Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ರಾಜ್ಯದ ರೈತರಿಗೆ ಸಿಹಿಸುದ್ದಿ ಸಿಕ್ಕಿದ್ದು, ಅತಿವೃಷ್ಟಿ ಮತ್ತು ನೆರೆ ಹಾವಳಿಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ಮುಂದಿನ 30 ದಿನಗಳಲ್ಲಿ ಪರಿಹಾರ ನೀಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ರಾಜ್ಯದಲ್ಲಿ ಅತಿವೃಷ್ಟಿ ಮತ್ತು ನೆರೆ ಹಾವಳಿಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ಮುಂದಿನ 30 ದಿನಗಳಲ್ಲಿ ಬ್ಯಾಂಕ್ ಖಾತೆಗಳಿಗೆ ಪರಿಹಾರ ಹಣ ಜಮಾ ಮಾಡಲಾಗುವುದು, ಮುಂಗಾರಿನಿಂದ ಸುಮಾರು 12.54 ಲಕ್ಷ ಹೆಕ್ಟೇರ್ ಕೃಷಿ ಮತ್ತು ತೋಟಗಾರಿಕೆ ಬೆಳೆ ಹಾನಿಯಾಗಿದ್ದು, ಈ ನಷ್ಟಕ್ಕೆ ಸುಮಾರು 2000 ಕೋಟಿ ರೂ. ಪರಿಹಾರ ಪಾವತಿ ಪ್ರಕ್ರಿಯೆ ನಡೆದಿದೆ ಎಂದು ತಿಳಿಸಿದ್ದಾರೆ. ಸೆಪ್ಟೆಂಬರ್ ಅಂತ್ಯದಲ್ಲಿ ಸುರಿದ ಭಾರಿ ಮಳೆ ಮತ್ತು ಭೀಮಾ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ನೆರೆಹಾವಳಿ ಉಂಟಾಗಿ ಕಲಬುರಗಿ, ಯಾದಗಿರಿ, ವಿಜಯಪುರ, ಬೀದರ್ ಜಿಲ್ಲೆಗಳಲ್ಲಿ 7.24 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದೆ. ಹೀಗಾಗಿ ನಾಲ್ಕು ಜಿಲ್ಲೆಗಳಲ್ಲಿ ಬೆಳೆ ಹಾನಿ ಜಂಟಿ ಸಮೀಕ್ಷೆಯನ್ನು ಮತ್ತೊಮ್ಮೆ ಕೈಗೊಂಡಿದ್ದು, 10 ದಿನದಲ್ಲಿ ಪೂರ್ಣಗೊಳ್ಳಲಿದೆ ಎಂದು ಹೇಳಿದ್ದಾರೆ.
ಬೆಂಗಳೂರು : ಬಿಗ್ ಬಾಸ್ ಮನೆಗೆ ಮತ್ತೆ ಅವಕಾಶ ನೀಡಲಾಗಿದ್ದು, ಬಿಗ್ ಬಾಸ್ ಮನೆಗೆ ಎಲ್ಲಾ 17 ಸ್ಪರ್ಧಿಗಳು ಶಿಫ್ಟ್ ಬೆನ್ನಲ್ಲೇ ಕಲರ್ಸ್ ಕನ್ನಡ ವಾಹಿನಿ ಹೊಸ ಪ್ರೋಮೋ ರಿಲೀಸ್ ಮಾಡಿದೆ. ಜಾಲಿವುಡ್ ಸ್ಟುಡಿಯೋಸ್ ನ ಗೇಟ್ ಸಿ ಮಾತ್ರ ಓಪನ್ ಗೆ ಅವಕಾಶ ನೀಡಲಾಗಿದ್ದು, ಬಿಗ್ ಬಾಸ್ ಮನೆಗೆ ಸಂಪರ್ಕ ಕಲ್ಪಿಸುವ ಜಾಲಿವುಡ್ ನ ಗೇಟ್ ಸಿ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಸಮ್ಮುಖದಲ್ಲಿ ಓಪನ್ ಮಾಡಲಾಗಿದೆ. ಇದರ ಬೆನ್ನಲ್ಲೇ ಇದೀಗ ಹೊಸ ಪ್ರೋಮೋ ರಿಲೀಸ್ ಮಾಡಲಾಗಿದೆ. ಬಿಗ್ ಬಾಸ್ ಮನೆಗೆ ಮತ್ತೆ ಅವಕಾಶ ನೀಡಲಾಗಿದ್ದು, ಬಿಗ್ ಬಾಸ್ ಮನೆಗೆ ಎಲ್ಲಾ 17 ಸ್ಪರ್ಧಿಗಳು ಶಿಫ್ಟ್ ಮಾಡಲಾಗಿದೆ. ಹೀಗಾಗಿ ನಟ ಕಿಚ್ಚ ಸುದೀಪ್ ಅವರು ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಧನ್ಯವಾದ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ನಟ ಸುದೀಪ್, ಸಮಯೋಚಿತ ಬೆಂಬಲಕ್ಕಾಗಿ ನಾನು ಗೌರವಾನ್ವಿತ ಡಿ.ಕೆ.ಶಿವಕುಮಾರ್ ಸರ್ ಅವರಿಗೆ ಹೃತ್ಪೂರ್ವಕವಾಗಿ ಧನ್ಯವಾದ ಅರ್ಪಿಸುತ್ತೇನೆ. ಇತ್ತೀಚಿನ ಅವ್ಯವಸ್ಥೆ ಅಥವಾ ಗೊಂದಲಗಳಲ್ಲಿ ಬಿಗ್…
ಮಡಿಕೇರಿ : ಮಡಿಕೇರಿಯ ವಸತಿ ಶಾಲೆಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 2ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಾಟಗೇರಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದ್ದು, ವಸತಿ ಶಾಲೆಯ 2ನೇ ತರಗತಿ ವಿದ್ಯಾರ್ಥಿ ಪುಷ್ಪಕ್ ಮೃತಪಟ್ಟಿದ್ದಾನೆ. ಶಾರ್ಟ್ ಸರ್ಕ್ಯೂಟ್ ನಿಂದ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ನವದೆಹಲಿ : ಇತ್ತೀಚಿನ ದಿನಗಳಲ್ಲಿ, ಗಂಡ-ಹೆಂಡತಿಯರ ನಡುವಿನ ಜಗಳ ಪ್ರಕರಣಗಳು ನಿಯಮಿತವಾಗಿ ವರದಿಯಾಗುತ್ತಿವೆ. ದೆಹಲಿಯ ದಕ್ಷಿಣ ಜಿಲ್ಲೆಯ ಅಂಬೇಡ್ಕರ್ ನಗರ ಪ್ರದೇಶದಿಂದ ಇಂತಹ ಒಂದು ಪ್ರಕರಣ ಬಂದಿದ್ದು, ಮಲಗಿದ್ದ ಗಂಡನ ಮೇಲೆ ಹೆಂಡತಿಯೊಬ್ಬಳು ಕುದಿಯುವ ಎಣ್ಣೆ ಸುರಿದು ಬಳಿಕ ಗಾಯಕ್ಕೆ ಕೆಂಪು ಮೆಣಸಿನ ಪುಡಿ ಹಚ್ಚಿದ್ದಾಳೆ. ವಾಸ್ತವವಾಗಿ, ಹೆಂಡತಿಯೊಬ್ಬಳು ಕ್ರೌರ್ಯದ ಎಲ್ಲಾ ಮಿತಿಗಳನ್ನು ದಾಟಿ ತನ್ನ ಗಂಡ ಮಲಗಿದ್ದಾಗ ಅವನ ಮೇಲೆ ಕುದಿಯುವ ಎಣ್ಣೆಯನ್ನು ಸುರಿದಳು. ಅವಳು ಅವನ ಗಾಯಗಳಿಗೆ ಕೆಂಪು ಮೆಣಸಿನ ಪುಡಿಯನ್ನು ಸಹ ಎರಚಿದ್ದಾಳೆ. ದಾಳಿಯಲ್ಲಿ ಪತಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ, ಅವರ ಸ್ಥಿತಿ ಇನ್ನೂ ಗಂಭೀರವಾಗಿದೆ. ಬಲಿಪಶುವನ್ನು 28 ವರ್ಷದ ದಿನೇಶ್ ಕುಮಾರ್ ಎಂದು ಗುರುತಿಸಲಾಗಿದೆ, ಅವರು ಔಷಧ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಪೊಲೀಸರ ಪ್ರಕಾರ, ದಿನೇಶ್ ತನ್ನ ಪತ್ನಿ ಸಾಧನಾ ಮತ್ತು ಅವರ ಮಗಳೊಂದಿಗೆ ಮದಂಗೀರ್ನಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾರೆ. ಅಕ್ಟೋಬರ್ 2 ರಂದು ಬೆಳಗಿನ ಜಾವ 3:15 ರ ಸುಮಾರಿಗೆ ಈ ಘಟನೆ…
ಬೆಳಗಾವಿ : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ ನಡೆದಿದ್ದು, ಪತ್ನಿ ಕೊಂದು ಶವವನ್ನು ಮಂಚದೊಳಗಿಟ್ಟು ಬೆಡ್ ಮುಚ್ಚಿ ಪತಿ ಪರಾರಿ ಆಗಿದ್ದಾನೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಮಲದಿನ್ನಿ ಗ್ರಾಮದಲ್ಲಿ ಪತ್ನಿಯನ್ನು ಕೊಂದು ಪತಿ ಪರಾರಿಯಾಗಿರುವ ಘಟನೆ ನಡೆದಿದೆ. ಸಾಕ್ಷಿ ಕಂಬಾರ(20) ಕೊಲೆಯಾದ ಪತ್ನಿ. ಆಕಾಶ್ ಪರಾರಿಯಾಗಿರುವ ಪತಿ. 4 ತಿಂಗಳ ಹಿಂದೆಯಷ್ಟೇ ಆಕಾಶ್ ಮತ್ತು ಸಾಕ್ಷಿ ಕಂಬಾರ ಮದುವೆ ಆಗಿತ್ತು. ಮೂರು ದಿನದ ಹಿಂದೆ ಸಾಕ್ಷಿ ಕಂಬಾರ ಕೊಂದು ಮಂಚದೊಳಗೆ ಶವ ಬಚ್ಚಿಟ್ಟು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಆಕಾಶ್ ಪರಾರಿ ಆಗಿದ್ದಾನೆ. ಸದ್ಯ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಗೋಕಾಕ್ ಡಿವೈಎಸ್ಪಿ ಭೇಟಿ ನೀಡಿ ಪರೀಶಿಲನೆ ಮಾಡಿದ್ದಾರೆ. ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಕೆಮ್ಮಿನ ಸಿರಪ್ನಿಂದ ಮಕ್ಕಳ ಸಾವುಗಳು ಪ್ರಸ್ತುತ ಸುದ್ದಿಯಲ್ಲಿವೆ. ಏತನ್ಮಧ್ಯೆ, ಮತ್ತೊಂದು ಪ್ರಮುಖ ಆರೋಗ್ಯ ನಿರ್ಲಕ್ಷ್ಯ ಬೆಳಕಿಗೆ ಬಂದಿದೆ. ರಾಜಸ್ಥಾನದಲ್ಲಿ ಮಾತ್ರ, ಹಲವಾರು ಪ್ರಮುಖ ಕಾಯಿಲೆಗಳಿಗೆ ಔಷಧಿಗಳ ಮಾದರಿಗಳು ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾಗಿವೆ. ಆದಾಗ್ಯೂ, ಈ ಸಾವಿರಾರು ಮಾತ್ರೆಗಳು ಈಗಾಗಲೇ ಮಾರಾಟವಾಗಿವೆ. ವಿಫಲವಾದ ಔಷಧಿಗಳಲ್ಲಿ ಪ್ರತಿಜೀವಕಗಳಿಂದ ಹಿಡಿದು ಹೃದಯ ಸ್ತಂಭನದಂತಹ ಗಂಭೀರ ಕಾಯಿಲೆಗಳಿಗೆ ಮಾತ್ರೆಗಳವರೆಗೆ ಇವೆ. ಈ ಔಷಧಿಗಳನ್ನು ವ್ಯಾಪಕವಾಗಿ ಸೇವಿಸಲಾಗುತ್ತದೆ. ಇದಲ್ಲದೆ, ಅನೇಕ ಮಾದರಿಗಳಲ್ಲಿ ಗುಣಮಪಟ್ಟ ಪರೀಕ್ಷೆ ವಿಫಲಗೊಂಡಿದೆ ಎಂದು ಕಂಡುಬಂದಿದೆ. ರಾಜಸ್ಥಾನದಲ್ಲಿ ಈ ಔಷಧಿಗಳು ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾಗಿವೆ ಪ್ರತಿಜೀವಕಗಳು: ಆರು ಬ್ಯಾಚ್ಗಳ ಅಮೋಕ್ಸಿಸಿಲಿನ್, ಕ್ಲಾವುಲಾನಿಕ್ ಆಮ್ಲ ಮಾತ್ರೆಗಳು, ಸಿಪ್ರೊಫ್ಲೋಕ್ಸಾಸಿನ್, ಸೆಫ್ಪೊಡಾಕ್ಸಿಮ್ ಮತ್ತು ಸೆಫ್ಟ್ರಿಯಾಕ್ಸೋನ್ ಚುಚ್ಚುಮದ್ದುಗಳು ಪರೀಕ್ಷೆಯಲ್ಲಿ ವಿಫಲವಾಗಿವೆ. ಪರೀಕ್ಷೆಗೆ ಮೊದಲು 100,000 ಕ್ಕೂ ಹೆಚ್ಚು ಮೆಡಿರಿಚ್ ಲಿಮಿಟೆಡ್ ಉತ್ಪನ್ನಗಳು ಮಾರಾಟವಾಗಿದ್ದವು. ಸ್ಟೀರಾಯ್ಡ್ಗಳು: ಮೂರು ಬ್ಯಾಚ್ಗಳ ಬೆಟಾಮೆಥಾಸೊನ್ ಪರೀಕ್ಷೆಯಲ್ಲಿ ವಿಫಲವಾಗಿದೆ. ವರದಿ ಡಿಸೆಂಬರ್ 5 ರಂದು ಬಂದಿತು. ಆ ಹೊತ್ತಿಗೆ, 30,000 ಮೆಡಿವೆಲ್ ಬಯೋಟೆಕ್ ಉತ್ಪನ್ನಗಳು ಮಾರಾಟವಾಗಿದ್ದವು. ಅಲರ್ಜಿ ವಿರೋಧಿಗಳು:…
ಚೆನ್ನೈ : ಮಧ್ಯಪ್ರದೇಶದ ಛಿಂದ್ವಾರಾದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಹಲವಾರು ಮಕ್ಕಳು ಸಾವನ್ನಪ್ಪಿದ ಪ್ರಕರಣದಲ್ಲಿ ಮಧ್ಯಪ್ರದೇಶ ಪೊಲೀಸರು ಪ್ರಮುಖ ಕ್ರಮ ಕೈಗೊಂಡಿದ್ದಾರೆ. ಚೆನ್ನೈನಲ್ಲಿ ಕೆಮ್ಮಿನ ಸಿರಪ್ ಕಂಪನಿಯ ಮಾಲೀಕರನ್ನು ಪೊಲೀಸರು ಬಂಧಿಸಿದ್ದಾರೆ. ಔಷಧ ಮತ್ತು ಸೌಂದರ್ಯವರ್ಧಕಗಳ ಕಾಯ್ದೆ 1940 ರ ಸೆಕ್ಷನ್ 17 ಎ ಉಲ್ಲಂಘನೆಗಾಗಿ ಶಿಕ್ಷೆಗೊಳಗಾದ ನಂತರ, ತಯಾರಕರಿಗೆ ಕಾಯ್ದೆಯ ಸೆಕ್ಷನ್ 27 (ಎ) ಅಡಿಯಲ್ಲಿ ಕನಿಷ್ಠ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುವುದು, ಇದು ಜೀವಾವಧಿ ಶಿಕ್ಷೆ ಮತ್ತು 10 ಲಕ್ಷ ರೂಪಾಯಿಗಿಂತ ಕಡಿಮೆಯಿಲ್ಲದ ದಂಡವನ್ನು ವಿಧಿಸಬಹುದು ಎಂದು ಅಧಿಕಾರಿ ತಿಳಿಸಿದ್ದಾರೆ. ತಂಡವು 39 ನಿರ್ಣಾಯಕ ಅವಲೋಕನಗಳು ಮತ್ತು 325 ಪ್ರಮುಖ ಅವಲೋಕನಗಳನ್ನು ಗಮನಿಸಿದೆ ಎಂದು ತಮಿಳುನಾಡು ಔಷಧ ನಿಯಂತ್ರಣ ವಿಭಾಗದ ಉಪ ನಿರ್ದೇಶಕ ಎಸ್ ಗುರುಭಾರತಿ ಅವರು ಅಕ್ಟೋಬರ್ 1 ಮತ್ತು 2 ರಂದು ಉತ್ಪಾದನಾ ಘಟಕದಲ್ಲಿ ನಡೆಸಿದ ತನಿಖೆಯಲ್ಲಿ ಔಷಧ ನಿಯಮಗಳು, 1945 ರ ಶೆಡ್ಯೂಲ್ ಎಂ ಮತ್ತು ಎಲ್ 1 ರ ಅಡಿಯಲ್ಲಿ ಹಲವಾರು…
ಬೆಂಗಳೂರು : ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರ ಬೆಂಗಾವಲು ವಾಹನ ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಬಾಪೂಜಿನಗರದ ಮನೆಯಲ್ಲಿ ಶರಣಗೌಡ ರಾಮಗೋಳ್ (33) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಶರಣಗೌಡ ಅವರಿಗೆ ಈಗಾಗಲೇ ಮದುವೆಯಾಗಿದ್ದು ಇಬ್ಬರು ಮಕ್ಕಳು ಸಹ ಇದ್ದು, ಪತ್ನಿ ಶೈಲಶ್ರೀ ಅವರು ಮಾಗಡಿ ಸಂಚಾರ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿದ್ದಾರೆ. ಇನ್ನು ಶರಣಗೌಡ ಸಹ ಪೊಲೀಸ್ ಬೆಂಗಾವಲು ವಾಹನ ಚಾಲಕರಾಗಿದ್ದು, ಕಳೆದ ಐದು ವರ್ಷಗಳಿಂದ ಅಶೋಕ್ ಅವರ ಬೆಂಗಾವಲು ವಾಹನ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಆರ್ ಅಶೋಕ್ ಸಹ ವಿಕ್ಟೋರಿಯಾ ಆಸ್ಪತ್ರೆಯತ್ತ ದೌಡಾಯಿಸಿದ್ದು, ಪೊಲೀಸ್ ತನಿಖೆಯಲ್ಲಿ ಶರಣಗೌಡ ಆತ್ಮಹತ್ಯೆಗೆ ಕಾರಣ ತಿಳಿದುಬರಬೇಕಿದೆ.
ಬೆಂಗಳೂರು :’ನನ್ನ ಗುರುತು’ ಅಭಿಯಾನದ ಮೂಲಕ ಇದೀಗ ನಿಮ್ಮ ಗುರುತನ್ನು ಸುರಕ್ಷಿತಗೊಳಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಸಜ್ಜಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯಗಳ ಜನತೆಗೆ ಸರ್ಕಾರವು ವಿವಿಧ ಯೋಜನೆಗಳ ಅಡಿಯಲ್ಲಿ ಹತ್ತು ಹಲವಾರು ಸೌಲಭ್ಯಗಳು ಮತ್ತು ಸವಲತ್ತುಗಳನ್ನು ಒದಗಿಸುತ್ತಿದೆ. ಆದರೆ ಕೆಲವೊಮ್ಮೆ ಈ ಸಮುದಾಯದ ಜನತೆಗೆ ಅರಿವಿಲ್ಲದೆ ಅಥವಾ ಸೂಕ್ತ ದಾಖಲೆಗಳ ಲಭ್ಯತೆಯಿಲ್ಲದೆ ಇಂತಹ ಸಾಕಷ್ಟು ಸೌಲಭ್ಯಗಳಿಂದ ವಂಚಿತರಾಗುವ ಸ್ಥಿತಿ ಎದುರಾಗುತ್ತದೆ. ಈ ಸಮಸ್ಯೆಯನ್ನು ಪರಿಹರಿಸಿ, ಪರಿಶಿಷ್ಟ ಜಾತಿ ಮತ್ತು ಪಂಗಡದ ಜನತೆಗೆ ಅವಶ್ಯವಿರುವ 13 ಮೂಲ ದಾಖಲೆಗಳನ್ನು ಪರಿಶೀಲಿಸಿ, ಅಗತ್ಯವಿದ್ದಲ್ಲಿ ತಿದ್ದುಪಡಿ/ನವೀಕರಣಗೊಳಿಸಿ, ದಾಖಲೆ ಇಲ್ಲದವರನ್ನು ಗುರುತಿಸಿ ನೂತನ ದಾಖಲೆಗಳನ್ನು ಒದಗಿಸುವ ಸಲುವಾಗಿ ನಮ್ಮ ಇಲಾಖೆಯು ಸಮಾಜ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ‘ನನ್ನ ಗುರುತು’ ಎಂಬ ಅಭಿಯಾನ ಆರಂಭಿಸಿದೆ. ದಾಖಲೆಗಳು ಕಳೆದು ಹೋಗಿದ್ದಲ್ಲಿ ಅಥವಾ ಹಾನಿಗೊಳಗಾಗಿದ್ದಲ್ಲಿ, ಅಂತಹ ಮೂಲ ದಾಖಲೆಗಳನ್ನು ಹೊಂದಿರದವರನ್ನು ಗುರುತಿಸಿ, ಅವಶ್ಯಕ ದಾಖಲೆಗಳನ್ನು ಒದಗಿಸುವುದು ಹಾಗೂ ಈ ದಾಖಲೆಗಳನ್ನು ಡಿಜಿಲಾಕರ್ ಆಪ್ ನಲ್ಲಿ ಸುರಕ್ಷಿತವಾಗಿರಿಸುವ…
ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ 2025-26ನೇ ಸಾಲಿಗೆ ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಲ್ಲಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರು ಸ್ವಯಂ ಉದ್ಯೋಗ ಕೈಗೊಳ್ಳಲು ಮಂಡಳಿಯ ವತಿಯಿಂದ ನೇರವಾಗಿ ಸಾಲ, ಸಹಾಯಧನ ಮಂಜೂರು ಮಾಡಲಾಗುವುದು. ಹಲವು ವೃತ್ತಿಗಳಾದ ಹಸು ಸಾಕಾಣಿಕೆ, ಗುಡಿಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ, ಟ್ಯಾಕ್ಸಿ ಇತ್ಯಾದಿ ವ್ಯಾಪಾರ ವಹಿವಾಟುಗಳನ್ನು ಕೈಗೊಳ್ಳಲು ಕನಿಷ್ಠ ರೂ.1 ಲಕ್ಷ ಘಟಕವೆಚ್ಚಕ್ಕೆ ರೂ.20,000/- ಗಳ ಸಹಾಯಧನ ಹಾಗೂ ಗರಿಷ್ಠ ರೂ.2 ಲಕ್ಷಗಳ ಘಟಕವೆಚ್ಚಕ್ಕೆ ರೂ. 40,000/- ಗಳ ಸಹಾಯಧನ ನೀಡಿ ಆರ್ಥಿಕ ನೆರವು ಒದಗಿಸಲಾಗುವುದು. ಉಳಿಕೆ ಸಾಲದ ಮೊತ್ತಕ್ಕೆ ಶೇ.4 ರಂತೆ ವಾರ್ಷಿಕ ಬಡ್ಡಿ ವಿಧಿಸಲಾಗುವುದು. ಅರ್ಜಿ ಸಲ್ಲಿಸುವ ಫಲಾನುಭವಿಗಳು ಬ್ರಾಹ್ಮಣ ಸಮುದಾಯದ ಸಾಮಾನ್ಯ ವರ್ಗಕ್ಕೆ ಸೇರಿದವರಾಗಿದ್ದು, ಚಾಲ್ತಿಯಲ್ಲಿರುವ ಆರ್ಥಿಕವಾಗಿ ಹಿಂದುಳಿದ ಪ್ರಮಾಣಪತ್ರ (ಇಡಬ್ಲೂಎಸ್ ಪ್ರಮಾಣ ಪತ್ರ) ಹೊಂದಿರಬೇಕು. ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. 18 ರಿಂದ 65 ವರ್ಷದ ಒಳಗಿನವರಾಗಿರಬೇಕು. ಒಂದು…














