Author: kannadanewsnow57

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, 1650 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಈ ಕಛೇರಿಯ ಉಲ್ಲೇಖಿತ ಪತ್ರವನ್ನು ಗಮನಿಸಲು ಕೋರಲಾಗಿದೆ. ಸದರಿ ಪತ್ರದಲ್ಲಿ 1650 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ (275 ಕಲ್ಯಾಣ ಕರ್ನಾಟಕ ಮತ್ತು 1375 ಕಲ್ಯಾಣ ಕರ್ನಾಟಕೇತರ ಹುದ್ದೆಗಳು) ಸಂಬಂಧಪಟ್ಟ ಘಟಕಗಳಿಂದ ವರ್ಗಿಕರಣವನ್ನು ಪಡೆದು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲು ಕ್ರಮ ಕೈಗೊಳ್ಳುವಂತೆ ಕೋರಲಾಗಿತ್ತು ಹಾಗೂ ಘಟಕವಾರು ಹುದ್ದೆಗಳ ಹಂಚಿಕೆಯ ವಿವರವನ್ನು ಅನುಬಂಧ ಆ ರಲ್ಲಿ ಒದಗಿಸಲಾಗಿತ್ತು. ಸದರಿ 1650 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳನ್ನು ಆಡಳಿತಾತ್ಮಕ ಕಾರಣಗಳಿಂದ ಮರು ಹಂಚಿಕೆಮಾಡಲಾಗಿದ್ದು, ಘಟಕವಾರು ಹುದ್ದೆಗಳ ಮರು ಹಂಚಿಕೆಯ ವಿವರವನ್ನು ಅನುಬಂಧ-ಅರಲ್ಲಿ ಲಗತ್ತಿಸಿದೆ. ಹಾಗೂ ಸದರಿ ಹುದ್ದೆಗಳಿಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಘಟಕಗಳಿಂದ ವರ್ಗಿಕರಣವನ್ನು ಪಡೆದು ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳವಂತೆ ಕೋರಲಾಗಿದೆ.

Read More

ಫಿಲಿಫೈನ್ಸ್ : ಭಾನುವಾರ ಸಂಜೆ ಮಧ್ಯ ಫಿಲಿಪೈನ್ಸ್ನ ಲೇಟ್ ದ್ವೀಪದ ಕರಾವಳಿಯಲ್ಲಿ 5.7 ತೀವ್ರತೆಯ ಭೂಕಂಪ ಸಂಭವಿಸಿದೆ. ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ (USGS) ಪ್ರಕಾರ, ಭೂಕಂಪವು ಸಂಜೆ 5:05 UTC (ರಾತ್ರಿ 10:35 IST) ಕ್ಕೆ ಸಂಭವಿಸಿದೆ, ಇದರ ಕೇಂದ್ರಬಿಂದುವು ಟ್ಯಾಂಬೊಂಗನ್ನಿಂದ ಆಗ್ನೇಯಕ್ಕೆ 2 ಕಿಲೋಮೀಟರ್ ದೂರದಲ್ಲಿ 10 ಕಿಲೋಮೀಟರ್ ಆಳದಲ್ಲಿದೆ ಎಂದು USGS ವರದಿ ಮಾಡಿದೆ. ಲೇಟ್ ಮತ್ತು ಸೆಂಟ್ರಲ್ ವಿಸಾಯಾಸ್ ಪ್ರದೇಶದ ಕೆಲವು ಭಾಗಗಳಲ್ಲಿ ಕಂಪನಗಳು ಕಂಡುಬಂದಿದ್ದರೂ, ಹಾನಿ ಅಥವಾ ಸಾವುನೋವುಗಳ ಬಗ್ಗೆ ತಕ್ಷಣದ ವರದಿಗಳಿಲ್ಲ ಎಂದು ಸ್ಥಳೀಯ ಮಾಧ್ಯಮಗಳು ತಿಳಿಸಿವೆ. ಸಂಭವನೀಯ ನಂತರದ ಆಘಾತಗಳಿಗಾಗಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ, ಅಕ್ಟೋಬರ್ 10 ರಂದು ಫಿಲಿಪೈನ್ಸ್ನ ಮಿಂಡಾನಾವೊ ಪ್ರದೇಶದಲ್ಲಿ 7.6 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿ ವ್ಯಾಪಕ ಭೀತಿಯನ್ನು ಉಂಟುಮಾಡಿತು ಮತ್ತು ಸುನಾಮಿ ಎಚ್ಚರಿಕೆಗಳನ್ನು ನೀಡಿತು. ಫಿಲಿಪೈನ್ ಇನ್ಸ್ಟಿಟ್ಯೂಟ್ ಆಫ್ ವೋಲ್ಕಾನಾಲಜಿ ಅಂಡ್ ಸೀಸ್ಮಾಲಜಿ (ಫಿವೊಲ್ಕ್ಸ್) ಪ್ರಕಾರ, ಭೂಕಂಪವು 62 ಕಿಲೋಮೀಟರ್ ಆಳದಲ್ಲಿ…

Read More

ಬೆಂಗಳೂರು: ಗ್ರಾಮ ಪಂಚಾಯತಿಗಳಲ್ಲಿ ಬಾಪೂಜಿ ಸೇವಾ ಕೇಂದ್ರಗಳಲ್ಲಿ 44 ಅಟಲ್ ಜೀ ಜನಸ್ನೇಹಿ ಕೇಂದ್ರಗಳ (ನಾಡಕಛೇರಿ) ಸೇವೆಗಳಿಗೆ ಪಂಚತಂತ್ರ 2.0 ತಂತ್ರಾಂಶದ ಮೂಲಕ ಅರ್ಜಿಗಳನ್ನು ಸ್ವೀಕಾರ ಮಾಡಲಾಗುತ್ತದೆ. ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯು ನಾಗರಿಕರಿಗೆ ವಿವಿಧ ಸೇವೆಗಳನ್ನು ಅಟಲ್ ಜೀ ಜನಸ್ನೇಹಿ ಕೇಂದ್ರಗಳ (ನಾಡಕಛೇರಿ) ಮೂಲಕ ಸುಲಭವಾಗಿ ತಲುಪಿಸುವ ಗುರಿಯನ್ನು ಹೊಂದಿದೆ. ಆನ್ಲೈನ್ ​​ಪೋರ್ಟಲ್ ಮೂಲಕ ಕೆಲವು ಸೇವೆಗಳು ಸಹ ಲಭ್ಯವಿವೆ. ಇದು ಸೇವೆಗಳ ವಿತರಣೆಯನ್ನು ಸಕ್ರಿಯಗೊಳಿಸಲು ಬ್ಯಾಕೆಂಡ್ ಕಂಪ್ಯೂಟರೀಕರಣವನ್ನು ಬಳಸುತ್ತದೆ ಮತ್ತು ಪಾರದರ್ಶಕತೆ ಮತ್ತು ನಿಯಮಗಳ ಏಕರೂಪದ ಅನ್ವಯವನ್ನು ಖಾತ್ರಿಗೊಳಿಸುತ್ತದೆ. ಸೇವೆಗಳ ಎಲೆಕ್ಟ್ರಾನಿಕ್ ವಿತರಣೆಯು ನಾಗರಿಕರಿಗೆ ತಮ್ಮ ಅರ್ಜಿಯ ಸ್ಥಿತಿ ಪರಿಶೀಲಿಸಲು ಹಾಗೂ ಸರ್ಕಾರಕ್ಕೆ ಅರ್ಜಿಗಳ ವಿಲೆವಾರಿಯನ್ನು ಮಾನಿಟರ್ ಮಾಡಲು ಅನುವು ಮಾಡಿಕೊಡುತ್ತದೆ. ಇದರಿಂದಾಗಿ ಪ್ರಕ್ರಿಯೆಯ ಒಟ್ಟಾರೆ ದಕ್ಷತೆ ಸುಧಾರಣೆಯಾಗಿದೆ ಮತ್ತು ಸಾರ್ವಜನಿಕರಿಗೆ ಸಕಾಲದಲ್ಲಿ ಪರಿಣಾಮಕಾರಿ ಸೇವೆಗಳನ್ನು ಒದಗಿಸಲು ಇಲಾಖೆಯನ್ನು ಶಕ್ತಗೊಳಿಸುತ್ತದೆ. ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯು ಜಾತಿ ಮತ್ತು ಆದಾಯ, ಭೂಮಿ ಮತ್ತು ಕೃಷಿಕರಿಗೆ ಸಂಬಂಧಿಸಿದ…

Read More

ಬೆಂಗಳೂರು : ಚಾರ್ಜ್ ಹಾಕಿದ್ದ ಎಲೆಕ್ಟ್ರಿಕ್ ಬೈಕ್ ಏಕಾಏಕಿ ಸ್ಪೋಟಗೊಂಡು ಹೊತ್ತಿ ಉರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಬಸವೇಶ್ವರ ನಗರದ ಶಿವನಹಳ್ಳಿಯಲ್ಲಿ ಜಾರ್ಜ್ ಹಾಕಿದ್ದ ಎಲೆಕ್ಟ್ರಿಕ್ ಬೈಕ್ ಏಕಾಏಕಿ ಸ್ಪೋಟಗೊಂಡು ಹೊತ್ತಿ ಉರಿದಿದೆ. ಮುಕೇಶ್ ಎಂಬುವರ ಬೈಕ್ ಚಾರ್ಜ್ ಹಾಕಿದ್ದ ವೇಳೆ ಸ್ಪೋಟಗೊಂಡು ಹೊತ್ತಿ ಉರಿದಿದೆ. ಸ್ಥಳಕ್ಕಾಗಮಿಸಿ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

Read More

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 2-3 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆಯಿಂದ ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಎರಡು ದಿನ ಮತ್ತು ಹಾಸನ, ಕೊಡಗು, ಮೈಸೂರಿನಲ್ಲಿ ಅ.15ರಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನು ಉಡುಪಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 5 ದಿನ ಸಾಧಾರಣ ಮಳೆ ಯಾಗಲಿದೆ. ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿದಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ನೆರವು ಪಡೆಯುವ ಸಹಕಾರಿ ಸಂಘಗಳ ನೌಕರರೂ ಲೋಕಾಯುಕ್ತ ವ್ಯಾಪ್ತಿಗೆ ಬರುತ್ತವೆ ಎಂಬುದಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹಣಕಾಸು ನೆರವು ಪಡೆದುಕೊಳ್ಳುವ ಸಹಕಾರ ಸಂಘದ ಸಿಬ್ಬಂದಿ ಸಹ ಭ್ರಷ್ಟಾಚಾರ ನಿಯಂತ್ರಣಾ ಕಾಯ್ದೆಯ ವ್ಯಾಪ್ತಿಗೆ ಬರಲಿದ್ದಾರೆ ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿದೆ. ಅಲ್ಲದೆ, ಹಾಸನ ಜಿಲ್ಲೆಯ ಹಿರೇಕಡಲೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಸಿ.ಎ.ಕೀರ್ತಿಕುಮಾರ್ ವಿರುದ್ಧ ದಾಖಲಾಗಿರುವ ಆದಾಯ ಮೀರಿ ಆಸ್ತಿ ಪ್ರಕರಣ ಕುರಿತು ತನಿಖೆ ನಡೆಸಲು ಲೋಕಾಯುಕ್ತ ಪೊಲೀಸರಿಗೆ ಅನುಮತಿ ನೀಡುವಂತೆ ಸಂಘಕ್ಕೆ ಇದೇ ವೇಳೆ ನ್ಯಾಯಾಲಯ ಸೂಚಿಸಿದೆ. ಭ್ರಷ್ಟಾಚಾರದ ಆರೋಪದಲ್ಲಿ ಸಂಘದ ಕಾರ್ಯದರ್ಶಿ ಸಿ.ಎ.ಕೀರ್ತಿಕುಮಾರ್‌ ವಿರುದ್ಧ ತನಿಖೆಗೆ ಅನುಮತಿ ನಿರಾಕರಿಸಿ ನಿರ್ಣಯ ಕೈಗೊಂಡಿದ್ದ ಸಂಘದ ಕ್ರಮ ಪ್ರಶ್ನಿಸಿ ಲೋಕಾಯುಕ್ತ ಪೊಲೀಸರು ಹೈಕೋಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ನಟರಾಜ್ ಅವರು, ತಾನು ಸರ್ಕಾರಿ ಸಂಸ್ಥೆಯಲ್ಲ ಎಂದು ಹಿರೇಕಡಲೂರು ಪ್ರಾಥಮಿಕ ಕೃಷಿ ಪತ್ತಿನ…

Read More

ಶಿವಮೊಗ್ಗ: ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 18,000 ಶಿಕ್ಷಕರ ನೇಮಕಾತಿಗೆ ಶೀಘ್ರವೇ ಅಧಿಸೂಚನೆ ಹೊರಡಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಶಾಲೆಗಳ 12,000, ಅನುದಾನಿತ ಶಾಲೆಗಳ 6 ಸಾವಿರ ಸೇರಿ 18,000 ಶಿಕ್ಷಕರ ನೇಮಕಾತಿಗೆ ಶೀಘ್ರವೇ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ. ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಲು ಸರ್ಕಾರ ಅತಿಥಿ ಶಿಕ್ಷಕರ ನೇಮಕ ಮಾಡಲು ನಿರ್ಧರಿಸಿದೆ. ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ನಾಲ್ಕರಿಂದ ಐದು ಸಾವಿರ ಹುದ್ದೆಗಳಿಗೆ ಅತಿಥಿ ಶಿಕ್ಷಕರ ನೇಮಕಾತಿಗೆ ಆಯಾ ಶಿಕ್ಷಣ ಸಂಸ್ಥೆಗಳಿಗೆ ಅವಕಾಶ ಕಲ್ಪಿಸಲಿದ್ದು, ಸರ್ಕಾರದಿಂದಲೇ ಗೌರವ ಧನ ಪಾವತಿಸಲಾಗುವುದು ಎಂದು ಹೇಳಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಕೊರತೆ ಸಮಸ್ಯೆ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಇದಕ್ಕೆ ನಾನಾ ಕಾರಣಗಳಿವೆ. ಆದರೆ, ಮುಂದೆ ಈ ರೀತಿ ಸಮಸ್ಯೆ ಉಲ್ಬಣಗೊಳ್ಳಬಾರದು ಎಂಬ ಕಾರಣಕ್ಕೆ ಸರ್ಕಾರಿ ಶಾಲೆಯಲ್ಲೇ ಎಲ್ಲೆಜಿ, ಯುಕೆಜಿಯನ್ನು ಆರಂಭಿಸಲಾಗಿದೆ. ಸದ್ಯ ಈ ವರ್ಷ ರಾಜ್ಯದಲ್ಲಿ 5 ಸಾವಿರ…

Read More

ಮೈಸೂರು: ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಆರ್ ಎಸ್ಎಸ್ ಪಥಸಂಚಲನದ ವೇಳೆ ಕುಸಿದುಬಿದ್ದು ಕಾರ್ಯಕರ್ತರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಆರ್ ಎಸ್ ಎಸ್ ಪಥಸಂಚಲನದ ವೇಳೆ ಕುಸಿದು ಬಿದ್ದ ಜಯನಗರದ ಮಹೇಂದ್ರ (37) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಗೋಕುಲಂನಲ್ಲಿ ಭಾನುವಾರ ನಡೆದ ಪಥಸಂಚಲನದಲ್ಲಿ ಭಾಗವಹಿಸಿದ್ದ ಮಹೇಶ್ ಕುಸಿದುಬಿದ್ದು ಮೃತಪಟ್ಟಿದ್ದಾರೆ.

Read More

ನವದೆಹಲಿ : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು, ಬುಡಕಟ್ಟು ವಿದ್ಯಾರ್ಥಿಗಳಿಗಾಗಿ ಸ್ಥಾಪಿಸಲಾದ ರಾಷ್ಟ್ರೀಯ ಶಿಕ್ಷಣ ಸಂಘ (NESTS), ಶಿಕ್ಷಕರು ಮತ್ತು ಇತರ ಹುದ್ದೆಗಳ ನೇಮಕಾತಿಗಾಗಿ EMRS ನೇಮಕಾತಿ 2023 ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ದೇಶಾದ್ಯಂತ ಕಾರ್ಯನಿರ್ವಹಿಸುತ್ತಿರುವ 400 ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ (EMRS) 7,267 ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 23. ವಿವಿಧ ಉದ್ಯೋಗ ಖಾಲಿ ಹುದ್ದೆಗಳ ವಿವರಗಳು ಶಾಲಾ ಪ್ರಾಂಶುಪಾಲರು ಖಾಲಿ ಹುದ್ದೆಗಳ ಸಂಖ್ಯೆ: 225 ಶೈಕ್ಷಣಿಕ ಅರ್ಹತೆ: ಸ್ನಾತಕೋತ್ತರ ಪದವಿ ಮತ್ತು ಬಿ.ಎಡ್ ಪದವಿ ಹೊಂದಿರಬೇಕು. ಅಲ್ಲದೆ, 12 ವರ್ಷಗಳ ಕೆಲಸದ ಅನುಭವ ಕಡ್ಡಾಯವಾಗಿದೆ. ವಯಸ್ಸಿನ ಅರ್ಹತೆ: 50 ವರ್ಷಕ್ಕಿಂತ ಕಡಿಮೆ ಇರಬೇಕು. ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು. ಸಂಬಳ: ₹78,800 – ₹2,09,200 ಸ್ನಾತಕೋತ್ತರ ಶಿಕ್ಷಕರು (PGT) ಖಾಲಿ ಹುದ್ದೆಗಳ ಸಂಖ್ಯೆ: 1,460 ಇಂಗ್ಲಿಷ್ – 112…

Read More

ಬೆಂಗಳೂರು : ಒಂದು ಕಡೆ ವಿಪಕ್ಷ ನಾಯಕರು ನವೆಂಬರ್ನಲ್ಲಿ ಭಾರಿ ಕ್ರಾಂತಿ ಅಗಲಿದೆ ರಾಜ್ಯ ರಾಜಕಾರಣದಲ್ಲಿ ಹಲವು ಬದಲಾವಣೆ ಆಗಲಿದೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಇನ್ನೊಂದು ಕಡೆ ಸಿಎಂ ಸಿದ್ದರಾಮಯ್ಯ ತಮ್ಮ ಎಲ್ಲಾ ಸಂಪುಟ ಸಹ ಉದ್ಯೋಗಿಗಳಿಗೆ ಇಂದು ಔತಣಕೂಟ ಏರ್ಪಡಿಸಿದ್ದಾರೆ. ಈ ಮೂಲಕ ಬಿಹಾರ ಚುನಾವಣೆಯ ಬಳಿಕ ರಾಜ್ಯ ಸಚಿವ ಸಂಪುಟ ಪುನಾರಚನೆ ಮಾಡೋದು ಬಹುತೇಕ ಫಿಕ್ಸ್ ಎಂಬಂತೆ ಈ ಒಂದು ಔತಣಕೂಟದ ಮೂಲಕ ಸುಳಿವು ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಹೌದು ಇಂದು ಸಂಪುಟ ಸಹೋದ್ಯೋಗಿಗಳಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ ಏರ್ಪಡಿಸಿದ್ದು, ಸಚಿವ ಸಂಪುಟ ಪುನಾರಚನೆಗು ಮುನ್ನ ಸಿಎಂ ಸಿದ್ದರಾಮಯ್ಯ ಔತಣಕೂಟ ಏರ್ಪಡಿಸಿದ್ದಾರೆ. ಬಿಹಾರ ಎಲೆಕ್ಷನ್ ಫಲಿತಾಂಶದ ಬಳಿಕ ಸಂಪುಟ ಪುನಾರಚನೆ ಬಹುತೇಕ ಪಕ್ಕಾ ಎಂದು ಹೇಳಲಾಗುತ್ತಿದೆ. ಬೇರೆ ಬೇರೆ ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲೂ ಕೂಡ ಈ ಒಂದು ಔತಣಕೂಟ ಭಾರಿ ಮಹತ್ವ ಪಡೆದುಕೊಂಡಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಹಾಗೂ ಸಚಿವರು ಹೇಗೆ ತೊಡಗಿಸಿಕೊಳ್ಳಬೇಕು ಎಂಬ…

Read More