Subscribe to Updates
Get the latest creative news from FooBar about art, design and business.
Author: kannadanewsnow57
ಹಿಂದೂ ಧರ್ಮದಲ್ಲಿ ಲಕ್ಷ್ಮಿ ದೇವಿಯನ್ನು ಸಂಪತ್ತಿನ ಅಧಿದೇವತೆ ಎಂದು ಪರಿಗಣಿಸಲಾಗುತ್ತದೆ. ಲಕ್ಷ್ಮಿ ದೇವಿಯು ಸಂಪತ್ತು ಮತ್ತು ಸಮೃದ್ಧಿಯ ಪ್ರತೀಕವಾಗಿದ್ದಾಳೆ. ಪ್ರತೀ ಹಿಂದೂ ಮನೆಯಲ್ಲೂ ಕೂಡ ಲಕ್ಷ್ಮಿಯನ್ನು ಆರಾಧಿಸುತ್ತಾರೆ. ಅದರಲ್ಲೂ ಮಹಿಳೆಯರು ಹೆಚ್ಚಾಗಿ ಲಕ್ಷ್ಮಿ ದೇವಿಯನ್ನು, ಆರಾಧಿಸುತ್ತಾರೆ ಹಾಗೂ ಮೆಚ್ಚುತ್ತಾರೆ ಕೂಡ. ಲಕ್ಷ್ಮಿ ದೇವಿಯನ್ನು ನಿತ್ಯವೂ ಪೂಜಿಸಲಾಗುತ್ತಿದ್ದು, ಶುಕ್ರವಾರದ ದಿನ ಅಂದರೆ ಇಂದು ಈಕೆಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಗುತ್ತದೆ. ಒಂದು ವೇಳೆ ನೀವೇನಾದರೂ ಮುಂಜಾನೆ ಎದ್ದ ತಕ್ಷಣ ಈ ಚಿಕ್ಕ ಮಂತ್ರವನ್ನು 21 ಬಾರಿ ಹೇಳಿದರೆ ದಶದಿಕ್ಕುಗಳಿಂದ ಧನ ಸಂಪತ್ತಿನ ಆಗಮನ ಆಗುವುದರ ಜೊತೆಗೆ ಇಲ್ಲಿ ನಾವು ನಿಮಗೆ ಇದರ ಗುಪ್ತವಾದ ಪ್ರಯೋಗದ ಬಗ್ಗೆ ಕೂಡ ತಿಳಿಸಿಕೊಡುತ್ತೇವೆ ಮುಂಜಾನೆಯ ಸಮಯವನ್ನು ಬ್ರಹ್ಮ ಮುಹೂರ್ತದ ಸಮಯ ಅಂತ ಕರೆಯುತ್ತಾರೆ ಒಂದು ವೇಳೆ ಮುಂಜಾನೆ ಎದ್ದ ತಕ್ಷಣ ಒಳ್ಳೆಯ ವಿಷಯಗಳನ್ನು ನೋಡಿದರೆ ಒಳ್ಳೆಯ ವಿಷಯಗಳನ್ನು ಕೇಳಿದರೆ ಒಳ್ಳೆಯ ವಿಷಯಗಳ ಬಗ್ಗೆ ಮಾತನಾಡಿದರೆ ಇವುಗಳ ಪ್ರಭಾವ ನಿಮ್ಮ ಮೇಲೆ ದಿನವಿಡಿ ಇರುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ…
ಗರಿಯಾಬಂದ್: ಛತ್ತೀಸ್ಗಢ-ಒಡಿಶಾ ಗಡಿಯಲ್ಲಿ ಛತ್ತೀಸ್ಗಢ ಪೊಲೀಸರೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಕನಿಷ್ಠ 14 ನಕ್ಸಲರು ಸಾವನ್ನಪ್ಪಿದ್ದಾರೆ. 1 ಕೋಟಿ ರೂ. ಬಹುಮಾನ ಹೊಂದಿದ್ದ ನಕ್ಸಲ್ ಕೂಡ ಈ ಎನ್ಕೌಂಟರ್ನಲ್ಲಿ ಸಾವನ್ನಪ್ಪಿದ್ದಾರೆ. ಎನ್ಕೌಂಟರ್ ಮುಂದುವರೆದಿದೆ. https://twitter.com/ANI/status/1881566936569692497?ref_src=twsrc%5Egoogle%7Ctwcamp%5Eserp%7Ctwgr%5Etweet ಒಡಿಶಾ-ಛತ್ತೀಸ್ಗಢ ಗಡಿಯಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವಿನ ಎನ್ಕೌಂಟರ್ನಲ್ಲಿ ಸೈನಿಕರು ದೊಡ್ಡ ಯಶಸ್ಸನ್ನು ಸಾಧಿಸಿದ್ದಾರೆ. ಭಾನುವಾರದಿಂದ ನಡೆಯುತ್ತಿರುವ ಈ ಎನ್ಕೌಂಟರ್ನಲ್ಲಿ ಸೈನಿಕರು ಇಲ್ಲಿಯವರೆಗೆ 14 ನಕ್ಸಲರನ್ನು ಕೊಂದಿದ್ದಾರೆ. ಇದರಲ್ಲಿ ಇಬ್ಬರು ಮಹಿಳಾ ನಕ್ಸಲರು ಕೂಡ ಸೇರಿದ್ದಾರೆ. ಇನ್ನೂ ಇಬ್ಬರು ನಕ್ಸಲರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಸ್ಥಳದಿಂದ 1 ಎಸ್ಎಲ್ಆರ್ ಮತ್ತು ಐಡಿ ಸೇರಿದಂತೆ ದೊಡ್ಡ ಪ್ರಮಾಣದ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸರಿಂದ ಬಂದ ಮಾಹಿತಿಯ ಪ್ರಕಾರ, ಜನವರಿ 19 ರ ರಾತ್ರಿ, ಒಡಿಶಾದ ನುವಾಪಾ ಜಿಲ್ಲೆಯ ಗಡಿಯಿಂದ ಕೇವಲ 5 ಕಿಲೋಮೀಟರ್ ದೂರದಲ್ಲಿರುವ ಛತ್ತೀಸ್ಗಢದ ಕುಲಾರಿಘಾಟ್ ಮೀಸಲು ಅರಣ್ಯದಲ್ಲಿ ಹೆಚ್ಚಿನ ಸಂಖ್ಯೆಯ ಮಾವೋವಾದಿಗಳು ಇರುವ ಬಗ್ಗೆ ಗುಪ್ತಚರ ಮಾಹಿತಿ ಬಂದಿತ್ತು. ಇಲ್ಲಿ 60 ನಕ್ಸಲರು ಇದ್ದರು. ಒಡಿಶಾ ಪೊಲೀಸ್…
ಛತ್ತೀಸ್ ಗಢ : ಒಡಿಶಾ-ಛತ್ತೀಸ್ಗಢ ಗಡಿಯಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವಿನ ಎನ್ಕೌಂಟರ್ನಲ್ಲಿ ಸೈನಿಕರು ದೊಡ್ಡ ಯಶಸ್ಸನ್ನು ಸಾಧಿಸಿದ್ದಾರೆ. ಭಾನುವಾರದಿಂದ ನಡೆಯುತ್ತಿರುವ ಈ ಎನ್ಕೌಂಟರ್ನಲ್ಲಿ ಸೈನಿಕರು ಇಲ್ಲಿಯವರೆಗೆ 14 ನಕ್ಸಲರನ್ನು ಕೊಂದಿದ್ದಾರೆ. ಇದರಲ್ಲಿ ಇಬ್ಬರು ಮಹಿಳಾ ನಕ್ಸಲರು ಕೂಡ ಸೇರಿದ್ದಾರೆ. ಇನ್ನೂ ಇಬ್ಬರು ನಕ್ಸಲರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಸ್ಥಳದಿಂದ 1 ಎಸ್ಎಲ್ಆರ್ ಮತ್ತು ಐಡಿ ಸೇರಿದಂತೆ ದೊಡ್ಡ ಪ್ರಮಾಣದ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸರಿಂದ ಬಂದ ಮಾಹಿತಿಯ ಪ್ರಕಾರ, ಜನವರಿ 19 ರ ರಾತ್ರಿ, ಒಡಿಶಾದ ನುವಾಪಾ ಜಿಲ್ಲೆಯ ಗಡಿಯಿಂದ ಕೇವಲ 5 ಕಿಲೋಮೀಟರ್ ದೂರದಲ್ಲಿರುವ ಛತ್ತೀಸ್ಗಢದ ಕುಲಾರಿಘಾಟ್ ಮೀಸಲು ಅರಣ್ಯದಲ್ಲಿ ಹೆಚ್ಚಿನ ಸಂಖ್ಯೆಯ ಮಾವೋವಾದಿಗಳು ಇರುವ ಬಗ್ಗೆ ಗುಪ್ತಚರ ಮಾಹಿತಿ ಬಂದಿತ್ತು. ಇಲ್ಲಿ 60 ನಕ್ಸಲರು ಇದ್ದರು. ಒಡಿಶಾ ಪೊಲೀಸ್ (SOG) ಹಾಗೂ ಛತ್ತೀಸ್ಗಢ ಪೊಲೀಸ್ ಮತ್ತು CRPF ನ E-30 ಪಡೆ ಜಂಟಿ ಅಂತರರಾಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಮೈನ್ಪುರದ ಭಾಲುದಿಘಿ ಪರ್ವತಗಳಲ್ಲಿ ಸೈನಿಕರು ಎಲ್ಲಾ ಕಡೆಯಿಂದ ನಕ್ಸಲೀಯರನ್ನು ಸುತ್ತುವರೆದರು.…
ಗದಗ: ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಲು ಮುಂದಾಗಿದ್ದು, ಉದ್ಯೋಗ ನೇಮಕಾತಿಯಲ್ಲಿ ಕನ್ನಡ ಮಾಧ್ಯಮ ಅಭ್ಯರ್ಥಿಗಳಿಗೆ ಕೃಪಾಂಕ ನೀಡಲು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸುವುದಾಗಿ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಹೇಳಿದ್ದಾರೆ. ಗಜೇಂದ್ರಗಡದಲ್ಲಿ ನಡೆದ ಗದಗ ಜಿಲ್ಲಾ 10ನೇ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಉದ್ಯೋಗ ನೇಮಕಾತಿಯಲ್ಲಿ ಗ್ರಾಮೀಣ ಅಭ್ಯರ್ಥಿಗಳಿಗೆ ಕೃಪಾಂಕ ನೀಡುವ ಮಾದರಿಯಲ್ಲಿಯೇ ಕನ್ನಡ ಮಾಧ್ಯಮ ಅಭ್ಯರ್ಥಿಗಳಿಗೆ ಕೃಪಾಂಕ ನೀಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಿ ಮಹತ್ವದ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಕನ್ನಡ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಹಲವಾರು ಕವಿಗಳ ಪುಸ್ತಕಗಳನ್ನು ಇದೇ ವೇಳೆ ಲೋಕಾರ್ಪಣೆಗೊಳಿಸಿದೆವು. ಕನ್ನಡ ನುಡಿಯನ್ನು ಉಳಿಸಿ ಬೆಳೆಸಲು ಸಾಹಿತ್ಯ ಸಮ್ಮೇಳನಗಳು ಅಗತ್ಯ ಎಂಬ ಮಾತುಗಳನ್ನು ತಿಳಿಸಿದೆವು.
ಬೆಂಗಳೂರು : ಬೆಂಗಳೂರಿನಲ್ಲಿ ಬಸ್ ಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಇಬ್ಬರು ಕಾಮುಕರು ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಗಣೇಶ್, ಶರವಣ ಎಂದು ಗುರುತಿಸಲಾಗಿದೆ. ಇಬ್ಬರು ಕೆ ಆರ್ ಮಾರ್ಕೆಟ್ ನಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು, ಸದ್ಯ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ಹಿನ್ನೆಲೆ ಕೆ.ಆರ್. ಮಾರ್ಕೆಟ್ ನಲ್ಲಿ ಬಸ್ ಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಇಬ್ಬರು ಅಪರಿಚಿತ ವ್ಯಕ್ತಿಗಳು ಬಸ್ ತೋರಿಸುವುದಾಗಿ ಕರೆದೊಯ್ದು ಅತ್ಯಾಚಾರ ಎಸಗಿ ಮೊಬೈಲ್, ನಗದು ಹಾಗೂ ಚಿನ್ನಾಭರಣ ದೋಚಿದ್ದಾರೆ ಎಂದು ಕೇಂದ್ರ ವಿಭಾಗದ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ಭಾನುವಾರ ರಾತ್ರಿ 11.39ಕ್ಕೆ ಕೆ.ಆರ್.ಮಾರ್ಕೆಟ್ ಬಳಿಯ ಗೋಡೌನ್ ಸ್ಟ್ರೀಟ್ ನಲ್ಲಿ ಈ ಘಟನೆ ನಡೆದಿದ್ದು, ಮಹಿಳೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಘಟನೆ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಬೆಂಗಳೂರು : ವಿವಿಧ ತಾಲೂಕು ಪಂಚಾಯಿತಿಗಳ ಹಾಗೂ ಅವುಗಳ ವ್ಯಾಪ್ತಿಯ ಇಲಾಖೆಗಳಲ್ಲಿ ಬಾಕಿ/ಪ್ರಸಕ್ತ ಸಾಲಿನ ವೇತನ, ವೇತನೇತರ,ಹೊರಗುತ್ತಿಗೆ ನೌಕರರ ವೇತನ, ದಿನಗೂಲಿ ನೌಕರರ ಉಪದಾನ ಮತ್ತು ವೈದ್ಯಕೀಯ ವೆಚ್ಚ ಮರುಪಾವತಿಗಾಗಿ ಹೆಚ್ಚುವರಿ ಅನುದಾನವನ್ನು ಬಿಡುಗಡೆಗೊಳಿಸಿರುವ ಬಗ್ಗೆ ಆರ್ಥಿಕ ಇಲಾಖೆಯಿಂದ ಹೊರಡಿಸಿರುವ ಆದೇಶ. ವಿವಿಧ ತಾಲ್ಲೂಕು ಪಂಚಾಯಿತಿಗಳ ಹಾಗೂ ಅವುಗಳ ವ್ಯಾಪ್ತಿಯ ಇಲಾಖೆಗಳಲ್ಲಿ ಬಾಕಿ/ಪ್ರಸಕ್ತ ಸಾಲಿನ ಬಾಕಿ/ಪ್ರಸಕ್ತ ಸಾಲಿನ ವೇತನ, ವೇತನೇತರ, ಹೊರಗುತ್ತಿಗೆ ನೌಕರರ ವೇತನ, ದಿನಗೂಲಿ ನೌಕರರ ಉಪದಾನ ಮತ್ತು ವೈದ್ಯಕೀಯ ವೆಚ್ಚ ಮರುಪಾವತಿಗಾಗಿ ಹೆಚ್ಚುವರಿ ಅನುದಾನವನ್ನು ಪ್ರಧಾನ ಲೆಕ್ಕ ಶೀರ್ಷಿಕೆ 2202, 2210, 2225, 2401, 2403, 2435 ಮತ್ತು 2515ರಡಿ ಬಿಡುಗಡೆಗೊಳಿಸಲು ಪ್ರಸ್ತಾಪಿಸಿದೆ. ಪ್ರಸ್ತಾವನೆಯನ್ನು ಪರಿಶೀಲಿಸಿ, ತಾಲ್ಲೂಕು ಪಂಚಾಯತ್ ಕಾರ್ಯಕ್ರಮದಡಿ ರೂ.2819.45ಲಕ್ಷಗಳನ್ನು ಲೆಕ್ಕ ಶೀರ್ಷಿಕ 2515-00-197-1-10-300ರಿಂದ ಬಿಡುಗಡೆಗೊಳಿಸಲು ನಿರ್ಣಯಿಸಿ ಈ ಕೆಳಕಂಡಂತೆ ಆದೇಶಿಸಿದೆ. ಪ್ರಸ್ತಾವನೆಯಲ್ಲಿ ವಿವರಿಸಿರುವಂತೆ ಈ ಆದೇಶಕ್ಕೆ ಲಗತ್ತಿಸಿರುವ ಅನುಬಂಧದ ಕಾಲಂ 2ರ ತಾಲ್ಲೂಕು ಪಂಚಾಯತಿಗೆ ಕಾಲಂ 3 ಕಾರ್ಯಕ್ರಮದಡಿ ಬಾಕಿ/ಪ್ರಸಕ್ತ ಸಾಲಿನ ವೇತನ, ವೇತನೇತರ, ಹೊರಗುತ್ತಿಗೆ…
ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಹೆಸರು ಸೇರ್ಪಡೆ/ತಿದ್ದುಪಡಿಗೆ ಜನವರಿ 31 ರವರೆಗೆ ಅವಕಾಶ ನೀಡಲಾಗಿದೆ. ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ,ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ. ಜನವರಿ 31 ರವರೆಗೆ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶವಿದೆ. ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವಟ್ನಲ್ಲಿ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ನೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗುವುದು. http://ahara.kar.nic.in ವೆಬ್ಟ್ ಗಮನಿಸಬಹುದಾಗಿದೆ. ರೇಷನ್ ಕಾರ್ಡ್ ನಲ್ಲಿ ಹೆಂಡತಿ ಹೆಸರು ಸೇರಿಸಲು ಈ ದಾಖಲೆಗಳು ಕಡ್ಡಾಯ ಆಧಾರ್ ಕಾರ್ಡ್ ಮದುವೆ ಪ್ರಮಾಣ ಪತ್ರ ಪೋಷಕರ ಪಡಿತರ ಚೀಟಿ ಅಗತ್ಯ. ಪಡಿತರ ಚೀಟಿಗೆ…
ಹೈದರಾಬಾದ್ : ಖ್ಯಾತ ನಿರ್ಮಾಪಕ ಹಾಗೂ ತೆಲಂಗಾಣ ಫಿಲ್ಮ್ ಫೆಡರೇಶನ್ ಡೆವಲಪ್ಮೆಂಟ್ ಕಾರ್ಪೊರೇಷನ್ ಅಧ್ಯಕ್ಷ ದಿಲ್ ರಾಜು ಅವರಿಗೆ ಬಿಗ್ ಶಾಕ್ ಸಿಕ್ಕಿದೆ. ಹೈದರಾಬಾದ್ನ ಜೂಬಿಲಿ ಹಿಲ್ಸ್ನಲ್ಲಿರುವ ಅವರ ನಿವಾಸ ಮತ್ತು ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ದಾಳಿಗಳು ಮುಂಜಾನೆಯಿಂದ ಏಕಕಾಲದಲ್ಲಿ ಪ್ರಾರಂಭವಾದವು. ಈ ಸಂಕ್ರಾಂತಿಗೆ ಬಿಡುಗಡೆಯಾಗಿರುವ ಗೇಮ್ ಚೇಂಜರ್ ಮತ್ತು ಸಂಕ್ರಾಂತಿ ಅನಕನಂ ಎಂಬ ಎರಡು ದೊಡ್ಡ ಚಿತ್ರಗಳ ನಿರ್ಮಾಪಕರು. ಇವೆರಡೂ ಶ್ರೀವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಬಿಡುಗಡೆಯಾಗಿವೆ. ಮೂರು ದಿನಗಳಲ್ಲಿ ಬಿಡುಗಡೆಯಾಗಿದೆ. ಗೇಮ್ ಚೇಂಜರ್ ಇದೇ ತಿಂಗಳ 10 ರಂದು ಮತ್ತು ಸಂಕ್ರಾಂತಿ ವರ್ಷಾಚರಣೆ 14 ರಂದು ಬಿಡುಗಡೆಯಾಗಿದೆ. ಈ ಎರಡು ಚಿತ್ರಗಳು ಒಂದೇ ಮಟ್ಟದ ಕಲೆಕ್ಷನ್ ಗಳಿಸಿವೆ ಎಂಬ ಅಧಿಕೃತ ಘೋಷಣೆಯಿಂದಾಗಿ ಈ ಎರಡು ಚಿತ್ರಗಳು ಈ ಐಟಿ ದಾಳಿಗಳಿಗೆ ಕಾರಣವಾಗಿವೆ ಎನ್ನಲಾಗುತ್ತಿದೆ. ದಿಲ್ ರಾಜು ಅವರ ಮನೆ, ಕಚೇರಿಗಳ ತಪಾಸಣೆ ವೇಳೆ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಇದೇ…
ಮಂಡ್ಯ : ರಿಯಲ್ ಎಸ್ಟೇಟ್ ಹಾಗೂ ಚೀಟಿ ವ್ಯವ್ಯಹಾರ ಸಂಬಂಧ ವಂಚನೆ ನಡೆಸಲಾಗಿದೆ ಎಂದು ಆರೋಪಿಸಿ ಐಶ್ವರ್ಯಗೌಡ ಸೇರಿದಂತೆ ನಾಲ್ವರ ವಿರುದ್ಧ ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. 1 ಲಕ್ಷ ರೂ.ಗೆ 10 ಪರ್ಸೆಂಟ್ ಬಡ್ಡಿ ನೀಡುವುದಾಗಿ ಹೇಳಿ 33 ಲಕ್ಷ ರೂ. ಹಣ ಹಾಗೂ 366 ಗ್ರಾಂ ಚಿನ್ನದ ಒಡವೆ ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಿ ಚಾಮುಂಡೇಶ್ವರಿ ನಗರ ನಿವಾಸಿ ಸೌಭಾಗ್ಯ ಎಂಬುವರು ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಐಶ್ವರ್ಯಗೌಡ, ಪತಿ ಹರೀಶ್, ಸಹೋದರ ಮಂಜುನಾಥ್ ಹಾಗೂ ಯಶವಂತ್ ಎಂಬುವರ ವಿರುದ್ಧ ಸೌಭಾಗ್ಯ ದೂರು ನೀಡಿದ್ದಾರೆ. ಈಗಾಗಲೇ ಮಂಡ್ಯ ಪೂರ್ವ ಠಾಣೆಯಲ್ಲಿ ಐಶ್ವರ್ಯಗೌಡ ವಿರುದ್ಧ ಒಂದು ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಶ್ರೀಸಾಯಿ ಗೋಲ್ಡ್ ಪ್ಯಾಲೇಸ್ ನ 1 ಕೆಜಿ 249 ಗ್ರಾಂ ಚಿನ್ನ ಕಳ್ಳತನವಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ನಗರ್ತಪೇಟೆಯ ಕೋನಾರ್ಕ್ ಹಾಲ್ ಮಾರ್ಕಿಂಗ್ ಚಿನ್ನ ನೀಡಿದ್ದ ವೇಳೆ ಚಿನ್ನ ಕಳ್ಳತನವಾಗಿದೆ ಎಂದು ಶ್ರೀಸಾಯಿ ಗೋಲ್ಡ್ ಪ್ಯಾಲೇಸ್ ನ ಮ್ಯಾನೇಜರ್ ಭೀಮರಾಜ್ ದೂರು ನೀಡಿದ್ದಾರೆ. ನಗರ್ತಪೇಟೆಯ ಹಾಲ್ ಮಾರ್ಕಿಂಗ್ ಸೆಂಟರ್ ಗೆ ಚಿನ್ನ ಕೊಟ್ಟಿದ್ದು, ಇದೀಗ ಚಿನ್ನ ಕಳ್ಳತನವಾಗಿದೆ. ನಮ್ಮಲ್ಲಿ ಕೆಲಸ ಮಾಡುತ್ತಿದ್ದವನು ಕಳ್ಳತನ ಮಾಡಿದ್ದಾನೆ ಎಂದು ಭರತ್ ಎಂಬುವರು ಹೇಳಿದ್ದಾರೆ. ಈ ಸಂಬಂಧ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














