Author: kannadanewsnow57

ಇತ್ತೀಚಿನ ದಿನಗಳಲ್ಲಿ ಬ್ಲೂಟೂತ್ ದೈನಂದಿನ ಅಗತ್ಯವಾಗಿದೆ. ವೈರ್‌ಲೆಸ್ ಇಯರ್‌ಬಡ್‌ಗಳನ್ನು ಪ್ಲಗ್ ಮಾಡುವುದು, ನಿಮ್ಮ ಫೋನ್ ಅನ್ನು ನಿಮ್ಮ ಕಾರಿನ ಆಡಿಯೊಗೆ ಸಂಪರ್ಕಿಸುವುದು ಅಥವಾ ಸ್ನೇಹಿತರಿಗೆ ಫೋಟೋ ಕಳುಹಿಸುವುದು, ಬ್ಲೂಟೂತ್ ಎಲ್ಲದಕ್ಕೂ ಉಪಯುಕ್ತವಾಗಿದೆ. ಕೆಲಸ ಮುಗಿದ ನಂತರವೂ ಬ್ಲೂಟೂತ್ ಆನ್ ಆಗಿದ್ದರೆ ಸಮಸ್ಯೆ ಉದ್ಭವಿಸುತ್ತದೆ. ಈ ಸಣ್ಣ ಮೇಲ್ವಿಚಾರಣೆಯು ನಿಮ್ಮ ಗೌಪ್ಯತೆ ಮತ್ತು ನಿಮ್ಮ ಬ್ಯಾಂಕ್ ಖಾತೆ ಎರಡಕ್ಕೂ ಗಮನಾರ್ಹ ಬೆದರಿಕೆಯನ್ನು ಒಡ್ಡುತ್ತದೆ. ಬಸ್‌ಗಳು, ರೈಲುಗಳು, ಮೆಟ್ರೋ ನಿಲ್ದಾಣಗಳು, ಮಾಲ್‌ಗಳು ಅಥವಾ ಮಾರುಕಟ್ಟೆಗಳಂತಹ ಜನದಟ್ಟಣೆಯ ಸ್ಥಳಗಳಲ್ಲಿ ಸೈಬರ್ ಅಪರಾಧಿಗಳು ಸಕ್ರಿಯರಾಗಿದ್ದಾರೆ. ವಿಶೇಷ ಸಾಫ್ಟ್‌ವೇರ್ ಮತ್ತು ಸಾಧನಗಳನ್ನು ಬಳಸಿಕೊಂಡು, ಬ್ಲೂಟೂತ್ ಆನ್ ಆಗಿರುವ ಹತ್ತಿರದ ಮೊಬೈಲ್ ಫೋನ್‌ಗಳನ್ನು ಅವರು ಪತ್ತೆ ಮಾಡುತ್ತಾರೆ. ನಂತರ ಅವರು ನಿಮ್ಮ ಫೋನ್‌ಗೆ ಜೋಡಿಸುವ ವಿನಂತಿಯನ್ನು ಕಳುಹಿಸುತ್ತಾರೆ. ಹೆಚ್ಚಿನ ಸಮಯ, ಜನರು ಯೋಚಿಸದೆ ಈ ವಿನಂತಿಯನ್ನು ಸ್ವೀಕರಿಸುತ್ತಾರೆ. ಇಲ್ಲಿಂದಲೇ ವಂಚನೆ ಪ್ರಾರಂಭವಾಗುತ್ತದೆ. ಸಂಪರ್ಕವನ್ನು ಸ್ಥಾಪಿಸಿದ ನಂತರ, ಅಪರಾಧಿಗಳು ನಿಮ್ಮ ಫೋನ್‌ನಲ್ಲಿ ಸಂಗ್ರಹವಾಗಿರುವ ಪ್ರಮುಖ ಡೇಟಾವನ್ನು ಪ್ರವೇಶಿಸಬಹುದು. ಕೆಲವು ಸಂದರ್ಭಗಳಲ್ಲಿ, ಅವರು…

Read More

ಬೆಂಗಳೂರು : ಜನವರಿ 8 ರಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ದಿನಾಂಕ: 08.01.2026, ಗುರುವಾರ ಬೆಳಿಗ್ಗೆ 11:30ಕ್ಕೆ ಸಚಿವ ಸಂಪುಟದ 2026ನೇ ಸಾಲಿನ 2ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ. ಸಭೆಯ ಕಾರ್ಯಸೂಚಿಯನ್ನು ಪ್ರತ್ಯೇಕವಾಗಿ ಕಳುಹಿಸಲಾಗುವುದು ಎಂದು ಪ್ರಕಟಣೆ ಹೊರಡಿಸಲಾಗಿದೆ.

Read More

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ,  HRMS2.0 ವೇತನ ಪಟ್ಟಿಯಲ್ಲಿ ಬದಲಾವಣೆಗಳನ್ನು ಮಾಡಲು ರಾಜ್ಯ ಸರ್ಕಾರವು ಮಾರ್ಗಸೂಚಿಗಳನ್ನು ಪ್ರಕಟಿಸಿದೆ. HRMS-2.0 ವ್ಯವಸ್ಥೆಯಲ್ಲಿ ಇನಿಶಿಯೇಟರ್ ಮತ್ತು ಅನುಮೋದಕರು ಯಾವ ಪ್ರಕ್ರಿಯೆಯನ್ನು ಕೈಗೊಳ್ಳಬೇಕು ಎಂಬುದನ್ನು ಅರ್ಥಮಾಡಿಕೊಳ್ಳಲು ಈ ಕೆಳಗಿನ ಮಾರ್ಗದರ್ಶಿ ಸಹಾಯ ಮಾಡುತ್ತದೆ, ಮಾರ್ಪಾಡು ಮಾಡಲು ಲಭ್ಯವಿರುವ ವೇತನ ಪಟ್ಟಿಯ ಅಂಶಗಳನ್ನು ಬದಲಾಯಿಸುವ ಅಗತ್ಯವಿದ್ದಾಗ, DDOಗಳು ಮತ್ತು ಬಳಕೆದಾರರು ಇಲ್ಲಿ ಉಲ್ಲೇಖಿಸಲಾದ ಬಳಕೆದಾರರಿಗಾಗಿ ಈ ಮಾರ್ಗದರ್ಶಿಯನ್ನು ಬಳಸುವಂತೆ ವಿನಂತಿಸಲಾಗಿದೆ. HRMS-2.0 ನಲ್ಲಿನ ವೇತನದಾರರ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಅನುಮೋದಕ ಲಾಗಿನ್‌ನಲ್ಲಿ ಮಾಡಬಹುದಾದ ಬದಲಾವಣೆಗಳು / ಮಾರ್ಪಾಡುಗಳು. ಲಾಗಿನ್ ಮತ್ತು ನ್ಯಾವಿಗೇಷನ್: HRMS ಪೋರ್ಟಲ್ ಪ್ರವೇಶಿಸಿ: https://hrms2.karnataka.gov.in ಅನುಮೋದಕರು ರುಜುವಾತುಗಳನ್ನು ಬಳಸಿಕೊಂಡು HRMS-2 ಗೆ ಲಾಗಿನ್ ಆಗುತ್ತಾರೆ. LIC ಸಂಪಾದನೆ:- ವಿಮಾ ಮೆನು → ವಿಮೆ → LIC ಸಂಪಾದನೆ ಉದ್ಯೋಗಿಯನ್ನು ಆಯ್ಕೆ ಮಾಡಿ ಉದ್ಯೋಗಿಯನ್ನು ಸಂಪಾದಿಸಿ LIC ಪಾಲಿಸಿ ಅಂತಿಮ ದಿನಾಂಕ → ಪ್ರೀಮಿಯಂ ಮೊತ್ತ → ಟಿಪ್ಪಣಿಗಳು → ಇನಿಶಿಯೇಟರ್ ಲಾಗಿನ್‌ನಲ್ಲಿ ಡ್ರಾಫ್ಟ್ ಬಿಲ್…

Read More

ಬೆಂಗಳೂರು : ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 1242 ಖಾಲಿ ಇರುವ ಇತಿಹಾಸ ವಿಷಯದ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಆಯ್ಕೆಗೊಂಡು, ಸರ್ಕಾರದಿಂದ ನೇಮಕಾತಿ ಆದೇಶ ಹೊರಡಿಸಿರುವ ಅಭ್ಯರ್ಥಿಗೆ ಸ್ಥಳ ನಿಯುಕ್ತಿಗೊಳಿಸಿ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕಾಲೇಜು ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ, ಉಲ್ಲೇಖ-(1) ರ ಸರ್ಕಾರದ ಅಧಿಸೂಚನೆಗಳಲ್ಲಿ ಜಾರಿಗೊಳಿಸಿರುವ ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಕಾಲೇಜು ಶಿಕ್ಷಣ ಇಲಾಖೆ) (ಸಹಾಯಕ ಪ್ರಾಧ್ಯಾಪಕರ ನೇಮಕಾತಿ) (ವಿಶೇಷ) ನಿಯಮಗಳು, 2020 ಹಾಗೂ ತಿದ್ದುಪಡಿ ನಿಯಮಗಳನ್ವಯ ಆಯ್ಕೆ ಪ್ರಾಧಿಕಾರವಾದ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸರ್ಕಾರಕ್ಕೆ ಸಲ್ಲಿಸಿದ್ದ ಅರ್ಹ ಅಭ್ಯರ್ಥಿಗಳ ಅಂತಿಮ ಆಯ್ಕೆಪಟ್ಟಿಯನ್ನು ಸರ್ಕಾರವು ಉಲ್ಲೇಖ-(2) ರ ಅಧಿಸೂಚನೆಯಲ್ಲಿ ಪ್ರಕಟಿಸಿದೆ. ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಕಾಲೇಜು ಶಿಕ್ಷಣ ಇಲಾಖೆ) (ಸಹಾಯಕ ಪ್ರಾಧ್ಯಾಪಕರ ನೇಮಕಾತಿ) (ವಿಶೇಷ) ನಿಯಮಗಳು, 2020 ರ ನಿಯಮ…

Read More

ಬೆಂಗಳೂರು : 2025-26ನೇ ಸಾಲಿನ ರಾಜ್ಯಮಟ್ಟದ ಎಸ್.ಎಸ್.ಎಲ್.ಸಿ. ಪೂರ್ವಸಿದ್ಧತಾ ಪರೀಕ್ಷೆ-1ರ ವೇಳಾಪಟ್ಟಿ ಮತ್ತು ಮಾರ್ಗಸೂಚಿಯನ್ವಯ ಪರೀಕ್ಷೆಯನ್ನು ನಡೆಸುವ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಮಹತ್ವದ ಆದೇಶ ಹೊರಡಿಸಿದೆ. 2025-263 ಸಾಲಿನ ಎಸ್.ಎಸ್.ಎಲ್.ಸಿ ಪೂರ್ವಸಿದ್ಧತಾ ಪರೀಕ್ಷೆ-1ನ್ನು 05.01.2026 ರಿಂದ 10.01.2026 ರವರೆಗೆ ನಡೆಸಲು ತೀರ್ಮಾನಿಸಲಾಗಿದ್ದು, ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಪೂರ್ವ ಸಿದ್ದತಾ ಪರೀಕ್ಷೆಗೆ ಮುಖ್ಯ ಪರೀಕ್ಷೆಯ ಮಾದರಿಯಂತೆ ಪ್ರಶ್ನೆ ಪತ್ರಿಕೆಗಳನ್ನು ಸಿದ್ದಪಡಿಸಿ, ಅಯಾ ದಿನದ ಪ್ರಶ್ನೆಪತ್ರಿಕೆಯನ್ನು ವೇಳಾಪಟ್ಟಿಯಂತೆ ವಿಷಯವಾರು ಪ್ರಶ್ನೆಪತ್ರಿಕೆಯನ್ನು ಪರೀಕ್ಷಾ ದಿನದಂದು ಪೂರ್ವಾಹ್ನ 07.00 ಗಂಟೆಗೆ ಪ್ರೌಢಶಾಲೆಗಳ ಮುಖ್ಯಶಿಕ್ಷಕರ ಶಾಲಾ ಲಾಗಿನ್‌ನಲ್ಲಿ ಅಪ್‌ಲೋಡ್ ಮಾಡಲಾಗುವುದು. ಸಂಬಂಧಿಸಿದ ಪ್ರೌಢ ಶಾಲಾ ಮುಖ್ಯ ಶಿಕ್ಷಕರು ಪ್ರಶ್ನೆಪತ್ರಿಕೆಯನ್ನು ಮುದ್ರಿಸಿಕೊಂಡು ಪೂರ್ವ ಸಿದ್ಧತಾ ಪರೀಕ್ಷೆಯನ್ನು ನಡೆಸಲು ಅಗತ್ಯ ಕ್ರಮವಹಿಸುವುದು. ಎಸ್.ಎಸ್.ಎಲ್.ಸಿ. ಪೂರ್ವಸಿದ್ಧತಾ ಪರೀಕ್ಷೆಯು ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಮುಖ್ಯ ಪರೀಕ್ಷೆಗೆ ಸಂಬಂಧಿಸಿದಂತೆ ದಿಕ್ಕೂಚಿಯಾಗಿರುತ್ತದೆ. ಆದ್ದರಿಂದ ಪೂರ್ವಸಿದ್ಧತಾ ಪರೀಕ್ಷೆಯನ್ನು ಮುಖ್ಯ ಪರೀಕ್ಷೆಯನ್ನು ನಡೆಸುವ ರೀತಿಯಲ್ಲಿಯೇ ಶಿಸ್ತುಬದ್ಧವಾಗಿ, ಹಾಗೂ ಪಾರದರ್ಶಕವಾಗಿ ನಡೆಸಲು, ಜಿಲ್ಲಾ ಉಪನಿರ್ದೇಶಕರು…

Read More

ಬೆಂಗಳೂರು : ಕಳೆದ ವರ್ಷ ಡಿಸೆಂಬರ್ ನಲ್ಲಿ ಹುಬ್ಬಳ್ಳಿಯಲ್ಲಿ ದಲಿತ ಯುವಕನನ್ನ ಅಂತರ್ಜಾತಿ ವಿವಾಹ ಆಗಿದ್ದಕ್ಕೆ, ಯುವತಿಯ ತಂದೆ ಮನೆಗೆ ನುಗ್ಗಿ ಗರ್ಭಿಣಿ ಅಂತಾನೂ ನೋಡದೆ ಕೊಡಲಿಯಿಂದ ಕೊಚ್ಚಿ ಮಗಳನ್ನೇ ಹತ್ಯೆಗೈದ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಇದೀಗ ಈ ಒಂದು ಘಟನೆಯನ್ನು ಖಂಡಿಸಿದ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ರಾಜ್ಯದಲ್ಲಿ ‘ಮರ್ಯಾದಾ ಹತ್ಯೆ’ ತಡೆಗೆ ಶೀಘ್ರ ವಿಶೇಷ ಕಾನೂನು ರಚನೆ ಜಾರಿಗೊಳಿಸಲಾಗುತ್ತೆ ಎಂದು ಘೋಷಣೆ ಮಾಡಿದ್ದಾರೆ. ಹುಬ್ಬಳ್ಳಿ ತಾಲ್ಲೂಕಿನ ಇನಾಂ ವೀರಾಪುರದ ಮಾನ್ಯ ಎಂಬ ಯುವತಿಯ ಮರ್ಯಾದಾಗೇಡು ಹತ್ಯೆಗೆ ಸಂಬಂಧಿಸಿದಂತೆ ಪ್ರಕರಣದ ತ್ವರಿತ ವಿಚಾರಣೆ ನಡೆದು, ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡುವುದು ನಮ್ಮ ಪ್ರಮುಖ ಆದ್ಯತೆ. ಈ ಹಿನ್ನೆಲೆಯಲ್ಲಿ ತ್ವರಿತಗತಿ ನ್ಯಾಯಾಲಯ ರಚನೆಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ. ಇಲ್ಲಿ ದಲಿತರ ಮೇಲಿನ ದೌರ್ಜನ್ಯ ಹಾಗೂ ಕೊಲೆ ಪ್ರಕರಣ ದಾಖಲಾಗಿದೆ. ಇದು ಅಟ್ರಾಸಿಟಿ ಪ್ರಕರಣವಾಗಿರುವುದರಿಂದ 60 ದಿನಗಳ ಒಳಗಾಗಿ ದೋಷರೋಪ ಪಟ್ಟಿ ಸಲ್ಲಿಸಬೇಕಾಗಿದೆ. ಹೀಗಾಗಿ ಖಾಸಗಿ ಪ್ರಾಸಿಕ್ಯೂಟರ್‌ರನ್ನು ನೇಮಕ ಮಾಡಿಕೊಳ್ಳಲು ಕ್ರಮ…

Read More

ನವದೆಹಲಿ : ಸರ್ಕಾರವು ವರ್ಷಗಳ ಕಾಲ ನೌಕರರಿಂದ ಕೆಲಸ ತೆಗೆದುಕೊಂಡು ನಂತರ ಅವರನ್ನು ಖಾಯಂಗೊಳಿಸಲು ನಿರಾಕರಿಸುವಂತಿಲ್ಲ ಎಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಎರಡು ದಶಕಗಳಿಗೂ ಹೆಚ್ಚು ಕಾಲ ಕೆಲಸ ಮಾಡುತ್ತಿರುವ ದಿನಗೂಲಿ, ಗುತ್ತಿಗೆ ಮತ್ತು ತಾತ್ಕಾಲಿಕ ನೌಕರರ ಪರವಾಗಿ ತೀರ್ಪು ನೀಡುತ್ತಾ, ನೌಕರರಿಗೆ ನ್ಯಾಯ ಮತ್ತು ರಕ್ಷಣೆ ನೀಡುವುದು ಸರ್ಕಾರದ ಕರ್ತವ್ಯ ಎಂದು ಹೈಕೋರ್ಟ್ ಹೇಳಿದೆ. ನ್ಯಾಯಾಲಯವು ನೌಕರರನ್ನು ಖಾಯಂಗೊಳಿಸುವಂತೆ ಆದೇಶಿಸಿತು. ಸರ್ಕಾರವು ವರ್ಷಗಳ ಕಾಲ ನೌಕರರಿಂದ ಕೆಲಸ ತೆಗೆದುಕೊಂಡು ನಂತರ ಅವರನ್ನು ಖಾಯಂಗೊಳಿಸಲು ನಿರಾಕರಿಸುವಂತಿಲ್ಲ ಎಂದು ನ್ಯಾಯಾಲಯ ಹೇಳಿದೆ. ಹರಿಯಾಣ ಸರ್ಕಾರದ ವಿರುದ್ಧ ಸಲ್ಲಿಸಲಾದ 41 ಅರ್ಜಿಗಳ ಕುರಿತು ಜಂಟಿ ತೀರ್ಪು ನೀಡುತ್ತಾ, ನ್ಯಾಯಮೂರ್ತಿ ಸಂದೀಪ್ ಮೌದ್ಗಿಲ್ ಅವರ ಏಕ ಪೀಠವು 10 ವರ್ಷಗಳಿಗಿಂತ ಹೆಚ್ಚು ಸೇವೆ ಸಲ್ಲಿಸಿದ ನೌಕರರನ್ನು ಖಾಯಂಗೊಳಿಸುವುದು ಕಡ್ಡಾಯ ಎಂದು ಹೇಳಿದೆ. ತನ್ನ ತೀರ್ಪಿನಲ್ಲಿ, ನ್ಯಾಯಾಲಯವು ನೌಕರರನ್ನು ಖಾಯಂಗೊಳಿಸಲು ನಿರಾಕರಿಸುವುದನ್ನು ಅನ್ಯಾಯವೆಂದು ಪರಿಗಣಿಸಿದೆ. ಅರ್ಜಿದಾರರು 1994 ರಿಂದ ವಿವಿಧ ಇಲಾಖೆಗಳಲ್ಲಿ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿ ಬೀಳೀಸೋ ಕೃತ್ಯ ನಡೆದಿದ್ದು, ನಿಧಿಗಾಗಿ ದತ್ತು ಪೋಷಕರಿಂದ ಮಗುವನ್ನು ಬಲಿ ಕೊಡಲು ಯತ್ನಿಸಿರುವ ಘಟನೆ ಸೂಲಿಬೆಲೆಯಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲೆಬೆಲೆಯ ಜನತಾ ಕಾಲೋನಿಯಲ್ಲಿ ನಿಧಿಗಾಗಿ ಮನೆಯಲ್ಲಿ ಗುಂಡಿ ತೋಡಿ ಮಗು ಬಲಿಗಾಗಿ ಪೂಜೆ ಮಾಡುತ್ತಿದ್ದ ಆರೋಪ ಕೇಳಿ ಬಂದಿದೆ. ಈ ವೇಳೆ 8 ತಿಂಗಳ ಮಗುವನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ. ಸೈಯದ್ ಇಮ್ರಾನ್ ಎಂಬುವರ ಮನೆಯಲ್ಲಿ ನಿಧಿಗಾಗಿ ಮಗು ಬಲಿ ಪೂಜೆ ನಡೆಸಲಾಗುತ್ತಿತ್ತು ಎನ್ನಲಾಗಿದ್ದು, ಬೇರೆಯವರಿಂದ ಗಂಡು ಮಗುವನ್ನು ಖರೀದಿ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.ಹುಣ್ಣಿಮೆ ಹಿನ್ನೆಲೆ ಮಗು ಬಲಿ ಕೊಡುತ್ತಿದ್ದಾರೆಂದು ಅಪರಿಚಿತರು ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಕರೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಮನೆಯನ್ನು ಪರಿಶೀಲಿಸಿದಾಗ ಮನೆಯ ಕೋಣೆಯಲ್ಲಿ ಗುಂಡಿ ತೆಗೆದು ಪೂಜೆ ಮಾಡಿದ್ದು ಪತ್ತೆಯಾಗಿದೆ. ಸಹಾಯವಾಣಿಗೆ ಕರೆ ಬಂದ ಮಾಹಿತಿ ಆಧರಿಸಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲಿಸಿದ್ದಾರೆ. ಮನೆಯ ಕೋಣೆಯಲ್ಲಿ ಗುಂಡಿ…

Read More

ಬಳ್ಳಾರಿ : ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ ಪ್ರಕರಣಕ್ಕೆ ಸಂಬಂಧಿಸದಿಂತೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸತೀಶ್ ರೆಡ್ಡಿ ಆಪ್ತ ಗುರುಚರಣ್ ಸಿಂಗ್ ಬಂದೂಕಿನಿಂದ ಹಾರಿದ್ದ ಬುಲೆಟ್ ನಿಂದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ ಪ್ರಕರಣಕ್ಕೆ ಸಂಬಂಧಿಸದಿಂತೆ ಬ್ರೂಸ್ ಪೇಟೆ ಪೊಲೀಸರು ಮೂವರು ಖಾಸಗಿ ಗನ್ ಮ್ಯಾನ್ ಗಳನ್ನು ಬಂಧಿಸಿದ್ದಾರೆ. ಈ ವೇಳೆ ತನಿಖೆ ನಡೆಸಲಾಗಿದ್ದು, ಗುರುಚರಣ್ ಬಂದೂಕಿನಿಂದ ಹಾರಿದ್ದ ಬುಲೆಟ್ ನಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಖಾಸಗಿ ಗನ್ ಮ್ಯಾನ್ ಗಳಾದ ಮಹೇಂದ್ರ ಸಿಂಗ್, ಗುರುಚರಣ್ ಸಿಂಗ್, ಬಲ್ಜಿತ್ ಸಿಂಗ್ ನನ್ನು ಪೊಲೀಸರು ಬಂಧಿಸಿದ್ದಾರೆ. ಇವರು ಸತೀಶ್ ರೆಡ್ಡಿ ಖಾಸಗಿ ಗನ್ ಮ್ಯಾನ್ ಗಳಾಗಿದ್ದಾರೆ. ಸತೀಶ್ ರೆಡ್ಡಿ ಬಳ್ಳಾರಿ ನಗರ ಶಾಸಕ ಭರತ್ ರೆಡ್ಡಿ ಆಪ್ತರಾಗಿದ್ದಾರೆ..

Read More

ಬೆಂಗಳೂರು : ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮತ್ತು ಅವಹೇಳನಕಾರಿ ಸಂದೇಶ ಹಾಕಿದ ಮತ್ತಿಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಕೆಟ್ಟ ಕಮೆಂಟ್ಸ್ ಹಾಕಿದ್ದ ಮತ್ತಿಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿಯ ಪೆಟ್ರೋಲ್ ಬಂಕ್ ನ ಮ್ಯಾನೇಜರ್ ನಾಗರಾಜ ಗುಳ್ಳಪ್ಪ ತಳವಾರ ಹಾಗೂ ಧಾರವಾಡದ ಆಡಿಟರ್ ಪ್ರಶಾಂತ್ ತಳವಾರ ಎಂಬುವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಒಟ್ಟು ಇಲ್ಲಿಯವರೆಗೆ 4 ಆರೋಪಿಗಳು ಬಂಧಿಸಿದಂತಾಗಿದೆ. ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಮಾತನಾಡಿದ ಸುದೀಪ್, ಯುದ್ಧಕ್ಕೆ ಸಿದ್ಧವಾಗಿದ್ದೇವೆ ಅಂತ ಗುಡುಗಿದ್ದರು. ಐದು ತಿಂಗಳ ಹಿಂದೆ ‘ಮಾರ್ಕ್’ ರಿಲೀಸ್ ಡೇಟ್ ಅನೌನ್ಸ್ ಮಾಡಲಾಗಿತ್ತು. ಅಂತೆಯೇ ನಾವು ಡಿ. 25ರಂದು ಬರುತ್ತಿದ್ದೇವೆ. ಈ ನಡುವೆ ಒಂದು ಪಡೆ ಯುದ್ಧಕ್ಕೆ ಸಿದ್ಧವಾಗಿದೆ. ನಾವೂ ರೆಡಿಯಾಗಿದ್ದೇವೆ. ಡಿಸೆಂಬರ್ 25ಕ್ಕೆ ಜೋರಾಗಿ ಬಾಗಿಲು ತಟ್ಟುತ್ತಿದ್ದೇವೆ. ಆದರೆ ಹೊರಗಡೆ ಯುದ್ಧಕ್ಕೆ ಒಂದು ಪಡೆ…

Read More