Subscribe to Updates
Get the latest creative news from FooBar about art, design and business.
Author: kannadanewsnow57
ಹಾವು ಕಚ್ಚಿದ ಸಂದರ್ಭದಲ್ಲಿ ಹೆದರಬಾರದು. ಹಾವು ಕಚ್ಚಿದ ವ್ಯಕ್ತಿಯನ್ನು ಸಮಾಧಾನವಾಗಿರಿಸಿ ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಬಂದು ಉಚಿತ ಚುಚ್ಚುಮದ್ದು ಕೊಡಿಸುವ ಮೂಲಕ ಜೀವ ಹಾನಿ ತಡೆಯಬಹುದು ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ.ವಿ.ಕೆ ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಮೋಕ ಸಮುದಾಯ ಆರೋಗ್ಯ ಕೇಂದ್ರ ಆಶ್ರಯದಲ್ಲಿ ಬಳ್ಳಾರಿ ತಾಲ್ಲೂಕಿನ ಶಿವಪುರ ಗ್ರಾಮದಲ್ಲಿ ಗುರುವಾರ ಏರ್ಪಡಿಸಿದ್ದ ಹಾವು ಕಡಿತ ಕುರಿತು ಜಾಗೃತಿ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು. ಹಾವು ಕಚ್ಚಿದಾಗ ಎಲ್ಲರೂ ಗಾಬರಿಯಾಗುವುದು ಸಾಮಾನ್ಯ. ಇದರಿಂದ ವ್ಯಕ್ತಿಯ ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇರುತ್ತದೆ. ಅದರಲ್ಲೂ ವಿಷಕಾರಿ ಹಾವು ಕಡಿತದ ಸಂದರ್ಭದಲ್ಲಿ ವ್ಯಕ್ತಿಯನ್ನು ಯಾವುದೇ ವಾಹನ ಅಥವಾ 108 ಅಂಬುಲೆನ್ಸ್ ಮೂಲಕ ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಮೊದಲ ಆದ್ಯತೆ ನೀಡಬೇಕು ಎಂದು ಹೇಳಿದರು. ಆ ಸಂದರ್ಭದಲ್ಲಿ ರೋಗಿಯ ಹಾವು ಕಚ್ಚಿರುವ ಭಾಗವು ಹೃದಯದ ಕೆಳಗೆ ಬರುವ ಹಾಗೆ ಇರುವಂತೆ ನೋಡಿಕೊಳ್ಳಬೇಕು. ರಕ್ತಪರಿಚಲನೆಗೆ…
ದಾವಣಗೆರೆ: ಐಎಎಸ್, ಕೆಎಎಸ್ ಸೇರಿದಂತೆ ಬ್ಯಾಂಕಿಂಗ್, ಪಿ.ಎಸ್.ಐ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಲು ದಾವಣಗೆರೆಯಲ್ಲಿಯೇ ಸಂಕಲ್ಪ ಕೇಂದ್ರದಲ್ಲಿ ನುರಿತ, ಸಂಪನ್ಮೂಲ ವ್ಯಕ್ತಿಗಳಿಂದ ಉಚಿತ ಕೋಚಿಂಗ್ ಸಿಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು. ಅವರು ಶುಕ್ರವಾರ ಜಿಲ್ಲಾ ಆಡಳಿತ, ದಾವಣಗೆರೆ ವಿ.ವಿ ಹಾಗೂ ಎಸ್.ಎಸ್.ಕೇರ್ ಟ್ರಸ್ಟ್ ಮತ್ತು ಐಎಎಸ್ ಬಾಬಾ ಕೋಚಿಂಗ್ ಕೇಂದ್ರದ ಸಹಯೋಗದಲ್ಲಿ ವಿದ್ಯಾನಗರ ರಸ್ತೆಯಲ್ಲಿನ ದೃಶ್ಯಕಲಾ ಕಾಲೇಜು ಆವಣರಲ್ಲಿ ಆರಂಭಿಸಲಾದ ಸಂಕಲ್ಪ ಉಚಿತ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಮೂಲಭೂತ ಸೌಕರ್ಯಗಳನ್ನು ಹೊಂದಿರುವ ಸ್ಪರ್ಧಾತ್ಮಕ ತರಬೇತಿ ಕೇಂದ್ರವನ್ನು ಸ್ಥಾಪನೆ ಮಾಡಬೇಕು, ಈ ಮೂಲಕ ಜಿಲ್ಲೆಯ ಪ್ರತಿಭಾನ್ವಿತ ಯುವ ವಿದ್ಯಾವಂತರಿಗೆ ಅಖಿಲ ಭಾರತ ಮಟ್ಟದ ನಾಗರಿಕ ಸೇವಾ ಹಾಗೂ ಇತರೆ ಹುದ್ದೆಗಳ ಪರೀಕ್ಷೆ ತೆಗೆದುಕೊಂಡು ಉನ್ನತ ಹುದ್ದೆಗಳಿಗೆ ಜಿಲ್ಲೆಯವರು ಹೋಗಬೇಕೆಂಬ ಕನಸಿನೊಂದಿಗೆ ಸಂಕಲ್ಪ ಕೇಂದ್ರವನ್ನು ಸ್ಥಾಪನೆ ಮಾಡಲಾಗಿದೆ. ಇಲ್ಲಿ ಖ್ಯಾತ ಐಎಎಸ್ಬಾಬಾ ಕೋಚಿಂಗ್ ಕೇಂದ್ರದೊಂದಿಗೆ ಒಡಂಬಡಿಕೆ ಮಾಡಿಕೊಂಡು ಸಂಕಲ್ಪ ಕೋಚಿಂಗ್ ಕೇಂದ್ರ ಆರಂಭಿಸಲಾಗುತ್ತಿದೆ.…
ಕೃಷಿ ಜಮೀನುಗಳ ಮಾಲೀಕರು ಮೃತರಾದಲ್ಲಿ ಈ ಜಮೀನಿನ ವಾರಸುದಾರರು ತಮ್ಮ ಹೆಸರಿಗೆ ಹಕ್ಕು ಬದಲಾವಣೆ ಮಾಡಿಕೊಳ್ಳಬೇಕಾಗಿರುತ್ತದೆ. ಪ್ರಸ್ತುತ ಇ-ಪೌತಿ ಆಂದೋಲನದ ಮೂಲಕ ಶಿವಮೊಗ್ಗ ತಾಲೂಕಿನ ಜಮೀನುಗಳನ್ನು ಉಚಿತವಾಗಿ ವಾರಸತ್ವದ ವಂಶಾವಳಿ ಪ್ರಕಾರ ಪಹಣಿ ಪತ್ರಿಕೆ ಮಾಡಿಕೊಡಲಾಗುತ್ತಿದೆ. ಈ ರೀತಿಯ ಜಮೀನುಗಳನ್ನು ವಾರಸುದಾರರು ಕೂಡಲೇ ಮೃತರ ಮರಣ ಪ್ರಮಾಣ ಪತ್ರ, ವಂಶವೃಕ್ಷ ವಾರಸುದಾರರ ಆಧಾರ್ ಕಾರ್ಡ್ ಇತ್ಯಾದಿ ಪೂರಕ ಎಲ್ಲಾ ದಾಖಲೆಗಳನ್ನು ತಮ್ಮ ಗ್ರಾಮಕ್ಕೆ ಸಂಬಂಧಿಸಿದ ಗ್ರಾಮ ಆಡಳಿತಾಧಿಕಾರಿಗಳ ಹತ್ತಿರ ಸಲ್ಲಿಸಿ ಭೂ ಮಾಲೀಕರು ಮೃತರಾಗಿರುವ ಜಮೀನುಗಳ ವಾರಸುದಾರರಿಗೆ ಖಾತೆಯನ್ನು ಉಚಿತವಾಗಿ ಇ-ಪೌತಿ ಆಂದೋಲನದ ಮೂಲಕ ಪಹಣಿ ಮಾಡಿಸಿಕೊಳ್ಳಬಹುದಾಗಿರುತ್ತದೆ. ಶಿವಮೊಗ್ಗ ಜಿಲ್ಲೆ ಶಿವಮೊಗ್ಗ ತಾಲೂಕಿನ ಎಲ್ಲಾ ಗ್ರಾಮಗಳ ಸಾರ್ವಜನಿಕರು ಇ-ಪೌತಿ ಆಂದೋಲನದ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿ ರಾಜೀವ್ ವಿ.ಎಸ್. ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಮೈಸೂರು: ಆಹಾರ, ನಾಗರಿಕ ಸರಬರಾಜು ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಚಿವ ಕೆ. ಹೆಚ್. ಮುನಿಯಪ್ಪ ಅವರು ಮೈಸೂರು ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಪ್ರಮುಖ ನಿರ್ದೇಶನೆಗಳನ್ನು ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಈ ಸಭೆಯಲ್ಲಿ, ರಾಜ್ಯದಲ್ಲಿ ಇನ್ನೂ eKYC ಪ್ರಕ್ರಿಯೆಗೊಳಪಡದ ಪಡಿತರ ಚೀಟಿದಾರರ ಕುರಿತು ಗಂಭೀರ ಚಿಂತೆ ವ್ಯಕ್ತಪಡಿಸಿದ ಸಚಿವರು, ಈ ಪ್ರಕ್ರಿಯೆಯನ್ನು ಆದಷ್ಟು ಬೇಗ ಮುಗಿಸಲು ಸಂಬಂಧಿತ ಅಧಿಕಾರಿಗಳಿಗೆ ತಾಕೀತು ಮಾಡಿದರು. eKYC ಪ್ರಕ್ರಿಯೆಗಾಗಿ ಒಂದು ತಿಂಗಳ ಗಡಿಯನ್ನು ನಿಗದಿ ಮಾಡಿದ್ದು, ಈ ಅವಧಿಯಲ್ಲಿ eKYC ಪೂರೈಸದ ಸದಸ್ಯರ ಪಡಿತರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ಕುರಿತು ಎಚ್ಚರಿಕೆ ನೀಡಲು ಸೂಚಿಸಿದರು. ಸಚಿವರು ಮಾತನಾಡುವ ವೇಳೆ, “ಅನಗತ್ಯವಾಗಿ ಪಡಿತರ ಕಾರ್ಡ್ಗಳನ್ನು ವಿತರಣೆ ಮಾಡಿದಲ್ಲಿ, ದೋಷಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಜಿಲ್ಲಾವಾರಿಯಾಗಿ ಜಾಗೃತಿ ಸಮಿತಿಗಳನ್ನು ರಚಿಸಿ ಜನರಲ್ಲಿ ಅರಿವು ಮೂಡಿಸಬೇಕು,” ಎಂದು ಹೇಳಿದರು. ಜೊತೆಗೆ, ಗೋದಾಮುಗಳಲ್ಲಿ ಸಂಗ್ರಹವಾಗಿರುವ ಧಾನ್ಯಗಳ ರಕ್ಷಣೆ, ಕನಿಷ್ಠ ಬೆಂಬಲ…
ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ಭಾರತೀಯ ರೈಲ್ವೆ ಇಲಾಖೆಯಲ್ಲಿ ಬರೋಬ್ಬರಿ 30,307 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 30,307 ಹುದ್ದೆಗಳಿದ್ದು, ಅವುಗಳನ್ನು ಭರ್ತಿ ಮಾಡಲು ಈ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಕೆಳಗೆ ಘೋಷಿಸಲಾದ ವಿವರಗಳ ಪ್ರಕಾರ ಅಭ್ಯರ್ಥಿಗಳು ಅರ್ಹರಾಗಿದ್ದರೆ ಮತ್ತು ಆಸಕ್ತಿ ಹೊಂದಿದ್ದರೆ, ಘೋಷಿಸಲಾದ ದಿನಾಂಕದ ಆಧಾರದ ಮೇಲೆ ಅರ್ಜಿ ಸಲ್ಲಿಸಿ. 1. ಮುಖ್ಯ ವಾಣಿಜ್ಯ ಕಮ್ ಟಿಕೆಟ್ ಮೇಲ್ವಿಚಾರಕ- 6235 ಹುದ್ದೆಗಳು 2. ಸ್ಟೇಷನ್ ಮಾಸ್ಟರ್- 5623 ಹುದ್ದೆಗಳು 3. ಸರಕು ರೈಲು ವ್ಯವಸ್ಥಾಪಕ- 3562 4. ಜೂನಿಯರ್ ಅಕೌಂಟ್ ಅಸಿಸ್ಟೆಂಟ್ ಕಮ್ ಟೈಪಿಸ್ಟ್- 7520 ಹುದ್ದೆಗಳು 5. ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್- 7367 ಹುದ್ದೆಗಳು ಅರ್ಹತೆಗಳು ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಿ. ಪ್ರತಿ ಹುದ್ದೆಗೆ ಕನಿಷ್ಠ ಶೈಕ್ಷಣಿಕ ಅರ್ಹತೆ ಇದೆ. ಆದ್ದರಿಂದ, ಅಭ್ಯರ್ಥಿಗಳು ಅಧಿಸೂಚನೆಗೆ ಭೇಟಿ ನೀಡಬೇಕು. ವಯಸ್ಸಿನ ಮಿತಿ ನೀವು ಯಾವುದೇ ಹುದ್ದೆಯನ್ನು ಆರಿಸಿಕೊಂಡರೂ, ಅಭ್ಯರ್ಥಿಗಳ ವಯಸ್ಸು 18-32 ವರ್ಷಗಳ ನಡುವೆ ಇರಬೇಕು.…
ಇತ್ತೀಚಿನ ದಿನಗಳಲ್ಲಿ ವೈದ್ಯಕೀಯ ಚಿಕಿತ್ಸೆಯ ವೆಚ್ಚ ತೀವ್ರವಾಗಿ ಹೆಚ್ಚುತ್ತಿದೆ. ಖರ್ಚಿನ ಹೊರೆ ಆದಾಯಕ್ಕಿಂತ ಹೆಚ್ಚಾಗಿದೆ. ವಿಶೇಷವಾಗಿ ನೀವು ಯಾವುದೇ ಖಾಸಗಿ ಆಸ್ಪತ್ರೆಗೆ (ಆಯುಷ್ಮಾನ್ ಕಾರ್ಡ್) ಹೋದರೆ, ಅದು ಲಕ್ಷಾಂತರ ವೆಚ್ಚವಾಗುತ್ತದೆ. ಎಲ್ಲರೂ ಅಷ್ಟು ಹಣವನ್ನು ಪಾವತಿಸಲು ಶಕ್ತರಲ್ಲ. ಅದಕ್ಕಾಗಿಯೇ ಕೇಂದ್ರ ಸರ್ಕಾರವು ಅಂತಹ ಜನರಿಗಾಗಿ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (PM-JAY) ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯಡಿಯಲ್ಲಿ, ಪ್ರತಿ ಕುಟುಂಬಕ್ಕೆ ವರ್ಷಕ್ಕೆ 5 ಲಕ್ಷ ರೂ.ಗಳವರೆಗೆ ನಗದುರಹಿತ, ಕಾಗದರಹಿತ ಆಸ್ಪತ್ರೆ ವ್ಯಾಪ್ತಿಯನ್ನು ಒದಗಿಸಲಾಗುತ್ತದೆ. ಆಯುಷ್ಮಾನ್ ಭಾರತ್ ಸಾರ್ವತ್ರಿಕ ಆರೋಗ್ಯ ವ್ಯಾಪ್ತಿ (UHC) ಒದಗಿಸುವ ಗುರಿಯನ್ನು ಹೊಂದಿದೆ. ಯಾವುದೇ ಆರ್ಥಿಕ ತೊಂದರೆಗಳನ್ನು ಎದುರಿಸದೆ ಪ್ರತಿಯೊಬ್ಬ ನಾಗರಿಕನು ಅಗತ್ಯ ವೈದ್ಯಕೀಯ ಸೇವೆಗಳನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳುವುದು ಯೋಜನೆಯ ಉದ್ದೇಶವಾಗಿದೆ. ಖಾಸಗಿ ಆಸ್ಪತ್ರೆಗಳನ್ನು ಅವಲಂಬಿಸಿರುವ ಅಥವಾ ಯಾವುದೇ ಗಂಭೀರ/ದೀರ್ಘಕಾಲದ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿರುವವರಿಗೆ ವೈದ್ಯಕೀಯ ನೆರವು ನೀಡಲು ಈ ಯೋಜನೆ ತುಂಬಾ ಉಪಯುಕ್ತವಾಗಿದೆ. ಈ ಯೋಜನೆಯ ಪ್ರಯೋಜನಗಳೇನು? : ಆಯುಷ್ಮಾನ್ ಭಾರತ್ ಕಾರ್ಡ್…
ಬೆಂಗಳೂರು : ಬೆಂಗಳೂರಿನ ಜನತೆಗೆ ಮತ್ತೊಂದು ಶಾಕ್, ಬಸ್, ಮೆಟ್ರೋ ರೈಲು ಪ್ರಯಾಣ ದರದ ನಂತರ ಇದೀಗ ನಗರದಲ್ಲಿ ಆಟೋ ಪ್ರಯಾಣ ದರವನ್ನು ಆಗಸ್ಟ್ 1ರಿಂದ ಅನ್ವಯವಾಗುವಂತೆ ಹೆಚ್ಚಳವಾಗಲಿದೆ. ಹೌದು, ಮೊದಲ 2 ಕಿ.ಮೀ.ಗೆ (ಕನಿಷ್ಠ ದರ) 30 ರು. ಇದ್ದ ಪ್ರಯಾಣ ದರವನ್ನು 36 ರು.ಗೆ ಹೆಚ್ಚಿಸಲಾಗಿದೆ. ಉಳಿದಂತೆ ನಂತರದ ಪ್ರತಿ ಕಿ.ಮೀ. ದರವನ್ನು 15 ರು.ನಿಂದ 18 ರು.ಗೆ ಏರಿಸಲಾಗಿದೆ.ಆಗಸ್ಟ್ 1 ರಿಂದ ಅನ್ವಯವಾಗುವಂತೆ ಆಟೋ ಪ್ರಯಾಣ ದರ ಹೆಚ್ಚಳ ಮಾಡಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾಗಿರುವ ನಗರ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಕಾಯುವಿಕೆ ದರವನ್ನು ಮೊದಲ ಐದು ನಿಮಿಷಕ್ಕೆ ಉಚಿತ, ಐದು ನಿಮಿಷದ ನಂತರದ ಪ್ರತಿ 15 ನಿಮಿಷದ ದರವನ್ನು 5 ರೂ.ನಿಂದ 10 ರೂ.ಗೆ ಹೆಚ್ಚಳ ಮಾಡಲಾಗಿದೆ.ಪ್ರಯಾಣಿಕರು 20 ಕೆಜಿ ಲಗೇಜ್ ಉಚಿತವಾಗಿ ತೆಗೆದುಕೊಂಡು ಹೋಗಬಹುದು. 20 ರಿಂದ 50 ಕೆಜಿಗೆ ಪ್ರತಿ ಕೆಜಿ ಲಗೇಜಿಗೆ 10 ರೂ. ನಂತೆ ಪಾವತಿಸಬೇಕು. ಪರಿಷ್ಕೃತ ದರದ ಮೂಲ ಪಟ್ಟಿಯ…
ಹೈದರಾಬಾದ್ : ಆನ್ ಲೈನ್ ಬೆಟ್ಟಿಂಗ್ ಗೆ ಮತ್ತೊಂದು ಬಲಿಯಾಗಿದ್ದು, 20 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿ ಸಾಲ ಕಟ್ಟಲಾಗದೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಬುಧವಾರ ಸಂಜೆ ನರಸಾಪುರದ ಖಾಸಗಿ ಹಾಸ್ಟೆಲ್ನಲ್ಲಿ 20 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಿವಿಆರ್ಐಟಿ ಎಂಜಿನಿಯರಿಂಗ್ ಕಾಲೇಜಿನ ಎರಡನೇ ವರ್ಷದ ವಿದ್ಯಾರ್ಥಿ ತರುಣ್ (20) ಈ ತಿಂಗಳ 16 ರಂದು ಆನ್ಲೈನ್ ಬೆಟ್ಟಿಂಗ್ನಲ್ಲಿ ಹಣ ಕಳೆದುಕೊಂಡ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಾಲೇಜು ಶುಲ್ಕಕ್ಕಾಗಿ 40 ಸಾವಿರ ರೂ. ಕಳುಹಿಸಿದ್ದ ಆತನ ತಂದೆ ಮೀತ್ಯಾ. ತರುಣ್ ಸ್ನೇಹಿತರಿಂದ 30 ಸಾವಿರ ರೂ. ಸಾಲ ಪಡೆದು ಆನ್ಲೈನ್ ಬೆಟ್ಟಿಂಗ್ನಲ್ಲಿ ಹಾಕಿದ್ದ. 70 ಸಾವಿರ ರೂ. ನಷ್ಟದ ಬಗ್ಗೆ ಕುಟುಂಬಕ್ಕೆ ತಿಳಿಸಲು ಸಾಧ್ಯವಾಗದೆ, ಸಾಲವನ್ನು ಸ್ನೇಹಿತರಿಗೆ ಮರುಪಾವತಿಸಲು ಸಾಧ್ಯವಾಗದೆ, ಹಾಸ್ಟೆಲ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತರುಣ್ನ ಊರು ಮಹಬೂಬಾಬಾದ್ ಜಿಲ್ಲೆಯ ಗಾರ್ಲಾ ಮಂಡಲದ ಪುಲ್ಲೂರು ಗ್ರಾಮದ ಸೂರ್ಯ ಥಂಡಾ ಎಂದು ಗುರುತಿಸಲಾಗಿದೆ. ಮಗ ಆತ್ಮಹತ್ಯೆ ಮಾಡಿಕೊಂಡ…
ನವದೆಹಲಿ : ಮದ್ಯ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಮತ್ತು ಛತ್ತೀಸ್ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಾಗೇಲ್ ಅವರ ಪುತ್ರ ಚೈತನ್ಯ ಬಾಗೇಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ಬಂಧಿಸಿದೆ. ಛತ್ತೀಸ್ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಅವರ ಭಿಲಾಯಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಶುಕ್ರವಾರ ದಾಳಿ ನಡೆಸಿದೆ. ಈ ಬೆನ್ನಲ್ಲೇ ಮಾಜಿ ಸಿಎಂ ಪುತ್ರ ಚೈತನ್ಯ ಬಾಘೇಲ್ ನನ್ನು ಬಂಧಿಸಿದ್ದಾರೆ. https://twitter.com/bhupeshbaghel/status/1946018442081087636?ref_src=twsrc%5Etfw%7Ctwcamp%5Etweetembed%7Ctwterm%5E1946018442081087636%7Ctwgr%5E0f3fba617d00376d206bbd2b1e5eaadb5318d86c%7Ctwcon%5Es1_c10&ref_url=https%3A%2F%2Fkannadadunia.com%2Fbreaking-e-d-e0b285e0b2a7e0b2bfe0b295e0b2bee0b2b0e0b2bfe0b297e0b2b3e0b2bfe0b282e0b2a6-e0b29be0b2a4e0b38de0b2a4e0b380e0b2b8e0b38d%2F
ಬೆಂಗಳೂರು: ಡಿಸಿಇಟಿ-25 ಮೊದಲ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. ಸೀಟು ಹಂಚಿಕೆಯಾದವರು ಎಚ್ಚರಿಕೆಯಿಂದ ಜು.19ರಂದು ಮಧ್ಯಾಹ್ನ 3ಗಂಟೆ ಒಳಗೆ ತಮಗೆ ಸೂಕ್ತ ಎನಿಸಿದ ಛಾಯ್ಸ್ ದಾಖಲಿಸಬೇಕು. ಒಂದು ವೇಳೆ ಯಾವುದೇ ಛಾಯ್ಸ್ ದಾಖಲಿಸದೇ ಸುಮ್ಮನಿದ್ದರೂ ನಂತರದ ಸುತ್ತುಗಳಿಗೆ ಅಂತಹವರನ್ನು ಪರಿಗಣಿಸಲಾಗುವುದಿಲ್ಲ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಸೀಟು ಸಿಕ್ಕಿರುವುದು ಸಮಾಧಾನವಾದರೆ ಛಾಯ್ಸ್-1 ಅನ್ನು ನಮೂದಿಸಿ, ಶುಲ್ಕ ಪಾವತಿಸಬೇಕು. ಬಳಿಕ ಜು. 21ರೊಳಗೆ ಕಾಲೇಜಿಗೆ ವರದಿ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ. ಛಾಯ್ಸ್ 1 ಮತ್ತು 2 ಆಯ್ಕೆ ಮಾಡಿಕೊಂಡವರು ಮಾತ್ರ ಚಲನ್ ಡೌನ್ಲೋಡ್ ಮಾಡಿಕೊಂಡು ಶುಲ್ಕ ಪಾವತಿಸಬೇಕು. ಹೆಚ್ಚಿನ ವಿವರಗಳಿಗೆ ವೆಬ್ ಸೈಟ್ ಗೆ ಭೇಟಿ ನೀಡಿ ಎಂದು ಅವರು ಸಲಹೆ ನೀಡಿದ್ದಾರೆ.