Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು :ಸರ್ಕಾರದ ಇಲಾಖೆಗಳು, ಸ್ಥಳೀಯ ಸಂಸ್ಥೆಗಳು, ಪಿಆರ್ಐ, ನಿಗಮ ಮಂಡಳಿಗಳು. ಸೊಸೈಟಿಗಳು, ವಿಶ್ವವಿದ್ಯಾನಿಲಯಗಳು ಹಾಗೂ ಇತರೆ ರಾಜ್ಯ ಸ್ವಾಯತ್ತ ಸಂಸ್ಥೆಗಳು ಬ್ಯಾಂಕ್ ಖಾತೆಗಳನ್ನು ತೆರೆಯುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಉಲ್ಲೇಖಿತ ಸರ್ಕಾರದ ಆದೇಶದಲ್ಲಿ, ಸರ್ಕಾರದ ಇಲಾಖೆಗಳು, ಸ್ಥಳೀಯ ಸಂಸ್ಥೆಗಳು, ಪಿಆರ್ಐ, ನಿಗಮ ಮಂಡಳಿಗಳು, ಸೊಸೈಟಿಗಳು, ವಿಶ್ವವಿದ್ಯಾನಿಲಯಗಳು ಹಾಗೂ ಇತರೆ ರಾಜ್ಯ ಸ್ವಾಯತ್ತ ಸಂಸ್ಥೆಗಳು ಸರ್ಕಾರದ ಅನುದಾನವನ್ನು ನಿರ್ವಹಿಸಲು ಬ್ಯಾಂಕ್ ಖಾತೆಗಳನ್ನು ತೆರೆಯುವ ಹಾಗೂ ನಿರ್ವಹಿಸುವ ಬಗ್ಗೆ ಮಾರ್ಗಸೂಚಿಗಳನ್ನು ನೀಡಲಾಗಿದೆ. ಅದರಂತೆ ಸರ್ಕಾರದ ಇಲಾಖೆಗಳು ಬ್ಯಾಂಕುಗಳಲ್ಲಿ ಖಾತೆಗಳನ್ನು ತೆರೆದು ವ್ಯವಹರಿಸಲು, ಸಕ್ಷಮ ಪ್ರಾಧಿಕಾರಿಗಳು (ಆಡಳಿತ ಇಲಾಖೆಗಳು) ಆರ್ಥಿಕ ಇಲಾಖೆಯ ಸಹಮತಿ ಪಡೆದು ಆದೇಶವನ್ನು ಹೊರಡಿಸಬೇಕಾಗಿರುತ್ತದೆ. ಸದರಿ ಆದೇಶವು, ಖಾತೆಯನ್ನು ತೆರೆಯವ ಉದ್ದೇಶ, ಯೋಜನೆಯ ಹೆಸರು, ವ್ಯಾಪ್ತಿ, ಖಾತೆಯ ವಿಧ, ಅಧಿಕೃತ ಸಹಿದಾರರು, ಕಾರ್ಯಾಚರಣೆಯ ಮಾರ್ಗಸೂಚಿಗಳು ಇತ್ಯಾದಿ ವಿವರಗಳನ್ನು ಒಳಗೊಂಡಿರಬೇಕಾಗುತ್ತದೆ. ಸರ್ಕಾರದ ಇಲಾಖೆಗಳು, ಸ್ಥಳೀಯ ಸಂಸ್ಥೆಗಳು, ಪಿಆರ್ಐ, ನಿಗಮ ಮಂಡಳಿಗಳು, ಸೊಸೈಟಿಗಳು, ವಿಶ್ವವಿದ್ಯಾನಿಲಯಗಳು ಹಾಗೂ ರಾಜ್ಯ ಸ್ವಾಯತ್ತ ಸಂಸ್ಥೆಗಳು ನಿರ್ವಹಿಸುತ್ತಿರುವ…
ಹಾವೇರಿ : ಮನೆಯಲ್ಲಿ ಪುಟ್ಟ ಮಕ್ಕಳು ಆಟ ಆಡುತ್ತಿರುವಾಗ ಪೋಷಕರು ಆದಷ್ಟು ಎಚ್ಚರ ವಹಿಸಬೇಕು ಇಲ್ಲವಾದರೆ ಹಲವು ದುರಂತಗಳು ಸಂಭವಿಸುತ್ತವೆ ಇದೀಗ ಇಂತಹದ್ದೇ ದುರಂತ ಹಾವೇರಿಯಲ್ಲಿ ನಡೆದಿದ್ದು ಮನೆಯ ಮುಂದೆ ಆಟವಾಡುವಾಗ ಬಕೆಟ್ನಲ್ಲಿ ತಲೆಕೆಳಗಾಗಿ ಬಿದ್ದು ಒಂದು ವರ್ಷದ ಮಗು ಸಾವನ್ನಪ್ಪಿರುವ ದುರ್ಘಟನೆ ಸಂಭವಿಸಿದೆ. ಹೌದು ಆಟವಾಡುವಾಗ ನೀರಿನ ಬಕೆಟ್ ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಹಾವೇರಿಯ ಶಿವಬಸವ ನಗರದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದ್ದು, ಬಕೆಟ್ನಲ್ಲಿ ಬಿದ್ದು ದಕ್ಷಿತ್ ಯಳಂಬಳ್ಳಿ ಮಠ (1) ಎನ್ನುವ ಮಗು ಸಾವನ್ನಪ್ಪಿದೆ. ಬಕೆಟ್ನಲ್ಲಿ ತಲೆಕೆಳಗಾಗಿ ಬಿದ್ದಿದ್ದ ದಕ್ಷೀತ್ ಸಾವನಪ್ಪಿದ್ದಾನೆ. ಕೂಡಲೇ ಮಗುವನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿ ಆಗದೆ ಮಗು ಕೊನೆಯುಸಿರೆಳೆದಿದೆ. ಘಟನೆ ಕುರಿತು ಹಾವೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೌಕರರ ಭವಿಷ್ಯ ನಿಧಿ (EPFO) ಪ್ರತಿ ತಿಂಗಳು ನಿಮ್ಮ ಸಂಬಳ ಮತ್ತು ಕಂಪನಿಯ ಕೊಡುಗೆಗಳ ಒಂದು ಭಾಗವನ್ನು ಜಮಾ ಮಾಡುತ್ತದೆ. ಇದು ಸಂಬಳ ಪಡೆಯುವ ವ್ಯಕ್ತಿಗಳಿಗೆ ಒಂದು ಉಳಿತಾಯ ಯೋಜನೆಯಾಗಿದ್ದು, ಅವರ ತುರ್ತು ನಿಧಿಯಾಗಿ ಕಾರ್ಯನಿರ್ವಹಿಸುತ್ತದೆ. ಅಗತ್ಯವಿದ್ದರೆ ನೀವು ಅದರಿಂದ ಹಣವನ್ನು ಹಿಂಪಡೆಯಬಹುದು. ಆದಾಗ್ಯೂ, ಅನೇಕ ಬಾರಿ, ಉದ್ಯೋಗಿ ವ್ಯಕ್ತಿಗಳು ತಮ್ಮ PF ಬ್ಯಾಲೆನ್ಸ್ ಅನ್ನು ಸಮಯಕ್ಕೆ ಸರಿಯಾಗಿ ಠೇವಣಿ ಮಾಡಲಾಗುತ್ತಿದೆಯೇ ಎಂದು ತಿಳಿದಿರುವುದಿಲ್ಲ. ನಿಮ್ಮ ಕಂಪನಿಯು ನಿಮ್ಮ EPFO ಖಾತೆಗೆ ಹಣವನ್ನು ಜಮಾ ಮಾಡಿದೆಯೇ ಎಂದು ನೀವು ಆಶ್ಚರ್ಯ ಪಡುತ್ತಿದ್ದರೆ, ಈ ಸುದ್ದಿ ಉಪಯುಕ್ತವಾಗಬಹುದು. ಒಳ್ಳೆಯ ಸುದ್ದಿ ಎಂದರೆ ನೀವು ಈಗ ನಿಮ್ಮ EPFO ಖಾತೆಯ ಬ್ಯಾಲೆನ್ಸ್ ಮತ್ತು ಠೇವಣಿಗಳನ್ನು ನಿಮ್ಮ ಮನೆಯಿಂದಲೇ ಸುಲಭವಾಗಿ ಪರಿಶೀಲಿಸಬಹುದು. ಶುಕ್ರವಾರ, 76 ಮಿಲಿಯನ್ EPFO ಸದಸ್ಯರು 2024-25ರ EPF ಮೇಲಿನ ಬಡ್ಡಿದರವನ್ನು 8.5% ನಲ್ಲಿ ಕಾಯ್ದುಕೊಳ್ಳಲಾಗಿದೆ ಎಂದು ಹೇಳುವ ಪ್ರಮುಖ ನವೀಕರಣವನ್ನು ಸ್ವೀಕರಿಸಿದ್ದಾರೆ. ಇದಕ್ಕೂ ಮೊದಲು, ಫೆಬ್ರವರಿ 2024 ರಲ್ಲಿ, ಈ ದರವನ್ನು…
ಬೆಂಗಳೂರು : ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಮಲತಂದೆಯೇ 7 ವರ್ಷದ ಮಗಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಕುಂಬಳಗೂಡು ವ್ಯಾಪ್ತಿಯ ಕನ್ನಿಕಾ ಬಡಾವಣೆಯಲ್ಲಿ ಮಗುವಿನ ಮುಖಕ್ಕೆ ಹೊಡೆದು, ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ. ನಿನ್ನೆ ಸಂಜೆ ಕೊಲೆ ಮಾಡಿ ಮಲತಂದೆ ದರ್ಶನ್ ಪರಾರಿಯಾಗಿದ್ದಾನೆ ಎಂದು ನೈರುತ್ಯ ವಿಭಾಗದ ಡಿಸಿಪಿ ಅನಿತಾ ಹದ್ದಣ್ಣನವರ್ ಮಾಹಿತಿ ನೀಡಿದ್ದಾರೆ. ಗಂಡನ ಬಿಟ್ಟು ಮಗಳ ಜೊತೆಗೆ ಶಿಲ್ಪಾ ಎಂಬ ಮಹಿಳೆ ವಾಸವಾಗಿದ್ದರು. ಈ ವೇಳೆ ಇನ್ ಸ್ಟಾಗ್ರಾಂನಲ್ಲಿ ಆರೋಪಿ ದರ್ಶನ್ ಶಿಲ್ಪಾಗೆ ಪರಿಚಯವಾಗಿದ್ದ, ಬಳಿಕ ದರ್ಶನ್ ನನ್ನು ಶಿಲ್ಪಾ ಎರಡನೇ ಮದುವೆಯಾಗಿದ್ದರು. ಮೊನ್ನೆ ಶಿಲ್ಪಾ ಜೊತೆಗೆ ಜಗಳವಾಡಿದ್ದ ದರ್ಶನ್ ನಿನ್ನೆ ಸಂಜೆ ಮಲಮಗಳು ಸಿರಿಯನ್ನು ಕೊಂದು ಪರಾರಿಯಾಗಿದ್ದಾನೆ.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಯೋಜನಾ ಮಂಜೂರಾತಿ ಸಮಿತಿಯ ಸಭೆಯಲ್ಲಿ ಒಟ್ಟು 27,607.26 ಕೋಟಿ ರೂಪಾಯಿ ಬಂಡವಾಳ ಹೂಡಿಕೆಗೆ ಒಪ್ಪಿಗೆ ಕೊಡಲಾಗಿದೆ. ಇದರಲ್ಲಿ 11 ಹೊಸ ಕೈಗಾರಿಕಾ ಯೋಜನೆಗಳು ಮತ್ತು 2 ಹೆಚ್ಚುವರಿ ಹೂಡಿಕೆ ಪ್ರಸ್ತಾವನೆಗಳು ಸೇರಿವೆ ಎಂದು ಸಭೆ ಬಳಿಕ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸುದ್ದಿಗಾರರಿಗೆ ತಿಳಿಸಿದರು. ಒಟ್ಟು ಈ 13 ಯೋಜನೆಗಳಿಂದ 8,704 ನೇರ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದಿದ್ದಾರೆ. 11 ಹೊಸ ಹೂಡಿಕೆ ಯೋಜನೆಗಳ ಪೈಕಿ ತೇಜಸ್ ನೆಟ್ವರ್ಕ್ಸ್ 542.19 ಕೋಟಿ ರೂ, ವಾಯು ಅಸೆಟ್ಸ್ 1,251 ಕೋಟಿ ರೂ, ಜಿಂದಾಲ್ ಸ್ಟೀಲ್ಸ್ 1,300.57 ಕೋಟಿ ರೂ, ಜಿಂದಾಲ್ ಎಲೆಕ್ಟ್ರಿಕಲ್ ಸ್ಟೀಲ್ 7,102 ಕೋಟಿ ರೂ, ಗ್ರಾಸಿಂ ಇಂಡಸ್ಟ್ರೀಸ್1,386 ಕೋಟಿ ರೂ, ಎಸ್ಎಫ್ಎಕ್ಸ್ ಇಂಡಿಯಾ 9,298 ಕೋಟಿ ರೂ, ಸ್ನೀಡರ್ ಎಲೆಕ್ಟ್ರಿಕ್ ಐಟಿ ಬಿಝಿನೆಸ್, ಎಚ್ಎಸ್ಎಸ್ ಟೆಕ್ಸ್ಟೈಲ್ಸ್ 740 ಕೋಟಿ…
ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಮಹಿಳೆಯ ತಲೆಕೂದಲು ಕತ್ತರಿಸಿ ಅರೆನಗ್ನಗೊಳಿಸಿ ಖಾರ ಎರಚಿ ವಿಕೃತ ಹಿಂಸೆ ನೀಡಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ತಾಂಡಾವೊಂದರಲ್ಲಿ ಅನೈತಿಕ ಸಂಬಂಧದ ಆರೋಪ ಹೊರಿಸಿ ಮಹಿಳೆಯೊಬ್ಬರ ಮೇಲೆ ಆಕೆಯ ಸಂಬಂಧಿಕರು, ತಲೆಗೂದಲು ಕತ್ತರಿಸಿ, ಸುಣ್ಣ ಹಚ್ಚಿ, ಕಾರದ ಪುಡಿ ಎರಚಿದ್ದಲ್ಲದೆ, ಬಟ್ಟೆ ಹರಿದು ಅರೆನಗ್ನವಾಗಿಸಿ ಕೊಲೆಗೆ ಯತ್ನಿಸಿದ ಅಮಾನವೀಯ ಕೃತ್ಯ ನಡೆದಿದೆ. ಈ ಬಗ್ಗೆ ಕೆಂಭಾವಿ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದ್ದು, ಉಳಿದವರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಎಂದು ತಿಳಿದುಬಂದಿದೆ.
ನವದೆಹಲಿ :ನವೆಂಬರ್-ಡಿಸೆಂಬರ್ನಲ್ಲಿ ಭಾರತದಲ್ಲಿ ನಡೆಯಲಿರುವ ಹಾಕಿ ವಿಶ್ವಕಪ್ ನಿಂದ ಪಾಕಿಸ್ತಾನ ಹಿಂದೆ ಸರಿದಿದೆ. ಹಾಕಿಯ ಆಡಳಿತ ಮಂಡಳಿಯಾದ ಎಫ್ಐಎಚ್ ಇದನ್ನು ದೃಢಪಡಿಸಿದೆ. ಉದ್ಘಾಟನಾ ಪಂದ್ಯಕ್ಕೆ ಕೇವಲ ಒಂದು ತಿಂಗಳ ಮೊದಲು, ಪಾಕಿಸ್ತಾನ ಎಫ್ಐಎಚ್ ಪುರುಷರ ಜೂನಿಯರ್ ವಿಶ್ವಕಪ್ ಹಾಕಿ ಟೂರ್ನಮೆಂಟ್ನಿಂದ ಹಿಂದೆ ಸರಿದಿದೆ. ನವೆಂಬರ್ 28 ರಿಂದ ಡಿಸೆಂಬರ್ 10 ರವರೆಗೆ ಚೆನ್ನೈ ಮತ್ತು ಮಧುರೈನಲ್ಲಿ ಪಂದ್ಯಾವಳಿ ನಡೆಯಲಿದೆ. ಭಾರತದೊಂದಿಗಿನ ರಾಜಕೀಯ ಉದ್ವಿಗ್ನತೆಯನ್ನು ಉಲ್ಲೇಖಿಸಿ ಪಾಕಿಸ್ತಾನ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಟೆಲಿಕಾಂ ಏಷ್ಯಾ ಸ್ಪೋರ್ಟ್ನ ವರದಿಯ ಪ್ರಕಾರ, ಪಾಕಿಸ್ತಾನ ಹಾಕಿ ಫೆಡರೇಶನ್ (ಪಿಎಚ್ಎಫ್) ತನ್ನ ಸರ್ಕಾರದೊಂದಿಗೆ ಚರ್ಚಿಸಿದ ನಂತರ ಎಫ್ಐಎಚ್ಗೆ ಅಧಿಕೃತ ಅಧಿಸೂಚನೆಯನ್ನು ಕಳುಹಿಸಿದೆ. ಹಾಕಿ ಇಂಡಿಯಾಕ್ಕೆ ಇದರ ಬಗ್ಗೆ ತಿಳಿಸಲಾಗುವುದು. ಭಾರತದಲ್ಲಿ ಪಾಕಿಸ್ತಾನ ಹಿಂದೆ ಸರಿದ ಎರಡನೇ ಕಾರ್ಯಕ್ರಮ ಇದಾಗಿದೆ. ಇದಕ್ಕೂ ಮೊದಲು, ಬಿಹಾರದ ರಾಜ್ಗಿರ್ನಲ್ಲಿ ನಡೆದ ಪುರುಷರ ಏಷ್ಯಾ ಕಪ್ನಿಂದಲೂ ಪಾಕಿಸ್ತಾನ ಹಿಂದೆ ಸರಿದಿತ್ತು.
ಬಳ್ಳಾರಿ ನಗರ ಉಪವಿಭಾಗ-1 ಜೆಸ್ಕಾಂ ವ್ಯಾಪ್ತಿಯಲ್ಲಿ ಕಂಪನಿಯ ನಿಯಮಾನುಸಾರ ಎಲ್ಲಾ ಸ್ಥಾವರದಲ್ಲಿರುವ ಮೀಟರ್ಗಳನ್ನು ಆಪ್ಟಿಕಲ್ ಪ್ರೋಬ್ ಡಿವೈಸ್ ಮೂಲಕವೇ ರೀಡಿಂಗ್ ಮಾಡಬೇಕಾಗಿದ್ದು, ವಿದ್ಯುತ್ ಗ್ರಾಹಕರು ತಮ್ಮ ಸ್ಥಾವರದ ವಿದ್ಯುತ್ ಮಾಪಕವನ್ನು ಕಡ್ಡಾಯವಾಗಿ ನೆಲದಿಂದ 5 ಅಡಿ ಎತ್ತರದಲ್ಲಿ ಅಳವಡಿಸಿಕೊಳ್ಳಬೇಕು. ವಿದ್ಯುತ್ ಮಾಪಕಗಳು ಗೋಚರಿಸುವ ಹಾಗೂ ಓದಲು ಅನುಕೂಲವಾಗುವ ಸ್ಥಳದಲ್ಲಿ ಇರಬೇಕು. ಮೀಟರ್ ಓದುವವರಿಗೆ ಸ್ಥಳವಿಲ್ಲದಿದ್ದಲ್ಲಿ ಸ್ಥಳವಿರುವ ಜಾಗದಲ್ಲಿ ಇರಿಸಬೇಕು. ಅ.25 ರೊಳಗಾಗಿ ನಿಗದಿತ ಎತ್ತರದ ಜಾಗದಲ್ಲಿ ಅಳವಡಿಸಿಕೊಳ್ಳಬೇಕು. ಈ ನಿಯಮ ಪಾಲನೆ ಮಾಡದಿದ್ದಲ್ಲಿ ಯಾವುದೇ ಮುನ್ಸೂಚನೆ ಇಲ್ಲದೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು : 2016ರ ಪರಿಷ್ಕೃತ ಯುಜಿಸಿ/ಐಸಿಎಆರ್/ಎಐಸಿಟಿಇ ವೇತನ ಶ್ರೇಣಿಗಳಲ್ಲಿನ ಬೋಧಕ ಮತ್ತು ತತ್ಸಮಾನ ವೃಂದದ ಸಿಬ್ಬಂದಿಗಳಿಗೆ ತುಟ್ಟಿಭತ್ಯೆಯ ದರಗಳನ್ನು ಪರಿಷ್ಕರಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. 2016ರ ಪರಿಷ್ಕೃತ ಯುಜಿಸಿ/ಐಸಿಎಆರ್/ಎಐಸಿಟಿಇ ವೇತನ ಶ್ರೇಣಿಗಳಲ್ಲಿನ ಬೋಧಕ ಮತ್ತು ತತ್ಸಮಾನ ವೃಂದದ ಸಿಬ್ಬಂದಿಗಳ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 55 ರಿಂದ ಶೇಕಡ 58ಕ್ಕೆ 1ನೇ ಜುಲೈ 2025 ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಲು ಸರ್ಕಾರವು ಹರ್ಷಿಸುತ್ತದೆ. 2. ಈ ಆದೇಶದ ಉದ್ದೇಶಗಳಿಗಾಗಿ ‘ಮೂಲ ವೇತನ’ ಎಂದರೆ ಸರ್ಕಾರಿ ನೌಕರನು ಧಾರಣೆ ಮಾಡಿರುವ ಹುದ್ದೆಗೆ ಅನ್ವಯವಾಗುವ 2016ರ ಪರಿಷ್ಕೃತ ಯುಜಿಸಿ/ಐಸಿಎಆರ್/ಎಐಸಿಟಿಇ ವೇತನ ಶ್ರೇಣಿಗಳಲ್ಲಿ ಪಡೆಯುತ್ತಿರುವ ಮೂಲ ವೇತನ. 3. ಯುಜಿಸಿ/ಐಸಿಎಆರ್/ಎಐಸಿಟಿಇ ವೇತನ ಶ್ರೇಣಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಶ್ವವಿದ್ಯಾಲಯಗಳು, ಸರ್ಕಾರಿ/ಅನುದಾನಿತ ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಸ್ವಾಯತ್ತ ಸಂಸ್ಥೆಗಳು ಇತ್ಯಾದಿ ಪೂರ್ಣಕಾಲಿಕ ನೌಕರರಿಗೆ ಈ ಆದೇಶಗಳು ಅನ್ವಯಿಸುತ್ತವೆ. 4. ವೇತನ ಎಂದು ಪರಿಗಣಿಸಲ್ಪಡದ ಯಾವುದೇ ಉಪಲಬ್ಧಗಳನ್ನು ಮೂಲ ವೇತನಕ್ಕೆ ಸೇರಿಸತಕ್ಕದ್ದಲ್ಲ. 5. ಈ…
ಬೆಂಗಳೂರು : 2016ರ ಪರಿಷ್ಕೃತ ಯುಜಿಸಿ/ಐಸಿಎಆರ್/ಎಐಸಿಟಿಇ ವೇತನ ಶ್ರೇಣಿಗಳಲ್ಲಿನ ಬೋಧಕ ಮತ್ತು ತತ್ಸಮಾನ ವೃಂದದ ಸಿಬ್ಬಂದಿಗಳಿಗೆ ತುಟ್ಟಿಭತ್ಯೆಯ ದರಗಳನ್ನು ಪರಿಷ್ಕರಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. 2016ರ ಪರಿಷ್ಕೃತ ಯುಜಿಸಿ/ಐಸಿಎಆರ್/ಎಐಸಿಟಿಇ ವೇತನ ಶ್ರೇಣಿಗಳಲ್ಲಿನ ಬೋಧಕ ಮತ್ತು ತತ್ಸಮಾನ ವೃಂದದ ಸಿಬ್ಬಂದಿಗಳ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 55 ರಿಂದ ಶೇಕಡ 58ಕ್ಕೆ 1ನೇ ಜುಲೈ 2025 ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಲು ಸರ್ಕಾರವು ಹರ್ಷಿಸುತ್ತದೆ. 2. ಈ ಆದೇಶದ ಉದ್ದೇಶಗಳಿಗಾಗಿ ‘ಮೂಲ ವೇತನ’ ಎಂದರೆ ಸರ್ಕಾರಿ ನೌಕರನು ಧಾರಣೆ ಮಾಡಿರುವ ಹುದ್ದೆಗೆ ಅನ್ವಯವಾಗುವ 2016ರ ಪರಿಷ್ಕೃತ ಯುಜಿಸಿ/ಐಸಿಎಆರ್/ಎಐಸಿಟಿಇ ವೇತನ ಶ್ರೇಣಿಗಳಲ್ಲಿ ಪಡೆಯುತ್ತಿರುವ ಮೂಲ ವೇತನ. 3. ಯುಜಿಸಿ/ಐಸಿಎಆರ್/ಎಐಸಿಟಿಇ ವೇತನ ಶ್ರೇಣಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಶ್ವವಿದ್ಯಾಲಯಗಳು, ಸರ್ಕಾರಿ/ಅನುದಾನಿತ ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಸ್ವಾಯತ್ತ ಸಂಸ್ಥೆಗಳು ಇತ್ಯಾದಿ ಪೂರ್ಣಕಾಲಿಕ ನೌಕರರಿಗೆ ಈ ಆದೇಶಗಳು ಅನ್ವಯಿಸುತ್ತವೆ. 4. ವೇತನ ಎಂದು ಪರಿಗಣಿಸಲ್ಪಡದ ಯಾವುದೇ ಉಪಲಬ್ಧಗಳನ್ನು ಮೂಲ ವೇತನಕ್ಕೆ ಸೇರಿಸತಕ್ಕದ್ದಲ್ಲ. 5. ಈ…













