Author: kannadanewsnow57

ಬೆಂಗಳೂರು : ಬಿಗ್ ಬಾಸ್ ಶೋ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಸ್ ಸೀಜ್ ಆಗಿರುವ ಹಿನ್ನೆಲೆಯಲ್ಲಿ ಈಗಲ್ಟನ್ ರೆಸಾರ್ಟ್ ಗೆ 17 ಸ್ಪರ್ಧಿಗಳನ್ನು ಸ್ಥಳಾಂತರ ಮಾಡಲಾಗಿದೆ. ಬಿಗ್‍ ಬಾಸ್ ಶೋ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಸ್ ಸೀಜ್ ಆಗಿರುವ ಹಿನ್ನೆಲೆಯಲ್ಲಿ ರಾಮನಗರ ತಾಲೂಕಿನ ಬಿಡದಿಯ ಈಗಲ್ಟನ್ ರೆಸಾರ್ಟ್ ಗೆ 17 ಸ್ಪರ್ಧಿಗಳನ್ನು ಸ್ಥಳಾಂತರ ಮಾಡಲಾಗಿದೆ. ರೆಸಾರ್ಟ್ ನಲ್ಲಿದ್ರೂ ಸ್ಪರ್ಧಿಗಳಿಗೆ ನೋ ಟಿವಿ, ನೋ ಕಾಂಟ್ಯಾಕ್ಟ್. ಬಿಗ್ ಬಾಸ್ ತಂಡದಿಂದಲೇ ಸ್ಪರ್ಧಿಗಳಿಗೆ ಭದ್ರತೆ ಮತ್ತು ಆತಿಥ್ಯ ವಹಿಸಲಾಗಿದೆ. ಮೊಬೈಲ್ ಬಳಸದಂತೆ ಬಿಗ್ ಬಾಸ್ ಸ್ಪರ್ಧಿಗಳಿಗೆ ಸೂಚನೆ ನೀಡಲಾಗಿದೆ. ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಶುರುವಾದ ಎರಡನೇ ವಾರಕ್ಕೆ ಸ್ ಬಿಗ್ ಬಾಸ್ ಹೌಸ್ ಬಂದ್ ಆಗಿದೆ. ಬಿಗ್ ಬಾಸ್ ಶೋ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋ ಸೀಜ್ ಮಾಡಲಾಗಿದೆ. ರಾಮನಗರದ ಬಿಡದಿ ಬಳಿಯ 35 ಎಕರೆ ಪ್ರದೇಶದಲ್ಲಿರುವ ಜಾಲಿವುಡ್ ಸ್ಟುಡಿಯೋದಲ್ಲಿ ಪ್ರತ್ಯೇಕ ಸೆಟ್ ಗಳನ್ನು ಹಾಕಿ ಕನ್ನಡ ಬಿಗ್ ಬಾಸ್ ಸೀಜನ್ -12ನ್ನು…

Read More

ಹಾಸನ: ಇತಿಹಾಸ ಪ್ರಸಿದ್ಧ ಹಾಸನಾಂಬ ಹಾಗೂ ಸಿದ್ದೇಶ್ವರ ದರ್ಶನೋತ್ಸವಕ್ಕೆ ಸಿದ್ಧತೆ ನಡೆದಿದ್ದು, ನಾಳೆ ದೇವಾಲಯದ ಬಾಗಿಲು ತೆರೆಯಲಿದೆ. ಸಾರ್ವಜನಿಕರಿಗೆ ಶುಕ್ರವಾರದಿಂದ (ಅ. 10) ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಶ್ರೀ ಹಾಸನಾಂಬ ದೇವಾಲಯವು ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಪ್ರಮುಖ ದೇವಾಲಯಗಳಲ್ಲಿ ಒಂದಾಗಿದೆ. ಸದರಿ ದೇವಾಲಯದಲ್ಲಿ ಪ್ರತೀ ವರ್ಷ ಶ್ರೀ ಹಾಸನಾಂಬ ದೇವಿಯ ಜಾತ್ರೋತ್ಸವ ಕಾರ್ಯಕ್ರಮವು ಅಭೂತಪೂರ್ವವಾಗಿ ಮತ್ತು ವಿಜೃಂಭಣೆಯಿಂದ ಆಚರಿಸಲ್ಪಡುತ್ತಿದೆ. ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲು ಡೇಟ್ ಫಿಕ್ಸ್ ಆಗಿದೆ. ಅಕ್ಟೋಬರ್ 9 ರಂದು ಬಾಗಿಲು ಓಪನ್ ಆಗಲಿದ್ದು, ಅಕ್ಟೋಬರ್ 23ರಂದು ಬಾಗಿಲು ಮುಚ್ಚಲಾಗುವುದು. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997 ಸೆಕ್ಷನ್ 58ರಡಿಯಲ್ಲಿ ದೇವಸ್ಥಾನದ ರೂಢಿ, ಸಂಪ್ರದಾಯ ಮತ್ತು ಆಚರಣೆಯಂತೆ ದೇವಾಲಯದ ಗರ್ಭಗುಡಿ, ಒಳಾಂಗಣ ಮತ್ತು ಹೊರಾಂಗಣದಲ್ಲಿ ಕೆಲಸ ನಿರ್ವಹಿಸುತ್ತಿರುವ ದೇವಾಲಯದ ನೌಕರರು ಮತ್ತು ನಿಯೋಜನೆ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗಳು ವಸ್ತ್ರ ಸಂಹಿತೆಯನ್ನು ಪಾಲಿಸುವುದು ಸೂಕ್ತವಾಗಿದ್ದು,…

Read More

ಜೈಪುರ : ಮಂಗಳವಾರ ತಡರಾತ್ರಿ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ದುಡುವಿನ ಸನ್ವರ್ದ ಪ್ರದೇಶದ ಬಳಿ ಸಂಭವಿಸಿದ ಡಿಕ್ಕಿಯ ನಂತರ ಎಲ್ಪಿಜಿ ಸಿಲಿಂಡರ್ಗಳನ್ನು ತುಂಬಿದ್ದ ಟ್ರಕ್ ಸ್ಫೋಟಗೊಂಡ ನಂತರ ಭಾರಿ ಬೆಂಕಿ ಕಾಣಿಸಿಕೊಂಡಿತು. ಬೆಂಕಿಯಲ್ಲಿ ಏಳು ವಾಹನಗಳು ಸಂಪೂರ್ಣವಾಗಿ ನಾಶವಾದವು. ಮೌಜ್ಮಾಬಾದ್ ಪ್ರದೇಶದಲ್ಲಿ ಅಪಘಾತ ಸಂಭವಿಸಿದ್ದು, ದಟ್ಟವಾದ ಕಪ್ಪು ಹೊಗೆ ಆಕಾಶಕ್ಕೆ ಏರಿತು. ಸ್ಫೋಟಗಳ ಶಬ್ದ ಎಷ್ಟು ಪ್ರಬಲವಾಗಿತ್ತೆಂದರೆ ಅವು ಕಿಲೋಮೀಟರ್ ದೂರದಿಂದಲೂ ಕೇಳಿಬಂದವು ಮತ್ತು ಪರಿಣಾಮವಾಗಿ ಜ್ವಾಲೆಗಳು ಸ್ಥಳದಿಂದ 10 ಕಿಲೋಮೀಟರ್ಗಳವರೆಗೆ ಗೋಚರಿಸುತ್ತಿದ್ದವು. ಪೊಲೀಸರ ಪ್ರಕಾರ, ನಿಂತಿದ್ದ ಎಲ್ಪಿಜಿ ತುಂಬಿದ ಟ್ರಕ್ಗೆ ಹಿಂದಿನಿಂದ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಚಾಲಕ ಊಟಕ್ಕೆಂದು ಹೋಗಿದ್ದಾಗ ರಸ್ತೆಬದಿಯ ಹೋಟೆಲ್ನ ಹೊರಗೆ ನಿಲ್ಲಿಸಿದ್ದ ಅಕ್ರಮ ಸ್ಥಳದಲ್ಲಿ ತಿರುವು ಪಡೆಯಲು ಯತ್ನಿಸುತ್ತಿದ್ದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಸ್ಫೋಟಗೊಂಡಿದೆ. ಡಿಕ್ಕಿಯ ಬಲವು ತಕ್ಷಣವೇ ಬೆಂಕಿಯ ಉಂಡೆಯಂತೆ ಉರಿಯಿತು, ನಂತರ ಗ್ಯಾಸ್ ಸಿಲಿಂಡರ್ಗಳು ಒಂದರ ನಂತರ ಒಂದರಂತೆ ಹೊತ್ತಿಕೊಂಡು ಭಯಾನಕ ಸರಣಿ ಸ್ಫೋಟಗಳು ಸಂಭವಿಸಿದವು. https://twitter.com/PTI_News/status/1975631089801838673?ref_src=twsrc%5Etfw%7Ctwcamp%5Etweetembed%7Ctwterm%5E1975631089801838673%7Ctwgr%5E39619e2a134d551396c5e05bd59fca89b0795af7%7Ctwcon%5Es1_c10&ref_url=https%3A%2F%2Fwww.newindianexpress.com%2Fnation%2F2025%2FOct%2F08%2Ftruck-carrying-lpg-cylinders-catches-fire-after-collision-on-jaipur-ajmer-highway

Read More

ಬೆಂಗಳೂರು : ಕಾಫ್ ಸಿರಫ್ʼ ಬಳಕೆ ಬಗ್ಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟಿಸಲಾಗಿದೆ. ಮಕ್ಕಳ ಸುರಕ್ಷತೆಯನ್ನು ಕಾಪಾಡಲು ಪೋಷಕರು ಹಾಗೂ ಆರೈಕೆದಾರರು, ಸಾರ್ವಜನಿಕರು ಸರ್ಕಾರದ ಮಾರ್ಗಸೂಚಿಯನ್ನು ಪಾಲನೆ ಮಾಡಬೇಕು. ಈ ನಿಯಮಗಳ ಪಾಲನೆ ಕಡ್ಡಾಯ 1) 02 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೆಮ್ಮಿನ ಅಥವಾ ಶೀತದ ಸಿರಪ್ ನೀಡಬಾರದು. 2) 2 ರಿಂದ 5 ವರ್ಷಗಳ ವಯಸ್ಸಿನ ಮಕ್ಕಳಿಗೆ ಸರಿಯಾದ ವೈದ್ಯಕೀಯ ಪರೀಕ್ಷೆಯ ನಂತರ ತಜ್ಞ ವೈದ್ಯರ ನಿರ್ದಿಷ್ಟ ಸಲಹೆ ಮೇರೆಗೆ ಮಾತ್ರ ಈ ಔಷಧಗಳನ್ನು ನೀಡಬೇಕು. 3) 5 ವರ್ಷ ದಾಟಿದ ಮಕ್ಕಳಿಗೆ ವೈದ್ಯರ ಸಲಹೆಯಂತೆ ಸಿರಪ್ ಬಳಸಬೇಕು. 4) ಸಾಧ್ಯವಾದಷ್ಟೂ ಕಡಿಮೆ ಅವಧಿಗೆ ಕನಿಷ್ಠ ಡೋಸ್ಗಳನ್ನು ಬಳಸಬೇಕು. 5) ಬಹು ಔಷಧಗಳ ಸಂಯೋಜನೆ ಇರುವ ಸಿರಪ್ಗಳನ್ನು ಬಳಸಬಾರದು. 6) ಮಕ್ಕಳಿಗೆ ಸ್ವಯಂ ಔಷಧೋಪಚಾರ ಮಾಡಬಾರದು. 7) ವೈದ್ಯರ ಸೂಚನೆ ಇಲ್ಲದೇ ಕೆಮ್ಮಿನ ಔಷಧಿ ಖರೀದಿಸಬಾರದು, ಬಳಸಬಾರದು. 8) ಈ ಹಿಂದೆ ಬಳಸಿ ಉಳಿದ ಔಷಧಿಯನ್ನು ಮತ್ತೆ ಬಳಸಬಾರದು.…

Read More

ತುಮಕೂರು : ಕುಣಿಗಲ್ ನಲ್ಲಿರುವ ಮಾರ್ಕೋನಹಳ್ಳಿ ಜಲಾಶಯದ ಕೋಡಿ ದಂಡೆಯಲ್ಲಿ ನೀರಿನಲ್ಲಿ ಆಟವಾಗುತ್ತಿದ್ದ ಒಂದೇ ಕುಟುಂಬದ 6 ಮಂದಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಕುಣಿಗಲ್ ತಾಲೂಕಿನ ಮಾಗಡಿಪಾಳ್ಯದ ಸಾದಿಯಾ(28), ಅರ್ಬೀನ್ (20) ಮೃತದೇಹ ಪತ್ತೆಯಾಗಿದ್ದು, ಗಾಯಾಳು ನವಾಜ್ (32)ನನ್ನು ಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನೀರಿನಲ್ಲಿ ಕೊಚ್ಚಿ ಹೋಗಿರುವ ತಬಸಮ್ (46), ಶಬಾನ(44), ಮಹಿಬ್(1), ನಿಪ್ರಾ(4) ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಇವರೆಲ್ಲ ತುಮಕೂರಿನ ಬಿಜಿ ಪಾಳ್ಯದವರು ಎನ್ನಲಾಗಿದೆ. ದಸರೆ ರಜೆ ಹಿನ್ನೆಲೆ ತುಮಕೂರು ಬಿ.ಜಿ.ಪಾಳ್ಯದ ತಬಸಮ್ ಕುಟುಂಬ ಸದಸ್ಯರೊಂದಿಗೆ ಕುಣಿಗಲ್ ತಾಲೂಕಿನ ಮಾಗಡಿಪಾಳ್ಯದ ಮಗಳು ಸಾಜಿಯಾ ಮನೆಗೆ ಬಂದಿದ್ದರು. ಬಳಿಕ ಅವರ ಮನೆಯಿಂದ ಮಾರ್ಕೊನಹಳ್ಳಿ ಡ್ಯಾಂಗೆ ತೆರಳಿದ್ದರು . ವಿಷಯ ತಿಳಿದ ತಕ್ಷಣ ಅಮೃತೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದರು. ನಂತರ ಅಗ್ನಿಶಾಮಕ ದಳದ ಸಿಬ್ಬಂದಿ ನೀರಿನಲ್ಲಿ ಕೊಚ್ಚಿ ಹೋದವರ ಪತ್ತೆಗೆ ಶೋಧ ಕಾರ್ಯ ನಡೆಸಿದರು. ಇಬ್ಬರ ಶವ ಸಿಕ್ಕಿದ್ದು ಇನ್ನೂ ನಾಲ್ಕು ಮಂದಿಗಾಗಿ ಶೋಧ ಕಾರ್ಯಾಚರಣೆ ನಡೆದಿದೆ.

Read More

ಸಾಮಾಜಿಕ ಮಾಧ್ಯಮದಲ್ಲಿ ಪ್ರತಿದಿನ ಹಲವು ವಿಡಿಯೋ ವೈರಲ್ ಆಗುತ್ತಿವೆ ಮತ್ತು ಜನರನ್ನು ಅಚ್ಚರಿಗೊಳಿಸುತ್ತಿವೆ. ಕೆಲವೊಮ್ಮೆ ಕೆಲವರು ಪಾತ್ರೆಗಳನ್ನು ಸ್ವಚ್ಛಗೊಳಿಸಲು ಅಡಿಗೆ ಸೋಡಾವನ್ನು ಬಳಸುತ್ತಾರೆ. ಕೆಲವರು ಮನೆಯನ್ನು ಸ್ವಚ್ಛಗೊಳಿಸಲು ನಿಂಬೆ ಬಳಸುತ್ತಾರೆ. ಆದರೆ ಈ ಬಾರಿ, ಒಂದು ವೀಡಿಯೊ ಆನ್ಲೈನ್ನಲ್ಲಿ ವೈರಲ್ ಆಗುತ್ತಿದೆ. ಇದು ಜನರನ್ನು ಆಶ್ಚರ್ಯಗೊಳಿಸುತ್ತದೆ. ಹೌದು, ಈ ವೀಡಿಯೊದಲ್ಲಿ, ಒಬ್ಬ ಮಹಿಳೆ ಪ್ಯಾರಸಿಟಮಾಲ್ ಮಾತ್ರೆಗಳನ್ನು ಡಿಟರ್ಜೆಂಟ್ ಆಗಿ ಬಳಸುತ್ತಾಳೆ. ಅವಳು ಪ್ಯಾರಸಿಟಮಾಲ್ ಮಾತ್ರೆಗಳಿಂದ ಬಟ್ಟೆಗಳನ್ನು ತೊಳೆಯುತ್ತಾಳೆ. ಅತ್ಯಂತ ಆಶ್ಚರ್ಯಕರ ವಿಷಯವೆಂದರೆ ಈ ತಂತ್ರವು ವಾಸ್ತವವಾಗಿ ಬಟ್ಟೆಗಳನ್ನು ಹೊಳೆಯುವಂತೆ ಮಾಡುತ್ತದೆ. ವೀಡಿಯೊವನ್ನು ನೋಡುವ ಜನರು ಇದನ್ನು ಮ್ಯಾಜಿಕ್ ಎಂದು ಕರೆಯುತ್ತಿದ್ದಾರೆ. ಕೆಲವರು ಇದು ವೈದ್ಯಕೀಯ ಔಷಧಿಗಳ ದುರುಪಯೋಗ ಎಂದು ಹೇಳುತ್ತಿದ್ದಾರೆ. ವೈರಲ್ ವೀಡಿಯೊದಲ್ಲಿ, ಮೊದಲು ಒಬ್ಬ ಮಹಿಳೆ ತನ್ನ ತೊಳೆಯುವ ಯಂತ್ರದ ಬಳಿ ನಿಂತಿದ್ದಾಳೆ. ಅವಳು ಪ್ಯಾರಸಿಟಮಾಲ್ ಮಾತ್ರೆಗಳನ್ನು ಇರಿಸಿ ಯಂತ್ರವನ್ನು ಆನ್ ಮಾಡುತ್ತಾಳೆ. ಸ್ವಲ್ಪ ಸಮಯದ ನಂತರ ಬಟ್ಟೆಗಳನ್ನು ಹೊರತೆಗೆದಾಗ, ಅವು ಹೊಳೆಯುವ ಮತ್ತು ಯಾವುದೇ ಕಲೆಗಳಿಲ್ಲದೆ ಕಾಣುತ್ತವೆ. ವೀಡಿಯೊದ…

Read More

ನವದೆಹಲಿ : ಒಂದೆರೆಡು ಲಕ್ಷ ಅಥ್ವಾ ಕೋಟಿಯಲ್ಲ, ಅದು ಲಕ್ಷ ಕೋಟಿ. ಇದು ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳಲ್ಲಿ ಕೊಳೆಯುತ್ತ ಬಿದ್ದ ಹಣದ ಮೊತ್ತ. ಹೌದು, ಅಕ್ಷರಶಃ 1.84 ಲಕ್ಷ ಕೋಟಿ ನಮ್ಮದೇ, ನಮ್ಮ ಭಾರತೀಯರ ಹಣ. ಕೇಂದ್ರ ಸರ್ಕಾರವು ಸಹ ಇದು ನಿಮ್ಮ ಹಣ, ನಿಮ್ಮ ಹಕ್ಕು ಎಂದು ಹೇಳುತ್ತದೆ. ಅದ್ರಂತೆ, ಈ ಹಣಕ್ಕೆ ದಾಖಲೆ ಮುಖ್ಯವಾಗಿದ್ದು, ಹಣವು ಅವರದು ಎಂದು ದೃಢೀಕರಿಸುವ ದಾಖಲೆ ಇದ್ದರೆ, ಅದು ನಿಮಗೆ ಎಷ್ಟು ಅರ್ಹತೆ ಇದೆ ಎಂಬುದನ್ನ ಲೆಕ್ಕ ಹಾಕುತ್ತದೆ ಮತ್ತು ಬಡ್ಡಿಯೊಂದಿಗೆ ನಿಮಗೆ ಪಾವತಿಸುತ್ತದೆ. ಹಣಕಾಸು ಸಂಸ್ಥೆಗಳಲ್ಲಿ ಇಷ್ಟು ಲಕ್ಷ ಕೋಟಿ ಹಣ ಇರುವುದಕ್ಕೆ ಕಾರಣ ಖಾತೆದಾರರು ಅವುಗಳನ್ನ ಕ್ಲೈಮ್ ಮಾಡದೇ ಇರುವುದು. ಇದಕ್ಕೆ ಹಲವು ಕಾರಣಗಳಿವೆ. ಖಾತೆದಾರರು ಸತ್ತಿದ್ದಾರೆ, ಉತ್ತರಾಧಿಕಾರಿಗಳಿಗೆ ಸರಿಯಾದ ಮಾಹಿತಿ ಇಲ್ಲ, ವಿಳಾಸಗಳು ಬದಲಾಗಿವೆ, ದಾಖಲೆಗಳು ಸಿಗುತ್ತಿಲ್ಲ. ಇದರಿಂದಾಗಿ, ಅನೇಕ ಜನರು ತಮ್ಮ ಅಜ್ಜ ಮತ್ತು ಅಜ್ಜಿಯರು ತಿಳಿಯದೆ ಉಳಿಸಿದ ಹಣವನ್ನು ಸ್ವಾಭಾವಿಕವಾಗಿ ಕೈಬಿಡುತ್ತಿದ್ದಾರೆ. ಈ ಕಾರಣಗಳಿಗಾಗಿ,…

Read More

ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ದಿ:01-07-2025ರಿಂದ ಅನ್ವಯವಾಗುವಂತೆ ಬಾಕಿ ಇರುವ ತುಟ್ಟಿಭತ್ಯೆಯನ್ನು ನಗದು ರೂಪದಲ್ಲಿ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ ಮಾಡಿದೆ. ಸೂಚಿತ ವಿಷಯದನ್ವಯ ಅಖಿಲ ಭಾರತ ಬೆಲೆ ಸೂಚ್ಯಾಂಕವನ್ನಾಧರಿಸಿ ಕೇಂದ್ರ ಸರ್ಕಾರವು ತನ್ನ ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡಿದ ದಿನಾಂಕದಿಂದಲೇ ಕರ್ನಾಟಕ ರಾಜ್ಯ ಸರ್ಕಾರವು ಸಹ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡುವುದು ಸಂಪ್ರದಾಯವಾಗಿರುತ್ತದೆ. ಪ್ರಸ್ತುತ ಕೇಂದ್ರ ಸರ್ಕಾರವು ಅಖಿಲ ಭಾರತ ಬೆಲೆ ಸೂಚ್ಯಾಂಕವನ್ನಾಧರಿಸಿ ಉಲ್ಲೇಖಿತ ಆದೇಶದಲ್ಲಿ ದಿನಾಂಕ: 01-07-2025ರಿಂದ ಅನ್ವಯವಾಗುವಂತೆ ಕೇಂದ್ರ ಸರ್ಕಾರಿ ನೌಕರರಿಗೆ ಶೇ. 3%ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿ ಆದೇಶಿಸಿದೆ.(ಪ್ರತಿ ಲಗತ್ತಿಸಿದೆ) ಆದ್ದರಿಂದ, ಕರ್ನಾಟಕ ರಾಜ್ಯದ ಸರ್ಕಾರಿ ನೌಕರರಿಗೂ ದಿನಾಂಕ: 01-07-2025 ರಿಂದ ಅನ್ವಯವಾಗುವಂತೆ ಶೇ. 3%ರಷ್ಟು ತುಟ್ಟಿಭತ್ಯೆಯನ್ನು ಸಂಪೂರ್ಣ ನಗದು ರೂಪದಲ್ಲಿ ನೀಡಿ ಆದೇಶ ಹೊರಡಿಸಲು ಕೋರಿದೆ.

Read More

ಹಾವೇರಿ : ಸೀರೆಯಲ್ಲಿ ಜೋಕಾಲಿ ಆಡುಲು ಹೋದ ಬಾಲಕನೊಬ್ಬ ದುರಂತ ಅಂತ್ಯ ಕಂಡ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನಲ್ಲಿ ನಡೆದಿದೆ. ರಾಣೆಬೆನ್ನೂರು ತಾಲ್ಲೂಕಿನ ಕೂನಬೇವು ಗ್ರಾಮದ ಮನೆಯೊಂದರಲ್ಲಿ ಜೋಕಾಲಿಯಲ್ಲಿ ಆಟವಾಡುತ್ತಿದ್ದ ರಾಹುಲ್ ಮಲ್ಲಿಕಾರ್ಜುನ ಬಾವಿಹಳ್ಳಿ (16) ಎಂಬ ಬಾಲಕ ಉಸಿರುಗಟ್ಟಿ ಮೃತಪಟ್ಟಿದ್ದಾನೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ತೆಲಗಿ ಗ್ರಾಮದ ರಾಹುಲ್, ಕೂನಬೇವು ಗ್ರಾಮದಲ್ಲಿರುವ ಅಜ್ಜ ರಾಮಣ್ಣ ತಂಡೂರ ಅವರ ಮನೆಗೆ ಬಂದಿದ್ದ, ಅಜ್ಜ ರಾಮಣ್ಣ ಅವರ ಮನೆಯ ಮೇಲಿನ ಮಹಡಿಯಲ್ಲಿ ಸೀರೆಯಿಂದ ಜೋಕಾಲಿ ಕಟ್ಟಲಾಗಿತ್ತು. ಅದರಲ್ಲಿ ಕುಳಿತು ರಾಹುಲ್ ಆಟವಾಡುತ್ತಿದ್ದ ವೇಳೆ ಜೋಕಾಲಿಯ ಸೀರೆ, ರಾಹುಲ್ನ ಕುತ್ತಿಗೆಗೆ ಸುತ್ತಿಕೊಂಡಿತ್ತು. ಅದರಿಂದ ಬಿಡಿಸಿಕೊಳ್ಳಲು ಸಾಧ್ಯವಾಗದೇ ಬಾಲಕನಿಗೆ ಉಸಿರುಗಟ್ಟಿತ್ತು. ಪ್ರಜ್ಞೆ ತಪ್ಪಿದ್ದ ಆತನನ್ನು ಪೋಷಕರು ರಾಣೆಬೆನ್ನೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು. ರಾಣೆಬೆನ್ನೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Read More

ಮಂಗಳೂರು : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ರಾಜ್ಯದಲ್ಲಿ ಶೀಘ್ರವೇ 18,800 ಹೊಸ ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಸರ್ಕಾರಿ ಶಾಲೆಗಳಿಗೆ 13 ಸಾವಿರ ಶಿಕ್ಷಕರು ಹಾಗೂ ಅನುದಾನಿತ ಶಾಲೆಗಳಿಗೆ ಸುಮಾರು 5,800 ಶಿಕ್ಷಕರು ಸೇರಿದಂತೆ ಒಟ್ಟು 18,800ಕ್ಕೂ ಅಧಿಕ ಶಿಕ್ಷಕರ ನೇಮಕ ಪ್ರಕ್ರಿಯೆ ಸಿದ್ದತೆ ನಡೆಯುತ್ತಿದ್ದು, ಶೀಘ್ರವೇ ನೋಟಿಫಿಕೇಶನ್ ಹೊರಡಿಸಲಾಗುವುದು ಎಂದು ಹೇಳಿದ್ದಾರೆ. ಜಸ್ಟಿಸ್ ನಾಗಮೋಹನ್ ದಾಸ್ ವರದಿ ಹಿನ್ನೆಲೆಯಲ್ಲಿ ನೇಮಕ ಪ್ರಕ್ರಿಯೆಯಲ್ಲಿ ವಿಳಂಬವಾಗಿತ್ತು, ಹೀಗಾಗಿ ಶೀಘ್ರವೇ ರಾಜ್ಯದಲ್ಲಿ 18,800 ಶಿಕ್ಷಕರ ನೇಮಕ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Read More