Author: kannadanewsnow57

ಬೆಳಗಾವಿ : ರಾಜ್ಯದಲ್ಲಿ ಬಾಣಂತಿಯರ ಸಾವು ಮುಂದುವರೆದಿದ್ದು, ಬೆಳಗಾವಿ ಜಿಲ್ಲಾಸ್ಪತ್ರೆ ಬಿಮ್ಸ್ ನಲ್ಲಿ ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದು, ಕುಟುಂಬಸ್ಥರು ಆಕ್ರಂದನ ಮುಗಿಲು ಮುಟ್ಟಿದೆ. ಬೀಮ್ಸ್ ಆಸ್ಪತ್ರೆಗೆ ಹೆರಿಗೆಗೆ ದಾಖಲಾಗಿದ್ದ 31 ವರ್ಷದ ಅಂಜಲಿ ಮೃತ ಬಾಣಂತಿ. ನಿಲಜಿ ಗ್ರಾಮದ ನಿವಾಸಿಯಾಗಿದ್ದ ಅಂಜಲಿ ಹೆರಿಗೆಗೆಂದು ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಹೆಣ್ಣುಮಗುವಿಗೆ ಜನ್ಮ ನೀಡಿದ್ದ ಅಂಜಲಿ ಲೋ ಬಿಪಿಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಲೋ ಬಿಪಿಯಿಂದ ಬಾಣಂತಿ ಅಂಜಲಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

Read More

ಕಾನ್ಪುರ : ಉತ್ತರ ಪ್ರದೇಶದಲ್ಲಿ ಘೋರ ಘಟನೆಯೊಂದು ನಡೆದಿದ್ದು, ಮದುವೆ ಮೆರವಣಿಯಲ್ಲಿ ಕುದುರೆ ಕಾಲಿನಿಂದ ಒದ್ದ ಪರಿಣಾಮ 6 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಭಾನುವಾರ, ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯ ಹನುಮಂತ್ ವಿಹಾರ್ ಪ್ರದೇಶದಲ್ಲಿ, ವರನನ್ನು ಕೂರಿಸಲು ಬಂದ ಕುದುರೆಯೊಂದು, ನೃತ್ಯ ಮಾಡುತ್ತಾ ಹಿಂದಿನಿಂದ ಹಾದುಹೋಗುತ್ತಿದ್ದ 6 ವರ್ಷದ ಮಗುವನ್ನು ಹಾರಿ ಒದೆಯಿತು. ಅವನನ್ನು ಒದ್ದ ತಕ್ಷಣ, ಮಗು 5 ಅಡಿ ಜಿಗಿದು, ಕೆಳಗಿನ ಕಲ್ಲಿನ ವೇದಿಕೆಗೆ ಡಿಕ್ಕಿ ಹೊಡೆದು ಚರಂಡಿಗೆ ಬಿದ್ದಿತು. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ಸೋಮವಾರ ನಿಧನರಾದರು. ಈ ಇಡೀ ಘಟನೆ ಹತ್ತಿರದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದರ ವಿಡಿಯೋ ಸೋಮವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. https://twitter.com/i/status/1883875566618857929 ಸುರೇಶ್ ಚಂದ್ರ ಗುಪ್ತಾ ಮೂಲತಃ ಫತೇಪುರದ ಖಗಾದ ರಾಂಪುರ ಬಸಾಯಿ ನಿವಾಸಿಯಾಗಿದ್ದು, ಹನುಮಂತ್ ವಿಹಾರ್‌ನ ಠಾಕೂರ್ ಚೌಕದ ಬಳಿ ತಮ್ಮ ಕುಟುಂಬದೊಂದಿಗೆ ವಾಸಿಸುತ್ತಿದ್ದಾರೆ ಮತ್ತು ಖಾಸಗಿ ಆಟೋ ಓಡಿಸುತ್ತಾರೆ. ಪತ್ನಿ…

Read More

ಮುಂಬೈ : ಚಾಂಪಿಯನ್ಸ್ ಟ್ರೋಫಿ 2025: ಚಾಂಪಿಯನ್ಸ್ ಟ್ರೋಫಿ 2025 ಫೆಬ್ರವರಿ 19 ರಿಂದ ಪ್ರಾರಂಭವಾಗಲಿದೆ. ಭಾರತ ತಂಡ ಫೆಬ್ರವರಿ 20 ರಂದು ಬಾಂಗ್ಲಾದೇಶ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಈ ಮಧ್ಯೆ, ಟೀಮ್ ಇಂಡಿಯಾಕ್ಕೆ ಒಂದು ಒಳ್ಳೆಯ ಸುದ್ದಿ ಬಂದಿದೆ. ಟೀಮ್ ಇಂಡಿಯಾದ ಸ್ಟಾರ್ ಸ್ಪಿನ್ನರ್ ಕುಲದೀಪ್ ಯಾದವ್ ಫಿಟ್ ಆಗಿದ್ದಾರೆ. ಗಾಯದಿಂದ ಚೇತರಿಸಿಕೊಳ್ಳಲು ಸಹಾಯ ಮಾಡಿದ್ದಕ್ಕಾಗಿ ಅವರು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ)ಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಹರ್ನಿಯಾ ಶಸ್ತ್ರಚಿಕಿತ್ಸೆಯಿಂದಾಗಿ ಕುಲದೀಪ್ ಯಾದವ್ ತಂಡದಿಂದ ಹೊರಗುಳಿದಿದ್ದರು, ಇದರಿಂದಾಗಿ ಅವರು ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಡಲು ಸಾಧ್ಯವಾಗಲಿಲ್ಲ. ಗಾಯದಿಂದ ಚೇತರಿಸಿಕೊಂಡ ನಂತರ, ಕುಲದೀಪ್ ಈ ತಿಂಗಳ ಆರಂಭದಲ್ಲಿ ತರಬೇತಿಗೆ ಮರಳಿದರು. ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವೀಡಿಯೊವನ್ನು ಹಂಚಿಕೊಂಡ ಅವರು, “ಲಾಕ್-ಇನ್” ಎಂದು ಬರೆದಿದ್ದಾರೆ. ಕುಲದೀಪ್ ಯಾದವ್ ಫಿಟ್ ಆದ ನಂತರ ತಂಡದ ಆಡಳಿತ ಮಂಡಳಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿರಬೇಕು. ಸ್ಪಿನ್ ಬೌಲಿಂಗ್…

Read More

ಪ್ರಸಕ್ತ (2024-25) ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಹೆಚ್ಡಿ. ಅಧ್ಯಯನದಲ್ಲಿ ತೊಡಗಿರುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2024-25ನೇ ಸಾಲಿನಲ್ಲಿ ಕರ್ನಾಟಕದ ಶಾಸನಬದ್ಧ ವಿಶ್ವ ವಿದ್ಯಾಲಯಗಳಲ್ಲಿ/ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಹೆಚ್ಡಿ. ಅಧ್ಯಯನ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳು ಮಾತ್ರ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಫೆಬ್ರವರಿ, 10 ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಅವರು ತಿಳಿಸಿದ್ದಾರೆ. ವಿದ್ಯಾರ್ಥಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ನಿಗಧಿಪಡಿಸಿರುವ ವಾರ್ಷಿಕ ಆದಾಯ ಮಿತಿ:- ಪ್ರವರ್ಗ-1 ರೂ. 4.50 ಲಕ್ಷ, ಪ್ರವರ್ಗ-2ಎ, 3ಎ, 3ಬಿ ರೂ. 3.50 ಲಕ್ಷ ಮಿತಿಯಲ್ಲಿರಬೇಕು. ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ.55 ಅಂಕಗಳನ್ನು ಪಡೆದಿರಬೇಕು. ವಿಶ್ವವಿದ್ಯಾಲಯ/ಅಧಿಕೃತ ಸಂಸ್ಥೆಗಳಲ್ಲಿನ ಸಂಶೋಧನಾ ಮಾರ್ಗದರ್ಶಕರಡಿಯಲ್ಲಿ ಪಿ.ಹೆಚ್.ಡಿ.…

Read More

ಬೆಂಗಳೂರು: ವಿಶ್ವ ವಿಖ್ಯಾತ ಬೆಂಗಳೂರು ಕರಗ ಮಹೋತ್ಸವ ಏಪ್ರಿಲ್ 4 ರಿಂದ ಏಪ್ರಿಲ್ 14ರವರೆಗೆ ನಡೆಯಲಿದ್ದು, ಇದೇ ವೇಳೆ  ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದೆ.ಈ ಬಾರಿಯೂ ಕರಗವನ್ನು ಅರ್ಚಕ ವಿ.ಜ್ಞಾನೇಂದ್ರ ಅವರು ಹೊರಲಿದ್ದಾರೆ. ಏಪ್ರಿಲ್ 4 ರಿಂದ ಉತ್ಸವ ಆರಂಭವಾಗಿ ಏಪ್ರಿಲ್ 14 ರವರೆಗೆ ನಡೆಯಲಿದ್ದು, ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಧರ್ಮರಾಯಸ್ವಾಮಿ ಕರಗ ವಿಜೃಂಭಣೆಯಿಂದ ನಡೆಯಲಿದೆ. ಕಳೆದ 12 ವರ್ಷಗಳಿಂದ ಜ್ಞಾನೇಂದ್ರ ಅವರು ಕರಗ ಹೊರುತ್ತಿದ್ದಾರೆ. ಒಟ್ಟಾರೆ ಏ.4 ರಂದು ಧ್ವಜಾರೋಹಣ, ಪೂಜಾ ವಿಧಿವಿಧಾನದ ಮೂಲಕ ಅರಂಭವಾಗುವ ಕರಗ ಏ.14ರವರೆಗೆ ಜರುಗಲಿದೆ. ‘ಕರಗ’ ಎಂಬ ಹೆಸರು ಹೂವಿನ ದಿಂಡು ಮತ್ತು ದೇವಿಯ ವಿಗ್ರಹವನ್ನು ಹೊಂದಿರುವ ಕಲಶದ ಅನುರೂಪವಾಗಿದೆ. ಕರಗವನ್ನು ಮುಟ್ಟದೆ ಅಂದರೆ ಹೂವಿನ ದಿಂಡಿನಿಂದ ಅಲಂಕೃತಗೊಂಡ ಮಣ್ಣಿನ ಮಡಿಕೆ ಅದರಲ್ಲಿರುವ ಕಲಶವನ್ನು ಕೈಯಲ್ಲಿ ಮುಟ್ಟದೆ ಆ ಕಲಶವನ್ನು ಹೊರುವ ವ್ಯಕ್ತಿಯ ತಲೆ ಮೇಲೆ ಇಡಲಾಗುತ್ತದೆ. ಕರಗವನ್ನು ಹೊರುವವನು ಮಹಿಳೆಯಂತೆ ಕಂಕಣ, ಮಂಗಳ-ಸೂತ್ರ ಮತ್ತು ಹಣೆಯ ಮೇಲೆ ಸಿಂಧೂರವನ್ನು ಇಟ್ಟುಕೊಂಡಿರುತ್ತಾನೆ.…

Read More

ನಂದ್ಯಾಲ್ : ಮನೆಯಲ್ಲಿ ಮಲಗಿದ್ದ ವೇಳೆಯೇ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಇಬ್ಬರು ಸಜೀವ ದಹನವಾಗಿರುವ ಘಟನೆ ಆಂಧ್ರಪ್ರದೇಶದ ನಂದ್ಯಾಲ್ ಬಳಿ ಚಾಪಿರೆವುಲದಲ್ಲಿ ನಡೆದಿದೆ. ಚಾಪಿರೆವುಲದಲ್ಲಿ ಗಂಭೀರ ಅಪಘಾತ ಸಂಭವಿಸಿದೆ. ಮನೆಯಲ್ಲಿ ಆಕಸ್ಮಿಕವಾಗಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸಾವನ್ನಪ್ಪಿದ್ದಾರೆ. ಇತರ 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ದಿನೇಶ್ (10) ಮತ್ತು ಸುಬ್ಬಮ್ಮ (60) ಎಂದು ಸ್ಥಳೀಯರು ಗುರುತಿಸಿದ್ದಾರೆ. ಗಾಯಾಳುಗಳನ್ನು ನಂದ್ಯಾಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲರೂ ಮಲಗಿದ್ದಾಗ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಇದರಿಂದ ಇಬ್ಬರು ಮಲಗಿದ್ದಲ್ಲೇ ಸುಟ್ಟು ಕರಕಲಾಗಿದ್ದಾರೆ. 8 ಮಂದಿ ಗಂಭೀರವಾಗಿ ಗಾಯಗೊಡಿದ್ದಾರೆ.ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.

Read More

ಮಡಿಕೇರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜನವರಿ, 28 ರಂದು ಬೆಳಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ‘ಉದ್ಯೋಗ ಮೇಳ’ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ತಾಮರ ರೆಸಾರ್ಟ್, ಕಕ್ಕಬ್ಬೆ, ಪೆಂಟಾಟೆಕ್, ಮಡಿಕೇರಿ, ಕಲ್ಯಾಣಿ ಮೋಟಾರ್ಸ್, ಮಡಿಕೇರಿ, ಮುತ್ತೂಟ್ ಪೈನಾನ್ಸ್, ಮೈಸೂರು, ಇಬ್ಬನಿ ರೆಸಾರ್ಟ್, ಮಡಿಕೇರಿ, ಅಪೋಲೋ ಫಾರ್ಮಸಿ ಬೆಂಗಳೂರು, ಹ್ಯೂಂಡಾಯಿ ಕಾರ್ ಶೋ ರೂಮ್ಸ್, ಮಡಿಕೇರಿ ತಮ್ಮ ಸಂಸ್ಥೆಗಳಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಉದ್ಯೋಗ ಮೇಳದಲ್ಲಿ ಎಸ್ಎಸ್ಎಲ್ಸಿ ಕ್ಕಿಂತ ಕಡಿಮೆ, ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದು. ಅಭ್ಯರ್ಥಿಗಳು ಸ್ವಯಂ ವಿವರ(ಬಯೋಡೇಟಾ)ಗಳ ಪ್ರತಿಗಳೊಂದಿಗೆ ಉದ್ಯೋಗಮೇಳಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಅವರು ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗೆ ಜಿಲ್ಲಾ…

Read More

ಬೆಂಗಳೂರು : 2024-25ನೇ ಸಾಲಿನ ಬಿಇಡಿ ಸೀಟುಗಳ ದಾಖಲಾತಿ ಪ್ರಕ್ರಿಯೆಯನ್ನು (ಕೌನ್ಸಿಲಿಂಗ್)ವಿಸ್ತರಿಸಿ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಧಿಸಿದಂತೆ 2024-25ನೇ ಸಾಲಿನ ಸರ್ಕಾರಿ ಕೋಟಾದ ಬಿ.ಇಡಿ ಸೀಟುಗಳ ಹಂಚಿಕೆ ಪ್ರಕ್ರಿಯೆಯು 4ನೇ ಹಾಗೂ ಅಂತಿಮ ಸುತ್ತು ದಿನಾಂಕ:20/01/2025ರಂದು ಪೂರ್ಣಗೊಂಡಿರುತ್ತದೆ. 4ನೇ ಸುತ್ತಿನ ನಂತರ ಸೀಟು ಹಂಚಿಕೆ ಆಗದ ಕೆಲವು ಅಭ್ಯರ್ಥಿಗಳಿಗೆ ಈ ರೀತಿ ಗುರುತು ಬಂದಿರುವ ಮತ್ತು ಬಯಸಿದ ಕಾಲೇಜು ಸಿಗದ ಕಾರಣ ದಾಖಲಾತಿ ಪತ್ರ ಪಡೆಯದೆ ಇರುವ ಕೆಲವು ಅಭ್ಯರ್ಥಿಗಳು ಮತ್ತೊಮ್ಮೆ Option Entryಗೆ ಅವಕಾಶ ನೀಡುವಂತೆ ಕೋರಿರುತ್ತಾರೆ. ಉಲ್ಲೇಖಿತ ಪತ್ರದ ಆದೇಶದಂತೆ ಸದರಿ ಅಭ್ಯರ್ಥಿಗಳಿಗೆ ಉಳಿಕೆಯಾಗಿರುವ ಸೀಟುಗಳ ಮಾಟ್ರಿಕ್ಸ್ನ್ನು 5ನೇ ಸುತ್ತಿಗೆ ದಿನಾಂಕ:28/01/2025ರಂದು ಪ್ರಕಟಿಸಲಾಗುತ್ತದೆ. 5ನೇ ಸುತ್ತಿಗೆ ಕಾಲೇಜುಗಳ ಆಯ್ಕೆಗಾಗಿ Option Entry 2:29/01/2025 00 ದಿ:01/02/2025ರ ವರೆಗೆ ಅವಕಾಶ ನೀಡಲಾಗಿದೆ ಅದಕ್ಕಾಗಿ 4ನೇ ಸುತ್ತಿನಲ್ಲಿ ಗುರುತು ಬಂದಿರುವ ಅಭ್ಯರ್ಥಿಗಳೂ, ಸಹ Login ಆಗಿ 5ನೇ ಸುತ್ತಿನ ಸೀಟು ಹಂಚಿಕೆ ಬಯಸುವುದಾಗಿ ನಮೂದಿಸುವುದು…

Read More

ಆಂಧ್ರಪ್ರದೇಶ : ಆಂಧ್ರಪ್ರದೇಶದಲ್ಲಿ ಮಹಿಳೆಯೊಬ್ಬರು ಮೊಬೈಲ್ ಫೋನ್ ನುಂಗಿದ ಘಟನೆ ನಡೆದಿದೆ. ಇದಾದ ನಂತರ, ಮಹಿಳೆಯ ಆರೋಗ್ಯ ಹದಗೆಟ್ಟಾಗ, ಆಕೆಯ ಕುಟುಂಬ ಸದಸ್ಯರು ಶನಿವಾರ ಆಕೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು, ಅಲ್ಲಿ ವೈದ್ಯರು ಚಿಕಿತ್ಸೆ ನೀಡಿದರು, ಆದರೆ ಮಹಿಳೆಯನ್ನು ಉಳಿಸಲು ಸಾಧ್ಯವಾಗಲಿಲ್ಲ. ಮಹಿಳೆ 15 ವರ್ಷಗಳಿಂದ ಮಾನಸಿಕ ಅಸ್ವಸ್ಥಳಾಗಿದ್ದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಆಂಧ್ರಪ್ರದೇಶದ ಕಾಕಿನಾಡದ ರಾಜಮಹೇಂದ್ರವರಂನಲ್ಲಿ ಈ ಘಟನೆ ನಡೆದಿದ್ದು, ಅಲ್ಲಿ ಮಾನಸಿಕ ಅಸ್ವಸ್ಥ ಮಹಿಳೆ ರಮ್ಯಾ ಸ್ಮೃತಿ ಕೀ-ಪ್ಯಾಡ್ ಮೊಬೈಲ್ ಅನ್ನು ನುಂಗಿದ್ದರು. ಮಹಿಳೆಯ ಆರೋಗ್ಯ ಹದಗೆಟ್ಟಾಗ, ಆಕೆಯ ಕುಟುಂಬದವರು ರಾಜಮಹೇಂದ್ರವರಂನ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ವೈದ್ಯರು ಅವನಿಗೆ ಚಿಕಿತ್ಸೆ ನೀಡಿದರು, ಆದರೆ ಚಿಕಿತ್ಸೆ ಫಲಿಸದೇ ಮಹಿಳೆ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ರಮ್ಯಾ ಸ್ಮೃತಿ ಅವರ ಕುಟುಂಬ ಸದಸ್ಯರು ವೈದ್ಯರನ್ನು ದೂಷಿಸಿದ್ದು, ರಾಜಮಹೇಂದ್ರವರಂ ವೈದ್ಯರ ನಿರ್ಲಕ್ಷ್ಯದಿಂದಲೇ ತಮ್ಮ ಮಗಳು ಸಾವನ್ನಪ್ಪಿದ್ದಾಳೆ ಎಂದು ಹೇಳಿದ್ದಾರೆ. ಇದರೊಂದಿಗೆ, ಮೃತ ರಮ್ಯಾ ಸ್ಮೃತಿ 2010 ರಿಂದ ಅಂದರೆ ಕಳೆದ 15…

Read More

ಬೆಳಗಾವಿ : ಬೆಳಗಾವಿಯಲ್ಲಿ ಮಧ್ಯರಾತ್ರಿ ಐಟಿ ಅಧಿಕಾರಿಗಳು ಮೈನಿಂಗ್ ಉದ್ಯಮಿಗಳಿಗೆ ಶಾಕ್ ನೀಡಿದ್ದು, ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬೆಳಗಾವಿಯಲ್ಲಿ ತಡರಾತ್ರಿ ಮೈನಿಂಗ್ ಉದ್ಯಮಿಗಳಾದ ವಿನೋದ್ ದೊಡ್ಡಣವರ್, ಪುರುಷೋತ್ತಮ್ ದೊಡ್ಡಣವರ್ ಒಡೆತನದ ಕಂಪನಿ ಹಾಗೂ ಅವರ ಮನೆ, ಕಚೇರಿಗಳ ಮೇಲೆ ದಾಳಿ ನಡೆಇಸದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಗೋವಾದಿಂದ ಬಂದ 5 ತಂಡಗಳು ದೊಡ್ಡಣವರ್ ಬ್ರದರ್ಸ್ ಒಡೆತನದ ಕಂಪನಿಗಳ ಮೇಲೆ ದಾಳಿ ನಡೆಸಿದ್ದು, ಭಾಗ್ಯನಗರದಲ್ಲಿರು ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More