Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ರಾಜ್ಯದ ಎಲ್ಲಾ ಪಡಿತರ ಚೀಟಿದಾರರು ತಮ್ಮ ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಫಲಾನುಭವಿಗಳು ಮ್ಯಾಪಿಂಗ್ ಮಾಡಿಸಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ. ಆರ್ಥಿಕವಾಗಿ ದುರ್ಬಲರಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಆಹಾರ ಭದ್ರತಾ ಕಾಯ್ದೆ ನಿಯಮಗಳನ್ನು ಪಾಲಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಕಡ್ಡಾಯವಾಗಿ ತಮ್ಮ ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಫಲಾನುಭವಿಗಳ ಮ್ಯಾಪಿಂಗ್ ಕಾರ್ಯ ಚಾಲ್ತಿಯಲ್ಲಿದ್ದು, ಜಾತಿವಾರು ಮ್ಯಾಪಿಂಗ್ ಮಾಡಿಸಬೇಕು. ಜಿಲ್ಲೆಯಲ್ಲಿ ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿದಾರರು ಈಗಾಗಲೇ ಕುಟುಂಬ ಪಡಿತರ ಚೀಟಿಯಲ್ಲಿನ ಎಲ್ಲಾ ಸದಸ್ಯರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿ ಮಟ್ಟದಲ್ಲಿಯೇ ಕುಟುಂಬದ ಎಲ್ಲಾ ಸದಸ್ಯರು ಕಡ್ಡಾಯವಾಗಿ ತಮ್ಮ ಬೆರಳಚ್ಚು ನೀಡಿ (ಇ-ಕೆವೈಸಿ) ನವೀಕರಿಸಿಕೊಳ್ಳಬೇಕು. ಇ-ಕೈವೈಸಿ ಆಗದ ಮತ್ತು ಪರಿಶಿಷ್ಠ ಜಾತಿ, ಪರಿಶಿಷ್ಠ…
ನವದೆಹಲಿ : ಜಾತಿಗಣತಿ ವರದಿಯಲ್ಲಿರುವ ಅಂಕಿಅಂಶ ಇನ್ನೂ ಸಾರ್ವಜನಿಕವಾಗದೇ, ಊಹಾಪೋಹಗಳಾಗಿರುವುದರಿಂದ, ಈ ವಿಚಾರದ ಬಗ್ಗೆ ವಿರೋಧ ಅನವಶ್ಯಕ. ಇಂದು ನಡೆಯುವ ಸಂಪುಟಸಭೆಯಲ್ಲಿ ಜಾತಿ ಗಣತಿ ವರದಿಯ ವಿಷಯವನ್ನು ಮಂಡಿಸಲಾಗುವುದಿಲ್ಲ. ಮುಂದಿನ ಸಂಪುಟಸಭೆಯಲ್ಲಿ ವಿಷಯ ಮಂಡಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನವದೆಹಲಿಯಲ್ಲಿ ಉದ್ಘಾಟನೆಗೆ ಸಿದ್ದವಾಗಿರುವ ಕನ್ನಡ ಭವನದ ನೂತನ ಕಟ್ಟಡವನ್ನು ವೀಕ್ಷಿಸಿದ ನಂತರ ಜಾತಿ ಗಣತಿ ವರದಿಯ ಜಾರಿ ಬಗ್ಗೆ ಉತ್ತರಿಸುತ್ತಾ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಗುರುವಾರ ನಡೆಯುವ ನಡೆಯುವ ಸಂಪುಟಸಭೆಯಲ್ಲಿ ಜಾತಿ ಗಣತಿ ವರದಿಯ ವಿಷಯವನ್ನು ಮಂಡಿಸಲಾಗುವುದಿಲ್ಲ. ಮುಂದಿನ ಸಂಪುಟಸಭೆಯಲ್ಲಿ ವಿಷಯ ಮಂಡಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಎಐಸಿಸಿ ಕಚೇರಿ ಉದ್ಘಾಟನೆ ಎಐಸಿಸಿ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಲೋಕಸಭಾ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಏಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರ ಭಾಷಣ ಉತ್ತಮವಾಗಿತ್ತು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಶಂಕುಸ್ಥಾಪನೆಗೊಂಡಿದ್ದ ಕಟ್ಟಡ , ಇಂದು ಸುಸಜ್ಜಿತ ಕಟ್ಟಡವಾಗಿ…
ನವದೆಹಲಿ: ಮಾಜಿ ಐಎಎಸ್ ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್ ಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಪೂಜಾ ಖೇಡ್ಕರ್ ಬಂಧನಕ್ಕೆ ಸುಪ್ರೀಂ ಕೋರ್ಟ್ ಬುಧವಾರ ತಡೆಯಾಜ್ಞೆ ನೀಡಿದೆ. ಯುಪಿಎಸ್ಸಿ ನಾಗರಿಕ ಸೇವಾ ಪರೀಕ್ಷೆ 2022 ಕ್ಕೆ ಮೋಸದಿಂದ ಹಾಜರಾದ ಆರೋಪದ ಮೇಲೆ ಪೂಜಾ ಖೇಡ್ಕರ್ ಬಂಧನಕ್ಕೆ ಸಂಬಂಧಿಸಿದಂತೆ ಇದೀಗ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ಖೇಡ್ಕರ್ ತನ್ನ ಗುರುತನ್ನು ನಕಲಿ ಮಾಡುವ ಮೂಲಕ ಅನುಮತಿಸಲಾದ ಮಿತಿಯನ್ನು ಮೀರಿ ಯುಪಿಎಸ್ಸಿ ಪರೀಕ್ಷೆಯಲ್ಲಿ ಮೋಸದ ಪ್ರಯತ್ನಗಳನ್ನು ಪಡೆದ ಆರೋಪ ಎದುರಿಸುತ್ತಿದ್ದಾರೆ. ಮಾಜಿ ಐಎಎಸ್ ತರಬೇತಿ ಅಧಿಕಾರಿ ಪೂಜಾ ಖೇಡ್ಕರ್ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ದೆಹಲಿ ಹೈಕೋರ್ಟ್ ಡಿಸೆಂಬರ್ನಲ್ಲಿ ನಿರಾಕರಿಸಿದ ನಂತರ ಈ ಬೆಳವಣಿಗೆ ಸಂಭವಿಸಿದೆ. ಯುಪಿಎಸ್ಸಿ ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ಹೆಚ್ಚಿನ ಪ್ರಯತ್ನಗಳನ್ನು ಪಡೆಯಲು ಖೇಡ್ಕರ್ ಅವರ ಗುರುತನ್ನು ನಕಲಿ ಮಾಡಿದ ಆರೋಪದ ನಂತರ ಸೆಪ್ಟೆಂಬರ್ನಲ್ಲಿ ಕೇಂದ್ರ ಸರ್ಕಾರ ಖೇಡ್ಕರ್ ಅವರನ್ನು ಐಎಎಸ್ನಿಂದ ಬಿಡುಗಡೆ ಮಾಡಿತು. ಖೇಡ್ಕರ್ ಅವರ ವಿರುದ್ಧದ ವಿಚಾರಣೆ ಪೂರ್ಣಗೊಂಡ ನಂತರ…
ಬೆಂಗಳೂರು : ಈಗಾಗಲೇ ಸಾರಿಗೆ ಬಸ್ ಗಳಲ್ಲಿ ಟಿಕೆಟ್ ದರ ಶೇಕಡಾ 15 ರಷ್ಟು ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಇದರ ಬೆನ್ನಲ್ಲೇ ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಬಿಗ್ ಶಾಕ್ ನೀಡುತ್ತಿದ್ದೂ,, ಮೆಟ್ರೋ ಪ್ರಯಾಣದ ಟಿಕೆಟ್ ದರ ಶೇಕಡ 15 ರಷ್ಟು ಹೆಚ್ಚಳ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಹೌದು, ನಮ್ಮ ಮೆಟ್ರೋ ಟಿಕೆಟ್ ದರ ಹೆಚ್ಚಿಸಲು ಬಿಎಂಆರ್ ಸಿಲ್ ಸಿದ್ದತೆ ನಡೆಸಿದ್ದು, ಶೇ.15 ರಿಂದ 20 ರಷ್ಟು ಹೆಚ್ಚಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಜನವರಿ 17 ಕ್ಕೆ ದರ ಪರಿಷ್ಕರಣೆ ಸಮಿತಿ ಸಲ್ಲಿಸಲಿರುವ ಅಂತಿಮ ವರದಿ ಕುರಿತು ಸಮಾಲೋಚನೆ ನಡೆಯಲಿದೆ. ಜನೆವರಿ 17 ರ ಸಭೆಯಲ್ಲಿ ಟಿಕೆಟ್ ದರ ಫೈನಲ್ ಆಗಲಿದೆ ಎಂದು ತಿಳಿದುಬಂದಿದೆ. ನಮ್ಮ ಮೆಟ್ರೋ 2017ರಲ್ಲಿ ಕೊನೆಯ ಬಾರಿ ದರ ಪರಿಷ್ಕರಣೆ ಮಾಡಿತ್ತು. 10-15 ಪ್ರತಿಶತ ಟಿಕೆಟ್ ದರ ಏರಿಕೆ ಮಾಡಲಾಗಿತ್ತು. ಬಳಿಕ ಹಣದುಬ್ಬರ ಹೆಚ್ಚಳ, ಕಾರ್ಯಾಚರಣೆ ವೆಚ್ಚ ಹೆಚ್ಚಳ ನಮ್ಮ ಮೆಟ್ರೋ ನಿರ್ವಹಣೆ…
ಮುಂಬೈ: ಪ್ರಧಾನಿ ನರೇಂದ್ರ ಮೋದಿ ಬುಧವಾರ ಮುಂಬೈನ ನೌಕಾ ಡಾಕ್ಯಾರ್ಡ್ನಲ್ಲಿ ಮೂರು ಸುಧಾರಿತ ನೌಕಾ ಯುದ್ಧನೌಕೆಗಳಾದ ಐಎನ್ಎಸ್ ಸೂರತ್, ಐಎನ್ಎಸ್ ನೀಲಗಿರಿ ಮತ್ತು ಐಎನ್ಎಸ್ ವಾಘಶೀರ್ ಅನ್ನು ದೇಶಕ್ಕೆ ಸಮರ್ಪಿಸಿದ್ದಾರೆ. ಇದು ಭಾರತದ ಕಡಲ ಸಾಮರ್ಥ್ಯಗಳಿಗೆ ಮಹತ್ವದ ಮೈಲಿಗಲ್ಲನ್ನು ಗುರುತಿಸಿದೆ. ತಮ್ಮ ಭಾಷಣದಲ್ಲಿ, ಪ್ರಧಾನಿ ಮೋದಿ ಈ ಯುದ್ಧನೌಕೆಗಳ ಸ್ಥಳೀಯ ನಿರ್ಮಾಣದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದರು, “ಮೂರು ಮುಂಚೂಣಿಯ ನೌಕಾ ಹೋರಾಟಗಾರರು ಭಾರತದಲ್ಲಿಯೇ ತಯಾರಿಸಲ್ಪಟ್ಟಿದ್ದಾರೆ ಎಂಬುದು ಹೆಮ್ಮೆಯ ವಿಷಯ. ಇಂದಿನ ಭಾರತವು ವಿಶ್ವದ ಪ್ರಮುಖ ಕಡಲ ಶಕ್ತಿಯಾಗಿ ಹೊರಹೊಮ್ಮುತ್ತಿದೆ” ಎಂದು ಹೇಳಿದರು. https://twitter.com/i/status/1879163348203524263 “ಭಾರತದ ಕಡಲ ಪರಂಪರೆ, ನೌಕಾಪಡೆಯ ಅದ್ಭುತ ಇತಿಹಾಸ ಮತ್ತು ಆತ್ಮನಿರ್ಭರ ಭಾರತ ಅಭಿಯಾನಕ್ಕೆ ಇಂದು ಬಹಳ ದೊಡ್ಡ ದಿನವಾಗಿದೆ. ಛತ್ರಪತಿ ಶಿವಾಜಿ ಮಹಾರಾಜರು ಭಾರತೀಯ ನೌಕಾಪಡೆಗೆ ಹೊಸ ಶಕ್ತಿ ಮತ್ತು ಹೊಸ ದೃಷ್ಟಿಕೋನವನ್ನು ನೀಡಿದ್ದರು. ಇಂದು, ಅವರ ಪವಿತ್ರ ಭೂಮಿಯಲ್ಲಿ, ನಾವು 21 ನೇ ಶತಮಾನದ ನೌಕಾಪಡೆಯನ್ನು ಬಲಪಡಿಸುವತ್ತ ಬಹಳ ದೊಡ್ಡ ಹೆಜ್ಜೆ ಇಡುತ್ತಿದ್ದೇವೆ. ಒಂದು ವಿಧ್ವಂಸಕ,…
ಮೈಸೂರು : ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್ ಇಂದು ಚಿಕಿತ್ಸೆಗಾಗಿ ಮೈಸೂರಿನ ಮಣಿಪಾಲ್ ಆಸ್ಪತ್ರೆಗೆ ಆಗಮಿಸಿದ್ದಾರೆ. ಮೈಸೂರಿನ ಮಣಿಪಾಳ್ ಆಸ್ಪತ್ರೆಯಲ್ಲಿ ಡಾ. ಅಜಯ್ ಹೆಗ್ಡೆ ಅವರು ನಟ ದರ್ಶನ್ ಗೆ ಇಂದು ಚಿಕಿತ್ಸೆ ನೀಡಲಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ಇಂದು ನಟ ದರ್ಶನ್ ಆಸ್ಪತ್ರೆಗೆ ಆಗಮಿಸಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರಿಗೆ ಈಗಾಗಲೇ ರೆಗ್ಯುಲರ್ ಬೇಲ್ ಸಿಕ್ಕಿದ್ದು, ಸದ್ಯ ಅವರು ತಮ್ಮ ಪತ್ನಿ, ಮಗ ಹಾಗೂ ಕುಟುಂಬದ ಸ್ನೇಹಿತರೊಂದಿಗೆ ಕಾಲ ಕಳೆಯುತ್ತಿದ್ದಾರೆ.ಅಲ್ಲದೆ ನಟ ದರ್ಶನ್ ಅವರು ಆಪರೇಷನ್ ಗೆ ಒಳಗಾಗುವ ಸಾಧ್ಯತೆಯಿದ್ದು ಈಗಾಗಲೇ ಆಪರೇಷನ್ ಮಾಡಿಸಿಕೊಳ್ಳುವ ಕುರಿತು ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದ್ದು, ನಟ ದರ್ಶನ್ ಗೆ ಆಪರೇಷನ್ ಮಾಡುವ ವೈದ್ಯರಾದಂತಹ ಅಜಯ್ ಅವರು ಈ ಕುರಿತು ಮಾಹಿತಿ ನೀಡಿದ್ದು, ಆಪರೇಷನ್ ಗೆ ನಟ ದರ್ಶನ್ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಸಂಕ್ರಾಂತಿ ಹಬ್ಬದ ವೇಳೆ ದರ್ಶನ್ ಆಪರೇಷನ್ ಫಿಕ್ಸ್ ಆಗಿದೆ. ಆಪರೇಷನ್ ಬಳಿಕ ಆರೋಗ್ಯದ ಬಗ್ಗೆ…
ಬೆಂಗಳೂರು : ನಟ ಶಿವರಾಜ್ ಕುಮಾರ್ ಫಿಟ್ ಆಗಿದ್ದು, ಜನವರಿ 25 ಕ್ಕೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಟ ಶಿವರಾಜ್ ಕುಮಾರ್ ಆರೋಗ್ಯವಾಗಿದ್ದು, ಹಿಂದಿಗಿಂತಲೂ ಹೆಚ್ಚು ಜೋಶ್ ನಲ್ಲಿದ್ದಾರೆ. ಶಿವಣ್ಣ ತಲೆಗೆ ಒಂದು ಸ್ಟಂಟ್, ಹೃದಯದಲ್ಲಿ ಒಂದು ಸ್ಟಂಟ್ ಇದೆ. ಶಿವಣ್ಣ ಪ್ರತಿದಿನ 4-5 ಕಿ.ಮೀ ವಾಕಿಂಗ್ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಅಮೆರಿಕಾದಲ್ಲಿ ಶಿವಣ್ಣಿಗೆ ಉತ್ತಮ ಚಿಕಿತ್ಸೆ ನೀಡಲಾಗಿದೆ. ಒಟ್ಟು ಆಪರೇಷನ್ ಮಾಡಲಾಗಿದೆ. ಶಿವರಾಜ್ ಕುಮಾರ್ ಸದ್ಯ ಫಿಟ್ ಆಗಿದ್ದು, ಜ.25 ಕ್ಕೆ ಬೆಂಗಳೂರಿಗೆ ಬರಲಿದ್ದಾರೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ಹಾಸ್ಯನಟ ಸರಿಗಮ ವಿಜಿ ( Actor Viji ) ಅವರು ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು,ನಾಳೆ ಚಾಮರಾಜಪೇಟೆಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಕನ್ನಡದ ಹಲವು ಚಿತ್ರಗಳಲ್ಲಿ ಹಾಸ್ಯನಟರಾಗಿ ಅಭಿನಯಿಸಿ, ನೋಡುಗರನ್ನು ರಂಚಿಸುವ ಮೂಲಕ ಹಾಸ್ಯ ಚಕ್ರವರ್ತಿ ಎಂಬುದಾಗಿಯೇ ಕರೆಸಿಕೊಂಡಿದ್ದವರು ಸರಿಗಮ ವಿಜಿ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಹಾಸ್ಪಿಟಲ್ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ನಾಳೆ (ಜನವರಿ 16) ಬೆಳಿಗ್ಗೆ 10 ರಿಂದ 12 ಗಂಟೆ ಒಳಗೆ ಚಾಮರಾಜಪೇಟೆಯ ಟಿ ಆರ್ ಮಿಲ್ ಬಳಿ ಬರುವ ಚೀತಾಗಾರದಲ್ಲಿ ಅಂತ್ಯ ಕ್ರಿಯೆ ನಡೆಯಲಿದೆ. ಸರಿಗಮ ವಿಜಿ ಎಂಬ ತಮ್ಮ ರಂಗನಾಮದಿಂದ ಕರೆಯಲ್ಪಡುವ ಆರ್. ವಿಜಯ್ಕುಮಾರ್ ಕನ್ನಡದ ಜನಪ್ರಿಯ ಹಾಸ್ಯ ನಟ, ಬರಹಗಾರರಾಗಿದ್ದಾರೆ. ವಿಜಿ ನಟನಾಗಿ ಚೊಚ್ಚಲ ಕನ್ನಡ ಚಲನಚಿತ್ರ ಬೆಳುವಲದ ಮಡಿಲಲ್ಲಿ (1975) ಬಂದಿತು. 2018 ರ ಹೊತ್ತಿಗೆ ಅವರು ಕನ್ನಡದಲ್ಲಿ ಸುಮಾರು 269 ಚಿತ್ರಗಳಲ್ಲಿ ನಟಿಸಿದ್ದಾರೆ. 80…
ಬೆಂಗಳೂರು : ಬೆಂಗಳೂರು: ಕರ್ನಾಟಕ ಚಲನಚಿತ್ರ ನಟರಾದ ಹಿರಿಯ ಹಾಸ್ಯನಟ ಸರಿಗಮ ವಿಜಿ ( Actor Viji ) ಅವರು ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು,ನಾಳೆ ಚಾಮರಾಜಪೇಟೆಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಕನ್ನಡದ ಹಲವು ಚಿತ್ರಗಳಲ್ಲಿ ಹಾಸ್ಯನಟರಾಗಿ ಅಭಿನಯಿಸಿ, ನೋಡುಗರನ್ನು ರಂಚಿಸುವ ಮೂಲಕ ಹಾಸ್ಯ ಚಕ್ರವರ್ತಿ ಎಂಬುದಾಗಿಯೇ ಕರೆಸಿಕೊಂಡಿದ್ದವರು ಸರಿಗಮ ವಿಜಿ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಹಾಸ್ಪಿಟಲ್ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ನಾಳೆ (ಜನವರಿ 16) ಬೆಳಿಗ್ಗೆ 10 ರಿಂದ 12 ಗಂಟೆ ಒಳಗೆ ಚಾಮರಾಜಪೇಟೆಯ ಟಿ ಆರ್ ಮಿಲ್ ಬಳಿ ಬರುವ ಚೀತಾಗಾರದಲ್ಲಿ ಅಂತ್ಯ ಕ್ರಿಯೆ ನಡೆಯಲಿದೆ. ಸರಿಗಮ ವಿಜಿ ಎಂಬ ತಮ್ಮ ರಂಗನಾಮದಿಂದ ಕರೆಯಲ್ಪಡುವ ಆರ್. ವಿಜಯ್ಕುಮಾರ್ ಕನ್ನಡದ ಜನಪ್ರಿಯ ಹಾಸ್ಯ ನಟ, ಬರಹಗಾರರಾಗಿದ್ದಾರೆ. ವಿಜಿ ನಟನಾಗಿ ಚೊಚ್ಚಲ ಕನ್ನಡ ಚಲನಚಿತ್ರ ಬೆಳುವಲದ ಮಡಿಲಲ್ಲಿ (1975) ಬಂದಿತು. 2018 ರ ಹೊತ್ತಿಗೆ ಅವರು ಕನ್ನಡದಲ್ಲಿ ಸುಮಾರು 269…
ಬೆಂಗಳೂರು : ಬೆಂಗಳೂರು: ಕರ್ನಾಟಕ ಚಲನಚಿತ್ರ ನಟರಾದ ಹಿರಿಯ ಹಾಸ್ಯನಟ ಸರಿಗಮ ವಿಜಿ ( Actor Viji ) ಅವರು ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕನ್ನಡದ ಹಲವು ಚಿತ್ರಗಳಲ್ಲಿ ಹಾಸ್ಯನಟರಾಗಿ ಅಭಿನಯಿಸಿ, ನೋಡುಗರನ್ನು ರಂಚಿಸುವ ಮೂಲಕ ಹಾಸ್ಯ ಚಕ್ರವರ್ತಿ ಎಂಬುದಾಗಿಯೇ ಕರೆಸಿಕೊಂಡಿದ್ದವರು ಸರಿಗಮ ವಿಜಿ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಹಾಸ್ಪಿಟಲ್ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ನಾಳೆ (ಜನವರಿ 16) ಬೆಳಿಗ್ಗೆ 10 ರಿಂದ 12 ಗಂಟೆಗೆ ಅಷ್ಟ್ರಲ್ಲಿ ಚಾಮರಾಜಪೇಟೆಯ ಟಿ ಆರ್ ಮಿಲ್ ಬಳಿ ಬರುವ ಚೀತಾಗಾರದಲ್ಲಿ ಅಂತ್ಯ ಕ್ರಿಯೆ ನಡೆಯಲಿದೆ. ಸರಿಗಮ ವಿಜಿ ಎಂಬ ತಮ್ಮ ರಂಗನಾಮದಿಂದ ಕರೆಯಲ್ಪಡುವ ಆರ್. ವಿಜಯ್ಕುಮಾರ್ ಕನ್ನಡದ ಜನಪ್ರಿಯ ಹಾಸ್ಯ ನಟ, ಬರಹಗಾರರಾಗಿದ್ದಾರೆ. ವಿಜಿ ನಟನಾಗಿ ಚೊಚ್ಚಲ ಕನ್ನಡ ಚಲನಚಿತ್ರ ಬೆಳುವಲದ ಮಡಿಲಲ್ಲಿ (1975) ಬಂದಿತು. 2018 ರ ಹೊತ್ತಿಗೆ ಅವರು ಕನ್ನಡದಲ್ಲಿ ಸುಮಾರು 269 ಚಿತ್ರಗಳಲ್ಲಿ ನಟಿಸಿದ್ದಾರೆ. 80…












