Author: kannadanewsnow57

ಬೆಂಗಳೂರು : ಮೈಕ್ರೋ ಫೈನಾನ್ಸ್ ಕಿರುಕುಳದ ಹೆಚ್ಚಳದ ಬೆನ್ನಲ್ಲೇ ಎಚ್ಚೆತ್ತಿರುವ ರಾಜ್ಯ ಸರ್ಕಾರವು ಇದೀಗ ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ಹೊಸ ಪ್ಲಾನ್ ಮಾಡಿದೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಸಂಜೆ 5 ಗಂಟೆ ಮೇಲೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಸಾಲ ವಸೂಲಾತಿಗೆ ಹೋಗುವಂತಿಲ್ಲ ಎಂದು ತಿಳಿಸಿದ್ದಾರೆ.  ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದು, ನಿಮ್ಮ ಸಿಬ್ಬಂದಿ ನಿಯಮ ಬಾಹಿರವಾಗಿ ವಸೂಲಿ ಮಾಡಲಾಗುತ್ತಿದೆ. ಕಾನೂನು ಕೈಗೆತ್ತಿಕೊಳ್ಳಲು ನಿಮಗೆ ಅನುಮತಿ ಕೊಟ್ಟವರು ಯಾರು,? ಸಾಲ ವಸೂಲಿಗೆ ರೌಡಿಗಳನ್ನು ಇಟ್ಟುಕೊಂಡಿದ್ದೀರಾ? ಸಾಲ ತೀರಿಸಲು ಸಾಧ್ಯವೇ ಎಂಬುದನ್ನೂ ಗಮನಿಸದೇ ಒಬ್ಬನೇ ವ್ಯಕ್ತಿಗೆ ನಿಯಮ ಬಾಹಿರವಾಗಿ ಸಾಲ ನೀಡುವುದು ಸರಿಯಲ್ಲ. ಸಾಲಗಾರರ ಮನೆ ಜಪ್ತಿ ಮಾಡುವ ಮೊದಲು ನೀವು ನ್ಯಾಯಾಲಯದಿಂದ ಅನುಮತಿ ಪಡೆದಿದ್ದೀರಾ? ಕಾನೂನು ಕೈಗೆತ್ತಿಕೊಳ್ಳಲು ನಿಮ್ಮ ಸಿಬ್ಬಂದಿಗೆ ಅನುಮತಿ ಕೊಟ್ಟವರು ಯಾರು? ಸಾಲ ವಸೂಲಿಗೆ ರೌಡಿಗಳನ್ನು ಬಳಸುತ್ತಿದ್ದೀರಾ ? ರಿಸರ್ವ್ ಬ್ಯಾಂಕಿನ ಷರತ್ತು…

Read More

ಮುಂಬೈ : ಜನವರಿ 16 ರಂದು, ಸೈಫ್ ಅಲಿ ಖಾನ್ ಅವರ ನಿವಾಸದಲ್ಲಿ ಆರು ಬಾರಿ ಇರಿತಕ್ಕೊಳಗಾದ ಆಘಾತಕಾರಿ ಸುದ್ದಿಯಿಂದ ಬಾಲಿವುಡ್ ಬೆಚ್ಚಿಬಿದ್ದಿತು. ಭದ್ರತಾ ವೈಫಲ್ಯ ಮತ್ತು ಪಟೌಡಿಯ ನವಾಬರು ಅಂತಹ ಅಪಾಯಕಾರಿ ದಾಳಿಯನ್ನು ಹೇಗೆ ಎದುರಿಸಿದರು ಎಂಬುದರ ಕುರಿತು ಪ್ರಶ್ನೆಗಳು ಸುರಿಮಳೆಯಾದವು. ಆದಾಗ್ಯೂ, 3D ಆನಿಮೇಟರ್ ದಾಳಿಯ ವಿವರವಾದ ವೈರಲ್ ವೀಡಿಯೊವನ್ನು ಬಿಡುಗಡೆ ಮಾಡಲಾಗಿದೆ. ProfessorofHow” ಎಂಬ ಇನ್‌ಸ್ಟಾಗ್ರಾಮ್ ಖಾತೆಯಿಂದ ಅಪ್‌ಲೋಡ್ ಮಾಡಲಾದ ವೀಡಿಯೊವು ಬಾಂಗ್ಲಾದೇಶದ ದಾಳಿಕೋರ ಸೈಫ್ ಅವರ ಮನೆಗೆ ಹೇಗೆ ಪ್ರವೇಶಿಸಿದನು, ಅಪರಾಧವನ್ನು ಹೇಗೆ ಕಾರ್ಯಗತಗೊಳಿಸಿದನು ಮತ್ತು ತಪ್ಪಿಸಿಕೊಳ್ಳುತ್ತಾನೆ ಎಂಬುದರ ಹಂತ-ಹಂತದ ಅನಿಮೇಟೆಡ್ ಮನರಂಜನೆಯನ್ನು ಒದಗಿಸುತ್ತದೆ. 336,000 ಕ್ಕೂ ಹೆಚ್ಚು ಜನರು ವೀಕ್ಷಿಸಿದ ಈ ವೈರಲ್ ವೀಡಿಯೊವು ಘಟನೆಗಳ ಭಯಾನಕ ಆದರೆ ಸ್ಪಷ್ಟ ನಿರೂಪಣೆಯನ್ನು ನೀಡುತ್ತದೆ. https://youtu.be/YiApU1yQmSc 3D ಅನಿಮೇಷನ್ ವಿವರಗಳು ಸೈಫ್ ಅಲಿ ಖಾನ್ ದಾಳಿ – ನಿರ್ಗಮನಕ್ಕೆ ಪ್ರವೇಶವನ್ನು ವಿವರಿಸಲಾಗಿದೆ ಸೈಫ್ ಅಲಿ ಖಾನ್ ದಾಳಿಯ ವೈರಲ್ ವೀಡಿಯೊ ದಾಳಿಕೋರನು ಆವರಣವನ್ನು ಹೇಗೆ ಪ್ರವೇಶಿಸಿದನು…

Read More

ಮಂಡ್ಯ : ರಾಜ್ಯದಲ್ಲಿ ಮೀಟರ್ ಬಡ್ಡಿ ದಂಧೆಗೆ ಮತ್ತೊಂದು ಬಲಿಯಾಗಿದ್ದು, ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಈ ಮೂಲಕ ರಾಜ್ಯದಲ್ಲಿ ಮೈಕೋ ಫೈನಾನ್ಸ್ ಕಿರುಕುಳಕ್ಕೆ ಬಲಿಯಾದವರ ಸಂಖ್ಯೆ 5 ಕ್ಕೆ ಏರಿಕೆಯಾಗಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ವಳಗೆರೆ ಮೆಣಸ ಗ್ರಾಮದಲ್ಲಿ ಯುವಕನೊಬ್ಬ 30 ಲಕ್ಷ ರೂ. ಸಾಲ ಮಾಡಿದ್ದ ಎನ್ನಲಾಗಿದ್ದು, ಬಳಿಕ ಸಾಲಗಾರರ ಕಿರುಕುಳದಿಂದ ನೊಂದು ಇಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆರೋಪ ಮಾಡಲಾಗಿದೆ. ವಳಗೆರೆ ಮೆಣಸ ಗ್ರಾಮದ ನವೀನ್ ಇಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾವೇರಿ ಜಿಲ್ಲೆ ಬಂಕಾಪುರದಲ್ಲಿ ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ತಾಳಲಾರದೆ ಕಿರಾಣಿ ಅಂಗಡಿ ಮಾಲಿಕ ನಾಗಪ ಪುಟ್ಟಪ ಗುಂಜಾಳ (36) ನೇಣಿಗೆ ಶರಣಾಗಿದ್ದಾರೆ. ಬೀದರ್ ಜಿಲ್ಲೆ ಹುಲಸೂರ ತಾಲೂಕಿನ ಗಡಿಗೌಡಗಾಂವ್ ಗ್ರಾಮದ ರೇಷ್ಮಾ ಸುನೀಲ ಸೂರ್ಯವಂಶಿ (26) ಎಂಬ…

Read More

ಹೈದರಾಬಾದ್ : ಇತ್ತೀಚೆಗೆ ಆನ್ ಲೈನ್ ಗೇಮ್ ನಿಂದ ಹಲವರು ಆತ್ಮಹತ್ಯೆಗೆ ಬಲಿಯಾಗುತ್ತಿದ್ದು, ಆಂಧ್ರಪ್ರದೇಶದಲ್ಲಿ ಯುವಕ ಆನ್ ಲೈನ್ ಗೇಮ್ ಗೀಳಿಗೆ ಬಿದ್ದು ಬರೋಬ್ಬರಿ 13 ಲಕ್ಷ ಸಾಲ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಡೆತ್ ನೋಟ್ ಬರೆದಿಟ್ಟು ಮನೆ ಬಿಟ್ಟು ಹೋಗಿರುವ ಘಟನೆ ನಡೆದಿದೆ. ಆಂಧ್ರಪ್ರದೇಶದ ಆತ್ಮಕೂರು ಪಟ್ಟಣದ ಯುವಕ ನಿರಂಜನ್ ವಾಲಿ, ಬಜಾಜ್ ಫೈನಾನ್ಸ್‌ನಲ್ಲಿ ಕೆಲಸ ಮಾಡುತ್ತಾನೆ. ತನಗೆ ಒಳ್ಳೆಯ ಸಂಬಳ ಇದೆ ಎಂದು ಭಾವಿಸಿದ್ದ ಸಮಯದಲ್ಲಿ ಅವನು ಬೆಟ್ಟಿಂಗ್ ಆ್ಯಪ್‌ಗಳಿಗೆ ವ್ಯಸನಿಯಾದನು. ಅವನು ಅದರಲ್ಲಿ ಸಂಪೂರ್ಣವಾಗಿ ಸಿಲುಕಿಕೊಂಡು, ಆತ್ಮಹತ್ಯೆ ಪತ್ರ ಬರೆದಿಟ್ಟು ಮನೆಯಿಂದ ಹೊರಟುಹೋದನು. ಬೆಟ್ಟಿಂಗ್ ಆ್ಯಪ್ ಮೂಲಕ 13 ಲಕ್ಷ ರೂಪಾಯಿ ಕಳೆದುಕೊಂಡ ನಂತರ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ 6 ​​ಪುಟಗಳ ಪತ್ರ ಬರೆದು, ಮೊಬೈಲ್ ಸ್ವಿಚ್ ಆಫ್ ಮಾಡಿ ಮನೆಯಿಂದ ಹೊರಟು ಹೋಗಿದ್ದಾನೆ. ಇದರಿಂದ ಆತಂಕಗೊಂಡ ಪೋಷಕರು ಮತ್ತು ಸಂಬಂಧಿಕರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಯುವಕನಿಗಾಗಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.…

Read More

ಬೆಂಗಳೂರು : ಮೈಕ್ರೋ ಫೈನಾನ್ಸ್ ಕಿರುಕುಳದ ಹೆಚ್ಚಳದ ಬೆನ್ನಲ್ಲೇ ಎಚ್ಚೆತ್ತಿರುವ ರಾಜ್ಯ ಸರ್ಕಾರವು ಇದೀಗ ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ಹೊಸ ಪ್ಲಾನ್ ಮಾಡಿದೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಮಹತ್ವದ ಚರ್ಚೆ ನಡೆಸಲಾಗುತ್ತಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದು, ನಿಮ್ಮ ಸಿಬ್ಬಂದಿ ನಿಯಮ ಬಾಹಿರವಾಗಿ ವಸೂಲಿ ಮಾಡಲಾಗುತ್ತಿದೆ. ಕಾನೂನು ಕೈಗೆತ್ತಿಕೊಳ್ಳಲು ನಿಮಗೆ ಅನುಮತಿ ಕೊಟ್ಟವರು ಯಾರು,? ಸಾಲ ವಸೂಲಿಗೆ ರೌಡಿಗಳನ್ನು ಇಟ್ಟುಕೊಂಡಿದ್ದೀರಾ? ಎಂದು ಗರಂ ಆಗಿದ್ದಾರೆ. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಕಾನೂನು ಸಚಿವ ಹೆಚ್.ಕೆ. ಪಾಟೀಲ್. ಕಂದಾಯ ಸಚಿವ ಕೃಷ್ಣ ಬೈರೇಗೌಡ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

Read More

ಬಳ್ಳಾರಿ : ರಾಜ್ಯದಲ್ಲಿ ದರೋಡೆಕೋರರ ಅಟ್ಟಹಾಸ ಮುಂದುವರೆದಿದ್ದು, ಬಳ್ಳಾರಿಯಲ್ಲಿ ಮಕ್ಕಳ ವೈದ್ಯ ಡಾ.ಸುನೀಲ್ ಅವರನ್ನು ಅಪಹರಣಕಾರು ಅಪಹರಿಸಿರುವ ಘಟನೆ ನಡೆದಿದೆ. ಬಳ್ಳಾರಿ ನಗರದ ಸೂರ್ಯನಾರಾಯಣ ನಗರದ ಶನೇಶ್ವರ ಗುಡ ಬಳಿ ವಾಕಿಂಗ್ ಗೆ ಹೋಗಿದ್ದ ಡಾ. ಸುನೀಲ್ ಅವರನ್ನು ದುಷ್ಕರ್ಮಿಗಳು ಅಪಹರಿಸಿದ್ದು, 6 ಕೋಟಿ ರೂ. ಒತ್ತೆ ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ನಡೆದಿದೆ.ಟಾಟಾ ಇಂಡಿಗೋ ಕಾರಿನಲ್ಲಿ ಬಂದಿದ್ದ ಅಪಹರಣಕಾರರು ವೈದ್ಯರನ್ನು ತಕ್ಷಣ ಬಾಯಿಮುಚ್ಚಿ ಕಾರಿನಲ್ಲಿ ಕೂಡಿಸಿಕೊಂಡು ತೆರಳಿದ್ದಾರೆ ಎನ್ನಲಾಗಿದೆ. ಬಳ್ಳಾರಿ ಜಿಲ್ಲಾ ಆಸ್ಪತ್ರೆಯ ಮಕ್ಕಳ ವೈದ್ಯ ಡಾ.ಸುನೀಲ್ ಅವರನ್ನು ನಗರದ ಸತ್ಯನಾರಾಯಣ ಪೇಟೆಯಲ್ಲಿನ ಶನೇಶ್ವರ ದೇವಸ್ಥಾನದ ಬಳಿ ವಾಕಿಂಗ್ ಮಾಡುವಾಗ ಅಪರಿಚಿತ ವ್ಯಕ್ತಿಗಳು ಶನಿವಾರ ಬೆಳಗ್ಗೆ ಕಿಡ್ನಾಪ್ ಮಾಡಿದ್ದು, 6ಕೋಟಿ ರೂಗಳಿಗೆ ಅಪಹರಣಕಾರರು ಬೇಡಿಕೆ ಇಟ್ಟಿದ್ದಾರೆ.

Read More

ಬಳ್ಳಾರಿ : ರಾಜ್ಯದಲ್ಲಿ ದರೋಡೆಕೋರರ ಅಟ್ಟಹಾಸ ಮುಂದುವರೆದಿದ್ದು, ಬಳ್ಳಾರಿಯಲ್ಲಿ ಮಕ್ಕಳ ವೈದ್ಯ ಡಾ.ಸುನೀಲ್ ಅವರನ್ನು ಅಪಹರಣಕಾರು ಅಪಹರಿಸಿರುವ ಘಟನೆ ನಡೆದಿದೆ. ಬಳ್ಳಾರಿ ನಗರದ ಸೂರ್ಯನಾರಾಯಣ ನಗರದ ಶನೇಶ್ವರ ಗುಡ ಬಳಿ ವಾಕಿಂಗ್ ಗೆ ಹೋಗಿದ್ದ ಡಾ. ಸುನೀಲ್ ಅವರನ್ನು ದುಷ್ಕರ್ಮಿಗಳು ಅಪಹರಿಸಿದ್ದು, 6 ಕೋಟಿ ರೂ. ಒತ್ತೆ ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ನಡೆದಿದೆ.ಟಾಟಾ ಇಂಡಿಗೋ ಕಾರಿನಲ್ಲಿ ಬಂದಿದ್ದ ಅಪಹರಣಕಾರರು ವೈದ್ಯರನ್ನು ತಕ್ಷಣ ಬಾಯಿಮುಚ್ಚಿ ಕಾರಿನಲ್ಲಿ ಕೂಡಿಸಿಕೊಂಡು ತೆರಳಿದ್ದಾರೆ ಎನ್ನಲಾಗಿದೆ. ಬಳ್ಳಾರಿ ಜಿಲ್ಲಾ ಆಸ್ಪತ್ರೆಯ ಮಕ್ಕಳ ವೈದ್ಯ ಡಾ.ಸುನೀಲ್ ಅವರನ್ನು ನಗರದ ಸತ್ಯನಾರಾಯಣ ಪೇಟೆಯಲ್ಲಿನ ಶನೇಶ್ವರ ದೇವಸ್ಥಾನದ ಬಳಿ ವಾಕಿಂಗ್ ಮಾಡುವಾಗ ಅಪರಿಚಿತ ವ್ಯಕ್ತಿಗಳು ಶನಿವಾರ ಬೆಳಗ್ಗೆ ಕಿಡ್ನಾಪ್ ಮಾಡಿದ್ದು, 6ಕೋಟಿ ರೂಗಳಿಗೆ ಅಪಹರಣಕಾರರು ಬೇಡಿಕೆ ಇಟ್ಟಿದ್ದಾರೆ.

Read More

ನವದೆಹಲಿ : ಹೊಸ ಖರೀದಿಸುವವರಿಗೆ ಮಾರುತಿ ಸುಜುಕಿ ಕಂಪನಿ ಬಿಗ್ ಶಾಕ್ ನೀಡಿದೆ. ಮಾರುತಿ ಸುಜುಕಿ ಇಂಡಿಯಾ ಕಂಪನಿ ವಿವಿಧ ಮಾಡೆಲ್‌ನ ಕಾರುಗಳ ಬೆಲೆಯನ್ನು ಫೆ. 1ರಿಂದ ಸುಮಾರು 32,500 ರೂ.ವರೆಗೆ ಹೆಚ್ಚಳ ಮಾಡಲಿದೆ ಎಂದು ತಿಳಿಸಿದೆ. ಕಾರ್ಯಾಚರಣೆ ವೆಚ್ಚ ಮತ್ತು ತಯಾರಿಕೆ ವೆಚ್ಚ ಹೆಚ್ಚಾಗಿರುವುದರಿಂದ ಈ ಕ್ರಮಕ್ಕೆ ಮುಂದಾಗಿರುವುದಾಗಿ ಕಂಪನಿ ಗುರುವಾರ ತಿಳಿಸಿದೆ. ಸೆಲೆರಿಯೊ 32,500 ರೂ., ಇನ್‌ಕ್ಟೋ 30 ಸಾವಿರ ರೂ., ವ್ಯಾಗನ್ ಆರ್ 15 ಸಾವಿರ ರೂ., ಸ್ವಿಫ್ಟ್ 5 ಸಾವಿರ ರೂ., ಬ್ರೆಜಾ ಮತ್ತು ಗ್ರಾಂಡ್ ವಿತಾರಾ ಕ್ರಮವಾಗಿ 20 ಸಾವಿರ ಮತ್ತು 25 ಸಾವಿರ ರೂ., ಆಲ್ಲೊ ಕೆ10 ಸುಮಾರು 19,500 ರೂ., ಎಸ್-ಪ್ರೆಷ್ಟೊ 5 ಸಾವಿರ ರೂ., ಬಲೆನೊ 9 ಸಾವಿರ ರೂ., ಫ್ರಾಂಕ್ಸ್ 5,500 ರೂ., ಡಿಜೈರ್ 10 ಸಾವಿರ ರೂ. ಹೆಚ್ಚಾಗಲಿದೆ ಎಂದು ಕಂಪನಿ ತಿಳಿಸಿದೆ. ಕಂಪನಿ ವೆಚ್ಚವನ್ನು ಕಡಿಮೆ ಮಾಡಲು ಮತ್ತು ಗ್ರಾಹಕರ ಮೇಲಿನ ಪರಿಣಾಮವನ್ನು ಕಡಿಮೆ ಮಾಡಲು…

Read More

ಉತ್ತರಕನ್ನಡ : ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ಗರ್ಭ ಧರಿಸಿದಂತಹ ಹಸುವಿನ ತಲೆಕೆಡಿದು ಮಾಂಸ ಕದ್ದು ದುರುಳರು ವಿಕೃತಿ ಮೇರಿದಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಹೊನ್ನಾವರ ತಾಲೂಕಿನ ವಲ್ಕಿಯ ತೌಫಿಕ್ ಅಹ್ಮದ್ ಜಿದ್ದಾ ಬಂಧಿತ ಆರೋಪಿ. ಜನವರಿ 19ರಂದು ಹಸುವಿನ ಹತ್ಯೆ ನಡೆದಿತ್ತು. ಹಸುವಿನ ರುಂಡ ಬೇರ್ಪಡಿಸಿ, ಕಾಲು ಕತ್ತರಿಸಿ ದೇಹದ ಭಾಗವನ್ನು ದುಷ್ಕರ್ಮಿಗಳು ಹೊತ್ತೊಯ್ದಿದ್ದರು. ಈ ಘಟನೆ ಖಂಡಿಸಿ ಜಿಲ್ಲೆಯಾದ್ಯಂತ ಅಕ್ರೋಶ ವ್ಯಕ್ತವಾಗಿತ್ತು. ಘಟನೆ ಹಿನ್ನೆಲೆ? ಜನವರಿ 19ರಂದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸಾಲ್ಕೋಡ ಗ್ರಾಮದಲ್ಲಿ ಹಸುವಿನ ತಲೆ ಕಡೆದು ದುಷ್ಕರ್ಮಿಗಳು ಮಾಂಸವನ್ನು ಕದ್ದು ಒಯ್ದಿದ್ದರು. ಕೃಷ್ಣ ಆಚಾರಿ ಎಂಬುವವರ ಹಸುವನ್ನು ಮೇಯಲು ಕಾಡಿಗೆ ಬಿಟ್ಟಿದ್ದರು. ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಹುಡಕಾಡಿದರೂ ಪತ್ತೆ ಆಗಿಲಿಲ್ಲ. ಆದರೆ ಮರುದಿನ ಬೆಳಗ್ಗೆ ಮಾಲೀಕರಿಗೆ ಆಘಾತ ಕಾದಿತ್ತು. ಮನೆಯಿಂದ ಅನತಿ ದೂರದಲ್ಲೇ ಹಸುವಿನ ತಲೆ ಕತ್ತರಿಸಿ ಬಿದ್ದಿತ್ತು. ಹಸುವಿನ ಕಾಲು ಕಾಣಸಿತ್ತು. ದುಷ್ಟರು…

Read More

ಬೆಂಗಳೂರು : ರಾಜ್ಯದ ಎಲ್ಲಾ ಪಡಿತರ ಚೀಟಿದಾರರು ತಮ್ಮ ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಫಲಾನುಭವಿಗಳು ಮ್ಯಾಪಿಂಗ್ ಮಾಡಿಸಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ. ಆರ್ಥಿಕವಾಗಿ ದುರ್ಬಲರಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಆಹಾರ ಭದ್ರತಾ ಕಾಯ್ದೆ ನಿಯಮಗಳನ್ನು ಪಾಲಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಕಡ್ಡಾಯವಾಗಿ ತಮ್ಮ ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಫಲಾನುಭವಿಗಳ ಮ್ಯಾಪಿಂಗ್ ಕಾರ್ಯ ಚಾಲ್ತಿಯಲ್ಲಿದ್ದು, ಜಾತಿವಾರು ಮ್ಯಾಪಿಂಗ್ ಮಾಡಿಸಬೇಕು. ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿದಾರರು ಈಗಾಗಲೇ ಕುಟುಂಬ ಪಡಿತರ ಚೀಟಿಯಲ್ಲಿನ ಎಲ್ಲಾ ಸದಸ್ಯರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿ ಮಟ್ಟದಲ್ಲಿಯೇ ಕುಟುಂಬದ ಎಲ್ಲಾ ಸದಸ್ಯರು ಕಡ್ಡಾಯವಾಗಿ ತಮ್ಮ ಬೆರಳಚ್ಚು ನೀಡಿ (ಇ-ಕೆವೈಸಿ) ನವೀಕರಿಸಿಕೊಳ್ಳಬೇಕು. ಇ-ಕೈವೈಸಿ ಆಗದ ಮತ್ತು ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ…

Read More