Author: kannadanewsnow57

ಶಿವಮೊಗ್ಗ : ವನ್ಯಜೀವಿ ಸಂರಕ್ಷಣೆ, ಅರಣ್ಯ ಸಂಪತ್ತು ರಕ್ಷಣೆ ಮತ್ತು ಜನರ ಅಭಿವೃದ್ದಿಯ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತನ್ನ ತೀರ್ಮಾನಗಳನ್ನು ಕೈಗೊಳ್ಳುತ್ತಿದ್ದು ಶೆಟ್ಟಿಹಳ್ಳಿ ಅಭಯಾರಣ್ಯ ಡಿನೋಟಿಫಿಕೇಷನ್ ಮತ್ತು ಶರಾವತಿ ಸಂತ್ರಸ್ತರಿಗೆ ಪರಿಹಾರ ಕುರಿತಾದ ತೀರ್ಮಾನಗಳು ಅಂತಿಮ ಘಟ್ಟ ತಲುಪಿವೆ ಎಂದು ಅರಣ್ಯ ಜೀವಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ್ ಬಿ ಖಂಡ್ರೆ ತಿಳಿಸಿದರು. ಬುಧವಾರ ತ್ಯಾವರೆಕೊಪ್ಪದ ಸಿಂಹಧಾಮದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶೆಟ್ಟಿಹಳ್ಳಿ ವನ್ಯಜೀವಿ ಧಾಮ ಡಿ-ನೋಟಿಫಿಕೇಷನ್ ಪ್ರಸ್ತಾವನೆಯು ಸುಮಾರು 2016 ರಿಂದ ಬಾಕಿ ಇದ್ದು ಈಗ ಅಂತಿಮ ಘಟ್ಟಕ್ಕೆ ಬಂದಿದೆ. ಹಿಂದೆ 1974 ರಲ್ಲಿ ನೋಟಿಫಿಕೇಷನ್ ಮಾಡಿದ ಸಂದರ್ಭದಲ್ಲಿ 395 ಚ.ಕೀ ಪ್ರದೇಶ ಸೇರ್ಪಡೆ ಮಾಡಿದ್ದರು. ಆದರೆ ಅದರಲ್ಲಿ ಬಸ್ ಸ್ಟಾö್ಯಂಡ್, ಎಫ್‌ಸಿಐ ಗೋಡಾನ್, ಎಪಿಎಂಸಿ, ಸರ್ಕಾರಿ ಕಚೇರಿಗಳು, ಜನವಸತಿ ಪ್ರದೇಶ ಸೇರ್ಪಡೆಗೊಂಡಿದ್ದು ಇದೆಲ್ಲವನ್ನೂ ಪರಿಶೀಲನೆ ಮಾಡಿ, ಅಧಿಕಾರಿಗಳು ಸಮೀಕ್ಷೆಗಳನ್ನು ಮಾಡಿದ್ದಾರೆ. ಈ ಕುರಿತು ಹಲವಾರು ಸಭೆಗಳನ್ನು ಮಾಡಲಾಗಿದೆ. ಅರಣ್ಯ ಸಂಪತ್ತು ಸಂರಕ್ಷಣೆ ಮಾಡಬೇಕು. ಜೀವನ ಮತ್ತು ಜೀವನೋಪಾಯ…

Read More

ಬೆಂಗಳೂರು: ಜಮೀನು ಖರೀದಿಸುವವರಿಗೆ ಇದೀಗ ಕಂದಾಯ ಇಲಾಖೆ ಸಿಹಿಸುದ್ದಿ ನೀಡಿದ್ದು, ನೀವು ಖರೀದಿಸುವ ಜಮೀನಿನ ಕುರಿತು ಮಾಹಿತಿ ನೀಡುವ ದಿಶಾಂಕ್’ ಆ್ಯಪ್’ ಅನ್ನು ಬಿಡುಗಡೆ ಮಾಡಿದ್ದು, ಇದರ ಮೂಲಕ ಜಮೀನಿನ ಸಂಪೂರ್ಣ ಮಾಹಿತಿ ಪಡೆಯಬಹುದು. ಏನಿದು `ದಿಶಾಂಕ್’ ಆ್ಯಪ್? ಹೇಗೆ ಕೆಲಸ ಮಾಡುತ್ತೆ.? ರಾಜ್ಯದ ಕಂದಾಯ ಇಲಾಖೆಯಲ್ಲಿ ಲಭ್ಯವಿರುವ 1960ರ ಸರ್ವೆ ನಕಾಶೆಗಳ ಆಧಾರದಲ್ಲಿ ದಿಶಾಂಕ್ ಆ್ಯಪ್ ಅಭಿವೃದ್ಧಿಪಡಿಸಲಾಗಿದೆ. ಈ ಆ್ಯಪ್ನ ಲ್ಲಿರುವ ನಕಾಶೆಯನ್ನು ನೋಡಿ ಆಸ್ತಿಯ ಕುರಿತ ಮೂಲ ವಿವರಗಳನ್ನು ತಿಳಿದುಕೊಳ್ಳಬಹುದಾಗಿದೆ. ದಿಶಾಂಕ್ ಆ್ಯಪ್ ಬೆಂಗಳೂರು ಸೇರಿದಂತೆ ರಾಜ್ಯದ 30 ಜಿಲ್ಲೆಯಗಳ ಪ್ರತಿ ಭೂ ಭಾಗದ ಮಾಹಿತಿಯನ್ನು ಹೊಂದಿದೆ. ಯಾವ ಮಾಹಿತಿ ಸಿಗುತ್ತೆ? ಕಂದಾಯ ಇಲಾಖೆಯಲ್ಲಿ ಲಭ್ಯವಿರುವ 1960ರ ಸರ್ವೆ ನಕಾಶೆಗಳ ಆಧಾರದಲ್ಲಿ ದಿಶಾಂಕ್ ಆ್ಯಪ್ ಅಭಿವೃದ್ಧಿಪಡಿಸಲಾಗಿದೆ. ಈ ಆ್ಯಪ್ನಇಲ್ಲಿರುವ ನಕಾಶೆಯನ್ನು ನೋಡಿ ಆಸ್ತಿಯ ಕುರಿತ ಮೂಲ ವಿವರಗಳನ್ನು ತಿಳಿದುಕೊಳ್ಳಬಹುದಾಗಿದೆ. ಯಾವುದಾದರೂ ಆಸ್ತಿಯ ನಿಖರವಾದ ಸರ್ವೆ ನಂಬರ್ ಹುಡುಕಲು ಹಾಗೂ ಆ ಭೂಮಿಯ ಬಗ್ಗೆ ವಿವರಗಳನ್ನು ಪಡೆಯಲು ದಿಶಾಂಕ್ ಆ್ಯಪ್…

Read More

ಬೆಂಗಳೂರು : ರಾಜ್ಯ ಗ್ರಾಮೀಣ ಪ್ರದೇಶದ ಆಸ್ತಿಗಳಿಗೆ ಇ-ಖಾತಾ ಸಮಸ್ಯೆಯನ್ನು 15-20 ದಿನಗಳಲ್ಲಿ ಬಗೆಹರಿಸಿ ಇ-ಖಾತಾ ವಿತರಿಸುವುದಾಗಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ ನೀಡಿದ್ದಾರೆ. ಬಿಜೆಪಿಯ ಕಿರಣ್ ಕುಮಾರ್ ಕೊಡ್ಲಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು,ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಯು ಗ್ರಾಮೀಣ ಭಾಗದ ಆಸ್ತಿಗಳನ್ನು ಡಿಜಿಟಲೀಕರಣ ಮಾಡಿ ಸಾರ್ವಜನಿಕರಿಗೆ ಸುಲಭವಾಗಿ ಇ-ಖಾತಾ ಸೌಲಭ್ಯ ದೊರಕುವಂತೆ ಮಾಡಬೇಕು ಎಂಬ ಉದ್ದೇಶದಿಂದ ಇ-ಸ್ವತ್ತು ಅಭಿಯಾನದಡಿ ಇ-ಸ್ವತ್ತು ತಂತ್ರಾಂಶ 2.0 ಅನ್ನು ಆರಂಭಿಸಿದೆ. ಈ ನೂತನ ಇ-ಸ್ವತ್ತು ತಂತ್ರಾಂಶ 2.0 ಅನ್ನು ಕಳೆದ ಡಿಸೆಂಬರ್ ನಲ್ಲಿ ಪ್ರಾರಂಭಿಸಲಾಗಿದೆ. ಕಳೆದ ಎರಡು ತಿಂಗಳುಗಳಲ್ಲಿ ಇ-ಸ್ವತ್ತು ತಂತ್ರಾಂಶ 1.0 & 2.0 ನಲ್ಲಿ 44,508 ಅರ್ಜಿಗಳ ಸ್ವೀಕೃತ ಮಾಡಲಾಗಿದೆ. ಅದರಲ್ಲಿ 7,978 ಅರ್ಜಿಗಳನ್ನು ಅನುಮೋದನೆ ಮಾಡಲಾಗಿದೆ. ಈ ತಂತ್ರಾಂಶದಲ್ಲಿ ಲೋಪಗಳನ್ನು ಬರುತ್ತಿದ್ದು, ಶೀಘ್ರದಲ್ಲಿಯೇ ಸರಿಪಡಿಸಲಾಗುವುದು. ನಾವು ಯಾವುದೇ ತಂತ್ರಾಂಶವನ್ನು ಅನುಷ್ಠಾನಕ್ಕೆ ತರಬೇಕು ಎಂದರೆ ಅದಕ್ಕಾಗಿ ನಾವು ಕೇಂದ್ರ ಸರ್ಕಾರದ ರಾಷ್ಟ್ರೀಯ ಮಾಹಿತಿ ಕೇಂದ್ರ (ಎನ್‌ಐಸಿ) ತಂಡಕ್ಕೆ…

Read More

ಬೆಂಗಳೂರು : ಬೆಂಗಳೂರಿನಲ್ಲಿ ನಟ ಮಯೂರ್ ಪಟೇಲ್ ನಿಂದ ಸರಣಿ ಅಪಘಾತ ನಡೆದಿದ್ದು, ಕುಡಿದ ಮತ್ತಿನಲ್ಲಿ ನಿಂತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದಿದ್ದಾರೆ. ನಟ ಮಯೂರ್ ಪಟೇಲ್ ಕುಡಿದ ಮತ್ತಿನಲ್ಲಿ ರಾತ್ರಿ ತನ್ನ ಫಾರ್ಚೂನರ್ ಕಾರು ಚಲಾಯಿಸಿದ್ದು, ನಿಂತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದಿದ್ದಾರೆ. ಬೆಂಗಳೂರಿನ ದಮ್ಮಲೂರಿನ ಸಿಗ್ನಲ್ ಬಳಿ ನಿಂತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಮೂರು ಕಾರುಗಳು ಜಖಂ ಆಗಿದ್ದು, ಈ ವೇಳೆ ಕಂಟ್ರೋಲ್ ರೂಮ್ ಗೆ ಚಾಲಕರು ಕರೆ ಮಾಡಿದ್ದಾರೆ. ಬಳಿಕ ಪೊಲೀಸರು ನಟ ಮಯೂರ್ ಪಟೇಲ್ ರನ್ನು ಠಾಣೆಗೆ ಕರೆದೊಯ್ದಿದ್ದಾರೆ. ಕಾರು ಮಾಲೀಕ ಶ್ರೀನಿವಾಸ್ ಈ ಬಗ್ಗೆ ದೂರು ನೀಡಿದ್ದು, ನಟ ಮಯೂರ್ ಪಟೇಲ್ ವಿರುದ್ಧ ಹಲಸೂರು ಸಂಚಾರಿ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

Read More

ಬೆಂಗಳೂರು : ರಾಜ್ಯ ಸರ್ಕಾರದ ಅನುದಾನಕ್ಕೆ ಒಳಪಟ್ಟ ಶಾಲಾ ಶಿಕ್ಷಕರಿಗೆ ಹೈಕೋರ್ಟ್ ಸಿಹಿಸುದ್ದಿ ನೀಡಿದ್ದು, ಅನುದಾನಿತ ಶಾಲೆಯು ಸರ್ಕಾರದ ಅನುದಾನಕ್ಕೆ ಒಳಪಟ್ಟ ದಿನದಿಂದಲೇ ಪೂರ್ವಾನ್ವಯವಾಗುವಂತೆ ಶಿಕ್ಷಕರಿಗೆ ವೇತನ ಸೌಲಭ್ಯ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ರಾಜ್ಯ ಸರ್ಕಾರ 2011ರಲ್ಲಿ ಹೊರಡಿಸಿದ್ದ ಆದೇಶದ ಅನ್ವಯ ಅರ್ಜಿದಾರ ಶಿಕ್ಷಕರು ಶಾಲೆಯು ಅನುದಾನಕ್ಕೆ ಒಳಪಟ್ಟ ದಿನದಿಂದಲೇ ವೇತನಕ್ಕೆ ಅರ್ಹರಿದ್ದಾರೆ ಎಂದು ತೀರ್ಪು ನೀಡಿದೆ. ಪ್ರಕರಣದ ಹಿನ್ನೆಲೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಕೆಂಪವಾಡ ಗಜಾನನ ಎಜುಕೇಶನಲ್ ಸೊಸೈಟಿ ನ್ಯೂ ಹೈಸ್ಕೂಲ್‌ನ ಕನ್ನಡ ಶಿಕ್ಷಕರಾಗಿ ರಾಜೇಶ್ ಎಂ. ಕೋಷ್ಟಿ ಎಂಬುವರು 2007ರಲ್ಲಿ ನೇಮಕಗೊಂಡಿದ್ದರು. ಆ ಶಾಲೆಯು 2009ರಲ್ಲಿ ಸರ್ಕಾರದ ಅನುದಾನ ವ್ಯಾಪ್ತಿಗೆ ಸೇರಿತು. ಆದರೆ, ಅರ್ಜಿದಾರ ಶಿಕ್ಷಕರಿಗೆ ಪೂರ್ವಾನ್ವಯವಾಗುವಂತೆ ವೇತನ ಸೌಲಭ್ಯ ನೀಡಲು ಸರ್ಕಾರ ನಿರಾಕರಿಸಿತು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ರಾಜೇಶ್ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಹೈಕೋರ್ಟ್‌ನ ಧಾರವಾಡ ಪೀಠದಲ್ಲಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಸ್. ಹೇಮಲತಾ ಅವರಿದ್ದ ಏಕಸದಸ್ಯ ನ್ಯಾಯಪೀಠ, ಸರ್ಕಾರದ ಆದೇಶ…

Read More

ಬೆಂಗಳೂರು : ರಾಜ್ಯದ ಜನತೆಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಫೆಬ್ರವರಿ 13 ರಂದು ಹಾವೇರಿ ಜಿಲ್ಲೆಯಲ್ಲಿ ಕಂದಾಯಗ್ರಾಮ ರಚನೆಯ 1 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ, ನೋಂದಣಿ ದಾಖಲಾತಿ ಮತ್ತು ಇ-ಸ್ವತ್ತು ವಿತರಿಸಲು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕರ್ನಾಟಕ ಭೂಕಂದಾಯ ಕಾಯ್ದೆ 1964 ಕಲಂ 94ಡಿ ಅಡಿಯಲ್ಲಿ ನೀಡುವ ಹಕ್ಕುಪತ್ರ ಹಾಗೂ ನೋಂದಣಿ ಪ್ರಗತಿ ಪರಿಶೀಲನೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ ಆದೇಶದಲ್ಲಿ ಏನಿದೆ? ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ ದಿನಾಂಕ 13 ಫೆಬ್ರವರಿ 2026 ರಂದು ಹಾವೇರಿ ಜಿಲ್ಲೆಯಲ್ಲಿ ಕಂದಾಯಗ್ರಾಮ ರಚನೆಯ 1 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ, ನೋಂದಣಿ ದಾಖಲಾತಿ ಮತ್ತು ಇ-ಸ್ವತ್ತು ವಿತರಿಸಲು ಉದ್ದೇಶಿಸಲಾಗಿದೆ. ಈ ಹಿನ್ನಲೆಯಲ್ಲಿ ತಹಶೀಲ್ದಾರರ ಹೆಸರಿಗೆ ಇ-ಸ್ವತ್ತು ತಯಾರಿಸುವಿಕೆ, ನೋಂದಣಿ ಹಾಗೂ ಫಲಾನುಭವಿಗಳ ಹೆಸರಿಗೆ ಇ-ಸ್ವತ್ತು ತಯಾರಿಸುವ ಬಗ್ಗೆ ಚರ್ಚಿಸಲು ಮಾನ್ಯ ಮಾನ್ಯ ಕಂದಾಯ ಸಚಿವರ ಅಧಕ್ಷತೆಯಲ್ಲಿ ದಿನಾಂಕ 29.01.2026 ರಂದು ಪೂರ್ವಾಹ್ನ 10.30 ಗಂಟೆಗೆ, ‘ಕೊಠಡಿ ಸಂಖ್ಯೆ 122, ವಿಕಾಸ ಸೌಧದಲ್ಲಿ ಸಭೆಯನ್ನು…

Read More

ನವದೆಹಲಿ : ದಶಕಗಳಿಂದ ದೇಶದ ಬಡ ಮತ್ತು ಅನನುಕೂಲಕರ ಕುಟುಂಬಗಳಿಗೆ ಉಚಿತ ಪಡಿತರ ಮತ್ತು ಸಬ್ಸಿಡಿ ಧಾನ್ಯ ಯೋಜನೆಗಳು ಜೀವನಾಡಿಯಾಗಿವೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (NFSA) ಅಡಿಯಲ್ಲಿ, ಸರ್ಕಾರವು ಲಕ್ಷಾಂತರ ಅರ್ಹ ಕುಟುಂಬಗಳಿಗೆ ಅಕ್ಕಿ, ಗೋಧಿ ಮತ್ತು ದ್ವಿದಳ ಧಾನ್ಯಗಳಂತಹ ಧಾನ್ಯಗಳನ್ನು ಉಚಿತವಾಗಿ ಅಥವಾ ಕಡಿಮೆ ಬೆಲೆಗೆ ಒದಗಿಸುತ್ತದೆ. ಆದರೆ ಈಗ ಕೇಂದ್ರ ಸರ್ಕಾರವು ಯೋಜನೆಯ ಪ್ರಯೋಜನಗಳು ನಿಜವಾಗಿಯೂ ಅಗತ್ಯವಿರುವವರಿಗೆ ಮಾತ್ರ ತಲುಪುವಂತೆ ನೋಡಿಕೊಳ್ಳಲು ಕಟ್ಟುನಿಟ್ಟಾದ ಹೊಸ ವಿಧಾನವನ್ನು ಅಳವಡಿಸಿಕೊಂಡಿದೆ ಮತ್ತು ಅನರ್ಹರು ಅಥವಾ ವಂಚನೆ ಮಾಡುವವರಿಗೆ ಬಡ್ಡಿಯೊಂದಿಗೆ ಧಾನ್ಯದ ವೆಚ್ಚವನ್ನು ವಿಧಿಸಲಾಗುತ್ತದೆ. ಇದಲ್ಲದೆ, ನಕಲಿ ಕಾರ್ಡ್‌ದಾರರ ಮೇಲೆ ವಸೂಲಿ ಮತ್ತು ದಂಡ ಎರಡನ್ನೂ ವಿಧಿಸಲು ಸರ್ಕಾರ ನಿರ್ಧರಿಸಿದೆ. ಈ ಕ್ರಮ ಏಕೆ ಅಗತ್ಯ? ಸರ್ಕಾರಿ ದತ್ತಾಂಶದ ಪ್ರಕಾರ, ದುಬಾರಿ ಕಾರುಗಳು, ದೊಡ್ಡ ಜಮೀನು ಹೊಂದಿರುವವರು ಅಥವಾ ಆದಾಯ ತೆರಿಗೆ ಪಾವತಿಸುವವರು ಸೇರಿದಂತೆ ತುಲನಾತ್ಮಕವಾಗಿ ಉತ್ತಮ ಸ್ಥಿತಿಯಲ್ಲಿರುವ ಅನೇಕ ಕುಟುಂಬಗಳು ಬಡವರಿಗೆ ನೀಡಲಾಗುವ ಉಚಿತ ಪಡಿತರವನ್ನು ಬಳಸಿಕೊಳ್ಳುತ್ತಿದ್ದಾರೆ. ಈ ಅನರ್ಹ…

Read More

ಫಾಸ್ಟ್‌ ಟ್ಯಾಗ್ ಖರೀದಿಸುವಾಗ ನಿಮ್ಮ ಆರ್‌ಸಿಯನ್ನು ಪದೇ ಪದೇ ಅಪ್‌ಲೋಡ್ ಮಾಡುವ ತೊಂದರೆಯನ್ನು ನೀವು ಎಂದಾದರೂ ಎದುರಿಸಿದ್ದೀರಾ? ಟ್ಯಾಗ್ ಸಕ್ರಿಯಗೊಳಿಸುವಿಕೆಯಲ್ಲಿ ಅನಗತ್ಯ ವಿಳಂಬಗಳಿಂದ ನೀವು ಎಂದಾದರೂ ನಿರಾಶೆಗೊಂಡಿದ್ದೀರಾ? ಹಾಗಿದ್ದಲ್ಲಿ, ಸ್ವಲ್ಪ ಪರಿಹಾರವಿದೆ. ಹೆದ್ದಾರಿಗಳಲ್ಲಿ ಪ್ರಯಾಣವನ್ನು ಸುಲಭಗೊಳಿಸುವ ಫಾಸ್ಟ್‌ಟ್ಯಾಗ್ ವ್ಯವಸ್ಥೆಯು ಮುಂದಿನ ತಿಂಗಳು ಬದಲಾವಣೆಗಳಿಗೆ ಒಳಗಾಗಲಿದೆ. NHAI ನಿರ್ಧಾರದ ಪ್ರಕಾರ, ಫಾಸ್ಟ್‌ಟ್ಯಾಗ್‌ಗಳಿಗೆ ಸಂಬಂಧಿಸಿದ KYV ಪ್ರಕ್ರಿಯೆಯನ್ನು ಫೆಬ್ರವರಿ 1 ರಿಂದ ಹಂತಹಂತವಾಗಿ ತೆಗೆದುಹಾಕಲಾಗುತ್ತದೆ. ಪರಿಣಾಮವಾಗಿ, ನಿಮ್ಮ ವಾಹನವನ್ನು ತಿಳಿದುಕೊಳ್ಳಿ (KYV) ಪ್ರಕ್ರಿಯೆಯು ಇನ್ನು ಮುಂದೆ ಹೊಸ ಕಾರುಗಳು, ಜೀಪ್‌ಗಳು ಮತ್ತು ವ್ಯಾನ್‌ ಗಳಿಗೆ ನೀಡಲಾದ ಫಾಸ್ಟ್‌ ಟ್ಯಾಗ್‌ ಗಳಿಗೆ ಅನ್ವಯಿಸುವುದಿಲ್ಲ. ಇದರ ನೇರ ಪ್ರಯೋಜನವೆಂದರೆ ಫಾಸ್ಟ್‌ ಟ್ಯಾಗ್ ಪಡೆಯುವ ಮತ್ತು ಸಕ್ರಿಯಗೊಳಿಸುವ ಪ್ರಕ್ರಿಯೆಯು ಹಿಂದೆಂದಿಗಿಂತಲೂ ವೇಗವಾಗಿ, ಸುಲಭ ಮತ್ತು ಹೆಚ್ಚು ತೊಂದರೆ-ಮುಕ್ತವಾಗಿರುತ್ತದೆ. ಈ ನಿರ್ಧಾರವನ್ನು ಈಗ ಏಕೆ ತೆಗೆದುಕೊಳ್ಳಲಾಯಿತು? ಇಲ್ಲಿಯವರೆಗೆ, ಫಾಸ್ಟ್‌ಟ್ಯಾಗ್ ಪಡೆದ ನಂತರ, ವಾಹನದ ಗುರುತನ್ನು ದೃಢೀಕರಿಸಲು KYV ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಾಗಿತ್ತು. ಇದಕ್ಕಾಗಿ ವಾಹನ ಮಾಲೀಕರು ತಮ್ಮ ಆರ್‌ಸಿಗಳನ್ನು ಪದೇ ಪದೇ…

Read More

ಬೆಂಗಳೂರು : ಕರ್ನಾಟಕ ರಾಜ್ಯ ಮಹಿಳಾ ಸರ್ಕಾರಿ ನೌಕರರಿಗೆ ಋತುಚಕ್ರ ರಜೆ ಸೌಲಭ್ಯವನ್ನು ಕಲ್ಪಿಸಿರುವ ರಾಜ್ಯ ಸರ್ಕಾರವು ಇದೀಗ ಋತುಚಕ್ರ ರಜೆ ಪಡೆಯಲು ಮಹಿಳಾ ನೌಕರರು ಈ ಷರತ್ತುಗಳ ಪಾಲನೆ ಕಡ್ಡಾಯವಾಗಿದೆ. ರಾಜ್ಯದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರ ಕಾರ್ಯದಕ್ಷತೆ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿ ಅವರ ಮನೋಸ್ಥೆರ್ಯವನ್ನು ಹೆಚ್ಚಿಸಲು ಮಾಸಿಕ ಋತುಚಕ್ರದ ಸಂದರ್ಭದಲ್ಲಿ ಪ್ರತಿ ಮಾಸಿಕ ಒಂದು ದಿನದ ರಜೆಯಂತೆ ವಾರ್ಷಿಕ 12 ದಿನಗಳ ವೇತನ ಸಹಿತ ರಜೆಯನ್ನು ಪಡೆದುಕೊಳ್ಳಲು ಇರುವ ನಿಬಂಧನೆಗಳು ಉಲ್ಲೇಖ (2) ರ ಮತ್ತು ಸರ್ಕಾರದ ಆದೇಶ ದಿನಾಂಕ:12.11.2025ರಲ್ಲಿ ಪ್ರಸ್ತಾಪಿಸಿರುವಂತೆ ಇರುತ್ತದೆ. ಷರತ್ತುಗಳು: 1. ಮಹಿಳಾ ನೌಕರರು ಆಯಾ ತಿಂಗಳ “ಋತುಚಕ್ರ ರಜೆ”ಯನ್ನು ಆಯಾ ತಿಂಗಳಿನಲ್ಲಿಯೇ ಬಳಸಿಕೊಳ್ಳುವುದು. ಹಿಂದಿನ ತಿಂಗಳ “ಋತುಚಕ್ರ ರಜೆ”ಯನ್ನು ಮುಂದಿನ ತಿಂಗಳಿಗೆ ವಿಸ್ತರಿಸಲು (CARRY OVER) ಅವಕಾಶವಿರುವುದಿಲ್ಲ. 2. ಪ್ರತಿ ತಿಂಗಳು ಒಂದು ದಿನದ “ಋತುಚಕ್ರ ರಜೆ” ಪಡೆಯಲು ಮಹಿಳಾ ನೌಕರರು ಯಾವುದೇ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುವ ಅವಶ್ಯಕತೆ ಇರುವುದಿಲ್ಲ”.…

Read More

ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ನೌಕರರಿಗೂ ಡ್ರೆಸ್ ಕೋಡ್ ತರೋದಕ್ಕೆ ಸರ್ಕಾರ ಮುಂದಾಗಿದೆ. ಇನ್ಮುಂದೆ ಕರ್ನಾಟಕದ ಸರ್ಕಾರಿ ನೌಕರರು ಖಾದಿ ಬಟ್ಟೆ ಧರಿಸುವುದು ಕಡ್ಡಾಯಗೊಳಿಸಲಾಗುತ್ತಿದೆ ಎಂಬುದಾಗಿ ಹೇಳಲಾಗುತ್ತಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಹಿರಿಯ ಆಪ್ತ ಕಾರ್ಯದರ್ಶಿ ಸರ್ಕಾರಿ ನೌಕರರ ಸಂಘಟನೆಯೊಂದಿಗೆ ಇಂದು ಮಹತ್ವದ ಸಭೆಯನ್ನು ನಡೆಸಲಿದ್ದಾರೆ. ಅವರು ಪತ್ರ ಬರೆದಿದ್ದು, ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿ/ನೌಕರರು ಪ್ರತಿ ತಿಂಗಳ ಮೊದಲ ಶುಕ್ರವಾರದಂದು ಖಾದಿ ಉಡುಪನ್ನು ಧರಿಸುವುದು ಮತ್ತು ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವ ಸೇರಿದಂತೆ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಅಧಿಕಾರಿಗಳು/ಸಿಬ್ಬಂದಿಗಳೆಲ್ಲರೂ ಖಾದಿ ಉಡುಪನ್ನು ಧರಿಸುವ ಕುರಿತಂತೆ ಚರ್ಚಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ದಿನಾಂಕ: 29.01.2026 ರ ಮಧ್ಯಾಹ್ನ 12.00 ಘಂಟೆಗೆ ಕೊಠಡಿ ಸಂಖ್ಯೆ:320 ವಿಧಾನಸೌಧ ಇಲ್ಲಿ ಸಭೆಯನ್ನು ನಿಗಧಿಪಡಿಸಲಾಗಿದೆ. ಈ ಸಭೆಗೆ ತಾವು ಹಾಜರಾಗಬೇಕೆಂದು ತಮಗೆ ತಿಳಿಸಲು ನಿರ್ದೇಶಿಸಲ್ಪಟ್ಟಿದ್ದೇನೆ ಎಂದಿದ್ದಾರೆ.

Read More