Author: kannadanewsnow57

ಬೆಂಗಳೂರು : ಇ-ಸ್ವತ್ತು ಅಭಿಯಾನ ಕುರಿತಾದ ಯಾವುದೇ ಗೊಂದಲಗಳ ಪರಿಹಾರಕ್ಕೆ ರಾಜ್ಯಾದ್ಯಂತ ಜಿಲ್ಲಾ ಸಹಾಯವಾಣಿ ಸಂಖ್ಯೆಯನ್ನು ಪ್ರಾರಂಭಿಸಲಾಗಿದೆ. ಈ ಕೆಳಗಿನ ಪೋರ್ಟಲ್‌ಗೆ ಲಾಗಿನ್ ಆಗಿ ನಿಮ್ಮ ಆಸ್ತಿ ವಿವರಗಳನ್ನು ತುಂಬಿಸಿ, ಅರ್ಜಿ ಸಲ್ಲಿಸಿ: https://eswathu.karnataka.gov.in/ ಈ ಯೋಜನೆಯನ್ನು ಪ್ರತಿಯೊಬ್ಬರೂ ಸದುಪಯೋಗ ಪಡಿಸಿಕೊಳ್ಳಬೇಕಾಗಿ ವಿನಂತಿಸಲಾಗಿದೆ. ಹೀಗಿವೆ ಜಿಲ್ಲಾವಾರು ಸಹಾಯವಾಣಿ ಸಂಖ್ಯೆಗಳು ಬಾಗಲಕೋಟೆ- 08354-200180 ಬಳ್ಳಾರಿ- 08392267453 ಬೆಳಗಾವಿ – 9187082089 ಬೆಂಗಳೂರು ಗ್ರಾಮಾಂತರ- 080-29781057 ಬೆಂಗಳೂರು -080-26710580 ಬೆಂಗಳೂರು ದಕ್ಷಿಣ-080-27276714 ಬೀದರ್-08482-231494 ಚಿಕ್ಕಬಳ್ಳಾಪುರ-08156-277016 ಚಿಕ್ಕಮಗಳೂರು- 9480528888 ಚಾಮರಾಜನಗರ-0822-224015 ಗದಗ-08372-234364 ದಾವಣಗೆರೆ-8192261825 ಧಾರವಾಡ- 0836-2448481 ಚಿತ್ರದುರ್ಗ-18004251978 ದಕ್ಷಿಣ ಕನ್ನಡ- 0824-2451036

Read More

ಬೆಂಗಳೂರು : ವಾಹನ ತಪಾಸಣಾ/ಪರೀಶೀಲನೆ ಸಮಯದಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು ವಾಹನ ಚಾಲಕರಿಗೆ ಕಿರುಕುಳ ಹಲ್ಲೆ. ಅವಾಚ್ಯ ಶಬ್ದಗಳ ಬಳಕೆ ಮಾಡಿ ದುರ್ನಡತೆ ತೋರುವುದನ್ನು ಕಡಿವಾಣ ಹಾಕಲು ಸೂಕ್ತ ಸುತ್ತೋಲೆ ಹೊರಡಿಸಲಾಗಿದೆ. ಈ ಮೇಲ್ಕಂಡ ವಿಷಯಕ್ಕೆ ಸಂಬಂದಿಸಿದಂತೆ ರಾಜ್ಯ ಪೊಲೀಸ್ ಇಲಾಖೆಯು ಶಿಸ್ತಿನ ಇಲಾಖೆಯಾಗಿದ್ದು ಕೆಲವು ಅಧಿಕಾರಿ ಸಿಬ್ಬಂದಿಗಳು ತೋರುತ್ತಿರುವ ದುರ್ನಡತೆ, ಅಧಿಕಾರ ದುರ್ಬಳಕೆಯಿಂದ ಸಂಪೂರ್ಣ ಪೊಲೀಸ್ ಇಲಾಖೆಯ ಗೌರವಕ್ಕೆ ಧಕ್ಕೆ ಉಂಟಾಗುತ್ತಿದ್ದು ಕಾಲಕಾಲಕ್ಕೆ ಇಲಾಖೆಯಿಂದ ಹಲವಾರು ಸುತ್ತೋಲೆ ಜ್ಞಾಪನಗಳನ್ನು ಹೊರಡಿಸಿದ್ದರು ಕೆಲವು ಪೊಲೀಸ್ ಸಿಬ್ಬಂದಿಗಳು ವಾಹನ ತಪಾಸಣಾ ಸಂದರ್ಭದಲ್ಲಿ ವಾಹನ ಚಾಲಕರ ಮೇಲೆ ದೌರ್ಜನ್ಯ, ಹಲ್ಲೆ, ಕಿರುಕುಳ, ಅವಹೇಳನಕಾರಿ ಅವಾಚ್ಯ ಶಬ್ದಗಳ ಬಳಕೆ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ವಾಗ್ವಾದಕ್ಕಿಳಿದು ಅವಮಾನ ಮಾಡುವಂತಹ ಘಟನೆಗಳು ನಿರಂತರವಾಗಿ ನಡೆಯುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಮಾಧ್ಯಮಗಳಲ್ಲಿ ವರದಿಯಾಗುತ್ತಿರುತ್ತವೆ. ಕೆಲವು ದಿನಗಳ ಹಿಂದೆ ಮಂಡ್ಯ ಜಿಲ್ಲೆಯಲ್ಲಿ ಸಂಚಾರಿ ಪೊಲೀಸರು ವಾಹನ ತಪಾಸಣಾ ಸಂದರ್ಭದಲ್ಲಿ ಮಗು ಮೃತಪಟ್ಟ ಪ್ರಕರಣ ಹಾಗೂ ವಿಜಯನಗರ ಜಿಲ್ಲೆ ಕೂಡ್ಲಿಗಿಯಲ್ಲಿ ಸಾರಿಗೆ ಬಸ್…

Read More

ಮನೆಯಲ್ಲಿ ಫ್ರಿಡ್ಜ್ ಬಳಸುವವರೇ ಎಚ್ಚರ, ಫ್ರಿಡ್ಜ್ ಸ್ಪೋಟಗೊಂಡು ತಾಯಿ-ಮಗ ದುರಂತವಾಗಿ ಸಾವನ್ನಪ್ಪಿರುವ ಘಟನೆ ತೆಲಂಗಾಣದ ಜೋಗುಳಂಬ ಗಡ್ವಾಲ್ ಜಿಲ್ಲೆಯಲ್ಲಿ ನಡೆದಿದೆ. ಎರಡು ದಿನಗಳ ಹಿಂದೆ ಧಾರೂರು ಮಂಡಲ ಕೇಂದ್ರದಲ್ಲಿರುವ ಅವರ ಮನೆಯಲ್ಲಿ ರೆಫ್ರಿಜರೇಟರ್ ಕಂಪ್ರೆಸರ್ ಸ್ಫೋಟಗೊಂಡು ಇಬ್ಬರು ಮಹಿಳೆಯರು ಮತ್ತು 11 ತಿಂಗಳ ಗಂಡು ಮಗು ಗಂಭೀರವಾಗಿ ಗಾಯಗೊಂಡಿತ್ತು. ಈ ಮಧ್ಯೆ, ಚಿಕಿತ್ಸೆ ಪಡೆಯುತ್ತಿದ್ದಾಗ ತಾಯಿ ಮತ್ತು 11 ತಿಂಗಳ ಮಗು ಸಾವನ್ನಪ್ಪಿದೆ. ಮತ್ತೊಬ್ಬ ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಿಸೆಂಬರ್ 6 ರಂದು, ಧಾರೂರು ಮಂಡಲ ಕೇಂದ್ರದಲ್ಲಿ ಮುಚ್ಚಿದ ಅಂಗಡಿಯಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಅಶ್ವಿನಿ ಮತ್ತು ಸುನೀತಾ ಎಂಬ ಮಹಿಳೆಯರು ಅಂಗಡಿಯ ಶಟರ್ ತೆರೆದರು. ಇದ್ದಕ್ಕಿದ್ದಂತೆ, ಫ್ರಿಡ್ಜ್ ಸ್ಫೋಟಗೊಂಡು, ಇಬ್ಬರು ಮಹಿಳೆಯರು ಮತ್ತು ಅವರ 11 ತಿಂಗಳ ಮಗುವಿಗೆ ಗಂಭೀರ ಗಾಯಗಳಾಗಿದ್ದವು. ಸ್ಥಳೀಯರು ತಕ್ಷಣ ಅವರನ್ನು ಗಡ್ವಾಲ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿಂದ ಅವರನ್ನು ಉತ್ತಮ ಚಿಕಿತ್ಸೆಗಾಗಿ ಕರ್ನೂಲ್‌ಗೆ ಕರೆದೊಯ್ಯಲಾಯಿತು. ಫ್ರಿಡ್ಜ್‌ನಲ್ಲಿನ ಕಂಪ್ರೆಸರ್ ಸ್ಫೋಟಗೊಂಡ ಕಾರಣ ಅಪಘಾತ ಸಂಭವಿಸಿದೆ ಎಂದು…

Read More

ಬೆಂಗಳೂರು : ಎಸ್ ಎಸ್ ಎಲ್ ಸಿ ಪಾಸಾದ ಮಹಿಳೆಯರಿಗೆ ಸಿಹಿಸುದ್ದಿ, ತುಮಕೂರು ಜಿಲ್ಲೆಯಲ್ಲಿನ ಖಾಲಿ ಇರುವ 117 ಅಂಗನವಾಡಿ ಕಾರ್ಯಕರ್ತೆ ಹಾಗೂ 829 ಅಂಗನವಾಡಿ ಸಹಾಯಕಿಯರ ಗೌರವಧನ ಸೇವಾ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ನೇಮಕಾತಿಯ ಪರಿಷ್ಕೃತ ಮಾರ್ಗಸೂಚಿಯಂತೆ ಮಾನ್ಯ ಜಿಲ್ಲಾಧಿಕಾರಿಗಳು, ತುಮಕೂರು ಜಿಲ್ಲೆ ಇವರ ಅನುಮೋದನೆಯಂತೆ ತುಮಕೂರು ಜಿಲ್ಲೆಯ 11 ತಿರು ಅಭಿವೃದ್ಧಿ ಯೋಜನೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಯ ಗೌರವಧನ ಸೇವೆಯ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ವೆಬ್‌ಸೈಟ್ ಕೆಳಗಿನ ಮಾರ್ಗಸೂಚಿ/ನಿಬಂಧನೆಗಳಲ್ಲಿ ತಿಳಿಸಿರುವಂತೆ ಅರ್ಹ ಮಹಿಳಾ ಅಭ್ಯರ್ಥಿಗಳು ಹಾಗೂ ಮಹಿಳಾ ಲಿಂಗತ್ವ ಅಲ್ಪ ಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗೆ ದಿನಾಂಕ: 10-12-2025 ರಿಂದ 09-01-2026 (ಸಂಜೆ 5.30 ರವರೆಗೆ) ಅರ್ಜಿ ಸಲ್ಲಿಸಲು: https://karnemakaone.kar.nic.in/abcd/ ಭೇಟಿ ನೀಡಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು.…

Read More

ಬೆಳಗಾವಿ : ರಾಜ್ಯದ ವಿವಿಧ ಇಲಾಖೆಗಳಲ್ಲಿ ಹಂತ ಹಂತವಾಗಿ 1,88,037 ನ್ನು ಭರ್ತಿ ಮಾಡಲಾಗುವುದು, ಆರ್ಥಿಕ ಇಲಾಖೆ 24,300 ಹುದ್ದೆಗಳ ಭರ್ತಿಗೆ ಅನುಮೋದನೆ ದೊರಕಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಮಾತನಾಡಿದ ಸಿಎಂ ಸಿದರಾಮಯ್ಯ, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿಯಿದೆ. ಅದರಲ್ಲಿ ವಿವಿಧ ನಿಗಮ ಮಂಡಳಿಗಳಲ್ಲಿ1,01,420 ಹುದ್ದೆಗಳು, ವಿಶ್ವವಿದ್ಯಾಲಯಗಳಲ್ಲಿ 14,677 ಹುದ್ದೆಗಳು ಒಟ್ಟು 1,88,037 ಹುದ್ದೆಗಳು ಖಾಲಿಯಿದೆ. ಈಗಾಗಲೇ 24,300 ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಆರ್ಥಿಕ ಇಲಾಖೆಯಿಂದ ಅನುಮತಿ ದೊರೆತಿದೆ. ಹೈದ್ರಾಬಾದ್ ಕರ್ನಾಟಕಕ್ಕೆ 371ಜೆ ಅಡಿ 32,132 ಹುದ್ದೆಗಳು ಭರ್ತಿಯಾಗಬೇಕಿದೆ. ಒಟ್ಟು 56,432 ಹುದ್ದೆಗಳ ಭರ್ತಿಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಒಳಮೀಸಲಾತಿಯ ಬಿಕ್ಕಟ್ಟಿನಿಂದಾಗಿ ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬವುಂಟಾಗಿತ್ತು. ಈಗ ಈ ಸಮಸ್ಯೆ ಬಗೆಹರಿದಿದ್ದು, ಆರ್ಥಿಕ ಇಲಾಖೆಯ ಅನುಮತಿ ಪಡೆದು ಹಂತ ಹಂತವಾಗಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದರು. ಇನ್ನು ರಾಜ್ಯ ಸರ್ಕಾರ ಒಲಂಪಿಕ್ಸ್, ಪ್ಯಾರಾ ಒಲಂಪಿಕ್ಸ್, ಕಾಮನ್ವೆಲ್ತ್, ಏಷಿಯನ್…

Read More

ಕೋಲಾರ : ರಾಜ್ಯದಲ್ಲಿ ಘೋರ ಘಟನೆಯೊಂದು ನಡೆದಿದ್ದು, ತಾಯಿಗೆ ಮಲತಂದೆ ತಲಾಖ್ ನೀಡಿದ್ದಕ್ಕೆ ಮನನೊಂದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೋಲಾರ ಜಿಲ್ಲೆ ಮುಳಬಾಗಿಲು ಪಟ್ಟಣದ ರೆಹಮತ್ ನಗರದಲ್ಲಿ ತನ್ನ ತಾಯಿಗೆ ಮಲತಂದೆ ತಲಾಖ್ ನೀಡಿದ್ದಕ್ಕೆ ಮನನೊಂದು ಮಗ ಆತ್ಮಹತ್ಯೆಗೆ ಶರಣಾಗಿದ್ದಾನೆ. ಅಫ್ಘಾನ್ (25) ಮನೆ ಯಲ್ಲೇ ನೇಣಿಗೆ ಶರಣಾದ ಯುವಕ. ಅಫ್ಘಾನ್ ತಾಯಿ ಜಬೀನ್ ತಾಜ್ಗೆ ಮಲ ತಂದೆ ಅಕ್ಟರ್ ಆಲಿ ಎಂಬುವರು ತಲಾಖ್ ಕೊಟ್ಟು ಬೇರೆ ಮದುವೆ ಮಾಡಿಕೊಂಡಿದ್ದಾನೆ. ಇದರಿಂದ ಮನನೊಂದು ಮನೆಯಲ್ಲೇ ಅಫ್ಘಾನ್ ನೇಣಿ ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನೆ ಸಂಬಂದ ಮುಳಬಾಗಿಲು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಳಗಾವಿ : ವಿಧಾನಸಭೆಯಲ್ಲಿ ಕರ್ನಾಟಕ ಸಾಮಾಜಿಕ ಬಹಿಷ್ಕಾರದಿಂದ ಜನರ ರಕ್ಷಣೆ ತಡೆ, ನಿಷೇಧ ಮತ್ತು ಪರಿಹಾರ ಮಸೂದೆ-2025 ಮಂಡಿಸಲಾಗಿದ್ದು, ಈ ಮಸೂದೆ ಅನ್ವಯ ಇನ್ಮುಂದೆ ಯಾವುದೇ ವ್ಯಕ್ತಿ, ಕುಟುಂಬ ಅಥವಾ ಕುಟುಂಬದ ಸದಸ್ಯರನ್ನು ಸಾಮಾಜಿಕವಾಗಿ ಬಹಿಷ್ಕರಿಸಿದರೆ, 1 ಲಕ್ಷ ರೂ. ದಂಡ ಹಾಗೂ 3 ವರ್ಷ ಜೈಲು ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಈ ಮಸೂದೆಯಂತೆ ಇನ್ನು ಮುಂದೆ ಸಾಮಾಜಿಕ ಬಹಿಷ್ಕರಿಸುವ ತೀರ್ಮಾನ ತೆಗೆದುಕೊಂಡವರು, ಬಹಿಷ್ಕಾರ ಮಾಡಲು ನಡೆಸುವ ಸಭೆ ಹಾಗೂ ಪಂಚಾಯ್ತಿ ನಡೆಸಿದವರನ್ನು ಅಪರಾಧಿಗಳು ಎಂದು ಪರಿಗಣಿಸಲಾಗುವುದು.‌ ಬಹಿಷ್ಕಾರಕ್ಕೆ ಒತ್ತಡ ಹೇರಿ ಪರೋಕ್ಷವಾಗಿ ಕಾರಣರಾದವರು, ಬಹಿಷ್ಕಾರದ ಪರವಾಗಿ ಮತ ಹಾಕಿದವರು ಅಥವಾ ಚರ್ಚೆಯಲ್ಲಿ ಪಾಲ್ಗೊಂಡವರನ್ನೂ ಅಪರಾಧಿಗಳೆಂದು ನಿರ್ಧರಿಸಲಾಗುತ್ತದೆ. ಬಹಿಷ್ಕಾರಕ್ಕೆ ಒತ್ತಡ ಹೇರುವ ಮೂಲಕ ನಿರ್ಧಾರಕ್ಕೆ ಕಾರಣರಾದವರು, ಬಹಿಷ್ಕಾರದ ಪರವಾಗಿ ಮತ ಹಾಕಿದವರು ಅಥವಾ ಚರ್ಚೆಯಲ್ಲಿ ಪಾಲ್ಗೊಂಡವರನ್ನೂ ಅಪರಾಧಿಗಳೆಂದು ನಿರ್ಧರಿಸಲಾಗುತ್ತದೆ. ಈ ಕುರಿತು ಸಭೆ, ಜಮಾವಣೆ, ಸಮಾವೇಶ ನಡೆಸುವುದು ಅಕ್ರಮ ಎಂದು ಮಸೂದೆಯಲ್ಲಿ ಉಲ್ಲೇಖಿಸಿದೆ. ಬಹಿಷ್ಕಾರಕ್ಕೆ ಒಳಗಾಗುವವರು ಠಾಣೆ ಅಥವಾ ನ್ಯಾಯಾಧೀಶರಿಗೆ ನೇರವಾಗಿ ದೂರು…

Read More

ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ರಾಜ್ಯದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಾಧೀನಾನುಭವ ಪ್ರಮಾಣಪತ್ರ (OC) ಪಡೆಯದ 1,200 ಚದರ ಅಡಿ (30/40) ನಿವೇಶನದಲ್ಲಿ ನಿರ್ಮಿಸಲಾದ ವಸತಿ ಕಟ್ಟಡಗಳಿಗೆ ವಿದ್ಯುತ್ ಮತ್ತು ನೀರಿನ ಸಂಪರ್ಕ ಪಡೆಯಲು ಅವಕಾಶ ಕಲ್ಪಿಸಿ ಸಚಿವ ಸಂಪುಟಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಹೌದು, ರಾಜ್ಯದ ಗ್ರಾಮೀಣ ಭಾಗದಲ್ಲಿ ಒಸಿ ಇಲ್ಲದ ಕಾರಣಕ್ಕಾಗಿ ವಿದ್ಯುತ್ ಸಂಪರ್ಕ, ನೀರಿನ ಸಂಪರ್ಕ ಪಡೆಯಲಾಗದೆ ಸಮಸ್ಯೆ ಅನುಭವಿಸುತ್ತಿರುವ ಲಕ್ಷಾಂತರ ಮನೆ ಮಾಲೀಕರಿಗೆ ಇದು ಅನುಕೂಲವಾಗಲಿದೆ. 1,200 ಚದರ ಅಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಿರ್ಮಿಸಲಾಗಿರುವ ವಸತಿ ಕಟ್ಟಡಗಳು ಸ್ವಾಧೀನಾನು ಭವ ಪತ್ರ ಪಡೆಯುವುದರಿಂದ ವಿನಾಯಿತಿ ದೊರೆಯ ಲಿದೆ. ರಾಜ್ಯ ಸರ್ಕಾರವು ಉಪವಿಧಿಗಳ ಅಡಿಯಲ್ಲಿ ಒಸಿ, ಸಿಸಿ ಇಲ್ಲದ ವಸತಿ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ, ನೀರಿನ ಸಂಪರ್ಕ ನೀಡಲು ಅವಕಾಶ ಕಲ್ಪಿಸಿದೆ. ಈ ಮೂಲಕ ಗ್ರಾಮೀಣ ಭಾಗದ ಕಟ್ಟಡ ಮಾಲೀಕರಿಗೆ ಸಿಹಿಸುದ್ದಿ ಸಿಕ್ಕಂತಾಗಿದೆ.

Read More

ಬೆಳಗಾವಿ : ರಾಜ್ಯದಲ್ಲಿ ಎಸ್ ಸಿ ಸಮುದಾಯವರಿಗೆ ಒಳಮೀಸಲಾತಿ ಜಾರಿಗೆ ಕರ್ನಾಟಕ ಪರಿಶಿಷ್ಟ ಜಾತಿಗಳ (ಉಪ ವರ್ಗೀಕರಣ) ವಿಧೇಯಕಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಹೌದು, ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ರಾಜ್ಯದಲ್ಲಿ ಉದ್ಯೋಗ ಮತ್ತು ಶಿಕ್ಷಣ ಇನ್ನಿತರ ವಿಚಾರಗಳಲ್ಲಿ ಎಸ್ಪಿಯವರಿಗೆ 6-6-5 ಫಾರ್ಮೂಲಾ ಪ್ರಕಾರ ಒಳ ಮೀಸ ಲಾತಿ ಜಾರಿ ಮಾಡಲು ಹೊರಡಿಸಿದ್ದ ಐತಿಹಾಸಿಕ ಆದೇಶಕ್ಕೆ ಕಾನೂನು ಬಲ ನೀಡಲು ‘ಕರ್ನಾಟಕ ಪರಿಶಿಷ್ಟ ಜಾತಿಗಳ (ಉಪ ವರ್ಗೀಕರಣ) ವಿಧೇಯಕ-2025’ ಜಾರಿಗೆ ನಿರ್ಧರಿಸಲಾಗಿದೆ. ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲೇ ವಿಧೇಯಕ ಅಂಗೀಕರಿಸುವ ಮೂಲಕ ಎಸ್ ಸಿಯ ಶೇ.17ರಷ್ಟು ಮೀಸಲಾತಿ ಯಲ್ಲಿ ಎಡಗೈ, ಬಲಗೈ ಹಾಗೂ ದೃಶ್ಯ ಮತ್ತು ಅತಿಸೂಕ್ಷ್ಮ ಜಾತಿಗಳಿಗೆ ಒಳ ಮೀಸಲು ಜಾರಿ ಮಾಡಲು ತೀರ್ಮಾನಿಸಲಾಗಿದೆ.

Read More

ಬೆಳಗಾವಿ : ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಗ್ರಾಮ ಪಂಚಾಯ್ತಿ, ತಾಲೂಕು ಮತ್ತು ಜಿಲ್ಲಾ ಪಂಚಾಯ್ತಿ, ವಿವಿಧ ಪುರಸಭೆ ಹಾಗೂ ನಗರಸಭೆ ಸೇರಿ ದಂತೆ 6500ಕ್ಕೂ ಹೆಚ್ಚು ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆ ಗಳ ಚುನಾವಣೆಯನ್ನು 2026ರ ಏಪ್ರಿಲ್ನಲ್ಲಿ ನಡೆಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹ ತ್ವದ ತೀರ್ಮಾನ ತೆಗೆದುಕೊಳ್ಳಲಾಗಿದೆ. ಕಳೆದ 4 ವರ್ಷಗಳಿಂದ ತಾಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯ್ತಿ ಚುನಾವಣೆ ನಡೆದಿರಲಿಲ್ಲ. ಗ್ರಾಮ ಪಂಚಾಯ್ತಿಗಳ ಅವಧಿಯೂ ಮುಗಿಯುತ್ತಿದೆ. ಜಿ.ಪಂ., ತಾ.ಪಂ. ಚುನಾವಣೆ ವಿಳಂಬದ ಕೇಸ್ ಕೋರ್ಟ್ ನಲ್ಲಿದ್ದು, ತ್ವರಿತಗತಿಯಲ್ಲಿ ಚುನಾವಣೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ನ್ಯಾಯಾಲಯವೂ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿದ್ದು, ಏಪ್ರಿಲ್ ನಲ್ಲಿ ನಡೆಸಲು ಸಿದ್ಧತೆ ಮಾಡಿಕೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.

Read More