Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಬೆಂಗಳೂರಿನಲ್ಲಿ ಜನವರಿ 23, 24 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಜಲಮಂಡಳಿ ಪ್ರಕಟಣೆ ಹೊರಡಿಸಿದೆ. ಜಲಮಂಡಳಿ 4ನೇ ಹಂತ, 2ನೇ ಹಂತದ ಹೆಗ್ಗನಹಳ್ಳಿಯಿಂದ ಜಿಕೆವಿಕೆ ಕಡೆಗೆ ಸಾಗುವ ಕೊಳವೆ ಕಾಮಗಾರಿಯನ್ನು ಕೈಗೊಂಡಿರುವ ಹಿನ್ನಲೆ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಜನವರಿ 23ರ ಬೆಳಗ್ಗೆ 5ರಿಂದ ಜನವರಿ 24 ರ ಬೆಳಗ್ಗೆ 5ರವರೆಗೆ 24 ಗಂಟೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಜಲ ಮಂಡಳಿ ತಿಳಿಸಿದೆ. ಎಲ್ಲೆಲ್ಲಿ ವ್ಯತ್ಯಯ ನಾಗರಭಾವಿ, ಎಸ್.ಎಂ.ವಿ ಲೇಔಟ್ – 1 ರಿಂದ 9 ನೇ ಬ್ಲಾಕ್, ಮಲ್ಲತಹಳ್ಳಿ, ಕೊಟ್ಟಿಗೆಪಾಳ್ಯ, ಹೇರೋಹಳ್ಳಿ, ಹೆಗ್ಗನಹಳ್ಳಿ, ಸುಂಕದಕಟ್ಟೆ, ರಾಜಗೋಪಾಲನಗರ, ಲಕ್ಷ್ಮಿ ದೇವಿನಗರ, ಲೆಗ್ಗೇರೆ, ಪೀಣ್ಯ ಕೈಗಾರಿಕಾ ಪ್ರದೇಶ, ಪೀಣ್ಯ, ಆರ್.ಆರ್. ನಗರ, ಐಡಿಯಲ್ ಹೋಮ್ಸ್, ಕೆಂಚೇನಹಳ್ಳಿ, ಹಲಗೆ ವಡೇರನಹಳ್ಳಿ, ಕೋಡಿಪಾಳ್ಯ, ಚನ್ನಸಂದ್ರ, ಕೆಂಗೇರಿ, ಕೆಂಗೇರಿ ಉಪನಗರ, ನಾಗದೇವನಹಳ್ಳಿ, ಮರಿಯಪ್ಪನ ಪಾಳ್ಯ, ಟಿ.ದಾಸರಹಳ್ಳಿ, ನೆಲಗದರನಹಳ್ಳಿ, ಹೆಚ್.ಎಂ.ಟಿ ಲೇಔಟ್, ಬಗಲಗುಂಟೆ, ಎಂ.ಇ.ಐ ಲೇಔಟ್, ಅಬ್ಬಿಗೇರೆ, ಬ್ಯಾಟರಾಯನಪುರ, ಅಮೃತಹಳ್ಳಿ, ಜಕ್ಕೂರು,…
ಬೆಂಗಳೂರು: ಇಂದು ರಾಯಚೂರಿನಲ್ಲಿ ಮಾತೃತ್ವ ಸುರಕ್ಷಾ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ. ಆ ಬಳಿಕ ರಾಜ್ಯಾಧ್ಯಂತ ಉಚಿತ ಆರೋಗ್ಯ ಶಿಬಿರಗಳ ಮೂಲಕ ಪ್ರತಿ ತಿಂಗಳು ಎರಡು ಬಾರಿ ಗರ್ಭಿಣಿಯರ ಆರೋಗ್ಯ ತಪಾಸಣೆ ನಡೆಸಲಾಗುತ್ತದೆ. ಗರ್ಭಿಣಿಯರ ಆರೋಗ್ಯ ಸುರಕ್ಷತೆ ದೃಷ್ಟಿಯಿಂದ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗುತ್ತಿರುವ ಮಾತೃತ್ವ ಸುರಕ್ಷಾ ಅಭಿಯಾನಕ್ಕೆ ಜನವರಿ 22 ರಂದು ರಾಯಚೂರಿನಲ್ಲಿ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಚಾಲನೆ ನೀಡಲಿದ್ದಾರೆ. ಪ್ರತಿ ತಿಂಗಳ 9 ಮತ್ತು 24ನೇ ತಾರೀಕಿನಂದು ಎರಡು ಬಾರಿ ಉಚಿತವಾಗಿ ಗರ್ಭಿಣಿಯರ ಆರೋಗ್ಯ ತಪಾಸಣೆಯನ್ನು ಆರೋಗ್ಯ ಇಲಾಖೆ ನಡೆಸಲಿದೆ. ರಾಜ್ಯದಾದ್ಯಂತ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಈ ಅಭಿಯಾನವನ್ನು ಕಡ್ಡಾಯವಾಗಿ, ನಿರಂತರವಾಗಿ ನಡೆಸಲು ಸೂಚನೆ ನೀಡಲಾಗಿದೆ. https://twitter.com/KarnatakaVarthe/status/1881695628616704380 https://kannadanewsnow.com/kannada/good-news-for-commuters-one-way-special-train-to-run-from-bengaluru-to-banaras-on-the-occasion-of-kumbh-mela/ https://kannadanewsnow.com/kannada/breaking-saif-ali-khan-discharged-from-mumbais-lilavati-hospital-photo-goes-viral-saif-ali-khan/
ದಾವಣಗೆರೆ : ಬ್ಯಾಂಕ್ಗಳ ದರೋಡೆ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿದ್ದು ಭದ್ರತಾ ಮಾನದಂಡದ ಜೊತೆಗೆ ಸಿಬ್ಬಂದಿಗಳ ಮಾಹಿತಿ ಸಂಗ್ರಹದಲ್ಲಿ ನಿರ್ಲಕ್ಷ್ಯತೆ ಕಾರಣವಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ತಿಳಿಸಿದರು. ಅವರು ಮಂಗಳವಾರ ಜಿಲ್ಲಾ ಪೋಲಿಸ್ ಕಛೇರಿಯಲ್ಲಿ ಜಿಲ್ಲಾ ಮಟ್ಟದ ಬ್ಯಾಂಕಗಳ ಭದ್ರತೆಗಾಗಿ ಬ್ಯಾಂಕಿನ ಎಲ್ಲಾ ವ್ಯವಸ್ಥಾಪಕರುಗಳಿಗೆ ಆಯೋಜಿಸಲಾಗಿದ್ದ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಬ್ಯಾಂಕಿನ ವ್ಯವಸ್ಥಾಪಕರುಗಳು ಬ್ಯಾಂಕ್ಗೆ ಬೇಕಾದ ಹೈಸೆಕ್ಯೂರಿಟಿ ಸಿಸಿ ಕ್ಯಾಮೆರಾಗಳ ಜೊತೆಗೆ ಅಲರಾಮ್ಗಳನ್ನು ಅಳವಡಿಸಿಕೊಳ್ಳಬೇಕು. ಬ್ಯಾಂಕ್ನ ಸೆಕ್ಯುರಿಟಿ ಸಿಬ್ಬಂದಿಯ ಮಾಹಿತಿ ಸಂಗ್ರಹದ ಜೊತೆಗೆ ಹತ್ತಿರದ ಪೊಲೀಸ್ ಠಾಣೆಯೊಂದಿಗೆ ಸೆಕ್ಯುರಿಟಿ ಕುರಿತು ಚರ್ಚಿಸಬೇಕಾಗುತ್ತದೆ ಎಂದರು. ಬ್ಯಾಂಕ್ನ ಒಳಗೆ ಸ್ಟ್ರಾಂಗ್ ರೂಂ ಡಿಜಿಲಾಕರ್, ಸ್ಟ್ರೋಕ್ ಡಿಟೆಕ್ಟರ್ಗಗಳು, ಹೀಟ್ ಡಿಟೆಕ್ಟರ್ಗಳು, ಬ್ಯಾಂಕುಗಳ ಬಳಿ ಯಾರಾದರೂ ಅನುಮಾನಾಸ್ಪದ ವ್ಯಕ್ತಿಗಳು ಬಂದಲ್ಲಿ ಅಂತಹವರ ಮಾಹಿತಿಯನ್ನು ಪೆÇಲೀಸ್ ಠಾಣೆಗಳಿಗೆ ನೀಡುವಂತೆ ಬ್ಯಾಂಕ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ತಿಳಿಸಿ ಸ್ಟ್ರಾಂಗ್ ರೂಮ್ಗೆ ಬ್ಯಾಂಕ್ ಅಧಿಕಾರಿ ಮತ್ತು ಸಿಬ್ಬಂದಿಗಳು ಪ್ರತಿದಿನ ಭೇಟಿ ನೀಡುವ ನಮೂನೆಯಲ್ಲಿ ದಾಖಲು ಮಾಡಬೇಕು. ಬ್ಯಾಂಕ್ಗಳಿಗೆ ಪ್ರತಿದಿನ…
ಬೆಂಗಳೂರು : 2024-2025ನೇ ಸಾಲಿನಲ್ಲಿ ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ವೃತ್ತಿಪರ ಶಿಕ್ಷಣ ಕೋರ್ಸ್(ಸ್ನಾತಕೋತ್ತರ ಪದವಿ ಒಳಗೊಂಡಂತೆ) ವ್ಯಾಸಂಗ ಪೂರ್ಣಗೊಳಿಸಿದ್ದು, ರಾಷ್ಟ್ರೀಕೃತ ಬ್ಯಾಂಕ್ನಿಂದ ಶೈಕ್ಷಣಿಕ ಸಾಲಪಡೆದ ಶಿಕ್ಷಕರ/ಉಪನ್ಯಾಸಕರ ಮಕ್ಕಳಿಗೆ ಧನಸಹಾಯವನ್ನು ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ ದಿನಾಂಕ 01.02.2018ರಂದು ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಮಿತಿ ಸಭೆಯ ನಡಾವಳಿಯಲ್ಲಿನ ಕ್ರ.ಸಂ. 15ರಲ್ಲಿ ತೀರ್ಮಾನಿಸಿದಂತೆ ನಿಧಿಗಳ ವತಿಯಿಂದ ಆಜೀವ ಸದಸ್ಯತ್ವ ಹೊಂದಿರುವ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ, ಪ್ರೌಢ, ಪದವಿ ಹಾಗೂ ಸ್ನಾತಕೋತ್ತರ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ/ಉಪನ್ಯಾಸಕರ ಮಕ್ಕಳಿಗೆ (1 ರಿಂದ 10ನೇ ತರಗತಿಯವರೆಗೆ ಸರ್ಕಾರಿ ಅಥವಾ ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡಿರುವ ಮಕ್ಕಳಿಗೆ ಮಾತ್ರ) ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ಸಂಬಂಧಿಸಿದ ವೃತ್ತಿಪರ ಶಿಕ್ಷಣ ಕೋರ್ಸ್ಗಳ (ಸ್ನಾತಕೋತ್ತರ ಪದವಿ ಒಳಗೊಂಡಂತೆ) ಉನ್ನತ ವ್ಯಾಸಂಗಕ್ಕೆ ಶಿಕ್ಷಕರು ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಶೈಕ್ಷಣಿಕ ಸಾಲ ಪಡೆದಿದ್ದಲ್ಲಿ ಮಾತ್ರ ಅಂತಹ ಶಿಕ್ಷಕರ ಮಕ್ಕಳಿಗೆ ಪ್ರೋತ್ಸಾಹ ನೀಡುವ…
ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಏಕಲವ್ಯ ವಸತಿ ಶಾಲೆಗಳಲ್ಲಿ 2025ನೇ ಶೈಕ್ಷಣಿಕ ಸಾಲಿನ 6ನೇ ತರಗತಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಿದೆ. 2025-26ನೇ ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ 6ನೇ ತರಗತಿ ಪ್ರವೇಶಕ್ಕೆ ಅಗತ್ಯವಾದ ಪ್ರವೇಶ ಪರೀಕ್ಷೆ ಮತ್ತು ಆನ್ಲೈನ್ ಕೌನ್ಸಿಲಿಂಗ್ ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನಡೆಸುವ ಬಗ್ಗೆ ಅಧಿಸೂಚನೆ ನೀಡಲಾಗಿದೆ. ಪ್ರಸ್ತುತ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರು ದಿನಾಂಕ 20-01-2025 ರ ಪತ್ರದಲ್ಲಿ ಪರಿಶಿಷ್ಟ ವರ್ಗಗಳ ಅಭ್ಯರ್ಥಿಗಳಿಗೆ ರಾಜ್ಯದಲ್ಲಿರುವ 12 ಏಕಲವ್ಯ ಮಾದರಿ ವಸತಿ ಶಾಲೆಗಳಿಗೂ ಸಹ 6ನೇ ತರಗತಿಗೆ ವಸತಿ ಶಾಲೆಗಳಿಗೆ ಅರ್ಜಿ ಆಹ್ವಾನಿಸಿ, ಪ್ರವೇಶ ಪರೀಕ್ಷೆ ನಡೆಸಿ ಸೀಟು ಹಂಚಿಕೆಯನ್ನು ಮಾಡಲು ಕೋರಿರುತ್ತಾರೆ. ಈ ಹಿನ್ನಲೆಯಲ್ಲಿ ಅರ್ಹ ಅಭ್ಯರ್ಥಿಗಳು ರಾಜ್ಯದಲ್ಲಿರುವ 12 ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ ಆಸಕ್ತಿ ಇದ್ದಲ್ಲಿ ಆನ್ಲೈನ್ ಮೂಲಕ ಅರ್ಜಿಯನ್ನು 25-01-2025 ರಾತ್ರಿ 11.59ರ ವರೆಗೆ ವಸತಿ ಶಾಲೆ /…
ಮುಂಬೈ:ಬಾಲಿವುಡ್ ನಟ ಸೈಫ್ ಅಲಿ ಖಾನ್ ಜನವರಿ 21 ರ ಇಂದು ಮುಂಬೈನ ಲೀಲಾವತಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬಾಂದ್ರಾದಲ್ಲಿರುವ ತಮ್ಮ ಮನೆಯಲ್ಲಿ ಕಳ್ಳತನದ ಪ್ರಯತ್ನದ ಸಂದರ್ಭದಲ್ಲಿ ಇರಿತಕ್ಕೊಳಗಾದ ನಂತರ ಅವರನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಲಿವುಡ್ ನಟ ಸೈಫ್ ಅಲಿ ಖಾನ್ ಮಂಗಳವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ಲೀಲಾವತಿ ಆಸ್ಪತ್ರೆಯ ಡಾ.ನಿತಿನ್ ಡಾಂಗೆ ಅವರು ಬೆಳಿಗ್ಗೆ ಇದನ್ನು ದೃಢಪಡಿಸಿದರು. ಪ್ರಾಥಮಿಕ ಮಾಹಿತಿಯ ಪ್ರಕಾರ, ಕಳೆದ ರಾತ್ರಿ ಬಿಡುಗಡೆಗಾಗಿ ದಾಖಲೆಗಳನ್ನು ಸಲ್ಲಿಸಲಾಗಿದೆ. ಇಂದು 12 ಗಂಟೆಗೆ ನಟ ಸೈಫ್ ಅಲಿ ಖಾನ್ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ. ಸೈಫ್ ಅವರ ಬಾಂದ್ರಾ ಮನೆಯಲ್ಲಿ ಗುರುವಾರ ದರೋಡೆ ಪ್ರಯತ್ನದ ಸಮಯದಲ್ಲಿ ದರೋಡೆಕೋರ ನಿಂದ ಸುಮಾರು ಆರು ಬಾರಿ ಇರಿತಕ್ಕೊಳಗಾಗಿದ್ದರು. ದಾಳಿಯ ನಂತರ, ಅವರನ್ನು ಮುಂಜಾನೆ 2: 30 ರ ಸುಮಾರಿಗೆ ಆಟೋರಿಕ್ಷಾದಲ್ಲಿ ಲೀಲಾವತಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ಎರಡು ಶಸ್ತ್ರಚಿಕಿತ್ಸೆಗಳಿಗೆ ಒಳಗಾಗಿದ್ದರು
ನವದೆಹಲಿ : ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಎಲ್ಲರೂ ಏನನ್ನು ತಿನ್ನಲು ಇಷ್ಟಪಡುತ್ತಾರೆ ಎಂದು ಕೇಳಿದರೆ ಬಿಸ್ಕತ್ ಹೆಸರು. ಬಿಸ್ಕೆಟ್ ಎಂದರೆ ಎಲ್ಲರಿಗೂ ಇಷ್ಟ. ಮನೆಯಲ್ಲಿಯೇ ತಯಾರಿಸಿದರೆ ತೊಂದರೆ ಇಲ್ಲ ಆದರೆ ಪ್ಯಾಕ್ ಮಾಡಿದ ಬಿಸ್ಕೆಟ್ ತಿಂದು ಅನಾರೋಗ್ಯಕ್ಕೆ ತುತ್ತಾಗುತ್ತೇವೆ. ಹೆಚ್ಚು ಸಂಸ್ಕರಿಸಿದ ಆಹಾರವನ್ನು ಸೇವಿಸುವುದರಿಂದ ಕೆಲವು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಆದರೆ ಇವುಗಳನ್ನು ಎಷ್ಟು ತೆಗೆದುಕೊಳ್ಳಲಾಗುತ್ತದೆ, ಈ ಸಮಸ್ಯೆಗಳು ವ್ಯಕ್ತಿಯ ಆರೋಗ್ಯ ಸ್ಥಿತಿಗಳನ್ನು ಅವಲಂಬಿಸಿ ಬದಲಾಗುತ್ತವೆ. ಈ ಬಿಸ್ಕತ್ತುಗಳಲ್ಲಿ ಹೆಚ್ಚಿನ ಕ್ಯಾಲೋರಿಗಳು, ಕೊಬ್ಬುಗಳು ಮತ್ತು ಸಕ್ಕರೆಗಳಿವೆ. ಇವುಗಳನ್ನು ಅತಿಯಾಗಿ ಸೇವಿಸುವುದರಿಂದ ತೂಕ ಹೆಚ್ಚಾಗಬಹುದು ಮತ್ತು ಮಧುಮೇಹ ಮತ್ತು ಹೃದ್ರೋಗದ ಅಪಾಯವನ್ನು ಹೆಚ್ಚಿಸುತ್ತದೆ. ಸಂಸ್ಕರಿಸಿದ ಬಿಸ್ಕತ್ತುಗಳಿಗೆ ವಿವಿಧ ರಾಸಾಯನಿಕಗಳನ್ನು ಸೇರಿಸಲಾಗುತ್ತದೆ. ಅವುಗಳನ್ನು ತಿನ್ನದಿರುವುದು ಉತ್ತಮ ಎಂದು ವೈದ್ಯರು ಎಚ್ಚರಿಸಿದ್ದಾರೆ. ಬಿಸ್ಕತ್ತುಗಳು ಹೆಚ್ಚು ಶೇಖರಣೆಗಾಗಿ, ಹಳಸಿದ ವಾಸನೆಯನ್ನು ತಡೆಗಟ್ಟಲು, ಬಿಸ್ಕತ್ತು ಮೃದು ಮತ್ತು ಕುರುಕಲು ಮಾಡಲು ವಿವಿಧ ರಾಸಾಯನಿಕಗಳನ್ನು ಸೇರಿಸಲಾಗುತ್ತದೆ ಎಂದು ವೈದ್ಯರು ಬಹಿರಂಗಪಡಿಸುತ್ತಾರೆ. ಅಸ್ತಮಾ ಹೆಚ್ಚಾಗುತ್ತದೆ ಕಡಿಮೆ ಪೌಷ್ಠಿಕಾಂಶದ ಮೌಲ್ಯ :…
ಬೆಂಗಳೂರು : ಗರ್ಭಿಣಿಯರ ಆರೋಗ್ಯ ಸುರಕ್ಷತೆಗಾಗಿ “ಮಾತೃತ್ವ ಸುರಕ್ಷತಾ ಅಭಿಯಾನ”ಕ್ಕೆ ರಾಯಚೂರಿನಲ್ಲಿ ಚಾಲನೆ ನೀಡಲಾಗುತ್ತಿದೆ. ತಿಂಗಳಿಗೆ ಎರಡು ಬಾರಿ ಅಂದರೆ ಪ್ರತಿ ತಿಂಗಳ 9 ಮತ್ತು 24ರಂದು ಗರ್ಭಿಣಿಯರಿಗೆ ಉಚಿತವಾಗಿ ಆರೋಗ್ಯ ತಪಾಸಣೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ. ರಾಜ್ಯದಾದ್ಯಂತ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಈ ಅಭಿಯಾನವನ್ನು ಕಡ್ಡಾಯವಾಗಿ, ನಿರಂತರವಾಗಿ ನಡೆಸಲು ಸೂಚನೆ ನೀಡಲಾಗಿದೆ. ಗರ್ಭಿಣಿಯರ ಆರೋಗ್ಯ ರಕ್ಷಣೆ ನಮ್ಮ ಆದ್ಯತೆಯಾಗಿದ್ದು ರಾಜ್ಯಾದ್ಯಂತ ಉಚಿತ ಆರೋಗ್ಯ ಶಿಬಿರಗಳ ಮೂಲಕ ಗರ್ಭಿಣಿಯರ ನಿರಂತರವಾಗಿ ಆರೋಗ್ಯ ತಪಾಸಣೆ ನಡೆಸಲಾಗುವುದು.
ಇತ್ತೀಚಿನ ಅಧ್ಯಯನಗಳು ಸಮೀಪದೃಷ್ಟಿ ಗಂಭೀರ ಕಾಯಿಲೆ ಎಂದು ಪರಿಗಣಿಸುತ್ತವೆ. ಬ್ರಿಟಿಷ್ ಜರ್ನಲ್ ಆಫ್ ನೇತ್ರವಿಜ್ಞಾನದಲ್ಲಿ ಪ್ರಕಟವಾದ ಅಧ್ಯಯನವು 2030ರ ವೇಳೆಗೆ, 5 ರಿಂದ 15 ವರ್ಷ ವಯಸ್ಸಿನ ಭಾರತದ ನಗರ ಪ್ರದೇಶದ ಸುಮಾರು ಮೂರನೇ ಒಂದು ಭಾಗದಷ್ಟು ಮಕ್ಕಳು ಸಮೀಪದೃಷ್ಟಿಯಿಂದ ಬಳಲುತ್ತಿದ್ದಾರೆ ಎಂದು ಎಚ್ಚರಿಸಿದೆ. ಕೆಟ್ಟ ಜೀವನಶೈಲಿ, ಮೊಬೈಲ್ ದೀರ್ಘಕಾಲದ ಬಳಕೆಯಿಂದಾಗಿ ಇದು ಸಂಭವಿಸುವ ಸಾಧ್ಯತೆಯಿದೆ. ಭಾರತದಲ್ಲಿ ಇದರ ದರ 2050ರ ವೇಳೆಗೆ ಶೇ.49ಕ್ಕೆ ತಲುಪಲಿದೆ ಎಂದು ಸಂಶೋಧನೆಗಳು ತೋರಿಸಿವೆ. ಸಮೀಪದೃಷ್ಟಿ ಭವಿಷ್ಯದಲ್ಲಿ ಗಂಭೀರ ಸಮಸ್ಯೆಯಾಗಲಿದೆ. ಸಮೀಪದೃಷ್ಟಿ ಸಾಮಾನ್ಯ ಕಣ್ಣಿನ ಸಮಸ್ಯೆಯಾಗಿದೆ. ಅದರೊಂದಿಗೆ ಬರುವವರಿಗೆ ದೂರದ ವಸ್ತುಗಳು ಕಾಣಲು ತೊಂದರೆಯಾಗುತ್ತದೆ. ಆದ್ರೆ, ಹತ್ತಿರದ ವಸ್ತುಗಳನ್ನ ಸ್ಪಷ್ಟವಾಗಿ ನೋಡಬಹುದು. ಸಮೀಪದೃಷ್ಟಿಯಲ್ಲಿ ದೂರದ ವಸ್ತುಗಳು ಅಸ್ಪಷ್ಟವಾಗಿ ಕಂಡುಬರುತ್ತವೆ. ಈ ಕಣ್ಣಿನ ಸಮಸ್ಯೆ ಮಕ್ಕಳಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಕೆಲವು ಸಂದರ್ಭಗಳಲ್ಲಿ ರೋಗವು ಆನುವಂಶಿಕ ಅಂಶಗಳಿಂದಲೂ ಉಂಟಾಗುತ್ತದೆ. ಸಮೀಪದೃಷ್ಟಿಯಲ್ಲಿ ದೂರದ ದೃಷ್ಟಿ ಸ್ಪಷ್ಟವಾಗಿಲ್ಲ. ಅಂತಹ ಪರಿಸ್ಥಿತಿಯಲ್ಲಿ ವೈದ್ಯರು ಕನ್ನಡಕವನ್ನ ಧರಿಸಲು ಶಿಫಾರಸು ಮಾಡುತ್ತಾರೆ. ಸಮೀಪದೃಷ್ಟಿ ಪ್ರಕರಣಗಳು ಪ್ರತಿ…
ಹೈದರಾಬಾದ್ : ತೆಲಂಗಾಣ ರಾಜ್ಯದಲ್ಲಿ ಭೀಕರ ಅಪಘಾತ ನಡೆದಿದೆ. ಆರ್ ಟಿಸಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವನ್ನಪ್ಪಿದ್ದಾರೆ. ಈ ಘಟನೆಯ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ. ನಾರಾಯಣಪೇಟೆ ಜಿಲ್ಲಾಸ್ಪತ್ರೆ ಬಳಿಯ ಸಿಂಗಾರಂ ಚೌಕದಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಗೆ ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಕರ್ನೂಲಿನಿಂದ ನಾರಾಯಣಪೇಟೆಗೆ ಬರುತ್ತಿದ್ದ RTC ಬಸ್. ನಾರಾಯಣಪೇಟೆ ಜಿಲ್ಲಾಸ್ಪತ್ರೆ ಬಳಿಯ ಸಿಂಗಾರಂ ಚೌಕದಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದಿದೆ. ಮಹಿಳೆ ರಸ್ತೆ ದಾಟುತ್ತಿದ್ದ ವೇಳೆ ತಿರುವು ತೆಗೆದುಕೊಳ್ಳುವಾಗ ಬಸ್ ಡಿಕ್ಕಿ ಹೊಡೆದಿದೆ. ಈ ಅವಘಡದಲ್ಲಿ ಮಹಿಳೆ ಬಸ್ನಡಿಗೆ ಬಿದ್ದು ಸಾವನ್ನಪ್ಪಿದ್ದಾಳೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಸದ್ಯ ಈ ಭೀಕರ ಅಪಘಾತದ ದೃಶ್ಯ ವೈರಲ್ ಆಗಿದೆ. https://twitter.com/i/status/1881563786068529514














