Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸಿಲಿಂಗ್ ಮೂಲಕ ಕೈಗೊಂಡಿದ್ದು, ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಇಲಾಖಾ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ವಿಶೇಷ ಪ್ರಕರಣಗಳ ವರ್ಗಾವಣೆ ಕೌನ್ಸಿಲಿಂಗ್ ಗೆ ಚಾಲನೆ ನೀಡಿ, ಡಿಜಿಟಲ್ ಸಹಿ ಇರುವ ವರ್ಗಾವಣೆ ಆದೇಶ ಪತ್ರವನ್ನು ನೀಡಿದರು. ಮೊದಲನೇ ದಿನವಾದ ಇಂದು ವಿಶೇಷ ಪ್ರಕರಣಗಳ 109 ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ವರ್ಗಾವಣೆ ಆದೇಶ ಪತ್ರಗಳನ್ನು ನೀಡುವುದರೊಂದಿಗೆ ವರ್ಗಾವಣೆ ಕೌನ್ಸಿಲಿಂಗ್ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ಸರ್ಕಾರದ ಕಾರ್ಯದರ್ಶಿ(ಪಂ.ರಾಜ್) ಗಳಾದ ಶ್ರೀ ರಂದೀಪ್ ಡಿ., ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದ ಆಯುಕ್ತರಾದ ಡಾII ಅರುಂಧತಿ ಚಂದ್ರಶೇಖರ್, ಶ್ರೀಮತಿ ವಾಣಿ ಬಿ., ಉಪ ಕಾರ್ಯದರ್ಶಿ (ಆಡಳಿತ), ಶ್ರೀ ಅಮರೇಶ್ ಆರ್. ನಿರ್ದೇಶಕರು -1, ಡಾ.ಎನ್. ನೋಮೇಶ್ ಕುಮಾರ್ ನಿರ್ದೇಶಕರು (ಪಂ.ರಾಜ್) ಹಾಗೂ ಆಯುಕ್ತಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು…
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಕುರಿತಂತೆ ಬೆಂಗಳೂರಿನ 64ನೇ ಸಿಸಿಹೆಚ್ ಕೋರ್ಟ್ ನಲ್ಲಿ ವಿಚಾರಣೆ ನಡೆದಿದ್ದು, ಈ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಕೋರ್ಟ್ ಗೆ ನುಗ್ಗಿದ ಘಟನೆ ನಡೆದಿದೆ. ಇಂದು ನಟ ದರ್ಶನ್ ಸೇರಿ ಐವರು ಆರೋಪಿಗಳ ಸ್ಥಳಾಂತರ ಸಂಬಂಧ ಬೆಂಗಳೂರಿನ 64ನೇ ಸಿಸಿಹೆಚ್ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಸಲಾಗಿದ್ದು, ಈ ವೇಳೆ ಕೋರ್ಟ್ ಗೆ ಪತ್ರ ಹಿಡಿದು ಅಪರಿಚಿತ ವ್ಯಕ್ತಿಯೊಬ್ಬ ನುಗ್ಗಿದ್ದಾನೆ. ರೇಣುಕಾಸ್ವಾಮಿ ಕೊಲೆ ಕೇಸ್ ನ 17 ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಆರೋಪಿಗಳಿಗೆ ಜಾಮೀನು ನೀಡಬಾರದು ಎಂದು ಅಪರಿಚಿತ ವ್ಯಕ್ತಿ ಹೇಳಿದ್ದಾನೆ. ಈ ವೇಳೆ ಜಡ್ಜ್ ನೀವು ಯಾರು ಎಂದು ಅಪರಿಚಿತ ವ್ಯಕ್ತಿಯನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಉತ್ತರಿಸಿದ ಅಪರಿಚಿತ ವ್ಯಕ್ತಿ ನಾನು ರವಿ ಬೆಳೆಗೆರೆ ಕಡೆಯವನು ಎಂದು ಹೇಳಿದ್ದಾನೆ. ಏನೇ ಇದ್ರೂ ಸರ್ಕಾರದ ಮುಖಾಂತರ ಬರುವಂತೆ…
ನವದೆಹಲಿ : ಆಧುನಿಕ ಜಗತ್ತಿನಲ್ಲಿ ಮೈಕ್ರೋ ಪ್ಲಾಸ್ಟಿಕ್ಗಳ ಅಪಾಯ ಹೆಚ್ಚುತ್ತಿದೆ. ಮೈಕ್ರೋಪ್ಲಾಸ್ಟಿಕ್ಗಳು ನಮಗೇ ಗೊತ್ತಿಲ್ಲದಂತೆ ನಮ್ಮ ಆಹಾರಕ್ಕೆ ಸೇರುತ್ತಿವೆ. JAMA ನೆಟ್ವರ್ಕ್ ಓಪನ್ ಜರ್ನಲ್ನಲ್ಲಿ ಪ್ರಕಟವಾದ ಅಧ್ಯಯನವು ಸತ್ತ ವ್ಯಕ್ತಿಯ ಮೂಗಿನ ಅಂಗಾಂಶದಲ್ಲಿ ಪ್ಲಾಸ್ಟಿಕ್ನ ಸಣ್ಣ ತುಂಡುಗಳನ್ನು ಕಂಡುಹಿಡಿದಿದೆ. ಸೂಕ್ಷ್ಮ ಪ್ಲಾಸ್ಟಿಕ್ ತುಣುಕುಗಳು ಮೂಗಿನೊಳಗೆ ಪ್ರವೇಶಿಸಿದರೆ, ಅವು ಆಹಾರದ ಮೂಲಕ ಸೇವಿಸಲ್ಪಡುತ್ತವೆ ಎಂದು ಅಂದಾಜಿಸಲಾಗಿದೆ. ಮೂಗಿನಲ್ಲಿ ಮಾತ್ರವಲ್ಲ, ಹಿಂದಿನ ಅಧ್ಯಯನಗಳಲ್ಲಿ, ಈ ನ್ಯಾನೊ ಪ್ಲಾಸ್ಟಿಕ್ಗಳು ಶ್ವಾಸಕೋಶಗಳು, ಯಕೃತ್ತು, ಶಿಶ್ನ, ಮಾನವನ ರಕ್ತ, ಮೂತ್ರ ಮತ್ತು ಎದೆ ಹಾಲಿನಲ್ಲಿಯೂ ಕಂಡುಬಂದಿವೆ. ಮೈಕ್ರೋಪ್ಲಾಸ್ಟಿಕ್ಗಳು ಆಹಾರದ ಮೂಲಕ ನಮ್ಮ ದೇಹವನ್ನು ಪ್ರವೇಶಿಸುತ್ತವೆ. ಪ್ಲಾಸ್ಟಿಕ್ ಅಧಿಕವಾಗಿರುವ ಐದು ಆಹಾರಗಳ ಪಟ್ಟಿ ಇಲ್ಲಿದೆ. ಚಹಾ ಚೀಲಗಳು ಟೀ ಬ್ಯಾಗ್ ಗಳು ಆಧುನಿಕ ಕಾಲದಲ್ಲಿ ಹುಟ್ಟಿಕೊಂಡಿರುವ ಹೊಸ ಟ್ರೆಂಡ್. ಟೀ ಬ್ಯಾಗ್ಗಳು ಮೈಕ್ರೋಪ್ಲಾಸ್ಟಿಕ್ ಅನ್ನು ಮಾನವ ದೇಹಕ್ಕೆ ಹತ್ತಿರ ತರುತ್ತವೆ. ಚಹಾ ಚೀಲಗಳನ್ನು ನೀರಿನಲ್ಲಿ ಮುಳುಗಿಸಿದಾಗ ಅವು ಹೆಚ್ಚಿನ ತಾಪಮಾನದಲ್ಲಿ ಹಾನಿಕಾರಕ ವಸ್ತುಗಳನ್ನು ಬಿಡುಗಡೆ ಮಾಡುತ್ತವೆ. ಅವು ಶತಕೋಟಿ ಸಣ್ಣ…
ಬೆಂಗಳೂರು : ಸ್ಪ್ರೀ- 2025 (ಉದ್ಯೋಗದಾತರು ಮತ್ತು ಉದ್ಯೋಗಿಗಳನ್ನು ನೋಂದಾವಣೆ ಉತ್ತೇಜಿಸುವ ಯೋಜನೆ 2025) ಎಂಬ ಯೋಜನೆಯನ್ನು ಕಾರ್ಮಿಕರ ವಿಮಾ ನಿಗಮವು ಜಾರಿಗೆ ತಂದಿದ್ದು, ಈ ಯೋಜನೆಯು 2025ನೇ ಜುಲೈ 01 ರಿಂದ ಡಿಸೆಂಬರ್ 31 ವರೆಗೆ ಜಾರಿಯಲ್ಲಿರುತ್ತದೆ. ಕಾರ್ಮಿಕ ಇಲಾಖೆಯು ಈ ಯೋಜನೆಯಡಿ ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ನೋಂದಾವಣಿ ಮಾಡಲು ಒಂದು ಬಾರಿಯ ಅವಕಾಶವನ್ನು ನೀಡಿದೆ. ಈ ಅವಧಿಯಲ್ಲಿ ಉದ್ಯೋಗದಾತರು ನೋಂದಾವಣೆಯಾದಲ್ಲಿ ಹಿಂದಿನ ಅವಧಿಗೆ ಯಾವುದೇ ದಂಡ ಅಥವಾ ಬಾಕಿ ಪಾವತಿಯ ಅವಶ್ಯಕತೆ ಇರುವುದಿಲ್ಲ ಮತ್ತು ಯಾವುದೇ ತಪಾಸಣೆ ಇರುವುದಿಲ್ಲ. ಉದ್ಯೋಗದಾತರು ತಮ್ಮಲ್ಲಿ ಕಾರ್ಯನಿರ್ವಹಿಸುವ ಗುತ್ತಿಗೆ ಉದ್ಯೋಗಿಗಳನ್ನು ಒಳಗೊಂಡಂತೆ ಎಲ್ಲಾ ಉದ್ಯೋಗಿಗಳನ್ನು ಈ ಯೋಜನೆಯಡಿಯಲ್ಲಿ ನೋಂದಾಯಿಸಿದಲ್ಲಿ ನೋಂದಾವಣೆ ದಿನದಿಂದಲೇ ಕಾರ್ಮಿಕರ ವಿಮಾ ಕಾಯ್ದೆಯಡಿ ದೊರೆಯುವ ವಿವಿಧ ಸೌಲಭ್ಯಗಳನ್ನು ಪಡೆಯಲು ಅರ್ಹರಾಗುತ್ತಾರೆ. ಈ ಯೋಜನೆಯ ಅನುಷ್ಠಾನದಂತೆ ಮತ್ತು ಮುಖ್ಯ ಕಛೇರಿಯ ಸೂಚನೆಯಂತೆ ಉಪಪ್ರಾದೇಶಿಕ ಕಛೇರಿ, ಬೊಮ್ಮಸಂದ್ರ ಕಛೇರಿಯು ಫಲಾನುಭವಿಗಳ ಸಹಕಾರದಲ್ಲಿ ಮತ್ತು ರಾಜ್ಯ ಸರ್ಕಾರದ ವಿವಿಧ ಕಛೇರಿಗಳ ಸಹಯೋಗದೊಡನೆ ಹಲವಾರು ಅರಿವು…
ಮೀನುಗಾರಿಕ ಇಲಾಖೆಯಿಂದ 2024-25ನೇ ಸಾಲಿನ ಮತ್ಸ್ಯಾಶ್ರಯ ಯೋಜನೆಯಡಿ ನಿರ್ವಸತಿ ಮೀನುಗಾರರಿಗೆ ಮನೆ ನಿರ್ಮಾಣಕ್ಕೆ ನೀಡಲಾಗುವ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಮತ್ಸ್ಯಾಶ್ರಯ ಯೋಜನೆಯಡಿ ಕನಕಗಿರಿ ವಿಧಾನ ಸಭಾ ಕ್ಷೇತ್ರಕ್ಕೆ ಸಾಮಾನ್ಯ ವರ್ಗ-38, ಪರಿಶಿಷ್ಟ ಜಾತಿ-9, ಪರಿಶಿಷ್ಟ ಪಂಗಡ-3 ಒಟ್ಟು 50 ಮನೆಗಳು ಹಂಚಿಕೆಯಾಗಿದ್ದು, ಕನಕಗಿರಿ ಮತ್ತು ಕಾರಟಗಿ ತಾಲೂಕಿನ ಮೀನುಗಾರರ ಸಹಕಾರ ಸಂಘಗಳ ಸದಸ್ಯರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಈ ಯೋಜನೆಯಡಿ ನಿರ್ವಸತಿ ಮೀನುಗಾರರಿಗೆ ಮನೆಗಳನ್ನು ನಿರ್ಮಿಸಿಕೊಳ್ಳಲು ಸಹಾಯಧನ ವಿತರಿಸಲಾಗುತ್ತಿದ್ದು, ನಿರ್ವಸತಿ ಮೀನುಗಾರರು ಸೆಪ್ಟೆಂಬರ್ 15 ರೊಳಗಾಗಿ ಗಂಗಾವತಿ ಮೀನುಗಾರಿಕೆ ಸಹಾಯಕ ನಿರ್ದೇಶಕರಲ್ಲಿಗೆ ಕಛೇರಿ ವೇಳೆಯಲ್ಲಿ ಅರ್ಜಿಗಳನ್ನು ಪಡೆದು ಭರ್ತಿ ಮಾಡಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಈ ಕಛೇರಿಗೆ ಸಂಪರ್ಕಿಸುವಂತೆ ಗಂಗಾವತಿ ಮೀನುಗಾರಿಕೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು : 2025-26ನೇ ಸಾಲಿನ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯನ್ನು ಕೈಗೊಳ್ಳುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಉಲ್ಲೇಖಿತ ಅಧಿಸೂಚನೆ ಮತ್ತು ತಿದ್ದುಪಡಿ ಆದೇಶಗಳಲ್ಲಿನ ವೇಳಾಪಟ್ಟಿಯಂತೆ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ, ಕಾಳಿದಾಸ ಮಾರ್ಗ, ಗಾಂಧಿನಗರ, ಬೆಂಗಳೂರು-560009 ಇಲ್ಲಿ ನಡೆಸಲಾಗುತ್ತಿದ್ದು, ವಿಶೇಷ ಪ್ರಕರಣ, ಕಡ್ಡಾಯ ವರ್ಗಾವಣೆ ಮತ್ತು ಸಾಮಾನ್ಯ ಕೋರಿಕೆ ವರ್ಗಾವಣೆಗೆ ಅರ್ಹರಾಗಿರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ನಿಗಧಿತ ದಿನಾಂಕಗಳಂದು ವರ್ಗಾವಣೆ ಕೌನ್ಸಿಲಿಂಗ್ಗೆ ಹಾಜರಾಗುವಾಗ ಈ ಕೆಳಕಂಡ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚಿಸಿದೆ. ವರ್ಗಾವಣೆ ಕೌನ್ಸಿಲಿಂಗ್ಗೆ ಹಾಜರಾಗುವ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಕಡ್ಡಾಯವಾಗಿ ಗುರುತಿನ ಚೀಟಿ (ID Card)/ ಆಧಾರ್ ಕಾರ್ಡ್ ಮತ್ತು ಅಗತ್ಯ ದಾಖಲೆಗಳೊಂದಿಗೆ ಹಾಜರಾಗುವುದು. ವರ್ಗಾವಣೆ ಕೌನ್ಸಿಲಿಂಗ್ನ ನಿಗಧಿತ ದಿನಾಂಕದಂದು ಪೂರ್ವಾಹ್ನದ ಅಧಿವೇಶನಕ್ಕೆ ಹಾಜರಾಗಬೇಕಾದ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಪೂರ್ವಾಹ್ನ 9:00 ಗಂಟೆಗೆ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಕಡ್ಡಾಯವಾಗಿ ಹಾಜರಿದ್ದು, ಪೂರ್ವಾಹ್ನ 930 ಗಂಟೆಯೊಳಗೆ…
ಬೇಟಿ ಬಚಾವೋ-ಬೇಟಿ ಪಡಾವೋ ಅಭಿಯಾನದ ಅಡಿಯಲ್ಲಿ ಭಾರತ ಸರ್ಕಾರದ ಸಣ್ಣ ಠೇವಣಿ ಯೋಜನೆಯಾದ ಸುಕನ್ಯಾ ಸಮೃದ್ಧಿ ಯೋಜನೆ (ಎಸ್ಎಸ್ವೈ ಯೋಜನೆ) ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು 2015 ರಲ್ಲಿ ಪ್ರಾರಂಭಿಸಿದರು. ಸುಕನ್ಯಾ ಸಮೃದ್ಧಿ ಯೋಜನೆ (ಎಸ್ಎಸ್ವೈ) ಅನ್ನು ದೇಶದಲ್ಲಿ ಹೆಣ್ಣು ಮಗುವಿನ ಭವಿಷ್ಯವನ್ನು ಭದ್ರಪಡಿಸಲು ವಿನ್ಯಾಸಗೊಳಿಸಲಾದ ಕಾರ್ಯತಂತ್ರದ ಹೂಡಿಕೆ ಯೋಜನೆಯಾಗಿ ಪರಿಚಯಿಸಲಾಯಿತು. ಸುಕನ್ಯಾ ಸಮೃದ್ಧಿ ಯೋಜನೆ ಸುಕನ್ಯಾ ಸಮೃದ್ಧಿ ಯೋಜನೆ ಪೋಷಕರು ತಮ್ಮ ಹೆಣ್ಣುಮಕ್ಕಳಿಗೆ ಜನನದಿಂದ 10 ವರ್ಷದವರೆಗೆ ಖಾತೆಯನ್ನು ತೆರೆಯಲು ಅನುವು ಮಾಡಿಕೊಡುತ್ತದೆ, ಖಾತೆಯು 21 ವರ್ಷಗಳ ನಂತರ ಪರಿಪಕ್ವಗೊಳ್ಳುತ್ತದೆ. ಮುಕ್ತಾಯದ ನಂತರ, ಮಗಳ ಶಿಕ್ಷಣ ಅಥವಾ ಮದುವೆಯ ವೆಚ್ಚಗಳನ್ನು ಬೆಂಬಲಿಸಲು ಸಂಪೂರ್ಣ ಮೊತ್ತವನ್ನು ಹಿಂಪಡೆಯಬಹುದು. ಆದಾಯ ತೆರಿಗೆ ಕಾಯ್ದೆ, 1961 ರ ಸೆಕ್ಷನ್ 80 ಸಿ ಅಡಿಯಲ್ಲಿ 1.5 ಲಕ್ಷ ರೂ.ಗಳವರೆಗೆ ತೆರಿಗೆ ಪ್ರಯೋಜನವನ್ನು ಒದಗಿಸುವುದು ಈ ಯೋಜನೆಯ ಪ್ರಮುಖ ಲಕ್ಷಣವಾಗಿದೆ. ಇದು ತಮ್ಮ ಮಗಳ ಭವಿಷ್ಯದ ಬಗ್ಗೆ ಕಾಳಜಿ ವಹಿಸುವ ಪೋಷಕರಿಗೆ ಸುಕನ್ಯಾ ಸಮೃದ್ಧಿ ಯೋಜನೆಯನ್ನು…
ಧರ್ಮಸ್ಥಳ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾಸ್ಕ್ ಮ್ಯಾನ್ ನನ್ನು ಮತ್ತೆ 3 ದಿನ ಎಸ್ ಐ ಟಿ ಕಸ್ಟಡಿಗೆ ನೀಡಿ ಬೆಳ್ತಂಗಡಿ ನ್ಯಾಯಾಲಯ ಆದೇಶ ಹೊರಡಿಸಿದೆ. ಸುದೀರ್ಘ ವಿಚಾರಣೆ ನಡೆಸಿದ ಎಸ್ ಐ ಟಿ ಪೊಲೀಸರು ಮಾಸ್ಕ್ ಮ್ಯಾನ್ ನನ್ನು ಕೋರ್ಟ್ ಗೆ ಹಾಜರುಪಡಿಸಿ ನಂತರ ತಮ್ಮ ವಶಕ್ಕೆ ನೀಡುವಂತೆ ಕೇಳಿಕೊಂಡಿದ್ದರು. ಪೊಲೀಸರ ಮನವಿ ಸ್ವೀಕರಿಸಿದ ಕೋರ್ಟ್ ಮಾಸ್ಕ್ ಚಿನ್ನಯ್ಯನನ್ನು ಮತ್ತೆ 3 ದಿನ ಎಸ್ ಐ ಟಿ ವಶಕ್ಕೆ ನೀಡಿ ಬೆಳ್ತಂಗಡಿ ನ್ಯಾಯಾಲಯ ಆದೇಶ ಹೊರಡಿಸಿದೆ. ಸೆ.6ರಂದು ಚಿನ್ನಯ್ಯನನ್ನು ಕೋರ್ಟ್ ಗೆ ಹಾಜರುಪಡಿಸುವಂತೆ ಸೂಚನೆ ನೀಡಲಾಗಿದೆ.
ಬೆಂಗಳೂರು : ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3ರ ಅನುಷ್ಠಾನಕ್ಕೆ ಕೇಂದ್ರ ಜಲಶಕ್ತಿ ಸಚಿವರಲ್ಲಿ ಮನವಿ ಮಾಡಿದ್ದೇನೆ. ಅವರು ಸಹ ಈ ಬಗ್ಗೆ ಶೀಘ್ರದಲ್ಲೇ ಸಭೆ ನಿಗದಿ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ. ನಮ್ಮ ಸರ್ಕಾರ ಈ ಯೋಜನೆ ಸಾಕಾರಕ್ಕೆ ಬದ್ಧವಾಗಿದೆ. ಎರಡು- ಮೂರು ದಿನಗಳಲ್ಲಿ ಅಂತಿಮ ತೀರ್ಮಾನ ಮಾಡಲಾಗುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ನಡೆದ ಸಭೆಯ ನಂತರ ಜಲಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ಭೂಸ್ವಾಧೀನ, ಪುನರ್ವಸತಿ, ಪುನರ್ನಿರ್ಮಾಣ, ಭೂಪರಿಹಾರದ ಬಗ್ಗೆ ಪರಿಹಾರ ಕಂಡುಹಿಡಿಯಬೇಕು ಎಂದು ಮೂರ್ನಾಲ್ಕು ಸುತ್ತು ಚರ್ಚೆ ನಡೆಸಿದ್ದೇವೆ. ಈ ಹಿಂದಿನ ಸಿಎಂ ಬಸವರಾಜ ಬೊಮ್ಮಾಯಿ ಅವರ ಅಧಿಕಾರವಧಿಯಲ್ಲಿ ಸಂಪುಟಸಭೆ ಹಾಗೂ ಉಪ ಸಮಿತಿ ಸಭೆಯಲ್ಲಿ ಪ್ರತಿ ಎಕರೆ ನೀರಾವರಿ ಜಮೀನಿಗೆ ರೂ. 24 ಲಕ್ಷ ರೂ., ಒಣ ಭೂಮಿಗೆ ರೂ. 20 ಲಕ್ಷ ಎಂದು ತೀರ್ಮಾನ ಮಾಡಿದ್ದರು. ಆದರೆ…
ಬೆಂಗಳೂರು : ಧರ್ಮಸ್ಥಳಕ್ಕೆ ಕೆಟ್ಟ ಹೆಸರು ತರುವಂತಹ ಬಿಜೆಪಿ- ಜೆಡಿಎಸ್ ಪಕ್ಷಗಳ ರಾಜಕೀಯ ಒಳಒಪ್ಪಂದವನ್ನು ಕಾಂಗ್ರೆಸ್ ಸರ್ಕಾರ ನಿಷ್ಪಕ್ಷಪಾತ ಎಸ್ಐಟಿ ತನಿಖೆ ಮೂಲಕ ವಿಫಲಗೊಳಿಸಿದೆ. ಇದೆಲ್ಲವೂ ಪ್ರತಿಪಕ್ಷಗಳ ರಾಜಕೀಯ ನಾಟಕ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಮ್ಮ ರಕ್ತದಾಹ ನಿಲ್ಲಿಸಿ, ಕ್ಷೇತ್ರದ ಪಾವಿತ್ರ್ಯತೆ ಉಳಿಸಿ” ಎಂದು ಬಮುಲ್ ಅಧ್ಯಕ್ಷರಾದ ಡಿ.ಕೆ.ಸುರೇಶ್ ಅವರು ಹರಿಹಾಯ್ದರು. ಸದಾಶಿವನಗರದ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಪ್ರತಿಕ್ರಿಯೆ ನೀಡಿದರು. ಧರ್ಮಸ್ಥಳಕ್ಕೆ ಬಿಜೆಪಿಯವರು ಭೇಟಿ ಜೊತೆಗೆ ಸೌಜನ್ಯ ಅವರ ಮನೆಗೂ ಭೇಟಿ ನೀಡಿದ ಬಗ್ಗೆ ಕೇಳಿದಾಗ, “ಯಾತ್ರೆಯಲ್ಲಿ ಅಲ್ಲಿನ ಜನಪ್ರತಿನಿಧಿಗಳೂ ಸಹ ಶ್ರೀಕ್ಷೇತ್ರವನ್ನು ಒಪ್ಪಿ ಮಾತನಾಡಿಲ್ಲ. ಕೇವಲ ಸ್ವಾಮಿ ಮಂಜುನಾಥನ ಬಗ್ಗೆ ಮಾತ್ರ ಮಾತನಾಡಿದ್ದಾರೆ. ಆಗ ಸುಖಾಸುಮ್ಮನೆ ಆರೋಪಗಳನ್ನು ಮಾಡಿ, ಈಗ ಕೊಳಕು ರಾಜಕಾರಣದಿಂದ ಆಚೆ ಬರಲು ಧರ್ಮಸ್ಥಳದ ಯಾತ್ರೆ ಮಾಡಲಾಗಿದೆ. ಇದು ಕ್ಷೇತ್ರದ ಮೇಲೆ ಇರುವ ಗೌರವದಿಂದ ಮಾಡಿರುವ ಯಾತ್ರೆಯಲ್ಲ” ಎಂದರು. “ಬಿಜೆಪಿ- ಜೆಡಿಎಸ್ ಅವರು ಏತಕ್ಕೆ ಯಾತ್ರೆ ಮಾಡಿದ್ದಾರೆ. ಯಾರಿಗೆ ಸಾಂತ್ವನ ಹೇಳಲು ಯಾತ್ರೆಗೆ ಹೋಗಿದ್ದಾರೆ…