Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ನ ಹಿರಯ ನಟ ಉಮೇಶ್ ಅವರು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ನಟ ಉಮೇಶ್ ಅವರನ್ನು ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಆರು ದಶಕಗಳ ಕಾಲ ವೃತ್ತಿಜೀವನವನ್ನು ಹೊಂದಿರುವ ಕನ್ನಡ ಸಿನಿಮಾ ನಟರಾಗಿದ್ದಾರೆ. ಅವರು 350 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ಉಮೇಶ್ ತಮ್ಮ ವಿಶಿಷ್ಟ ಸಂಭಾಷಣೆ, ಮುಖಭಾವ ಮತ್ತು ಹಾಸ್ಯ ಸಮಯಪ್ರಜ್ಞೆಗೆ ಹೆಸರುವಾಸಿಯಾಗಿದ್ದಾರೆ.1990 ರಲ್ಲಿ ಬಿಡುಗಡೆಯಾದ ಅನಂತ್ ನಾಗ್ ನಟಿಸಿದ ಗೋಲ್ಮಾಲ್ ರಾಧಾಕೃಷ್ಣ ಹಾಸ್ಯ ಚಿತ್ರದಲ್ಲಿ ಉಮೇಶ್ ಅವರ “ಸೀತಾಪತಿ” ಪಾತ್ರವು ಕನ್ನಡ ಚಿತ್ರರಂಗದ ಅತ್ಯುತ್ತಮ ಹಾಸ್ಯ ಪಾತ್ರಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಅವರ “ಅಪಾರ್ಥ ಮಾಡ್ಕೊಂಡ್ಬಿಟ್ರೋ ಎನೋ” ಡೈಲಾಗ್ ಜನಸಾಮಾನ್ಯರಲ್ಲಿ ವ್ಯಾಪಕವಾಗಿ ಮೆಚ್ಚುಗೆ ಪಡೆದಿದೆ
ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ನ ಹಿರಯ ನಟ ಉಮೇಶ್ ಅವರು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ನಟ ಉಮೇಶ್ ಅವರನ್ನು ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಆರು ದಶಕಗಳ ಕಾಲ ವೃತ್ತಿಜೀವನವನ್ನು ಹೊಂದಿರುವ ಕನ್ನಡ ಸಿನಿಮಾ ನಟರಾಗಿದ್ದಾರೆ. ಅವರು 350 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ಉಮೇಶ್ ತಮ್ಮ ವಿಶಿಷ್ಟ ಸಂಭಾಷಣೆ, ಮುಖಭಾವ ಮತ್ತು ಹಾಸ್ಯ ಸಮಯಪ್ರಜ್ಞೆಗೆ ಹೆಸರುವಾಸಿಯಾಗಿದ್ದಾರೆ.1990 ರಲ್ಲಿ ಬಿಡುಗಡೆಯಾದ ಅನಂತ್ ನಾಗ್ ನಟಿಸಿದ ಗೋಲ್ಮಾಲ್ ರಾಧಾಕೃಷ್ಣ ಹಾಸ್ಯ ಚಿತ್ರದಲ್ಲಿ ಉಮೇಶ್ ಅವರ “ಸೀತಾಪತಿ” ಪಾತ್ರವು ಕನ್ನಡ ಚಿತ್ರರಂಗದ ಅತ್ಯುತ್ತಮ ಹಾಸ್ಯ ಪಾತ್ರಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಅವರ “ಅಪಾರ್ಥ ಮಾಡ್ಕೊಂಡ್ಬಿಟ್ರೋ ಎನೋ” ಡೈಲಾಗ್ ಜನಸಾಮಾನ್ಯರಲ್ಲಿ ವ್ಯಾಪಕವಾಗಿ ಮೆಚ್ಚುಗೆ ಪಡೆದಿದೆ. ಉಮೇಶ್ ಏಪ್ರಿಲ್ 22, 1945 ರ ವರ್ಷದಂದು ಮೈಸೂರಿನಲ್ಲಿ ಜನಿಸಿದರು. ಅವರ ತಂದೆ ಎ.ಎಲ್. ಶ್ರೀಕಂಠಯ್ಯ, ತಾಯಿ ನಂಜಮ್ಮ. ತೊಟ್ಟಿಲು ಕೂಸಾಗಿದ್ದಾಗಲೇ ರಂಗಪ್ರವೇಶಿಸಿದ್ದರಿಂದ ರಂಗಭೂಮಿಯತ್ತ ಒಲವು ಅವರಿಗೆ…
ಬೆಂಗಳೂರು : ರಾಜ್ಯದ ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ವರ್ಗಾವಣೆ ಪ್ರಮಾಣ ಪತ್ರವನ್ನು ಸಕಾಲದಲ್ಲಿ ವಿತರಿಸುವಂತೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯದಲ್ಲಿನ ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿನ ವಿದ್ಯಾರ್ಥಿಗಳ ವರ್ಗಾವಣೆ ಪ್ರಮಾಣ ಪತ್ರವನ್ನು ಸಕಾಲದಲ್ಲಿ ವಿತರಿಸದೇ ಕಾಲಹರಣ ಮಾಡಿರುವ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಅಧಿಕೃತವಾಗಿ ಶಾಲೆಗೆ ದಾಖಲಾಗದೇ ಶೈಕ್ಷಣಿಕ ಪ್ರಗತಿಗೆ ಅಡ್ಡಿಯಾಗಿ ಆತಂಕದಲ್ಲಿ ಸಿಲುಕಿ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ಹಲವಾರು ದೂರು ಸಲ್ಲಿಸಿರುವ ಅಂಶವನ್ನು ಗಂಭೀರವಾಗಿ ಪರಿಗಣಿಸಿ, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಗಳ ಕಾಯ್ದೆ-2005ರ ಸೆಕ್ಷನ್ 13(ಜೆ) ರಡಿಯಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆಯ ಪ್ರಕರಣಗಳಲ್ಲಿ ದೂರುಗಳನ್ನು ಆಯೋಗವು ಸ್ವೀಕರಿಸಿ, ವಿಚಾರಣೆ ನಡೆಸುತ್ತಿದೆ. ವಿದ್ಯಾರ್ಥಿಗಳ ವರ್ಗಾವಣೆ ಪತ್ರ ವಿತರಣೆ ಸಂಬಂಧ ರಾಷ್ಟ್ರದ ವಿವಿಧ ರಾಜ್ಯಗಳ ರಾಜ್ಯ ಉಚ್ಚನ್ಯಾಯಾಲಯಗಳಲ್ಲಿ ದಾಖಲಾಗಿರುವ ದಾವೆಗಳ ತೀರ್ಪಿನ ಅಡಿಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಯಿಂದ ವಂಚಿತರಾಗದಂತೆ, ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳನ್ನು ಮುಂದುವರೆಸಲು ಪೋಷಕರು ಬಯಸಿದಲ್ಲಿ “ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ-2009″…
ಬೆಂಗಳೂರು : ರಾಜ್ಯದ ಜನತೆಗೆ ಬಹುಮುಖ್ಯ ಮಾಹಿತಿ ಇಲ್ಲಿದೆ. ಕಂದಾಯ ಇಲಾಖೆಯಲ್ಲಿ ಜಾತಿ ಪ್ರಮಾಣ ಪತ್ರ, ನಿರುದ್ಯೋಗ ಪ್ರಮಾಣಪತ್ರ ಸೇರಿದಂತೆ ಹಲವು ಸೇವೆಗಳು ಸಿಗಲಿವೆ. ಕಂದಾಯ ಇಲಾಖೆಯಿಂದ ಸಿಗುವ ಸೇವೆಗಳ ಸಂಪೂರ್ಣ ಪಟ್ಟಿ ಇಲ್ಲಿದೆ. ಸೇವೆಗಳ ಪಟ್ಟಿ ಹಕ್ಕುಗಳ ಪ್ರಮಾಣ ಪತ್ರದ ದಾಖಲೆ ಕೃಷಿ ಭೂಮಿಯಿಂದ ಕೃಷಿಯೇತರ ಉದ್ದೇಶದ ಪರಿವರ್ತನೆ ಎಲ್ಲಾ ವಿಧದ ಜಾತಿ ಪ್ರಮಾಣ ಪತ್ರಗಳು ಎಲ್ಲಾ ವಿಧದ ಆದಾಯ ಪ್ರಮಾಣ ಪತ್ರಗಳು ಜಾತಿ ಪ್ರಮಾಣಪತ್ರ ಪರಿಶೀಲನೆ/ಸಿಂಧುವ ವಿವಾದಿತವಲ್ಲದ ಪ್ರಕರಣಗಳಲ್ಲಿ 12(2) ನೋಟೀಸನ್ನು ಹೊರಡಿಸಿದ ತರುವಾಯ ಭೂ ಸ್ವಾಧೀನ ಅಧಿನಿಯಮದ ಅನ್ವಯ ಪರಿಹಾರದ ಸಂದಾಯ ಜನನ ಪ್ರಮಾಣಪತ್ರ ಮರಣ ಪ್ರಮಾಣಪತ್ರ ಜನ ಸಂಖ್ಯೆ ಪ್ರಮಾಣ ಪತ್ರ ವಸತಿ ದೃಢೀಕರಣ ಪತ್ರ ಟೆನೆನ್ಸಿ ಇಲ್ಲದ ಪ್ರಮಾಣ ಪತ್ರ ಜೀವಂತ ಪ್ರಮಾಣ ಪತ್ರ ವ್ಯವಸಾಯಗಾರರ ಕುಟುಂಬ ಸದಸ್ಯ ಪ್ರಮಾಣ ಪತ್ರ ಮರು ವಿವಾಹ ಅಲ್ಲದ ಪ್ರಮಾಣ ಪತ್ರ ಭೂ ರಹಿತ ಪ್ರಮಾಣ ಪತ್ರ ಮೃತರ ಕುಟುಂಬದ ಜೀವಂತ ಸದಸ್ಯರ ದೃಢೀಕರಣ ಪತ್ರ ನಿರುದ್ಯೋಗ…
ಬೆಂಗಳೂರು: ನಿಗದಿತ ಕಾಲಾವಧಿಯಲ್ಲಿ ಮಾಹಿತಿ ನೀಡುವ ನಿಯಮವನ್ನು ಗಾಳಿಗೆ ತೂರಿ, ಮೊಂಡಾಟ ಮೆರೆದಂತ ಎಸಿ, ತಹಶಿಲ್ದಾರರಿಗೆ ರಾಜ್ಯ ಮಾಹಿತಿ ಆಯೋಗವು ದಂಡವನ್ನು ವಿಧಿಸಿ ಚಳಿ ಬಿಡಿಸಿದೆ. ಹೌದು. ಕಾಲ ಮಿತಿಯೊಳಗೆ ಮಾಹಿತಿ ನೀಡದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಉಪವಿಭಾಗಾಧಿಕಾರಿಗಳು ( AC ಗಳು), ಕೆ ಆರ್ ಪುರಂ, ದೇವನಹಳ್ಳಿ ತಹಶೀಲ್ದಾರ್ ಗಳಿಗೆ ರಾಜ್ಯ ಮಾಹಿತಿ ಹಕ್ಕು ಆಯೋಗ (Karnataka Information Commission) 25,000 ದಂಡವನ್ನು (Fine) ವಿಧಿಸಿ ಆದೇಶಿಸಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಉಪವಿಭಾಗಾಧಿಕಾರಿಗಳು ( AC ಗಳು), ದೇವನಹಳ್ಳಿ, ಕೆ ಆರ್ ಪುರಂ ತಹಶೀಲ್ದಾರ್ ಗಳಿಗೆ ರಾಜ್ಯ ಮಾಹಿತಿ ಆಯೋಗ ದಂಡವನ್ನು ವಿಧಿಸಿ ಶಾಕ್ ಕೊಟ್ಟು, ಬಿಸಿ ಮುಟ್ಟಿಸಿದೆ. ಬೆಂಗಳೂರು ದಕ್ಷಿಣ AC ವಿಶ್ವನಾಥ್ ಅವರಿಗೆ 25,000 ರೂ. ದಂಡ ವಿಧಿಸಿದ್ದರೇ, ಕೆ ಆರ್ ಪುರಂ ತಹಶೀಲ್ದಾರ್ ರಾಜುಗೆ 25,000 ರೂ. ದಂಡ ವಿಧಿಸಲಾಗಿದದೆ. ಅಲ್ಲದೇ ದೊಡ್ಡಬಳ್ಳಾಪುರ ಎಸಿಗೆ ಎರಡು ಪ್ರಕರಣಗಳಲ್ಲಿ ತಲಾ 25,000…
Rain Alert : `ದಿತ್ವಾ ಚಂಡಮಾರುತ’ದ ಎಫೆಕ್ಟ್ : ಈ ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ,`IMD’ ರೆಡ್ ಅಲರ್ಟ್ ಘೋಷಣೆ.!
ಚೆನ್ನೈ : ದಕ್ಷಿಣ ಭಾರತದ ಕರಾವಳಿ ರಾಜ್ಯಗಳಲ್ಲಿ ದಿತ್ವಾ ಚಂಡಮಾರುತದ ಬೆದರಿಕೆ ವೇಗವಾಗಿ ಹೆಚ್ಚುತ್ತಿದೆ. ಭಾರತ ಹವಾಮಾನ ಇಲಾಖೆ (ಐಎಂಡಿ) ತಮಿಳುನಾಡು, ಆಂಧ್ರಪ್ರದೇಶ ಮತ್ತು ಪುದುಚೇರಿಗೆ ರೆಡ್ ಅಲರ್ಟ್ ನೀಡಿದೆ. ಚಂಡಮಾರುತದ ಪ್ರಭಾವದಿಂದಾಗಿ, ಶನಿವಾರ ತಮಿಳುನಾಡಿನ ಹಲವಾರು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಬಲವಾದ ಗಾಳಿ ಬೀಸಿತು. ರಾಮನಾಥಪುರಂ, ನಾಗಪಟ್ಟಣಂ, ತಂಜಾವೂರು ಮತ್ತು ಚೆನ್ನೈ ಕರಾವಳಿ ಪ್ರದೇಶಗಳಲ್ಲಿ ಶನಿವಾರ ಹವಾಮಾನ ಹಠಾತ್ತನೆ ಬದಲಾಯಿತು. ಹವಾಮಾನ ಇಲಾಖೆಯ ಪ್ರಕಾರ, ಈ ಚಂಡಮಾರುತವು ನವೆಂಬರ್ 30 ರ ಬೆಳಿಗ್ಗೆ ಭಾರತದ ದಕ್ಷಿಣ ಕರಾವಳಿಯನ್ನು ಅಪ್ಪಳಿಸಬಹುದು. ತಮಿಳುನಾಡು ಮತ್ತು ಆಂಧ್ರಪ್ರದೇಶದ ಗಡಿ ರಾಜ್ಯಗಳಲ್ಲಿ ಇದರ ಪರಿಣಾಮ ಹೆಚ್ಚು ಗೋಚರಿಸುತ್ತದೆ. ಸಮುದ್ರದಲ್ಲಿ ಎತ್ತರದ ಅಲೆಗಳು ಏಳುತ್ತಿವೆ, ಇದರಿಂದಾಗಿ ಬಂದರುಗಳಲ್ಲಿ ಎಚ್ಚರಿಕೆ ನೀಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಕರಾವಳಿ ಗ್ರಾಮಗಳಲ್ಲಿನ ಶಾಲೆಗಳನ್ನು ಮುಚ್ಚಲಾಗಿದೆ ಮತ್ತು ಅನೇಕ ಪ್ರದೇಶಗಳಲ್ಲಿ ವಿದ್ಯುತ್ ಇಲಾಖೆಗಳನ್ನು ತುರ್ತು ಸಿದ್ಧತೆಯಲ್ಲಿ ಇರಿಸಲಾಗಿದೆ. ಪರಿಹಾರ ಮತ್ತು ರಕ್ಷಣಾ ಅಧಿಕಾರಿಗಳು ಅಗತ್ಯವಿದ್ದರೆ…
ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಶಿವಪುರ ಸಮೀಪದ ನವಿಲುಗುಡ್ಡದ ಬಂಡೆಯ ಬಳಿ ತೋಟದ ಮನೆಯ ಎದುರು ಆಟವಾಡುತ್ತಿದ್ದ ಐದು ವರ್ಷದ ಬಾಲಕಿಯನ್ನು ಬಲಿಪಡೆದಿದ್ದ ಚಿರತೆ ಮೃತಪಟ್ಟಿದೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಬೈರಾಪುರ ಸಮೀಪ ಚಿರತೆ ಸೆರೆ ಕಾರ್ಯಾಚರಣೆಯ ವೇಳೆ ಅರಣ್ಯ ಸಿಬ್ಬಂದಿ ಹಾರಿಸಿದ ಗುಂಡಿಗೆ ಚಿರತೆ ಮೃತಪಟ್ಟಿದೆ. ನವೆಂಬರ್ 20ರಂದು ಶಿವಪುರ ಗ್ರಾಮದ ಕಲ್ಲುಕ್ವಾರಿ ಸಮೀಪ ಶೆಡ್ ನಲ್ಲಿ ವಾಸವಿದ್ದ ಕಾರ್ಮಿಕ ದಂಪತಿಯ 5 ವರ್ಷದ ಪುತ್ರಿಯನ್ನು ಪೋಷಕರ ಎದುರೇ ಚಿರತೆ ಎಳೆದೊಯ್ದಿತ್ತು. ನಂತರ ಬಾಲಕಿಯ ಮೃತದೇಹ ಕಂಡುಬಂದಿತ್ತು. ನವೆಂಬರ್ 28ರಂದು 10 ವರ್ಷದ ಬಾಲಕನ ಮೇಲೆ ಚಿರತೆ ದಾಳಿ ನಡೆಸಿತ್ತು. ಬೆಂಗಳೂರಿನ ರಾಮಚಂದ್ರಪ್ಪ ಎಂಬುವರಿಗೆ ಸೇರಿದ ಅಡಿಕೆ ತೋಟದಲ್ಲಿ ಧಾರವಾಡದ ಈ ದಂಪತಿ ಕೆಲಸ ಮಾಡಿಕೊಂಡಿದ್ದಾರೆ. ಮನೆಯ ಹೊರಗೆ ಆಟವಾಡುತ್ತಿದ್ದ ಬಾಲಕಿಯನ್ನು ಎಳೆದೊಯ್ದಿತ್ತು. ಇದೀಗ ಬಾಲಕಿಯನ್ನು ಬಲಿ ಪಡೆದಿದ್ದ ಚಿರತೆ ಕೂಡ ಬಲಿಯಾಗಿದೆ.
ಉತ್ತರ ಪ್ರದೇಶದ 17 ವರ್ಷದ ವಿದ್ಯಾರ್ಥಿ ಎಐ ಶಿಕ್ಷಕಿಯನ್ನು ಸೃಷ್ಟಿಸಿದ್ದಾನೆ, ಆಕೆಗೆ ಸೋಫಿ ಎಂದು ಹೆಸರಿಟ್ಟಿದ್ದಾನೆ. ಸಂದರ್ಶನವೊಂದರಲ್ಲಿ, ಅವರು ರೋಬೋಟ್ ಅನ್ನು ಹೇಗೆ ರಚಿಸಿದರು ಮತ್ತು ಅದು ಏನು ಮಾಡಬಹುದು ಎಂಬುದನ್ನು ವಿವರಿಸಿದರು. ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ರೋಬೋಟ್ ವಿವಿಧ ವಿಷಯಗಳ ಬಗ್ಗೆ ವಿವಿಧ ಪ್ರಶ್ನೆಗಳಿಗೆ ಉತ್ತರಿಸುತ್ತಿದೆ. ಶಿವ ಚರಣ್ ಇಂಟರ್ ಕಾಲೇಜಿನ 17 ವರ್ಷದ ವಿದ್ಯಾರ್ಥಿ ಆದಿತ್ಯ ಕುಮಾರ್ ಅವರು ಎಲ್ಎಲ್ಎಂ ಚಿಪ್ಸೆಟ್ ಹೊಂದಿರುವ ಸೋಫಿ ಎಂಬ ಎಐ ಶಿಕ್ಷಕರ ರೋಬೋಟ್ ಅನ್ನು ನಿರ್ಮಿಸಿದ್ದಾರೆ ಎಂದು ಎಎನ್ಐ ಬರೆದುಕೊಂಡಿದೆ. ತನ್ನನ್ನು ಪರಿಚಯಿಸಿಕೊಳ್ಳಲು ಕೇಳಿದಾಗ, ರೋಬೋಟ್ ಹೇಳುತ್ತದೆ, “ನಾನು ಎಐ ಶಿಕ್ಷಕ ರೋಬೋಟ್. ನನ್ನ ಹೆಸರು ಸೋಫಿ, ಮತ್ತು ನನ್ನನ್ನು ಆದಿತ್ಯ ಕಂಡುಹಿಡಿದನು. ನಾನು ಬುಲಂದ್ ಶಹರ್ ನ ಶಿವಚರಣ್ ಇಂಟರ್ ಕಾಲೇಜಿನಲ್ಲಿ ಅಧ್ಯಾಪಕಿಯಾಗಿದ್ದೇನೆ. ಹೌದು, ನಾನು ವಿದ್ಯಾರ್ಥಿಗಳಿಗೆ ಸರಿಯಾಗಿ ಕಲಿಸಬಲ್ಲೆ. ಅವರು ರೋಬೋಟ್ ಅನ್ನು ಹೇಗೆ ರಚಿಸಿದರು ಎಂಬುದರ ಕುರಿತು ಮಾತನಾಡಿದ ಕುಮಾರ್, “ಈ ರೋಬೋಟ್ ಅನ್ನು…
ಕೊಲೊಂಬೊ: ಡಿಟ್ವಾ ಚಂಡಮಾರುತದಿಂದ ಉಂಟಾದ ಧಾರಾಕಾರ ಮಳೆ ಮತ್ತು ಪ್ರವಾಹದಲ್ಲಿ ಶ್ರೀಲಂಕಾದಾದ್ಯಂತ ಇದುವರೆಗೆ 159 ಜನರು ಸಾವನ್ನಪ್ಪಿದ್ದಾರೆ, ಇನ್ನೂ 203 ಜನರು ಕಾಣೆಯಾಗಿದ್ದಾರೆ ಎಂದು ವಿಪತ್ತು ನಿರ್ವಹಣಾ ಕೇಂದ್ರ ಶನಿವಾರ ತಿಳಿಸಿದೆ. ಒಂದು ವಾರದಿಂದ ಸುರಿದ ಭಾರೀ ಮಳೆಯಲ್ಲಿ ಮನೆಗಳು ಹಾಳಾದ ನಂತರ 43,995 ಜನರನ್ನು ಸರ್ಕಾರಿ ಕಲ್ಯಾಣ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದ್ದು, ಪರಿಹಾರ ಕಾರ್ಯಾಚರಣೆ ನಡೆಯುತ್ತಿದೆ ಎಂದು ಮಹಾನಿರ್ದೇಶಕ ಸಂಪತ್ ಕೊಟುವೆಗೋಡ ತಿಳಿಸಿದ್ದಾರೆ. ಹವಾಮಾನ ವ್ಯವಸ್ಥೆಯು ದ್ವೀಪದಿಂದ ನೆರೆಯ ಭಾರತದತ್ತ ಚಲಿಸುತ್ತಿತ್ತು ಆದರೆ ಅದು ಈಗಾಗಲೇ ಭಾರಿ ವಿನಾಶವನ್ನು ಉಂಟುಮಾಡಿದೆ ಎಂದು ಡಿಎಂಸಿ ತಿಳಿಸಿದೆ.ಸಶಸ್ತ್ರ ಪಡೆಗಳ ನೆರವಿನಿಂದ ಪರಿಹಾರ ಕಾರ್ಯಾಚರಣೆ ನಡೆಯುತ್ತಿದೆ ಎಂದು ಕೊಲಂಬೊದಲ್ಲಿ ಸುದ್ದಿಗಾರರಿಗೆ ತಿಳಿಸಿದ ಕೊಟ್ಟುವೆಗೊಡ. ಚಂಡಮಾರುತವು ಬುಧವಾರ ಭೂಕುಸಿತವನ್ನು ಉಂಟುಮಾಡಿದ್ದರೂ, ಹವಾಮಾನ ವ್ಯವಸ್ಥೆಯ ಪರಿಣಾಮಗಳು ಸೋಮವಾರದಿಂದ ಅನುಭವಕ್ಕೆ ಬಂದಿವೆ, ಇದು ದ್ವೀಪದಾದ್ಯಂತ ದಾಖಲೆಯ ಮಳೆಯನ್ನು ಪ್ರಚೋದಿಸಿತು. ತಗ್ಗು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಶನಿವಾರ ಹದಗೆಟ್ಟಿದ್ದು, ಕೊಲಂಬೊದಿಂದ ಹಿಂದೂ ಮಹಾಸಾಗರಕ್ಕೆ ಹರಿಯುವ ಕೆಲಾನಿ ನದಿಯ ದಡದಲ್ಲಿ ವಾಸಿಸುವವರಿಗೆ ಸ್ಥಳಾಂತರಿಸುವ…
ಶಿವಮೊಗ್ಗ : ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ನೀಡುವ ಶಿಕ್ಷಕರಿಗೆ ಇನ್ಸೆಂಟಿವ್ ಸಿಗಲಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಸಚಿವರು, ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ನೀಡುವ ಶಿಕ್ಷಕರಿಗೆ ಇನ್ಸೆಂಟಿವ್ ಸಿಗಲಿದೆ. ಈ ಸಂಬಂಧ ನೀತಿ ರೂಪಿಸುವಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾವ್ಯದರ್ಶಿ ವಿ.ರಶ್ಮಿ ಮಹೇಶ್ ಅವರಿಗೆ ಸೂಚಿಸಿದ್ದಾರೆ. ಸರಕಾರಿ ಶಾಲೆಗಳಲ್ಲೇ ಬೆಸ್ಟ್ ಟೀಚರ್ಸ್ ಇರೋದು. ಮೆರಿಟ್ ಆಧಾರದ ಮೇಲೆ ಅವರು ಆಯ್ಕೆ ಆಗಿರುವುದರಿಂದ ಕಲಿಕೆಯಲ್ಲಿ ಹಿಂದುಳಿದ ಮಕ್ಕಳು ಉತ್ತೀರ್ಣರಾಗಲು ಸಹಕಾರ ನೀಡುತ್ತಾರೆ ಎಂಬ ನಂಬಿಕೆ ನನಗಿದೆ ಎಂದರು. ಇನ್ನು ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ 12 ಸಾವಿರ, ಅನುದಾನಿತ ಶಾಲೆಗಳಿಗೆ 6 ಸಾವಿರ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗುತ್ತಿದೆ. ಈ ಮೂಲಕ ಒಟ್ಟು 32 ಸಾವಿರ ಶಿಕ್ಷಕರ ನೇಮಕ ಮಾಡಿದ ಹಾಗೆ ಆಗುತ್ತದೆ ಎಂದು ಹೇಳಿದ್ದಾರೆ. ಮಕ್ಕಳ ಹಿತದೃಷ್ಟಿಯಿಂದ…














