Subscribe to Updates
Get the latest creative news from FooBar about art, design and business.
Author: kannadanewsnow57
ಚೀನಾ: ಚೀನಾದ ಉತ್ತರ ನಗರ ಲಿಯಾವೊಯಾಂಗ್ನ ರೆಸ್ಟೋರೆಂಟ್ನಲ್ಲಿ ಸಂಭವಿಸಿದ ಬೆಂಕಿಯಲ್ಲಿ 22 ಜನರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಚೀನಾದ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮಧ್ಯಾಹ್ನದ ನಂತರ ಸಂಭವಿಸಿದ ಬೆಂಕಿಯ ಕಾರಣದ ಬಗ್ಗೆ ಯಾವುದೇ ಮಾಹಿತಿ ನೀಡಲಾಗಿಲ್ಲ, ಆದರೆ ಘಟನಾ ಸ್ಥಳದ ಚಿತ್ರಗಳು ಎರಡು ಅಥವಾ ಮೂರು ಅಂತಸ್ತಿನ ಕಟ್ಟಡದ ಕಿಟಕಿಗಳು ಮತ್ತು ಬಾಗಿಲುಗಳಿಂದ ಭಾರಿ ಜ್ವಾಲೆಗಳು ಹೊರಹೊಮ್ಮುತ್ತಿರುವುದನ್ನು ತೋರಿಸಿದೆ. ಚೀನಾದಲ್ಲಿ ಕೈಗಾರಿಕಾ ಅಪಘಾತಗಳು ಆಗಾಗ್ಗೆ ಸಂಭವಿಸುತ್ತವೆ. ಸಾಮಾನ್ಯವಾಗಿ ತರಬೇತಿಯ ಕೊರತೆ ಅಥವಾ ತಮ್ಮ ಮೇಲಧಿಕಾರಿಗಳ ಒತ್ತಡದಿಂದಾಗಿ ಸಿಬ್ಬಂದಿ ಸುರಕ್ಷತಾ ವೈಶಿಷ್ಟ್ಯಗಳನ್ನು ನಿರ್ಲಕ್ಷಿಸುವುದರಿಂದ ಆಗಿದೆ. ಕಳಪೆ ನಿರ್ವಹಣೆಯ ಮೂಲಸೌಕರ್ಯಗಳು, ಅಕ್ರಮವಾಗಿ ಸಂಗ್ರಹಿಸಲಾದ ರಾಸಾಯನಿಕಗಳು ಮತ್ತು ಅಗ್ನಿಶಾಮಕ ನಿರ್ಗಮನದ ಕೊರತೆ ಮತ್ತು ಬೆಂಕಿ ನಿರೋಧಕಗಳ ಕೊರತೆ, ಆಗಾಗ್ಗೆ ಭ್ರಷ್ಟಾಚಾರದಿಂದ ಪ್ರಚೋದಿಸಲ್ಪಡುತ್ತವೆ. ಇವು ಆಗಾಗ್ಗೆ ಇಂತಹ ವಿಪತ್ತುಗಳಿಗೆ ಕಾರಣವಾಗುತ್ತವೆ. ಇದೀಗ ಅದೇ ಕಾರಣದಿಂದಾಗಿ ಚೀನಾದ ರೆಸ್ಟೋರೆಂಟ್ ನಲ್ಲಿ ಉಂಟಾಗಿರುವಂತ ಬೆಂಕಿ ಅವಘಡದಲ್ಲಿ 22 ಮಂದಿ ಸಜೀವ ದನಹವಾಗಿದ್ದು, ಮೂವರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ…
ಬೆಂಗಳೂರು : ಸಿದ್ದರಾಮಯ್ಯ ಅವರು ಸಿಎಂ ಆಗಿ ಹೆಚ್ಚು ದಿನ ಇರುವುದಿಲ್ಲ. ನವೆಂಬರ್ ವರೆಗೆ ಮಾತ್ರ ಅವರು ಸಿಎಂ ಆಗಿರುತ್ತಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಎಎಸ್ ಪಿಯನ್ನು ಸಿಎಂ ಸಿದ್ದರಾಮಯ್ಯ ವೇದಿಕೆ ಮೇಲೆ ಏಕವಚನದಲ್ಲಿ ಮಾತನಾಡಿದ್ದಾರೆ. ಎಎಸ್ ಪಿ ಅವರು ಏನಾದರೂ ಇವರ ಮನೆ ಕಸಗುಡಿಸುವ ಆಳಾ? ಡಿಸಿ, ಎಎಸ್ ಪಿ ಬಗ್ಗೆ ಏಕವಚನದಲ್ಲಿ ಮಾತನಾಡಿದ್ದು ತಪ್ಪು, ಸಿದ್ದರಾಮಯ್ಯ ಹೆಚ್ಚು ದಿನ ಸಿಎಂ ಆಗಿರುವುದಿಲ್ಲ ಇದರಿಂದ ಒತ್ತಡಕ್ಕೆ ಒಳಗಾಗಿ ಸಿದ್ದರಾಮಯ್ಯ ಹೀಗೆ ಮಾತನಾಡುತ್ತಿದ್ದಾರೆ ಎಂದರು. ಸಿಎಂ ಸಿದ್ದರಾಮಯ್ಯ ಅವರು ಎಎಸ್ ಪಿ ಗದರಿಸಿದ ವಿಚಾರದಲ್ಲಿ ಸಿಎಂ ನಡೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೂಡ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ ಆಗಿದ್ದು, ಕುಡಿದ ಅಮಲಿನಲ್ಲಿ ಸ್ನೇಹಿತರ ನಡುವೆ ಜಗಳವಾಗಿ ಕೊಲೆಯಲ್ಲಿ ಅಂತ್ಯವಾಗಿದೆ. ಬೆಂಗಳೂರಿನ ಸೀಗೆಹಳ್ಳಿಯಲ್ಲಿ ಜಾರ್ಖಂಡ್ ನ ಪವನ್ (40) ಹತ್ಯೆ ಮಾಡಲಾಗಿದೆ. ಮದ್ಯ ಸೇವನೆ ವೇಳೆ ಮಾತಿಗೆ ಮಾತುಬೆಳೆದು ಗಣೇಶ್ ಎಂಬಾತ ಪವನ್ ನನ್ನು ಹತ್ಯೆ ಮಾಡಿದ್ದಾನೆ. ಜಾರ್ಖಂಡ್ ಮೂಲದ ಪವನ್, ಗಣೇಶ್ ಕೂಲಿ ಮಾಡುತ್ತಿದ್ದರು. ಪವನ್ ಎದೆಗೆ ಚಾಕುವಿನಿಂದ ಇರಿದು ಗಣೇಶ್ ಕೊಲೆ ಮಾಡಿದ್ದಾನೆ. ಸದ್ಯ ಗಣೇಶ್ ನನ್ನು ಕಾಡುಗೋಡಿ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು : 2025 26ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ಮಕ್ಕಳ ದಾಖಲಾತಿ ಹೆಚ್ಚಿಸಲು ‘ನಮ್ಮ ಶಾಲೆ ನಮ್ಮ ಜವಾಬ್ದಾರಿ” ಕಾರ್ಯಕ್ರಮ ಏರ್ಪಡಿಸಿ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಶಿಕ್ಷಣ ಇಲಾಖೆ ಆದೇಶದಲ್ಲಿ ಏನಿದೆ? ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಶಾಲಾ ಶಿಕ್ಷಣವನ್ನು ಬಲವಡಿಸಲು, ರಾಜ್ಯದ ಎಲ್ಲಾ ಮಕ್ಕಳು ಸಾರ್ವತ್ರಿಕ ಶಿಕ್ಷಣಕ್ಕೆ ಒಳಪಡಿಸುವುದು ಅಗತ್ಯವಾಗಿದೆ ಸರ್ಕಾರಿ ಶಾಲೆಗಳಲ್ಲಿ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಮಕ್ಕಳ ದಾಖಲಾತಿ, ದಾಖಲಾದ ಮಕ್ಕಳು ಶಾಲೆಯಲ್ಲಿ ಪ್ರತಿನಿತ್ಯ ಹಾಜರಾಗಿ, ನಿರಂತರ ಕಲಿಕೆಯಲ್ಲಿ ಭಾಗವಹಿಸಿ, ಉಳಿಯಲು, ಹಲವಾರು ಶೈಕ್ಷಣಿಕ ಸೌಲಭ್ಯಗಳು ಹಾಗೂ ಪ್ರೋತ್ಸಾಹದಾಯಕ ಕೇಂದ್ರ ಮತ್ತು ರಾಜ್ಯ ಸರ್ಕಾರದ ಆರ್ಥಿಕ ಅನುದಾನದಡಿ ಯಶಸ್ವಿಯಾಗಿ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುತ್ತಿದೆ. ಮಕ್ಕಳ ಕಲಿಕಾ ಗುಣಮಟ್ಟವನ್ನು ಉತ್ತಮಪಡಿಸಲು ಶಾಲಾ ಶಿಕ್ಷಣ ಇಲಾಖೆಯು ಹಲವಾರು ಯೋಜನೆಗಳನ್ನು ರೂಪಿಸಿದೆ. ಆದಾಗ್ಯೂ ಸಹ, ಇತ್ತೀಚಿನ ವರ್ಷಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ, ಪದ)…
ನವದೆಹಲಿ: ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) 2025 ರ ಶೈಕ್ಷಣಿಕ ಅಧಿವೇಶನದಿಂದ ಜಾರಿಗೆ ಬರುವಂತೆ ಪದವಿಪೂರ್ವ (ಯುಜಿ) ಮತ್ತು ಸ್ನಾತಕೋತ್ತರ (ಪಿಜಿ) ಕೋರ್ಸ್ಗಳಿಗೆ ಹೆಗ್ಗುರುತು ಸುಧಾರಣೆಗಳನ್ನು ಘೋಷಿಸಿದೆ. ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) 2020 ರಲ್ಲಿ ಬೇರೂರಿರುವ ಈ ಬದಲಾವಣೆಗಳನ್ನು ಭಾರತದಲ್ಲಿ ಉನ್ನತ ಶಿಕ್ಷಣವನ್ನು ಹೆಚ್ಚು ಹೊಂದಿಕೊಳ್ಳುವ, ಪ್ರವೇಶಿಸಬಹುದಾದ ಮತ್ತು ಜಾಗತಿಕವಾಗಿ ಸ್ಪರ್ಧಾತ್ಮಕವಾಗಿಸಲು ವಿನ್ಯಾಸಗೊಳಿಸಲಾಗಿದೆ. ಬಹು ಪ್ರವೇಶ ಮತ್ತು ನಿರ್ಗಮನ ಅಂಕಗಳು, ಅಂತರಶಿಸ್ತೀಯ ಕಲಿಕೆ ಮತ್ತು ಏಕಕಾಲದಲ್ಲಿ ಎರಡು ಪದವಿಗಳನ್ನು ಪಡೆಯುವ ಸಾಮರ್ಥ್ಯದಂತಹ ಆಯ್ಕೆಗಳೊಂದಿಗೆ ವಿದ್ಯಾರ್ಥಿಗಳು ಈಗ ತಮ್ಮ ಶೈಕ್ಷಣಿಕ ಪ್ರಯಾಣವನ್ನು ಕಸ್ಟಮೈಸ್ ಮಾಡುವ ಸ್ವಾತಂತ್ರ್ಯವನ್ನು ಹೊಂದಿರುತ್ತಾರೆ. ಅತ್ಯಂತ ಮಹತ್ವದ ಬದಲಾವಣೆಗಳಲ್ಲಿ ಮಲ್ಟಿಪಲ್ ಎಂಟ್ರಿ ಮತ್ತು ಎಕ್ಸಿಟ್ ಸಿಸ್ಟಮ್ ಒಂದಾಗಿದೆ, ಇದು ವಿದ್ಯಾರ್ಥಿಗಳಿಗೆ ಪೂರ್ಣಗೊಳಿಸಿದ ಕ್ರೆಡಿಟ್ ಗಳನ್ನು ಅವಲಂಬಿಸಿ ಪ್ರಮಾಣಪತ್ರ, ಡಿಪ್ಲೊಮಾ ಅಥವಾ ಪದವಿಯನ್ನು ಗಳಿಸಲು ಮತ್ತು ಪ್ರಗತಿಯನ್ನು ಕಳೆದುಕೊಳ್ಳದೆ ನಂತರ ಅಧ್ಯಯನಕ್ಕೆ ಮತ್ತೆ ಸೇರಲು ಅನುವು ಮಾಡಿಕೊಡುತ್ತದೆ. ಅಕಾಡೆಮಿಕ್ ಬ್ಯಾಂಕ್ ಆಫ್ ಕ್ರೆಡಿಟ್ಸ್ (ಎಬಿಸಿ) ಕ್ರೆಡಿಟ್ ಗಳನ್ನು ಡಿಜಿಟಲ್ ರೂಪದಲ್ಲಿ…
ನವದೆಹಲಿ : ಭಾರತದ ಸೇನಾ ಶಾಲೆಗಳಿಗೆ ಪಾಕ್ ಸೈಬರ್ ಹ್ಯಾಕರ್ ಗಳು ದಾಳಿ ನಡೆಸಿದ್ದು, ಭಾರತೀಯ ಆರ್ಮಿ ಪಬ್ಲಿಕ್ ಸ್ಕೂಲ್ ವೆಬ್ ಸೈಟ್ ಗಳು ಹ್ಯಾಕ್ ಆಗಿವೆ. ಪಹಲ್ಗಾಮ್ ದಾಳಿ ಬೆನ್ನಲ್ಲೇ ಪಾಕಿಸ್ತಾನವು ಇದೀಗ ಭಾರತೀಯ ಶಾಲೆಗಳ ವೆಬ್ ಸೈಟ್ ಹ್ಯಾಕ್ ಮಾಡುತ್ತಿದ್ದಾರೆ. ಇದೀಗ ಭಾರತೀಯ ಆರ್ಮಿ ಪಬ್ಲಿಕ್ ಸ್ಕೂಲ್ ನ ವೆಬ್ ಸೈಟ್ ಗಳನ್ನು ಸೈಬರ್ ವಂಚಕರು ಹ್ಯಾಕ್ ಮಾಡಿದ್ದಾರೆ ಎಂದು ವರದಿಯಾಗಿದೆ. ಇನ್ನು ಪಾಕಿಸ್ತಾನದ ಹ್ಯಾಕರ್ಗಳು ರಾಜಸ್ಥಾನ ಸರ್ಕಾರದ ಮೂರು ವೆಬ್ಸೈಟ್ಗಳನ್ನು ಗುರಿಯಾಗಿಸಿಕೊಂಡು ಭಾರತ ವಿರೋಧಿ ಸಂದೇಶಗಳನ್ನು ವಿರೂಪಗೊಳಿಸಿದ್ದಾರೆ. ಪಾಕಿಸ್ತಾನದ ಸೈಬರ್ ಅಪರಾಧಿಗಳು ರಾಜಸ್ಥಾನದ ಅನೇಕ ಸರ್ಕಾರಿ ವೆಬ್ಸೈಟ್ಗಳನ್ನು ಗುರಿಯಾಗಿಸಿಕೊಂಡಿದ್ದಾರೆ, ಇತ್ತೀಚಿನದು ಶಿಕ್ಷಣ ಇಲಾಖೆಯ ಅಧಿಕೃತ ಪೋರ್ಟಲ್ ಆಗಿದೆ. ಮಂಗಳವಾರ, ರಾಜಸ್ಥಾನದ ಶಿಕ್ಷಣ ಸಚಿವ ಮದನ್ ದಿಲಾವರ್ ಈ ಘಟನೆಯನ್ನು ಅರಿತುಕೊಂಡು ಇಲಾಖೆಯ ಮಾಹಿತಿ ತಂತ್ರಜ್ಞಾನ ವಿಭಾಗವನ್ನು ಸಕ್ರಿಯಗೊಳಿಸಿದರು.
ನವದೆಹಲಿ : ಪಹಲ್ಗಾಮ್ ದಾಳಿಯ ಬಳಿಕ ಭಾರತವು ಮತ್ತೊಂದು ಕ್ರಮ ಕೈಗೊಂಡಿದ್ದು, ಪಾಕಿಸ್ತಾನದ ರಕ್ಷಣಾ ಸಚಿವ ಆಸಿಫ್ ಖವಾಜಾ ಅವರ ‘X’ ಖಾತೆ ನಿಷೇಧಿಸಿ ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿದೆ. ಪ್ರಚೋದನಕಾರಿ ಮತ್ತು ಕೋಮು ಸೂಕ್ಷ್ಮ ವಿಷಯವನ್ನು” ಹರಡಿದ್ದಕ್ಕಾಗಿ ಒಟ್ಟು 63 ಮಿಲಿಯನ್ ಚಂದಾದಾರರನ್ನು ಹೊಂದಿರುವ 16 ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್ಗಳನ್ನು ಭಾರತದಲ್ಲಿ ನಿಷೇಧಿಸಿದ ಬೆನ್ನಲ್ಲೇ ಇದೀಗ ಪಾಕಿಸ್ತಾನದ ರಕ್ಷಣಾ ಸಚಿವ ಆಸಿಫ್ ಖವಾಜಾ ಅವರ ‘X’ ಖಾತೆ ನಿಷೇಧಿಸಿ ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿದೆ. https://twitter.com/ani_digital/status/1917122754274353472?ref_src=twsrc%5Etfw%7Ctwcamp%5Etweetembed%7Ctwterm%5E1917122754274353472%7Ctwgr%5E3cf2d917fd46bd66b0bc8a3cea8084d29331127f%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fenglish%2Fforyou%3Fmode%3Dpwalangchange%3Dtruelaunch%3Dtrue ಕಾಶ್ಮೀರದ ಪಹಲ್ಗಾಮ್ ನಲ್ಲಿ ಏಪ್ರಿಲ್ 22 ರಂದು ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಗೃಹ ಸಚಿವಾಲಯದ ಶಿಫಾರಸುಗಳನ್ನು ಅನುಸರಿಸಿ ಯೂಟ್ಯೂಬ್ ಚಾನೆಲ್ಗಳನ್ನು ನಿಷೇಧಿದೆ.
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಂದಾಯ ಇಲಾಖೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ 1000 ಗ್ರಾಮ ಆಡಳಿತ ಅಧಿಕಾರಿಗಳಿಗೆ ನೇಮಕಾತಿ ಆದೇ ಶ ಪತ್ರಗಳನ್ನು ನೀಡಿದರು. ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಒಂದೇ ಹಂತದಲ್ಲಿ 1,000 ಜನರನ್ನು ಗ್ರಾಮ ಆಡಳಿತ ಅಧಿಕಾರಿಗಳಾಗಿ ನೇಮಕಾತಿ ಮಾಡಲಾಗಿದೆ. ಈ ಪ್ರಕ್ರಿಯೆಯಲ್ಲಿ ಒಂದು ಪೈಸೆಯೂ ಲಂಚಕ್ಕೆ ಆಸ್ಪದವಿಲ್ಲದೆ ಎಲ್ಲರಿಗೂ ಕೆಲಸ ನೀಡಲಾಗಿದೆ ಎಂಬುದು ಇಲಾಖೆಯ-ಸರ್ಕಾರದ ಹೆಚ್ಚುಗಾರಿಕೆ. ಅಲ್ಲದೆ, ಇಂದು 4,000 ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್ ಟಾಪ್ ಸಹ ವಿತರಿಸುವ ಮೂಲಕ ಇಲಾಖೆಯನ್ನು ಡಿಜಿಟಲೀಕರಣಗೊಳಿಸುವ ನಿಟ್ಟಿನಲ್ಲಿ ಹೊಸ ಮನ್ವಂತರಕ್ಕೆ ಮುನ್ನುಡಿ ಬರೆಯಲಾಗಿದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು ಸಿಎಂ ಸಿದ್ದರಾಮಯ್ಯ ರಾಜಕೀಯವಾಗಿ, ಆರ್ಥಿಕವಾಗಿ ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಸಮಾನತೆಯಿರಬೇಕು. ಇದನ್ನೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರೂ ಒತ್ತಿ ಹೇಳಿದ್ದರು. ಅದರಲ್ಲಿ ನಮಗೆ ನಂಬಿಕೆ ಇದೆ. ನಮ್ಮ ಸಂವಿಧಾನ ಹೇಳಿರುವುದೇ ಅದು. ಸಂವಿಧಾನದ ಧ್ಯೇಯೋದ್ದೇಶಗಳನ್ನು, ಆಶಯಗಳನ್ನು ಜಾರಿ ಮಾಡುತ್ತೇವೆಯೇ ಹೊರತು ಯಾರನ್ನೂ ಓಲೈಸುವ ಕೆಲಸ ಮಾಡೋಲ್ಲ.…
ಬೆಂಗಳೂರು : ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಮತ್ತೊಂದು ಸಿಹಿಸುದ್ದಿ ಸಿಕ್ಕಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ‘ಮಾತನಾಡುವ ಇಂಗ್ಲೀಷ್’ (ಸ್ಪೋಕನ್ ಇಂಗ್ಲೀಷ್) ತರಗತಿಗಳು ಆರಂಭವಾಗಲಿವೆ. ಹೌದು, ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಪ್ರಸಕ್ತ 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪೂರ್ಣಪ್ರಮಾಣದಲ್ಲಿ ಸ್ಪೋಕನ್ ಇಂಗ್ಲೀಷ್ ತರಗತಿಗಳನ್ನು ನಡೆಸಲು ನಿರ್ಧರಿಸಿದ್ದು, ಈ ಸಂಬಂಧ ಇಲಾಖೆಯು ಅತ್ಯುತ್ತಮ ಸಂಪನ್ಮೂಲವುಳ್ಳ ವ್ಯವಸ್ಥೆ ಜಾರಿಗೆ ಯೋಜನೆ ರೂಪಿಸಿದೆ. ಇಲಾಖೆ ಕಳೆದ ವರ್ಷ ವಾರಾಂತ್ಯದಲ್ಲಿ ಸ್ಪೋಕನ್ ಇಂಗ್ಲೀಷ್ ತರಗತಿಗಳನ್ನು ನಡೆಸುವುದಕ್ಕೆ ಚಾಲನೆ ನೀಡಿತ್ತು. ರಿಜನಲ್ ಇನ್ ಸ್ಟಿಟ್ಯೂಟ್ ಆಫ್ ಇಂಗ್ಲೀಷ್ ಸಂಸ್ಥೆಯು ಬೋಧಕರಿಗೆ ರಾಜ್ಯ ಮಟ್ಟದ ತರಬೇತಿ ನೀಡಲು ಸೂಚಿಸಲಾಗಿತ್ತು. ಆದರೆ, ಈ ಕಾರ್ಯಕ್ರಮ ಜಾರಿಯೇ ಆಗಿರಲಿಲ್ಲ. ಇದೀಗ ಈ ಬಗ್ಗೆ ಎಚ್ಚೆತ್ತುಕೊಂಡಿರುವ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಈ ವರ್ಷ ವ್ಯವಸ್ಥಿತವಾಗಿ ಯೋಜನೆ ಜಾರಿಗೆ ಮುಂದಾಗಿದೆ. ಈ ಹೊಸ ಯೋಜನೆಯನ್ವಯ ವರ್ಷಕ್ಕೆ 180 ಗಂಟೆಗಳ ಕಾಲ ಸ್ಪೋಕನ್ ಇಂಗ್ಲೀಷ್…
ಬೆಂಗಳೂರು : ಬೆಂಗಳೂರಿನ ಪ್ರತಿಷ್ಟಿತ ಕಾಲೇಜಿಗೆ ಇ-ಮೇಲ್ ಮೂಲಕ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಸಂದೇಶ ಕಳಿಸಿದ್ದಾರೆ. ದುಷ್ಕರ್ಮಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದು, ಪ್ರಾಂಶುಪಾಲರನ್ನು ಕತ್ತರಿಸಿ ಫ್ರಿಡ್ಜ್ ನಲ್ಲಿಡುವುದಾಗಿ ಸಂದೇಶದಲ್ಲಿ ಹೇಳಿದ್ದಾರೆ. ಬೆಂಗಳೂರಿನ ಆಚಾರ್ಯ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಇ-ಮೇಲ್ ಪರಿಶೀಲನೆ ವೇಳೆ ಸಂದೇಶ ಗಮನಕ್ಕೆ ಬಂದಿದೆ. ಘಟನೆ ಸಂಬಂಧ ಎನ್ ಸಿ ಆರ್ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.