Author: kannadanewsnow57

ಬೆಂಗಳೂರು : ರಾಜ್ಯದಲ್ಲಿ ಇ-ಆಸ್ತಿ ತಂತ್ರಾಂಶದಲ್ಲಿ ಹೊಸ ಸೌಲಭ್ಯಗಳನ್ನು (Features) ಕಲ್ಪಿಸಿರುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ-ಆಸ್ತಿ ತಂತ್ರಾಂಶದ ಬಳಕೆಯನ್ನು ಉಲ್ಲೇಖ (01) ಮತ್ತು (02) ಸುತ್ತೋಲೆಗಳಲ್ಲಿ ಕಡ್ಡಾಯಗೊಳಿಸಿ ಆದೇಶಿಸಲಾಗಿರುತ್ತದೆ. ಇ-ಆಸ್ತಿ ತಂತ್ರಾಂಶವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಹಾಗೂ ಸಾರ್ವಜನಿಕರಿಗೆ ತ್ವರಿತವಾಗಿ ಸೇವಯನ್ನು ಒದಗಿಸುವ ಉದ್ದೇಶದಿಂದ ಕಾರ್ಯವಿಧಾನವನ್ನು ಸರಳೀಕರಣಗೊಳಿಸುವ ಅಗತ್ಯತೆ ಇರುವುದರಿಂದ ಇ-ಆಸ್ತಿ ತಂತ್ರಾಂಶದಲ್ಲಿ ಈ ಕೆಳಕಂಡಂತೆ ಹೊಸ ಸೌಲಭ್ಯಗಳನ್ನು ಕಲ್ಪಿಸಲಾಗಿರುತ್ತದೆ. 1. ಕಾರ್ಯಹರಿವಿನ (workflow) ಸರಳೀಕರಣ: ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿಗಳ ದಾಖಲೀಕರಣ/ಹೊಸ ಪಿಐಡಿ ನೀಡುವುದು, ಹಕ್ಕುವರ್ಗಾವಣೆ ಮತ್ತು ಆಸ್ತಿಗಳ ವಿಭಜನೆ ಮತ್ತು ಒಟ್ಟುಗೂಡಿಸುವಿಕೆಗೆ ಸಂಬಂಧಿಸಿದಂತೆ ಪ್ರಸ್ತುತವಿರುವ ಕಾರ್ಯಹರಿವಿನಲ್ಲಿ ಬದಲಾವಣೆ ಮಾಡಲಾಗಿದ್ದು, ಈ ಹಿಂದೆ ಇದ್ದ ಡಾಟ ಎಂಟ್ರಿ ಆಪರೇಟರ್ ಮತ್ತು ವಿಷಯ ನಿರ್ವಹಕರ ಲಾಗಿನ್ ಗಳನ್ನು ಸ್ಥಗಿತಗೊಳಿಸಲಾಗಿರುತ್ತದೆ. ವಿಷಯ ನಿರ್ವಹಕರನ್ನು ನಗರ ಸ್ಥಳೀಯ ಸಂಸ್ಥೆಗಳ ಇತರ ಶಾಖೆಗಳಲ್ಲಿನ ಕಾರ್ಯಗಳಿಗೆ ಮತ್ತು ಡಾಟ ಎಂಟ್ರಿ ಆಪರೇಟರ್ ಗಳನ್ನು…

Read More

ಕೋಲಾರ : ಪೋಷಕರೇ ಎಚ್ಚರ, ಪೇಂಟ್ ನಲ್ಲಿ ಮಿಕ್ಸ್ ಮಾಡುವ ಥಿನ್ನರ್ ಕುಡಿದು 3 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಪೂಜಾರಹಳ್ಳಿಯಲ್ಲಿ ಥಿನ್ನರ್ ಕುಡಿದು 3 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. 2 ದಿನಗಳ ಹಿಂದೆ ಕುಡಿಯುವ ನೀರು ಎಂದು ಭಾವಿಸಿ ಥಿನ್ನರ್ ಕುಡಿದು ಅಸ್ವಸ್ಥಗೊಂಡಿದ್ದ ಜಾನುಳನ್ನು ಬೆಂಗಳೂರಿನ ಇಂದಿರಾಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಇಂದು ಜಾನ್ಸಿ ಅಲಿಯಾಸ್ ಜಾನು ಮೃತಪಟ್ಟಿದ್ದಾಳೆ. ಮುಳಬಾಗಿಲು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ನವದೆಹಲಿ : ಆದಾಯ ತೆರಿಗೆ ಮರುಪಾವತಿಗೆ ಅರ್ಜಿ ಸಲ್ಲಿಸಿದವರಿಗೆ ಐಟಿ ಇಲಾಖೆ ಶಾಕ್ ನೀಡಿದೆ. ಇತ್ತೀಚೆಗೆ, ಆದಾಯ ತೆರಿಗೆ ಇಲಾಖೆಯು ಹೆಚ್ಚಿನ ಸಂಖ್ಯೆಯ ತೆರಿಗೆದಾರರಿಗೆ ಬೃಹತ್ SMS ಮತ್ತು ಇಮೇಲ್‌ಗಳನ್ನು ಕಳುಹಿಸಿದೆ. ತಾಂತ್ರಿಕ ಸಮಸ್ಯೆಗಳು ಅಥವಾ ದಾಖಲೆ ಪರಿಶೀಲನೆ ಪ್ರಕ್ರಿಯೆಯಿಂದಾಗಿ ಅನೇಕ ಮರುಪಾವತಿಗಳನ್ನು ನಿಲ್ಲಿಸಲಾಗಿದೆ ಎಂದು ಅದು ಹೇಳಿದೆ. ಸಾಮಾನ್ಯವಾಗಿ, ಐಟಿ ರಿಟರ್ನ್ಸ್ ಸಲ್ಲಿಸಿದ ನಂತರ, ಮರುಪಾವತಿಯನ್ನು ಒಂದು ವಾರದಿಂದ ಒಂದು ತಿಂಗಳೊಳಗೆ ಠೇವಣಿ ಮಾಡಲಾಗುತ್ತದೆ. ಆದಾಗ್ಯೂ, ಈ ಬಾರಿ ಸಾವಿರಾರು ಮರುಪಾವತಿಗಳನ್ನು ನಿಲ್ಲಿಸಲಾಗಿದೆ. ಇದಕ್ಕೆ ಎರಡು ಪ್ರಮುಖ ಕಾರಣಗಳಿವೆ. ಡೇಟಾ ಹೊಂದಾಣಿಕೆಯಾಗುವುದಿಲ್ಲ: ತೆರಿಗೆದಾರರು ಸಲ್ಲಿಸಿದ ಆದಾಯ ವಿವರಗಳು ಮತ್ತು ಐಟಿ ಇಲಾಖೆಯಲ್ಲಿ ಲಭ್ಯವಿರುವ 26AS ಅಥವಾ AIS ಡೇಟಾದ ನಡುವೆ ವ್ಯತ್ಯಾಸಗಳಿವೆ. ಹೆಚ್ಚುವರಿ ಪರಿಶೀಲನೆ: ನೀವು ಹೇಳಿಕೊಂಡಿರುವ ಕಡಿತಗಳು (80C, 80D ನಂತಹ) ಸರಿಯಾಗಿವೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಲು ಐಟಿ ಇಲಾಖೆ ಹೆಚ್ಚುವರಿ ಪುರಾವೆಗಳನ್ನು ಕೇಳುತ್ತಿದೆ. ಐಟಿ ಇಲಾಖೆ ಕಳುಹಿಸಿದ ಸಂದೇಶದ ಸಾರಾಂಶ ತೆರಿಗೆದಾರರು ಸ್ವೀಕರಿಸಿದ ಸಂದೇಶ.. “ನಿಮ್ಮ…

Read More

ಬೆಂಗಳೂರು: ಸಾಮಾಜಿ ಜಾಲತಾಣದಲ್ಲಿ ದರ್ಶನ್‌ ಪತ್ನಿ ವಿಜಯಲಕ್ಷ್ಮಿಗೆ ಕೆಟ್ಟ ಕಾಮೆಂಟ್‌ ಬರುತ್ತಿರುವ ಹಿನ್ನಲೆಯಲ್ಲಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ. ಇಂದು ಬೆಂಗಳೂರು ಪೊಲೀಸ್‌ ಅಯುಕ್ತರ ಕಚೇರಿಗೆ  ಅವರು ಇಂದು ಮಧ್ಯಾಹ್ನ ಭೇಟಿ ನೀಡಿ ದೂರು ನೀಡಿದ್ದಾರೆ ಎನ್ನಲಾಗಿದೆ. ವಿಜಯಲಕ್ಷ್ಮಿಗೆ ಕೆಟ್ಟ ಕಾಮೆಂಟ್‌ ಮತ್ತು ಕೆಟ್ಟ ಸಂದೇಶವನ್ನು ಕಳುಹಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದ್ದು, ಅವುಗಳನ್ನು ಪಟ್ಟಿ ಮಾಡಿ ದೂರು ನೀಡಿದ್ದರು ಎನ್ನಲಾಗಿದೆ. ದರ್ಶನ್‌ ಮತ್ತು ಸುದೀಪ್ ಅಭಿಮಾನಿಗಳ ನಡುವೆ ವಾರ್: ಸುದೀಪ್ ನೀಡಿದ್ದ ಹೇಳಿಕೆಯೊಂದು ಬಾರಿ ಬಿರುಗಾಳಿಯನ್ನು ಎಬ್ಬಿಸಿತ್ತು, ಬಳಿಕ ವಿಜಯಲಕ್ಷ್ಮಿಕೂಡ ಹೆಸರನ್ನು ಉಲ್ಲೇಖಸದೇ ಸುದೀಪ್‌ ಅವರಿಗೆ ಅವಾಜ್‌ ಹಾಕಿದ್ದಾರೆ ಆಂತ ಸುದೀಪ್‌ ಅಭಿಮಾನಿಗಳು ಗುಟುರು ಹಾಕುತ್ತ ಇದ್ದರು. ದರ್ಶನ್ ಮತ್ತು ವಿಜಯಲಕ್ಷ್ಮಿಸಾಂಸಾರಿಕ ಜೀವನ ಕೆಟ್ಟಾಗಿ ನೆರವಿಗೆ ಬಂದದ್ದು ಸುದೀಪ್ ಅಂತ ಅಭಿಮಾನಿಗಳು ಕಿಡಿಕಾರುತ್ತಿದ್ದಾರೆ. ಈ ನಡುವೆ ವಿಜಯಲಕ್ಷ್ಮಿ ಹೇಳಿದ್ದ ಹೇಳಿಕೆಗೆ ಅವರು ನನಗೆ ಹೇಳಿದ್ದರೆ, ನಾನು ನಲಪಾಡ್‌ ಮತ್ತು ರಾಜುಗೌಡ ಆ ಬಗ್ಗೆ ಹೇಳುತ್ತೇನೆ ಅಂತ ಹೇಳಿದ್ದರು.

Read More

ಬೆಂಗಳೂರು : ಸ್ಯಾಂಡಲ್ ವುಡ್ ನಲ್ಲಿ ಸ್ಟಾರ್ ವಾರ್ ಜೋರಾಗಿದ್ದು, ಇದೀಗ ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಕೆಟ್ಟ ಕಮೆಂಟ್ಸ್ ಮಾಡಿದ ಹಿನ್ನಲೆಯಲ್ಲಿ ದೂರು ದಾಖಲಿಸಿದ್ದಾರೆ. ಹೌದು, ನಟ ದರ್ಶನ್ ಪತ್ನಿಗೆ ಸೋಶಿಯಲ್ ಮೀಡಿಯಾದಲ್ಲಿ ಕೆಟ್ಟದಾಗಿ ಕಮೆಂಟ್ಸ್ ಮಾಡಿದವರ ವಿರುದ್ಧ ವಿಜಯಲಕ್ಷ್ಮೀ ಅವರು ಕಮಿಷನರ್ ಗೆ ದೂರು ನೀಡಿದ್ದಾರೆ. ಕೆಟ್ಟ ಕಮೆಂಟ್ ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿಜಯಲಕ್ಷ್ಮೀ ಅವರು ದೂರು ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾರ್ಕ್ ಚಿತ್ರದ ಪ್ರೀ-ರಿಲೀಸ್ ಇವೆಂಟ್ ನಲ್ಲಿ ಮಾತನಾಡಿರುವಂತ ಅವರು, ನಮ್ಮ ಅಭಿಮಾನಿಗಳು ನೀವು ಸುಮ್ಮನೇ ಇರಬೇಡಿ. ಈ ಕಾರ್ಯಕ್ರಮ ಯಾಕೆ ಹುಬ್ಬಳ್ಳಿಯಲ್ಲಿ ಮಾಡುತ್ತಿದ್ದೀವಿ ಅಂದ್ರೆ ಇಲ್ಲಿಂದ ಮಾತನಾಡಿದ್ರೆ ಕೆಲವೊಬ್ಬರಿಗೆ ತಟ್ಟುತ್ತೆ ಎಂದರು. ಈ ನಡುವೆ ಈ ನಡುವೆ ಸ್ಯಾಂಡಲ್ ವುಡ್ ನಲ್ಲಿ ಇದೀಗ ಮತ್ತೆ ಸ್ಟಾರ್ ವಾರ್ ಆರಂಭವಾಗಿದ್ದು ಕಿಚ್ಚನ ಯುದ್ಧದ ಮಾತಿಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಇದೀಗ ಎಂಟ್ರಿ ಕೊಟ್ಟಿದ್ದು. ದರ್ಶನ್ ಜೈಲಲ್ಲಿ ಇದ್ದಾಗ ಇವರು ವೇದಿಕೆ ಮೇಲೆ ಫ್ಯಾನ್ಸ್ ಬಗ್ಗೆ ಮಾತನಾಡುತ್ತಾರೆ. ಆದರೆ…

Read More

ಬೆಂಗಳೂರು : ರಾಜ್ಯದಲ್ಲಿ ಸಿಎಂ ಕುರ್ಚಿ ಫೈಟ್ ಮಧ್ಯೆ ಅಹಿಂದ ಸಮಾವೇಶಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಜನವರಿ 25 ರಂದು ಮೈಸೂರಿನಲ್ಲಿ ಅಹಿಂದ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಘೋಷಣೆ ಮಾಡಿದೆ. ಸಿಎಂ ಸಿದ್ದರಾಮಯ್ಯ ಬೆನ್ನಿಗೆ ಅಹಿಂದ ಸಮುದಾಯಗಳು ನಿಂತಿದ್ದು, ಸಿದ್ದರಾಮಯ್ಯರನ್ನು ಬದಲಾಯಿಸದಂತೆ ಒತ್ತಡ ಹೇರಲು ಸಮಾವೇಶ ನಡೆಸಲು ಉದ್ದೇಶಿಸಲಾಗಿದೆ. ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಅಹಿಂದ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ. ಅಹಿಂದ ಸಮಾವೇಶಕ್ಕೆ ಮಹೂರ್ತಕ್ಕೆ ದಿನಾಂಕ ಫಿಕ್ಸ್ ಆಗಿದ್ದು ಈ ಮೂಲಕ ಸಿಎಂ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಂತುಕೊಳ್ಳುವುದಕ್ಕೆ ಅಹಿಂದ ನಾಯಕರು ಮುಂದಾಗಿದ್ದಾರೆ. ಕುರ್ಚಿ ಕದನದ ನಡುವೆ ಸಿದ್ದರಾಮಯ್ಯ ಬೆಂಬಲಿಗರ ಹೊಸ ಅಸ್ತ್ರ ಪ್ರಯೋಗ ಮಾಡಲಿದ್ದು, ಜನವರಿ 25 ಕ್ಕೆ ಅಹಿಂದ ಸಮಾವೇಶ ನಡೆಲಿದೆ ಎನ್ನಲಾಗಿದೆ. ಇಂದು ಅಹಿಂದ ಸಮಾವೇಶ ನಡೆಸಲು ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯಿಂದ ಸಿದ್ದತೆ ನಿಟ್ಟಿನಲ್ಲಿ ಪೂರ್ವಭಾವಿ ನಡೆಯಿತು, ಸಭೆಯಲ್ಲಿ ಎಲ್ಲರೂ ಕೂಡ ಜನವರಿ 25 ರಂದು ಅಹಿಂದ…

Read More

ಬೆಂಗಳೂರು : ರಾಜ್ಯದಲ್ಲಿ ಸಿಎಂ ಕುರ್ಚಿ ಫೈಟ್ ಮಧ್ಯೆ ಅಹಿಂದ ಸಮಾವೇಶಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಜನವರಿ 25 ರಂದು ಮೈಸೂರಿನಲ್ಲಿ ಅಹಿಂದ ಸಮಾವೇಶ ನಡೆಸಲು ಎಂದು ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಘೋಷಣೆ ಮಾಡಿದೆ. ಸಿಎಂ ಸಿದ್ದರಾಮಯ್ಯ ಬೆನ್ನಿಗೆ ಅಹಿಂದ ಸಮುದಾಯಗಳು ನಿಂತಿದ್ದು, ಸಿದ್ದರಾಮಯ್ಯರನ್ನು ಬದಲಾಯಿಸದಂತೆ ಒತ್ತಡ ಹೇರಲು ಸಮಾವೇಶ ನಡೆಸಲು ಉದ್ದೇಶಿಸಲಾಗಿದೆ. ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಅಹಿಂದ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ. ಅಹಿಂದ ಸಮಾವೇಶಕ್ಕೆ ಮಹೂರ್ತಕ್ಕೆ ದಿನಾಂಕ ಫಿಕ್ಸ್ ಆಗಿದ್ದು ಈ ಮೂಲಕ ಸಿಎಂ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಂತುಕೊಳ್ಳುವುದಕ್ಕೆ ಅಹಿಂದ ನಾಯಕರು ಮುಂದಾಗಿದ್ದಾರೆ. ಕುರ್ಚಿ ಕದನದ ನಡುವೆ ಸಿದ್ದರಾಮಯ್ಯ ಬೆಂಬಲಿಗರ ಹೊಸ ಅಸ್ತ್ರ ಪ್ರಯೋಗ ಮಾಡಲಿದ್ದು, ಜನವರಿ 25 ಕ್ಕೆ ಅಹಿಂದ ಸಮಾವೇಶ ನಡೆಲಿದೆ ಎನ್ನಲಾಗಿದೆ. ಇಂದು ಅಹಿಂದ ಸಮಾವೇಶ ನಡೆಸಲು ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯಿಂದ ಸಿದ್ದತೆ ನಿಟ್ಟಿನಲ್ಲಿ ಪೂರ್ವಭಾವಿ ನಡೆಯಿತು, ಸಭೆಯಲ್ಲಿ ಎಲ್ಲರೂ ಕೂಡ ಜನವರಿ 25 ರಂದು ಅಹಿಂದ ಸಮಾವೇಶವನ್ನು…

Read More

ಕೊಪ್ಪಳ : ಕೊಪ್ಪಳ ಜಿಲ್ಲೆ ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಇಬ್ಬರು ಸ್ವಾಮೀಜಿಗಳ ನಡುವೆ ನಡೆದಿರುವ ಜಗಳ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅರ್ಚಕ ವಿದ್ಯಾದಾಸ ಬಾಬಾ ಸ್ವಾಮೀಜಿ, ಹಂಪಿಯ ಗೋವಿಂದಾನಂದ ಸರಸ್ವತಿ ಸ್ವಾಮೀಜಿ ಎನ್ನುವವರೇ ಹೀಗೆ ಕಿತ್ತಾಡಿಕೊಂಡಿರುವವರು ಎನ್ನಲಾಗಿದೆ. ಆಂಜನೇಯ ಸ್ವಾಮಿಯ ಗರ್ಭಗುಡಿಯಲ್ಲಿಯೇ ಸ್ವಾಮೀಜಿಗಳ ಮಧ್ಯೆ ಜಗಳ ಶುರುವಾಗಿದ್ದು, ಬಳಿಕ ಇಬ್ಬರು ಹೊಡೆದಾಡಿಕೊಂಡಿದ್ದಾರೆ.ಆದರೆ ಪೂಜಾ ಸಮಯದಲ್ಲಿ ಅವಾಚ್ಯ ಪದ ಬಳಸಿ ನಿಂದನೆ ಮಾಡಲಾಗಿದೆ ಎಂದು ವಿದ್ಯಾದಾಸ ಬಾಬಾ ಅವರು ಆರೋಪ ಮಾಡಿದ್ದಾರೆ. ಇನ್ನೂ ಇಬ್ಬರ ನಡುವೆ ವಾಗ್ವಾದ ಸುದ್ದಿ ಪೊಲೀಸರಿಗೆ ತಿಳಿಸಿದೆ. ಕೂಡಲೇ ಪೊಲೀಸರು ಸ್ಥಳಕ್ಕೆ ಆಗಮಿಸಿಸದ ವೇಳೇಯಲ್ಲಿ ಕೂಡ ಇಬ್ಬರು ಕೂಡ ಪೋಲಿಸರ ಮುಂದೆ ಹೊಡೆದಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಇಬ್ಬರ ಜಗಳದ ವಿಡಿಯೋ ಈಗ ವೈರಲ್ ಆಗಿದೆ. ವಿದ್ಯಾದಾಸ ಬಾಬಾ ಸ್ವಾಮೀಜಿ ಗ್ರಾಮೀಣ ಪೊಲೀಸ್ ಠಾಣೆಗೆ ಘಟನೆ ಸಂಬಂಧಪಟ್ಟ ದೂರು ನೀಡಿದ್ದು, ದೂರಿನಲ್ಲಿ ನನಗೆ ದೇವಸ್ತಾನದಲ್ಲಿ ಪೂಜಾ ಕಾರ್ಯಕ್ಕೆ ಅಡ್ಡಿಪಡಿಸಿ ನಿಂದನೆ ಮಾಡಿದ್ದಾರೆ ಅಂತ ತಿಳಿಸಿದ್ದಾರೆ. https://twitter.com/meavinashr/status/2003722254535008596?s=20

Read More

ಜಕಾರ್ತಾ: ಇಂಡೋನೇಷ್ಯಾದ ಪ್ರಮುಖ ದ್ವೀಪವಾದ ಜಾವಾದಲ್ಲಿ ಸೋಮವಾರ ಮುಂಜಾನೆ ನಡೆದ ಬಸ್ ಅಪಘಾತದಲ್ಲಿ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ. ಸೆಮರಾಂಗ್ ನಗರದ ಕ್ರಾಪ್ಯಕ್ ಟೋಲ್ ಪ್ಲಾಜಾ ಬಳಿ ಈ ಘಟನೆ ನಡೆದಿದೆ. ಪ್ರಾಚೀನ ನಗರವಾದ ಯೋಗ್ಯಕರ್ತಾದಿಂದ ರಾಜಧಾನಿ ಜಕಾರ್ತಾಗೆ ಪ್ರಯಾಣಿಸುತ್ತಿದ್ದ ಬಸ್ ಅಪಘಾತಕ್ಕೀಡಾಯಿತು. ವೇಗವಾಗಿ ಬಂದ ಬಸ್ ನಿಯಂತ್ರಣ ತಪ್ಪಿ ತಿರುವಿನಲ್ಲಿ ಕಾಂಕ್ರೀಟ್ ಗೋಡೆಗೆ ಡಿಕ್ಕಿ ಹೊಡೆದು ಉರುಳಿತು. ಆ ಪ್ರದೇಶವು ಪ್ರಯಾಣಿಕರ ಕಿರುಚಾಟದಿಂದ ಪ್ರತಿಧ್ವನಿಸಿತು. ಸುಮಾರು 40 ನಿಮಿಷಗಳ ನಂತರ ಪೊಲೀಸರು ಮತ್ತು ರಕ್ಷಣಾ ಕಾರ್ಯಕರ್ತರು ಸ್ಥಳಕ್ಕೆ ಬಂದರು. ಅಪಘಾತದ ತೀವ್ರತೆಗೆ ನಜ್ಜುಗುಜ್ಜಾದ ಬಸ್ಸಿನಲ್ಲಿ ಪ್ರಯಾಣಿಕರು ಸಿಲುಕಿಕೊಂಡರು. ಆರು ಜನರು ಸ್ಥಳದಲ್ಲೇ ಸಾವನ್ನಪ್ಪಿದರೆ, 10 ಜನರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದರು. ಗಾಯಗೊಂಡವರಲ್ಲಿ ಐದು ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ ಮತ್ತು 13 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಸ್ ಚಲಾಯಿಸುತ್ತಿದ್ದ ಸಹಾಯಕ ಚಾಲಕ ಕೂಡ ಗಾಯಗೊಂಡವರಲ್ಲಿ ಸೇರಿದ್ದಾರೆ. ಇದರ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. https://twitter.com/_AAhmed004/status/2002984382240583879?s=20

Read More

ರಾಯಚೂರು : ರಾಯಚೂರಿನಲ್ಲಿ ರೋಡ್ ರೋಲರ್ ಗೆ ನೇಣು ಬಿಗಿದುಕೊಡು ರಿಮ್ಸ್ ಆಸ್ಪತ್ರೆ ನರ್ಸಿಂಗ್ ಅಧಿಕಾರಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ರಾಯಚೂರು ಜಿಲ್ಲೆ ಲಿಂಗಸೂಗೂರಿನ ಹಟ್ಟಿ ಪಟ್ಟಣದಲ್ಲಿ 32 ವರ್ಷದ ಜ್ಯೋತಿ ರೋಡ್ ರೋಲರ್ ಗೆ ನೇಣುಬಿಗಿದುಕೊಂಡ ಶವ ಪತ್ತೆಯಾಗಿದೆ. ಹಟ್ಟಿ-ಪಾಮನಕಲ್ಲೂರು ಗ್ರಾಮದ ರಸ್ತೆ ಕಾಮಗಾರಿ ಬಳಿ ಡಿ.22 ರಂದು ಶವ ಪತ್ತೆಯಾಗಿದೆ. ಜ್ಞಾನಮೂರ್ತಿ ಎಂಬುವರನ್ನು ಜ್ಯೋತಿ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಕೆಲದಿನಗಳಿಂದ ಜ್ಯೋತಿಯನ್ನು ಜ್ಞಾನಮೂರ್ತಿ ಅವಾಯ್ಡ್ ಮಾಡಿದ್ದ. ಇದರಿಂದ ಮನನೊಂದು ಜ್ಯೋತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More