Author: kannadanewsnow57

ಹೊನ್ನಾವರ : ಇಂದು ಬೆಳ್ಳಂಬೆಳಗ್ಗೆ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಮೂವರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊನ್ನಾವರ ಪಟ್ಟಣದ ಶರಾವತಿ ಸೇತುವೆ ಮೇಲೆ ನಡೆದಿದೆ. ಇಂದು ಬೆಳ್ಳಂಬೆಳಗ್ಗೆ ಕೆಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ನಲ್ಲಿದ್ದ ಮೂವರು ಸವಾರರು ಮೃತಪಟ್ಟಿದ್ದಾರೆ. ತಾಲ್ಲೂಕಿನ ಮಾವಿನಕುರ್ವದ ರಾಘವೇಂದ್ರ ಸೋಮಯ್ಯ ಗೌಡ (34), ಸಂಶಿಯ ಗೌರೀಶ ನಾಯ್ಕ ( 25), ಖರ್ವಾದ ರಮೇಶ ನಾಯ್ಕ (22) ಮೃತ ದುರ್ದೈವಿಗಳು ವಿಜಯಪುರದಿಂದ ಮಂಗಳೂರಿಗೆ ಸಾಗುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿಯಾದ ಪರಿಣಾಮ ದುರ್ಘಟನೆ ಸಂಭವಿಸಿದೆ. ಬೈಕ್‌ನಲ್ಲಿದ್ದವರು ಮಂಕಿ ಕಡೆಯಿಂದ ಹೊನ್ನಾವರ ಪಟ್ಟಣಕ್ಕೆ ಹೊರಟಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Read More

ತೆಲಂಗಾಣದ ಮೇದಕ್ ಜಿಲ್ಲೆಯಿಂದ ಕಳ್ಳತನದ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ. ಮೇದಕ್ ಜಿಲ್ಲೆಯ ನರಸಿಂಗ್ ಮಂಡಲದಲ್ಲಿ ಕಳ್ಳನೊಬ್ಬ ಮದ್ಯದಂಗಡಿ ಕದಿಯಲು ಹೋಗಿ ಮದ್ಯ ಸೇವಿಸಿ ಅಲ್ಲೇ ಮಲಗಿದ ಘಟನೆ ನಡೆದಿದೆ. ನರಸಿಂಗಿ ಮಂಡಲ ಕೇಂದ್ರದ ಕನಕದುರ್ಗ ವೈನ್‌ನ ಮ್ಯಾನೇಜರ್ ಭಾನುವಾರ ರಾತ್ರಿ ಕೆಲಸ ಮುಗಿಸಿ ಅಂಗಡಿಗೆ ಬೀಗ ಹಾಕಿ ತೆರಳಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರ ಬೆಳಗ್ಗೆ ಅಂಗಡಿ ತೆರೆದಾಗ ಮದ್ಯದಂಗಡಿಯಲ್ಲಿ ವ್ಯಕ್ತಿಯೊಬ್ಬರು ಕಂಠಪೂರ್ತಿ ಕುಡಿದು ಮಲಗಿರುವುದು ನೌಕರರು ನೋಡಿದ್ದಾರೆ. ಅತಿಯಾಗಿ ಮದ್ಯ ಸೇವಿಸಿ ಪ್ರಜ್ಞೆ ತಪ್ಪಿ ಬಿದ್ದಿದ್ದರು. ಮದ್ಯದಂಗಡಿಗೆ ನುಗ್ಗಿದ ವ್ಯಕ್ತಿ ಫಾಯಿಲ್ ತೆಗೆದು ಹಣ ಹಾಗೂ ಮದ್ಯದ ಬಾಟಲಿಗಳನ್ನೆಲ್ಲ ಪ್ಯಾಕ್ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಹೀಗಿರುವಾಗ ಅಂಗಡಿಯಿಂದ ಹೊರಗೆ ಬರುತ್ತಿದ್ದಾಗ ಅಲ್ಲಿದ್ದ ಮದ್ಯದ ಬಾಟಲಿಗಳನ್ನು ನೋಡಿ ಅಲ್ಲಿಯೇ ಮದ್ಯ ಸೇವಿಸಲು ಆರಂಭಿಸಿದ್ದಾರೆ. ಅತಿಯಾಗಿ ಮದ್ಯ ಸೇವಿಸಿದ ಬಳಿಕ ನಶೆಯಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಇದಾದ ಬಳಿಕ ಬೆಳಗ್ಗೆ ಅಂಗಡಿ ಸಿಬ್ಬಂದಿ ಆತನನ್ನು ಹಿಡಿದಿದ್ದಾರೆ. ಅಂಗಡಿ ಸಿಬ್ಬಂದಿ ಪೊಲೀಸರಿಗೆ…

Read More

ದಕ್ಷಿಣ ಕೊರಿಯಾ : ದಕ್ಷಿಣ ಕೊರಿಯಾದ ನ್ಯಾಯಾಲಯವು ಮಂಗಳವಾರ ದೋಷಾರೋಪಣೆಗೊಳಗಾದ ಅಧ್ಯಕ್ಷ ಯೂನ್ ಸುಕ್ ಯೆಯೋಲ್ ಅವರ ಸಮರ ಕಾನೂನಿನ ಘೋಷಣೆಯ ಮೇಲೆ ಬಂಧನ ವಾರಂಟ್ ಹೊರಡಿಸಿದೆ. ಉನ್ನತ ಶ್ರೇಣಿಯ ಅಧಿಕಾರಿಗಳ ಭ್ರಷ್ಟಾಚಾರ ತನಿಖಾ ಕಚೇರಿಯಿಂದ ಯೂನ್ ತನ್ನ ಮೂರನೇ ನಿಗದಿತ ವಿಚಾರಣೆಯನ್ನು ತಪ್ಪಿಸಿದ ನಂತರ ಜಂಟಿ ತನಿಖಾ ತಂಡವು ಸೋಮವಾರ ಬಂಧನ ವಾರಂಟ್ ಅನ್ನು ಕೋರಿದೆ. ವಾರಂಟ್ ಕಾರ್ಯಗತಗೊಂಡರೆ, ಯೂನ್ ಅವರು ಅಧಿಕಾರದಲ್ಲಿರುವಾಗಲೇ ಬಂಧಿಸಲ್ಪಟ್ಟ ದೇಶದ ಇತಿಹಾಸದಲ್ಲಿ ಮೊದಲ ಅಧ್ಯಕ್ಷರಾಗುತ್ತಾರೆ. ಯೂನ್ ಅವರ ವಕೀಲರು ಕಾಮೆಂಟ್ ಕೋರಿ ವಿನಂತಿಗೆ ತಕ್ಷಣ ಪ್ರತಿಕ್ರಿಯಿಸಲಿಲ್ಲ. ದೇಶವನ್ನು ಸಾಂವಿಧಾನಿಕ ಬಿಕ್ಕಟ್ಟಿನಲ್ಲಿ ಮುಳುಗಿಸಿದ, ಷೇರುಗಳು ಮತ್ತು ಕರೆನ್ಸಿಯ ಮೇಲೆ ಒತ್ತಡ ಹೇರಿದ ಮತ್ತು ರಾಜತಾಂತ್ರಿಕ ಪ್ರಯತ್ನಗಳನ್ನು ಅಡ್ಡಿಪಡಿಸಿದ ಸಮರ ಕಾನೂನನ್ನು ಸಂಕ್ಷಿಪ್ತವಾಗಿ ಹೇರಿದ್ದಕ್ಕಾಗಿ ಯೂನ್ ಅವರನ್ನು ಈ ತಿಂಗಳು ದೋಷಾರೋಪಣೆ ಮಾಡಲಾಯಿತು. ವಿರೋಧ-ನಿಯಂತ್ರಿತ ಸಂಸತ್ತು ನಂತರ ಯೂನ್ ಅವರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ಮಾಡಿದ ಪ್ರಧಾನ ಮಂತ್ರಿ ಹಾನ್ ಡಕ್-ಸೂ ಅವರನ್ನು ಅಮಾನತುಗೊಳಿಸಿತು. ತನಿಖಾಧಿಕಾರಿಗಳು ಅಧ್ಯಕ್ಷರನ್ನು ಕಸ್ಟಡಿಗೆ…

Read More

ಬೆಂಗಳೂರು : ಹೊಸ ವರ್ಷದ ಸಂಭ್ರಮಾಚರಣೆಗೆ ಅನುಕೂಲವಾಗುವಂತೆ ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಮೆಟ್ರೋ ರೈಲು ಸೇವೆಗಳನ್ನು ವಿಸ್ತರಿಸಲಾಗಿದೆ. ಕೊನೆಯ ರೈಲು ಜನವರಿ 1, 2025 ರಂದು ಮುಂಜಾನೆ 2 ಗಂಟೆಗೆ ಎಲ್ಲಾ ಟರ್ಮಿನಲ್‌ ನಿಲ್ದಾಣಗಳಿಂದ ಹೊರಡಲಿದೆ. ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣ (ಮೆಜೆಸ್ಟಿಕ್‌) ನಿಂದ ಕೊನೆಯ ರೈಲು ಎಲ್ಲಾ ನಾಲ್ಕು ದಿಕ್ಕುಗಳಿಗೆ ಮುಂಜಾನೆ 2.40ಕ್ಕೆ ಹೊರಡುತ್ತವೆ. ಎಂ.ಜಿ. ರಸ್ತೆಯಲ್ಲಿ ಜನಸಂದಣಿ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಡಿಸೆಂಬರ್‌ 31, 2024 ರಂದು ರಾತ್ರಿ 11 ಗಂಟೆಯಿಂದ ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ಮುಚ್ಚಲಾಗುತ್ತದೆ. ಪ್ರಯಾಣಿಕರ ಅನುಕೂಲಕ್ಕಾಗಿ ಹತ್ತಿರದ ನಿಲ್ದಾಣಗಳಾದ ಟ್ರಿನಿಟಿ ಮತ್ತು ಕಬ್ಬನ್‌ ಪಾರ್ಕ್‌ನಲ್ಲಿ ರೈಲುಗಳು ನಿಲ್ಲುತ್ತವೆ. ಟ್ರಿನಿಟಿ ಮತ್ತು ಕಬ್ಬನ್‌ ಪಾರ್ಕ್‌ ಮೆಟ್ರೋ ನಿಲ್ದಾಣಗಳಿಂದ ಯಾವುದೇ ಗಮ್ಯಸ್ಥಾನಕ್ಕೆ ರಾತ್ರಿ 11 ಗಂಟೆಯ ನಂತರ ಪ್ರಯಾಣಿಸುವವರು ₹50 ಬೆಲೆಯ ರಿಟರ್ನ್‌ ಜರ್ನಿ ಪೇಪರ್‌ ಟಿಕೆಟ್‌ ಅನ್ನು ಬಳಸಬೇಕು. ಈ ಪೇಪರ್‌ ಟಿಕೆಟ್‌ ಅನ್ನು ಎಲ್ಲಾ ಮೆಟ್ರೋ…

Read More

ಬೆಂಗಳೂರು : ಡಿಸೆಂಬರ್ 31 ರ ಇಂದು ಹೊಸ ವರ್ಷಾಚರಣೆ ಹಿನ್ನೆಲೆ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದ್ದು, ರಾಜ್ಯ ಸರ್ಕಾರವು ಹಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ. ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಈ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ನಿರ್ಬಂಧ ನಂದಿಬೆಟ್ಟ ಡಿಸೆಂಬರ್ 31 ರ ಸಂಜೆ 6 ಗಂಟೆಯಿಂದ ಜನವರಿ 1 ರ ಬೆಳಗ್ಗೆ 7 ಗಂಟೆಯವರೆಗೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಸಂಪೂರ್ಣ ನಿಷೇಧ ಹೇರಿ ಆದೇಶ ಹೊರಡಿಸಿದೆ. ಡಿಸೆಂಬರ್ 31ಸಂಜೆ 6 ಗಂಟೆಯಿಂದ 2025 ಜನವರಿ1ರಂದು ಬೆಳಿಗ್ಗೆ 7 ಗಂಟೆವರೆಗೂ ಸಾರ್ವಜನಿಕ ಪ್ರವೇಶ ನಿರ್ಬಂಧಿಸಿದ್ದು, ಜೊತೆಗೆ ಅತಿಥಿ ಗೃಹಗಳಿಗೆ ಪ್ರವೇಶ ಕೂಡ ನಿರ್ಬಂಧಿಸಿದೆ. ಚಾಮುಂಡಿ ಬೆಟ್ಟ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಇಂದು ಸಂಜೆ 7 ಗಂಟೆ ನಂತರ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಕಾವೇರಿ ತೀರದಲ್ಲಿ ಪ್ರವಾಸಿಗರಿಗೆ ನಿರ್ಬಂಧ ಕೆಆರ್ ಎಸ್ ಹಿನ್ನೀರು. ಬಲಮುರಿ,…

Read More

ನವದೆಹಲಿ : 2019 ರಲ್ಲಿ ಕರೋನಾ ಆಗಮನದ ನಂತರ, ಪ್ರತಿ ವರ್ಷ ಕೆಲವು ಹೊಸ ವೈರಸ್ ಚರ್ಚೆಗೆ ಬರುತ್ತಿದೆ. ಇದರಿಂದಾಗಿ ಜನರು ನಿತ್ಯ ಆತಂಕದಲ್ಲಿದ್ದಾರೆ. ಕರೋನಾ ಸಾಂಕ್ರಾಮಿಕ ಸಮಯದಲ್ಲಿ ಇಡೀ ಜಗತ್ತು ಕಂಡ ವಿನಾಶವು ಜನರನ್ನು ಹೆಚ್ಚು ಜಾಗೃತಗೊಳಿಸಿದೆ. 2025 ರಲ್ಲಿ, ಹೊಸ ವೈರಸ್ ಜಗತ್ತಿನಲ್ಲಿ ದೊಡ್ಡ ವಿನಾಶವನ್ನು ಉಂಟುಮಾಡಬಹುದು ಎಂದು ವಿಜ್ಞಾನಿಗಳು ಹೇಳುತ್ತಾರೆ. ಅದು ಯಾವ ವೈರಸ್ ಎಂದು ತಿಳಿಯೋಣ. ಆ ವೈರಸ್ ಯಾವುದು? ಆ ವೈರಸ್ ಹಕ್ಕಿ ಜ್ವರ ಅಥವಾ H5N1 ವೈರಸ್. ಇದು 2025ರಲ್ಲಿ ಅತ್ಯಂತ ಅಪಾಯಕಾರಿಯಾಗಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಸಾಮಾನ್ಯವಾಗಿ ಇದು ಪಕ್ಷಿಗಳಲ್ಲಿ ಕಂಡುಬರುತ್ತದೆ. ಆದರೆ ಇತ್ತೀಚೆಗೆ ಇದು ಹಸುಗಳು ಮತ್ತು ಕುದುರೆಗಳಂತಹ ಇತರ ಪ್ರಾಣಿಗಳಿಗೆ ಹರಡಲು ಪ್ರಾರಂಭಿಸಿದೆ. ಈ ವೈರಸ್ ಮನುಷ್ಯರಿಗೆ ಸುಲಭವಾಗಿ ಸೋಂಕು ತಗುಲುವುದಿಲ್ಲ, ಆದರೆ ಈ ಪರಿಸ್ಥಿತಿ ಬದಲಾಗಬಹುದು ಎಂದು ತಜ್ಞರು ಹೇಳುತ್ತಾರೆ. ಇದರರ್ಥ ಈ ವೈರಸ್ ಮನುಷ್ಯರಿಗೂ ಹರಡುವ ಅಪಾಯವನ್ನುಂಟುಮಾಡುತ್ತದೆ. ಮೂರು ಪ್ರಮುಖ ಸಾಂಕ್ರಾಮಿಕ ರೋಗಗಳ ಹೊರತಾಗಿಯೂ ಹೊಸ…

Read More

ಮೈಸೂರು: ಡಿಸೆಂಬರ್.31ರ ಹೊಸ ವರ್ಷಾಚರಣೆಗೆ ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಈ ನಿಯಮಗಳನ್ನು ಪಾಲಿಸೋದು ಕಡ್ಡಾಯವಾಗಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಮೈಸೂರು ನಗರ ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್ ಅವರು, ಸಾರ್ವಜನಿಕರು, ಮಹಿಳೆಯರು ಹಾಗೂ ಮಕ್ಕಳ ಸುರಕ್ಷತೆಯಿಂದ ಹೊಸ ವರ್ಷಾಚರಣೆಯ ವೇಳೆ ಸೂಕ್ತ ಬಂದೋಬಸ್ತ್ ಕೈಗೊಳ್ಳಲಾಗಿದೆ. ಚಾಮುಂಡಿ ಬೆಟ್ಟಕ್ಕೂ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ ಎಂದರು. ಮೈಸೂರಲ್ಲಿ ಹೊಸ ವರ್ಷಾಚರಣೆ ವೇಳೆ ಈ ಮಾರ್ಗಸೂಚಿ, ಈ ನಿಯಮಗಳ ಪಾಲನೆ ಕಡ್ಡಾಯ -ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸುವಂತಿಲ್ಲ. ಇದರ ತಡೆಗಾಗಿ ಠಾಣಾವಾರು ವಿಶೇಷ ಕಾರ್ಯಪಡೆ ತಂಡ ರಚನೆ. -ಮಹಿಳೆಯರ ರಕ್ಷಣೆಗಾಗಿ ಮಹಿಳಾ ಅಧಿಕಾರಿ, ಸಿಬ್ಬಂದಿ ಒಳಗೊಂಡ ಸುರಕ್ಷತಾ ಪಿಂಕ್ ಗರುಡಾ ಅಂದರೆ ಚಾಮುಂಡೆ ಪಡೆ ಗಸ್ತು -ಯಾವುದೇ ಅಹಿತಕರ ಘಟನೆ ನಡೆದ ಕೂಡಲೇ ತಪಾಸಣೆಗೆ ಶ್ವಾನದಳ, ವಿದ್ವಂಸಕ ಕೃತ್ಯ ತಡೆ ತಂಡದಿಂದ ತಪಾಸಣೆಗೆ ರೆಡಿ -ಜಿಲ್ಲೆಯಲ್ಲಿ ಪ್ರವಾಸಿ ತಾಣಗಳಲ್ಲಿ ಭದ್ರತೆಗಾಗಿ ಹೆಚ್ಚಿನ ಸಿಸಿಟಿವಿ ಕ್ಯಾಮರಾ ಕಣ್ಗಾವಲು -ವೀಲಿಂಗ್, ಡ್ರಾಗ್ ರೇಸ್ ತಡೆಗೆ ಸಂಚಾರ ಪೊಲೀಸರು…

Read More

ಬೆಂಗಳೂರು : ಹೊಸ ವರ್ಷಾಚರಣೆ ವೇಳೆ ಸಾರ್ವಜನಿಕರು ತಮ್ಮ ಸುರಕ್ಷತೆ ಬಗ್ಗೆ ಜಾಗೃತಿ ವಹಿಸಬೇಕು. ಬೇರೆಯವರಿಗೆ ತೊಂದರೆಯಾಗದಂತೆ ನಡೆದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಸಂಭ್ರಮಾಚರಣೆಯಲ್ಲಿ ಪಟಾಕಿಗಳನ್ನು ಸಿಡಿಸುವಂತಿಲ್ಲ. ಅತಿವೇಗ, ಅಜಾಗರೂಕತೆಯಿಂದ ವಾಹನ ಚಲಾಯಿಸಬಾರದು. ನಿರ್ಬಂಧಿತ ಪ್ರದೇಶಗಳಿಗೆ ಪ್ರವೇಶಿಸಬಾರದು. ಮೋಜಿಗಾಗಿ ತುರ್ತು ಕರೆಗಳಿಗೆ ಸಂಪರ್ಕಿಸಬಾರದು. ಅನವಶ್ಯಕವಾಗಿ ಗುಂಪುಗೂಡಬಾರದು ಎಂದು ಬೆಂಗಳೂರು ಪೊಲೀಸ್‌ ಆಯುಕ್ತರು ಸೂಚನೆ ನೀಡಿದ್ದಾರೆ. ಹೊಸ ವರ್ಷಾಚರಣೆ ವೇಳೆ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಡಿಸೆಂಬರ್ 31ರ ರಾತ್ರಿ 1ರ ವರೆಗೆ ಸಾರ್ವತ್ರಿಕವಾಗಿ ಹೊಸ ವರ್ಷ ಆಚರಿಸಲು ಅನುಮತಿಯಿದೆ ಹೊಸ ವರ್ಷಾಚರಣೆಯ ಪ್ರಯುಕ್ತ ಡಿಸೆಂಬರ್‌ 31 ರಂದು ರಾತ್ರಿ 11 ರಿಂದ ಮಧ್ಯರಾತ್ರಿ 2 ಗಂಟೆಯವರೆಗೆ ವಿವಿಧ ಮಾರ್ಗಗಳಲ್ಲಿ ಹೆಚ್ಚುವರಿ ಬಿಎಂಟಿಸಿ ಬಸ್‌ಗಳು ಸಂಚರಿಸಲಿವೆ. ಬ್ರಿಗೇಡ್‌ ರಸ್ತೆಯಿಂದ ಎಲೆಕ್ಟ್ರಾನಿಕ್ಸ್‌ ಸಿಟಿ ಮತ್ತು ಜಿಗಣಿಗೆ, ಎಂ.ಜಿ. ರಸ್ತೆಯಿಂದ ಸರ್ಜಾಪುರ, ಕೆಂಗೇರಿ–ಕೆಎಚ್‌ಬಿ ಕ್ವಾರ್ಟರ್ಸ್‌, ಜನಪ್ರಿಯ ಟೌನ್‌ಶಿಪ್‌, ನೆಲಮಂಗಲ, ಯಲಹಂಕ ಉಪನಗರ 5ನೇ ಹಂತ, ಯಲಹಂಕ, ಬಾಗಲೂರು, ಹೊಸಕೋಟೆ, ಚನ್ನಸಂದ್ರ, ಕಾಡುಗೋಡಿ, ಬನಶಂಕರಿಗೆ…

Read More

ಬೆಂಗಳೂರು : ಹೊಸ ವರ್ಷಾಚರಣೆ ವೇಳೆ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಡಿಸೆಂಬರ್ 31ರ ರಾತ್ರಿ 1ರ ವರೆಗೆ ಸಾರ್ವತ್ರಿಕವಾಗಿ ಹೊಸ ವರ್ಷ ಆಚರಿಸಲು ಅನುಮತಿಯಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತರಾದ ಬಿ.ದಯಾನಂದ್ ಅವರು ತಿಳಿಸಿದ್ದಾರೆ. ಹೊಸ ವರ್ಷಾಚರಣೆಯ ಪ್ರಯುಕ್ತ ಡಿಸೆಂಬರ್‌ 31 ರಂದು ರಾತ್ರಿ 11 ರಿಂದ ಮಧ್ಯರಾತ್ರಿ 2 ಗಂಟೆಯವರೆಗೆ ವಿವಿಧ ಮಾರ್ಗಗಳಲ್ಲಿ ಹೆಚ್ಚುವರಿ ಬಿಎಂಟಿಸಿ ಬಸ್‌ಗಳು ಸಂಚರಿಸಲಿವೆ. ಬ್ರಿಗೇಡ್‌ ರಸ್ತೆಯಿಂದ ಎಲೆಕ್ಟ್ರಾನಿಕ್ಸ್‌ ಸಿಟಿ ಮತ್ತು ಜಿಗಣಿಗೆ, ಎಂ.ಜಿ. ರಸ್ತೆಯಿಂದ ಸರ್ಜಾಪುರ, ಕೆಂಗೇರಿ–ಕೆಎಚ್‌ಬಿ ಕ್ವಾರ್ಟರ್ಸ್‌, ಜನಪ್ರಿಯ ಟೌನ್‌ಶಿಪ್‌, ನೆಲಮಂಗಲ, ಯಲಹಂಕ ಉಪನಗರ 5ನೇ ಹಂತ, ಯಲಹಂಕ, ಬಾಗಲೂರು, ಹೊಸಕೋಟೆ, ಚನ್ನಸಂದ್ರ, ಕಾಡುಗೋಡಿ, ಬನಶಂಕರಿಗೆ ಹೆಚ್ಚುವರಿ ಬಸ್‌ ಸಂಚರಿಸಲಿವೆ. ಹೆಚ್ಚು ಜನದಟ್ಟಣೆ ಇರುವ ಪ್ರಮುಖ ಬಸ್ ನಿಲ್ದಾಣ, ಜಂಕ್ಷನ್‌ಗಳಾದ ಕೆಂಪೇಗೌಡ ಬಸ್ ನಿಲ್ದಾಣ, ಕೆ.ಆರ್‌. ಮಾರುಕಟ್ಟೆ, ಶಿವಾಜಿನಗರ, ಕೋರಮಂಗಲ, ಕಾಡುಗೋಡಿ, ಕೆಂಗೇರಿ, ಸುಮನಹಳ್ಳಿ, ಗೊರಗುಂಟೆಪಾಳ್ಯ, ಯಶವಂತಪುರ, ಯಲಹಂಕ, ಶಾಂತಿನಗರ, ಬನಶಂಕರಿ, ಹೆಬ್ಬಾಳ ಮತ್ತು ಸೆಂಟ್ರಲ್ ಸಿಲ್ಕ್…

Read More

ಕ್ಯಾನ್ಸರ್: ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್ ಹೆಸರು ಕೇಳಿದರೆ ಅನೇಕರು ನಡುಗುತ್ತಾರೆ. ಏಕೆಂದರೆ ಇದು ಜಗತ್ತನ್ನೇ ತಲ್ಲಣಗೊಳಿಸುತ್ತಿರುವ ಮಹಾಮಾರಿ. ಇದರಿಂದ ಸಾಕಷ್ಟು ಮಂದಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದರೆ ಕೆಲವು ಸರಳ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದರಿಂದ ಈ ಭಯಾನಕ ಕಾಯಿಲೆಗೆ ತುತ್ತಾಗುವುದನ್ನು ತಪ್ಪಿಸಬಹುದು ಎಂದು ತಜ್ಞರು ಹೇಳುತ್ತಾರೆ. ಸೆಲೆಬ್ರಿಟಿ ಡಯೆಟಿಷಿಯನ್ ನಿಕೋಲ್ ಆಂಡ್ರ್ಯೂಸ್ ಇತ್ತೀಚೆಗೆ ವೈರಲ್ ಇನ್ಸ್ಟಾಗ್ರಾಮ್ ವೀಡಿಯೊದಲ್ಲಿ ಕ್ಯಾನ್ಸರ್ ಬಗ್ಗೆ ಆಘಾತಕಾರಿ ಸತ್ಯವನ್ನು ಬಹಿರಂಗಪಡಿಸಿದ್ದಾರೆ. ನಾವು ಪ್ರತಿದಿನ ಸೇವಿಸುವ ಆಹಾರದಲ್ಲಿ ಎರಡು ಅಪಾಯಕಾರಿ ಪದಾರ್ಥಗಳಿದ್ದು ಅದು ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಅವರು ಎಚ್ಚರಿಸಿದ್ದಾರೆ. ನಿಕೋಲ್ ಆಂಡ್ರ್ಯೂಸ್ ಅವರು ಕ್ಯಾನ್ಸರ್ಗೆ ಮುಖ್ಯ ಅಪಾಯಕಾರಿ ಅಂಶಗಳೆಂದರೆ ಆಲ್ಕೋಹಾಲ್ ಮತ್ತು ಸಂಸ್ಕರಿಸಿದ ಮಾಂಸ. ಆಲ್ಕೋಹಾಲ್ ಸೇವನೆಯು ಯಕೃತ್ತಿನ ಅಪಾಯವನ್ನು ಮಾತ್ರವಲ್ಲದೆ ಸ್ತನ, ಬಾಯಿ, ಗಂಟಲು, ಅನ್ನನಾಳ ಮತ್ತು ಕರುಳಿನ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಅವರು ಎಚ್ಚರಿಸಿದ್ದಾರೆ. ಆಲ್ಕೋಹಾಲ್ ದೇಹಕ್ಕೆ ಪ್ರವೇಶಿಸಿದಾಗ, ಅದು ಅಸೆಟಾಲ್ಡಿಹೈಡ್ ಆಗಿ ಬದಲಾಗುತ್ತದೆ. ಇದು ಡಿಎನ್ಎಗೆ ಹಾನಿ ಮಾಡುತ್ತದೆ ಮತ್ತು ಕ್ಯಾನ್ಸರ್ ಕೋಶಗಳ…

Read More