ್ಯೆಗಳು ತಲೆದೋರುತ್ತಿವೆ. ಇಂತಹ ಸಂದರ್ಭದಲ್ಲಿ ಆರೋಗ್ಯದ ಕಾಳಜಿ ಬಗ್ಗೆ ನಿಗಾವಹಿಸುವುದು ಅತ್ಯಗತ್ಯವಾಗಿದೆ. ಬಿಸಿಲಿನಿಂದ ಸುರಕ್ಷಿತರಾಗಿರಲು ಈ ಕ್ರಮಗಳನ್ನು ತಪ್ಪದೆ ಅನುಸರಿಸಿ. https://twitter.com/i/status/1917458930793603465
ಬೀದರ್ : ರಾಜ್ಯದಲ್ಲಿ ಮತ್ತೊಂದು ಭೀಕರ ಕೃತ್ಯವೊಂದು ನಡೆದಿದ್ದು, 2 ವರ್ಷದ ಮಗನ ಎದುರಲ್ಲೇ ದಂಪತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ. ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಕೊಹಿನೂರ ಪಹಾಡ್ ಗ್ರಾಮದ ದಂಪತಿಯ ಬರ್ಬರ ಹತ್ಯೆ ಮಾಡಲಾಗಿದೆ. ದುಷ್ಕರ್ಮಿಗಳು ಕತ್ತು ಕೊಯ್ದು ರಾಜು ಕೊಳಸುರೆ(28) ಶಾರದಾ(27) ಅವರನ್ನು ಕೊಲೆ ಮಾಡಲಾಗಿದೆ. ಮೃತಪಟ್ಟ ದಂಪತಿ ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಜಾಫರ್ ವಾಡಿ ಗ್ರಾಮದ ನಿವಾಸಿಗಳಾಗಿದ್ದಾರೆ. ಜಾಫರವಾಡಿಯ ದತ್ತಾತ್ರೇಯ ಮತ್ತು ತುಕಾರಾಮ ಅವರು ದಂಪತಿ ಕೊಲೆಗೈದ ನಂತರ ಪೊಲೀಸರಿಗೆ ಶರಣಾಗಿದ್ದಾರೆ. ದತ್ತಾತ್ರೇಯ ತಂಗಿಯ ಜೊತೆಗೆ ರಾಜು ಅನೈತಿಕ ಸಂಬಂಧ ಹೊಂದಿದ್ದು, ಇಬ್ಬರು ಜೊತೆಗಿರುವ ಫೋಟೋವನ್ನು ಜಾಲತಾಣದಲ್ಲಿ ಹಂಚಿಕೊಂಡಿದ್ದ. ಇದರಿಂದ ಕೋಪಗೊಂಡು ರಾಜು ದಂಪತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಎಸ್ಪಿ ಪ್ರದೀಪ್ ಗುಂಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸವಕಲ್ಯಾಣದ ಮಂಠಾಳ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಶ್ರೀನಗರ : ಜಮ್ಮು&ಕಾಶ್ಮೀರದ ಪಹಲ್ಗಾಮ್ ಉಗ್ರ ದಾಳಿ ಪ್ರಕರಣದ ತನಿಖೆ ನಡೆಸುತ್ತಿರುವ ಎನ್ ಐಎ ಅಧಿಕಾರಿಗಳು ಪಹಲ್ಗಾಮ್ ಭೇಟಿ ನೀಡಿದ್ದು, ಬೈಸರನ್ ಕಣಿವೆಯಲ್ಲಿ 40 ಕಾಟ್ರಿಡ್ಜ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಕಣಿವೆಯಲ್ಲಿ ರಾಷ್ಟ್ರೀಯ ತನಿಖಾ ದಳ, ವಿಧಿವಿಜ್ಞಾನ ತಜ್ಞರಿಂದ ತನಿಖೆ ಆರಂಭಿಸಲಾಗಿದೆ. CRPF, ಸ್ಥಳೀಯ ಪೊಲೀಸರಿಂದ ಅರಣ್ಯದಲ್ಲಿ ಸಾಕ್ಷ್ಯ ಸಂಗ್ರಹಿಸಲಾಗುತ್ತಿದೆ.