Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ಪ್ರತಿ ವರ್ಷ ಸುಮಾರು 1.5 ಲಕ್ಷ ವಿದ್ಯಾರ್ಥಿಗಳು AISSEE ಗೆ ಹಾಜರಾಗುತ್ತಾರೆ. ಸೈನಿಕ ಶಾಲೆಗಳು ತಮ್ಮ ಗುಣಮಟ್ಟದ ಶಿಕ್ಷಣಕ್ಕೆ ಪ್ರಸಿದ್ಧವಾಗಿವೆ. ಸೈನಿಕ ಶಾಲೆಯಲ್ಲಿ ಪಡೆದ ತರಬೇತಿಯಿಂದ ಭವಿಷ್ಯದಲ್ಲಿ ಸೇನೆಯಲ್ಲಿ ಕೆಲಸ ಮಾಡಲು ಬಯಸುವ ವಿದ್ಯಾರ್ಥಿಗಳು ಸಾಕಷ್ಟು ಪ್ರಯೋಜನಗಳನ್ನು ಪಡೆಯಬಹುದು. ಸೈನಿಕ್ ಶಾಲೆಯ ಪ್ರವೇಶ ಮಾನದಂಡ: ಸೈನಿಕ ಶಾಲೆಯ 6 ಮತ್ತು 9 ನೇ ತರಗತಿಗಳಿಗೆ ಪ್ರವೇಶಕ್ಕಾಗಿ, ಅಖಿಲ ಭಾರತ ಸೈನಿಕ ಶಾಲೆಗಳ ಪ್ರವೇಶ ಪರೀಕ್ಷೆಯಲ್ಲಿ (AISSEE) ಉತ್ತೀರ್ಣರಾಗುವುದು ಅವಶ್ಯಕ. ಭಾರತದಲ್ಲಿ ಒಟ್ಟು 33 ಸೈನಿಕ ಶಾಲೆಗಳಿವೆ. ಇವೆಲ್ಲವನ್ನೂ ನಿರ್ವಹಿಸುವ ಜವಾಬ್ದಾರಿ ಸೈನಿಕ್ ಸ್ಕೂಲ್ ಸೊಸೈಟಿಯ ಮೇಲಿದೆ. ಅದರ ವಿವರಗಳನ್ನು sainikschoolsociety.in ನಲ್ಲಿ ಪರಿಶೀಲಿಸಬಹುದು. ಸೈನಿಕ ಶಾಲೆಯ 6 ನೇ ತರಗತಿಗೆ ಪ್ರವೇಶಕ್ಕಾಗಿ, ಅಭ್ಯರ್ಥಿಯ ವಯಸ್ಸು 10-11 ವರ್ಷಗಳು ಮತ್ತು 9, 13-14 ವರ್ಷಗಳು. ನೀವು 6 ನೇ ತರಗತಿಗೆ ಪ್ರವೇಶ ಪಡೆಯುತ್ತಿದ್ದರೆ, ನಂತರ 5 ನೇ ತರಗತಿಯಲ್ಲಿ ಉತ್ತೀರ್ಣರಾಗುವುದು ಅವಶ್ಯಕ. ಅದೇ ರೀತಿ ಸೈನಿಕ ಶಾಲೆಯ 9ನೇ ತರಗತಿ…
ಬೆಂಗಳೂರು : ರಾಜ್ಯದಲ್ಲಿ ಇನ್ಮುಂದೆ 10 ಕೆಜಿಯ ಅಕ್ಕಿ ಬದಲು 5 ಕೆಜಿ ಅಕ್ಕಿ ಕೊಟ್ಟು, ಇನ್ನುಳಿದ 5 ಕೆಜಿಯ ಲೆಕ್ಕದಲ್ಲಿ ದಿನಸಿ ಪದಾರ್ಥಗಳನ್ನು ವಿತರಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಹಸಿವುಮುಕ್ತ ಕರ್ನಾಟಕ ನಿರ್ಮಾಣವೇ ನಮ್ಮ ಮುಖ್ಯ ಉದ್ದೇಶವಾಗಿರುವುದರಿಂದ ಅನ್ನಭಾಗ್ಯದ ಅಕ್ಕಿಯ ಜೊತೆಗೆ ಇಂದಿರಾ ಕಿಟ್ ವಿತರಿಸಲು ನಮ್ಮ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಅನ್ನಭಾಗ್ಯದ 10 ಕೆಜಿಯ ಅಕ್ಕಿಯ ಬದಲು ಇನ್ಮುಂದೆ 5 ಕೆಜಿ ಅಕ್ಕಿ ಕೊಟ್ಟು, ಇನ್ನುಳಿದ 5 ಕೆಜಿಯ ಲೆಕ್ಕದಲ್ಲಿ ದಿನಸಿ ಪದಾರ್ಥಗಳನ್ನು ವಿತರಿಸಲಿದ್ದೇವೆ. ಯಾರೊಬ್ಬರೂ ಹಸಿವಿನಿಂದ ಇರಬಾರದು ಎಂಬುದೇ ನಮ್ಮ ಸರ್ಕಾರದ ಕಾಳಜಿಯಾಗಿದೆ ಎಂದು ಹೇಳಿದ್ದಾರೆ. ಇಂದಿರಾ ಆಹಾರದ ಕಿಟ್ ನಲ್ಲಿ ಏನಿರಲಿದೆ? ತೊಗರಿ ಬೇಳೆ – 1 ಕೆಜಿ ಹೆಸರುಕಾಳು- 1 ಕೆಜಿ ಅಡುಗೆ ಎಣ್ಣೆ – 1 ಲೀಟರ್ ಸಕ್ಕರೆ – 1 ಕೆಜಿ ಉಪ್ಪು- 1 ಕೆಜಿ ಅನ್ನಭಾಗ್ಯ ಯೋಜನೆಯಡಿ 5…
ಬಾಲ್ಯ ವಿವಾಹ ಮುಕ್ತವಾಗಿಸುವ ನಿಟ್ಟಿನಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಬಾಲ್ಯವಿವಾಹ ನಿಷೇಧ ಕಾನೂನು, ಅಪರಾಧಕ್ಕಿರುವ ಶಿಕ್ಷೆ ಪ್ರಮಾಣ ಮುಂತಾದವುಗಳ ಕುರಿತು ವಿವಾಹಗಳು ನಡೆಯುವ ದೇವಸ್ಥಾನ, ಶಾದಿಮಹಲ್, ಕಲ್ಯಾಣ ಮಂಟಪ ಹಾಗೂ ಫಂಕ್ಷನ್ ಹಾಲ್ಗಳಲ್ಲಿ ಶಾಶ್ವತ ಫಲಕ ಹಾಗೂ ಗೋಡೆಬರಹವನ್ನು ಕಡ್ಡಾಯವಾಗಿ ಬರೆಯಿಸಿ, ಪ್ರದರ್ಶಿಸಬೇಕು. ಬಾಲ್ಯವಿವಾಹ ನಿಷೇಧ ಕಾಯ್ದೆ-2006, ಕರ್ನಾಟಕ ತಿದ್ದುಪಡಿ ಕಾಯ್ದೆ-2016 ರನ್ವಯ 18 ವರ್ಷದೊಳಗಿನ ಹೆಣ್ಣು ಮಕ್ಕಳ ಹಾಗೂ 21 ವರ್ಷದೊಳಗಿನ ಗಂಡು ಮಕ್ಕಳ ವಿವಾಹವು ಶಿಕ್ಷಾರ್ಹ ಅಪರಾಧವಾಗಿದೆ. ಕಾಯ್ದೆಯ ಕಲಂ 9 ರನ್ವಯ ಅಪ್ರಾಪ್ತ ವಯಸ್ಸಿನ ಹೆಣ್ಣು ಮಗುವನ್ನು ವಿವಾಹ ಮಾಡಿಕೊಂಡ ಪುರುಷ, ಕಲಂ 10 ಮತ್ತು 11 ರನ್ವಯ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ವಿವಾಹವನ್ನು ಆಯೋಜಿಸಿದವರು, ಆಯೋಜಿಸಲು ಉತ್ತೇಜನ ಅಥವಾ ಪ್ರೋತ್ಸಾಹ ನೀಡುವವರು ಮತ್ತು ಬಾಲ್ಯವಿವಾಹದಲ್ಲಿ ಭಾಗವಹಿಸುವವರಿಗೆ 1 ವರ್ಷದಿಂದ 2 ವರ್ಷದವರೆಗೆ ಕಠಿಣ ಜೈಲು ಶಿಕ್ಷೆ ಮತ್ತು ರೂ. 1 ಲಕ್ಷಗಳ ದಂಡ ವಿಧಿಸಬಹುದಾಗಿರುತ್ತದೆ. ಮಾನ್ಯ ಸರ್ವೋಚ್ಛ ನ್ಯಾಯಾಲಯವು…
ನವದೆಹಲಿ : ಕಳೆದ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರಿನ ಮಹದೇವಪುರ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದಾಖಲೆ ಸಮೇತ ಬಿಡುಗಡೆ ಮಾಡಿ ಆರೋಪ ಮಾಡಿದ್ದರು. ಈ ಕುರಿತು ಎಸ್ಐಟಿ ತನಿಖೆ ನಡೆಸುವಂತೆ ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದ್ದು SIT ರಚನೆಗೆ ಸುಪ್ರೀಂಕೋರ್ಟ್ ನಕಾರ ವ್ಯಕ್ತಪಡಿಸಿದೆ. ಹೌದು 2024ರ ಲೋಕಸಭಾ ಚುನಾವಣೆ ವೇಳೆ ಬೆಂಗಳೂರು ಕೇಂದ್ರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ದೊಡ್ಡ ಮಟ್ಟದ ಅಕ್ರಮ ನಡೆದಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ಈ ಸಂಬಂಧ ವಿಶೇಷ ತನಿಖೆ ನಡೆಸಬೇಕು ಎಂದು ಸುಪ್ರೀಂಕೋರ್ಟ್ ಮುಂದೆ ಅರ್ಜಿ ಸಲ್ಲಿಕೆಯಾಗಿತ್ತು. ಆದರೆ, ಎಸ್ಐಟಿ ತನಿಖೆಗೆ ಕೋರ್ಟ್ ನಕಾರ ವ್ಯಕ್ತಪಡಿಸಿದ್ದು, ಅರ್ಜಿದಾರರು ಚುನಾವಣಾ ಆಯೋಗಕ್ಕೆ ದೂರು ನೀಡಬೇಕೆಂದು ಸೂಚಿಸಿದೆ. ರಾಹುಲ್ ಗಾಂಧಿ ಸೇರಿದಂತೆ ವಿಪಕ್ಷಗಳು ಮತದಾರರ ಪಟ್ಟಿಯಲ್ಲಿ ಅಕ್ರಮವಾಗಿದೆ ಎಂದು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಮನವಿಯನ್ನು ಆಲಿಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜಯಮಾಲ್ಯ ಬಾಗಚಿ ಅವರಿದ್ದ ಸರ್ವೋಚ್ಚ…
ಮಂಗಳೂರು : ಖ್ಯಾತ ಪೋಷಕ, ಹಾಸ್ಯ ನಟ ರಾಜು ತಾಳಿಕೋಟೆ ಅವರು ಹೃದಯಘಾತದಿಂದ ನಿಧನರಾಗಿದ್ದು, ಇಂದು ಅಂತ್ಯಕ್ರಿಯೆಗೆ ಕುಟುಂಬಸ್ಥರು ನಿರ್ಧರಿಸಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಚಿಕ್ಕ ಸಿಂದಗಿ ಗ್ರಾಮದ ತೋಟದಲ್ಲಿ ಇಂದು ಅಂತ್ಯಕ್ರಿಯೆಗೆ ನಿರ್ಧಾರ ಮಾಡಲಾಗಿದೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮದ ಮೂಲದವರಾಗಿದ್ದ ರಾಜು, ಚಲನಚಿತ್ರದಲ್ಲಿ ಪ್ರಸಿದ್ಧರಾದ ನಂತ್ರ ತಾಳಿಕೋಟಿ ನಗರದಲ್ಲಿ ವಾಸವಾಗಿದ್ದರು. ರಾಜು ತಾಳಿಕೋಟಿಯವರ ನಿಧನಕ್ಕೆ ಕನ್ನಡ ಚಿತ್ರರಂಗ ಮತ್ತು ಉತ್ತರ ಕರ್ನಾಟಕದ ರಂಗಭೂಮಿ ಕಂಬನಿ ಮಿಡಿದಿದೆ. ಅಂದ್ಹಾಗೆ, ರಾಜು ತಾಳಿಕೋಟಿಯವರ ಮೂಲ ಹೆಸರು ರಾಜೇಸಾಬ ಮಕ್ತುಮಸಾಬ್ ತಾಳಿಕೋಟಿ. ತಾಳಿಕೋಟಿಯ ಪ್ರಸಿದ್ಧ ಖಾಸ್ಗತೇಶ್ವರ ನಾಟಕ ಮಂಡಳಿಯ ಮಾಲಿಕರೂ ಆಗಿದ್ದು, ಉತ್ತರ ಕರ್ನಾಟಕದ ಹಳ್ಳಿಗಳಲ್ಲಿ ನಾಟಕಗಳ ಮೂಲಕ ಜನರನ್ನ ರಂಜಿಸುತ್ತಿದ್ದರು.
ಬೆಂಗಳೂರು : ಬೆಂಗಳೂರಿನಲ್ಲಿ ಘೋರ ಘಟನೆಯೊಂದು ನಡೆದಿದ್ದು, : ಮೊಬೈಲ್ ರಿಚಾರ್ಜ್ ಮಾಡಿಲ್ಲವೆಂದು ಟೆರೇಸ್ ಮೇಲಿಂದ ಜಿಗಿದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಟೆರೇಸ್ ಮೇಲಿಂದ ಜಿಗಿದು ಶಿಖಾ ದೇವಿ (28) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಘಟನೆ ನಡೆದಿದೆ. ಅಕ್ಟೋಬರ್ 12ರ ಸಂಜೆ 5.30ರ ಸುಮಾರಿಗೆ ಶಿಖಾ ದೇವಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಉತ್ತರ ಪ್ರದೇಶ ಮೂಲದ ಶಿಖಾಗೆ 2019ರಲ್ಲಿ ಮದುವೆ ಆಗಿತ್ತು. ಉತ್ತರ ಪ್ರದೇಶದ ವಿನೋದ್ ಕುಮಾರ್ ಜೊತೆಗೆ ಮದುವೆಯಾಗಿತ್ತು. ಎರಡು ವರ್ಷದ ಹಿಂದೆ ಪತಿ ಜೊತೆಗೆ ಬೆಂಗಳೂರಿಗೆ ಬಂದಿದ್ದ ಶಿಖಾ ದೇವಿ ಕೆಂಗೇರಿಯ ಗೇರುಪಾಳ್ಯದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಪತಿ ಜೊತೆಗೆ ಮೊಬೈಲ್ ರಿಚಾರ್ಜ್ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದರು. ರಿಚಾರ್ಜ್ ಮಾಡಿಲ್ಲವೆಂದು ಮನೆಯ ಟೆರೇಸ್ ಮೇಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿಖಾ ತಂದೆ ಅನಿಲ್ ಕುಮಾರ್ ನೀಡಿದ ದೂರಿನ ಅನ್ವಯ ಕುಂಬಲಗೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ನಡೆಯುತ್ತಿದೆ. ಈ ಜಾತಿಗಣತಿಯಲ್ಲಿ ತೊಡಗಿರುವಂತ ಸಮೀಕ್ಷಾದಾರರು, ಮೇಲ್ವಿಚಾರಕರಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ. ಅದೇ ಗೌರವಧನವನ್ನು ನಿಗದಿ ಪಡಿಸಿ ಆದೇಶಿಸಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಕಾರ್ಯದರ್ಶಿ ಅವರು ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಂಡಿರುವ ಸಮೀಕ್ಷಾದಾರರು ಮತ್ತು ಮೇಲ್ವಿಚಾರಕರಿಗೆ ಈ ಕೆಳಕಂಡಂತೆ ಗೌರವಧನವನ್ನು ನಿಗದಿ ಪಡಿಸಲಾಗಿದೆ ಎಂದಿದೆ. ರಾಜ್ಯ ಸರ್ಕಾರದಿಂದ ಜಾತಿಗಣತಿಯಲ್ಲಿ ತೊಡಗಿರುವಂತ ಸಮೀಕ್ಷಾದಾರರಿಗೆ ಲಮ್ ಸಂ ರೂ.5,000 ಹಾಗೂ ಪ್ರತಿ ಮನೆ ಸಮೀಕ್ಷೆಗೆ ರೂ.100 ರಂತೆ ಗೌರವಧನವನ್ನು ನಿಗದಿ ಪಡಿಸಲಾಗಿದೆ. ಮೇಲ್ವಿಚಾರಕರಿಗೆ ರೂ.10,000 ಗೌರವಧನ ನಿಗದಿ ಪಡಿಸಲಾಗಿದೆ. ಮೊದಲ ಕಂತಿನಲ್ಲಿ ತಲಾ ರೂ.5,000ದಂತೆ ಸಮೀಕ್ಷಾದಾರರಿಗೆ ಗೌರವಧನ ಪಾವತಿಸಲು ಅನುದಾನ ಬಿಡುಗಡೆ ಮಾಡಲಾಗಿದೆ. ಸಮೀಕ್ಷಾದಾರರಿಗೆ ಬಾಕಿ ಮೊತ್ತ ಹಾಗೂ ಮೇಲ್ವಿಚಾರಕರಿಗೆ ನಿಗದಿಪಡಿಸಿದ ಗೌರವಧನವನ್ನು ಬಿಡುಗಡೆ ಮಾಡಬೇಕಾಗಿದ್ದು, ಒಂದು…
ಬೆಂಗಳೂರು : ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕಳೆದ ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದ ದೇವೇಗೌಡರು ಇದೀಗ ಸಂಪೂರ್ಣ ಚೇತರಿಸಿಕೊಂಡಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ಡಿಸ್ಚಾರ್ಜ್ ಆಗಿದ್ದಾರೆ. ಜ್ವರ ಹಾಗೂ ಯೂರಿನ್ ಇನ್ಫೆಕ್ಷನ್ನಿಂದ ಆಸ್ಪತ್ರೆಗೆ ದಾಖಲಾಗಿದ್ದ ದೇವೇಗೌಡರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಮನೆಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ.
ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಘಟನೆ ನಡೆದಿದ್ದು, ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿಗೆ ಹೋಗುವ ಮಾರ್ಗದಲ್ಲಿ ಡ್ರಾಪ್ ಕೊಡುವ ನೆಪದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದ್ದು, ಚಿಕ್ಕಬಳ್ಳಾಪುರ ಮೂಲದ ಸಿಕಂದರ್ ಬಾಬಾ ಹಾಗೂ ಜನಾರ್ಧನಾಚಾರಿ ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಿಕಂದರ್ ಡ್ರಾಪ್ ಕೊಡುವ ನೆಪದಲ್ಲಿ ಯುವತಿಯನ್ನು ಬೈಕ್ ಹತ್ತಿಸಿಕೊಂಡಿದ್ದಾನೆ. ನಂತರ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಅಲ್ಲಿಗೆ ಬಂದ ಸಿಕಂದರ್ ಸ್ನೇಹಿತ ಜನಾರ್ಧನಚಾರಿ ಕೂಡ ಅತ್ಯಾಚಾರ ಎಸಗಿದ್ದಾನೆ. ಮಹಿಳೆಯ ಚಿನ್ನದ ಓಲೆ ಕಸಿದುಕೊಂಡು ಕಾಮುಕರು ಪರಾರಿಯಾಗಿದ್ದಾರೆ. ಯುವತಿಯನ್ನು ಸ್ಥಳೀಯರು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಆಧಾರದ ಮೇರೆಗೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು : ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ನೀವು ಆನ್ಲೈನ್ ಮೂಲಕವೂ ಪಾಲ್ಗೊಳ್ಳಬಹುದು. ಸಾರ್ವಜನಿಕರು ಸ್ವಯಂ ಮಾಹಿತಿಯನ್ನು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. https://kscbcselfdeclaration.karnataka.gov.in ವೆಬ್ಸೈಟ್ಗೆ ಭೇಟಿ ನೀಡಿ, ಕೇಳಲಾದ ಪ್ರಶ್ನೆಗಳಿಗೆ ಉತ್ತರಿಸಿ. ಸಮೀಕ್ಷೆ ಕುರಿತು ಯಾವುದೇ ದೂರು ಅಥವಾ ಮಾಹಿತಿಯನ್ನು ಪಡೆಯಲು ಆಯೋಗದ ಸಹಾಯವಾಣಿ ಸಂಖ್ಯೆ 8050770004 ಗೆ ಕರೆ ಮಾಡಿ. ಈಗಾಗಲೇ ಗುರುತಿಸಲಾಗಿರುವ ಎಲ್ಲಾ ಮನೆಗಳಿಗೆ ಗಣತಿದಾರರು ಭೇಟಿ ನೀಡಿ, ಗಣತಿ ಕಾರ್ಯ ನಡೆಸುತ್ತಿದ್ದು, ಸಾರ್ವಜನಿಕರು ಕೂಡ ಸ್ವಯಂ ಆಗಿ ತಮ್ಮ ಮನೆಯ ಗಣತಿ ಮಾಡಿಕೊಳ್ಳಲು ಅನುಕೂಲವಾಗುವಂತೆ ಸೌಲಭ್ಯವನ್ನು ಸಿದ್ಧಪಡಿಸಲಾಗಿದೆ. ಸಾರ್ವಜನಿಕರು https://kscbcselfdeclaration.karnataka.gov.in/ ನಲ್ಲಿ ಸ್ವಯಂ ಮಾಹಿತಿಯನ್ನು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ಲಿಂಕ್ ಅನ್ನು ಕ್ಲಿಕ್ ಮಾಡಿದಾಗ ತೆರೆದುಕೊಳ್ಳುವ ಪುಟದಲ್ಲಿ ʼನಾಗರಿಕʼ ಎಂಬುದನ್ನು ಆಯ್ಕೆ ಮಾಡಿದ್ದಲ್ಲಿ ಲಾಗಿನ್ನಲ್ಲಿ ಮುಂದುವರೆಯಲು ಕೋರಲಾಗುತ್ತದೆ. ನಂತರದಲ್ಲಿ ತಮ್ಮ ಮೊಬೈಲ್ ಸಂಖ್ಯೆಯನ್ನು ನೀಡಿದ್ದಲ್ಲಿ, ಒಟಿಪಿ ಬರಲಿದ್ದು, ಅದನ್ನು ದಾಖಲು ಮಾಡಬೇಕಾಗುತ್ತದೆ. https://twitter.com/KarnatakaVarthe/status/1977622605525127312 ನಂತರ ತೆರೆಯುವ ಪುಟದಲ್ಲಿ ತಮ್ಮ ಸಮೀಕ್ಷೆಯ ಸ್ಥಿತಿಗತಿ ಕುರಿತಂತೆ ನಿಮ್ಮ ಸಮೀಕ್ಷೆ…














