Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ರಾಜ್ಯದ ಜನತೆಗೆ ತಮ್ಮ ಸಾಮಾಜಿಕ, ಶೈಕ್ಷಣಿಕ, ವಾಣಿಜ್ಯ ಹಾಗೂ ಕೃಷಿ ಚಟುವಟಿಕೆಗಳಗಾಗಿ ವಿವಿಧ ಇಲಾಖೆಗಳಿಂದ ಹಲವಾರು ದಾಖಲೆಗಳು ಬೇಕಾಗುತ್ತವೆ. ಇವುಗಳನ್ನು ತ್ವರಿತವಾಗಿ ಒಂದೇ ಸೂರಿನಡಿ ಪಡೆದುಕೊಳ್ಳಲು ಅನುಕೂಲವಾಗುವಂತೆ ಬಾಪೂಜಿ ಸೇವಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಒಂದೇ ಸೂರಿನಡಿ ಜನತೆಗೆ ಎಲ್ಲ ಇಲಾಖೆಗಳ ಈ ಎಲ್ಲಾ ಸೇವೆ ಸಿಗಲಿವೆ. ಕಟ್ಟಡ ಸಂಬಂಧಿತ 1 ಕಟ್ಟಡ ಅನುಮತಿ ವಿತರಣೆ 2ತೆರಿಗೆ ನಿರ್ಧರಣಾ ಪಟ್ಟಿ ವಿತರಣೆ 3 ಬೇಡಿಕೆ/ಕಂದಾಯ ನಕಲು ಪಟ್ಟಿ 4 ಆಸ್ತಿ ತೆರಿಗೆ ಮನ್ನಾ ಅರ್ಜಿ 5 ಕಟ್ಟಡ ಕಾಮಗಾರಿಯ ಮುಕ್ತಾಯ ಪ್ರಮಾಣ ಪತ್ರ ವಿತರಣೆ 6 ಹೊಸ ನೀರಿನ ಸಂಪರ್ಕಕ್ಕಾಗಿ ಅರ್ಜಿ 7 ಕೊಳವೆ ಬಾವಿ ನಿರ್ಮಾಣದ ವಿವರ ತಿಳಿಸುವುದು 8 ನೀರಿನ ಸಂಪರ್ಕ ಕಡಿತ 9 ಕೊಳವೆ ಬಾವಿ ನಿರ್ಮಾಣ ಮುಕ್ತಾಯ ವ್ಯಾಪಾರ ಪರವಾನಗಿ ಸಂಬಂಧಿತ 10 ವ್ಯಾಪಾರ ಪರವಾನಗಿ ವಿತರಣೆ 11 ಕಾರ್ಖಾನೆ ಪರವಾನಗಿ ವಿತರಣೆ 12 ಜಾಹೀರಾತು ಪರವಾನಗಿ ವಿತರಣೆ…
ಬೆಂಗಳೂರು: ತುಮಕೂರು, ಚಿತ್ರದುರ್ಗ, ಶಿವಮೊಗ್ಗ, ದಾವಣಗೆರೆ ಸೇರಿದಂತೆ ವಿವಿಧ ಜಿಲ್ಲೆಗಳ ರಾಜ್ಯದ 84 ತಾಲ್ಲೂಕಿಗೆ ತಾಲ್ಲೂಕು ವೈದ್ಯಾಧಿಕಾರಿಗಳನ್ನು ನೇಮಕ ಮಾಡಿ ಸರ್ಕಾರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಜ್ಞಾಪನಾಪತ್ರ ಹೊರಡಿಸಿದ್ದಾರೆ. ಅದರಲ್ಲಿ 2025ನೇ ಸಾಲಿನ ವಿಶೇಷ ಆಡಳಿತಾತ್ಮಕ ಹುದ್ದೆಗಳಿಗೆ ದಿನಾಂಕ 19-11-2025ರಂದು ಆನ್ ಲೈನ್ ಮೂಲಕ ಸಮಾಲೋಚನೆ ನಡೆಸಲಾಗಿರುತ್ತದೆ. ಅದರಂತೆ ಈ ಕೆಳಕಂಡ ಅಧಿಕಾರಿಗಳನ್ನು ತಾಲ್ಲೂಕು ವೈದ್ಯಾಧಿಕಾರಿಗಳನ್ನಾಗಿ ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿರುವುದಾಗಿ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಟಿಹೆಚ್ಓ ಆಗಿ ಹಾವೇರಿಯ ಎಸ್ಎಂಓ ಆಗಿದ್ದಂತ ನೀಲಕಾಂತಸ್ವಾಮಿ ಎಂ.ವೈ ನ್ಯಾಮತಿ ಅವರನ್ನು ನೇಮಕ ಮಾಡಿದ್ದರೇ, ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಟಿಹೆಚ್ಓ ಆಗಿ ಬಳ್ಳಾರಿಯ ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್ ಆಗಿದ್ದಂತ ಡಾ.ಸಿವಿ ಕಂಬಲಿ ಮಠ ಅವರನ್ನು ನೇಮಕ ಮಾಡಿದ್ದರೇ, ಚಿತ್ರದುರ್ಗ ಟಿಹೆಚ್ಓ ಆಗಿ ದಾವಣಗೆರೆಯ ಜಿಲ್ಲಾ ಟಿಬಿ ಆಫೀಸರ್ ಆಗಿದ್ದಂತ ಡಾ.ಮುರುಳೀಧರ ಪಿ.ಡಿ ನೇಮಿಸಲಾಗಿದೆ. ಇನ್ನೂ ಶಿವಮೊಗ್ಗ ಟಿಹೆಚ್ಓ ಆಗಿ ಹಾವೇರಿಯ…
ದಕ್ಷಿಣ ಕನ್ನಡ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ದೊಡ್ಡಪ್ಪನ ಮಗಳಾದ ಅಪ್ರಾಪ್ತ ಬಾಲಕಿಯನ್ನು ಬೆದರಿಸಿ ಸೋದರನೇ ಅತ್ಯಾಚಾರ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಳಾಯಿಯಲ್ಲಿ ನಡೆದಿದೆ. ಕುಳಾಯಿ ನಿವಾಸಿ ವಿಠಲ ಕುಂಬಾರ ಆರೋಪಿಯು ದೊಡ್ಡಪ್ಪನ ಮಗಳನ್ನು ಬೆದರಿಸಿ ಮನೆಯಲ್ಲಿ ಯಾರೂ ಇಲ್ಲದಾಗ ಅತ್ಯಾಚಾರ ಎಸಗಿ ಗರ್ಭಿಣಿಯಾಗಿಸಿದ್ದಾನೆ. ಈ ವಿಚಾರವನ್ನು ಮನೆಯಲ್ಲಿ ಯಾರಿಗಾದರೂ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಎಂದು ಸಂತ್ರಸ್ತೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಪೋಕ್ಸೋ ಮತ್ತು ಭಾರತೀಯ ನ್ಯಾಯ ಸಂಹಿತೆ ಕಾಯ್ದೆಗಳಡಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಿಗೆ ಸರ್ಕಾರ ನೇಮಿಸಿರುವಂತ ಆಡಳಿತಾಧಿಕಾರಿ ನೇಮಕ ರದ್ದುಗೊಳಿಸಲು ಹೈಕೋರ್ಟ್ ನಕಾರ ವ್ಯಕ್ತಪಡಿಸಿದೆ. ಈ ಕುರಿತಂತೆ 71 ರಿಟ್ ಅರ್ಜಿಗಳು ಸಲ್ಲಿಕೆಯಾಗಿದ್ದವು. ಇವುಗಳನ್ನು ಹೈಕೋರ್ಟ್ ಇಂದು ವಿಚಾರಣೆ ನಡೆಸಿ, ಇತ್ಯರ್ಥಪಡಿಸಿದೆ. ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ 71 ರಿಟ್ ಅರ್ಜಿ ಸಲ್ಲಿಸಿದ್ದವುಗಳನ್ನು ಇತ್ಯರ್ಥ ಪಡಿಸಲಾಗಿದೆ. ಅವಧಿ ಮುಗಿದ ನಗರಸಭೆ, ಪುರಸಭೆಗಳಿಗೆ ಸರ್ಕಾರ ಆಡಳಿತಾಧಿಕಾರಿ ನೇಮಿಸಲಾಗಿತ್ತು. ಕ್ಷೇತ್ರ ಪುನರ್ವಿಂಗಡನೆಗೆ 150 ದಿನ ಬೇಕಿರುವುದರಿಂದ ಆಡಳಿತಾಧಿಕಾರಿ ನೇಮಕ ಮಾಡಲಾಗಿತ್ತು. ಸಂವಿಧಾನದ 243(ಯು) ನಂತೆ 5 ವರ್ಷ ಅವಧಿ ನಿಗದಿಯಾಗಿದೆ. ಅವಧಿ ಮುಗಿದ ಮೇಲೆ ಹಾಲಿ ಸದಸ್ಯ, ಅಧ್ಯಕ್ಷರನ್ನು ಮುಂದುವರಿಸಲಾಗದು. ಹೀಗಾಗಿ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಿಸಲಾಗಿದೆ ಎಂಬುದಾಗಿ ಸರ್ಕಾರ ವಾದಿಸಿತ್ತು. ಸರ್ಕಾರದ ಪರ ಹೆಚ್ಚುವರಿ ಎಜಿ ಪ್ರತಿಮಾ ಹೊನ್ನಾಪುರ ವಾದಿಸಿದರು. ಈ ವಾದವನ್ನು ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು ಆಡಳಿತಾಧಿಕಾರಿ ನೇಮಕದಲ್ಲಿ ಮಧ್ಯಪ್ರವೇಶಿಸಲು ನಕಾರ ವ್ಯಕ್ತಪಡಿಸಿದೆ.
ನವದೆಹಲಿ: ದೆಹಲಿಯಲ್ಲಿ ಚಿನ್ನದ ಬೆಲೆ ಭಾರೀ ಏರಿಕೆ ಕಂಡಿದ್ದು, 10 ಗ್ರಾಂಗೆ 1,37,600 ರು. ಗೆ ತಲುಪಿದೆ. ಇದು ಚಿನ್ನದ ಸಾರ್ವಕಾಲಿಕ ಗರಿಷ್ಠಮಟ್ಟಕ್ಕೆ ಏರಿಕೆಯಾಗಿದೆ. ಸೋಮವಾರ ರಾಷ್ಟ್ರ ರಾಜಧಾನಿಯಲ್ಲಿ ಚಿನ್ನದ ಬೆಲೆ 4,000 ರೂ.ಗಳಷ್ಟು ಏರಿಕೆಯಾಗಿ 10 ಗ್ರಾಂಗೆ 1,37,600 ರೂ.ಗಳಷ್ಟು ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ ಎಂದು ಅಖಿಲ ಭಾರತ ಸರಾಫಾ ಅಸೋಸಿಯೇಷನ್ ತಿಳಿಸಿದೆ. 99.9 ಪ್ರತಿಶತ ಶುದ್ಧತೆಯ ಅಮೂಲ್ಯ ಲೋಹವು ಶುಕ್ರವಾರ 10 ಗ್ರಾಂಗೆ 1,33,600 ರೂ.ಗಳಷ್ಟು ಮುಕ್ತಾಯಗೊಂಡಿತು. ಅಂತರರಾಷ್ಟ್ರೀಯ ಸ್ಪಾಟ್ ಚಿನ್ನವು USD 4,350 ವಲಯದ ಕಡೆಗೆ ಏರುತ್ತಿದ್ದಂತೆ ಚಿನ್ನದ ಬೆಲೆಗಳು ಇನ್ನಷ್ಟು ಏರಿಕೆಯಾಗಿ ದೇಶೀಯ ಮಾರುಕಟ್ಟೆಯಲ್ಲಿ ಬಲವಾದ ರ್ಯಾಲಿಗೆ ಕಾರಣವಾಯಿತು” ಎಂದು LKP ಸೆಕ್ಯುರಿಟೀಸ್ನ ಸರಕು ಮತ್ತು ಕರೆನ್ಸಿಯ ಉಪಾಧ್ಯಕ್ಷ ಸಂಶೋಧನಾ ವಿಶ್ಲೇಷಕ ಜತೀನ್ ತ್ರಿವೇದಿ ಹೇಳಿದರು. ಹಳದಿ ಲೋಹವು ತೀಕ್ಷ್ಣವಾದ ಏರಿಕೆಯೊಂದಿಗೆ ಜಾಗತಿಕ ಶಕ್ತಿಯನ್ನು ಪ್ರತಿಬಿಂಬಿಸುತ್ತದೆ, ಇದು ಹೊಸ ಜೀವಮಾನದ ಗರಿಷ್ಠ ಮಟ್ಟವನ್ನು ಮುಟ್ಟಿದೆ ಎಂದು ಅವರು ಹೇಳಿದರು. ಅಕ್ಟೋಬರ್ 17 ರಂದು ಚಿನ್ನದ…
ಬೆಂಗಳೂರು: ಅಪಘಾತ, ಅಪರಾಧ ರಹಿತವಾಗಿ ಸೇವೆ ಸಲ್ಲಿಸುವಂತ ಕೆ ಎಸ್ ಆರ್ ಟಿ ಸಿ ಚಾಲಕರಿಗೆ ಗುಡ್ ನ್ಯೂಸ್ ಎನ್ನುವಂತೆ ಪ್ರೋತ್ಸಾಹ ಧನವನ್ನು ಹೆಚ್ಚಳ ಮಾಡಿ ನಿಗಮವು ಆದೇಶ ಹೊರಡಿಸಿದೆ. ಈ ಕುರಿತಂತೆ ಕೆ ಎಸ್ ಆರ್ ಟಿ ಸಿ ವ್ಯವಸ್ಥಾಪಕ ನಿರ್ದೇಶಕರಾದಂತ ಅಕ್ರಂ ಪಾಷಾ ಅವರು ಸುತ್ತೋಲೆ ಹೊರಡಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನಿಗಮದ ವಾಹನಗಳಲ್ಲಿ ಪಯಾಣಿಸುವವರ ಸುರಕ್ಷತೆಗಾಗಿ ಹಲವಾರು ಯೋಜನೆಗಳನ್ನು ಕೈಗೊಂಡಿದ್ದು, ಅದರಲ್ಲಿ ಮುಖ್ಯವಾಗಿ ಅಪಘಾತ ರಹಿತ ಚಾಲನೆಯ ಪ್ರವೃತ್ತಿಯನ್ನು ಹೊಂದಿರುವ ಚಾಲಕರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಅಪಘಾತ ಮುಕ್ತ ಚಾಲನೆಗೆ ಪ್ರೇರೆಪಿಸುವ ಸಲುವಾಗಿ ಅಪಘಾತರಹಿತ ಮತ್ತು ಅಪರಾಧರಹಿತ ಸೇವೆ ಸಲ್ಲಿಸಿರುವ ಚಾಲಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಮತ್ತು ಬೆಳ್ಳಿ ಪದಕ ವಿತರಿಸುವ ಜೊತೆಗೆ ಪ್ರಶಂಸನಾ ಪತ್ರದೊಂದಿಗೆ ನಗದು ಪುರಸ್ಕಾರವನ್ನು ನೀಡಲಾಗುತ್ತಿದೆ. ನಂತರ ಪದಕ ಪಡೆದ ಚಾಲಕರಿಗೆ ಪ್ರತಿ ತಿಂಗಳು ಮಾಸಿಕ ಭತ್ಯೆಯನ್ನು ನೀಡಲಾಗುತ್ತಿದೆ ಎಂದಿದ್ದಾರೆ. ಮುಂದುವರೆದು, ಮುಖ್ಯ ಮಂತ್ರಿ ಚಿನ್ನದ ಪದಕ ಮತ್ತು ಬೆಳ್ಳಿ…
ಬೆಳಗಾವಿ : ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆ ಲಾಭ ಪಡೆಯುತ್ತಿರುವ ಫಲಾನುಭವಿಗಳ ಪೈಕಿ 1.80 ಲಕ್ಷ ಮಂದಿ ಆದಾಯ ತೆರಿಗೆ ಪಾವತಿದಾರರಾಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ವಿಧಾನ ಪರಿಷತ್ ನಲ್ಲಿ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಇಲಾಖೆಯ ಅಧಿಕಾರಿಗಳು ಲಿಖಿತ ರೂಪದಲ್ಲಿ ಮಾಹಿತಿ ನೀಡಿದ್ದಾರೆ. ಕುಟುಂಬದ ಯಜಮಾನನಿಗೆ ಪ್ರತಿ ತಿಂಗಳು ತಲಾ 2,000 ರೂ. ನಂತೆ 2023ರ ಜೂನ್ 6ರಿಂದ ಗೃಹಲಕ್ಷ್ಮಿ ಯೋಜನೆಯಡಿ ಸಹಾಯಧನ ನೀಡಲಾಗುತ್ತಿದೆ. ಅಕ್ಟೋಬರ್ ಅಂತ್ಯಕ್ಕೆ 1.28 ಕೋಟಿ ಫಲಾನುಭವಿಗಳು ನೋಂದಾಯಿಸಿಕೊಂಡಿದ್ದಾರೆ. ಇವರಲ್ಲಿ ಅರ್ಹ 1.24 ಕೋಟಿ ಮಹಿಳೆಯರಿಗೆ ಆಗಸ್ಟ್ ಅಂತ್ಯದವರೆಗೆ 22 ಕಂತಿನಲ್ಲಿ ಹಣ ಪಾವತಿಸಲಾಗಿದೆ. ಒಟ್ಟಾರೆ 52,416 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ. ಸರ್ಕಾರದ ಮಾನದಂಡದ ಅನ್ವಯ ಕುಟುಂಬದ ಯಜಮಾನಿ ಅಥವಾ ಅವರ ಪತಿಯ ಐಟಿ ಅಥವಾ ಜಿಎಸ್ಟಿ ರಿಟರ್ನ್ಸ್ ಸಲ್ಲಿಸುತ್ತಿದ್ದರೆ ಅಂತವರು ಯೋಜನೆಯ ಫಲಾನುಭವಿಗಳಾಗಲು ಅರ್ಹರಲ್ಲ ಎಂದು ತಿಳಿಸಲಾಗಿದೆ.
BIG NEWS : ರಾಜ್ಯದ ಜನತೆ ಗಮನಕ್ಕೆ : `ತಾಲೂಕು, ಗ್ರಾಮ ಪಂಚಾಯಿತಿ’ ಗಳಲ್ಲಿ ನೀವು ಈ ಮಾಹಿತಿಗಳನ್ನ ಕೇಳಿ ಪಡೆಯಬಹುದು.!
ಬೆಂಗಳೂರು : ಗ್ರಾಮ ಪಂಚಾಯಿತಿಯು ಗ್ರಾಮ ಮಟ್ಟದ ಸ್ಥಳೀಯ ಆಡಳಿತ ಸಂಸ್ಥೆಯಾಗಿದ್ದು, ಗ್ರಾಮಸ್ಥರಿಂದ ಚುನಾಯಿತರಾದ ಪ್ರತಿನಿಧಿಗಳನ್ನು ಒಳಗೊಂಡಿರುತ್ತದೆ. ಈ ಸಂಸ್ಥೆಯು ಗ್ರಾಮಗಳ ಅಭಿವೃದ್ಧಿ, ಮೂಲಸೌಕರ್ಯಗಳ ನಿರ್ವಹಣೆ (ರಸ್ತೆ, ನೀರು, ದೀಪ), ತೆರಿಗೆ ವಸೂಲಿ ಮತ್ತು ಕಲ್ಯಾಣ ಕಾರ್ಯಕ್ರಮಗಳ ಜಾರಿಯಂತಹ ಜವಾಬ್ದಾರಿಗಳನ್ನು ನಿರ್ವಹಿಸುತ್ತದೆ. ಗ್ರಾಮ ಪಂಚಾಯಿತಿಯಿಂದ ಈ ಕೆಳಕಂಡ ಮಾಹಿತಿಗಳನ್ನು ಸಾರ್ವಜನಿಕರಿಗೆ ಒದಗಿಸಬಹುದಾಗಿದೆ. 1. ಗ್ರಾಮ ಪಂಚಾಯಿತಿಗೆ ಬಿಡುಗಡೆಯಾದ ಅನುದಾನದ ವಿವರಗಳು. 2. ಗ್ರಾಮ ಪಂಚಾಯತ್ ವೆಚ್ಚ 3. ಗ್ರಾಮ ಪಂಚಾಯತಿ ಡಿ.ಸಿ.ಬಿ. ತನ್ನ ವಿವರಗಳು (ಬೇಡಿಕ, ವಸೂಲಿ ಮತ್ತು ಬಾಕಿ) 4. ಮನೆ ಖಾತೆ ಉದ್ಯತ ಭಾಗ, ಡಿಮ್ಯಾಂಡ್ ಉದ್ಯತ ಭಾಗ, ಲೈಸೆನ್ಸ್, ಮೂಟೇಶನ್ ಇತ್ಯಾದಿ ಪತ್ರಗಳು 5. ಗ್ರಾಮ ಪಂಚಾಯತಿ ಜಮಾ ಮತ್ತು ಖರ್ಚಿನ ವಿವರಗಳು (ನಮೂನೆ-9ರಲ್ಲಿ) 6. ಗ್ರಾಮ ಪಂಚಾಯತಿ ಸಾಮಾನ್ಯ ಸಭೆ ಹಾಗೂ ಸ್ನಾಯಿ ಸಮಿತಿಗಳ ನಡವಳಿಗಳು 7. ಗ್ರಾಮ ಪಂಚಾಯತಿ ಸಭಾ ನಡವಳಿಗಳ ಮೇಲೆ ತೆಗೆದುಕೊಂಡ ಕ್ರಮಗಳು 8. ಗ್ರಾಮ ಸಭೆ ನಡವಳಿಗಳ ಮೇಲೆ ತೆಗೆದುಕೊಂಡ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ. ಕರ್ನಾಟಕ ನಾಗರಿಕ ಸೇವೆ (ವರ್ತನೆ) ನಿಯಮಗಳು 1966ರ ಮುಖ್ಯಾಂಶಗಳು ಉಲ್ಲಂಘನೆಗೆ ವಿಧಿಸಬಹುದಾದ ದಂಡನೆಗಳು ಹಾಗೂ ಕೆ.ಸಿ.ಎಸ್. (ಸಿಸಿಎ) ನಿಯಮಗಳ ಸ್ಕೂಲ ಪರಿಚಯ ಇಲ್ಲಿದೆ. ಈ ನಿಯಮಗಳು ಸರ್ಕಾರಿ ಹುದ್ದೆಗಳಿಗೆ ನೇಮಿಸಿದ ಮತ್ತು ಸರ್ಕಾರಿ ಕಾರ್ಯ ಸಂಬಂಧಕ್ಕೆ ತೈನಾತಿಸಲ್ಪಟ್ಟ ಎಲ್ಲಾ ನೌಕರರಿಗೂ ಅನ್ವಯಿಸುತ್ತದೆ. (ನಿಯಮ 1) ಆದರೆ ಈ ಮುಂದೆ ಕಾಣಿಸಿದ ವರ್ಗಕ್ಕೆ ಸೇರಿದ ನೌಕರರಿಗೆ ಅನ್ವಯವಾಗುವುದಿಲ್ಲ. ಅ) ಅಖಿಲ ಭಾರತ ಸೇವಾ ಸದಸ್ಯರು ಆ) ರಾಜ್ಯಪಾಲರು, ಸಾಮಾನ್ಯ ಅಥವಾ ವಿಶೇಷ ಅಧಿಸೂಚನೆ ಹೊರಡಿಸಿ ಯಾವ ಹುದ್ದೆಯಲಿ ಇರುವಂತಹವರಿಗೆ ಈ ನಿಯಮ ಅನ್ವಯಿಸುವುದಿಲ್ಲ ಎಂದು ತಿಳಿಸಿರುವ ನೌಕರರು. ಇ) ಔದ್ಯಮಿಕ ನಿಯೋಜನೆ (ಸ್ಥಾಯೀ ಆದೇಶಗಳು) ಶಾಸನ 1946 (1946ರ ಕೇಂದ್ರ ಶಾಸನ ಸಂಖ್ಯೆ 20)ರ ಉಪಬಂಧಗಳು ಅನ್ವಯವಾಗುವ ಸರ್ಕಾರದ ಯಾವುದೇ ಕೈಗಾರಿಕಾ ಉದ್ಯಮದ ನೌಕರರು. ಅರ್ಥವಿವರಣೆ : (ನಿಯಮ 2) (ಅ) ಸರ್ಕಾರ ಎಂದರೆ : ಕರ್ನಾಟಕ ಸಕಾರ (ಆ) ಸರ್ಕಾರಿ ನೌಕರ ಎಂದರೆ…
ಉತ್ತರ ಕೊಲಂಬಿಯಾದ ಗ್ರಾಮೀಣ ಪ್ರದೇಶದಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ ಕಂದಕದಿಂದ ಬಿದ್ದು 17 ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಶಾಲಾ ಬಸ್ ಆಂಟಿಯೋಕ್ವಿಯಾದ ಗವರ್ನರ್ ಆಂಡ್ರೆಸ್ ಜೂಲಿಯನ್, ಶಾಲಾ ಪ್ರವಾಸದ ನಂತರ ಕೆರಿಬಿಯನ್ ಪಟ್ಟಣವಾದ ಟೋಲುವಿಯಾದಿಂದ ಮೆಡೆಲಿನ್ಗೆ ಬಸ್ ಪ್ರಯಾಣಿಸುತ್ತಿತ್ತು ಮತ್ತು ಆಂಟಿಯೋಕ್ವೆನೊ ಪ್ರೌಢಶಾಲೆಯ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿತ್ತು ಎಂದು ಹೇಳಿದರು. ದುರಂತಕರ ಘಟನೆಯೊಂದರಲ್ಲಿ, ವಾಯುವ್ಯ ಕೊಲಂಬಿಯಾದಲ್ಲಿ ಶಾಲಾ ಬಸ್ ಕಂದರಕ್ಕೆ ಉರುಳಿ 16 ವಿದ್ಯಾರ್ಥಿಗಳು ಮತ್ತು ಚಾಲಕ ಸಾವನ್ನಪ್ಪಿದರು ಮತ್ತು 20 ಜನರು ಗಾಯಗೊಂಡರು, ಅವರಲ್ಲಿ ಮೂವರು ಗಂಭೀರ ಸ್ಥಿತಿಯಲ್ಲಿದ್ದರು. ಕೊಲಂಬಿಯಾದ ಕರಾವಳಿಯಲ್ಲಿರುವ ಕೆರಿಬಿಯನ್ ಬೀಚ್ನಿಂದ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳನ್ನು ಬಸ್ ಹೊತ್ತೊಯ್ಯುತ್ತಿತ್ತು. ಹೆಚ್ಚಾಗಿ 16 ರಿಂದ 18 ವರ್ಷ ವಯಸ್ಸಿನ ವಿದ್ಯಾರ್ಥಿಗಳು ತಮ್ಮ ಪದವಿ ಪ್ರದಾನವನ್ನು ಆಚರಿಸಿಕೊಂಡು ಹಿಂತಿರುಗುತ್ತಿದ್ದಾಗ ಬಸ್ 40 ಮೀಟರ್ ಆಳಕ್ಕೆ ಉರುಳಿತು ಎಂದು ಸುದ್ದಿ ಸಂಸ್ಥೆ AFP ವರದಿ ಮಾಡಿದೆ. ಮೃತರ ಶವಗಳು ವಾಯುಗಾಮಿಯಾಗಿ ಮೆಡೆಲಿನ್ ಲೀಗಲ್ ಮೆಡಿಸಿನ್ ಇನ್ಸ್ಟಿಟ್ಯೂಟ್ಗೆ ಹೋಗುತ್ತಿರುವ…














