Subscribe to Updates
Get the latest creative news from FooBar about art, design and business.
Author: kannadanewsnow57
ಮೈಸೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಮತ್ತೊಂದು ಬಲಿಯಾಗಿದ್ದು, ಸಾಲ ಕಟ್ಟಲಾಗದೇ ಖಿನ್ನತೆಯಿಂದ ಮಹಿಳೆಯೊಬ್ಬರು ವಿಷದ ಮಾತ್ರೆ ಕುಡಿದು ಸಾವನ್ನಪ್ಪಿರುವ ಘಟನೆ ನಡೆದಿದೆ. ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದಲ್ಲಿ ಮೈಕ್ರೋ ಫೈನಾನ್ಸ್ ಸಾಲಕ್ಕೆ ಹೆದರಿ ಜಯಶೀಲ (53) ಎಂಬ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಐಐಎಫ್ ಎಲ್, ಪೈವ್ ಸ್ಟಾರ್ ಮೈಕ್ರೋ ಫೈನಾನ್ಸ್ ಗಳಲ್ಲಿ ಮನೆ, ವ್ಯವಸಾಯ ಹಾಗೂ ಹಸು ಸಾಕಣೆಗೆ ಸುಮಾರು 5 ಲಕ್ಷ ರೂ. ಸಾಲ ಪಡೆದಿದ್ದರು ಎನ್ನಲಾಗಿದೆ. ಪ್ರತಿ ತಿಂಗಳು 20 ಸಾವಿರ ರೂ. ಗೂ ಹೆಚ್ಚು ಕಂತು ಕಟ್ಟಬೇಕಿತ್ತು. ಸಾಲದ ಮೇಲೆ ಖರೀದಿಸಿದ್ದ ಹಸು ಮೃತಪಟ್ಟಿತ್ತು. ಹಸು ಮೃತಪಟ್ಟ ಹಿನ್ನೆಲೆಯಲ್ಲಿ ಖಿನ್ನತೆಗೊಂಡು ಮಹಿಳೆ ಜಯಶೀಲ ಸಮೀಪದ ಹುಲ್ಲಹಳ್ಳಿಗೆ ತೆರಳಿ ವಿಷದ ಮಾತ್ರೆಗಳನ್ನು ತಂದು ಜಮೀನಿನಲ್ಲಿ ನುಂಗಿ ಒದ್ದಾಡುತ್ತಿದ್ದರು. ಇದನ್ನು ಕಂಡ ಸ್ಥಳೀಯರು ಕುಟುಂಬಸ್ಥರಿಗೆ ಮಾಹಿತಿ ನೀಡುವಷ್ಟರಲ್ಲಿ ಜಯಶೀಲ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಗದಗ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಳ್ಳಲು ಮುಂದಾಗಿದ್ದು, ಜನವರಿ 30 ರಂದು ಕರಡು ಪ್ರತಿಯನ್ನು ಸಂಪುಟ ಸಭೆಗೆ ತೆಗೆದುಕೊಂಡು ಹೋಗುತ್ತೇನೆ ಎಂದು ಕಾನೂನು ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿಯಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ನಿಯಂತ್ರಿಸಲು ಹೊಸ ಕಾನೂನು ಸಿದ್ಧವಾಗುತ್ತಿದೆ. ಜನವರಿ 30ರಂದು ಕರಡು ಪ್ರತಿಯನ್ನು ಸಂಪುಟ ಸಭೆಗೆ ತೆಗೆದುಕೊಂಡು ಹೋಗುತ್ತೇನೆ ಮೈಕ್ರೋ ಫೈನಾನ್ಸ್ ಹಾವಳಿ ನಿಯಂತ್ರಿಸಲು ಕಾನೂನು ಕರಡು ಪ್ರತಿಯನ್ನು ಅನುಭವಿ ಪೊಲೀಸ್ ಅಧಿಕಾರಿಗಳಿಗೆ ನೀಡಲಾಗಿದೆ. ಕಾನೂನು ಜಾರಿಯಾದ ಮೇಲೆ ಇದರಲ್ಲಿ ಶಕ್ತಿ ಇಲ್ಲ ಎನ್ನುವಂತಾಗಬಾರದು. ಇದಕ್ಕಾಗಿ ಕಂದಾಯ ಅಧಿಕಾರಿ, ಪೊಲೀಸ್ ಅಧಿಕಾರಿಗಳಿಗೆ ಕರಡು ಪ್ರತಿ ನೀಡಲಾಗಿದ್ದು, 3-4 ದಿನಗಳಲ್ಲಿ ಕಾನೂನು ಸ್ವರೂಪ ಗೊತ್ತಾಗಲಿದೆ ಎಂದು ತಿಳಿಸಿದ್ದಾರೆ. ಜನವರಿ 30ರಂದು ನಡೆಯಲಿರುವ ಸಚಿವ ಸಂಪುಟ ಸಭೆಗೆ ಕರಡು ಪ್ರತಿ ತೆಗೆದುಕೊಂಡು ಹೋಗುವ ಪ್ರಯತ್ನ ಮಾಡುತ್ತೇನೆ. ಅಷ್ಟರೊಳಗೆ ಗೃಹ ಸಚಿವರು,…
ನವದೆಹಲಿ : ಹಲವು ಸಾರಿಗೆ ಸಂಸ್ಥೆಗಳು ಸೇರಿ ಇನ್ಮುಂದೆ ಪ್ರತಿವರ್ಷ ಜನವರಿ 24 ರಂದು ಚಾಲಕರ ದಿನ ಆಚರಿಸಲು ನಿರ್ಧರಿಸಿವೆ. ಅಸೋಸಿಯೇಷನ್ ಆಫ್ ರೋಡ್ ಟ್ರಾನ್ಸ್ ಪೋರ್ಟ್ ಅಂಡರ್ ಟೇಕಿಂಗ್ಸ್, ಬಸ್ ಆ್ಯಂಡ್ ಕಾರ್ ಅಪರೇಟರ್ಸ್ ಆಫ್ ಇಂಡಿಯಾ ಮತ್ತು ಆಲ್ ಇಂಡಿಯಾ ಮೋಟಾರ್ ಟ್ರಾನ್ಸ್ ಪೋರ್ಟ್ ಕಾಂಗ್ರೆಸ್ ಜಂಟಿಯಾಗಿ ಈ ತೀರ್ಮಾನ ಕೈಗೊಂಡಿದೆ. ಇದನ್ನು ಚಾಲಕರ ದಿನವನ್ನಾಗಿ ಆಚರಿಸಲು ನಿರ್ಧರಿಸುವುದರ ಜೊತೆಗೆ, ಒಂದು ಹೇಳಿಕೆಯನ್ನು ಸಹ ನೀಡಲಾಗಿದೆ. ಚಾಲಕರು ಭಾರತದ ಸಾರಿಗೆ ಜಾಲದ ಜೀವನಾಡಿಯಾಗಿದ್ದು, ಲಕ್ಷಾಂತರ ಜನರಿಗೆ ಸಾರಿಗೆಯನ್ನು ಖಚಿತಪಡಿಸುತ್ತಾರೆ ಮತ್ತು ದೇಶದ ಆರ್ಥಿಕತೆಗೆ ಶಕ್ತಿ ತುಂಬುತ್ತಾರೆ ಎಂದು ಜಂಟಿ ಹೇಳಿಕೆ ತಿಳಿಸಿದೆ. ಇದಲ್ಲದೆ, ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಪ್ರಯಾಣಿಕರನ್ನು ಸಾಗಿಸುವ ಮತ್ತು ಭಾರತದ 70 ಪ್ರತಿಶತ ಸರಕು ಸಾಗಣೆಯನ್ನು ಸಾಗಿಸುವ ಈ ಅಪ್ರಕಟಿತ ನಾಯಕರು ಹೆಚ್ಚಾಗಿ ದೀರ್ಘ ಗಂಟೆಗಳ ಕಾಲ ಕೆಲಸ ಮಾಡುತ್ತಾರೆ ಮತ್ತು ಹಲವಾರು ಸವಾಲುಗಳನ್ನು ಎದುರಿಸುತ್ತಾರೆ. ಭಾರತದ ಸಾರಿಗೆ ಕ್ಷೇತ್ರದ ಬೆನ್ನೆಲುಬಾಗಿರುವ 8 ಕೋಟಿಗೂ…
ಪ್ರವಾಸೋದ್ಯಮ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಉದ್ಯಮಶೀಲತೆ ತರಬೇತಿ ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟಿನ್ ನಡೆಸಲು ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ-04 ಮತ್ತು ಪರಿಶಿಷ್ಟ ಪಂಗಡ-04 ಅಭ್ಯರ್ಥಿಗಳು ಸೇರಿ ಒಟ್ಟು 08 ಅಭ್ಯರ್ಥಿಗಳ ಗುರಿ ನಿಗದಿಪಡಿಸಲಾಗಿದೆ. ವಿದ್ಯಾರ್ಹತೆ ಎಸ್ಎಸ್ಎಲ್ಸಿ ಉತ್ತೀರ್ಣರಾಗಿರಬೇಕು. ಯೋಜನೆಯ ಘಟಕ ವೆಚ್ಚ ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಸಲು ಇಲಾಖೆಯ ಸಹಾಯಧನ ಘಟಕ ವೆಚ್ಚದಲ್ಲಿ ಶೇ.70 ರಷ್ಟು ಗರಿಷ್ಠ ರೂ.5 ಲಕ್ಷ ಮಾತ್ರ. ಫಲಾನುಭವಿಯ ವಂತಿಗೆ ವಾಹನದ ಒಟ್ಟು ವೆಚ್ಚದ ಶೇ.5 ರಷ್ಟು. ಹಣಕಾಸು ಸಂಸ್ಥೆಗಳು, ಬ್ಯಾಂಕ್ ಸಾಲ – ವಾಹನದ ಒಟ್ಟು ವೆಚ್ಚದಲ್ಲಿ ಉಳಿದ ಮೊತ್ತ. ಅರ್ಹತೆ ಅರ್ಜಿದಾರರು ಬಳ್ಳಾರಿ ಜಿಲ್ಲೆಯ ನಿವಾಸಿಯಾಗಿರಬೇಕು. ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ವಯಸ್ಸು 20 ರಿಂದ 45 ವರ್ಷದೊಳಗಿರಬೇಕು.…
ಭಾರತದಲ್ಲಿ ರಕ್ತ ಕ್ಯಾನ್ಸರ್ ರೋಗಿಗಳಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು. ಈ ಕ್ಯಾನ್ಸರ್ ರೋಗಿಗಳಿಗೆ ಹೊಸ ಔಷಧವನ್ನು ಅನುಮೋದಿಸಲಾಗಿದೆ. ಇತ್ತೀಚೆಗೆ, ಬೆಂಗಳೂರು ಮೂಲದ ಬಯೋಟೆಕ್ ಸ್ಟಾರ್ಟ್ಅಪ್ ಇಮ್ಯುನಿಯಲ್ ಥೆರಪ್ಯೂಟಿಕ್ಸ್, ಬಿ-ಸೆಲ್ ನಾನ್-ಹಾಡ್ಗ್ಕಿನ್ ಲಿಂಫೋಮಾ (ಬಿ-ಎನ್ಎಚ್ಎಲ್) ರೋಗಿಗಳಿಗೆ ಕಾರ್ಟೆಮಿ ಎಂಬ CAR-T ಕೋಶ ಚಿಕಿತ್ಸೆಯನ್ನು ಪ್ರಾರಂಭಿಸಿದೆ. ಇದು ಗಂಭೀರ ರಕ್ತ ಕ್ಯಾನ್ಸರ್ ರೋಗಿಗಳಿಗೆ ಮತ್ತು ಮರುಕಳಿಸುವ ಹಂತವನ್ನು ತಲುಪಿರುವವರಿಗೆ ಪ್ರಯೋಜನಕಾರಿಯಾಗಿದೆ. ಇಮ್ಯುನಿಲ್ ಪ್ರಕಾರ, ಈ ಔಷಧವು ಭಾರತದಲ್ಲಿ ಅನುಮೋದಿಸಲಾದ ಎರಡನೇ CAR-T ಕೋಶ ಚಿಕಿತ್ಸೆಯಾಗಿದೆ, ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (CDSCO) ಸ್ವದೇಶಿ NexCAR19 ಅನ್ನು ಅನುಮೋದಿಸಿದ ನಂತರ, ಇದನ್ನು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಬಾಂಬೆ (IITB) ನ ಸಂಶೋಧನಾ ಸಂಸ್ಥೆಯಾದ ಇಮ್ಯುನೊಆಕ್ಟ್ ಅಭಿವೃದ್ಧಿಪಡಿಸಿದೆ. ಮತ್ತು ಟಾಟಾ ಮೆಮೋರಿಯಲ್ ಆಸ್ಪತ್ರೆಯಲ್ಲಿ ಒಂದು ಕಂಪನಿಯು ಇನ್ಕ್ಯುಬೇಟ್ ಆಗಿದೆ. ಜೀವಂತ ಔಷಧ ಎಂದರೇನು? ಮಾಹಿತಿಯ ಪ್ರಕಾರ, ಕಾರ್ಟೆಮಿ ಒಂದು ಜೀವಂತ ಔಷಧ, ಜೀವಂತ ಔಷಧವು ಸಂಪೂರ್ಣವಾಗಿ ಕ್ರಿಯಾತ್ಮಕ ಕೋಶಗಳಿಂದ ಮಾಡಲ್ಪಟ್ಟಿದೆ. ಕ್ಯಾನ್ಸರ್ ಚಿಕಿತ್ಸೆಗಾಗಿ ಆಯ್ಕೆ ಮಾಡಲಾದವುಗಳನ್ನು…
ಬೆಂಗಳೂರು: ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಶಕ್ತಿಸೌಧ ಪಶ್ಚಿಮ ದ್ವಾರದಲ್ಲಿ ನಿರ್ಮಿಸಲಾಗಿರುವ 25 ಅಡಿ ಎತ್ತರದ ಕಂಚಿನ ಪ್ರತಿಮೆ ಭುವನೇಶ್ವರಿ ತಾಯಿಗೆ ಜ.27ರಿಂದ ನಿತ್ಯ ಆರ್ಚನೆ ನೆರವೇರಲಿದೆ. ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ‘ಹೆಸರಾಯಿತು ಕರ್ನಾಟಕ ಹಾಗೂ ಉಸಿರಾಗಲಿ’ ಕನ್ನಡ ಎಂಬ ಶೀರ್ಷಿಕೆಯಡಿ ವರ್ಷವಿಡೀ ರಾಜ್ಯಾದ್ಯಂತ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ಅದರಂತೆ ಕನ್ನಡಾಂಬೆಯ ಪ್ರತಿಮೆಯನ್ನು ವಿಧಾನಸೌಧದ ಆವರಣದಲ್ಲಿ ಪ್ರತಿಷ್ಠಾಪಿಸಲು ನಿರ್ಧರಿಸಲಾಗಿತ್ತು. ಪ್ರತಿಮೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಜ.27ರಂದು ಸಂಜೆ 4.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಈ ಹಬ್ಬದ ವಾತಾವರಣದಲ್ಲಿ ಸಾರ್ವಜನಿಕರು ಹಾಗೂ ಕನ್ನಡಪರ ಸಂಘಟನೆಗಳು ಪಾಲ್ಗೊಳ್ಳಬೇಕು ಎಂದು ಸಚಿವ ಶಿವರಾಜ್ ತಂಗಡಗಿ ಅವರು ಮಾಧ್ಯಮದ ಮೂಲಕ ಮನವಿ ಮಾಡಿದರು. ಪ್ರತಿಮೆಯ ವೈಶಿಷ್ಟ್ಯತೆ * ನೆಲಮಟ್ಟದಿಂದ ಪ್ರತಿಮೆಯ ಎತ್ತರ – 43 ಅಡಿ 6 ಇಂಚು * ಪ್ರತಿಮೆಯ ಲೋಹದ ಒಟ್ಟು ತೂಕ – 31.50 ಟನ್ * ಭುವನೇಶ್ವರಿ ಪ್ರತಿಮೆ – 20…
ಬೆಂಗಳೂರು: ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ಲಿಮಿಟೆಡ್ (BESCOM) ಮಾಹಿತಿ ನೀಡಿರುವಂತೆ, ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಜನವರಿ 27 ರ ಇಂದು ವಿದ್ಯುತ್ ಕಡಿತವಾಗಲಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಲಿಮಿಟೆಡ್ (KPTCL) ನ ತುರ್ತು ನಿರ್ವಹಣಾ ಕಾರ್ಯದಿಂದಾಗಿ ಉಂಟಾದ ವಿದ್ಯುತ್ ವ್ಯತ್ಯಯವು ನಗರದ ವಿವಿಧ ಪ್ರದೇಶಗಳಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ಪರಿಣಾಮ ಬೀರುತ್ತದೆ. ನಾಗರಿಕರು ಅದಕ್ಕೆ ಅನುಗುಣವಾಗಿ ಯೋಜಿಸಲು ಸಹಾಯ ಮಾಡಲು BESCOM ಪರಿಣಾಮ ಬೀರುವ ಸ್ಥಳಗಳ ಪಟ್ಟಿಯನ್ನು ಒದಗಿಸಿದೆ. ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಈ ಕೆಳಗಿನ ಪ್ರದೇಶಗಳಲ್ಲಿ ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 3:00 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ: ಸೇಂಟ್ ಜಾನ್ಸ್ ವುಡ್ ಅಪಾರ್ಟ್ಮೆಂಟ್ ಮತ್ತು ಆಸ್ಪತ್ರೆ ತಾವರೆಕೆರೆ ಅಕ್ಸೆಂಚರ್ ಒರಾಕಲ್ಕ್ರೈಸ್ಟ್ ಕಾಲೇಜು ಸುತ್ತಮುತ್ತಲಿನ ಪ್ರದೇಶಗಳು ಬಿಟಿಎಂ ಲೇಔಟ್ ಮೆಜೆಸ್ಟಿಕ್ ಅಪಾರ್ಟ್ಮೆಂಟ್ ಎಕ್ಸಾ ಆಕ್ಸಿಸ್ ಭವನ ಸುದ್ದಗುಂಟೆ ಪಾಳ್ಯ ಗುರಪ್ಪನ್ ಲೇಔಟ್ ಬಿಜಿ ರಸ್ತೆ ಸುತ್ತಮುತ್ತಲಿನ ಪ್ರದೇಶಗಳು ಇದಲ್ಲದೆ, ನಿರ್ವಹಣಾ…
ಬಳ್ಳಾರಿ : ರಾಜ್ಯದ ಎಲ್ಲಾ ಮಹಾನಗರ ಪಾಲಿಕೆ ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹದಲ್ಲಿ ಮಹತ್ವದ ಬದಲಾವಣೆಯಾಗಲಿದ್ದು, ಇದಕ್ಕಾಗಿ ಜಿಯೋ ಟ್ಯಾಗ್ ವ್ಯವಸ್ಥೆ ಬರಲಿದೆ. ಶೀಘ್ರದಲ್ಲಿ ರಾಜ್ಯದಾದ್ಯಂತ ಜಾರಿಗೊಳಿಸಲಾಗುವುದು ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು ಹೇಳಿದರು. ಜಿಲ್ಲಾಡಳಿತ ವತಿಯಿಂದ ನಗರದ ಬಿಮ್ಸ್ ಮೈದಾನದ ಆವರಣದಲ್ಲಿ ಭಾನುವಾರ ಏರ್ಪಡಿಸಿದ್ದ 76ನೇ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ರಾಜ್ಯದ ಬಹುತೇಕ ಎಲ್ಲಾ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ನಿರ್ಮಾಣಗೊಂಡಿರುವ ಬಡಾವಣೆಗಳಲ್ಲಿ ಅಧಿಕೃತವಾಗಿ ಹಾಗೂ ಇನ್ನೂ ಕೆಲವು ಪರವಾನಿಗೆ ಪಡೆಯದೇ ಅನಧಿಕೃತವಾಗಿ ನಿರ್ಮಾಣಗೊಂಡಿರುವ ಎಲ್ಲಾ ಕಟ್ಟಡಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ. ಅದಕ್ಕೆ ಪೂರಕವಾಗಿ ಸ್ಥಳೀಯ ಸಂಸ್ಥೆಗಳಿಗೆ ಸಂದಾಯವಾಗಬೇಕಾದ ಭಾರೀ ಪ್ರಮಾಣದ ತೆರಿಗೆ ವಸೂಲಾಗದೇ ಬಾಕಿ ಉಳಿಯುತ್ತಿರುವುದನ್ನು ಸರ್ಕಾರವು ವಸೂಲಿಗೆ ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿಸಿದರು. ಹಾಗಾಗಿ ಸ್ಥಳೀಯ ಸಂಸ್ಥೆಗಳಿಗೆ ನಿಯಮಾನುಸಾರವಾಗಿ ಸಾರ್ವಜನಿಕರಿಂದ ಪಾವತಿಯಾಗಬೇಕಾದ ತೆರಿಗೆ ವಸೂಲಿ ಸಮಸ್ಯೆಗೆ ಶಾಶ್ವತ…
ಪ್ರಸಕ್ತ (2024-25) ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50ರ ರಿಯಾಯಿತಿಯಲ್ಲಿ ಕೃಷಿ ಯಂತ್ರೋಪಕರಣಗಳು ಲಭ್ಯವಿದೆ. ಆಸಕ್ತ ರೈತರು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿಯೊಂದಿಗೆ ಪಹಣಿ(ಆರ್ಟಿಸಿ), ಆಧಾರ್ ಕಾರ್ಡ್ನ ಜೆರಾಕ್ಸ್, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್, ಒಂದು ಭಾವಚಿತ್ರ 100 ರೂ. ಛಾಫಾ ಕಾಗದ ದಾಖಲಾತಿಗಳನ್ನು ಸಲ್ಲಿಸಿ ಇಲಾಖೆಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳ ಸದುಪಯೋಗ ಪಡೆದುಕೊಳ್ಳಲು ಕೋರಿದೆ. ಕೃಷಿ ಉಪಕರಣಗಳಾದ ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್, ಕಲ್ಟಿವೇಟರ್, ರೋಟವೇಟರ್, ಎಂ.ಬಿ.ಪ್ಲೂ, ಡಿಸ್ಕ್ ಪ್ಲೋ, ಕಳೆಕೊಚ್ಚುವ ಯಂತ್ರ, ಕಳೆ ತೆಗೆಯುವ ಯಂತ್ರ, ಡಿಸೇಲ್ ಪಂಪ್ ಸೆಟ್, ಪವರ್ ಸ್ಪ್ರೇಯರ್, ಮೇವು ಕತ್ತರಿಸುವ ಯಂತ್ರ, ಭತ್ತದ ಒಕ್ಕಣೆ ಯಂತ್ರ, ಭತ್ತ ಕಟಾವು ಯಂತ್ರ, ಮುಸುಕಿನ ಜೋಳ ಒಕ್ಕಣೆ ಯಂತ್ರ, ಕೃಷಿ ಉತ್ಪನ್ನಗಳ ಸಂಸ್ಕರಣೆ ಯಂತ್ರಗಳಾದ, ರಾಗಿ ಕ್ಲೀನಿಂಗ್ ಯಂತ್ರ, ಹಿಟ್ಟು ಮಾಡುವ ಯಂತ್ರ, ಮೆಣಸಿನ ಕಾಯಿ ಪುಡಿ ಮಾಡುವ ಯಂತ್ರ…
ಡೆಹ್ರಾಡೂನ್: ಉತ್ತರಾಖಂಡದಲ್ಲಿ ಇಂದಿನಿಂದ ಏಕರೂಪ ನೀತಿ ಸಂಹಿತೆ ಜಾರಿಗೆ ಬರಲಿದೆ. ಜನವರಿ 27 ರಂದು ಮಧ್ಯಾಹ್ನ 12.30 ರ ನಂತರ ಉತ್ತರಾಖಂಡದಲ್ಲಿ ಯುಸಿಸಿ ಜಾರಿಗೆ ಬರಲಿದೆ. ಅದೇ ದಿನ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಯುಸಿಸಿ ಪೋರ್ಟಲ್ ಅನ್ನು ಸಹ ಉದ್ಘಾಟಿಸಲಿದ್ದಾರೆ. ದೆಹಲಿಯಲ್ಲಿ ಪ್ರಚಾರದ ನಂತರ ಶನಿವಾರ ಡೆಹ್ರಾಡೂನ್ ತಲುಪಿದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಯುಸಿಸಿ ಜಾರಿಗೆ ತರುವ ಬಗ್ಗೆ ಸುಳಿವು ನೀಡಿದರು. ಜನವರಿ 27 ರಂದು ಉತ್ತರಾಖಂಡದಲ್ಲಿ ಯುಸಿಸಿ ಜಾರಿಗೆ ಬರಲಿದೆ. ಉತ್ತರಾಖಂಡದಲ್ಲಿ ಯುಸಿಸಿ ಅನುಷ್ಠಾನಕ್ಕೆ ಸಿದ್ಧತೆಗಳು ಈಗ ಅಂತಿಮ ಹಂತದಲ್ಲಿವೆ. ಏಕರೂಪ ನಾಗರಿಕ ಸಂಹಿತೆಯ ಪೋರ್ಟಲ್ ಅನ್ನು ಸಿದ್ಧಪಡಿಸಲಾಗಿದೆ. ಇದಲ್ಲದೆ, ಯುಸಿಸಿ ಅನುಷ್ಠಾನಕ್ಕೆ ಸಂಬಂಧಿಸಿದ ಅಧಿಕಾರಿಗಳಿಗೆ ತರಬೇತಿಯನ್ನೂ ನೀಡಲಾಗಿದೆ. ಒಟ್ಟಾರೆಯಾಗಿ, ಏಕರೂಪ ನಾಗರಿಕ ಸಂಹಿತೆಯ ಎಲ್ಲಾ ಪ್ರಕ್ರಿಯೆಗಳು ಈಗ ಬಹುತೇಕ ಪೂರ್ಣಗೊಂಡಿವೆ. ಇಂತಹ ಪರಿಸ್ಥಿತಿಯಲ್ಲಿ, ಜನವರಿ 27 ರಂದು ಮಧ್ಯಾಹ್ನ 12.30 ರ ಸುಮಾರಿಗೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ…










