Subscribe to Updates
Get the latest creative news from FooBar about art, design and business.
Author: kannadanewsnow57
ದೇವಾಲಯಗಳಲ್ಲಿ, ಮಸೀದಿಗಳಲ್ಲಿ ಹಾಗೂ ಚರ್ಚ್ಗಳಲ್ಲಿ ನಡೆಯುವ ಎಲ್ಲ ವಿವಾಹಗಳಲ್ಲಿ ವಧು-ವರರ ಅರ್ಹ ವಯಸ್ಸಿನ ದೃಢೀಕರಣದ ನಂತರವೇ ಅರ್ಚಕರು, ಮೌಲ್ವಿಗಳು ಹಾಗೂ ಪಾದ್ರಿಗಳು ವಿವಾಹಕ್ಕೆ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ.ಇಟ್ನಾಳ ಅವರು ಸೂಚಿಸಿದ್ದಾರೆ. ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಜಿಲ್ಲಾಡಳಿತವು ಹಲವಾರು ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸುತ್ತಿದ್ದಾಗ್ಯೂ ಜಿಲ್ಲೆಯಲ್ಲಿ ಅಪ್ರಾಪ್ತ ಮಕ್ಕಳಿಗೆ ವಿವಾಹವನ್ನು ಮಾಡಲು ಪ್ರಯತ್ನಿಸುತ್ತಿರುವುದು ಕಂಡುಬರುತ್ತಿದೆ. ಬಾಲ್ಯವಿವಾಹ ನಿಷೇಧ ಕಾಯ್ದೆ-2006 ಕರ್ನಾಟಕ ತಿದ್ದುಪಡಿ-2016 ರಂತೆ 18 ವರ್ಷದೊಳಗಿನ ಹೆಣ್ಣು ಮಗು ಹಾಗೂ 21 ವರ್ಷದೊಳಗಿನ ಗಂಡು ಮಕ್ಕಳ ವಿವಾಹವನ್ನು ನಿಷೇಧಿಸಿದೆ. ಬಾಲ್ಯವಿವಾಹವು ಶಿಕ್ಷಾರ್ಹ ಅಪರಾಧವಾಗಿದ್ದು, ಕಾಯ್ದೆಯ ಕಲಂ 10 ಮತ್ತು 11 ರನ್ವಯ ಬಾಲ್ಯವಿವಾಹದಲ್ಲಿ ಭಾಗವಹಿಸಿದವರು, ಪ್ರೋತ್ಸಾಹಿಸಿದವರು, ಸಹಕರಿಸಿದವರು ಹಾಗೂ ನಡೆಸಿದವರಿಗೆ ಕನಿಷ್ಟ 1 ರಿಂದ 2 ವರ್ಷಗಳ ಜೈಲು ಶಿಕ್ಷೆ ಮತ್ತು ರೂ.1 ಲಕ್ಷದವರೆಗೆ ದಂಡವನ್ನು ವಿಧಿಸಬಹುದಾಗಿದೆ. ಸರ್ವೋಚ್ಛ ನ್ಯಾಯಾಲಯವು ಬಾಲ್ಯವಿವಾಹದಿಂದ ಮಕ್ಕಳ ಬೆಳವಣಿಗೆಯ ಮೇಲೆ ದುಷ್ಪರಿಣಾಮ ಬೀರುವುದಲ್ಲದೆ ಮಕ್ಕಳ ಮೇಲೆ ಲೈಂಗಿಕ ಅಪರಾಧಗಳನ್ನು ಎಸಗಲು…
ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರರ ಕ್ಷೇತ್ರದ ಚುನಾವಣೆ ಸಂಬಂಧ ಮತದಾರ ಪಟ್ಟಿ ತಯಾರಿಕೆ ಪ್ರಕ್ರಿಯೆ ಆರಂಭವಾಗಿದೆ. ನಮೂನೆ-18 ರಲ್ಲಿ ಮತಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ನವೆಂಬರ್ 6 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಭಾರತ ಚುನಾವಣಾ ಆಯೋಗದ ಸೂಚನೆಯಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ ಸಂಬಂಧ ಮತದಾರ ಪಟ್ಟಿ ತಯಾರಿಕೆಗೆ ವೇಳಾಪಟ್ಟಿ ನಿಗಧಿಪಡಿಸಿದ್ದಾರೆ. 1 ನವೆಂಬರ್ 2025 ಕ್ಕೆ ಇದ್ದಂತೆ ಮತದಾರರ ಪಟ್ಟಿ ಸಿದ್ದಪಡಿಸಲಾಗವುದು. ಈ ಸಂಬಂಧ ಜಿಲ್ಲೆಯ ಎಲ್ಲಾ ತಾಲ್ಲೂಕುಗಳು, ನಗರಸಭೆ ವ್ಯಾಪ್ತಿಯಲ್ಲಿ ಸಹಾಯಕ ಮತದಾರರ ನೊಂದಣಾಧಿಕಾರಿ ಹಾಗೂ ನಿರ್ಧಿಷ್ಟಾಧಿಕಾರಿಗಳನ್ನು ನೇಮಿಸಲಾಗಿದೆ. ಮತದಾರ ಪಟ್ಟಿ ತಯಾರಿಕೆಗೆ ಸೆ.30 ರಂದು ಅಧಿಸೂಚನೆ ಹೊರಡಿಸಲಾಗಿದೆ. ಅಕ್ಟೋಬರ್ 15 ರಂದು ಮೊದಲ ಬಾರಿಗೆ ಹಾಗೂ 25 ರಂದು ಎರಡನೇ ಬಾರಿಗೆ ಅಧಿಸೂಚನೆಯನ್ನು ಪತ್ರಿಕೆಗಳಲ್ಲಿ ಪ್ರಕಟಣೆ ನೀಡಲಾಗುವುದು. ನಮೂನೆ-18 ರಲ್ಲಿ ಅರ್ಜಿ ಸಲ್ಲಿಸಲು ನವೆಂಬರ್ 6 ಕಡೆಯ ದಿನವಾಗಿದೆ. ನವೆಂಬರ್ 20 ವರೆಗೆ ಕರಡು ಮತದಾರರ ಪಟ್ಟಿ ಸಿದ್ದಪಡಿಸಲಾಗುವುದು. ನವೆಂಬರ್…
ಬೆಂಗಳೂರು: ಸಹಕಾರ ಇಲಾಖೆಯ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ಯಶಸ್ವಿನಿ ಯೋಜನೆಯ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಅಪ್ ಡೇಟ್ ನೀಡಲಾಗಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಯಶಸ್ವಿನಿ ಯೋಜನೆಯಡಿಯಲ್ಲಿ ಫಲಾನುಭವಿಗಳಾಗಿರುವ ABArK ಯೋಜನೆಯ ಫಲಾನುಭವಿಗಳಿಗೆ ಯಶಸ್ವಿನಿ ಯೋಜನೆಯಲ್ಲೇ ಪ್ರಯೋಜನವನ್ನು ಪಡೆಯಲು ಸೂಕ್ತ ಹಿಂಬರಹವನ್ನು ನೀಡಬಹುದೆಂದು ಈ ಮೂಲಕ ಆದೇಶಿಸಲಾಗಿದೆ. ಈ ಹಿಂಬರಹವನ್ನು ಖಾಸಗಿ ಆಸ್ಪತ್ರೆಗಳಲ್ಲಿನ ಚಿಕಿತ್ಸೆಯ SAST ರೆಫರಲ್ (referral) ನೀಡುವ ಹಂತದಲ್ಲಿ ನೀಡಬಹುದಾಗಿದೆ ಎಂದು ತಿಳಿಸಿದೆ. ಆದಾಗ್ಯೂ, ಸರ್ಕಾರಿ ಆಸ್ಪತ್ರೆಗಳು ವ್ಯಾಪಕವಾಗಿ ಲಭ್ಯವಿರುವುದರಿಂದ ಇವುಗಳ ಬಳಕೆಯ ಅವಕಾಶದಿಂದ ಯಶಸ್ವಿನಿ ಯೋಜನೆಯ ಫಲಾನುಭವಿಗಳು ವಂಚಿತವಾಗಬಾರದೆಂದು ಮನಗಂಡು, ಯಶಸ್ವಿನಿ ಯೋಜನೆಯ ಫಲಾನುಭವಿಗಳಿಗೆ ABARK ಅಡಿಯಲ್ಲಿ ಯಾವುದೇ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ಮುಂದುವರೆಯುತ್ತದೆ. ಆದರೆ, SAST ಅಂತಹ ಎಲ್ಲಾ ಫಲಾನುಭವಿಗಳ ಮಾಹಿತಿಯನ್ನು ಸಹಕಾರ ಇಲಾಖೆಯೊಂದಿಗೆ ಹಂಚಿಕೊಳ್ಳುವುದು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ABArK ದರದಲ್ಲಿ ಚಿಕಿತ್ಸಾ ವೆಚ್ಚವನ್ನು ಮರುಪಾವತಿಸಲು…
ಬೆಂಗಳೂರು : ಬಿಗ್ ಬಾಸ್ ಮನೆಗೆ ಮತ್ತೆ ಅವಕಾಶ ನೀಡಲಾಗಿದ್ದು, ಬಿಗ್ ಬಾಸ್ ಮನೆಗೆ ಎಲ್ಲಾ 17 ಸ್ಪರ್ಧಿಗಳು ಶಿಫ್ಟ್ ಮಾಡಲಾಗಿದೆ. ಹೀಗಾಗಿ ನಟ ಕಿಚ್ಚ ಸುದೀಪ್ ಅವರು ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಧನ್ಯವಾದ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ನಟ ಸುದೀಪ್, ಸಮಯೋಚಿತ ಬೆಂಬಲಕ್ಕಾಗಿ ನಾನು ಗೌರವಾನ್ವಿತ ಡಿ.ಕೆ.ಶಿವಕುಮಾರ್ ಸರ್ ಅವರಿಗೆ ಹೃತ್ಪೂರ್ವಕವಾಗಿ ಧನ್ಯವಾದ ಅರ್ಪಿಸುತ್ತೇನೆ. ಇತ್ತೀಚಿನ ಅವ್ಯವಸ್ಥೆ ಅಥವಾ ಗೊಂದಲಗಳಲ್ಲಿ ಬಿಗ್ ಬಾಸ್ ನಲ್ಲಿ ಭಾಗಿಯಾಗಿಲ್ಲ ಅಥವಾ ಭಾಗವಾಗಿರಲಿಲ್ಲ ಎಂದು ಒಪ್ಪಿಕೊಂಡಿದ್ದಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ನನ್ನ ಕರೆಗೆ ತಕ್ಷಣ ಸ್ಪಂದಿಸಿದ್ದಕ್ಕಾಗಿ DCM ಅವರನ್ನು ನಾನು ನಿಜವಾಗಿಯೂ ಕೃತಜ್ಞನಾಗಿದ್ದೇನೆ ಮತ್ತು #Nalpad ಅವರ ಸಮರ್ಪಿತ ಪ್ರಯತ್ನಗಳಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ ಜಾಲಿವುಡ್ ಸ್ಟುಡಿಯೋಸ್ ನ ಗೇಟ್ ಸಿ ಮಾತ್ರ ಓಪನ್ ಗೆ ಅವಕಾಶ ನೀಡಲಾಗಿದ್ದು, ಬಿಗ್ ಬಾಸ್ ಮನೆಗೆ ಸಂಪರ್ಕ ಕಲ್ಪಿಸುವ ಜಾಲಿವುಡ್ ನ ಗೇಟ್ ಸಿ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಸಮ್ಮುಖದಲ್ಲಿ ಓಪನ್…
ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತಗಳು ಚುರುಕುಗೊಂಡಿರುವುದರಿಂದ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಒಡಿಶಾದಿಂದ ರಾಜ್ಯದವರೆಗೆ ಮಳೆ ಮಾರುತಗಳು ವ್ಯಾಪಕವಾಗಿರುವ ಪರಿಣಾಮ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಗುರುವಾರ ಮತ್ತು ಶುಕ್ರವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಎರಡೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ ಹಾಗೂ ತುಮಕೂರು, ಶುಕ್ರವಾರಕ್ಕೆ ಕೋಲಾರ, ಕೊಡಗು, ಹಾಸನ, ಚಿಕ್ಕಮಂಗಳೂರು, ಚಿಕ್ಕಮ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರು: ಮಹಿಳೆಯರ ಆರೋಗ್ಯದ ದೃಷ್ಟಿಯಿಂದ “ಋತುಚಕ್ರ ರಜೆ” ನೀಡುವ ವಿಚಾರದಲ್ಲಿ ರಾಜ್ಯ ಸರ್ಕಾರ ಚರ್ಚೆ ನಡೆಸುತ್ತಿದ್ದು, ಇಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಿದೆ. ಮಹಿಳೆಯರ ಆರೋಗ್ಯದ ದೃಷ್ಟಿಯಿಂದ ರಾಜ್ಯಾದ್ಯಂತ ಸರ್ಕಾರಿ ಕಚೇರಿ, ಖಾಸಗಿ ಕಂಪೆನಿ, ಕೈಗಾರಿಕಾ ವಲಯದಲ್ಲಿ ಕಾರನಿರ್ವಹಿಸುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ರಜೆ ನೀಡು ವ ‘ಋತು ಚಕ್ರ ರಜೆ ನೀತಿ -2025’ ಜಾರಿಗೆ ತರುವ ಬಗ್ಗೆ ಇಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸುವ ಸಾಧ್ಯತೆಯಿದೆ. ಇಂದು ಬೆಳಗ್ಗೆ 11.30 ಗಂಟೆಗೆ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಂಪುಟ ಸಭೆಯಲ್ಲಿ ಸರ್ಕಾರಿ, ಖಾಸಗಿ ಕಂಪನಿಯಲ್ಲಿ ಸೇರಿ ಎಲ್ಲಾ ಉದ್ಯೋಗಸ್ಥ ಮಹಿಳೆಯರಿಗೆ ಋತು ಚಕ್ರದ ರಜೆ ನೀಡಲು ತೀರ್ಮಾನಿಸುವ ಸಾಧ್ಯತೆಯಿದೆ. ಬಿಹಾರ, ಕೇರಳ ಮತ್ತು ಒಡಿಶಾದಲ್ಲಿ ಮುಟ್ಟಿನ ರಜೆ ನೀತಿ ಈಗಾಗಲೇ ಇದೆ. ಆ ರಾಜ್ಯಗಳು ಅನುಸರಿಸುತ್ತಿರುವ ನೀತಿಗಳೂ ಸೇರಿದಂತೆ ಮಹಿಳಾಸ್ನೇಹಿ ನಿಯಮ ರೂಪಿಸಲು ಅಗತ್ಯವಾದ ಮಾಹಿತಿ ಸಂಗ್ರಹಿಸಲಾಗಿದೆ. ಸರ್ಕಾರದ ಎಲ್ಲ…
ಹಾಸನ: ಇತಿಹಾಸ ಪ್ರಸಿದ್ಧ ಹಾಸನಾಂಬ ಹಾಗೂ ಸಿದ್ದೇಶ್ವರ ದರ್ಶನೋತ್ಸವಕ್ಕೆ ಸಿದ್ಧತೆ ನಡೆದಿದ್ದು, ಇಂದು ದೇವಾಲಯದ ಬಾಗಿಲು ತೆರೆಯಲಿದೆ. ಸಾರ್ವಜನಿಕರಿಗೆ ಶುಕ್ರವಾರದಿಂದ (ಅ. 10) ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಶ್ರೀ ಹಾಸನಾಂಬ ದೇವಾಲಯವು ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಪ್ರಮುಖ ದೇವಾಲಯಗಳಲ್ಲಿ ಒಂದಾಗಿದೆ. ಸದರಿ ದೇವಾಲಯದಲ್ಲಿ ಪ್ರತೀ ವರ್ಷ ಶ್ರೀ ಹಾಸನಾಂಬ ದೇವಿಯ ಜಾತ್ರೋತ್ಸವ ಕಾರ್ಯಕ್ರಮವು ಅಭೂತಪೂರ್ವವಾಗಿ ಮತ್ತು ವಿಜೃಂಭಣೆಯಿಂದ ಆಚರಿಸಲ್ಪಡುತ್ತಿದೆ. ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲು ಡೇಟ್ ಫಿಕ್ಸ್ ಆಗಿದೆ. ಅಕ್ಟೋಬರ್ 9 ರಂದು ಬಾಗಿಲು ಓಪನ್ ಆಗಲಿದ್ದು, ಅಕ್ಟೋಬರ್ 23ರಂದು ಬಾಗಿಲು ಮುಚ್ಚಲಾಗುವುದು. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997 ಸೆಕ್ಷನ್ 58ರಡಿಯಲ್ಲಿ ದೇವಸ್ಥಾನದ ರೂಢಿ, ಸಂಪ್ರದಾಯ ಮತ್ತು ಆಚರಣೆಯಂತೆ ದೇವಾಲಯದ ಗರ್ಭಗುಡಿ, ಒಳಾಂಗಣ ಮತ್ತು ಹೊರಾಂಗಣದಲ್ಲಿ ಕೆಲಸ ನಿರ್ವಹಿಸುತ್ತಿರುವ ದೇವಾಲಯದ ನೌಕರರು ಮತ್ತು ನಿಯೋಜನೆ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗಳು ವಸ್ತ್ರ ಸಂಹಿತೆಯನ್ನು ಪಾಲಿಸುವುದು ಸೂಕ್ತವಾಗಿದ್ದು,…
ಬೆಂಗಳೂರು: ರಾಜ್ಯ ಸರ್ಕಾರದಿಂದ ಸಿಸಿ, ಓಸಿ ಪಡೆಯದೇ ಕಟ್ಟಿರುವಂತ ಮನೆಯ ಮಾಲೀಕರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಅದೇ 1200 ಅಡಿಯಲ್ಲಿ ಕಟ್ಟಿರುವ ಮನೆಗೆ ವಿದ್ಯುತ್, ನೀರು ಸರಬರಾಜು ಸಂಪರ್ಕ ನೀಡಲು ನಿರ್ಧರಿಸಿದೆ. ಹೌದು. ಸಿಸಿ, ಓಸಿ ಪಡೆಯದೇ ಮನೆಯನ್ನು ಕಟ್ಟಿರುವಂತ ಮಾಲೀಕರಿಗೆ ನೀರು, ವಿದ್ಯುತ್ ಸಂಪರ್ಕ ನೀಡಲು ನಿರ್ಧರಿಸಲಾಗಿದೆ. 1200 ಅಡಿಯಲ್ಲಿ ಕಟ್ಟಿರುವ ಮನೆಗಳಿಗೆ ಮಾತ್ರ ನೀಡಲು ನಿರ್ಧರಿಸಲಾಗಿದೆ ಎಂದಿದೆ. 30X40 ಸೈಟ್ ನಲ್ಲಿ ಕಟ್ಟಿರುವ ಮನೆಗಳಿಗೆ ಅನುಮತಿ ನೀಡುವ ಸಾಧ್ಯತೆ ಇದೆ. ಅಂತಿಮವಾಗಿ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸರ್ಕಾರ ನಿರ್ಧಾರವನ್ನು ಕೈಗೊಳ್ಳಲಿದೆ. 1200 ಅಡಿಗಿಂತ ಮೇಲ್ಪಟ್ಟ ಕಟ್ಟಡಗಳಿಗೆ ಸುಗ್ರೀವಾಜ್ಞೆ ಮೂಲಕ ಅನುಮತಿ ನೀಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುತ್ತದೆ. ಕಾನೂನು ಅಡೆತಡೆಗಳ ಬಗ್ಗೆಯೂ ಸಭೆಯಲ್ಲಿ ಸಮಾಲೋಚನೆ ನಡೆಸಲಾಗುತ್ತದೆ. ಈ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಹೆಚ್.ಕೆ. ಪಾಟೀಲ್, ಕೆ.ಜೆ. ಜಾರ್ಜ್, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ರಹೀಂ ಖಾನ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ…
ಬೆಂಗಳೂರು : ಬಿಗ್ ಬಾಸ್ ಮನೆಗೆ ಮತ್ತೆ ಅವಕಾಶ ನೀಡಲಾಗಿದ್ದು, ಬಿಗ್ ಬಾಸ್ ಮನೆಗೆ ಎಲ್ಲಾ 17 ಸ್ಪರ್ಧಿಗಳು ಶಿಫ್ಟ್ ಮಾಡಲಾಗಿದೆ. ಜಾಲಿವುಡ್ ಸ್ಟುಡಿಯೋಸ್ ನ ಗೇಟ್ ಸಿ ಮಾತ್ರ ಓಪನ್ ಗೆ ಅವಕಾಶ ನೀಡಲಾಗಿದ್ದು, ಬಿಗ್ ಬಾಸ್ ಮನೆಗೆ ಸಂಪರ್ಕ ಕಲ್ಪಿಸುವ ಜಾಲಿವುಡ್ ನ ಗೇಟ್ ಸಿ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಸಮ್ಮುಖದಲ್ಲಿ ಓಪನ್ ಮಾಡಲಾಗಿದೆ. ಕನ್ನಡ ಕಿರುತೆರೆಯ ಅತಿ ದೊಡ್ಡ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್-12ರ ಜಾಲಿವುಡ್ ಸ್ಟುಡಿಯೋಗೆ ಬೀಗ ಬಿದ್ದ ಹಿನ್ನೆಲೆ ಎಲ್ಲ ಸ್ಪರ್ಧಿಗಳನ್ನ ಈಗಲ್ಟನ್ ರೆಸಾರ್ಟ್ಗೆ ಶಿಫ್ಟ್ ಮಾಡಲಾಗಿತ್ತು. ಇದೀಗ ಈಗಲ್ಟನ್ ರೆಸಾರ್ಟ್ನಿಂದ ಎಲ್ಲಾ 17 ಸ್ಪರ್ಧಿಗಳನ್ನು ಶಿಫ್ಟ್ ಮಾಡಲಾಗಿದೆ. ಈಗಲ್ ಟನ್ ರೆಸಾರ್ಟ್ ನಿಂದ ಮುಂಜಾನೆ 4 ಗಂಟೆ ಸುಮಾರಿಗೆ ಎಲ್ಲಾ ಸ್ಪರ್ಧಿಗಳನ್ನು ಕಾರಿನ ಗಾಜಿಗೆ ಕಪ್ಪುಬಟ್ಟೆ ಸುತ್ತಿ ಸಿಬ್ಬಂದಿಗಳು ಬಿಗ್ ಬಾಸ್ ಮನೆಗೆ ಕರೆತಂದಿದ್ದಾರೆ.
ಹೈದರಾಬಾದ್ : ಆಂಧ್ರಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಪೋಟ ಸಂಭವಿಸಿದ್ದು, 6 ಮಂದಿ ಸಜೀವ ದಹನವಾಗಿದ್ದಾರೆ. ಆಂಧ್ರಪ್ರದೇಶದ ಅಂಬೇಡ್ಕರ್ ಕೊನಸೀಮಾ ಜಿಲ್ಲೆಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ರಾಯವರಂ ಮಂಡಲದ ರಾಯವರಂ ಲಕ್ಷ್ಮಿ ಗಣಪತಿ ಪಟಾಕಿ ತಯಾರಿಕಾ ಕೇಂದ್ರದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ಆರು ಜನರು ಸಜೀವ ದಹನವಾಗಿದ್ದಾರೆ. ಇತರ ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪಟಾಕಿ ತಯಾರಿಸುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಮಾಹಿತಿಯ ಮೇರೆಗೆ ಸ್ಥಳಕ್ಕೆ ತಲುಪಿದ ಪೊಲೀಸರು ಮತ್ತು ಪಿಯರ್ ಅಧಿಕಾರಿಗಳು ರಕ್ಷಣಾ ಕ್ರಮಗಳನ್ನು ಕೈಗೊಂಡಿದ್ದಾರೆ. ಪ್ರಸ್ತುತ, ಪಿಯರ್ ಸಿಬ್ಬಂದಿ ಅಲ್ಲಿ ಬೆಂಕಿಯನ್ನು ನಿಯಂತ್ರಿಸುತ್ತಿದ್ದಾರೆ. ಎಲ್ಲಾ ಮೃತರು ಮತ್ತು ಗಾಯಗೊಂಡವರನ್ನು ಅಲ್ಲಿ ಕೆಲಸ ಮಾಡುವ ಕಾರ್ಮಿಕರು ಎಂದು ಗುರುತಿಸಲಾಗಿದೆ. ಇದರ ಬಗ್ಗೆ ಸಂಪೂರ್ಣ ವಿವರಗಳು ಇನ್ನೂ ತಿಳಿದುಬಂದಿಲ್ಲ.














