Subscribe to Updates
Get the latest creative news from FooBar about art, design and business.
Author: kannadanewsnow57
ಚಿತ್ರದುರ್ಗ : ರಾಜ್ಯ ಸರ್ಕಾರವು ರೈತರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಅಕ್ರಮ-ಸಕ್ರಮ ಯೋಜನೆಯಡಿ ಶೀಘ್ರವೇ 2 ಲಕ್ಷ ಕೃಷಿ ಪಂಪ್ ಸೆಟ್ ಗಳಿಗೆ ಸಂಪರ್ಕ ಒದಗಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ಹೊಸದುರ್ಗ ತಾಲ್ಲೂಕಿನ ನೀರಗುಂದ ಗೇಟ್ ಹತ್ತಿರ ಕುಸುಮ್-ಸಿ ಯೋಜನೆಯಡಿ ಸ್ಥಾಪಿತವಾಗಿರುವ “ಸೋಲಾರ್ ಪಾರ್ಕ್”ಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಅಕ್ರಮ-ಸಕ್ರಮ ಯೋಜನೆಯಡಿ ರಾಜ್ಯದಲ್ಲಿ ಸುಮಾರು 4.5 ಲಕ್ಷ ಕೃಷಿ ಪಂಪ್ಸೆಟ್ ಗಳು ಇವೆ. ಈ ಪೈಕಿ ಈಗಾಗಲೆ 2.5 ಲಕ್ಷ ಪಂಪ್ಸೆಟ್ಗಳನ್ನು ಅಕ್ರಮ-ಸಕ್ರಮದಡಿ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡಲಾಗಿದೆ, ಇನ್ನೂ 2 ಲಕ್ಷ ಪಂಪ್ಸೆಟ್ಗಳಿಗೆ ಸಂಪರ್ಕ ಒದಗಿಸಲು ಈಗಾಗಲೆ ಏಜೆನ್ಸಿ ಅವರನ್ನು ನಿಗದಿಪಡಿಸಿ ವಹಿಸಲಾಗಿದೆ. ಮುಂದಿನ ಒಂದೂವರೆ ವರ್ಷದೊಳಗೆ ಈ ಯೋಜನೆ ಸಂಪೂರ್ಣಗೊಳ್ಳುವ ವಿಶ್ವಾಸವಿದೆ ಎಂದರು. ರೈತರ ಕೃಷಿ ಮತ್ತು ನೀರಾವರಿ ಪಂಪ್ಸೆಟ್ಗಳಿಗೆ ವಿದ್ಯುತ್ ಕೊರತೆ ನೀಗಿಸುವ ನಿಟ್ಟಿನಲ್ಲಿ ಕುಸುಮ್ ಯೋಜನೆ ರೈತರಿಗೆ ವರದಾನವಾಗಲಿದೆ. ರೈತರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ…
ಬೆಂಗಳೂರು: ರಾಜ್ಯಾಧ್ಯಂತ ಆಸ್ಪತ್ರೆ ಒಳ ಹಾಗೂ ಹೊರ ಆವರಣದಲ್ಲಿ ಬೀದಿ ನಾಯಿಗಳು ಓಡಾಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಅಲ್ಲದೇ ಇವುಗಳ ನಿಯಂತ್ರಣಕ್ಕೆ ಮಹತ್ವದ ಆದೇಶವನ್ನು ಹೊರಡಿಸಿದೆ. ಜೊತೆಗೆ ಕಟ್ಟು ನಿಟ್ಟಾಗಿ ಪಾಲಿಸುವಂತೆ ಆದೇಶದಲ್ಲಿ ಖಡಕ್ ಸೂಚನೆ ನೀಡಲಾಗಿದೆ. ಇಂದು ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಎಲ್ಲಾ ಜಿಲ್ಲೆಯ ಡಿಹೆಚ್ಓ ಹಾಗು ಟಿಹೆಚ್ಓ ಹಾಗೂ ವೈದ್ಯಾಧಿಕಾರಿಗಳಿಗೆ ಆದೇಶ ಹೊರಡಿಸಿದ್ದಾರೆ. ಅದರಲ್ಲಿ ದಿನಪತ್ರಿಕೆಗಳಲ್ಲಿ ನಾಯಿಗಳು ಆಸ್ಪತ್ರೆಯ ಒಳ ಹಾಗೂ ಹೊರ ಆವರಣಗಳಲ್ಲಿ ಬೀದಿ ನಾಯಿಗಳು ಪುವೇಶ ಮಾಡಿ ಒಳರೋಗಿ, ಹೊರರೋಗಿ, ಗರ್ಭಿಣಿಯರು, ಹಾಗೂ ತಾಯಿ-ಮಕ್ಕಳಿಗೆ ಅಪಾಯ ಉಂಟುಮಾಡುವ ಸಂಭವದ ಬಗ್ಗೆ, ದಿನಪತ್ರಿಕೆಗಳು, ದೃಶ್ಯ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣದ ಮೂಲಕ ವರದಿಗಳು ಪಕಟವಾಗುತ್ತಿರುವುದನ್ನು ಗಮನಿಸಲಾಗಿದೆ ಎಂದಿದ್ದಾರೆ. ಆರೋಗ್ಯ ಸಂಸ್ಕೃಗಳಿಗೆ ಭೇಟಿ ನೀಡಿದ ಸಾರ್ವಜನಿಕರಿಗೆ ದಿನನಿತ್ಯ ತುರ್ತು ವಿಭಾಗ, ಹೊರ ಹಾಗೂ ಒಳರೋಗಿಗಳ ವಿಭಾಗ, ಗರ್ಭಿಣಿಯರು, ತಾಯಂದಿರು, ಹಾಗೂ ಮಕ್ಕಳಿಗೆ ಪ್ರಸೂತಿ ವಿಭಾಗದಲ್ಲಿ ಅವಶ್ಯ ವೈದ್ಯಕೀಯ ಸೇವೆಯನ್ನು ನಿರಂತರ ಒದಗಿಸಲಾಗುತ್ತಿರುತ್ತದೆ. ಆದುದರಿಂದ…
ನವದೆಹಲಿ : 2024 ರ ವರ್ಷವು ಇಂದು ಕೊನೆಯಾಗಿದ್ದು, ಇಂದಿನಿಂದ ಹೊಸ ವರ್ಷ 2025 ಆರಂಭವಾಗಿದ್ದು, ಎಲ್ ಪಿಜಿ ಸಿಲಿಂಡರ್ ನಿಂದ ಹಿಡಿದು ಯುಪಿಐವರೆಗೆ ಹಲವು ನಿಯಮಗಳು ಇಂದಿನಿಂದ ಬದಲಾಗಲಿವೆ. ಹೊಸ ವರ್ಷದಲ್ಲಿ ವೈಯಕ್ತಿಕ ಹಣಕಾಸು ಮತ್ತು ಬ್ಯಾಂಕಿಂಗ್ಗೆ ಸಂಬಂಧಿಸಿದ ಅನೇಕ ಪ್ರಮುಖ ಬದಲಾವಣೆಗಳು ಕಂಡುಬರುತ್ತವೆ. ಜನವರಿ 1, 2025 ರಿಂದ ಬದಲಾಗಲಿರುವ ವಿಷಯಗಳು LPG ಬೆಲೆಗಳು, UPI ಬಳಕೆದಾರರಿಗೆ ಹೊಸ ಸೌಲಭ್ಯಗಳು ಮತ್ತು EPFO ಸದಸ್ಯರಿಗೆ ಹೊಸ ಸೇವೆಗಳನ್ನು ಒಳಗೊಂಡಿರುತ್ತದೆ. ಈ ಮಾಹಿತಿಯು ನಿಮಗೆ ಬಹಳ ಮುಖ್ಯವಾಗಬಹುದು. LPG ಬೆಲೆಯಲ್ಲಿ ಬದಲಾವಣೆ ಇಂದು ಅಂದರೆ 1 ಜನವರಿ 2025 ರಿಂದ ಅಡುಗೆ ಅನಿಲವಾಗಿ ಬಳಸುವ LPG ಸಿಲಿಂಡರ್ಗಳ ಬೆಲೆಯಲ್ಲಿ ಬದಲಾವಣೆಯಾಗಲಿದೆ. ದೇಶದ ಪೆಟ್ರೋಲಿಯಂ ಕಂಪನಿಗಳು ಪ್ರತಿ ತಿಂಗಳ ಆರಂಭದಲ್ಲಿ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು ಬದಲಾಯಿಸುತ್ತವೆ. ಇತ್ತೀಚೆಗೆ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಏರಿಳಿತ ಕಂಡುಬಂದಿದ್ದು, 14 ಕೆಜಿ ಸಬ್ಸಿಡಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಹೊಸ ವರ್ಷದ ಮೊದಲ…
ನವದೆಹಲಿ : ಆಪಲ್ನ ಐಫೋನ್ಗಳು ಆಂಡ್ರಾಯ್ಡ್ ಫೋನ್ಗಳಿಗಿಂತ ಹೆಚ್ಚು ಸುರಕ್ಷಿತವೆಂದು ಪರಿಗಣಿಸಲಾಗಿದೆ. ಆದಾಗ್ಯೂ, ಇತ್ತೀಚಿನ ವಿಶ್ಲೇಷಣೆಯು ಐಒಎಸ್ ಅನ್ನು ಆಂಡ್ರಾಯ್ಡ್ಗಿಂತ ಹೆಚ್ಚು ಗುರಿಯಾಗಿಸಿಕೊಂಡಿದೆ ಎಂದು ಬಹಿರಂಗಪಡಿಸಿದೆ. ಐಒಎಸ್ ಹೆಚ್ಚು ಸುರಕ್ಷಿತವಾಗಿದ್ದರೂ ಸಹ, ಸ್ಕ್ಯಾಮರ್ಗಳು ಅದರ ಮೇಲೆ ತಮ್ಮ ಕಣ್ಣಿಟ್ಟಿದ್ದಾರೆ. ಬೋಸ್ಟನ್ ಮೂಲದ ಡೇಟಾ-ಕೇಂದ್ರಿತ ಕ್ಲೌಡ್ ಸೆಕ್ಯುರಿಟಿ ಕಂಪನಿಯಾದ ಲುಕ್ಔಟ್ನ ಹೊಸ ಅಧ್ಯಯನವು ಐಒಎಸ್ ಸಾಧನಗಳು ಆಂಡ್ರಾಯ್ಡ್ಗಿಂತ ಫಿಶಿಂಗ್ ಮತ್ತು ಇತರ ಸೈಬರ್ ದಾಳಿಗಳಿಗೆ ಹೆಚ್ಚು ಗುರಿಯಾಗುತ್ತವೆ ಎಂದು ಹೇಳುತ್ತದೆ. Android ಗಿಂತ iOS ಸಾಧನಗಳ ಮೇಲೆ ಹೆಚ್ಚು ದಾಳಿಗಳು 2024 ರ ಮೂರನೇ ತ್ರೈಮಾಸಿಕದಲ್ಲಿ ನಡೆಸಿದ ಈ ಅಧ್ಯಯನದಲ್ಲಿ ಲಕ್ಷಾಂತರ Android ಮತ್ತು iOS ಸಾಧನಗಳನ್ನು ಸೇರಿಸಲಾಗಿದೆ. 2024 ರ ಮೊದಲ ಮೂರು ತ್ರೈಮಾಸಿಕಗಳಲ್ಲಿ, 19 ಶೇಕಡಾ ಎಂಟರ್ಪ್ರೈಸ್ iOS ಸಾಧನಗಳು ಕನಿಷ್ಠ ಒಂದು ಫಿಶಿಂಗ್ ದಾಳಿಯನ್ನು ಅನುಭವಿಸಿವೆ ಎಂದು ಅದು ಬಹಿರಂಗಪಡಿಸಿದೆ. ಇದಕ್ಕೆ ಹೋಲಿಸಿದ್ರೆ ಕೇವಲ 10.9% ಎಂಟರ್ಪ್ರೈಸ್ ಆಂಡ್ರಾಯ್ಡ್ಗಳು ಫಿಶಿಂಗ್ ದಾಳಿಗೆ ಒಳಪಟ್ಟಿವೆ. ಈ ಹೆಚ್ಚಿನ ಫಿಶಿಂಗ್ ದಾಳಿಗಳು…
ಚೆನ್ನೈ : ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಸಮುದ್ರದ ಮೇಲೆ ಭಾರತದ ಮೊದಲ ಗಾಜಿನ ಸೇತುವೆಯನ್ನು ಉದ್ಘಾಟಿಸಲಾಗಿದೆ. ಈ ಗಾಜಿನ ಸೇತುವೆಯು 77 ಮೀಟರ್ ಉದ್ದ ಮತ್ತು 10 ಮೀಟರ್ ಅಗಲವನ್ನು ಹೊಂದಿದೆ, ಇದು ವಿವೇಕಾನಂದ ರಾಕ್ ಸ್ಮಾರಕ ಮತ್ತು ಕನ್ಯಾಕುಮಾರಿ ದಡದಲ್ಲಿರುವ 133 ಅಡಿ ಎತ್ತರದ ತಿರುವಳ್ಳುವರ್ ಪ್ರತಿಮೆಯನ್ನು ಸಂಪರ್ಕಿಸುತ್ತದೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸೋಮವಾರ ಸಂಜೆ ಸೇತುವೆಯನ್ನು ಉದ್ಘಾಟಿಸಿದರು. ದೇಶದ ಮೊದಲ ಇಂತಹ ಸೇತುವೆ ಕನ್ಯಾಕುಮಾರಿ ಕಡಲತೀರದಲ್ಲಿ ನಿರ್ಮಿಸಲಾಗಿರುವ ಈ ಗಾಜಿನ ಸೇತುವೆ ದೇಶದಲ್ಲೇ ಮೊದಲ ಸೇತುವೆ ಎಂದು ಹೇಳಲಾಗುತ್ತಿದೆ. ಈ ಸೇತುವೆಯು ಪ್ರವಾಸಿಗರಿಗೆ ವಿವೇಕಾನಂದ ರಾಕ್ ಸ್ಮಾರಕ ಮತ್ತು ತಿರುವಳ್ಳುವರ್ ಪ್ರತಿಮೆ ಮತ್ತು ಸುತ್ತಮುತ್ತಲಿನ ಸಮುದ್ರದ ಅತ್ಯುತ್ತಮ ನೋಟವನ್ನು ನೀಡುತ್ತದೆ. ಈ ಸೇತುವೆಯ ಮೇಲೆ ನಡೆಯುವುದು ರೋಮಾಂಚನಕಾರಿ ಅನುಭವವಾಗಿದೆ. ಈ ಗಾಜಿನ ಸೇತುವೆಯನ್ನು ತಮಿಳುನಾಡು ಸರ್ಕಾರ 37 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದೆ. ದಿವಂಗತ ಮುಖ್ಯಮಂತ್ರಿ ಎಂ ಕರುಣಾನಿಧಿ ಅವರ ತಿರುವಳ್ಳುವರ್ ಪ್ರತಿಮೆ ಅನಾವರಣದ ಬೆಳ್ಳಿಹಬ್ಬದ ಅಂಗವಾಗಿ ಸಿಎಂ ಎಂಕೆ…
ಶಿವಮೊಗ್ಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಿಎಸ್ಸಿ ಸರ್ವೀಸರ್ ಇಂಡಿಯಾ ಲಿಮಿಟೆಡ್, ಶಾಲಾ ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ಶಿವಮೊಗ್ಗ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ವತಿಯಿಂದ ಜ. 2 ರಿಂದ 30 ರವರೆಗೆ ಶಿವಮೊಗ್ಗ ತಾಲ್ಲೂಕಿನ ಶಾಲಾ ವಿದ್ಯಾರ್ಥಿಗಳ ಆಧಾರ್ ತಿದ್ದುಪಡಿ ಬೃಹತ್ ಆಂದೋಲನ ಹಮ್ಮಿಕೊಳ್ಳಲಾಗಿದೆ. ಜನವರಿ 02 ರಂದು ಬೆಳಗ್ಗೆ 11 ಗಂಟೆಗೆ ಸರ್ಕಾರಿ ಪ್ರೌಢಶಾಲೆ ಕಾಚಿನಕಟ್ಟೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೇಮಂತ್ ಎನ್ ಇವರು ಆಧಾರ್ ತಿದ್ದುಪಡಿ ಬೃಹತ್ ಆಂದೋಲನಕ್ಕೆ ಚಾಲನೆ ನೀಡುವರು. ಶಿವಮೊಗ್ಗ ತಾಲ್ಲೂಕಿನಲ್ಲಿ ಸರಿಸುಮಾರು 90 ಸಾವಿರಕ್ಕೂ ಅಧಿಕ ವಿದ್ಯಾಥಿಗಳು ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳ ಮಾಹಿತಿಯು ಶಾಲೆಗಳಲ್ಲಿ ಹಾಗೂ ಆಧಾರ್ ಕಾರ್ಡ್ನಲ್ಲಿ ಏಕರೂಪದಲ್ಲಿರುವುದು ಕಡ್ಡಾಯವಾಗಿರುತ್ತದೆ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ದೃಷ್ಟಿಯಿಂದ ಈ ಕ್ರಮವು ಅನುಕೂಲಕಾರಿಯೂ ಆಗಿರುತ್ತದೆ. ಇಲಾಖೆಯ ಅಪಾರ್ ನೋಂದಣಿ ಸ್ಯಾಟ್ಸ್ ಸೇರಿದಂತೆ ಇತರೆ ಕಾರ್ಯಗಳಲ್ಲಿಯೂ ಆಧಾರ್ ಕಾರ್ಡ್ ಹಾಗೂ ಶಾಲಾ ಮಾಹಿತಿ…
ಹುಬ್ಬಳ್ಳಿ : ಮದ್ಯ ಪ್ರಿಯರಿಗೆ ಹೊಸ ವರ್ಷಕ್ಕೆ ಬಂಪರ್ ಆಫರ್ ಸಿಕ್ಕಿದ್ದು, 6 ಸಾವಿರ ರೂ. ಮೌಲ್ಯದ ಮದ್ಯ ಖರೀದಿಸಿದ್ರೆ ಸೂಟ್ ಕೇಸ್ ಉಚಿತವಾಗಿ ನೀಡಲಾಗುವುದು ಎಂದು ಮದ್ಯದಂಗಡಿ ಮುಂದೆ ಬೋರ್ಡ್ ಹಾಕಲಾಗಿದೆ. ಹೌದು, ಹುಬ್ಬಳ್ಳಿಯಲ್ಲಿ ಮದ್ಯ ಪ್ರಿಯರಿಗೆ ಅಂಗಡಿ ಮಾಲೀಕರು ಬಿಗ್ ಆಫರ್ ನೀಡಿದ್ದು, ಮದ್ಯ ಪ್ರಿಯರು 6,000 ರೂ. ಮೌಲ್ಯದ ಮದ್ಯ ಖರೀದಿಸಿದ್ರೆ ಸೂಟ್ ಕೇಸ್ ಉಚಿತವಾಗಿ ನೀಡಲಾಗುವುದು ಎಂದು ಘೋಷಿಸಿವೆ. ಹೊಸ ವರ್ಷವನ್ನು ಸ್ವಾಗತಿಸಲು ಬಾರ್ ಅಂಡ್ ರೆಸ್ಟೋರೆಂಟ್ ಗಳು, ಪಬ್, ವೈನ್ ಸ್ಟೋರ್ ಗಳಲ್ಲಿ ಮದ್ಯಪ್ರಿಯರಿಗೆ ಆಫರ್ ನೀಡುತ್ತಿದ್ದಾರೆ. ಡಿಸೆಂಬರ್ 31 ರಂದು ಹೆಚ್ಚಿನ ಪ್ರಮಾಣದಲ್ಲಿ ಮದ್ಯ ಮಾರಾಟವಾಗುತ್ತದೆ. ಹೀಗಾಗಿ ವ್ಯಾಪಾರ, ಗ್ರಾಹಕರ ಹೆಚ್ಚಳದ ಜೊತೆಗೆ ಗ್ರಾಹಕರನ್ನು ಸಂಪಾದಿಸಲು ದುಬಾರಿ ಬೆಲೆಯ ಮದ್ಯಗಳಲ್ಲಿ ರಿಯಾಯಿತಿ ಹೆಚ್ಚಿನ ಖರೀದಿಗೆ ಒಂದು ಬಾಟಲ್ ಉಚಿತ ನೀಡುವುದಾಗಿ ಕೆಲವು ಮದ್ಯ ಮಾರಾಟಗಾರರು ಪ್ರಕಟಿಸಿದ್ದಾರೆ.
ಮೈಸೂರು : ನಾಳೆಯಿಂದ ಹೊಸ ವರ್ಷ ಶುರುವಾಗಲಿದ್ದು, 2025 ನೇ ಹೊಸ ವರ್ಷ ಸ್ವಾಗತಕ್ಕೆ ಎಲ್ಲರೂ ಸಿದ್ಧತೆ ನಡೆಸಿದ್ದು, ಈ ನಡುವೆ ಪೊಲೀಸರು ಸಾರ್ವಜನಿಕರಿಗೆ ಮಹತ್ವದ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ. ದಯವಿಟ್ಟು ಶುಭಾಷಯಗಳ ಪಠ್ಯ ಸಂದೇಶವನ್ನು ಮಾತ್ರ ಹಂಚಿಕೊಳ್ಳಿ. ತೆರೆಯಲು ಮತ್ತು ಪರಿಶೀಲಿಸಲು ಕೇಳುವ ಚಿತ್ರಗಳು, ಲಿಂಕ್ ಗಳನ್ನು ಹಂಚಿಕೊಳ್ಳಬೇಡಿ ಮತ್ತು ತೆರೆಯಬೇಡಿ, ಇತ್ತೀಚಿನ ಸೈಬರ್ ಕ್ರೈಂ ಗಳು ಆತಂಕಕಾರಿಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಹೊಸ ವರ್ಷವನ್ನು ಆನಂದದಿಂದ ಆಚರಿಸಿ ಎಂದು ಸೈಬರ್ ವಂಚಕರು ಸಾಮಾಜಿಕ ಜಾಲತಾಣಗಳಾದ ವಾಟ್ಸಪ್,ಪೇಸ್ಟುಕ್, ಟೆಲಿಗ್ರಾಮ್ ಇನ್ನೀತರ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಲಿಂಕ್ಗಳು ಗ್ರೀಟಿಂಗ್ಸ್ ಗಳನ್ನು ಕಳುಹಿಸಿ ಸೈಬರ್ ವಂಚನೆಗೆ ಒಳಗಾಗುವಂತೆ ಮಾಡುತ್ತಾರೆ.ಅಪರಿಚಿತ ಅನುಮಾನಾಸ್ಪದ ಅಂಕ್ ಗಳ ಮೇಲೆ ಕ್ಲಿಕ್ ಮಾಡಬೇಡಿ ಎಂದು ಪೊಲೀಸರು ಮನವಿ ಮಾಡಿದ್ದಾರೆ. ಸಾರ್ವಜನಿಕರು ನಿಮ್ಮ ಮೊಬೈಲ್ ಗಳಿಗೆ ಬರುವ ಯಾವುದೇ ಅಂಕ್ ಅಥವಾ ಚಿತ್ರವನ್ನು ಲಿಂಕ್ ಗಳೊಂದಿಗೆ ತೆರೆಯುವಾಗ ಜಾಗರೂಕರಾಗಿರಿ. ಯಾರದರೂ ನಿಮಗೆ ಕಳುಹಿಸಿದ ಶುಭಾಷಯಗಳನ್ನು ಅಥವಾ ಅಂಕ್ ಗಳನ್ನು ಇತರೆ ಗುಂಪುಗಳಲ್ಲಿ…
ಬೆಂಗಳೂರು : ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಶೇಖರಿಸಿಟ್ಟಿದ್ದ ಡ್ರಗ್ ಪೆಡ್ಲರ್ ನನ್ನು ಬಂಧಿಸಿದ್ದು, ಬರೋಬ್ಬರಿ 2.50 ಕೋಟಿ ಮೌಲ್ಯದ ನಿಷೇಧಿತ ಮಾದಕ ವಸ್ತುಗಳ ವಶ ಪಡಿಸಿಕೊಳ್ಳಲಾಗಿದೆ. ಡಿಸೆಂಬರ್ 27 ರಂದು ರಂದು ಚೊಕ್ಕನಹಳ್ಳಿಯಲ್ಲಿರುವ ಅಪಾರ್ಟ್ಮೆಂಟ್ವೊಂದರಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಶೇಖರಿಸಿಟ್ಟಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಸಿಸಿಬಿ ಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳು ದಾಳಿ ನಡೆಸಿದ್ದು, ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಶೇಖರಿಸಿಟ್ಟಿದ್ದ ಡ್ರಗ್ ಪೆಡ್ಲರ್ ನನ್ನು ಬಂಧಿಸಿದ್ದು, ಬರೋಬ್ಬರಿ 2.50 ಕೋಟಿ ಮೌಲ್ಯದ ನಿಷೇಧಿತ ಮಾದಕ ವಸ್ತುಗಳ ವಶ ಪಡಿಸಿಕೊಳ್ಳಲಾಗಿದೆ. ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆ ಮಾಡಲಾಗಿ, ಬೆಂಗಳೂರು ನಗರದ ಪ್ರಮುಖ ಸ್ಥಳಗಳಲ್ಲಿ ಹೊಸ ವರ್ಷದ ಆಚರಣೆಯ ಸಲುವಾಗಿ, ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುವ ಸಲುವಾಗಿ ಮನೆಯಲ್ಲಿ ಶೇಖರಿಸಿಟ್ಟಿರುವುದಾಗಿ ತಿಳಿಸಿದ್ದಾನೆ. ಆತನ ಮನೆಯಿಂದ 1) ಹೈಡೋಗಾಂಜಾ 3 ಕೆ.ಜಿ 55 2)…
ನವದೆಹಲಿ : 2024 ರ ವರ್ಷವು ಇಂದು ಕೊನೆಗೊಳ್ಳುತ್ತದೆ, ಅಂದರೆ ಮಂಗಳವಾರ ಮಧ್ಯರಾತ್ರಿ ಮತ್ತು ಹೊಸ ವರ್ಷ 2025 ಬರುತ್ತದೆ. ಆದರೆ, ಇಂದು ಮಧ್ಯರಾತ್ರಿ 12 ಗಂಟೆಯಿಂದ ದೇಶದಲ್ಲಿ ದೊಡ್ಡ ಬದಲಾವಣೆಯಾಗಲಿದೆ. ಅಂತಹ ಅನೇಕ ಪ್ರಮುಖ ನಿಯಮಗಳು ಬದಲಾಗುತ್ತವೆ, ಅದು ನಿಮ್ಮ ಜೇಬಿನ ಮೇಲೆ ನೇರ ಪರಿಣಾಮ ಬೀರಲಿದೆ. ಹೊಸ ವರ್ಷದಲ್ಲಿ ವೈಯಕ್ತಿಕ ಹಣಕಾಸು ಮತ್ತು ಬ್ಯಾಂಕಿಂಗ್ಗೆ ಸಂಬಂಧಿಸಿದ ಅನೇಕ ಪ್ರಮುಖ ಬದಲಾವಣೆಗಳು ಕಂಡುಬರುತ್ತವೆ. ಜನವರಿ 1, 2025 ರಿಂದ ಬದಲಾಗಲಿರುವ ವಿಷಯಗಳು LPG ಬೆಲೆಗಳು, UPI ಬಳಕೆದಾರರಿಗೆ ಹೊಸ ಸೌಲಭ್ಯಗಳು ಮತ್ತು EPFO ಸದಸ್ಯರಿಗೆ ಹೊಸ ಸೇವೆಗಳನ್ನು ಒಳಗೊಂಡಿರುತ್ತದೆ. ಈ ಮಾಹಿತಿಯು ನಿಮಗೆ ಬಹಳ ಮುಖ್ಯವಾಗಬಹುದು. LPG ಬೆಲೆಯಲ್ಲಿ ಬದಲಾವಣೆ ಇಂದು ಮಧ್ಯರಾತ್ರಿಯಿಂದ ಅಂದರೆ 1 ಜನವರಿ 2025 ರಿಂದ ಅಡುಗೆ ಅನಿಲವಾಗಿ ಬಳಸುವ LPG ಸಿಲಿಂಡರ್ಗಳ ಬೆಲೆಯಲ್ಲಿ ಬದಲಾವಣೆಯಾಗಲಿದೆ. ದೇಶದ ಪೆಟ್ರೋಲಿಯಂ ಕಂಪನಿಗಳು ಪ್ರತಿ ತಿಂಗಳ ಆರಂಭದಲ್ಲಿ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು ಬದಲಾಯಿಸುತ್ತವೆ. ಇತ್ತೀಚೆಗೆ 19 ಕೆಜಿ ವಾಣಿಜ್ಯ…