Author: kannadanewsnow57

ರಾಜ್ಯ ಸರ್ಕಾರ ಬಿ.ಪಿ.ಎಲ್.ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆಸಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಹಾಗೂ ಶ್ರವಣಬೆಳಗೊಳ ಶಾಸಕ ಬಾಲಕೃಷ್ಣ.ಸಿ.ಎನ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ಬಿ.ಪಿ.ಎಲ್ ಕಾರ್ಡ್‍ದಾರರ ಆದಾಯ ಮಿತಿಯನ್ನು ರೂ.1.20 ಲಕ್ಷಕ್ಕೆ ಮಿತಿಗೊಳಿಸಿದೆ. ಆದರೆ ಕೂಲಿ ಕೆಲಸಗಾರರಿಗೂ ಪ್ರತಿದಿನ ರೂ.500 ಕೂಲಿ ದೊರೆಯುತ್ತದೆ. ಇದರ ಆಧಾರದಲ್ಲಿ ಕೂಲಿ ಮಾಡುವವರ ಆದಾಯವೂ ವರ್ಷಕ್ಕೆ ರೂ.1.80 ಲಕ್ಷಕ್ಕೂ ಅಧಿಕವಾಗುತ್ತಿದೆ. ಈ ಹಿನ್ನಲೆಯಲ್ಲಿ ಪರಿಷ್ಕರಿಸಲು ಚಿಂತನೆ ನಡೆದಿದೆ ಎಂದರು. ಕೇಂದ್ರ ಸರ್ಕಾರ ರಾಜ್ಯದಲ್ಲಿ 7,75,206 ಶಂಕಾಸ್ಪದ ಪಡಿತರ ಫಲಾನುಭವಿಗಳನ್ನು ಗುರುತಿಸಿದೆ. ರಾಜ್ಯದಲ್ಲಿ 4.53 ಲಕ್ಷ ಬಿ.ಪಿ.ಎಲ್ ಹಾಗೂ 1.25 ಲಕ್ಷ ಎ.ಪಿ.ಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿವೆ. ರಾಜ್ಯದ ಜನಸಂಖ್ಯೆಗೆ…

Read More

ಬೆಳಗಾವಿ : ರೈತರು ಪೂರೈಸುವ ಕಬ್ಬು ತೂಕದಲ್ಲಿ ಮೋಸ ಮಾಡಿದ್ದು ಸಾಬೀತಾದಲ್ಲಿ ಅಂತಹ ಕಾರ್ಖಾನೆಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಸಚಿವರಾದ ಶಿವಾನಂದ ಪಾಟೀಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಕಬ್ಬು ಬೆಳೆಗಾರರ ಹಿತ ಕಾಯಲು ಸರ್ಕಾರ ಬದ್ಧವಾಗಿದೆ. ರಾಜ್ಯದಲ್ಲಿ ಒಟ್ಟು 81 ಸಕ್ಕರೆ ಕಾರ್ಖಾನೆಗಳಿದ್ದು, ಅಲ್ಲಿ ಡಿಜಿಟಲ್ ವೇ ಬ್ರಿಡ್ಜ್ಗಳಿವೆ. ಸರ್ಕಾರದಿಂದಲೇ ಈ ವರ್ಷ 12 ಕಾರ್ಖಾನೆಗಳಲ್ಲಿ ಡಿಜಿಟಲ್ ತೂಕದ ಯಂತ್ರ ಅಳವಡಿಕೆಗಾಗಿ ಈಗಾಗಲೇ ಟೆಂಡರ್ ಕರೆಯಲಾಗಿದೆ. ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬು ತೂಕ ಮಾಡುವ ಯಂತ್ರದಲ್ಲಿ ಮೋಸ ಆಗುತ್ತಿರುವ ಬಗ್ಗೆ ಯಾವುದೇ ರೈತರು ಇದುವರೆಗೂ ದೂರು ಸಲ್ಲಿಸಿಲ್ಲ. ರೈತರು ದೂರು ಸಲ್ಲಿಸಿ, ಬಳಿಕ ಇದು ಸಾಬೀತಾದಲ್ಲಿ ಅಂತಹ ರೈತರಿಗೆ 2 ಲಕ್ಷ ರೂ. ಬಹುಮಾನ ಕೊಡುತ್ತೇವೆ ಎಂದು ಸರ್ಕಾರ ಘೋಷಿಸಿತ್ತು. ಇದೀಗ ಈ ಬಹುಮಾನ ಮೊತ್ತವನ್ನು 5 ಲಕ್ಷ ರೂ. ಗಳಿಗೆ ಹೆಚ್ಚಿಸಲಾಗಿದೆ. ಒಂದು ವೇಳೆ ತೂಕದಲ್ಲಿ ಮೋಸ ಮಾಡುವ…

Read More

ಬೆಳಗಾವಿ :ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವಂತಹ ಪೊಲೀಸರು / ಅಧಿಕಾರಿಗಳ ವಿರುದ್ಧ ಕಾನೂನು ಪ್ರಕರಣಗಳನ್ನು ದಾಖಲಿಸಿಕೊಂಡು, ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತಿದ್ದು, ಆರೋಪವು ಸಾಬೀತಾದಲ್ಲಿ ಅಂತಹ ಪೊಲೀಸ್ ಅಧಿಕಾರಿ / ಸಿಬ್ಬಂದಿಗಳ ವಿರುದ್ಧ ಕರ್ನಾಟಕ ರಾಜ್ಯ ಪೊಲೀಸ್ (ಶಿಸ್ತು ನಡವಳಿ) (ತಿದ್ದುಪಡಿ) ನಿಯಮಗಳಡಿ ಶಿಸ್ತು ಕ್ರಮ ಕೈಗೊಳ್ಳಲಾಗುತ್ತಿದೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಶರವಣ ಟಿ. ಎ. ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು ಉತ್ತರಿಸಿದ್ದು, ಪ್ರಸ್ತುತ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ 88 ಪೊಲೀಸರು / ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ, ಎಫ್ಐಆರ್ ದಾಖಲಿಸಿ, ಅರೆಸ್ಟ್ ಮಾಡಿ, ಸಸ್ಪೆಂಡ್ ಮಾಡಲಾಗಿದ್ದು, ಪ್ರಕರಣ ಸಾಬೀತಾದಲ್ಲಿ ಅವರನ್ನು ಸೇವೆಯಿಂದ ವಜಾ ಗೊಳಿಸಲಾಗುವುದು ಎಂದು ಹೇಳಿದ್ದಾರೆ. ರಾಜ್ಯದ ಪೊಲೀಸರು / ಅಧಿಕಾರಿಗಳು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವುದನ್ನು ತಡೆಗಟ್ಟಲು ರಾಜ್ಯದ ಎಲ್ಲಾ ಘಟಕದ ಅಧಿಕಾರಿಗಳಿಗೆ, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರುಗಳಿಗೆ ಕರ್ತವ್ಯ ಪಾಲನೆಯ ಕುರಿತು ಸೂಕ್ತ ಸೂಚನೆ/ ನಿರ್ದೇಶನಗಳನ್ನು ನೀಡಲಾಗಿರುತ್ತದೆ. ಇಂತಹ…

Read More

ಬೆಳಗಾವಿ :ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವಂತಹ ಪೊಲೀಸರು / ಅಧಿಕಾರಿಗಳ ವಿರುದ್ಧ ಕಾನೂನು ಪ್ರಕರಣಗಳನ್ನು ದಾಖಲಿಸಿಕೊಂಡು, ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತಿದ್ದು, ಆರೋಪವು ಸಾಬೀತಾದಲ್ಲಿ ಅಂತಹ ಪೊಲೀಸ್ ಅಧಿಕಾರಿ / ಸಿಬ್ಬಂದಿಗಳ ವಿರುದ್ಧ ಕರ್ನಾಟಕ ರಾಜ್ಯ ಪೊಲೀಸ್ (ಶಿಸ್ತು ನಡವಳಿ) (ತಿದ್ದುಪಡಿ) ನಿಯಮಗಳಡಿ ಶಿಸ್ತು ಕ್ರಮ ಕೈಗೊಳ್ಳಲಾಗುತ್ತಿದೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಶರವಣ ಟಿ. ಎ. ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು ಉತ್ತರಿಸಿದ್ದು, ಪ್ರಸ್ತುತ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ 88 ಪೊಲೀಸರು / ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ, ಎಫ್ಐಆರ್ ದಾಖಲಿಸಿ, ಅರೆಸ್ಟ್ ಮಾಡಿ, ಸಸ್ಪೆಂಡ್ ಮಾಡಲಾಗಿದ್ದು, ಪ್ರಕರಣ ಸಾಬೀತಾದಲ್ಲಿ ಅವರನ್ನು ಸೇವೆಯಿಂದ ವಜಾ ಗೊಳಿಸಲಾಗುವುದು ಎಂದು ಹೇಳಿದ್ದಾರೆ. ರಾಜ್ಯದ ಪೊಲೀಸರು / ಅಧಿಕಾರಿಗಳು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವುದನ್ನು ತಡೆಗಟ್ಟಲು ರಾಜ್ಯದ ಎಲ್ಲಾ ಘಟಕದ ಅಧಿಕಾರಿಗಳಿಗೆ, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರುಗಳಿಗೆ ಕರ್ತವ್ಯ ಪಾಲನೆಯ ಕುರಿತು ಸೂಕ್ತ ಸೂಚನೆ/ ನಿರ್ದೇಶನಗಳನ್ನು ನೀಡಲಾಗಿರುತ್ತದೆ. ಇಂತಹ…

Read More

ಬೆಳಗಾವಿ: ರಾಜ್ಯ ಸರ್ಕಾರವು ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದ್ದು, ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3600 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯಿಂದ ಒಪ್ಪಿಗೆ ಸಿಕ್ಕಿದ್ದು, ಅಧಿಸೂಚನೆ ಹೊರಡಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ವಿಧಾನ ಪರಿಷತ್ ನಲ್ಲಿ ಮಾತನಾಡಿ, ಒಳ ಮೀಸಲಾತಿ ಪ್ರಕ್ರಿಯೇ ಪೂರ್ವದಲ್ಲೇ ಅಧಿಸೂಚನೆ ಆಗಿದ್ದರಿಂದ ಈಗಾಗಲೇ 947 ಪಿಎಸ್ಐ ಗಳ ಭರ್ತಿ ಪ್ರಕ್ರಿಯೆ ಪೂರ್ಣಗೊಂಡು ಅಭ್ಯರ್ಥಿಗಳು ತರಬೇತಿಯಲ್ಲಿದ್ದಾರೆ. ಒಳ ಮೀಸಲು ಕಲ್ಪಿಸುವ ಪ್ರಕ್ರಿಯೆ ಪೂರ್ಣವಾಗಿದ್ದರಿಂದ ಈಗ ಇಲಾಖೆಯಲ್ಲಿ ನೇಮಕಾತಿ ಪ್ರಕ್ರಿಯೆ ಚುರುಕುಗೊಂಡಿದೆ. ಸದ್ಯದ ಪರಿಸ್ಥಿತಿಯಲ್ಲಿ 167 ಗೃಹರಕ್ಷಕ ದಳದ ಸಿಬ್ಬಂದಿಯನ್ನು ನೇಮಿಸಿಕೊಂಡಿದ್ದೇವೆ ಎಂದು ತಿಳಿಸಿದರು. ಇನ್ನೂ ಸ್ವಯಂ ಪ್ರೇರಿತ ದೂರುಗಳನ್ನು ದಾಖಲಿಸುವಾಗ, ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ಸಂದರ್ಭ, ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿಯನ್ನುಂಟು ಮಾಡಿದ ಸಂದರ್ಭ, ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದಲ್ಲಿ, ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದಲ್ಲಿ, ವಾರಸುದಾರರು ಯಾರೂ ಇಲ್ಲದೇ ಇರುವ ಪ್ರಕರಣಗಳಲ್ಲಿ, ದ್ವೇಷಭಾಷಣ ಹಾಗೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟಾಗುವ ಸಂದರ್ಭಗಳಲ್ಲಿ, ಕೆಲವು ಪ್ರಕರಣಗಳಲ್ಲಿ…

Read More

ಬೆಂಗಳೂರು : ಪಾರಿವಾಳಗಳ ಮಲ-ಮೂತ್ರದಿಂದ ಸೋಂಕು ಹರಡುವುದು, ಉಸಿರಾಟ ತೊಂದರೆ ಸೇರಿದಂತೆ ಶ್ವಾಸಕೋಶ ಸಂಬಂಧಿತ ಗಂಭೀರ ಆರೋಗ್ಯ ಸಮಸ್ಯೆಗಳಾಗುತ್ತಿವೆ ಎಂದು ಸಚಿವ ದಿನೇಶ್ಯ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದರಿಂದ ಅವುಗಳ ದಟ್ಟಣೆ ಹೆಚ್ಚಾಗಿದೆ. ಪರಿಣಾಮ ಅವುಗಳ ಮಲ-ಮೂತ್ರದಿಂದ ಸೋಂಕು ಹರಡುವುದು, ಉಸಿರಾಟ ತೊಂದರೆ ಸೇರಿದಂತೆ ಶ್ವಾಸಕೋಶ ಸಂಬಂಧಿತ ಗಂಭೀರ ಆರೋಗ್ಯ ಸಮಸ್ಯೆಗಳಾಗುತ್ತಿವೆ. ಹಾಗಾಗಿ ಸರ್ಕಾರ ಹೊಸ ನಿಯಂತ್ರಣ ಮಾರ್ಗಸೂಚಿಗಳನ್ನು ಹೊರಡಿಸಿದೆ ಎಂದು ತಿಳಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವಂತಿಲ್ಲ. ನಿಯಮ ಉಲ್ಲಂಘಿಸಿದರೆ ದಂಡ ಅಥವಾ ಜೈಲು ಶಿಕ್ಷೆಯನ್ನೂ ವಿಧಿಸಲಾಗುವುದು. ಹಾಗಾಗಿ ಈ ಕುರಿತು ನಿರ್ಲಕ್ಷ ಬೇಡ, ನಿಯಮ ಪಾಲಿಸಿ- ಶಿಕ್ಷೆಯಿಂದ ಪಾರಾಗಿ ಎಂದು ಹೇಳಿದ್ದಾರೆ. https://twitter.com/dineshgrao/status/2001513646212681966?s=20

Read More

ಬೆಳಗಾವಿ : ರಾಜ್ಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದೊಳಗೆ 11ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ಹರೀಶ ಪೂಂಜ ಅವರ ಪ್ರಶ್ನೆಗೆ ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಉತ್ತರಿಸಿದ್ದು, ರಾಜ್ಯದಲ್ಲಿ 41,088 ಸರ್ಕಾರಿ ಪ್ರಾಥಮಿಕ ಶಾಲೆಗಳಿವೆ. 1,78,935 ಹುದ್ದೆಗಳು ಮಂಜೂರಾಗಿದ್ದು, ಈ ಪೈಕಿ 1,33,345 ಹುದ್ದೆಗಳು ಭರ್ತಿಯಾಗಿದ್ದು, 45,590 ಹುದ್ದೆಗಳು ಖಾಲಿ ಇರುತ್ತವೆ. ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ನೇಮಕಾತಿ ಮಾಡಲು ಈಗಾಗಲೇ ಕ್ರಮ ವಹಿಸಲಾಗಿದೆ ಎಂದರು. ರಾಜ್ಯದಲ್ಲಿ 5,024 ಸರ್ಕಾರಿ ಪ್ರೌಢ ಶಾಲೆಗಳಿದ್ದು, ಈ ಪ್ರೌಢಶಾಲೆಗಳಿಗೆ 44,144 ಹುದ್ದೆಗಳು ಮಂಜೂರಾಗಿರುತ್ತವೆ. ಈ ಪೈಕಿ 32,010 ಹುದ್ದೆಗಳು ಭರ್ತಿಯಾಗಿದ್ದು 12,134 ಹುದ್ದೆಗಳು ಖಾಲಿ ಇರುತ್ತವೆ. ಪ್ರಸ್ತುತ ಖಾಲಿ ಇರುವ ಹುದ್ದೆಗಳಿಗೆ ಎದುರಾಗಿ 2025-2026ನೇ ಶೈಕ್ಷಣಿಕ ಸಾಲಿಗೆ ಪ್ರಾಥಮಿಕ ಶಾಲೆಗಳಲ್ಲಿ 40,000 ಮತ್ತು ಪ್ರೌಢಶಾಲೆಗಳಲ್ಲಿ 11,000 ಒಟ್ಟಾರೆಯಾಗಿ 51,000…

Read More

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಹೋಟೆಲ್ ಬೆಸ್ಟಿಯನ್ ಗಾರ್ಡನ್ ಸಿಟಿಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಅಧಿಕಾರಿಗಳು ಬುಧವಾರ ಅವರ ಮುಂಬೈ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಈ ಹಿಂದೆ, ನಟಿಯ ಆತಿಥ್ಯ ವ್ಯವಹಾರಕ್ಕೆ ಸಂಬಂಧಿಸಿದ ಅದೇ ತನಿಖೆಯ ಭಾಗವಾಗಿ ಬೆಂಗಳೂರಿನಲ್ಲಿಯೂ ಶೋಧ ನಡೆಸಲಾಗಿತ್ತು. ಶಿಲ್ಪಾ ಶೆಟ್ಟಿ ಸಹ-ಮಾಲೀಕತ್ವದ ಬಾಸ್ಟಿಯನ್ ಗಾರ್ಡನ್ ಸಿಟಿ ಸೇರಿದಂತೆ ಎರಡು ಪಬ್ಗಳ ವಿರುದ್ಧ ಬೆಂಗಳೂರು ಪೊಲೀಸರು ಅನುಮತಿ ಪಡೆದ ಸಮಯವನ್ನು ಮೀರಿ ಕಾರ್ಯನಿರ್ವಹಿಸಿದ ಆರೋಪದ ಮೇಲೆ ಪ್ರಕರಣಗಳನ್ನು ದಾಖಲಿಸಿದ ಒಂದು ದಿನದ ನಂತರ ಇತ್ತೀಚಿನ ಕ್ರಮ ಕೈಗೊಳ್ಳಲಾಗಿದೆ.

Read More

ನವದೆಹಲಿ : “ವಿಬಿಜಿ ರಾಮ್ಜಿ ಮಸೂದೆ” ಲೋಕಸಭೆಯಲ್ಲಿ ಅಂಗೀಕಾರವಾಗಿದ್ದು, ವ್ಯಾಪಕ ವಿರೋಧದ ಗದ್ದಲದ ನಡುವೆಯೂ ಸರ್ಕಾರ ಅಂಗೀಕಾರವನ್ನು ಖಚಿತಪಡಿಸಿಕೊಂಡಿದೆ. ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರ ಮೇಲೂ ವಿರೋಧ ಪಕ್ಷದ ಸಂಸದರು ಕಾಗದ ಎಸೆದರು. ‘ವಿಕ್ಷಿತ್ ಭಾರತ್ – ರೋಜ್ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗಾಗಿ ಖಾತರಿ: ವಿಬಿ – ಜಿ ರಾಮ್ ಜಿ ಮಸೂದೆ, 2025’ ಲೋಕಸಭೆಯಲ್ಲಿ ಅಂಗೀಕಾರವಾಯಿತು. ಡಿಸೆಂಬರ್ 19 ರ ಬೆಳಿಗ್ಗೆ 11:00 ಕ್ಕೆ ಸದನ ಮುಂದೂಡಿಕೆ. https://twitter.com/ANI/status/2001558099195552040?s=20

Read More

ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಮತ್ತೆ 8 ಮಂದಿ ತಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕಂದಾಯ ಇಲಾಖೆಯ ತಹಶೀಲ್ದಾರ್ ವೃಂದದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅವರುಗಳ ಹೆಸರುಗಳ ಮುಂದೆ ನಮೂದಿಸಿರುವ ಸ್ಥಳಕ್ಕೆ ವರ್ಗಾಯಿಸಿ/ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ. ಇಲ್ಲಿದೆ ವರ್ಗಾವಣೆಗೊಂಡ ತಹಶೀಲ್ದಾರ್ ಗಳ ಪಟ್ಟಿ

Read More