Author: kannadanewsnow57

ಪ್ರಪಂಚದಾದ್ಯಂತದ ಭಾರತೀಯರು 2025 ರ ಧನ್ ತೇರಸ್ ಹಬ್ಬವನ್ನು ಆಚರಿಸುತ್ತಿದ್ದಾರೆ. ಹಿಂದೂ ಸಮುದಾಯವು ಹೆಚ್ಚಾಗಿ ಆಚರಿಸುವ ಧನ್ ತೇರಸ್ ಚಿನ್ನ, ಬೆಳ್ಳಿ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಖರೀದಿಸಲು ವರ್ಷದ ಅತ್ಯಂತ ಶುಭ ಸಮಯವಾಗಿದೆ. ಇದು ಸಮೃದ್ಧಿ ಮತ್ತು ಅದೃಷ್ಟವನ್ನು ತರುತ್ತದೆ ಎಂದು ನಂಬಲಾದ ಹಳೆಯ ಆಚರಣೆಯಾಗಿದೆ. ಧಂತ್ರಯೋದಶಿಯಂದು ನಿಮ್ಮ ಚಿನ್ನ ಮತ್ತು ಬೆಳ್ಳಿಯ ಖರೀದಿಗಳನ್ನು ಮಾಡಲು ಜ್ಯೋತಿಷಿಗಳು ಶುಭ ಮುಹೂರ್ತವನ್ನು ಹಂಚಿಕೊಂಡಿದ್ದಾರೆ. ಧನ್ ತೇರಸ್ 2025 ಚಿನ್ನದ ಖರೀದಿ ಮುಹೂರ್ತ ಚಿನ್ನ ಮತ್ತು ಬೆಳ್ಳಿಯನ್ನು ಖರೀದಿಸಲು ಧನ್ತ್ರಯೋದಶಿ ಮುಹೂರ್ತವು ಅಕ್ಟೋಬರ್ 18 ರಂದು ಮಧ್ಯಾಹ್ನ 12:18 ಕ್ಕೆ ಪ್ರಾರಂಭವಾಗುತ್ತದೆ ಮತ್ತು ಅಕ್ಟೋಬರ್ 19 ರಂದು ಬೆಳಿಗ್ಗೆ 6:10 ರವರೆಗೆ ಮುಂದುವರಿಯುತ್ತದೆ, ಇದು ಶಾಪರ್ ಗಳಿಗೆ 17 ಗಂಟೆ, 52 ನಿಮಿಷಗಳ ವಿಂಡೋವನ್ನು ಒದಗಿಸುತ್ತದೆ. ಚಿನ್ನದ ನಾಣ್ಯಗಳು, ಆಭರಣಗಳು, ಬೆಳ್ಳಿಯ ಪಾತ್ರೆಗಳು ಮತ್ತು ಬೆಳ್ಳಿಯ ಇಟ್ಟಿಗೆಗಳು ಅಥವಾ ಚಿನ್ನದ ಸರಳುಗಳಂತಹ ಅಮೂಲ್ಯ ಹೂಡಿಕೆಗಳನ್ನು ಖರೀದಿಸಲು ಈ ಸುಭ್ ಮುಹೂರ್ತವು ಸೂಕ್ತವಾಗಿದೆ. ಜ್ಯೋತಿಷ್ಯಶಾಸ್ತ್ರದ…

Read More

ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎಂಬಂತೆ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ 1ರಿಂದ 10ನೇ ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡಲು ಶಿಕ್ಷಣ ಇಲಾಖೆ ಸಿದ್ದತೆ ನಡೆದಿದೆ. ಈ ಸಂಬಂಧ 10 ಚಟುವಟಿಕಾ ಪುಸ್ತಕ ರಚಿಸಿದ್ದು, ಸಿಎಂ ಸಿದ್ದರಾಮಯ್ಯ ಕನ್ನಡ ರಾಜ್ಯೋತ್ಸವದ ದಿನ ಬಿಡುಗಡೆ ಮಾಡಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ, ಅನುಭೂತಿ ಮತ್ತು ಪ್ರಾಮಾಣಿಕತೆ ಮತ್ತು ಬದ್ಧತೆ, ಸುಸ್ಥಿರ ಜೀವನ ಮತ್ತು ಪರಿಸರ ಜಾಗೃತಿ, ನಾಗರಿಕ ಜವಾಬ್ದಾರಿ, ವೈವಿಧ್ಯತೆ, ಸಮತೆ ಮತ್ತು ಒಳಗೊಳ್ಳುವಿಕೆ, ಭಾವನಾತ್ಮಕ ಬುದ್ಧಿವಂತಿಕೆ ಮತ್ತು ಸ್ಥಿತಿಸ್ಥಾಪಕತ್ವ, ವೈಜ್ಞಾನಿಕ ಮನೋ ಭಾವ ಮತ್ತು ಸೃಜನಶೀಲ ಕಲ್ಪನೆ, ಸುರಕ್ಷತೆ ಮತ್ತು ಲಿಂಗ ಸಮಾನತೆ ಈ 10 ಮೂಲ ಮೌಲ್ಯಗಳು ಮತ್ತು ಇತರೆ ಉಪ ಮೌಲ್ಯಗಳನ್ನು ಆಧರಿಸಿದ ಚಟುವಟಿಕಾ ಪುಸ್ತಕಗಳನ್ನು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ(ಡಿಎಸ್ಇಆರ್ಟಿ) ರಚಿಸಿದೆ. ಇವುಗಳ ಡಿಜಿಟಲ್ ಅವತರಣಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡು ಗಡೆ…

Read More

ಬೆಳಗಾವಿ : ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್ ಆಗಿದ್ದು, ಕಂಡಕ್ಟರ್ ಆಗಿದ್ದ ಮಹಿಳೆಯನ್ನು ಪತಿಯೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು,ರಸ್ತೆ ಸಾರಿಗೆ ಸಂಸ್ಥೆಯಲ್ಲಿ ನಿರ್ವಾಹಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾಶವ್ವ ಕರೀಕಟ್ಟಿ (34) ಅವರನ್ನು ಅವರ ಪತಿ ನಿಪ್ಪಾಣಿ ಠಾಣೆ ಕಾನ್ಸ್ಟೆಬಲ್ ಸಂತೋಷ ಕಾಂಬಳೆ (35) ಕೊಲೆ ಮಾಡಿದ್ದಾರೆ. ಬೈಲಹೊಂಗಲ ತಾಲೂಕಿನ ಬೆಳವಡಿ ಗ್ರಾಮದ ಕಾಶವ್ವ ಮತ್ತು ಸಂತೋಷ 2013ರಲ್ಲಿ ವಿವಾಹವಾಗಿದ್ದರು. ಕಾಶವ್ವ ಅವರು ನಿಪ್ಪಾಣಿಯಿಂದ ಸವದತ್ತಿ ಡಿಪೊಗೆ ವರ್ಗಾವಣೆ ಪಡೆದುಕೊಂಡಿದ್ದರು. ಸವದತ್ತಿಯ ರಾಮಾಪುರ ಬಡಾವಣೆ ಮನೆಯಲ್ಲಿ ವಾಸವಾಗಿದ್ದರು. ಪತಿ ಸಂತೋಷನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಹೀಗಾಗಿ ಸಂತೋಷ್ ಅವರನ್ನು ಪೊಲೀಸ್ ಸೇವೆಯಿಂದ ಅಮಾನತು ಮಾಡಲಾಗಿತ್ತು. ಆಕ್ಟೋಬರ್ 13 ರಂದು ಸಂತೋಷ್ ಕಾಶವ್ವ ಮನೆಗೆ ಹೋಗಿದ್ದ ವೇಳೆ ಇಬ್ಬರ ನಡುವೆ ಜಗಳವಾಗಿತ್ತು. ಬಳಿಕ ಮಾರಕಾಸ್ತ್ರದಿಂದ ಕಾಶವ್ವಗೆ ಇರಿದು ಕೊಲೆ ಮಾಡಿ ಬೀಗ ಹಾಕಿಕೊಂಡು ಸಂತೋಷ್ ಪರಾರಿಯಾಗಿದ್ದ. ನಾಲ್ಕೈದು…

Read More

ಚಾಮರಾಜನಗರ : ಗ್ರಾಮಪಂಚಾಯಿತಿ ಕಚೇರಿ ಎದುರೇ ವಾಟರ್ ಮ್ಯಾನ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸಂಬಳ ನೀಡಿಲ್ಲ ಎಂದು ಮನನೊಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಚಾಮರಾಜನಗರ ತಾಲೂಕಿನ ಹೊಂಗನೂರು ಗ್ರಾಮದಲ್ಲಿ ಗ್ರಾಮಪಂಚಾಯಿತಿ ಕಚೇರಿ ಮುಂದೆಯೇ ವಾಟರ್ ಮ್ಯಾನ್ ಚಿಕ್ಕಸು ನಾಯಕ (65) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊಂಗನೂರು ಗ್ರಾಮಪಂಚಾಯಿತಿನಲ್ಲಿ ಚಿಕ್ಕಸು ವಾಟರ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು. ಮುಂಜಾನೆ ಗ್ರಾಮಸ್ಥರು ಗ್ರಾ.ಪಂ.ಕಚೇರಿಗೆ ಬಂದಾಗ ಚಿಕ್ಕಸು ಗ್ರಾ.ಪಂ. ಬಾಗಿಲು ಬಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಚಕ್ಕಸು, ಸಂಬಳಕ್ಕಾಗಿ ಎಷ್ಟೇ ಮನವಿ ಮಾಡಿಕೊಂಡಿದ್ದರೂ ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ರೂಪಾ ಮತ್ತು ಪಿಡಿಓ ರಾಮೇಗೌಡ ಚಿಕ್ಕಸು ಅವರನ್ನು  ಗದರಿಸಿ ಕಳುಹಿಸುತ್ತಿದ್ದರು. ಇದರಿಂದ ಬೇಸತ್ತ ವಾಟರ್ಮ್ಯಾನ್ ಚಿಕ್ಕಸು ಡೆತ್ ನೋಟ್ ಬರೆದಿಟ್ಟು, ಗ್ರಾಮ ಪಂಚಾಯಿತಿ ಕಚೇರಿ ಬಾಗಿಲಿನ ಮುಂದೆಯೇ ನೇಣು ಬಿಗಿಕೊಂಡು ಸಾವನ್ನಪ್ಪಿದ್ದಾರೆ. ಈ ಕುರಿತು ಚಾಮರಾಜ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದ್ದು, ಬಿಎಂಟಿಸಿ ಬಸ್ ಹರಿದು 9 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಶಾಲೆ ಮುಗಿಸಿ ಮನೆ ಕಡೆಗೆ ತೆರಳುತ್ತಿದ್ದ 9 ವರ್ಷದ ಬಾಲಕಿ ಭುವನ ಮೇಲೆ ಬಿಎಂಟಿಸಿ ಚಕ್ರ ಹರಿದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾಜಾಜಿನಗರ ಮೊದಲನೇ ಬ್ಲಾಕ್​ನ ಸಿಗ್ನಲ್ ಬಳಿ ನಡೆದಿದೆ. ರಾಜಾಜಿನಗರ ಮೊದಲನೇ ಬ್ಲಾಕ್​​ನಲ್ಲಿರುವ ಪಾಂಚ ಜನ್ಯ ವಿದ್ಯಾಪೀಠ ಶಾಲೆಯಲ್ಲಿ ಐದನೇ ತರಗತಿ ಓದುತ್ತಿದ್ದ 9 ವರ್ಷದ ಭುವನ ತನ್ನ ಇಬ್ಬರು ಸಹೋದರಿಯರ ಜೊತೆ ಸಿಗ್ನಲ್ ದಾಟುವ ವೇಳೆ ಬಿಎಂಟಿಸಿ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾಳೆ. ಭುವನ ಮೃತದೇಹವನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

Read More

ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಮತ್ತೆ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಸ್ಥಳನಿರೀಕ್ಷಣೆಯಲ್ಲಿದ್ದ ಅಧಿಕಾರಿಗಳನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ ಆದೇಶಿಸಿದೆ.

Read More

ಬೆಂಗಳೂರು : ಹುಲಿ, ಆನೆ ಸೇರಿದಂತೆ ಯಾವುದೇ ವನ್ಯಜೀವಿಯ ಸೆರೆ ಅಥವಾ ಕಾಡಿಗಟ್ಟುವ ಕಾರ್ಯಾಚರಣೆ ವೇಳೆ ಪ್ರಮಾಣಿತ ಕಾರ್ಯವಿಧಾನ (ಎಸ್.ಓ.ಪಿ.) ರೂಪಿಸಿ ಅದನ್ನು ಕಡ್ಡಾಯವಾಗಿ ಪಾಲಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಈ ಸಂಬಂಧ ಸೂಚನೆ ನೀಡಿರುವ ಅವರು, ಯಾವುದೇ ಕಾರ್ಯಾಚರಣೆ ವೇಳೆ ಇನ್ನು ಮುಂದೆ ಇಂತಹ ಘಟನೆ ಮರುಕಳಿಸದಂತೆ ಎಚ್ಚರ ವಹಿಸಲು ಸೂಚಿಸಿದ್ದಾರೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ನುಗು ವನ್ಯಜೀವಿ ವಲಯದ ಅರಣ್ಯ ಪ್ರದೇಶದ ಅಂಚಿನಲ್ಲಿ ಕಳೆದ ಒಂದು ವಾರದಿಂದ ಕಾಣಿಸಿಕೊಂಡು ಜನರಲ್ಲಿ ಆತಂಕ ಮೂಡಿಸಿದ್ದ ಹುಲಿಯನ್ನು ಮರಳಿ ಕಾಡಿಗೆ ಕಳಿಸುವ ಪ್ರಯತ್ನ ನಡೆಯುತ್ತಿದ್ದಾಗ ಸರಗೂರು ತಾಲೂಕು ಬಡಗಲಪುರದ ಬಳಿ ಹುಲಿ ರೈತ ಮಹದೇವ ಎಂಬುವವರ ಮೇಲೆ ದಾಳಿ ಮಾಡಿದ್ದು, ಕಣ್ಣು ಮತ್ತು ಮುಖಕ್ಕೆ ತೀವ್ರ ಸ್ವರೂಪದ ಗಾಯವಾಗಿ, ದೃಷ್ಟಿಯೇ ಹೋಗಿರುವುದಾಗಿ ವರದಿಯಾಗಿದೆ ಇದೊಂದು ದುರ್ದೈವದ ಘಟನೆ ಎಂದು…

Read More

ಬೆಂಗಳೂರು : ಸರ್ಕಾರದ ಸಭೆ ಮತ್ತು ಸಮಾರಂಭಗಳಿಗೆ ಜನಪ್ರತಿನಿಧಿಗಳನ್ನು ಆಹ್ವಾನಿಸುವ ಬಗ್ಗೆ ಅನುಸರಿಸಬೇಕಾದ ಶಿಷ್ಟಾಚಾರದ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರದ ಸಭೆ ಮತ್ತು ಸಮಾರಂಭಗಳಿಗೆ ಜನಪ್ರತಿನಿಧಿಗಳನ್ನು ಆಹ್ವಾನಿಸುವ ಬಗ್ಗೆ ಅನುಸರಿಸಬೇಕಾದ ಶಿಷ್ಟಾಚಾರದ ಕುರಿತು ಸಮಗ್ರವಾದ ಸೂಚನೆಗಳನ್ನು ಈಗಾಗಲೇ ಸರ್ಕಾರದ ಸುತ್ತೋಲೆ ಸಂಖ್ಯೆ: ಸಿಆಸುಇ 34 ಹೆಚ್ ಪಿಎ 2018, ದಿನಾಂಕ:16.04.2019ರಲ್ಲಿ ಹೊರಡಿಸಲಾಗಿರುತ್ತದೆ. ಸಾರ್ವಜನಿಕ ಸರ್ಕಾರಿ ಕಾರ್ಯಕ್ರಮಗಳ ಆಹ್ವಾನ ಪತ್ರಿಕೆಗಳಲ್ಲಿ ಆಹ್ವಾನಿತರ ಹಾಜರಾಗುವಿಕೆಯನ್ನು ಖಚಿತಪಡಿಸಿಕೊಳ್ಳದೇ ಮುದ್ರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಆಹ್ವಾನಿತರ ಸಂಖ್ಯೆಯು ಹೆಚ್ಚಾಗುತ್ತಿದ್ದು ಶಿಷ್ಟಾಚಾರದನ್ವಯ ಆಸನ ವ್ಯವಸ್ಥೆಯನ್ನು ಏರ್ಪಡಿಸುವಲ್ಲಿ ಗೊಂದಲವಾಗುತ್ತಿರುವುದರಿಂದ ಸರ್ಕಾರಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ಹಾಗೂ ಸರ್ಕಾರಿ ಸಾರ್ವಜನಿಕ ಕಾರ್ಯಕ್ರಮಗಳನ್ನು ಸುಗಮವಾಗಿ ಮತ್ತು ಘನತೆಯಿಂದ ನಡೆಸಲು ಅನುವಾಗುವಂತೆ ໖:16.04.20190 ಸುತ್ತೋಲೆಯಲ್ಲಿನ ಮಾರ್ಗಸೂಚಿಗಳನ್ನು ಮಾರ್ಪಡಿಸಿ ಈ ಕೆಳಕಂಡಂತೆ ಹೊಸ ಮಾರ್ಗ ಸೂಚಿಗಳನ್ನು ಅಧಿಸೂಚಿಸಲಾಗಿದೆ. 1. ಸರ್ಕಾರಿ ಕಾರ್ಯಕ್ರಮಗಳನ್ನು ಈ ಕೆಳಕಂಡಂತೆ ವರ್ಗೀಕರಿಸಿದೆ. – (a) ರಾಜ್ಯ ಮಟ್ಟದ ಕಾರ್ಯಕ್ರಮಗಳು: -ಈ ಕಾರ್ಯಕ್ರಮಗಳು ರಾಜ್ಯ ಸರ್ಕಾರದ ಒಂದು ಇಲಾಖೆಯು ಪ್ರತ್ಯೇಕವಾಗಿ ಅಥವಾ ಇನ್ನೊಂದು…

Read More

ನವದೆಹಲಿ : ರಾಜ್ಯದಲ್ಲಿ 13,352 ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ವಿಜಯ್ ಬಿಷ್ಣೋಯ್ ಅವರ ಪೀಠವು ಹಿಂದಿನ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ವಿಶೇಷ ರಜೆ ಅರ್ಜಿಗಳನ್ನು ವಿಚಾರಣೆ ನಡೆಸಿತು. ನೇಮಕಾತಿ ಪ್ರಕ್ರಿಯೆಯಿಂದ ಉಂಟಾಗುವ ಯಾವುದೇ ಸೇವಾ ಸಂಬಂಧಿತ ದೂರುಗಳನ್ನು ಪರಿಹಾರಕ್ಕಾಗಿ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ (ಕೆಎಸ್ಎಟಿ)ಗೆ ಕೊಂಡೊಯ್ಯಬೇಕು ಎಂದು ನ್ಯಾಯಾಲಯ ಹೇಳಿದೆ. ಇದಕ್ಕೂ ಮೊದಲು, ಅಕ್ಟೋಬರ್ 2023 ರಲ್ಲಿ, ಆಗಿನ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಲೆ ನೇತೃತ್ವದ ವಿಭಾಗೀಯ ಪೀಠವು ನೇಮಕಾತಿಯನ್ನು ಸ್ಥಗಿತಗೊಳಿಸಿದ್ದ ಏಕ ನ್ಯಾಯಾಧೀಶರ ತೀರ್ಪನ್ನು ರದ್ದುಗೊಳಿಸಿತ್ತು. ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಸೇರಿಸದ ಅಭ್ಯರ್ಥಿಗಳು ಪರಿಹಾರಕ್ಕಾಗಿ ನ್ಯಾಯಮಂಡಳಿಯನ್ನು ಸಂಪರ್ಕಿಸಬಹುದು ಎಂದು ಪೀಠ ಸ್ಪಷ್ಟಪಡಿಸಿತು. ನ್ಯಾಯಮೂರ್ತಿ ವಿಜಯ್ ಬಿಷ್ಣೋಯ್ ಅವರು ಏಕ ನ್ಯಾಯಾಧೀಶರ ಆದೇಶವನ್ನು ರದ್ದುಗೊಳಿಸಿ ವಿಷಯವನ್ನು ನ್ಯಾಯಮಂಡಳಿಗೆ ಉಲ್ಲೇಖಿಸುವ ಹೈಕೋರ್ಟ್ ನಿರ್ಧಾರವು ಸರಿಯಾಗಿದೆ…

Read More

ಬೆಂಗಳೂರು: ಸೆ.2025- ಮೊಬೈಲ್ ಸ್ಫೋಟದಿಂದಾಗಿ ಗಂಭೀರವಾಗಿ ಗಾಯಗೊಂಡು ಬಹುಅಂಗಾಂಗ ಹಾನಿಗೊಳಗಾಗಿದ್ದ 19 ವರ್ಷದ ಯುವಕನನ್ನು ಪ್ರಾಣಾಪಾಯದಿಂದ ಪಾರು ಮಾಡುವಲ್ಲಿ ನಗರದ ಸ್ಪರ್ಶ್ ಆಸ್ಪತ್ರೆ ವೈದ್ಯರು ಯಶಸ್ವಿಯಾಗಿದ್ದಾರೆ. ತನ್ನ ಮನೆಯಲ್ಲಿ ಮೊಬೈಲ್ ನೋಡುತ್ತಿದ್ದಾಗ 19 ವರ್ಷದ ಯುವಕ ಪ್ರಥಮ್ (ಹೆಸರು ಬದಲಿಸಲಾಗಿದೆ) ಮೊಬೈಲ್ ಅಕಸ್ಮಾತ್ ಸ್ಫೋಟಿಸಿತ್ತು.. ಮಧುಮೇಹದಿಂದಲೂ ಬಳಲುತ್ತಿದ್ದ ಪ್ರಥಮ್ರನ್ನು ತಕ್ಷಣ ಇನ್ಫ್ಯಾಂಟ್ರಿ ರಸ್ತೆಯ ಸ್ಪರ್ಶ್ ಆಸ್ಪತ್ರೆಗೆ ಕರೆ ತರಲಾಗಿತ್ತು. ತಮ್ಮ ಪುತ್ರ ಮನೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು  ಆತನ ಮುಖದ ತುಂಬಾ ಕಪ್ಪು ಮಸಿ ತುಂಬಿಕೊಂಡು ಮುಖದ ತುಂಬ ಗಾಯಗಳಾಗಿ ಬಲ ಗೈ ಊದಿಕೊಂಡಿದ್ದನ್ನು ಕಂಡ ಪ್ರಥಮ್ ತಂದೆ ಆಸ್ಪತ್ರೆಗೆ ದಾಖಲಿಸಿದ್ದರು. ತಕ್ಷಣ ಕಾರ್ಯಪ್ರವೃತ್ತವಾದ ಸ್ಪರ್ಶ್ ಆಸ್ಪತ್ರೆಯ ಬಹು ವಿಭಾಗೀಯ ತಜ್ಞ ವೈದ್ಯರ ತಂಡ ಯುವಕನು ಮೊಬೈಲ್ ಸ್ಫೋಟದಿಂದಾಗಿ ಡಯಾಬಿಟಿಕ್ ಕೀಟೋ ಅಸಿಡೋಸಿಸ್ ಎಂಬ ಮಾರಣಾಂತಿಕ ಸ್ಥಿತಿಗೆ ತಲುಪಿದ್ದನ್ನು ಪತ್ತೆ ಮಾಡಿದರು. ತೀವ್ರ ನಿಗಾ ಘಟಕಕ್ಕೆ ದಾಖಲಿಸಿ ತುತು ಚಿಕಿತ್ಸಾ ತಜ್ಞರು, ಮೂಳೆ ತಜ್ಷರು ಹಾಗೂ ಪ್ಲಾಸ್ಟಿಕ್ ಸರ್ಜರಿ ವೈದ್ಯರ ತಂಡ ಚಿಕಿತ್ಸೆ…

Read More