Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ನೋಂದಣಿ ಮತ್ತು ನೋಂದಣಿಯೇತರ ಛಾಪಾ ಕಾಗದ ವಹಿವಾಟುಗಳಿಗೆ ಬಳಸುವ ‘ಇ– ಸ್ಟ್ಯಾಂಪ್’ ಬದಲಿಗೆ ‘ಡಿಜಿಟಲ್ ಇ– ಸ್ಟ್ಯಾಂಪ್’ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ನೋಂದಣಿ ಮತ್ತು ನೋಂದಣಿಯೇತರ ಛಾಪಾ ಕಾಗದ ವಹಿವಾಟುಗಳಿಗೆ ಬಳಸುವ ‘ಇ– ಸ್ಟ್ಯಾಂಪ್’ ಬದಲಿಗೆ ‘ಡಿಜಿಟಲ್ ಇ– ಸ್ಟ್ಯಾಂಪ್’ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಸ್ಟ್ಯಾಂಪ್ ವಂಚನೆ ಮತ್ತು ಭದ್ರತಾ ಲೋಪವನ್ನು ಸಂಪೂರ್ಣ ತೊಡೆದು ಹಾಕಲು ಈ ಹೊಸ ವ್ಯವಸ್ಥೆ ಪರಿಚಯಿಸಲಾಗಿದ್ದು, ಮುಂದಿನ ದಿನಗಳಲ್ಲಿ ‘ಡಿಜಿಟಲ್ ಇ-ಸ್ಟ್ಯಾಂಪ್’ ಕಡ್ಡಾಯಗೊಳಿಸಲಾಗುವುದು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ. ನಾಗರಿಕರು ಮಧ್ಯವರ್ತಿಗಳ ನೆರವಿಲ್ಲದೆ, ಮನೆಯಲ್ಲಿಯೇ ಕುಳಿತು ‘ಡಿಜಿಟಲ್ ಇ– ಸ್ಟ್ಯಾಂಪ್’ ತಯಾರಿಸಿಕೊಳ್ಳಬಹುದು. ಇಂಟರ್ನೆಟ್ ಇದ್ದರೆ 24×7 ಜಗತ್ತಿನಲ್ಲಿ ಎಲ್ಲಿಯೇ ಕುಳಿತು ಈ ಸೇವೆಯನ್ನು ಪಡೆಯಬಹುದು. ಎಲ್ಲ ಸೇವೆಗಳು ಸಂಪೂರ್ಣ ಡಿಜಿಟಲ್ ಆಗಿರಲಿದೆ. ಸುರಕ್ಷಿತ ಮತ್ತು ವೇಗವಾಗಿ ಆನ್ಲೈನ್ ಪಾವತಿ ಮಾಡಲು ಕೂಡಾ ಅವಕಾಶವಿದೆ ಎಂದು ಮಾಹಿತಿ ನೀಡಿದ್ದಾರೆ. ಡಿಜಿಟಲ್ ಸ್ಟ್ಯಾಂಪ್ ಪಡೆಯುವುದು ಹೇಗೆ? https://kaveri.karnataka.gov.in/landing-page ผล. ಒ೦ದೇ ಬಾರಿ…
ಬೆಂಗಳೂರು : ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಪೌಷ್ಟಿಕ ಆಹಾರದ ಇಂದಿರಾ ಕಿಟ್ ಪಡೆಯಲು ಫಲಾನುಭವಿಗಳಿಗೆ ಕ್ಯೂಆರ್ ಕೋಡ್ ಸ್ಕ್ಯಾನ್ ಕಡ್ಡಾಯ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಮಾಡಲಾಗಿದ್ದು, ರಾಜ್ಯದಲ್ಲಿ ಇಂದಿರಾ ಕಿಟ್ ಪಡೆಯಲು ಪ್ರತಿ ನ್ಯಾಯಬೆಲೆ ಅಂಗಡಿಯಲ್ಲಿ ಕ್ಯುಆರ್ ಸ್ಕ್ಯಾನ್ ಮಾಡಬಹುದಾದ ತಂತ್ರಾಂಶ ಅಳವಡಿಸಿ, ಸ್ಕ್ಯಾನ್ ಮಾಡಿದ ನಂತರವೇ ‘ಇಂದಿರಾ ಫುಡ್ ಕಿಟ್ ವಿತರಿಸಲು ಸೂಚಿಸಲಾಗಿದೆ. ಹೆಚ್ಚುವರಿ ಐದು ಕೆಜಿ ಅಕ್ಕಿ ಬದಲು ಫಲಾನುಭವಿಗಳ ಪುನಶ್ವೇತನ, ಸಮಗ್ರ ಪೌಷ್ಟಿಕ ಆಹಾರ ಪೂರೈಕೆ ಉಪಕ್ರಮವಾಗಿ ತೊಗರಿಬೇಳೆ, ಖಾದ್ಯ ಎಣ್ಣೆ, ಸಕ್ಕರೆ, ಉಪ್ಪು ಒಳಗೊಂಡ ‘ಇಂದಿರಾ ಕಿಟ್’ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇಂದಿರಾ ಕಿಟ್ನಲ್ಲಿ ಏನೆಲ್ಲಾ ಸಾಮಗ್ರಿ ಸಿಗಲಿವೆ? ಈ ಯೋಜನೆಯಡಿ ಕುಟುಂಬದ ಸದಸ್ಯರ ಸಂಖ್ಯೆಗೆ ಅನುಗುಣವಾಗಿ ಐದು ಕೆಜಿ ಅಕ್ಕಿ ಬದಲಾಗಿ ತೊಗರಿ ಬೇಳೆ, ಸೂರ್ಯಕಾಂತಿ ಎಣ್ಣೆ, ಸಕ್ಕರೆ, ಉಪ್ಪು ನೀಡಲಾಗುವುದು. ಪ್ರತಿ ತಿಂಗಳು ಪ್ರಸ್ತುತ 1,25,08,262…
ಬೆಂಗಳೂರು: ರಾಜ್ಯದಲ್ಲಿ 5-10 ವರ್ಷದವರೆಗಿನ ಶಾಲಾ ಮಕ್ಕಳ ಆಧಾರ್ ಕಾರ್ಡ್ನ ಕಡ್ಡಾಯ ಬಯೋಮೆಟ್ರಿಕ್ ಅಪ್ಡೇಟ್ (ಎಂಬಿಯು) ಮಾಡಿಸಲು ರಾಜ್ಯ ಮತ್ತು ಜಿಲ್ಲಾ ಮಟ್ಟದ ಸಮಿತಿಯನ್ನು ರಚಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ. ಮೇಲೆ ಓದಲಾದ (1)ರಲ್ಲಿನ ದಿನಾಂಕ:16.07.2025ರ ಸಭಾ ನಡವಳಿಯಲ್ಲಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, AJSK ಮತ್ತು EDCS ಸಹಯೋಗದೊಂದಿಗೆ, ವಾರ್ಷಿಕವಾಗಿ ಸುಮಾರು 20 ಲಕ್ಷ MBU ಗಳನ್ನು ಪೂರ್ಣಗೊಳಿಸುವ ಉದ್ದೇಶದಿಂದ ಶಾಲೆಗಳಲ್ಲಿ ಶಿಬಿರಗಳನ್ನು ಆಯೋಜಿಸಲು ಪ್ರಸ್ತಾಪಿಸಲಾಗಿರುವುದಾಗಿ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯನ್ನು ಯುಐಡಿಎಐ ಅಡಿಯಲ್ಲಿ ರಾಜ್ಯ ರಿಜಿಸ್ಟ್ರಾರ್ ಆಗಿ ನೇಮಿಸಲು, 300-500 ಇಸಿಎಂಪಿ ಕಿಟ್ಗಳನ್ನು ಸಂಗ್ರಹಿಸಲು ಮತ್ತು ಶಾಲಾ ಅಧಿಕಾರಿಗಳಿಗೆ ತರಬೇತಿ ನೀಡಲು ಅಥವಾ ಪ್ರಮಾಣೀಕೃತ ನಿರ್ವಾಹಕರ ಮೂಲಕ ವಿದ್ಯಾರ್ಥಿಗಳ ಆಧಾರ್ MBU ಕಾರ್ಯವನ್ನು ನಡೆಸಲು ಒಂದು ವ್ಯವಸ್ಥೆಯನ್ನು ರೂಪಿಸಲು ಪ್ರಸ್ತಾಪಿಸಲಾಗಿದೆ. ಮೇಲೆ ಓದಲಾದ (2)ರಲ್ಲಿನ, ದಿನಾಂಕ:16.09.2025ರ ಸಭಾ ನಡವಳಿಯಲ್ಲಿ, ಸರ್ಕಾರಿ ಶಾಲಾ-ಕಾಲೇಜುಗಳನ್ನು ನೋಂದಣಿ ಅಥವಾ ದಾಖಲಾತಿ ಏಜೆನ್ಸಿಗಳನ್ನಾಗಿ ಮಾಡಲಾಗುವುದಿಲ್ಲ…
ಬೆಂಗಳೂರು : ದಿತ್ವ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 2-3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ತುಮಕೂರು ಚಿಕ್ಕಬಳ್ಳಾಪುರ, ಕೋಲಾರ, ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇಂದು (ಡಿ.4) ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಡಿ.4ರಂದು ಬೆಳಗಾವಿ, ರಾಯಚೂರು, ಕೊಪ್ಪಳ, ಧಾರವಾಡ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಇನ್ನು ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಡಿ.5ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ…
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು 75ಕ್ಕಿಂತ ಹೆಚ್ಚಿನ ವಯಸ್ಸಿನ ಹಿರಿಯ ನಾಗರಿಕರಿಗೆ ಏಕ ಸದಸ್ಯ ಪಡಿತರ ಚೀಟಿದಾರರಿಗೆ “ಅನ್ನ ಸುವಿಧ” ಯೋಜನೆಯಡಿ ಮನೆ ಬಾಗಿಲಿಗೆ ಪಡಿತರ ವಿತರಿಸುವ ಕಾರ್ಯಕ್ರಮ ಪ್ರಾರಂಭಿಸಿದೆ. ಮುಖ್ಯಮಂತ್ರಿಯವರು ಕಳೆದ ಬಜೆಟ್ನಾಲ್ಲಿ, 75ಕ್ಕಿಂತ ಹೆಚ್ಚಿನ ವಯಸ್ಸಿನ ಹಿರಿಯ ನಾಗರಿಕರಿಗೆ ಏಕ ಸದಸ್ಯ ಪಡಿತರ ಚೀಟಿದಾರರಿಗೆ “ಅನ್ನ ಸುವಿಧ” ಯೋಜನೆಯಡಿ ಮನೆ ಬಾಗಿಲಿಗೆ ಪಡಿತರ ವಿತರಿಸುವಂತೆ ಘೋಷಿಸಿರುತ್ತಾರೆ. ಅದರನ್ವಯ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಚಿತ್ರದುರ್ಗ ಜಿಲ್ಲೆಯಲ್ಲಿ 6,295 ಏಕ ಸದಸ್ಯ (ಒಬ್ಬ ಹಿರಿಯ ನಾಗರಿಕ) ರನ್ನು ಗುರುತಿಸಿ “ಅನ್ನ ಸುವಿಧ” ಯೋಜನೆಯಡಿ ಅವರ ಮನೆಯ ಬಾಗಿಲಿಗೆ ಪಡಿತರ ಧಾನ್ಯ ತಲುಪಿಸುವ ಕಾರ್ಯ ಪ್ರಾರಂಭಿಸಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 75ಕ್ಕಿಂತ ಹೆಚ್ಚಿನ ವಯಸ್ಸಿನ ಏಕ ಸದಸ್ಯ ಹಿರಿಯ ನಾಗರಿಕರ ವಿವರ ಇಂತಿದೆ. ಚಳ್ಳಕೆರೆ ತಾಲ್ಲೂಕಿನಲ್ಲಿ 123 ನ್ಯಾಯಬೆಲೆ ಅಂಗಡಿಗಳು, 1,514 ಪಡಿತರ ಚೀಟಿಗಳು ಇವೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 151 ನ್ಯಾಯಬೆಲೆ ಅಂಗಡಿಗಳು, 1,106…
ನವದೆಹಲಿ : 2025 ರ ಕೊನೆಯ ತಿಂಗಳಲ್ಲಿ, ಹಲವಾರು ಪ್ರಮುಖ ಹಣಕಾಸು ಮತ್ತು ಆದಾಯ ತೆರಿಗೆಗೆ ಸಂಬಂಧಿಸಿದ ಗಡುವುಗಳು ಸಮೀಪಿಸುತ್ತಿವೆ. ಇವುಗಳನ್ನು ನಿರ್ಲಕ್ಷಿಸುವುದರಿಂದ ಮುಂಬರುವ ತಿಂಗಳುಗಳಲ್ಲಿ ಹೆಚ್ಚಿನ ತೊಂದರೆಗಳು ಉಂಟಾಗಬಹುದು. ಡಿಸೆಂಬರ್ 2025 ಕ್ಕೆ ಮೂರು ಪ್ರಮುಖ ಗಡುವುಗಳು ಮತ್ತು ಪ್ರಮುಖ ಬದಲಾವಣೆಗಳನ್ನು ತಿಳಿಯಿರಿ 1. ತೆರಿಗೆ ಲೆಕ್ಕಪರಿಶೋಧನೆಯೊಂದಿಗೆ ತೆರಿಗೆದಾರರಿಗೆ ಹೊಸ ಐಟಿಆರ್ ಸಲ್ಲಿಕೆ ದಿನಾಂಕ ನೇರ ತೆರಿಗೆಗಳ ಕೇಂದ್ರ ಮಂಡಳಿ (ಸಿಬಿಡಿಟಿ) ತೆರಿಗೆ ಲೆಕ್ಕಪರಿಶೋಧನೆ ಪ್ರಕರಣಗಳೊಂದಿಗೆ ತೆರಿಗೆದಾರರಿಗೆ ಐಟಿಆರ್ ಸಲ್ಲಿಕೆ ಗಡುವನ್ನು ಅಕ್ಟೋಬರ್ 31, 2025 ರಿಂದ ಡಿಸೆಂಬರ್ 10, 2025 ರವರೆಗೆ ವಿಸ್ತರಿಸಿದೆ. ಇದು ಆಡಿಟ್ ವರದಿಗಳು, ಹಣಕಾಸು ಹೇಳಿಕೆಗಳು ಮತ್ತು ಇತರ ದಾಖಲೆಗಳನ್ನು ಒಳಗೊಂಡಿರುವ ತೆರಿಗೆದಾರರಿಗೆ ಪರಿಹಾರವಾಗಿದೆ. 2. ಆಧಾರ್-ಪ್ಯಾನ್ ಲಿಂಕ್ ಮಾಡಲು ಕೊನೆಯ ದಿನಾಂಕ: ಡಿಸೆಂಬರ್ 31, 2025 ಅಕ್ಟೋಬರ್ 1, 2024 ರಂದು ಅಥವಾ ಅದಕ್ಕೂ ಮೊದಲು ಆಧಾರ್ ರಚಿಸಲಾದವರು, ಡಿಸೆಂಬರ್ 31, 2025 ರೊಳಗೆ ಅದನ್ನು ತಮ್ಮ ಪ್ಯಾನ್ ಕಾರ್ಡ್ಗೆ ಲಿಂಕ್ ಮಾಡಬೇಕು.…
ಬೆಂಗಳೂರು : ದೇಶದಲ್ಲಿಯೇ ಮೊದಲ ಬಾರಿಗೆ ರಾಜ್ಯದಲ್ಲಿ ಕ್ಯೂಆರ್ ಕೋಡ್ ಆಧಾರಿತ ನೋಂದಣಿ ಪ್ರಮಾಣಪತ್ರ (ಆರ್ಸಿ) ಮತ್ತು ಚಾಲನಾ ಅನುಜ್ಞಾಪತ್ರ (ಡಿಎಲ್) ಸ್ಮಾಟ್ ಕಾರ್ಡ್ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಅತ್ಯಾಧುನಿಕ ತಂತ್ರಜ್ಞಾನ ಬಳಸಿದ ಈ ಕಾರ್ಡ್ಗೆ 200 ರು. ದರ ನಿಗದಿಪಡಿಸಲಾಗಿದೆ. ಒನ್ ನೇಷನ್ ಒನ್ ಕಾರ್ಡ್ ಯೋಜನೆಯಡಿ ನೂತನ ಸ್ಮಾರ್ಟ್ ಕಾರ್ಡ್ ವಿತರಣೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದಾರೆ. ಆರ್.ಸಿ. ಮತ್ತು ಡಿಎಲ್ಗೆ ಅರ್ಜಿ ಸಲ್ಲಿಸಿದವರಿಗೆ ಹೊಸ ಸ್ಮಾರ್ಟ್ ಕಾರ್ಡ್ ಸಿಗಲಿದೆ. ಇದರಲ್ಲಿ ಕ್ಯೂಆರ್ ಕೋಡ್ ಅಳವಡಿಸಲಾಗಿದ್ದು, ಸ್ಕ್ಯಾನ್ ಮಾಡಿದಾಗ ವಾಹನ ಮತ್ತು ಚಾಲಕರ ಮಾಹಿತಿ ಸಿಗಲಿದೆ. ಒಂದು ಕಾರ್ಡ್ ಗೆ 200 ರೂಪಾಯಿ ಶುಲ್ಕ ನಿಗದಿಪಡಿಸಿದ್ದು, ಅದರಲ್ಲಿ 135 ರೂ. ಸರ್ಕಾರಕ್ಕೆ, 65 ರೂ. ಸೇವಾದಾರರಿಗೆ ಸಿಗಲಿದೆ ಎಂದು ತಿಳಿಸಿದ್ದಾರೆ. ಪ್ರತಿದಿನ 15000 ಕಾರ್ಡ್ ಗಳನ್ನು ಮುದ್ರಿಸಿ ವಿತರಿಸಲಾಗುವುದು. ಪಾಲಿ ಕಾರ್ಬೋನೇಟ್ ಮೆಟೀರಿಯಲ್ ನಿಂದ ಸ್ಮಾರ್ಟ್ ಕಾರ್ಡ್ ಗಳನ್ನು ತಯಾರಿಸಲಾಗುತ್ತಿದೆ. ಲೇಸನ್ ಎನ್ ಗ್ರೇವಿಂಗ್…
ಶಿವಮೊಗ್ಗ: ಸಿನಿಮಾ ಚಿತ್ರೀಕರಣ ವೇಳೆಯಲ್ಲೇ ಹೃದಯಾಘಾತದಿಂದ ಸ್ಯಾಂಡಲ್ ವುಡ್ ಸಿನಿಮಾ ನಿರ್ದೇಶಕ ಸಂಗೀತ್ ಸಾಗರ್ ನಿಧನರಾಗಿದ್ದಾರೆ. ಚಿತ್ರೀಕರಣದ ಸಂದರ್ಭ ಹೃದಯಾಘಾತವಾಗಿ ನಿರ್ದೇಶಕ ಸಂಗೀತ್ ಸಾಗರ್ ಅವರು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೊಪ್ಪ ತಾಲೂಕು ಹರಿಹರಪುರದಲ್ಲಿ ‘ಪಾತ್ರಧಾರಿʼ ಸಿನಿಮಾದ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ಸಂಗೀತ್ ಸಾಗರ್ ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಕೊಪ್ಪ ಆಸ್ಪತ್ರೆಗೆ ರವಾನಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ನಿರ್ದೇಶಕ ಸಂಗೀತ್ ಸಾಗರ್ ಅವರನ್ನು ಶಿವಮೊಗ್ಗಕ್ಕೆ ಕರೆತರಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಪಾತ್ರಧಾರಿ’ ಸಿನಿಮಾದ ನಿರ್ದೇಶಕ ಮತ್ತು ಸಂಗೀತ ನಿರ್ದೇಶಕರಾಗಿದ್ದರು. ಅವರು ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ದೊಡ್ಡನಾಗರ ಮೂಲದವರಾಗಿದ್ದಾರೆ. 20 ದಿನದಿಂದ ಹರಿಹರಪುರ ತೀರ್ಥಹಳ್ಳಿ ಸುತ್ತಮುತ್ತ ಚಿತ್ರೀಕರಣ ನಡೆಯುತ್ತಿತ್ತು.
ಬೆಂಗಳೂರು : ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ರಾಜ್ಯದಲ್ಲಿ ದ್ವೇಷ ಭಾಷಣ ಹಾಗೂ ದ್ವೇಷದ ಅಪರಾಧ ತಡೆಗೆ ಪ್ರತ್ಯೇಕ ಕಾಯಿದೆ ಜಾರಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಇಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ‘ದ್ವೇಷ ಅಪರಾಧಗಳು ಮತ್ತು ದ್ವೇಷ (ಹೋರಾಟ, ತಡೆಯುವಿಕೆ) ವಿಧೇಯಕ- 202’ಕ್ಕೆ ಅನು ಮೋದನೆ ಪಡೆಯುವ ಸಾಧ್ಯತೆಯಿದೆ. ಜೂನ್ನಲ್ಲಿನಡೆದ ಸಚಿವ ಸಂಪುಟ ಸಭೆಯಲ್ಲಿ ಪ್ರಾಥಮಿಕವಾಗಿ ಕರಡು ವಿಧೇಯಕ ಪ್ರಸ್ತಾಪಿಸಲಾಗಿದ್ದು, ಅಂತಿಮ ವಿಧೇಯಕವು ಇಂದು ಮಂಡನೆಯಾಗಲಿದೆ. ಬಳಿಕ ಬೆಳಗಾವಿ ಅಧಿವೇಶನದಲ್ಲಿ ಉಭಯ ಸದನಗಳಲ್ಲಿ ಮಂಡಿಸುವ ಸಾಧ್ಯತೆಯಿದೆ. ದ್ವೇಷ ಭಾಷಣದ ಮೂಲಕ ಧಾರ್ಮಿಕ, ಜನಾಂಗೀಯ, ಜಾತಿ ಅಥ ವಾ ಸಮುದಾಯ, ಲಿಂಗ, ಲೈಂಗಿಕ ದೃಷ್ಟಿಕೋನ, ಜನ್ಮಸ್ಥಳ, ಭಾಷೆ, ನಿವಾಸ, ಅಂಗವೈಕಲ್ಯ, ಬುಡ ಕಟ್ಟು ಕುರಿತು ಯಾವುದೇ ವ್ಯಕ್ತಿಗೆ ಹಾನಿ ಮಾಡುವ ಅಥವಾ ದ್ವೇಷವನ್ನು ಉತ್ತೇಜಿಸುವ ಅಥವಾ ಪ್ರಚಾರ ಮಾಡುವ ವ್ಯಕ್ತಿ ಅಥವಾ ಗುಂಪಿಗೆ ಮೂರು ವರ್ಷಗಳ ಕಾಲ ಶಿಕ್ಷೆ ವಿಧಿಸಬಹುದು ಅಥವಾ 5…
ಬೆಂಗಳೂರು : ಶಾಲಾ ಶಿಕ್ಷಣ ಇಲಾಖೆಯಲ್ಲಿ ಶಾಲಾ ವಿದ್ಯಾರ್ಥಿಗಳ Aadhar Mandatory Biometric Update (Aadhar MBU) ಹಾಗೂ ಜಿಲ್ಲಾ ಮಟ್ಟದ ಸಮಿತಿಯನ್ನು ರಚಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲೆ ಓದಲಾದ (1)ರಲ್ಲಿನ ದಿನಾಂಕ:16.07.2025ರ ಸಭಾ ನಡವಳಿಯಲ್ಲಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, AJSK ಮತ್ತು EDCS ಸಹಯೋಗದೊಂದಿಗೆ, ವಾರ್ಷಿಕವಾಗಿ ಸುಮಾರು 20 ಲಕ್ಷ MBU ಗಳನ್ನು ಪೂರ್ಣಗೊಳಿಸುವ ಉದ್ದೇಶದಿಂದ ಶಾಲೆಗಳಲ್ಲಿ ಶಿಬಿರಗಳನ್ನು ಆಯೋಜಿಸಲು ಪ್ರಸ್ತಾಪಿಸಲಾಗಿರುವುದಾಗಿ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯನ್ನು ಯುಐಡಿಎಐ ಅಡಿಯಲ್ಲಿ ರಾಜ್ಯ ರಿಜಿಸ್ಟ್ರಾರ್ ಆಗಿ ನೇಮಿಸಲು, 300-500 ಇಸಿಎಂಪಿ ಕಿಟ್ಗಳನ್ನು ಸಂಗ್ರಹಿಸಲು ಮತ್ತು ಶಾಲಾ ಅಧಿಕಾರಿಗಳಿಗೆ ತರಬೇತಿ ನೀಡಲು ಅಥವಾ ಪ್ರಮಾಣೀಕೃತ ನಿರ್ವಾಹಕರ ಮೂಲಕ ವಿದ್ಯಾರ್ಥಿಗಳ ಆಧಾರ್ MBU ಕಾರ್ಯವನ್ನು ನಡೆಸಲು ಒಂದು ವ್ಯವಸ್ಥೆಯನ್ನು ರೂಪಿಸಲು ಪ್ರಸ್ತಾಪಿಸಲಾಗಿದೆ. ಮೇಲೆ ಓದಲಾದ (2)ರಲ್ಲಿನ, ದಿನಾಂಕ:16.09.2025ರ ಸಭಾ ನಡವಳಿಯಲ್ಲಿ, ಸರ್ಕಾರಿ ಶಾಲಾ-ಕಾಲೇಜುಗಳನ್ನು ನೋಂದಣಿ ಅಥವಾ ದಾಖಲಾತಿ ಏಜೆನ್ಸಿಗಳನ್ನಾಗಿ ಮಾಡಲಾಗುವುದಿಲ್ಲ ಎಂದು ತೀರ್ಮಾನಿಸಿದೆ. ಮುಂದುವರೆದು,…














