Author: kannadanewsnow57

ಹೈದರಬಾದ್ : ವೈದ್ಯರ ಎಡವಟ್ಟಿನಿಂದಾಗಿ ಮೂಲವ್ಯಾಧಿ ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಮೇಡ್ಚಲ್ ಜಿಲ್ಲೆಯ ಮಲ್ಲಾಪುರದಲ್ಲಿ ದುರಂತ ಘಟನೆ ನಡೆದಿದೆ. ಮೂಲವ್ಯಾಧಿ ಶಸ್ತ್ರಚಿಕಿತ್ಸೆ ವೇಳೆ 17 ವರ್ಷದ ಇಂಟರ್ಮೀಡಿಯೇಟ್ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ವಿದ್ಯಾರ್ಥಿಯ ಪೋಷಕರ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪೊಲೀಸರ ಪ್ರಕಾರ, ಎರಡನೇ ವರ್ಷದ ಇಂಟರ್ಮೀಡಿಯೇಟ್ ವಿದ್ಯಾರ್ಥಿ ಕಳೆದ ಕೆಲವು ದಿನಗಳಿಂದ ಪೈಲ್ಸ್ ನಿಂದ ಬಳಲುತ್ತಿದ್ದ. ಈ ಹಿನ್ನೆಲೆಯಲ್ಲಿ, ನವೆಂಬರ್ 11 ರಂದು, ಪೋಷಕರು ಅವನನ್ನು ಹಯಾತ್ ನಗರದ ಖಾಸಗಿ ಚಿಕಿತ್ಸಾಲಯಕ್ಕೆ ಕರೆದೊಯ್ದರು. ಅಲ್ಲಿ, ಸಾಹಿಲ್ ಮತ್ತು ಅವರ ಪತ್ನಿ ಹುಡುಗನನ್ನು ಪರೀಕ್ಷಿಸಿ, ತಕ್ಷಣ ಶಸ್ತ್ರಚಿಕಿತ್ಸೆಗೆ ಒಳಪಡಿಸುವಂತೆ ಸೂಚಿಸಿದರು. ಸುಮಾರು 7,000 ರೂ. ವೆಚ್ಚದಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಯಿತು. ಬಲಿಪಶು ಹುಡುಗ ಮತ್ತು ಅವರ ಕುಟುಂಬ ಆ ರಾತ್ರಿ ಆಸ್ಪತ್ರೆಯಲ್ಲಿಯೇ ಇದ್ದರು. ಇಡೀ ದಿನ ಆಸ್ಪತ್ರೆಯಲ್ಲಿದ್ದ ನಂತರ, ಅವರು ಮರುದಿನ ಮನೆಗೆ ಮರಳಿದರು. ಆದರೆ ಮರುದಿನ, ಹುಡುಗನಿಗೆ ತೀವ್ರ ರಕ್ತಸ್ರಾವವಾಗುತ್ತಿದ್ದ ಕಾರಣ ತಕ್ಷಣ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ರೌಡಿಶೀಟರ್ ಬೇಕರಿ ರವಿಯನ್ನು ಬಂಧಿಸಿದ್ದಾರೆ. ಸಿಸಿಬಿ ಪೊಲೀಸರು ರೌಡಿಶೀಟರ್ ಬೇಕರಿ ರಘುನನ್ನು ಕೋಕಾ ಕಾಯ್ದೆಯಡಿ ಬಂಧಿಸಿದ್ದಾರೆ. ಕೋಕಾ ಕಾಯ್ದೆಯಡಿ ಬಂಧನವಾದ್ರೆ 1 ವರ್ಷ ಜಾಮೀನು ಸಿಗುವುದು ಅನುಮಾನ.

Read More

ಕಲಬುರಗಿ: ವಿಜಯಪುರದಿಂದ ಕಲಬುರಗಿಗೆ ಆಗಮಿಸುತ್ತಿದ್ದ ವೇಳೆ ನಡೆದ ಭೀಕರ ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇದೀಗ ಮಹಾಂತೇಶ್ ಬೀಳಗಿ ಸ್ನೇಹಿತ ಕೂಡ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿದ್ದ ಮತ್ತೊರ್ವ ವ್ಯಕ್ತಿ, ಮಹಾಂತೇಶ್ ಬೀಳಗಿ ಸ್ನೇಹಿತ ಈರಣ್ಣ ಶಿರಸಂಗಿ ಕೂಡ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಈರಣ್ಣ ಶಿರಸಂಗಿ ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಕಲಬುರಗಿಯ ಜೇವರ್ಗಿ ತಾಲ್ಲೂಕಿನ ಗೌನಹಳ್ಳಿ ಬಳಿ ಈ ದುರ್ಘಟನೆ ಸಂಭವಿಸಿದೆ. ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಮಹಾಂತೇಶ್ ಬೀಳಗಿ ಸೇರಿ ಒಟ್ಟು ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದೀಗ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.

Read More

ಮೈಸೂರು: ಮೈಸೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಭೀಕರ ಹತ್ಯೆ ಮಾಡಲಾಗಿದೆ. ಮೈಸೂರಿನ ಶಾಂತಿನಗರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಸೈಯದ್ ಸೂಫಿಯಾನ್ (19) ಬರ್ಬರ ಹತ್ಯೆ ಮಾಡಲಾಗಿದೆ. ಮೈಸೂರಿನ ಶಾಂತಿನಗರದಲ್ಲಿ ದುಷ್ಕರ್ಮಿಗಳು ಸೈಯದ್ ಸೂಫಿಯಾನ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಘಟನೆ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ನಂದಿನಿ ತುಪ್ಪ ಕಲಬೆರೆಕೆ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ಇದೀಗ ಕಿಂಗ್ ಪಿನ್ ದಂಪತಿಯನ್ನು ಬಂಧಿಸಿದ್ದಾರೆ. ನಂದಿನಿ ತುಪ್ಪ ಕಲಬೆರೆಕೆ ಪ್ರಕರಣದಲ್ಲಿ ಗಂಡ, ಹೆಂಡತಿಯೇ ಕಿಂಗ್ ಪಿನ್ ಆಗಿದ್ದು, ಸಿಸಿಬಿ ಪೊಲೀಸರು ಇದೀಗ ದಂಪತಿ ಶಿವಕುಮಾರ್, ರಮ್ಯಾರನ್ನು ಬಂಧಿಸಿದ್ದಾರೆ. ಸದ್ಯ ನಂದಿನಿ ತುಪ್ಪ ಕಲಬೆರೆಕೆ ಪ್ರಕರಣ ಸಂಬಂಧ ಆರೋಪಿಗಳಾದ ಶಿವಕುಮಾರ್ ಹಾಗೂ ರಮ್ಯಾಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ನಕಲಿ ನಂದಿನಿ ತುಪ್ಪ ತಯಾರಿ ಘಟಕದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು.  ತಮಿಳುನಾಡಿನಲ್ಲಿ ನಕಲಿ ತುಪ್ಪ ತಯಾರಿಕೆ ಘಟಕ ಹೊಂದಿದ್ದರು.

Read More

ಬೆಂಗಳೂರು: ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು. ಕಾವೇರಿ ನಿವಾಸದಲ್ಲಿ ಕ್ರಿಕೆಟ್ ತಂಡದ ಪ್ರತೀ ಆಟಗಾರರನ್ನು ವೈಯುಕ್ತಿಕವಾಗಿ ಅಭಿನಂಧಿಸಿ, ಸನ್ಮಾನಿಸಿದ ಬಳಿಕ ಮುಖ್ಯಮಂತ್ರಿಗಳು ಈ ಘೋಷಣೆ ಮಾಡಿದರು. ಹಾಗೆಯೇ ಭಾರತ ತಂಡದ ಇತರೆ ರಾಜ್ಯಗಳನ್ನು ಪ್ರತಿ‌ನಿಧಿಸುವ ತಂಡದ ಆಟಗಾರರಿಗೆ ತಲಾ 2 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿದ್ದಾರೆ. ತಂಡದಲ್ಲಿದ್ದ ಇತರೆ ರಾಜ್ಯಗಳ 13 ಆಟಗಾರ್ತಿಯರಿಗೂ ತಲಾ 2 ಲಕ್ಷ ರೂಪಾಯಿ ನಗದು ಬಹುಮಾನ ಸಿಗಲಿದೆ. ತಂಡದ ನಾಯಕಿ, ತುಮಕೂರಿನ ಶಿರಾ ಮೂಲದ ದೀಪಿಕಾ ಅವರ ನಾಯಕತ್ವ ಮತ್ತು ಆಟದ ವೈಖರಿಯನ್ನು ಸಿಎಂ ವಿಶೇಷವಾಗಿ ಶ್ಲಾಘಿಸಿದರು. ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಮಾಜ ಕಲ್ಯಾಣ ಸಚಿವರಾದ ಎಚ್.ಸಿ. ಮಹದೇವಪ್ಪ ಹಾಗೂ ಉನ್ನತ ಶಿಕ್ಷಣ ಸಚಿವರಾದ…

Read More

ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯ ಸೊಹಾಗ್‌ಪುರ ಪೊಲೀಸ್ ಠಾಣೆಯ ಬಂಗಂಗಾ ಪ್ರದೇಶದಲ್ಲಿ ಸೂಕ್ಷ್ಮ ಮತ್ತು ನಿಗೂಢ ಪ್ರಕರಣವೊಂದು ಬೆಳಕಿಗೆ ಬಂದಿದೆ. 13 ವರ್ಷದ ಧೀರೇಂದ್ರ ಪ್ರಜಾಪತಿ ಭಾನುವಾರ ರಾತ್ರಿ ತನ್ನ ಮನೆಯಿಂದ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಾನೆ. ಅವನ ಹಾಸಿಗೆಯ ಬಳಿ ಒಂದು ಪತ್ರ ಪತ್ತೆಯಾಗಿದ್ದು, ಅದರಲ್ಲಿ ಮಗು ಹೀಗೆ ಬರೆದಿದೆ, “ಅಮ್ಮಾ, ನಾನು ದೇವರನ್ನು ಪ್ರಾರ್ಥಿಸಲು ಮನೆಯಿಂದ ಹೊರಡುತ್ತಿದ್ದೇನೆ. ಅಮ್ಮ, ಅಪ್ಪ, ಸಹೋದರರು ಮತ್ತು ಸಹೋದರಿಯರೇ, ದಯವಿಟ್ಟು ನಿಮ್ಮನ್ನು ನೋಡಿಕೊಳ್ಳಿ, ನಾನು ಚೆನ್ನಾಗಿದ್ದೇನೆ ಎಂದು ಬರೆದಿದ್ದಾನೆ. ಈ ಕೈಬರಹದ ಪತ್ರವು ಅವನ ಕುಟುಂಬಕ್ಕೆ ಆಘಾತವನ್ನುಂಟುಮಾಡಿತು. ಧೀರೇಂದ್ರ ಬೆಳಿಗ್ಗೆ 12:00 ರಿಂದ 1:00 ರ ನಡುವೆ ಸದ್ದಿಲ್ಲದೆ ಮನೆಯಿಂದ ಹೊರಟುಹೋದನೆಂದು ಕುಟುಂಬ ಸದಸ್ಯರು ಹೇಳುತ್ತಾರೆ. ಬೆಳಿಗ್ಗೆ ಅವನು ಹಾಸಿಗೆಯಲ್ಲಿ ಸಿಗದಿದ್ದಾಗ, ಅವನ ಹುಡುಕಾಟ ನಡೆಸಿದ್ದಾರೆ. ಕುಟುಂಬವು ಆರಂಭದಲ್ಲಿ ಬಂಗಂಗಾ ಪ್ರದೇಶ, ಸುತ್ತಮುತ್ತಲಿನ ಹಳ್ಳಿಗಳು ಮತ್ತು ಸಂಬಂಧಿಕರ ಮನೆಗಳಲ್ಲಿ ಹುಡುಕಿತು, ಆದರೆ ನಿರಾಶೆಯನ್ನು ಎದುರಿಸಿತು. ಇದರ ನಂತರ, ತಂದೆ ಧರ್ಮೇಂದ್ರ ಪ್ರಜಾಪತಿ ಸೊಹಾಗ್‌ಪುರ ಪೊಲೀಸ್ ಠಾಣೆಗೆ ಹೋಗಿ…

Read More

ಕೊಪ್ಪಳ : ಅಪ್ರಾಪ್ತ ಮಕ್ಕಳಿಗೆ ವಾಹನ ಕೊಡುವ ಪೋಷಕರೇ ಎಚ್ಚರ,ಅಪ್ರಾಪ್ತನಿಗೆ ಬೈಕ್ ಚಲಾಯಿಸಲು ಕೊಟ್ಟ ವ್ಯಕ್ತಿಗೆ 26 ಸಾವಿರ ರೂ. ದಂಡ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ನಾಗೇಶ್ ಪಾಟೀಲ್ ಅವರು, ಅಪ್ರಾಪ್ತನಿಗೆ ಬೈಕ್ ಚಲಾಯಿಸಲು ಕೊಟ್ಟ ವ್ಯಕ್ತಿಗೆ 26 ಸಾವಿರ ರೂ. ದಂಡ ಹಾಗೂ ಬಾಲಕನಿಗೆ ಒಂದು ದಿನ ಕೋರ್ಟ್ ಗೋಡೆ ಸ್ವಚ್ಛಗೊಳಿಸುವ ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ. 2025, ಜ.7ರಂದು ನಗರದಲ್ಲಿ ಬಾಲಕ ಅತಿವೇಗ, ನಿರ್ಲಕ್ಷ್ಯದಿಂದ ಬೈಕ್ ಚಲಾಯಿಸಿದ್ದ. ಸಂಚಾರಿ ಠಾಣೆಯ ಪೊಲೀಸರು ಬಾಲಕನ ವಿಚಾರಣೆ ನಡೆಸಿದ್ದರು. ಬೈಕ್ ನೀಡಿದ ಮಾಲೀಕ ತಿಮ್ಮಣ್ಣ ವಿರುದ್ಧ ಪ್ರಕರಣ ದಾಖಲಿಸಿದ್ದರು.

Read More

ಬೆಂಗಳೂರು : ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆರ ಜವಾಬ್ದಾರಿಗಳೇನು? ಎಂಬುದರ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ. ಅಂಗನವಾಡಿ ಕಾರ್ಯಕರ್ತೆಯರು 3 ರಿಂದ 6 ವರ್ಷದ ಮಕ್ಕಳಿಗೆ ಶಾಲಾಪೂರ್ವ ಶಿಕ್ಷಣ ನೀಡುವುದು, ಆರೋಗ್ಯ ತಪಾಸಣೆ, ರೋಗನಿರೋಧಕ ಲಸಿಕೆಗಳು, ಮತ್ತು ಗರ್ಭಿಣಿ ಹಾಗೂ ಬಾಣಂತಿಯರಿಗೆ ಪೌಷ್ಟಿಕಾಂಶ ಶಿಕ್ಷಣ ಸೇರಿದಂತೆ ವಿವಿಧ ಸೇವೆಗಳನ್ನು ಒದಗಿಸುವ ಜವಾಬ್ದಾರಿಯನ್ನು ಹೊಂದಿರುತ್ತಾರೆ. ಜನ ಸಮುದಾಯದ ಸಮೀಕ್ಷೆಯನ್ನು ಕೈಗೊಂಡು, ಸಹಾಯ ಅಗತ್ಯವಾಗಿರುವಂಥವರ ವಿವರ ಸಂಗ್ರಹಿಸುವುದು. ಆರು ವರ್ಷದ ಕೆಳಗಿನ ಮಕ್ಕಳ ಸಂಖ್ಯೆ, ಗರ್ಭಿಣಿ ಮತ್ತು ಹಾಲೂಣಿಸುತ್ತಿರುವ ತಾಯಂದಿರು, ಇವುಗಳನ್ನೂ ಸಂಗ್ರಹಿಸಬೇಕು. ಕುಟುಂಬಗಳ ಸಂಖ್ಯೆ, ಕುಟುಂಬದಲ್ಲಿ ಸದಸ್ಯರ ಸಂಖ್ಯೆ, ಕುಟುಂಬದ ಆದಾಯ ಇವುಗಳನ್ನು ಸಂಗ್ರಹಿಸಬೇಕು. ಮುಖ್ಯ ಅಂಕಿ-ಅಂಶಗಳಾದ ಜನನ-ಮರಣಗಳ ದಾಖಲೆಯನ್ನೂ ಇಡಬೇಕು. 3 ಮತ್ತು 6 ವರ್ಷಗಳ ನಡುವಣ ಮಕ್ಕಳ ಶಾಲಾಪೂರ್ವ ಶಿಕ್ಷಣವನ್ನು ಕೈಗೊಳ್ಳಬೇಕು. 0-6 ವರ್ಷಗಳ ನಡುವಿನ ಮಕ್ಕಳ ಮತ್ತು ಗರ್ಭಿಣಿ ಹಾಗೂ ಹಾಲೂಣಿಸುತ್ತಿರುವ ತಾಯಂದಿರಿಗೆ ಅಧಿಕ ಪೋಷಕಾಂಶ ಇರುವ ಅಹಾರವನ್ನು ಒದಗಿಸುವುದು. ಪ್ರಾಥಮಿಕ ಆರೋಗ್ಯ ಹಾಗೂ ಪ್ರಥಮ ಚಿಕಿತ್ಸಾ ಸೌಲಭ್ಯಗಳನ್ನು…

Read More

ದಾವಣಗೆರೆ : ಮಕ್ಕಳನ್ನು ಒಂಟಿಯಾಗಿ ಬಿಡುವ ಪೋಷಕರೇ ಎಚ್ಚರ, ನೀರು ತುಂಬಿದ ಪಾತ್ರೆಯಲ್ಲಿ ಮುಳುಗಿ 2 ವರ್ಷದ ಮಗು ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ನಿಬಗೂರು ಗೊಲ್ಲರಹಟ್ಟಿ ಗ್ರಾಮದಲ್ಲಿ ಮಂಗಳವಾರ ಈ ಘಟನೆ ನಡೆದಿದೆ. ಮನೆ ಹಿತ್ತಲಿನ ಬಚ್ಚಲ ಕೋಣೆಯಲ್ಲಿರುವ ನೀರು ತುಂಬಿದ ಪಾತ್ರೆಯಲ್ಲಿ ಮುಳುಗಿ ಎರಡು ವರ್ಷದ ಮಗು ಮೃತಪಟ್ಟಿದೆ. ರಾಜೇಶ್ವರಿ ಮಂಜುನಾಥ್ ದಂಪತಿಯ ಮೂರನೇ ಮಗು ವೇದಾ ಮೃತ ಹೆಣ್ಣುಮಗು. ಮನೆಯ ಹಿತ್ತಲಿನಲ್ಲಿ ಇರಿಸಿದ್ದ ನೀರಿನ ಪಾತ್ರೆಯಲ್ಲಿ ಆಟವಾಡುತ್ತಾ ಮಗು ಬಿದ್ದು ಮೃತಪಟ್ಟಿದೆ.

Read More