Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ದೇಶದಲ್ಲಿ ಶಿಕ್ಷಣದ ಮೂಲಭೂತ ಗುಣಮಟ್ಟವನ್ನು ಸುಧಾರಿಸಲು ಕೇಂದ್ರ ಸರ್ಕಾರ ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದೆ. ಇದರ ಅಡಿಯಲ್ಲಿ ಸರ್ಕಾರ ದೇಶಾದ್ಯಂತ 100 ಹೊಸ ಮಿಲಿಟರಿ ಶಾಲೆಗಳನ್ನು ತೆರೆಯಲಿದೆ. ಬುಧವಾರ, ಜನವರಿ 22 ರಂದು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕೇರಳದ ಅಲಪ್ಪುಳದಲ್ಲಿರುವ ವಿದ್ಯಾಧಿರಾಜ ವಿದ್ಯಾಪೀಠಂ ಸೈನಿಕ ಶಾಲೆಯ ವಾರ್ಷಿಕ ದಿನಾಚರಣೆಯ ಸಂದರ್ಭದಲ್ಲಿ ದೇಶಾದ್ಯಂತ 100 ಹೊಸ ಸೈನಿಕ ಶಾಲೆಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು. ಕೇಂದ್ರ ಸರ್ಕಾರದ ಈ ನಿರ್ಧಾರವು ಭಾರತದಲ್ಲಿ ಮೂಲಭೂತ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸುವ ಮತ್ತು ದೇಶದ ಒಟ್ಟಾರೆ ಅಭಿವೃದ್ಧಿಗೆ ಕೊಡುಗೆ ನೀಡುವ ಪ್ರಯತ್ನಗಳ ಭಾಗವಾಗಿದೆ ಎಂದು ಅವರು ಹೇಳಿದರು. ಸೈನಿಕ್ ಶಾಲೆಯಲ್ಲಿ ಬಾಲಕಿಯರ ಪ್ರವೇಶಕ್ಕೆ ಕೇಂದ್ರ ಸರ್ಕಾರವು ದಾರಿ ಮಾಡಿಕೊಟ್ಟಿದೆ ಎಂದು ಸಿಂಗ್ ಹೇಳಿದರು. ದೇಶದ ದೂರದ ಪ್ರದೇಶಗಳು ಮತ್ತು ವೈವಿಧ್ಯಮಯ ಸಾಂಸ್ಕೃತಿಕ ಹಿನ್ನೆಲೆಯ ಸಿಬ್ಬಂದಿಯನ್ನು ಸೇರಿಸಿಕೊಳ್ಳಲು ದೇಶದ ಪ್ರತಿಯೊಂದು ಜಿಲ್ಲೆಯಲ್ಲೂ ಸೈನಿಕ ಶಾಲೆಗಳನ್ನು ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ ಎಂದು ಅವರು ಹೇಳಿದರು. ‘ಪ್ರತಿಯೊಬ್ಬ ಸೈನಿಕನಲ್ಲೂ…
ನವದೆಹಲಿ : ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಭಾರತದ ವೈವಿಧ್ಯತೆಯಲ್ಲಿ ಏಕತೆ ಜೀವಂತವಾಗುತ್ತದೆ, ಸುಂದರವಾಗಿ ವಿನ್ಯಾಸಗೊಳಿಸಲಾದ 31 ಸ್ತಬ್ಧಚಿತ್ರಗಳು ಕರ್ತವ್ಯದ ಹಾದಿಯನ್ನು ಅಲಂಕರಿಸುತ್ತವೆ. ಇವುಗಳಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ 16 ಸ್ತಬ್ಧಚಿತ್ರಗಳು ಮತ್ತು ಸಚಿವಾಲಯಗಳು ಮತ್ತು ಇಲಾಖೆಗಳಿಂದ 10 ಸ್ತಬ್ಧಚಿತ್ರಗಳು ಸೇರಿವೆ. ಪ್ರತಿಯೊಂದು ಟ್ಯಾಬ್ಲೋ ಭಾರತದ ಸಾಂಸ್ಕೃತಿಕ ಪರಂಪರೆ ಮತ್ತು ಸಾಧನೆಗಳನ್ನು ಚಿತ್ರಿಸುತ್ತದೆ. ಪ್ರಮುಖ ಆಕರ್ಷಣೆಗಳಲ್ಲಿ ಉತ್ತರ ಪ್ರದೇಶದ ಮಹಾ ಕುಂಭ, ಗುಜರಾತ್ನ ಏಕತೆ ಮತ್ತು ಕೈಗಾರಿಕಾ ಪ್ರಗತಿಯ ಪ್ರತಿಮೆ ಮತ್ತು ಗ್ರಾಮೀಣಾಭಿವೃದ್ಧಿ ಸಚಿವಾಲಯದ “ಲಖ್ಪತಿ ದೀದಿ” ಮುಂತಾದ ಸ್ತಬ್ಧಚಿತ್ರಗಳು ಸೇರಿವೆ. ಉತ್ತರ ಪ್ರದೇಶ: ಮಹಾ ಕುಂಭ ಮತ್ತು ಆಧ್ಯಾತ್ಮಿಕ ಪರಂಪರೆ ಉತ್ತರ ಪ್ರದೇಶದ ಟ್ಯಾಬ್ಲೋ ವಿಶ್ವದ ಅತಿದೊಡ್ಡ ಧಾರ್ಮಿಕ ಸಭೆಗಳಲ್ಲಿ ಒಂದಾದ ಮಹಾ ಕುಂಭಮೇಳದ ಆಧ್ಯಾತ್ಮಿಕ ಭವ್ಯತೆಯನ್ನು ಚಿತ್ರಿಸುತ್ತದೆ. ಈ ವಿನ್ಯಾಸವು ಪೌರಾಣಿಕ ಸಮುದ್ರ ಮಂಥನವನ್ನು (ಸಾಗರ ಮಥನ) ಒಳಗೊಂಡಿದೆ, ಇದು ದೈವಿಕ ಅಮೃತ ಮತ್ತು ಜ್ಞಾನದ ಆವಿಷ್ಕಾರವನ್ನು ಸಂಕೇತಿಸುತ್ತದೆ. ಇದು ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಪವಿತ್ರ ಸಂಗಮವನ್ನು…
ಬೆಂಗಳೂರು: ಜನವರಿ 26, 2025ರ ಗಣರಾಜ್ಯೋತ್ಸವ ದಿನಾಚರಣೆಯಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರುಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಸಂಬಂಧ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ, ಪೊಲೀಸ್ ಆಯುಕ್ತರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪತ್ರ ಬರೆದಿರುವಂತ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲಿರುವಂತ ಸಚಿವರ ಪಟ್ಟಿಯನ್ನು ಪ್ರಕಟಿಸಿದ್ದಾರೆ. ಜನವರಿ.26, 2025ರಂದು ಯಾವ ಸಚಿವರು ಯಾವ ಜಿಲ್ಲೆಯಲ್ಲಿ ಧ್ವಜಾರೋಹಣ.? ಗೃಹ ಸಚಿವ ಡಾ.ಜಿ ಪರಮೇಶ್ವರ್ – ತುಮಕೂರು ಕಾನೂನು ಸಚಿವ ಹೆಚ್.ಕೆ ಪಾಟೀಲ್ – ಗದಗ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ – ಬೆಂಗಳೂರು ಗ್ರಾಮಾಂತರ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ – ರಾಮನಗರ ಬೃಹತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ – ವಿಜಯಪುರ ಇಂಧನ ಸಚಿವ ಕೆ.ಜೆ ಜಾರ್ಜ್ – ಚಿಕ್ಕಮಗಳಊರು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ – ದಕ್ಷಿಣ ಕನ್ನಡ ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ ಮಹದೇವಪ್ಪ – ಮೈಸೂರು ಲೋಕೋಪಯೋಗಿ ಸಚಿವ ಸತೀಶ್…
ಹಾಸನ : ಶಾಲೆ ಹೋಗುವುದಾಗಿ ಹೇಳಿ ಮೂವರು ವಿದ್ಯಾರ್ಥಿಗಳು ನಾಪತ್ತೆಯಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕುನಿಗನಹಳ್ಳಿಯಲ್ಲಿ ನಡೆದಿದೆ. ಕುನಿಗನಹಳ್ಳಿ ಗ್ರಾಮದ ಶರತ್ (16), ಧನಂಜಯ್ (16), ಮುರುಳಿ (16) ನಿನ್ನೆ ಬೆಳಗ್ಗೆ 7.30 ಕ್ಕೆ ಶಾಲೆಗೆ ಹೋಗುವುದಾಗಿ ಹೇಳಿ ಮನೆಯಿಂದ ಹೋಗಿದ್ದರು. ಮೂವರು ವಿದ್ಯಾರ್ಥಿಗಳು ನಿನ್ನೆ ಶಾಲೆಗೆ ಗೈರಾದ ಹಿನ್ನೆಲೆಯಲ್ಲಿ ಪೋಷಕರಿಗೆ ಶಿಕ್ಷಕರು ಕರೆ ಮಾಡಿ ತಿಳಿಸಿದ್ದರು. ಹೀಗಾಗಿ ಪೋಷಕರು ತಮ್ಮ ಮಕ್ಕಳಿಗಾಗಿ ಗ್ರಾಮದ ತುಂಬ ಹುಡುಕಾಡಿದ್ದಾರೆ. ಆದರೆ ಎಲ್ಲೂ ಪತ್ತೆ ಆಗಿಲ್ಲ. ರಾತ್ರಿ ಆದರೂ ಮಕ್ಕಳು ಮನೆಗೆ ಬಂದಿಲ್ಲ. ಶರತ್ ಬಳಿಯ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಪೋಷಕರಲ್ಲಿ ಆತಂಕ ಶುರುವಾಗಿದೆ. ಸದ್ಯ ಪೋಷಕರು ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಂಗಳೂರು: ಬೆಂಗಳೂರು ನಗರದಲ್ಲಿ ಬಿಬಿಎಂಪಿ ಖಾತಾ ಹೊಂದಿರದ ಸುಮಾರು 5 ಲಕ್ಷಕ್ಕೂ ಹೆಚ್ಚು ಸ್ವತ್ತುಗಳು ಇರಬಹುದೆಂದು ನಿರೀಕ್ಷಿಸಲಾಗಿದ್ದು, ಈ ಸ್ವತ್ತುಗಳು ಇಲ್ಲಿಯವರೆಗೆ ಯಾವುದೇ ಖಾತಾವಿಲ್ಲದೆ ಸಬ್ ರಿಜಿಸ್ಟ್ರಾರ್ ಕಛೇರಿಗಳಲ್ಲಿ ವಹಿವಾಟು ನಡೆಸುತ್ತಿದ್ದು, ಅವುಗಳಲ್ಲಿ ಹಲವು ಸ್ವತ್ತುಗಳು ಆಸ್ತಿ ತೆರಿಗೆ ವ್ಯಾಪ್ತಿಯಿಂದ ಹೊರಗುಳಿದಿವೆ. ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರು ಈ 5 ಲಕ್ಷಕ್ಕೂ ಹೆಚ್ಚು ಸ್ವತ್ತುಗಳನ್ನು ಪಾಲಿಕೆಯ ತೆರಿಗೆ ವ್ಯಾಪ್ತಿಗೆ ತರುವ ಮತ್ತು ಅರ್ಹತೆ ಹೊಂದುವ ಎಲ್ಲಾ ಸ್ವತ್ತುಗಳಿಗೂ ಬಿಬಿಎಂಪಿ ವತಿಯಿಂದ ಹೊಸ ಖಾತಾ ನೀಡುವ ದೂರದೃಷ್ಟಿಯೊಂದಿಗೆ ಮುನ್ನಡೆದಿದ್ದಾರೆ. ಅದರಂತೆ, ಪಾಲಿಕೆಯು ಆನ್ಲೈನ್ ವ್ಯವಸ್ಥೆಯನ್ನು ಜಾರಿ ಮಾಡಿದ್ದು, ನಾಗರೀಕರುಗಳು ಹೊಸ ಖಾತಾ ಪಡೆಯುವ ಸಲುವಾಗಿ ತಮ್ಮ (i) ಮಾರಾಟ/ನೋಂದಣಿ ಪತ್ರ (ii) ಆಧಾರ್ (iii) ಇಸಿ ಪ್ರಮಾಣ ಪತ್ರ (iv) ಆಸ್ತಿ ಫೋಟೊ (v) ಬೆಸ್ಕಾಂ ಐಡಿಗಳನ್ನು ಸಲ್ಲಿಸಬಹುದಾಗಿದೆ. ನೀವು ಬಿಬಿಎಂಪಿಯ ಖಾತೆಯನ್ನು ಹೊಂದಿರದಿದ್ದಲ್ಲಿ ದಯವಿಟ್ಟು ಆನ್ಲೈನ್ ಮೂಲಕ ಅರ್ಜಿಯನ್ನು ಬಿಬಿಎಂಪಿಯ ಜಾಲತಾಣವಾದ @ https://bbmp.karnataka.gov.in/newkhata ರಲ್ಲಿ ಸಲ್ಲಿಸಬಹುದು. (ಸೂಚನೆ:…
GOOD NEWS : ಯೂರೋಪಿಯನ್ ಬ್ಲಾಕ್ ನಿಂದ ಭಾರತದಲ್ಲಿ 100 ಶತಕೋಟಿ ಡಾಲರ್ ಬಂಡವಾಳ ಹೂಡಿಕೆ : 10 ಲಕ್ಷ ಉದ್ಯೋಗ ಸೃಷ್ಟಿ.!
ನವದೆಹಲಿ : ನಾಲ್ಕು ಯುರೋಪಿಯನ್ ರಾಷ್ಟ್ರಗಳ ಗುಂಪಿನೊಂದಿಗೆ ಹೊಸ ವ್ಯಾಪಾರ ಮತ್ತು ಆರ್ಥಿಕ ಪಾಲುದಾರಿಕೆ ಒಪ್ಪಂದವು ಭಾರತಕ್ಕೆ 100 ಬಿಲಿಯನ್ ಡಾಲರ್ ಹೂಡಿಕೆಯನ್ನು ತರುತ್ತದೆ ಇದರೊಂದಿಗೆ 10 ಲಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಕೇಂದ್ರ ಸಚಿವ ಜಯಂತ್ ಚೌಧರಿ ಬುಧವಾರ ಹೇಳಿದ್ದಾರೆ. ವಿಶ್ವ ಆರ್ಥಿಕ ವೇದಿಕೆಯ ವಾರ್ಷಿಕ ಸಭೆಯ ಸಂದರ್ಭದಲ್ಲಿ ಇಲ್ಲಿ ನಡೆದ ಸಭೆಗಳಲ್ಲಿ ಮಾತನಾಡಿದ ಅವರು, ಸ್ವಿಸ್ ಸರ್ಕಾರವು ಶೀಘ್ರದಲ್ಲೇ ನಾಲ್ಕು ಯುರೋಪಿಯನ್ ರಾಷ್ಟ್ರಗಳ ಗುಂಪಿನೊಂದಿಗೆ ವ್ಯಾಪಾರ ಮತ್ತು ಆರ್ಥಿಕ ಪಾಲುದಾರಿಕೆ ಒಪ್ಪಂದಕ್ಕೆ ರೂಪ ನೀಡಲಿದೆ. ಮುಂದಿನ ವರ್ಷದಿಂದ ಇದು ಜಾರಿಗೆ ಬರಲಿದೆ ಎಂದು ಭಾರತ ಆಶಿಸಿದೆ. ಇದು ಕೌಶಲ್ಯ ಅಭಿವೃದ್ಧಿ ಅಂಶವನ್ನು ಒಳಗೊಂಡಿರುವ ಮೊದಲ ಮುಕ್ತ ವ್ಯಾಪಾರ ಒಪ್ಪಂದವಾಗಿದೆ ಎಂದು ಸಚಿವರು ಹೇಳಿದರು. ಈ ನಾಲ್ಕು ಯುರೋಪಿಯನ್ ರಾಷ್ಟ್ರಗಳ ಕೌಶಲ್ಯ ಅಭಿವೃದ್ಧಿ ಸಂಸ್ಥೆಗಳು ಮತ್ತು ಅವುಗಳ ಕೋರ್ಸ್ಗಳನ್ನು ನಮ್ಮ ಯುವಕರಿಗೆ ಲಭ್ಯವಾಗುವಂತೆ ಮಾಡಲಾಗುವುದು. ಇದು ಭಾರತದಲ್ಲಿ ಕೌಶಲ್ಯ ಕಲಿಯುವ ವ್ಯಕ್ತಿಗೆ ಈ ಯುರೋಪಿಯನ್ ದೇಶಗಳಲ್ಲಿಯೂ ಮನ್ನಣೆ ಸಿಗುವುದನ್ನು ಖಚಿತಪಡಿಸುತ್ತದೆ.…
ಬೆಂಗಳೂರು : ಕೃಷಿ ಇಲಾಖೆ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜನವರಿ 23 ಇಂದಿನಿಂದ ಜನವರಿ 25ರ ವರೆಗೆ ʼಸಾವಯವ ಮತ್ತು ಸಿರಿಧಾನ್ಯ ಅಂತಾರಾಷ್ಟ್ರೀಯ ವಾಣಿಜ್ಯ ಮೇಳʼವನ್ನು ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಇದೇ 23 ರಿಂದ 25ರ ವರೆಗೆ ʼಸಾವಯವ ಮತ್ತು ಸಿರಿಧಾನ್ಯ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ 2025’ ಅನ್ನು ಹಮ್ಮಿಕೊಳ್ಳಲಾಗಿದೆ. ಮೂರು ದಿನ ನಡೆಯುವ ಈ ಮೇಳದಲ್ಲಿ 300ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆಯಲಾಗುವುದು. 30ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ತಜ್ಞರು ಸಿರಿಧಾನ್ಯ ಮತ್ತು ಸಾವಯವ ಉತ್ಪನ್ನಗಳ ಕುರಿತು ಮಾಹಿತಿ ಹಂಚಿಕೊಳ್ಳಲಿದ್ದಾರೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ತಿಳಿಸಿದ್ದಾರೆ.
ಮಡಿಕೇರಿ : ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು, ಡೆಹರಾಡೂನ್ ಇಲ್ಲಿಗೆ 8 ನೇ ತರಗತಿ ಪ್ರವೇಶ ಬಯಸುವ ಬಾಲಕ ಬಾಲಕಿಯರಿಗಾಗಿ 2025 ರ ಜೂನ್, 01 ರಂದು ಬೆಂಗಳೂರಿನ ಕೇಂದ್ರದಲ್ಲಿ ಅರ್ಹತಾ ಪರೀಕ್ಷೆ ನಡೆಯಲಿದೆ. ಜನವರಿ 2026 ನೇ ಅಧಿವೇಶನಕ್ಕಾಗಿ ಉತ್ತರಾಖಂಡ ರಾಜ್ಯದ ಡೆಹರಾಡೂನಲ್ಲಿರುವ ರಾಷ್ಟ್ರೀಯ ಇಂಡಿಯನ್ ಲಿಮಿಟರಿ ಕಾಲೇಜ್ ನಲ್ಲಿ 8 ನೇ ತರಗತಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕ ಮತ್ತು ಬಾಲಕಿಯರ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ 2025 ರ ಜೂನ್, 01 ರಂದು ನಡೆಯಲಿದೆ. ಅಭ್ಯರ್ಥಿಗಳು ಯಾವುದೇ ಸರ್ಕಾರದಿಂದ ಮಾನ್ಯತೆ ಪಡೆದಿರುವ ಯಾವುದೇ ಶಾಲೆಯಲ್ಲಿ 7 ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ಹಾಗೂ ದಿನಾಂಕ 01-01-2026 ರಂತೆ 11 1/2 ವರ್ಷದಿಂದ 13 ವರ್ಷದೊಳಗಿರುವ (ಅಂದರೆ ದಿನಾಂಕ 02-01-2013 ರಿಂದ 01-07-2014 ರೊಳಗೆ ಜನಿಸಿರುವ) ಬಾಲಕರು ಮತ್ತು ಬಾಲಕಿಯರು ಮಾತ್ರ ಸದರಿ ಪ್ರವೇಶ ಪರೀಕ್ಷೆಗೆ ಅರ್ಹರಿರುತ್ತಾರೆ. ಈ ಸಂಸ್ಥೆಯ ಮುಖ್ಯ ಗುರಿ ಯುವಕ…
ಮಡಿಕೇರಿ : ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಡಿಸೆಂಬರ್ 1 ರಿಂದ ಆರಂಭವಾಗಿದ್ದು, ಜಿಲ್ಲೆಯ ರೈತರು ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಶ್ರೀಧರಮೂರ್ತಿ ಜೆ.ಬಿ. ಅವರು ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಆದೇಶದಂತೆ 2024-25ನೇ ಸಾಲಿಗೆ ರೈತರಿಂದ ಕನಿಷ್ಟ ಬೆಂಬಲ ಬೆಲೆಯೋಜನೆಯಡಿ ಭತ್ತ ಖರೀದಿ ಮಾಡಲಾಗುತ್ತಿದ್ದು, ಡಿಸೆಂಬರ್, 01 ರಿಂದ ಆರಂಭವಾಗಿದ್ದು, 2025 ರ ಮಾರ್ಚ್, 31 ರವರೆಗೆ ಭತ್ತ ಖರೀದಿ ಮತ್ತು ನೋಂದಣಿಗೆ ಅವಕಾಶ ಇರುತ್ತದೆ. ಜಿಲ್ಲೆಗೆ ಭತ್ತ ಮತ್ತು ರಾಗಿ ಖರೀದಿಸಲು ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯನ್ನು ಖರೀದಿ ಏಜೆನ್ಸಿಯನ್ನಾಗಿ ಸರಕಾರ ನೇಮಕ ಮಾಡಿದ್ದು, ಖರೀದಿ ಪ್ರಕ್ರಿಯೆಯು ಇವರ ಮುಖಾಂತರ ನಡೆಯುತ್ತಿದೆ. ಕೇಂದ್ರ ಸರ್ಕಾರದ ಬೆಂಬಲ ಬೆಲೆಯಡಿ ಡಿಸೆಂಬರ್-2024 ರಿಂದ ರೈತರ ನೋಂದಣಿ ಕಾರ್ಯ ಆರಂಭವಾಗಿದ್ದು, ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್ಗೆ 2300 ರೂ. ನಿಗದಿಪಡಿಸಲಾಗಿದ್ದು, ರಾಗಿ ಪ್ರತಿ ಕ್ವಿಂಟಲ್ಗೆ 4290 ರೂ. ನಿಗದಿಪಡಿಸಲಾಗಿರುತ್ತದೆ.…
ಬಳ್ಳಾರಿ : ಸಾರ್ವಜನಿಕರು ತಮ್ಮ ಮನೆಯ ಸುತ್ತ-ಮುತ್ತ ಹಾಗೂ ಇತರೆ ವಾಸಸ್ಥಳ ಸುತ್ತಲಿನಲ್ಲಿ ಇಲಿಯ ಬಿಲಗಳು ಕಂಡುಬAದಲ್ಲಿ ಅವುಗಳನ್ನು ಮುಚ್ಚಿ ಆಹಾರ ಮತ್ತು ನೀರು ಸುರಕ್ಷಿತವಾಗಿ ಇಡುವ ಮೂಲಕ ಇಲಿಜ್ವರ ಹರಡುವಿಕೆಯನ್ನು ತಡೆಗಟ್ಟಲು ಸಹಕರಿಸಬೇಕು ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ.ವಿ ಅವರು ಹೇಳಿದರು. ನಗರದ ಗುಗ್ಗರಹಟ್ಟಿ ಬಡಾವಣೆಯಲ್ಲಿ ಶಂಕಿತ ಪ್ರಕರಣದ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಜಾಗೃತಿ ನೀಡುವ ಮೂಲಕ ಅವರು ಮಾತನಾಡಿದರು. ವೈಜ್ಞಾನಿಕವಾಗಿ ಲೆಷ್ಟೋಸ್ಪೆರೊಸಿಸ್ ಎಂದು ಕರೆಸಿಕೊಳ್ಳುವ ಇಲಿ ಜ್ವರ “ಲೆಸ್ಟೋಸೈರ್” ಎಂಬ ಬ್ಯಾಕ್ಟಿರಿಯಾ ರೋಗಾಣುವಿನಿಂದ ಬರುವ ಕಾಯಿಲೆಯಾಗಿದೆ. ಈ ಬ್ಯಾಕ್ಟಿರಿಯಾ ಸೋಂಕು ಹೊಂದಿದ ಇಲಿ ಮನುಷ್ಯನನ್ನು ಕಚ್ಚಿದರೆ ಅಥವಾ ಅದರ ಎಂಜಲು, ಮೂತ್ರ, ಮಲ ಅಥವಾ ಇಲಿಯ ದೇಹದ ದ್ರವ ಮನುಷ್ಯನ ಚರ್ಮಕ್ಕೆ ತಾಕಿದರೆ ಸೋಂಕು ಉಂಟಾಗಬಹುದು ಎಂದು ಅವರು ತಿಳಿಸಿದರು. ಇಲಿಯ ಬಾಯಿಯಿಂದ, ಕಣ್ಣಿನಿಂದ ಬರುವಂತಹ ದ್ರವವು ಕೂಡ ಹಾನಿಕಾರಕವಾಗಬಹುದು. ಕೆಲವು ಬಾರಿ ಸೋಂಕಿತ ಇಲಿಗಳು ತಮ್ಮ ಉಗುರಿನಿಂದ ಪರಿಚಿದರೆ ಅಥವಾ ಹಲ್ಲಿನಿಂದ ಕಚ್ಚಿದರೂ ಕೂಡ ಇಲಿ ಜ್ವರ ಬರಬಹುದು.…













