Author: kannadanewsnow57

ಬೆಂಗಳೂರು : 2025-26ನೇ ಸಾಲಿನ ರಾಜ್ಯಮಟ್ಟದ ಎಸ್.ಎಸ್.ಎಲ್.ಸಿ. ಪೂರ್ವಸಿದ್ಧತಾ ಪರೀಕ್ಷೆ-1ರ ವೇಳಾಪಟ್ಟಿ ಮತ್ತು ಮಾರ್ಗಸೂಚಿಯನ್ವಯ ಪರೀಕ್ಷೆಯನ್ನು ನಡೆಸುವ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಮಹತ್ವದ ಆದೇಶ ಹೊರಡಿಸಿದೆ. 2025-263 ಸಾಲಿನ ಎಸ್.ಎಸ್.ಎಲ್.ಸಿ ಪೂರ್ವಸಿದ್ಧತಾ ಪರೀಕ್ಷೆ-1ನ್ನು 05.01.2026 ರಿಂದ 10.01.2026 ರವರೆಗೆ ನಡೆಸಲು ತೀರ್ಮಾನಿಸಲಾಗಿದ್ದು, ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಪೂರ್ವ ಸಿದ್ದತಾ ಪರೀಕ್ಷೆಗೆ ಮುಖ್ಯ ಪರೀಕ್ಷೆಯ ಮಾದರಿಯಂತೆ ಪ್ರಶ್ನೆ ಪತ್ರಿಕೆಗಳನ್ನು ಸಿದ್ದಪಡಿಸಿ, ಅಯಾ ದಿನದ ಪ್ರಶ್ನೆಪತ್ರಿಕೆಯನ್ನು ವೇಳಾಪಟ್ಟಿಯಂತೆ ವಿಷಯವಾರು ಪ್ರಶ್ನೆಪತ್ರಿಕೆಯನ್ನು ಪರೀಕ್ಷಾ ದಿನದಂದು ಪೂರ್ವಾಹ್ನ 07.00 ಗಂಟೆಗೆ ಪ್ರೌಢಶಾಲೆಗಳ ಮುಖ್ಯಶಿಕ್ಷಕರ ಶಾಲಾ ಲಾಗಿನ್‌ನಲ್ಲಿ ಅಪ್‌ಲೋಡ್ ಮಾಡಲಾಗುವುದು. ಸಂಬಂಧಿಸಿದ ಪ್ರೌಢ ಶಾಲಾ ಮುಖ್ಯ ಶಿಕ್ಷಕರು ಪ್ರಶ್ನೆಪತ್ರಿಕೆಯನ್ನು ಮುದ್ರಿಸಿಕೊಂಡು ಪೂರ್ವ ಸಿದ್ಧತಾ ಪರೀಕ್ಷೆಯನ್ನು ನಡೆಸಲು ಅಗತ್ಯ ಕ್ರಮವಹಿಸುವುದು. ಎಸ್.ಎಸ್.ಎಲ್.ಸಿ. ಪೂರ್ವಸಿದ್ಧತಾ ಪರೀಕ್ಷೆಯು ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಮುಖ್ಯ ಪರೀಕ್ಷೆಗೆ ಸಂಬಂಧಿಸಿದಂತೆ ದಿಕ್ಕೂಚಿಯಾಗಿರುತ್ತದೆ. ಆದ್ದರಿಂದ ಪೂರ್ವಸಿದ್ಧತಾ ಪರೀಕ್ಷೆಯನ್ನು ಮುಖ್ಯ ಪರೀಕ್ಷೆಯನ್ನು ನಡೆಸುವ ರೀತಿಯಲ್ಲಿಯೇ ಶಿಸ್ತುಬದ್ಧವಾಗಿ, ಹಾಗೂ ಪಾರದರ್ಶಕವಾಗಿ ನಡೆಸಲು, ಜಿಲ್ಲಾ ಉಪನಿರ್ದೇಶಕರು…

Read More

ನಂಜನಗೂಡು: ರಾಜ್ಯದಲ್ಲಿ ಹೃದಯಾಘಾತದಿಂದ ಮತ್ತೊಬ್ಬರು ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ನಂಜನಗೂಡಿನ ರಾಕ್ಷಸ ಮಂಟಪ ವೃತ್ತದಲ್ಲಿ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ವತಿಯಿಂದ ಜರುಗುವ ಅಂಧಕಾಸುರ ವಧೆ ಕಾರ್ಯಕ್ರಮದಲ್ಲಿ ಉತ್ಸವ ಮೂರ್ತಿಯನ್ನು ಹೊತ್ತ ಸಹಾಯಕ ಅರ್ಚಕ ಶಂಕರ ಉಪಾಧ್ಯಾಯ (55) ಹೃದಯಾಘಾತದಿಂದ ಕುಸಿದು ಮೃತಪಟ್ಟಿದ್ದಾರೆ. ಪ್ರತಿ ವರ್ಷ ಸಂಪ್ರದಾಯದಂತೆ ನಡೆಯುವ ಅಂಧಕಾಸುರನ ವಧೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅರ್ಚಕ ಉಪಾಧ್ಯಾಯ ಉತ್ಸವಮೂರ್ತಿ ಇದ್ದ ಪಲ್ಲಕ್ಕಿಗೆ ಭುಜ ಕೊಟ್ಟು ನಡೆಯುತ್ತಿದ್ದ ಕುಸಿದು ಬಿದ್ದರು. ಪಕ್ಕದಲ್ಲೇ ನಿಂತಿದ್ದ ಇತರ ಅರ್ಚಕರು ಉಪಾಧ್ಯಾಯ ಅವರ ನೆರವಿಗೆ ಧಾವಿಸಿದರು. ಕೂಡಲೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಿದರಾದರೂ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

Read More

ಬೆಂಗಳೂರು: ಕಂದಾಯ ಅದಾಲತ್ ಕಾರ್ಯಕ್ರಮದ ಮೂಲಕ ಪಹಣಿ ತಿದ್ದುಪಡಿ ಅಧಿಕಾರವನ್ನು ತಹಶೀಲ್ದಾರರಿಗೆ ಪ್ರತ್ಯಾಯೋಜಿಸುವ ಅವಧಿಯನ್ನು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶಿಸಿದೆ.  ಈ ಕುರಿತಂತೆ ಕಂದಾಯ ಇಲಾಖೆಯ ಆಯುಕ್ತರು ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದು, ರಾಜ್ಯ ಸರ್ಕಾರದ ವಿವಿಧ ಆದೇಶಗಳಲ್ಲಿ ಕಾಲಕಾಲಕ್ಕೆ ಪಹಣಿ ತಿದ್ದುಪಡಿ ಅಧಿಕಾರವನ್ನು ಸಹಾಯಕ ಆಯುಕ್ತರಿಂದ ತಹಶೀಲ್ದಾರರಿಗೆ ಪ್ರತ್ಯಾಯೋಜಿಸಿ ಮುಂದುವರೆಸಿಕೊಂಡು ಬರಲಾಗುತ್ತಿದೆ. ಅದರಂತೆ ದಿನಾಂಕ:30.06.2025 ಕ್ಕೆ ಸದರಿ ಪ್ರತ್ಯಾಯೋಜನೆಯ ಅವಧಿಯು ಮುಕ್ತಾಯಗೊಂಡಿರುತ್ತದೆ ಎಂದಿದ್ದಾರೆ. ಸದರಿ ಕಂದಾಯ ಅದಾಲತ್ ಯೋಜನೆಯನ್ನು 2014ನೇ ಸಾಲಿನಿಂದ ಆರಂಭಿಸಿದ್ದು, ಜೂನ್ 2025 ರವರೆಗೂ ವಿಸ್ತರಿಸಲಾಗಿರುತ್ತದೆ. ಆದಾಗ್ಯೂ ಪಹಣಿ ತಿದ್ದುಪಡಿ ಪ್ರಕರಣಗಳನ್ನು ವಿಲೇವಾರಿ ಮಾಡುವ ಸಂಬಂಧ ಕಂದಾಯ ಅದಾಲತ್‌ ಅವಧಿಯನ್ನು ವಿಸ್ತರಿಸಲು ಕೋರಿ ಕೆಲವು ತಾಲ್ಲೂಕುಗಳಿಂದ ಮನವಿಗಳು ಸ್ವೀಕೃತವಾಗಿರುತ್ತವೆ ಎಂದು ಹೇಳಿದ್ದಾರೆ. ಈ ಹಿನ್ನಲೆಯಲ್ಲಿ ಕಂದಾಯ ಅದಾಲತ್ ಕಾರ್ಯಕ್ರಮದ ಮೂಲಕ ಪಹಣಿ ತಿದ್ದುಪಡಿ ಅಧಿಕಾರವನ್ನು ತಹಶೀಲ್ದಾರರಿಗೆ ಪ್ರತ್ಯಾಯೋಜಿಸುವ ಅವಧಿಯನ್ನು ವಿಸ್ತರಿಸುವ ಕುರಿತಂತೆ ತಮ್ಮ ಸ್ಪಷ್ಟ ಅಭಿಪ್ರಾಯವನ್ನು 15 ದಿನಗಳಲ್ಲಿ ಸಲ್ಲಿಸಲು ತಿಳಿಸಿದ್ದಾರೆ.

Read More

ಬೆಂಗಳೂರು : ರಾಜ್ಯದ ಗ್ರಾಮೀಣ ಆಸ್ತಿ ಮಾಲೀಕರಿಗೆ ಸಿಹಿಸುದ್ದಿ ನೀಡಿದ್ದು, ಗ್ರಾಮೀಣ ಭಾಗದ ಜನತೆ ಸುಲಭವಾಗಿ ತಮ್ಮ ಜಮೀನಿನ ಇ-ಖಾತೆಯನ್ನು ಪಡೆಯುವಂತೆ ಇ-ಸ್ವತ್ತು ತಂತ್ರಾಂಶ 2.0 ಅನ್ನು ರೂಪಿಸಲಾಗಿದೆ. ಗ್ರಾಮೀಣ ಭಾಗದ ಆಸ್ತಿ ಮಾಲೀಕರು ತಂತ್ರಾಂಶದ ಮೂಲಕವೇ ಗ್ರಾಮ ಪಂಚಾಯತಿ ಸೇವೆಗಳ ಶುಲ್ಕ, ಮ್ಯುಟೇಶನ್ ಶುಲ್ಕ ನಿರ್ಧಾರವಾಗುತ್ತದೆ. ಇದು ಗ್ರಾಮೀಣರ ಆಸ್ತಿ ಸಂಬಂಧಿತ ಕೆಲಸಗಳನ್ನು ಸುಗಮಗೊಳಿಸಿದೆ. ಗ್ರಾಮೀಣ ಆಸ್ತಿಗಳಿಗೆ ಡಿಜಿಟಲ್ ಖಾತೆ ಇ-ಸ್ವತ್ತು ತಂತ್ರಾಂಶದ ಪ್ರಯೋಜನಗಳು ನಿಮ್ಮ ಕೃಷಿಯೇತರ ಜಮೀನಿಗೆ ಇ-ಖಾತಾ ಪಡೆಯುವುದು ಈಗ ಸುಲಭವಾಗಿದೆ. ಸಾರ್ವಜನಿಕರು ಮನೆಯಲ್ಲಿದ್ದೇ ಆಸ್ತಿ ದಾಖಲೆಗಳನ್ನು ಪಡೆಯಬಹುದು. ಇ-ಸ್ವತ್ತು ನಮೂನೆಗಳು ನಿಗದಿತ ಕಾಲಾವಧಿಯೊಳಗೆ ಲಭಿಸಲಿವೆ. ನಿಗದಿತ ಅವಧಿಯಲ್ಲಿ ಅಧಿಕಾರಿಗಳು ಅನುಮೋದನೆ ನೀಡದಿದ್ದಲ್ಲಿ ಸ್ವಯಂಚಾಲಿತ ಅನುಮೋದನೆ ಸಿಗಲಿದೆ. ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಎಲ್ಲಾ ಆಸ್ತಿಗಳು ತೆರಿಗೆ ವ್ಯಾಪ್ತಿಗೆ ಇ-ಖಾತಾ ವಿತರಣೆಯಲ್ಲಿ ಗ್ರಾಮಪಂಚಾಯಿತಿ ಅಧ್ಯಕ್ಷರ ಅನುಮೋದನೆಗೆ ಅವಕಾಶ. ಎಲ್ಲಾ ಗ್ರಾಮಪಂಚಾಯಿತಿಗಳಲ್ಲಿ ಏಕರೂಪದ/ ಮಾದರಿಯ ತೆರಿಗೆ ಹಾಗೂ ಶುಲ್ಕಗಳು ನಿಗದಿ. ಗ್ರಾಮಪಂಚಾಯಿತಿ ಸೇವೆಗಳ ಶುಲ್ಕ ಹಾಗೂ ಮ್ಯುಟೇಶನ್ ಶುಲ್ಕ ತಂತ್ರಾಂಶದ ಮೂಲಕವೇ…

Read More

ಅಪಾಯದಲ್ಲಿರುವ ಅಥವಾ ಸಂಕಷ್ಟದಲ್ಲಿರುವ ದುರ್ಬಲ ಮಹಿಳೆಯರು ಮತ್ತು ಮಕ್ಕಳಿಗೆ ತುರ್ತು ರಕ್ಷಣೆ ನೀಡುವ ಉದ್ದೇಶದಿಂದ ಸರ್ಕಾರವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಕ ಹೊಸದಾಗಿ ಅಕ್ಕ ಪಡೆ ಯೋಜನೆಯನ್ನು ಅನುಷ್ಠಾನಗೊಳಿಸಲು ಮಾರ್ಗಸೂಚಿಗಳನ್ನು ರೂಪಿಸಿದ್ದು, ಅದರಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ರಾಜ್ಯದ ಪ್ರತಿ ಜಿಲ್ಲೆಗೆ ಒಂದರಂತೆ ಮಹೀಂದ್ರಾ ಬೊಲೆರೋ ವಾಹನಗಳನ್ನು ಖರೀದಿಸಿ, ನೋಂದಾಯಿಸಲ್ಪಟ್ಟಿರುವ ವಾಹನಗಳನ್ನು ಆಯಾ ಜಿಲ್ಲೆಗಳಿಗೆ ಮರುಹಂಚಿಕೆ ಮಾಡಿರುತ್ತಾರೆ. ಹಾಗೂ ನಾಲ್ಕು ಮಹಿಳಾ ಗೃಹರಕ್ಷಕರನ್ನೊಳಗೊಂಡ ಒಂದು ತಂಡವನ್ನು ಪ್ರತಿ ಜಿಲ್ಲೆಗೆ ರಚನೆ ಮಾಡಲಾಗಿರುತ್ತದೆ. ಜನೆವರಿ 05, 2026 ರಂದು ಧಾರವಾಡ ಸೃಜನಾ ರಂಗ ಮಂದಿರದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಧಾರವಾಡ ಜಿಲ್ಲೆಯ ಪಂಚ ಗ್ಯಾರಂಟಿಗಳ ಸಮಾವೇಶ ಕಾರ್ಯಕ್ರಮದಲ್ಲಿ ಕಾರ್ಮಿಕ ಇಲಾಖೆ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಸರ್ಕಾರದಿಂದ ಜಾರಿಯಾಗಿರುವ ಹೊಸ ಅಕ್ಕಪಡೆ ಯೋಜನೆಗೆ ಅಧಿಕೃತ ಚಾಲನೆ ನೀಡುವರು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ…

Read More

ಬಿಲ್ಡರ್ ನಿರ್ಮಾಣವನ್ನು ಪೂರ್ಣಗೊಳಿಸಿದ ನಂತರ, ಖರೀದಿದಾರರಿಗೆ ಹಲವು ಅನುಮಾನಗಳು ಉಂಟಾಗುತ್ತವೆ. ಬಿಲ್ಡರ್ ಅಪಾರ್ಟ್ಮೆಂಟ್ ಅನ್ನು ಯಾವಾಗ ಹಸ್ತಾಂತರಿಸಬೇಕು? ಅವರಿಂದ ಯಾವ ದಾಖಲೆಗಳನ್ನು ತೆಗೆದುಕೊಳ್ಳಬೇಕು? ಸಂಘದ ಜವಾಬ್ದಾರಿಗಳೇನು? ಇವುಗಳ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಮಾತ್ರ ವರ್ಗಾವಣೆ ಪ್ರಕ್ರಿಯೆಯನ್ನು ಹೆಚ್ಚು ಸುಲಭಗೊಳಿಸಬಹುದು. ಅಪಾರ್ಟ್ಮೆಂಟ್ ಚಿಕ್ಕದಾಗಿರಲಿ ಅಥವಾ ದೊಡ್ಡದಾಗಿರಲಿ, ಐಷಾರಾಮಿ ಯೋಜನೆಯಾಗಿದ್ದರೂ ಸಹ, ನಿರ್ಮಾಣ ಪೂರ್ಣಗೊಂಡ ತಕ್ಷಣ ಫ್ಲಾಟ್ಗಳ ಎಲ್ಲಾ ಖರೀದಿದಾರರು ಸಂಘವನ್ನು ರಚಿಸಬೇಕೆಂದು ಬಿಲ್ಡರ್ ಪ್ರಸ್ತಾಪಿಸಬೇಕು. ನೋಂದಣಿ ನಂತರ, ಸಂಘದ ಹೆಸರಿನಲ್ಲಿ ಬ್ಯಾಂಕ್ ಖಾತೆಯನ್ನು ತೆರೆಯಬೇಕು. ಖರೀದಿದಾರರಿಂದ ಸಂಗ್ರಹಿಸಿದ ಕಾರ್ಪಸ್ ನಿಧಿಯ ಮೊತ್ತವನ್ನು ಅದರಲ್ಲಿ ಠೇವಣಿ ಮಾಡಬೇಕು. ನಿರ್ಮಾಣಕ್ಕೆ ಸಂಬಂಧಿಸಿದ ಪ್ರಮುಖ ದಾಖಲೆಗಳನ್ನು ಬಿಲ್ಡರ್ನಿಂದ ತೆಗೆದುಕೊಳ್ಳಬೇಕು. ಬಿಲ್ಡರ್ನಿಂದ ಪಡೆಯಬೇಕಾದ ದಾಖಲೆಗಳು ಈ ಕೆಳಗಿನಂತಿವೆ.. ➤ಕಟ್ಟಡ ಯೋಜನೆ, ಅನುಮೋದನೆ ಯೋಜನೆ ➤ಪೂರ್ಣಗೊಳಿಸುವಿಕೆ ಪ್ರಮಾಣಪತ್ರ ➤ಅನುಮೋದಿತ ಮಹಡಿ ಯೋಜನೆಗಳು ➤ಮಾಲಿನ್ಯ ಮಂಡಳಿ, ವಿದ್ಯುತ್, ಜಲಮಂಡಳಿ ಮತ್ತು ಅಗ್ನಿಶಾಮಕ ಇಲಾಖೆಗಳಿಂದ ನಿರಾಕ್ಷೇಪಣಾ ಪ್ರಮಾಣಪತ್ರಗಳು ➤ವಿದ್ಯುತ್ ಮತ್ತು ಕುಡಿಯುವ ನೀರಿನಂತಹ ಸಂಪರ್ಕಗಳು ➤ನೋಂದಣಿ ದಾಖಲೆಗಳು, ಅಪಾರ್ಟ್ಮೆಂಟ್ಗೆ ಸಂಬಂಧಿಸಿದ ರೇಖಾಚಿತ್ರಗಳು…

Read More

ಬೆಂಗಳೂರು : ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ರಾಜ್ಯ, ಕೇಂದ್ರ ಸರ್ಕಾರದ ವಿವಿಧ ಇಲಾಖೆಯಲ್ಲಿ ಈ ವರ್ಷ ಬರೋಬ್ಬರಿ 75 ಸಾವಿರ ಹುದ್ದೆಗಳ ನೇಮಕಾತಿ ನಡೆಯಲಿದೆ. ಹೌದು, ಕರ್ನಾಟಕದಲ್ಲಿ 18 ಸಾವಿರ ಶಾಲಾ ಶಿಕ್ಷಕರ ನೇಮಕಾತಿ ನಡೆಯಲಿದೆ. ಭಾರತೀಯ ರೈಲ್ವೆ ಇಲಾಖೆಯಲ್ಲಿ 22,000 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಭಾರತೀಯ ಅಂಚೆ ಇಲಾಖೆಯಲ್ಲಿ 30 ಸಾವಿರ ಹುದ್ದೆಗಳ ನೇಮಕಾತಿಗೆ ಪ್ರಕಟಣೆ ಹೊರಡಿಸಲಾಗಿದೆ. ಆಗಸ್ಟ್-ಅಕ್ಟೋಬರ್ ನಲ್ಲಿ ಬ್ಯಾಂಕಿಂಗ್ ಪರೀಕ್ಷೆಗಳ ಸರಣಿ ಆರಂಭವಾಗಲಿದ್ದು, 5,000ಕ್ಕೂ ಹೆಚ್ಚಿನ ಹುದ್ದೆಗಳಿಗೆ ನೇಮಕಾತಿ ನಿರೀಕ್ಷಿಸಲಾಗಿದೆ. ಕರ್ನಾಟಕದಲ್ಲಿ 18 ಸಾವಿರ ಶಾಲಾ ಶಿಕ್ಷಕರ ನೇಮಕಾತಿ ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ 18 ಸಾವಿರ ಶಿಕ್ಷಕರ ನೇಮಕಾತಿಗೆ ಇದೇ ತಿಂಗಳು ಅಧಿಸೂಚನೆ ಪ್ರಕಟವಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಶಾಲಾರಂಭವಾಗುವ ಜೂನ್ ವೇಳೆಗೆ ರಾಜ್ಯ ಸರ್ಕಾರ 18 ಸಾವಿರ ಶಿಕ್ಷಕರ ನೇಮಕಾತಿ ನಡೆಸಲಿದೆ. ಇದಕ್ಕಾಗಿ ಈಗಾಗಲೇ ಟಿಇಟಿಯನ್ನು ಮುಗಿಸಿ ಫಲಿತಾಂಶ ಪ್ರಕಟಿಸಿದೆ. ಜನವರಿಯಲ್ಲಿ ಶಿಕ್ಷಕರ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಮುಂಬರುವ ಹಬ್ಬ, ಜಯಂತಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಜೊತೆ ಜೊತೆಗೆ ಈ ಹಬ್ಬಗಳ ಸಂದರ್ಭದಲ್ಲಿ ಅನುಸರಿಸಬೇಕಾದಂತ ಮಾರ್ಗಸೂಚಿ ಕ್ರಮಗಳನ್ನು ಬಿಡುಗಡೆ ಮಾಡಲಾಗಿದೆ. ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 2026ನೇ ಸಾಲಿನ ಜಯಂತಿಗಳನ್ನು ಆಚರಣೆ ಮಾಡುವ ಕುರಿತಂತೆ ಪಟ್ಟಿ, ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಜಯಂತಿಗಳ ಆಚರಣೆ ಮಾರ್ಗ ಸೂಚಿಗಳು 1. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾಡಳಿತ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಜಯಂತಿಗಳನ್ನು ಅರ್ಥ ಪೂರ್ಣವಾಗಿ ಆಚರಿಸುವುದು. 2. ಜಿಲ್ಲಾಧಿಕಾರಿಗಳು ಅಥವಾ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯಾ ಜಯಂತಿಗೆ ಸಂಬಂಧಿಸಿದಂತೆ ಎಲ್ಲಾ ಸಮಾಜಗಳ ಮುಖಂಡರು ಮತ್ತು ಸಂಘ ಸಂಸ್ಥೆಯ ಪದಾಧಿಕಾರಿಗಳನ್ನು ಸಭೆಗೆ ಆಹ್ವಾನಿಸಿ ಪೂರ್ವ ಸಿದ್ಧತ ಮಾಡಿಕೊಳ್ಳವುದು. 3. ಆಹ್ವಾನ ಪತ್ರಿಕ, ಕರಪತ್ರ, ಬ್ಯಾನರ್, ವೇದಿಕೆ ವಿನ್ಯಾಸ, ಭಾವಚಿತ್ರದ ವ್ಯವಸ್ಥೆ, ಹೂವಿನ ಹಾರ, ಪೂಜಾ ವ್ಯವಸ್ಥೆ, ಫೋಟೋ, ವೇದಿಕೆಗೆ ಸಂಬಂಧಿಸಿದ ಇತರ ವ್ಯವಸ್ಥೆಯನ್ನು ಜಯಂತಿಯ ಅನುದಾನದಿಂದ ಭರಿಸುವುದು. ಸ್ವಯಂ ಪ್ರೇರಿತರಾಗಿ ಪ್ರಾಯೋಜಕರು ಮುಂದೆ ಬಂದಲ್ಲಿ ಸದರಿಯವರ ಸೇವೆಯನ್ನು…

Read More

ಬೆಂಗಳೂರು: 2025-26ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸಲು ಹಾಗೂ ಹೊಸ ಸದಸ್ಯರನ್ನು ನೋಂದಾಯಿಸಲು ಅವಕಾಶ ನೀಡಿ, ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಸಹಕಾರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ 2024-25ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಸಹಕಾರ ಇಲಾಖೆಯಿಂದ ಜಾರಿಗೊಳಿಸಲು ಹಾಗೂ ಸದಸ್ಯರನ್ನು ನೋಂದಾಯಿಸಲು ಮಾರ್ಗಸೂಚಿಗಳೊಂದಿಗೆ ಆದೇಶ ಹೊರಡಿಸಲಾಗಿತ್ತು ಎಂದಿದ್ದಾರೆ. ಮುಖ್ಯಕಾರ್ಯನಿರ್ವಹಣಾಧಿಕಾರಿ (ಪ), ಯಶಸ್ವಿನಿ ಟ್ರಸ್ಟ್ ಇವರ ಪತ್ರದಲ್ಲಿ ಯಶಸ್ವಿನಿ ಯೋಜನೆಯು ಸಹಕಾರ ಸಂಘಗಳ ಸದಸ್ಯರ ಅನುಕೂಲಕ್ಕಾಗಿ ಸರ್ಕಾರವು ಜಾರಿಗೊಳಿಸಿರುವ ಒಂದು ಪ್ರತಿಷ್ಠಿತ (Flagship) ವಿಶಿಷ್ಟ್ಯ ಯೋಜನೆಯಾಗಿದ್ದು, ಇದರಲ್ಲಿ ಯಶಸ್ವಿನಿ ಫೋಟೋಕಾಲ್‌ನಂತೆ ನಿಗದಿಪಡಿಸಿರುವ ಚಿಕಿತ್ಸೆಗಳ ಪ್ಯಾಕೇಜಿನ ದರದ ಮಿತಿಗೊಳಪಟ್ಟು, ಫಲಾನುಭವಿ ಮತ್ತು ಅವರ ಕುಟುಂಬಕ್ಕೆ ವಾರ್ಷಿಕ ಗರಿಷ್ಟ ರೂ.5.00 ಲಕ್ಷ ವೈದ್ಯಕೀಯ ಚಿಕಿತ್ಸಾ ವೆಚ್ಚದ ಮಿತಿಯೊಂದಿಗೆ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ಇರುತ್ತದೆ ಎಂದು ಹೇಳಿದ್ದಾರೆ. ಯಶಸ್ವಿನಿ ಯೋಜನೆಯು ವಿಮಾ ಯೋಜನೆಯಾಗಿರುವುದಿಲ್ಲ. ಬದಲಾಗಿ ಇದೊಂದು ಸ್ವಯಂ ನಿಧಿ…

Read More

ಬದುಕಿರುವ ಪ್ರತಿಯೊಬ್ಬ ವ್ಯಕ್ತಿಗೆ ಜನನ ಪ್ರಮಾಣ ಪತ್ರ ತುಂಬಾ ಅಗತ್ಯವಾದ ದಾಖಲೆಯಾಗಿದೆ ಮತ್ತು ವ್ಯಕ್ತಿಯ ಮರಣದ ನಂತರ ಕುಟುಂಬದವರಿಗೆ ಮರಣ ಪ್ರಮಾಣಪತ್ರ ಉಪಯುಕ್ತವಾದ ದಾಖಲೆಯಾಗಿದ್ದು, ಜನನ ಮತ್ತು ಮರಣ ಪ್ರಮಾಣ ಪತ್ರಗಳು ಜನರಿಗೆ ಸಕಾಲದಲ್ಲಿ ಸಿಗುವಂತಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.   ಅವರು ಶುಕ್ರವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಸಾಂಖ್ಯಿಕ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ನಾಗರೀಕ ನೋಂದಣಿ ಪದ್ದತಿಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.  “ಜನನ ಮರಣ ನೋಂದಣಿ ಅಧಿನಿಯಮಗಳು-1969” ಹಾಗೂ “ಕರ್ನಾಟಕ ಜನನ ಮರಣ ನೋಂದಣಿ ನಿಯಮಗಳು 1999” ರನ್ವಯ ಜನನ, ಮರಣ ಮತ್ತು ನಿರ್ಜೀವ ಜನನಗಳ ನೋಂದಣಿ ಕಡ್ಡಾಯವಾಗಿದೆ. ನಿಗದಿತ ಅವಧಿಯೊಳಗೆ ಯಾವುದೇ ಶುಲ್ಕವಿಲ್ಲದೆ ಜನನ ಮರಣ ನೋಂದಣಿ ಮಾಡಲು ಅವಕಾಶವಿದ್ದು, ಆ ಅವಧಿಯೊಳಗೆ ಜನನ ಮರಣ ಮಾಹಿತಿಯು ಸಂಬಂಧಿಸಿದ ತಂತ್ರಾಶದಲ್ಲಿ ದಾಖಲಿಸಬೇಕು. ಜನನ-ಮರಣ ನೋಂದಣಿಯನ್ನು ಅಧಿನಿಯಮ ಮತ್ತು ನಿಯಮಗಳಂತೆ ಹಾಗೂ 2024ರ ತಿದ್ದುಪಡಿ ನಿಯಮದಂತೆ ಅನುಷ್ಠಾನಕ್ಕೆ ಕ್ರಮವಹಿಸಬೇಕು. ಶೇ.100…

Read More