Subscribe to Updates
Get the latest creative news from FooBar about art, design and business.
Author: kannadanewsnow57
ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸುವುದೇ ನಮ್ಮ ಸಮಿತಿಯ ಮುಖ್ಯ ಉದ್ದೇಶವಾಗಿದೆ. ಅದರಲ್ಲೂ ಗೃಹಲಕ್ಷ್ಮಿ ಯೋಜನೆಯಡಿ ಧಾರವಾಡ ತಾಲೂಕಿನ ಪ್ರತಿ ಅರ್ಹ ಯಜಮಾನಿಯ ಖಾತೆಗೆ ಇದುವರೆಗೆ ತಲಾ ರೂ. 58,000 ಗಳಷ್ಟು ಹಣ ನೇರವಾಗಿ ಜಮೆಯಾಗಿದೆ ಎಂದು ಧಾರವಾಡ ತಾಲೂಕ ಗ್ಯಾರಂಟಿ ಸಮಿತಿ ಅಧ್ಯಕ್ಷ ಅರವಿಂದ ಏಗನಗೌಡರ ತಿಳಿಸಿದರು. ಅವರು ಧಾರವಾಡ ತಾಲೂಕ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ಗ್ಯಾರಂಟಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು. ಈಗಾಗಲೇ ಗ್ರಾಮ ಪಂಚಾಯತಿ ಮಟ್ಟದಲ್ಲಿ ಸಭೆಗಳನ್ನು ನಡೆಸಿ, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸುವ ಮೂಲಕ ಯೋಜನೆಗಳ ಅನುμÁ್ಠನದಲ್ಲಿ ಎದುರಾಗುವ ಸಮಸ್ಯೆಗಳಿಗೆ ತಕ್ಷಣ ಪರಿಹಾರ ನೀಡಲು ಶ್ರಮಿಸುತ್ತಿದ್ದೇವೆ ಎಂದು ಅವರು ಹೇಳಿದರು. ವಿವಿಧ ಇಲಾಖೆಗಳ ಪ್ರಗತಿ ವರದಿ: ಗೃಹ ಲಕ್ಷ್ಮೀ ಯೋಜನೆಯಡಿ ತಾಲೂಕಿನಲ್ಲಿ ಒಟ್ಟು 56,943 ಫಲಾನುಭವಿಗಳು ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಇದುವರೆಗೆ ಯಶಸ್ವಿಯಾಗಿ 29 ಕಂತುಗಳು ಪೂರ್ಣಗೊಂಡಿದ್ದು, ಒಟ್ಟು ರೂ. 6,10,91,92,000 ಹಣವನ್ನು ಫಲಾನುಭವಿಗಳ ಖಾತೆಗೆ…
ಬೆಂಗಳೂರು: 2026-27ನೇ ಸಾಲಿನ ಶಾಲಾ ಶೈಕ್ಷಣಿಕ ವರ್ಷದ ದಾಖಲಾತಿ ಪ್ರಕ್ರಿಯೆಗಳು ಆರಂಭವಾಗುತ್ತಿದ್ದು, ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ವಯೋಮಿತಿಯ ಕುರಿತಾದ ಈ ಹೊಸ ಮಾರ್ಗಸೂಚಿಯನ್ನು ಗಮನಿಸುವುದು ಅತ್ಯಗತ್ಯವಾಗಿದೆ. 01 ಜೂನ್ 2026ಕ್ಕೆ ಅನ್ವಯವಾಗುವಂತೆ ವಿವಿಧ ತರಗತಿಗಳಿಗೆ ನಿಗದಿಪಡಿಸಲಾದ ಕನಿಷ್ಠ ವಯೋಮಿತಿಯ ವಿವರಗಳು ಈ ಕೆಳಗಿನಂತಿವೆ: ತರಗತಿವಾರು ವಯೋಮಿತಿ ವಿವರ: ಎಲ್.ಕೆ.ಜಿ (LKG): ಮಗುವಿಗೆ ಕನಿಷ್ಠ 4 ವರ್ಷ ಪೂರ್ಣಗೊಂಡಿರಬೇಕು. ಯು.ಕೆ.ಜಿ (UKG): ಮಗುವಿಗೆ ಕನಿಷ್ಠ 5 ವರ್ಷ ಪೂರ್ಣಗೊಂಡಿರಬೇಕು. 1ನೇ ತರಗತಿ: ಒಂದನೇ ತರಗತಿಗೆ ಪ್ರವೇಶ ಪಡೆಯಲು ಮಗುವಿಗೆ ಕನಿಷ್ಠ 6 ವರ್ಷ ತುಂಬಿರಬೇಕು. (ಗರಿಷ್ಠ 8 ವರ್ಷಗಳವರೆಗೆ ಅವಕಾಶವಿರುತ್ತದೆ). ಹುಟ್ಟಿದ ವರ್ಷ ಮತ್ತು ತಿಂಗಳ ಆಧಾರದ ಮೇಲೆ ವಯಸ್ಸಿನ ಲೆಕ್ಕಾಚಾರ: ದಾಖಲಾತಿಯ ಸಮಯದಲ್ಲಿ ಗೊಂದಲವನ್ನು ತಪ್ಪಿಸಲು, ಮಗು ಹುಟ್ಟಿದ ವರ್ಷ ಮತ್ತು ತಿಂಗಳಿಗನುಗುಣವಾಗಿ 01-06-2026ಕ್ಕೆ ಎಷ್ಟು ವಯಸ್ಸಾಗುತ್ತದೆ ಎಂಬುದನ್ನು ಈ ಕೆಳಗಿನ ಪಟ್ಟಿಯಲ್ಲಿ ನೋಡಬಹುದು: ಹುಟ್ಟಿದ ತಿಂಗಳು 2021ರಲ್ಲಿ ಜನಿಸಿದವರಿಗೆ 2020ರಲ್ಲಿ ಜನಿಸಿದವರಿಗೆ 2019ರಲ್ಲಿ ಜನಿಸಿದವರಿಗೆ 2018ರಲ್ಲಿ…
ಬೆಂಗಳೂರು: ಅಹಿಂಸೆಯ ಹರಿಕಾರ ಗೌತಮ ಬುದ್ಧನ ಜನ್ಮದಿನವಾದ ‘ಬುದ್ಧ ಪೂರ್ಣಿಮಾ’ ಹಿನ್ನೆಲೆಯಲ್ಲಿ ನಾಳೆ (ಮೇ 1, ಶುಕ್ರವಾರ) ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಆದೇಶ ಹೊರಡಿಸಿದೆ. ಹೌದು. ಬುದ್ಧ ಪೂರ್ಣಿಮೆ ಹಿನ್ನೆಲೆಯಲ್ಲಿ ಮೇ.1 ರಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ (BBMP ವ್ಯಾಪ್ತಿ) ವ್ಯಾಪ್ತಿಯಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಮತ್ತು ಮಳಿಗೆಗಳಲ್ಲಿ ಮಾಂಸ ಮಾರಾಟಕ್ಕೆ ಕಟ್ಟುನಿಟ್ಟಿನ ತಡೆ. ಬುದ್ಧ ಪೂರ್ಣಿಮೆಯ ಪವಿತ್ರ ದಿನದಂದು ಶಾಂತಿ ಮತ್ತು ಅಹಿಂಸೆಯನ್ನು ಪಾಲಿಸುವ ಉದ್ದೇಶದಿಂದ ಪ್ರತಿ ವರ್ಷದಂತೆ ಈ ಬಾರಿಯೂ ಈ ನಿಯಮವನ್ನು ಜಾರಿಗೆ ತರಲಾಗಿದೆ. ಈ ಕುರಿತು ಪಶುಪಾಲನಾ ವಿಭಾಗದ ಉಪ ನಿರ್ದೇಶಕರು ಅಧಿಕೃತ ಮಾಹಿತಿ ನೀಡಿದ್ದು, “ಶುಕ್ರವಾರದಂದು ನಗರದ ಎಲ್ಲಾ ಅಧಿಕೃತ ಕಸಾಯಿಖಾನೆಗಳು ಬಂದ್ ಆಗಿರಲಿವೆ. ಚಿಲ್ಲರೆ ಮಾಂಸ ಮಾರಾಟ ಮಳಿಗೆಗಳಲ್ಲಿಯೂ ಯಾವುದೇ ರೀತಿಯ ವ್ಯಾಪಾರ ಮಾಡುವಂತಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ. ಎಚ್ಚರಿಕೆ: ಪ್ರಾಧಿಕಾರದ ಈ…
ಬೆಂಗಳೂರು: ರಾಜ್ಯದ ನಿರುದ್ಯೋಗಿ ಯುವಜನತೆಗೆ ಸರ್ಕಾರಿ ಉದ್ಯೋಗ ಪಡೆಯಲು ಸುವರ್ಣಾವಕಾಶವೊಂದು ಒದಗಿಬಂದಿದೆ. ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ಖಾಲಿ ಇರುವ 1,828 ವಿವಿಧ ವೃಂದದ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಹುದ್ದೆಗಳ ವಿವರ ಇಲಾಖೆಯು ಒಟ್ಟು 1,828 ಹುದ್ದೆಗಳನ್ನು ಭರ್ತಿ ಮಾಡುತ್ತಿದ್ದು, ಪ್ರಮುಖವಾಗಿ ಈ ಕೆಳಗಿನ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ: ಅಗ್ನಿಶಾಮಕ (Fireman) ಅಗ್ನಿಶಾಮಕ ಚಾಲಕ (Driver) ಚಾಲಕ ಮೆಕ್ಯಾನಿಕ್ (Driver Mechanic) ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ ವಿದ್ಯಾರ್ಹತೆ: ಅಗ್ನಿಶಾಮಕ ಹುದ್ದೆಗೆ ಎಸ್ಎಸ್ಎಲ್ಸಿ (10ನೇ ತರಗತಿ) ಉತ್ತೀರ್ಣರಾಗಿರಬೇಕು. ಚಾಲಕ ಮತ್ತು ಮೆಕ್ಯಾನಿಕ್ ಹುದ್ದೆಗಳಿಗೆ ಎಸ್ಎಸ್ಎಲ್ಸಿ ಜೊತೆಗೆ ಭಾರೀ ವಾಹನ ಚಾಲನಾ ಪರವಾನಗಿ (HTV License) ಮತ್ತು ಕನಿಷ್ಠ 2 ವರ್ಷಗಳ ಅನುಭವ ಕಡ್ಡಾಯ. ವಯೋಮಿತಿ: ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ತುಂಬಿರಬೇಕು. ಸಾಮಾನ್ಯ ವರ್ಗ (General): 25 ವರ್ಷ ಹಿಂದುಳಿದ ವರ್ಗಗಳು (OBC): 27 ವರ್ಷ SC/ST ವರ್ಗ: 30 ವರ್ಷ ಆಯ್ಕೆ ಪ್ರಕ್ರಿಯೆ…
ಪ್ರಯಾಗ್ರಾಜ್: ಹೆಂಡತಿಯು ಸುಶಿಕ್ಷಿತಳಾಗಿದ್ದು, ಸ್ವತಃ ಸಂಪಾದಿಸುವ ಸಾಮರ್ಥ್ಯ ಹೊಂದಿದ್ದರೂ ಸಹ, ಕೆಲಸ ಮಾಡದಿರುವ ನಿರ್ಧಾರ ಕೈಗೊಂಡು ಪತಿಯ ಮೇಲೆ ಆರ್ಥಿಕ ಹೊರೆ ಹಾಕುವುದು ಸರಿಯಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ಮೂಲಕ ವೃತ್ತಿಯಲ್ಲಿ ವೈದ್ಯೆಯಾಗಿರುವ ಮಹಿಳೆಯೊಬ್ಬರ ಜೀವನಾಂಶದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಪ್ರಕರಣದ ಹಿನ್ನೆಲೆ: ಪ್ರಯಾಗ್ರಾಜ್ ನಿವಾಸಿಯಾದ ಪತಿ ನ್ಯೂರೋ ಸರ್ಜನ್ (ನರರೋಗ ತಜ್ಞ) ಆಗಿದ್ದರೆ, ಪತ್ನಿ ಗೈನಕಾಲಜಿಸ್ಟ್ (ಸ್ತ್ರೀರೋಗ ತಜ್ಞೆ) ಆಗಿದ್ದಾರೆ. ಪತ್ನಿಯು ಹಿಂದೂ ವಿವಾಹ ಕಾಯ್ದೆಯ ಸೆಕ್ಷನ್ 24 ಮತ್ತು 26 ರ ಅಡಿಯಲ್ಲಿ ತನಗೆ ಮತ್ತು ತನ್ನ ಮೂವರು ಮಕ್ಕಳಿಗೆ ಜೀವನಾಂಶ ನೀಡುವಂತೆ ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಈ ಹಿಂದೆ ಕೌಟುಂಬಿಕ ನ್ಯಾಯಾಲಯವು ಮಕ್ಕಳಿಗೆ ಪ್ರತಿ ತಿಂಗಳು 60,000 ರೂಪಾಯಿ ಜೀವನಾಂಶ ನೀಡುವಂತೆ ಪತಿಗೆ ಆದೇಶಿಸಿತ್ತು. ಆದರೆ, ಪತ್ನಿ ಸುಶಿಕ್ಷಿತೆ ಮತ್ತು ವೃತ್ತಿಪರ ವೈದ್ಯೆಯಾಗಿರುವುದರಿಂದ ಆಕೆಗೆ ಜೀವನಾಂಶ ನೀಡಲು ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಪತ್ನಿ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಹೈಕೋರ್ಟ್ ನೀಡಿದ ಪ್ರಮುಖ ಅಂಶಗಳು: ನ್ಯಾಯಮೂರ್ತಿಗಳಾದ…
ಬೆಂಗಳೂರು: ಜಾಗತಿಕ ಆರ್ಥಿಕ ಹಿಂಜರಿತ ಮತ್ತು ಪ್ರಮುಖ ಐಟಿ ಕಂಪನಿಗಳಲ್ಲಿ ನಡೆಯುತ್ತಿರುವ ಉದ್ಯೋಗ ಕಡಿತದ (Layoffs) ನಡುವೆಯೇ, ಟೆಕ್ ದೈತ್ಯ ‘ಕಾಗ್ನಿಜೆಂಟ್’ (Cognizant) ಭಾರತದ ಉದ್ಯೋಗಾಕಾಂಕ್ಷಿಗಳಲ್ಲಿ ಹೊಸ ಭರವಸೆ ಮೂಡಿಸಿದೆ. ಇತರ ಕಂಪನಿಗಳು ಉದ್ಯೋಗಿಗಳ ಸಂಖ್ಯೆಯನ್ನು ತಗ್ಗಿಸುತ್ತಿದ್ದರೆ, ಕಾಗ್ನಿಜೆಂಟ್ ಮಾತ್ರ ಹೊಸ ನೇಮಕಾತಿಯಲ್ಲಿ ದಾಖಲೆ ಬರೆಯುತ್ತಿದೆ. 2026ನೇ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದ (Q1) ಫಲಿತಾಂಶವನ್ನು ಪ್ರಕಟಿಸಿರುವ ಕಂಪನಿಯು ಆರ್ಥಿಕವಾಗಿ ಸದೃಢ ಪ್ರದರ್ಶನ ನೀಡಿದೆ: ಆದಾಯ: ಶೇ. 5.8 ರಷ್ಟು ಏರಿಕೆ ಕಂಡು 5.4 ಬಿಲಿಯನ್ ಡಾಲರ್ (ಸುಮಾರು 51,200 ಕೋಟಿ ರೂ.) ತಲುಪಿದೆ. ನೇಮಕಾತಿ ವೇಗ: ಕೇವಲ ಒಂದು ತ್ರೈಮಾಸಿಕದಲ್ಲಿ 6,000 ಹೊಸ ಉದ್ಯೋಗಿಗಳನ್ನು ನೇಮಿಸಿಕೊಳ್ಳಲಾಗಿದೆ. ಒಟ್ಟು ಸಿಬ್ಬಂದಿ: ಕಂಪನಿಯ ಒಟ್ಟು ಉದ್ಯೋಗಿಗಳ ಸಂಖ್ಯೆ ಈಗ 3,57,600ಕ್ಕೆ ಏರಿಕೆಯಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ 21,300 ಹೊಸ ಉದ್ಯೋಗಿಗಳು ಸೇರ್ಪಡೆಯಾಗಿದ್ದಾರೆ. ಯಾವ ವಲಯದಲ್ಲಿ ಎಷ್ಟು ಬೆಳವಣಿಗೆ? ಕಂಪನಿಯು ವಿವಿಧ ವಲಯಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದೆ: ಫೈನಾನ್ಶಿಯಲ್ ಸರ್ವಿಸ್: ಶೇ. 12.4ರಷ್ಟು ಗರಿಷ್ಠ…
ಬೆಂಗಳೂರು: ರಾಜಧಾನಿಯಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ರಣಮಳೆಗೆ ಮತ್ತೊಂದು ಬಲಿಯಾಗಿದೆ. ಮೈಸೂರು ರಸ್ತೆಯ ಕಸ್ತೂರಿಬಾಯಿ ನಗರದಲ್ಲಿ ಗಾಳಿ ಮಳೆಗೆ ಗೋಡೌನ್ನ ಸಿಮೆಂಟ್ ಶೀಟ್ಗಳು ಹಾರಿ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ದುರ್ಮರಣಕ್ಕೀಡಾಗಿದ್ದಾರೆ. ಘಟನೆಯ ವಿವರ: ಮೈಸೂರು ರಸ್ತೆ ಸಮೀಪದ ಕಸ್ತೂರಿಬಾಯಿ ನಗರದಲ್ಲಿ ಈ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಮಂಜು (35) ಎಂದು ಗುರುತಿಸಲಾಗಿದೆ. ಭಾರಿ ಗಾಳಿ ಮಳೆ ಬರುತ್ತಿದ್ದ ಸಮಯದಲ್ಲಿ ಮಂಜು ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಮನೆಯಲ್ಲಿದ್ದರು. ಈ ವೇಳೆ ಪಕ್ಕದಲ್ಲಿದ್ದ ಗೋಡೌನ್ನ ಸಿಮೆಂಟ್ ಶೀಟ್ಗಳು ಗಾಳಿಯ ವೇಗಕ್ಕೆ ಹಾರಿ ಬಂದು ಇವರ ಮನೆಯ ಮೇಲೆ ಬಿದ್ದಿವೆ. ಕುಟುಂಬದವರ ಕಣ್ಣೆದುರೇ ದುರಂತ: ಮನೆಯೊಳಗೆ ಸುರಕ್ಷಿತವಾಗಿದ್ದೇವೆ ಎಂದು ಭಾವಿಸಿದ್ದ ಕುಟುಂಬಕ್ಕೆ ಈ ಘಟನೆ ಬರಸಿಡಿಲು ಬಡಿದಂತಾಗಿದೆ. ಮನೆಯವರ ಕಣ್ಣೆದುರೇ ಶೀಟ್ಗಳು ಬಿದ್ದಿದ್ದರಿಂದ ಮಂಜು ಅವರು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಬೆಂಗಳೂರಲ್ಲಿ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು ಮೂವರು ಮಕ್ಕಳು ಸೇರಿ 7 ಮಂದಿ ಬಲಿ ರಾಜಧಾನಿಯಲ್ಲಿ…
ಬೆಂಗಳೂರು: ಬಿಸಿಲ ಬೇಗೆಯಿಂದ ಕಂಗಾಲಾಗಿರುವ ರಾಜ್ಯದ ಜನತೆಗೆ ಹವಾಮಾನ ಇಲಾಖೆಯು ತಂಪಾದ ಸುದ್ದಿಯೊಂದನ್ನು ನೀಡಿದೆ. ಏಪ್ರಿಲ್ ಅಂತ್ಯ ಹಾಗೂ ಮೇ ಮೊದಲ ವಾರದಲ್ಲಿ ಕರ್ನಾಟಕದ ದಕ್ಷಿಣ ಒಳನಾಡಿನ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಈ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಮೇ 1 ರವರೆಗೆ ಮಳೆ ಅಬ್ಬರ ಭಾರತೀಯ ಹವಾಮಾನ ಇಲಾಖೆ (IMD) ವರದಿಯ ಪ್ರಕಾರ, ಏಪ್ರಿಲ್ 30 ಮತ್ತು ಮೇ 1 ರಂದು ಮಳೆಯ ಅಬ್ಬರ ಜೋರಾಗಿರಲಿದೆ. ಈ ದಿನಗಳಲ್ಲಿ ಸುಮಾರು 64.5mm ನಿಂದ 115.5mm ವರೆಗೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಮಳೆಯ ಜೊತೆಗೆ ಗಂಟೆಗೆ 30 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯೂ ಇರುವುದರಿಂದ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಮಳೆ ಮುನ್ಸೂಚನೆ ಇರುವ ಜಿಲ್ಲೆಗಳು: ದಕ್ಷಿಣ ಒಳನಾಡಿನ ಈ ಕೆಳಗಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ಮೈಸೂರು ಹಾಗೂ ಮಂಡ್ಯ, ಚಾಮರಾಜನಗರ, ಹಾಸನ, ಕೊಡಗು, ರಾಮನಗರ…
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಭೀಕರ ದುರಂತವೊಂದು ಸಂಭವಿಸಿದೆ. ಶಿವಾಜಿನಗರದ ಬೌರಿಂಗ್ ಆಸ್ಪತ್ರೆ ಬಳಿ ಹಳೆಯ ಕಾಂಪೌಂಡ್ ಗೋಡೆಯೊಂದು ಕುಸಿದು ಬಿದ್ದ ಪರಿಣಾಮ ಏಳು ಮಂದಿ ದುರ್ಮರಣಕ್ಕೀಡಾಗಿದ್ದಾರೆ. ದುರಂತದ ವಿವರ: ಸಂಜೆ ಸುರಿದ ಧಾರಾಕಾರ ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ದಿಢೀರನೆ ಕುಸಿದಿದೆ. ಮಳೆಗೆ ಆಶ್ರಯ ಪಡೆಯುತ್ತಿದ್ದವರು ಮತ್ತು ಹತ್ತಿರದಲ್ಲಿದ್ದವರು ಗೋಡೆಯ ಅವಶೇಷಗಳಡಿ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ. ಮೃತಪಟ್ಟವರಲ್ಲಿ ಐದು ವರ್ಷದ ಮಗು ಕೂಡ ಸೇರಿರುವುದು ದುರಂತದ ತೀವ್ರತೆಯನ್ನು ಹೆಚ್ಚಿಸಿದೆ. ಮೃತರ ಪಟ್ಟಿ: ತಬೀನ್ ತಾಜ್ (47 ವರ್ಷ) ಮುಬಿನ್ ತಾಜ್ (49 ವರ್ಷ) ಮಾಯ (51 ವರ್ಷ) ಸಾಜಿದ್ (20 ವರ್ಷ) ಅಜು (35 ವರ್ಷ) ಪ್ರೀತಿ (5 ವರ್ಷ) ಸಿಜಿ (47 ವರ್ಷ) ಸ್ಥಳಕ್ಕೆ ಸಿಎಂ ಭೇಟಿ – ಅಧಿಕಾರಿಗಳಿಗೆ ತರಾಟೆ: ಘಟನಾ ಸ್ಥಳಕ್ಕೆ ತಡರಾತ್ರಿ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಸ್ಥಿತಿಯನ್ನು ಪರಿಶೀಲಿಸಿದರು. ಈ ವೇಳೆ ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ…
ಬೆಂಗಳೂರು: ರಾಜ್ಯದ ಗ್ರಾಮೀಣ ಭಾಗದ ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರ ಮಹತ್ವದ ಸುಪರಿತಿ ನೀಡಿದೆ. ಇನ್ನು ಮುಂದೆ ನಮೂನೆ-11ಬಿ (Form-11B) ಖಾತೆಗಳನ್ನು ನಮೂನೆ-11ಎ (Form-11A) ಗಳಾಗಿ ಪರಿವರ್ತಿಸಿಕೊಳ್ಳಲು ಗ್ರಾಮ ಪಂಚಾಯತಿ ಹಂತದಲ್ಲೇ ಅವಕಾಶ ಕಲ್ಪಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಇ-ಸ್ವತ್ತು 2.0 ತಂತ್ರಾಂಶದಲ್ಲಿ ಪ್ರಮುಖ ಬದಲಾವಣೆಗಳು: ಸಾರ್ವಜನಿಕರು ಇ-ಸ್ವತ್ತು ತಂತ್ರಾಂಶದಲ್ಲಿ ಎದುರಿಸುತ್ತಿದ್ದ ತಾಂತ್ರಿಕ ಸಮಸ್ಯೆಗಳನ್ನು ಮನಗಂಡು ಸರ್ಕಾರ ಹಲವು ಸುಧಾರಣೆಗಳನ್ನು ತಂದಿದೆ. ಅವುಗಳ ಪ್ರಮುಖ ಅಂಶಗಳು ಇಲ್ಲಿವೆ: ಖಾತೆ ಪರಿವರ್ತನೆ: 11ಬಿ ಖಾತೆಗಳನ್ನು ಸುಲಭವಾಗಿ 11ಎ ಖಾತೆಗಳನ್ನಾಗಿ ಬದಲಾಯಿಸಲು ಈಗ ಪಂಚಾಯತಿ ಮಟ್ಟದಲ್ಲೇ ಅವಕಾಶವಿದೆ. ಹೊಸ ಬಡಾವಣೆ ಹಾಗೂ ಅಪಾರ್ಟ್ಮೆಂಟ್: ಹೊಸ ಲೇಔಟ್ಗಳು ಮತ್ತು ಬಹುಮಹಡಿ ಕಟ್ಟಡಗಳ (ಅಪಾರ್ಟ್ಮೆಂಟ್) ಖಾತೆಗಾಗಿ ಅರ್ಜಿ ಸಲ್ಲಿಸಲು ಇನ್ನು ಮುಂದೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲೇ ಅವಕಾಶ ನೀಡಲಾಗಿದೆ. ವಿಸ್ತೀರ್ಣ ನಮೂದು ಸುಲಭ: ಈ ಹಿಂದೆ ಗುಂಟೆ ಅಥವಾ ಸೆಂಟ್ಸ್ಗಳಲ್ಲಿ ಇದ್ದ ವಿಸ್ತೀರ್ಣವನ್ನು ನಮೂದಿಸಲು ಇದ್ದ ತೊಂದರೆ ನಿವಾರಿಸಲಾಗಿದ್ದು,…














