Author: kannadanewsnow57

ಬೆಂಗಳೂರು : ಬೆಂಗಳೂರು: ಕರ್ನಾಟಕ ಚಲನಚಿತ್ರ ನಟರಾದ ಹಿರಿಯ ಹಾಸ್ಯನಟ ಸರಿಗಮ ವಿಜಿ ( Actor Viji ) ಅವರು ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕನ್ನಡದ ಹಲವು ಚಿತ್ರಗಳಲ್ಲಿ ಹಾಸ್ಯನಟರಾಗಿ ಅಭಿನಯಿಸಿ, ನೋಡುಗರನ್ನು ರಂಚಿಸುವ ಮೂಲಕ ಹಾಸ್ಯ ಚಕ್ರವರ್ತಿ ಎಂಬುದಾಗಿಯೇ ಕರೆಸಿಕೊಂಡಿದ್ದವರು ಸರಿಗಮ ವಿಜಿ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಹಾಸ್ಪಿಟಲ್ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಸರಿಗಮ ವಿಜಿ ಎಂಬ ತಮ್ಮ ರಂಗನಾಮದಿಂದ ಕರೆಯಲ್ಪಡುವ ಆರ್. ವಿಜಯ್ಕುಮಾರ್ ಕನ್ನಡದ ಜನಪ್ರಿಯ ಹಾಸ್ಯ ನಟ, ಬರಹಗಾರರಾಗಿದ್ದಾರೆ. ವಿಜಿ ನಟನಾಗಿ ಚೊಚ್ಚಲ ಕನ್ನಡ ಚಲನಚಿತ್ರ ಬೆಳುವಲದ ಮಡಿಲಲ್ಲಿ (1975) ಬಂದಿತು. 2018 ರ ಹೊತ್ತಿಗೆ ಅವರು ಕನ್ನಡದಲ್ಲಿ ಸುಮಾರು 269 ಚಿತ್ರಗಳಲ್ಲಿ ನಟಿಸಿದ್ದಾರೆ. 80 ಚಿತ್ರಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಸಂಸಾರದಲ್ಲಿ ಸರಿಗಮ , ಅವರು ನಿರ್ದೇಶಿಸಿದ ಮತ್ತು ನಟಿಸಿದ ರಂಗಭೂಮಿ ನಾಟಕ, 1390 ಕ್ಕೂ ಹೆಚ್ಚು ಬಾರಿ ಪ್ರದರ್ಶನಗೊಂಡಿದೆ.…

Read More

ನವದೆಹಲಿ : ದೆಹಲಿಯಲ್ಲಿ ನೂತನ ಎಐಸಿಸಿ ಕಚೇರಿ `ಇಂದಿರಾ ಭವನ’ವನ್ನು ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ ಇಂದು ಉದ್ಘಾಟಿಸಿದ್ದಾರೆ. ಆಡಳಿತಾತ್ಮಕ, ಸಾಂಸ್ಥಿಕ ಮತ್ತು ಕಾರ್ಯತಂತ್ರದ ಚಟುವಟಿಕೆಗಳನ್ನು ಬೆಂಬಲಿಸಲು ಆಧುನಿಕ ಸೌಲಭ್ಯಗಳನ್ನು ಹೊಂದಿರುವ ಪಕ್ಷದ ವಿಕಸನಗೊಳ್ಳುತ್ತಿರುವ ಅಗತ್ಯಗಳನ್ನು ಪೂರೈಸಲು ‘ಇಂದಿರಾ ಭವನ’ವನ್ನು ವಿನ್ಯಾಸಗೊಳಿಸಲಾಗಿದೆ. 2009ರ ಡಿಸೆಂಬರ್ ನಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಸೋನಿಯಾ ಗಾಂಧಿ ಅವರು ಈ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು. ಕಟ್ಟಡವು ಈಗ ಉದ್ಘಾಟನೆಯಾಗಿದೆ. https://twitter.com/ANI/status/1879394386938921377 ಉದ್ಘಾಟನೆ ವೇಳೆ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಮತ್ತಿತರ ಕಾಂಗ್ರೆಸ್ ನಾಯಕರು ಹಾಜರಿದ್ದರು.

Read More

ಉತ್ತರ ಕನ್ನಡ: ಕುಡಿದ ಅಮಲಿನಲ್ಲಿ ಅಯ್ಯಪ್ಪಸ್ವಾಮಿ ಭಕ್ತರ ಮೇಲೆ ಕಾರು ಹರಿಸಿದ ಪ್ರಕರಣ ಸಂಬಂಧ ಆರೋಪಿ ಕಾರು ಚಾಲಕ ರೋಷನ್ ಫರ್ನಾಂಡಿಸ್ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿನ ಅಯ್ಯಪ್ಪ ದೇವಸ್ಥಾನದ ಬಳಿಯಲ್ಲಿ ಕುಡಿದ ಮತ್ತಿನಲ್ಲಿ ಕಾರು ಚಾಲಕ ರೋಷನ್ ಜಾತ್ರೆಗಾಗಿ ನೆರಿದಿದ್ದಂತ ಜನರ ಮೇಲೆಯೇ ಕಾರು ನುಗ್ಗಿಸಿದ್ದಾನೆ. ಈ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದಂತ ಯುವತಿಯೊಬ್ಬಳು ಚಿಕಿತ್ಸೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಪೊಲೀಸರು ಹಾಕಿದ್ದಂತ ಬ್ಯಾರಿಕೇಡ್ ಗೆ ಗುದ್ದಿದಂತ ಕಾರು ಚಾಲಕ ರೋಷನ್, ಜಾತ್ರೆಗೆ ಸೇರಿದ್ದಂತ ಅಯ್ಯಪ್ಪ ಸ್ವಾಮಿ ಭಕ್ತರ ಮೇಲೆಯೇ ಹರಿಸಿದ್ದಾನೆ. ಇದರಿಂದಾಗಿ 8 ಭಕ್ತರಿಗೆ ಗಾಯವಾಗಿದೆ. ಇವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸಿದ್ದಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Read More

ಇಂದಿನ ಕಾಲದಲ್ಲಿ ಹೃದಯಾಘಾತ ಮತ್ತು ಪಾರ್ಶ್ವವಾಯು ಮುಂತಾದ ಸಮಸ್ಯೆಗಳು ಬಹಳ ಸಾಮಾನ್ಯವಾಗಿದೆ. ಮಾಲಿನ್ಯ, ಕೆಟ್ಟ ಆಹಾರ ಪದ್ಧತಿ ಮತ್ತು ಆಧುನಿಕ ಜೀವನಶೈಲಿಯಿಂದಾಗಿ ಹೃದಯಾಘಾತದ ಪ್ರಕರಣಗಳು ಹೆಚ್ಚುತ್ತಿವೆ. ಇದರಿಂದಾಗಿ ಪ್ರತಿದಿನ ಹೃದಯಾಘಾತದಿಂದ ಜನರು ಸಾಯುತ್ತಿದ್ದಾರೆ. ಈ ಮಧ್ಯೆ, ಹೃದಯಾಘಾತಕ್ಕೆ ಸಂಬಂಧಿಸಿದ ಸಂಶೋಧನೆಯೊಂದರಲ್ಲಿ ಹೊಸದೊಂದು ಅಂಶ ಬಹಿರಂಗವಾಗಿದೆ. ಈ ಅಧ್ಯಯನವು ಯಾವ ರಕ್ತದ ಗುಂಪಿನ ಜನರಿಗೆ ಹೃದಯಾಘಾತವಾಗುವ ಅಪಾಯ ಹೆಚ್ಚು ಎಂದು ಹೇಳುತ್ತದೆ. ಎ ಮತ್ತು ಬಿ ರಕ್ತದ ಗುಂಪುಗಳನ್ನು ಹೊಂದಿರುವವರು ಹೆಚ್ಚಿನ ಅಪಾಯದಲ್ಲಿದ್ದಾರೆ. ಹೃದಯಾಘಾತ ಮತ್ತು ರಕ್ತದ ಗುಂಪಿನ ಕುರಿತು ನಡೆಸಿದ ಸಂಶೋಧನೆಯಲ್ಲಿ, ಸಂಶೋಧಕರು ‘O’ ರಕ್ತದ ಗುಂಪಿನಲ್ಲದ ಜನರು ಹೃದಯಾಘಾತದ ಹೆಚ್ಚಿನ ಅಪಾಯವನ್ನು ಹೊಂದಿರುತ್ತಾರೆ ಎಂದು ಕಂಡುಕೊಂಡಿದ್ದಾರೆ. ಈ ಹೊಸ ಅಧ್ಯಯನದಲ್ಲಿ, ಯಾವ ರಕ್ತದ ಗುಂಪುಗಳಿಗೆ ಹೃದಯಾಘಾತವಾಗುವ ಅಪಾಯ ಹೆಚ್ಚು ಅಥವಾ ಕಡಿಮೆ ಎಂಬುದನ್ನು ಸಂಶೋಧಕರು ಕಂಡುಹಿಡಿದಿದ್ದಾರೆ. ಇದರಲ್ಲಿ, ಎ ಮತ್ತು ಬಿ ರಕ್ತದ ಗುಂಪುಗಳನ್ನು ಹೊಂದಿರುವ ಜನರು ಹೆಚ್ಚಿನ ಅಪಾಯದಲ್ಲಿದ್ದಾರೆ ಎಂದು ಕಂಡುಬಂದಿದೆ. ‘O’ ರಕ್ತದ ಗುಂಪು ಇರುವವರಿಗೆ ಕಡಿಮೆ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಘೋರ ಘಟನೆಯೊಂದು ನಡೆದಿದ್ದು, ಪತ್ನಿಯನ್ನು ಹೆದರಿಸಲು ನೇಣು ಬಿಗಿದುಕೊಳ್ಳಲು ಹೋಗಿ ಪತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ನಂದಕುಮಾರ್ ಎಂಬಾತ ಪತ್ನಿ ಪವಿತ್ರಾರನ್ನು ಹೆದರಿಸಲು ಹೋಗಿ ನೇಣು ಹಾಕಿಕೊಂಡಿದ್ದು, ಬಳಿಕ ನಂದಕುಮಾರ್ ನನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆಯೇ ಸಾವನ್ನಪ್ಪಿದ್ದಾರೆ. ಸಂಕ್ರಾಂತಿ ಹಬ್ಬದ ದಿನವೇ ಕುಡಿದು ಬಂದಿದ್ದೀರಾ ಅಂತ ಹೆಂಡತಿ ಪವಿತ್ರಾ ಗಂಡನೊಂದಿಗೆ ಜಗಳ ಮಾಡಿದ್ದು, ಹೆಂಡತಿಗೆ ಹೆದರಿಸುವ ಸಲುವಾಗಿ ನೇಣು ಬಿಗಿದುಕೊಳ್ಳಲು ಹೋಗಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Read More

ರಾತ್ರಿ ನಿದ್ದೆ ಮಾಡದೇ ತಡರಾತ್ರಿಯವರೆಗೂ ರೀಲ್, ಶಾರ್ಟ್ಸ್ ನೋಡುವವರಿಗೆ ಹೈ ಬಿಪಿ ಕಾಡುತ್ತದೆ ಎಂದು ಇತ್ತೀಚಿನ ಅಧ್ಯಯನವೊಂದು ಬಹಿರಂಗಪಡಿಸಿದೆ. ಈ ಅಧ್ಯಯನಕ್ಕೆ ಸಂಬಂಧಿಸಿದಂತೆ 4,318 ಮಧ್ಯವಯಸ್ಕರನ್ನು ಈ ಅಧ್ಯಯನಕ್ಕೆ ಆಯ್ಕೆ ಮಾಡಲಾಗಿದೆ. ರೀಲು, ಶಾರ್ಟ್ಸ್ ನೋಡುತ್ತಾ ರಾತ್ರಿ ಕಳೆಯುವವರ ರಕ್ತದೊತ್ತಡದಲ್ಲಿ ಏನಾದರೂ ಬದಲಾವಣೆಯಾಗಿದೆಯೇ ಎಂಬುದನ್ನು ಪರಿಶೀಲಿಸಲಾಯಿತು. ಇವರೆಲ್ಲರೂ ಅಧಿಕ ಬಿಪಿಯಿಂದ ಬಳಲುತ್ತಿರುವುದು ಕಂಡುಬಂದಿದೆ. ಈ ಸಮಸ್ಯೆಯು ವಿಶೇಷವಾಗಿ ಯುವಜನರಲ್ಲಿ ಹೆಚ್ಚಾಗಿ ಕಂಡುಬರುತ್ತದೆ ಎಂದು ಈ ಸಂಶೋಧನೆಯು ಬಹಿರಂಗಪಡಿಸಿದೆ. ಚೀನಾದಲ್ಲಿ ನಡೆದ ಈ ಅಧ್ಯಯನದ ಫಲಿತಾಂಶವನ್ನು ಎಚ್ಚರಿಕೆಯಾಗಿ ತೆಗೆದುಕೊಳ್ಳಬೇಕು ಎಂದು ನೆಟಿಜನ್‌ಗಳು ಹೇಳುತ್ತಾರೆ. ಒಮ್ಮೆ ಬಿಪಿ ಹೆಚ್ಚಾದರೆ ಜೀವನ ಪರ್ಯಂತ ಬಿಪಿ ನಿಯಂತ್ರಣಕ್ಕೆ ಔಷಧಿ ಜತೆಗೆ ಸೂಕ್ತ ಮುಂಜಾಗ್ರತೆ ವಹಿಸಬೇಕು ಎನ್ನುತ್ತಾರೆ ವೈದ್ಯರು. https://twitter.com/DrDeepakKrishn1/status/1877896221630644643?ref_src=twsrc%5Etfw%7Ctwcamp%5Etweetembed%7Ctwterm%5E1877896221630644643%7Ctwgr%5Ef0b4b60a2649c56b9dd6c5400554c4e67988d0c9%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Ftelugu%2Fhmtvtelugu-epaper-dh179dcd49bfd74fd0983ce602f85b0433%2Fraatriputanidrapokundarilsshaartschustunnaaraaiteeedenjartappadu-newsid-n647579912 ಇತ್ತೀಚೆಗೆ ರೀಲ್‌ಗಳು ಮತ್ತು ಕಿರುಚಿತ್ರಗಳನ್ನು ನೋಡುವುದು ನಿಮ್ಮ ಅಮೂಲ್ಯ ಸಮಯವನ್ನು ವ್ಯರ್ಥ ಮಾಡುತ್ತದೆ ಎಂಬ ಬಲವಾದ ಅಭಿಪ್ರಾಯವಿದೆ. ಗುರಿಯೇ ಇಲ್ಲದವರು ಪ್ರತಿನಿತ್ಯ ಗಂಟೆಗಟ್ಟಲೆ ರೀಲು, ಕಿರುಚಿತ್ರಗಳನ್ನು ನೋಡುತ್ತಾ ಸಮಯ ಹಾಳು ಮಾಡಿಕೊಳ್ಳುತ್ತಾರೆ ಎಂದು ಹಲವು ಬುದ್ಧಿಜೀವಿಗಳು ಸಾಮಾಜಿಕ…

Read More

ಒಂದು ಮಂತ್ರ ಸಾಕು ಸಾಲ ತೀರುತ್ತೆ. ಈ ಮಂತ್ರ ಹೇಳಿದರೆ ಮೂವತ್ತು ದಿನಗಳಲ್ಲಿ ಸಾಲ ತೀರುತ್ತೆ ಅನ್ನೋ ಕುತೂಹಲಕಾರಿ ಮತ್ತು ರಹಸ್ಯ ಮಾಹಿತಿಯನ್ನು ಇಲ್ಲಿ ನಾವು ನಿಮಗೆ ತಿಳಿಸಿಕೊಡುತ್ತೇವೆ. ಕಾಲಭೈರವ ಅಂದ್ರೆ ಶಿವನ ಸ್ವರೂಪ. 64 ಭೈರವ ರೂಪದಲ್ಲಿ ಕಾಲಭೈರವನೇ ಪ್ರಮುಖವಾದವನು. ಕಾಲ ಅಂದ್ರೆ ಸಮಯವನ್ನು ಸೂಚಿಸುವವನು ಎಂದರ್ಥ. ಭೈರವನ ಪೂಜೆ ಮಾಡೋದ್ರಿಂದ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ…

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಪಾಪಿ ಸಮುದ್ರಕ್ಕೆ ಹೋದರೂ ಮೊಳಕಾಲುದ್ದ ನೀರು ಎನ್ನುವ ಮಾತೊಂದಿದೆ. ಕೆಲವರಿಗೆ ರಾಜಯೋಗವಿದ್ದರೂ ಫಲಗಳು ಲಭಿಸುವುದಿಲ್ಲ. ಅಂದುಕೊಂಡ ಕಾರ್ಯ ಸಿದ್ಧಿಸುವುದಿಲ್ಲ. ಹಾಗಾಗಲೂ ಕಾರಣವೇನು? ಜ್ಯೋತಿಷ್ಯಶಾಸ್ತ್ರ ಹೇಳುವುದೇನು?ಉನ್ನತ ಸ್ಥಾನ ಅಲಂಕರಿಸಲು ರಾಜಯೋಗವೇ ಮೂಲ ಎನ್ನುತ್ತದೆ ಜ್ಯೋತಿಷ್ಯಶಾಸ್ತ್ರ. ಉನ್ನತ ಸ್ಥಾನ ಏರುವುದೆಂದರೆ ಆಡಳಿತದ ಸೂತ್ರ ಹಿಡಿಯುವುದೆಂದಷ್ಟೇ ಅರ್ಥವಲ್ಲ. ಜೀವನದಲ್ಲಿ ಮೇಲೆ ಬರುವುದು, ಅಂದುಕೊಂಡ ಕೆಲಸವನ್ನು ಸಾಧಿಸುವುದಕ್ಕೂ ಅನ್ವಯಿಸಬಹುದು. ಉದಾಹರಣೆಗೆ ಇತ್ತೀಚೆಗೆ ತಾನೇ ಪಂಚರಾಜ್ಯ ಚುನಾವಣೆಗಳು ನಡೆದಿವೆ. ಅದೆಷ್ಟೋ ಎಂಎಲ್‌ಎಗಳು ಮಂತ್ರಿ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ. ಈ ದಿಸೆಯಲ್ಲಿ ಅವರು ಸಾಕಷ್ಟು ಪ್ರಯತ್ನವನ್ನು, ಸಾಧ್ಯವಾದಷ್ಟು ಪ್ರಭಾವವನ್ನು ಬೀರುತ್ತಾರೆ. ಆದಾಗ್ಯೂ ಕೆಲವೊಮ್ಮೆ ಅಧಿಕಾರದ ನಿರೀಕ್ಷೆ ಕೈಗೆ ಎಟುಕದ ದ್ರಾಕ್ಷಿಯಂತಾಗುತ್ತದೆ. ಮಂತ್ರಿಯಾಗುವ ಯೋಗ ಕೆಲವರಿಗೆ ತಾನಾಗೇ ಹುಡುಕಿಕೊಂಡು ಬರುತ್ತದೆ. ಅದು ಹೇಗೆ? ಕೆಲವರು ಜಾತಕದಲ್ಲಿನ ರಾಜಯೋಗ, ಗಜಕೇಸರಿಯೋಗಕ್ಕೂ ಅಧಿಕಾರ ಗ್ರಹಣಕ್ಕೂ ತಾಳೆ ಹಾಕುತ್ತಾರೆ. ಜ್ಯೋತಿಷ್ಯದ ಲೆಕ್ಕಾಚಾರದ ರೀತ್ಯ ಗುರು ಮಕರ ರಾಶಿಯಲ್ಲಿ…

Read More

ನವದೆಹಲಿ: ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಒಳಪಡಿಸಲು ಗೃಹ ಸಚಿವಾಲಯ (ಎಂಎಚ್ಎ) ಜಾರಿ ನಿರ್ದೇಶನಾಲಯಕ್ಕೆ (ಇಡಿ) ಅನುಮೋದನೆ ನೀಡಿದೆ ಅರವಿಂದ್ ಕೇಜ್ರಿವಾಲ್ ವಿರುದ್ಧ ಕಾನೂನು ಕ್ರಮ ಜರುಗಿಸಲು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಜಯ್ ಕುಮಾರ್ ಸಕ್ಸೇನಾ ಅನುಮತಿ ನೀಡಿದ ನಂತರ ಈ ಬೆಳವಣಿಗೆ ನಡೆದಿದೆ. ಕಳೆದ ನವೆಂಬರ್ನಲ್ಲಿ ಸುಪ್ರೀಂ ಕೋರ್ಟ್ ಆದೇಶವೊಂದರಲ್ಲಿ ಸಾರ್ವಜನಿಕ ಸೇವಕರನ್ನು ವಿಚಾರಣೆಗೆ ಒಳಪಡಿಸುವ ಮೊದಲು ಜಾರಿ ನಿರ್ದೇಶನಾಲಯವು ಪೂರ್ವಾನುಮತಿ ಪಡೆಯಬೇಕು ಎಂದು ಹೇಳಿತ್ತು. ಪ್ರಾಸಿಕ್ಯೂಷನ್ ದೂರು ದಾಖಲಿಸುವ ಮೊದಲು ಅಧಿಕಾರಿಗಳ ಪೂರ್ವಾನುಮತಿ ಪಡೆಯದ ಕಾರಣ ತನ್ನ ಮತ್ತು ಇತರರ ವಿರುದ್ಧ ಇಡಿ ಚಾರ್ಜ್ಶೀಟ್ ಕಾನೂನುಬಾಹಿರ ಎಂದು ಅರವಿಂದ್ ಕೇಜ್ರಿವಾಲ್ ದೆಹಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. 2024 ರ ಡಿಸೆಂಬರ್ನಲ್ಲಿ, ಜಾರಿ ನಿರ್ದೇಶನಾಲಯವು ಲೆಫ್ಟಿನೆಂಟ್ ಗವರ್ನರ್ಗೆ ಪತ್ರ ಬರೆದು, ಕೇಜ್ರಿವಾಲ್ “ಕಿಂಗ್ಪಿನ್ ಮತ್ತು ಪ್ರಮುಖ ಪಿತೂರಿಗಾರ” ಆಗಿರುವುದರಿಂದ ಅನುಮತಿ ನೀಡಬೇಕು ಎಂದು ಹೇಳಿದೆ. ಮದ್ಯ…

Read More

ಬೆಂಗಳೂರು : ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬ ಪತ್ನಿ ಸೇರಿ ಮೂವರಿಗೆ ಚಾಕು ಇರಿದು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಬೆಂಗಳೂರು ಉತ್ತರ ತಾಲೂಕಿನ ಸೊಂಡೆಕೊಪ್ಪದಲ್ಲಿ ಅನೈತಿಕ ಸಂಬಂಧ ಪ್ರಶ್ನಿಸಿದಕ್ಕೆ ವ್ಯಕ್ತಿಯೊಬ್ಬ ಪತ್ನಿ ಮತ್ತು ಮನೆಯವರಿಗೆ ಚಾಕುವಿನಿಂದ ಇರಿದ ಘಟನೆ ನಡೆದಿದೆ. ಪತ್ನಿ ಮಮ್ತಾಜ್, ಅತ್ತೆ ಶಬೀನಾ, ಅಣ್ಣ ಅರ್ಬಾಜ್ ಅವರಿಗೆ ಅಜರುದ್ದೀನ್ ಎಂಬಾತ ಚಾಕುವಿನಿಂದ ಇರಿದಿದ್ದಾನೆ. ಯುವತಿಯ ಜೊತೆಗೆ ಅಜರುದ್ದೀನ್ ಅಕ್ರಮ ಸಂಬಂಧ ಹೊಂದಿದ್ದ. ಈ ವಿಚಾರವಾಗಿ ಗಲಾಟೆಯಾಗಿ ಪತ್ನಿ ಸೇರಿ ಮೂವರಿಗೆ ಚಾಕುವಿನಿಂದ ಇರಿದು ಹಲ್ಲೆ ನಡೆಸಲಾಗಿದೆ. ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More