Author: kannadanewsnow57

ಬೆಂಗಳೂರು: ರಾಜ್ಯದ ಜನತೆಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ನೆಮ್ಮದಿಯ ಸುದ್ದಿಯೊಂದನ್ನು ನೀಡಿದ್ದು, ಸಾರಿಗೆ ಬಸ್ ಪ್ರಯಾಣ ದರವನ್ನು ತಕ್ಷಣ ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೆಎಸ್‌ಆರ್‌ಟಿಸಿ ಮತ್ತು ಇತರ ಸಾರಿಗೆ ನಿಗಮಗಳ ಪ್ರಯಾಣ ದರ ಏರಿಕೆ ಪ್ರತಿಕ್ರಿಯೆ ನೀಡಿದ ಅವರು, ಸಾರಿಗೆ ಬಸ್ ಪ್ರಯಾಣ ದರವನ್ನು ಹೆಚ್ಚಳ ಮಾಡುವ ಯಾವುದೇ ಯೋಜನೆಗಳು ಸದ್ಯಕ್ಕೆ ಪರಿಗಣನೆಯಲ್ಲಿಲ್ಲ. ಈ ಹಿಂದೆ ಸಾರಿಗೆ ನಿಗಮಗಳು ಪ್ರಯಾಣ ದರ ಪರಿಷ್ಕರಣೆಗೆ ಪ್ರಸ್ತಾವನೆ ಸಲ್ಲಿಸಿದ್ದವು. ಆದರೆ, ಇತ್ತೀಚೆಗೆ ಪ್ರಯಾಣ ದರ ಹೆಚ್ಚಳಕ್ಕೆ ಯಾವುದೇ ಪ್ರಸ್ತಾವನೆ ಸಲ್ಲಿಸಿಲ್ಲ ಎಂದು ಸಚಿವರು ಖಚಿತಪಡಿಸಿದ್ದಾರೆ. ಪ್ರಯಾಣ ದರ ಏರಿಕೆ ಕುರಿತು ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ, ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರಯಾಣ ದರ ಏರಿಕೆಗೆ ಶಿಫಾರಸು ಮಾಡಿದ್ದರೂ ಅಂತಿಮ ನಿರ್ಧಾರ ಸರ್ಕಾರದ್ದು. ಸಾರಿಗೆ ನಿಗಮ ಮಂಡಳಿ ಸಭೆಯಲ್ಲಿ ಈ ವಿಷಯದ ಕುರಿತು ಚರ್ಚೆಗಳು ನಡೆಯಲಿದ್ದು, ಯಾವುದೇ ಬದಲಾವಣೆಗಳಿಗೆ ಸರ್ಕಾರದ ಅನುಮೋದನೆ ಅಗತ್ಯವಿದೆ…

Read More

ಬೆಂಗಳೂರು: ಹೊಸ ವರ್ಷಾಚರಣೆಯ ಪ್ರಯುಕ್ತ ಡಿಸೆಂಬರ್.31ರ ಇಂದು ರಾತ್ರಿ 11ರಿಂದ ಮಧ್ಯರಾತ್ರಿ 2 ಗಂಟೆಯವರೆಗೆ ಹೆಚ್ಚುವರಿ ಬಿಎಂಟಿಸಿ ಬಸ್ ಗಳ ಸಂಚಾರದ ವ್ಯವಸ್ಥೆ ಮಾಡಲಾಗಿದೆ. ಬ್ರಿಗೇಡ್‌ ರಸ್ತೆಯಿಂದ ಎಲೆಕ್ಟ್ರಾನಿಕ್ಸ್‌ ಸಿಟಿ ಮತ್ತು ಜಿಗಣಿಗೆ, ಎಂ.ಜಿ. ರಸ್ತೆಯಿಂದ ಸರ್ಜಾಪುರ, ಕೆಂಗೇರಿ–ಕೆಎಚ್‌ಬಿ ಕ್ವಾರ್ಟರ್ಸ್‌, ಜನಪ್ರಿಯ ಟೌನ್‌ಶಿಪ್‌, ನೆಲಮಂಗಲ, ಯಲಹಂಕ ಉಪನಗರ 5ನೇ ಹಂತ, ಯಲಹಂಕ, ಬಾಗಲೂರು, ಹೊಸಕೋಟೆ, ಚನ್ನಸಂದ್ರ, ಕಾಡುಗೋಡಿ, ಬನಶಂಕರಿಗೆ ಹೆಚ್ಚುವರಿ ಬಸ್‌ ಸಂಚರಿಸಲಿವೆ. ಹೆಚ್ಚು ಜನದಟ್ಟಣೆ ಇರುವ ಪ್ರಮುಖ ಬಸ್ ನಿಲ್ದಾಣ, ಜಂಕ್ಷನ್‌ಗಳಾದ ಕೆಂಪೇಗೌಡ ಬಸ್ ನಿಲ್ದಾಣ, ಕೆ.ಆರ್‌. ಮಾರುಕಟ್ಟೆ, ಶಿವಾಜಿನಗರ, ಕೋರಮಂಗಲ, ಕಾಡುಗೋಡಿ, ಕೆಂಗೇರಿ, ಸುಮನಹಳ್ಳಿ, ಗೊರಗುಂಟೆಪಾಳ್ಯ, ಯಶವಂತಪುರ, ಯಲಹಂಕ, ಶಾಂತಿನಗರ, ಬನಶಂಕರಿ, ಹೆಬ್ಬಾಳ ಮತ್ತು ಸೆಂಟ್ರಲ್ ಸಿಲ್ಕ್ ಬೋರ್ಡ್‌ಗಳಿಂದ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಸಾರಿಗೆ ಸೌಲಭ್ಯ ಇರಲಿದೆ. https://twitter.com/KarnatakaVarthe/status/1873718915622457510

Read More

ನವದೆಹಲಿ : ಭಾರತೀಯ ರಿಸರ್ವ್ ಬ್ಯಾಂಕ್ (RBI) ಶೀಘ್ರವೇ 5,000 ರೂಪಾಯಿಗಳ ನೋಟನ್ನು ಬಿಡುಗಡೆ ಮಾಡಲಿದೆ. ಈ ಸುದ್ದಿ ಕೇಳಿದ ದಿನದಿಂದ ಜನರು ನಿಜಕ್ಕೂ ಶಾಕ್ ಆಗಿದ್ದಾರೆ. ಏಕೆಂದರೆ ಆರ್ ಬಿಐ ಇತ್ತೀಚೆಗೆ ಎರಡು ಸಾವಿರ ರೂಪಾಯಿ ನೋಟುಗಳನ್ನು ಹಿಂಪಡೆದಿದೆ. ಹೀಗಿರುವಾಗ ಹೊಸ 5000 ರೂಪಾಯಿ ನೋಟು ಬಿಡುಗಡೆ ಮಾಡಿರುವುದು ಜನರಿಗೆ ತೊಂದರೆಯಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ಸುದ್ದಿಯಿಂದ ಜನರಲ್ಲಿ ಕುತೂಹಲ ಮೂಡಿದೆ. ಪ್ರಸ್ತುತ ಭಾರತದ ಅತಿದೊಡ್ಡ ನೋಟು 500 ರೂ. ಇದಲ್ಲದೇ ಭಾರತದಲ್ಲಿ 200, 100, 50, 50 ಮತ್ತು 10 ರೂಪಾಯಿ ನೋಟುಗಳು ಚಾಲ್ತಿಯಲ್ಲಿವೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಈ ಸುದ್ದಿಯಿಂದಾಗಿ ವ್ಯಾಪಾರಸ್ಥರು ಮತ್ತು ದೊಡ್ಡ ವಹಿವಾಟು ನಡೆಸುವವರಲ್ಲಿ ಚರ್ಚೆ ಆರಂಭವಾಗಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ 5,000 ಮತ್ತು 10,000 ರೂ.ಗಳ ನೋಟುಗಳನ್ನು ಬಿಡುಗಡೆ ಮಾಡಲಾಯಿತು. 1954 ರಲ್ಲಿ ಒಂದು ಸಾವಿರ ರೂಪಾಯಿ ನೋಟುಗಳನ್ನು ಬಿಡುಗಡೆ ಮಾಡಲಾಯಿತು. 1978ರಲ್ಲಿ ಅಂದಿನ ಪ್ರಧಾನಿ ಮೊರಾರ್ಜಿ ದೇಸಾಯಿ…

Read More

ಹುಬ್ಬಳ್ಳಿ: ಜಿಲ್ಲೆಯಲ್ಲಿ ದೇವಸ್ಥಾನವೊಂದರಲ್ಲಿ ಅಡುಗೆ ಮಾಡುತ್ತಿದ್ದಂತ ಸಂದರ್ಭದಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ದುರಂತವೇ ನಡೆದಿತ್ತು. ಈ ದುರಂತದಲ್ಲಿ 9 ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. ಇವರನ್ನು ಕಿಮ್ಸ್ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇಂದು ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 8ಕ್ಕೆ ಏರಿಕೆಯಾದಂತೆ ಆಗಿದೆ. ಹುಬ್ಬಳ್ಳಿಯ ಸಾಯಿ ನಗರದ ಈಶ್ವರದೇವಸ್ಥಾನದಲ್ಲಿ ಅಡುಗೆ ಮಾಡುತ್ತಿದ್ದಂತ ಸಂದರ್ಭದಲ್ಲಿ ಡಿಸೆಂಬರ್.22ರಂದು ಸಿಲಿಂಡರ್ ಸ್ಪೋಟಗೊಂಡು 9 ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಅಯ್ಯಪ್ಪ ಮಾಲಾಧಾರಿ ಹುಬ್ಬಳ್ಳಿಯ ಉಣಕಲ್ ನಿವಾಸಿ ಪ್ರಕಾಶ ಬಾರಕೇರ (42) ಎಂಬುವರು ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಹೀಗಾಗಿ ಮೃತರ ಸಂಖ್ಯೆ 8ಕ್ಕೆ ಏರಿಕೆಯಾದಂತೆ ಆಗಿದೆ. ಕಿಮ್ಸ್ ಆಸ್ಪತ್ರೆಯಲ್ಲಿ ಇನ್ನೂ ಒಬ್ಬರು ಗಾಯಾಳು ಮಾಲಾಧಾರಿಗಳಿಗೆ ಚಿಕಿತ್ಸೆ ಮುಂದುವರೆದಿದೆ. ಅಂದಹಾಗೇ ಈಗಾಗಲೇ ಮೃತ ಅಯ್ಯಪ್ಪ ಮಾಲಾಧಾರಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ಪರಿಹಾರವನ್ನು ಘೋಷಣೆ ಮಾಡಲಾಗಿದೆ.

Read More

ಬೆಂಗಳೂರು : ರಾಜ್ಯ ಬಜೆಟ್ ಮಂಡಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 16 ನೇ ಬಜೆಟ್ ಮಂಡಿಸಲಿದ್ದಾರೆ. ಹೌದು, ರಾಜ್ಯ ಸರ್ಕಾರದ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಮಾರ್ಚ್ 10ರಿಂದ ರಾಜ್ಯ ವಿಧಾನ ಮಂಡಲ ಜಂಟಿ ಅಧಿವೇಶನ ಆರಂಭವಾಗಲಿದ್ದು, ಮಾರ್ಚ್ 14 ರಂದು ಸಿಎಂ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸಲಿದ್ದಾರೆ. ಜಂಟಿ ಅಧಿವೇಶನದ ಮುಂದುವರೆದ ಭಾಗವಾಗಿ ಬಜೆಟ್ ಅಧಿವೇಶನ ನಡೆಯಲಿದೆ. ಒಟ್ಟು 3 ವಾರಗಳ ಕಾಲ ಅಧಿವೇಶನ ನಡೆಸಲು ಉದ್ದೇಶಿಸಲಾಗಿದೆ. ಜನವರಿ 2ರಂದು ಹೊಸ ವರ್ಷದ ಮೊದಲ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಬಗ್ಗೆ ಅಧಿಕೃತ ಅದೇಶ ಹೊರಡಿಸಲಾಗುವುದು. ಬಜೆಟ್ ಅಧಿವೇಶನದ ಪೂರ್ವದಲ್ಲಿ ಮಾರ್ಚ್ 10ರಿಂದ 4 ದಿನಗಳ ಕಾಲ ಜಂಟಿ ಅಧಿವೇಶನ ನಡೆಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು, ಮಾರ್ಚ್ 14 ರಂದು ಸಿಎಂ ಸಿದ್ದರಾಮಯ್ಯ ಅವರು 16 ನೇ ಬಜೆಟ್ ಮಂಡಿಸಲಿದ್ದಾರೆ. ಈ ಮೂಲಕ ಮತ್ತೊಂದು…

Read More

ನವದೆಹಲಿ : ಭಾರತದ ಬಾಹ್ಯ ಸಾಲವು ಈ ವರ್ಷದ ಸೆಪ್ಟೆಂಬರ್‌ನಲ್ಲಿ $ 711.8 ಶತಕೋಟಿಗೆ ಏರಿದೆ, ಇದು ಜೂನ್ 2024 ಕ್ಕಿಂತ 4.3 ರಷ್ಟು ಹೆಚ್ಚಾಗಿದೆ ಎಂದು ಹಣಕಾಸು ಸಚಿವಾಲಯವು ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿದುಬಂದಿದೆ. ಸೆಪ್ಟೆಂಬರ್ 2023 ರ ಅಂತ್ಯದ ವೇಳೆಗೆ, ಬಾಹ್ಯ ಸಾಲವು $ 637.1 ಬಿಲಿಯನ್ ಆಗಿತ್ತು. ಸೆಪ್ಟೆಂಬರ್ 2024 ರಲ್ಲಿ, ಭಾರತದ ಬಾಹ್ಯ ಸಾಲವನ್ನು $ 711.8 ಶತಕೋಟಿಯಲ್ಲಿ ಇರಿಸಲಾಯಿತು, ಜೂನ್ ಅಂತ್ಯದ 2024 ರ ಮಟ್ಟಕ್ಕಿಂತ $ 29.6 ಶತಕೋಟಿ ಹೆಚ್ಚಳವನ್ನು ದಾಖಲಿಸಿದೆ ಎಂದು ಭಾರತದ ತ್ರೈಮಾಸಿಕ ಬಾಹ್ಯ ಸಾಲ ವರದಿ ತಿಳಿಸಿದೆ. GDP ಅನುಪಾತಕ್ಕೆ ಬಾಹ್ಯ ಸಾಲವು ಸೆಪ್ಟೆಂಬರ್ 2024 ರಲ್ಲಿ 19.4 ಪ್ರತಿಶತದಷ್ಟಿತ್ತು, ಜೂನ್ 2024 ರ ವೇಳೆಗೆ 18.8 ಪ್ರತಿಶತದಷ್ಟಿದೆ ಎಂದು ಅದು ಸೇರಿಸಿದೆ. 2024 ರ ಸೆಪ್ಟೆಂಬರ್ ಅಂತ್ಯದ ವೇಳೆಗೆ US ಡಾಲರ್ ಮೌಲ್ಯದ ಸಾಲವು 53.4 ಶೇಕಡಾ ಪಾಲನ್ನು ಹೊಂದಿರುವ ಭಾರತದ ಬಾಹ್ಯ ಸಾಲದ ಅತಿದೊಡ್ಡ ಅಂಶವಾಗಿ…

Read More

ಬೆಂಗಳೂರು : ಹೊಸ ವರ್ಷಕ್ಕೆ ಮದ್ಯ ಪ್ರಿಯರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಮೂರು ಬಾಟಲ್ ಮದ್ಯ ಖರೀದಿಸಿದರೆ ಒಂದು ಉಚಿತವಾಗಿ ನೀಡುವ ಘೋಷಣೆ ಮಾಡಲಾಗಿದೆ. ಹೌದು, ಹೊಸ ವರ್ಷವನ್ನು ಸ್ವಾಗತಿಸಲು ಬೆಂಗಳೂರಿನ ಬಾರ್ ಅಂಡ್ ರೆಸ್ಟೋರೆಂಟ್ ಗಳು, ಪಬ್, ವೈನ್ ಸ್ಟೋರ್ ಗಳಲ್ಲಿ ಮದ್ಯಪ್ರಿಯರಿಗೆ ಆಫರ್ ನೀಡುತ್ತಿದ್ದಾರೆ. ಡಿಸೆಂಬರ್ 31 ರಂದು ಹೆಚ್ಚಿನ ಪ್ರಮಾಣದಲ್ಲಿ ಮದ್ಯ ಮಾರಾಟವಾಗುತ್ತದೆ. ಹೀಗಾಗಿ ವ್ಯಾಪಾರ, ಗ್ರಾಹಕರ ಹೆಚ್ಚಳದ ಜೊತೆಗೆ ಗ್ರಾಹಕರನ್ನು ಸಂಪಾದಿಸಲು ದುಬಾರಿ ಬೆಲೆಯ ಮದ್ಯಗಳಲ್ಲಿ ರಿಯಾಯಿತಿ ಹೆಚ್ಚಿನ ಖರೀದಿಗೆ ಒಂದು ಬಾಟಲ್ ಉಚಿತ ನೀಡುವುದಾಗಿ ಕೆಲವು ಮದ್ಯ ಮಾರಾಟಗಾರರು ಪ್ರಕಟಿಸಿದ್ದಾರೆ. ಕೆಲವು ಬ್ರಾಂಡ್ ನವರು ಮಾರಾಟ ಹೆಚ್ಚಳಕ್ಕೆ ಮದ್ಯದ ಅಂಗಡಿಯವರಿಗೆ ದುಬಾರಿ ಬೆಲೆಯ 750 ಎಂಎಲ್ ನ ಫುಲ್ ಬಾಟಲ್ ಮೇಲೆ 100-ರಿಂದ 200 ರೂಪಾಯಿವರೆಗೂ ಕಂಪನಿಗಳು ತಮಗೆ ನೀಡಿದ ದರ ರಿಯಾಯಿತಿ ಕೊಡುಗೆಯನ್ನು ಗ್ರಾಹಕರಿಗೆ ನೀಡಿ ವ್ಯಾಪಾರ ಹೆಚ್ಚಿಸಿಕೊಳ್ಳಲು ಮದ್ಯ ಮಾರಾಟಗಾರರು ಮುಂದಾಗಿದ್ದು, ಮೂರು ಬಾಟಲ್ ಖರೀದಿಸಿದರೆ ಒಂದು ಬಾಟಲ್ ಉಚಿತವಾಗಿ ನೀಡುವುದಾಗಿ ಕೆಲವು…

Read More

ನವದೆಹಲಿ : ಸಂಬಳದ ಮೇಲಿನ ಟಿಡಿಎಸ್ ಕಡಿತದ ನಿಯಮಗಳಲ್ಲಿ ಸರ್ಕಾರ ದೊಡ್ಡ ಬದಲಾವಣೆ ಮಾಡಿದೆ. ಈಗ ಸಂಬಳದ ಮೇಲೆ ಟಿಡಿಎಸ್ ಕಡಿತಗೊಳಿಸುವಾಗ ಸಂಬಳೇತರ ಆದಾಯದ ಮೇಲೆ (ಬ್ಯಾಂಕ್ ಬಡ್ಡಿ, ಬಾಡಿಗೆ, ಇತ್ಯಾದಿ) ಕಡಿತಗೊಳಿಸಲಾದ TDS/TCS ಪ್ರಯೋಜನವನ್ನು ನೀಡಲಾಗುತ್ತದೆ. ಇದು ಸಂಬಳ ಪಡೆಯುವ ಉದ್ಯೋಗಿಗಳ ಮೇಲಿನ ಎರಡು ತೆರಿಗೆ ಕಡಿತದ ತೊಂದರೆಯನ್ನು ನಿವಾರಿಸುತ್ತದೆ ಮತ್ತು ಅವರ ತೆರಿಗೆ ಹೊಣೆಗಾರಿಕೆಯನ್ನು ಕಡಿಮೆ ಮಾಡುತ್ತದೆ. ಏನು ಬದಲಾಗಿದೆ? ಈ ಹಿಂದೆ, ಸಂಬಳ ಪಡೆಯುವ ನೌಕರರು ತಮ್ಮ ಸಂಬಳದ ಜೊತೆಗೆ ಸಂಬಳೇತರ ಆದಾಯದ ಮೇಲೆ ಪ್ರತ್ಯೇಕವಾಗಿ ಟಿಡಿಎಸ್ ಪಾವತಿಸಬೇಕಾಗಿತ್ತು. ಆದರೆ ಈಗ ಹೊಸ ನಿಯಮ ಹೇಳುತ್ತದೆ: ಈಗಾಗಲೇ ಸಂಬಳೇತರ ಆದಾಯದ ಮೇಲೆ ಕಡಿತಗೊಳಿಸಲಾಗಿರುವ TDS/TCS ಅನ್ನು ಗಣನೆಗೆ ತೆಗೆದುಕೊಂಡು ಸಂಬಳದ ಮೇಲೆ TDS ಕಡಿತಗೊಳಿಸಲಾಗುತ್ತದೆ. ಇದು ಸಂಬಳ ಪಡೆಯುವ ನೌಕರರ ಒಟ್ಟು ಟಿಡಿಎಸ್ ಅನ್ನು ಕಡಿಮೆ ಮಾಡುತ್ತದೆ. ಉದಾಹರಣೆಯೊಂದಿಗೆ ಅರ್ಥಮಾಡಿಕೊಳ್ಳಿ: ನಿಮ್ಮ ಸಂಬಳ ₹ 10 ಲಕ್ಷ ಮತ್ತು ಸಂಬಳೇತರ ಆದಾಯ ₹ 5 ಲಕ್ಷ ಆಗಿದ್ದರೆ,…

Read More

ನವದೆಹಲಿ : 181 ಜನರನ್ನು ಹೊತ್ತೊಯ್ಯುತ್ತಿದ್ದ ಜೆಜು ಏರ್ ವಿಮಾನವು ಭಾನುವಾರ (ಡಿಸೆಂಬರ್ 29, 2024) ದಕ್ಷಿಣ ಕೊರಿಯಾದ ಮುವಾನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಘಾತಕ್ಕೀಡಾಯಿತು. ಹೊಸ ವರ್ಷದ ಆಗಮನದ ಮೊದಲು, ಡಿಸೆಂಬರ್ 2024 ರ ತಿಂಗಳು ವಿಮಾನಯಾನ ಸಂಸ್ಥೆಗಳಿಗೆ ಆಘಾತಕ್ಕಿಂತ ಕಡಿಮೆಯಿಲ್ಲ. ಈ ತಿಂಗಳಲ್ಲಿ ಇಲ್ಲಿಯವರೆಗೆ (29 ಡಿಸೆಂಬರ್ 2024), 6 ಪ್ರಮುಖ ವಿಮಾನ ಅಪಘಾತಗಳು ಸಂಭವಿಸಿವೆ, ಇದರಲ್ಲಿ ಒಟ್ಟು 234 ಜನರು ಸಾವನ್ನಪ್ಪಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ, ವಿಮಾನಯಾನ ವಲಯದಲ್ಲಿನ ಸುರಕ್ಷತಾ ಪ್ರೋಟೋಕಾಲ್‌ಗಳು ಮತ್ತು ತಾಂತ್ರಿಕ ಸಮಸ್ಯೆಗಳ ಬಗ್ಗೆ ಈಗ ಪ್ರಶ್ನೆಗಳನ್ನು ಎತ್ತಲಾಗುತ್ತಿದೆ. ದಕ್ಷಿಣ ಕೊರಿಯಾದ ವಿಮಾನ ಅಪಘಾತದಲ್ಲಿ 179 ಜನರು ಸಾವನ್ನಪ್ಪಿದ್ದಾರೆ ದಕ್ಷಿಣ ಕೊರಿಯಾದ ಮುವಾನ್ ಇಂಟರ್‌ನ್ಯಾಶನಲ್‌ನಲ್ಲಿ ನಡೆದ ವಿಮಾನ ಅಪಘಾತದಲ್ಲಿ 179 ಜನರು ಸಾವನ್ನಪ್ಪಿದ್ದರೆ, ಭದ್ರತಾ ಸಿಬ್ಬಂದಿಯಿಂದ ಅವಶೇಷಗಳಿಂದ ಇಬ್ಬರನ್ನು ಜೀವಂತವಾಗಿ ಹೊರತೆಗೆಯಲಾಯಿತು. ಬ್ಯಾಂಕಾಕ್‌ನಿಂದ ಹಿಂತಿರುಗುತ್ತಿದ್ದ ಈ ವಿಮಾನದ ಗೇರ್ ಲ್ಯಾಂಡಿಂಗ್ ಸಮಯದಲ್ಲಿ ತೆರೆಯಲಿಲ್ಲ, ಇದರಿಂದಾಗಿ ಅದು ರನ್‌ವೇಯಿಂದ ಜಾರಿಬಿದ್ದು ಕಾಂಕ್ರೀಟ್ ಬೇಲಿಗೆ ಡಿಕ್ಕಿ ಹೊಡೆದಿದೆ. ಬೇಲಿಗೆ…

Read More

ಚಿಕ್ಕಬಳ್ಳಾಪುರ : ಹೊಸ ವರ್ಷಾಚರಣೆಗೆ ನಂದಿಬೆಟ್ಟಕ್ಕೆ ಹೋಗುವವರಿಗೆ ರಾಜ್ಯ ಸರ್ಕಾರ ಶಾಕ್ ಕೊಟ್ಟಿದ್ದು, . ಡಿಸೆಂಬರ್ 31 ರ ಸಂಜೆ 6 ಗಂಟೆಯಿಂದ ಜನವರಿ 1 ರ ಬೆಳಗ್ಗೆ 7 ಗಂಟೆಯವರೆಗೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಸಂಪೂರ್ಣ ನಿಷೇಧ ಹೇರಿ ಆದೇಶ ಹೊರಡಿಸಿದೆ. ಡಿಸೆಂಬರ್ 31ಸಂಜೆ 6 ಗಂಟೆಯಿಂದ 2025 ಜನವರಿ1ರಂದು ಬೆಳಿಗ್ಗೆ 7 ಗಂಟೆವರೆಗೂ ಸಾರ್ವಜನಿಕ ಪ್ರವೇಶ ನಿರ್ಬಂಧಿಸಿದ್ದು, ಜೊತೆಗೆ ಅತಿಥಿ ಗೃಹಗಳಿಗೆ ಪ್ರವೇಶ ಕೂಡ ನಿರ್ಬಂಧಿಸಿದೆ. ಇದೀಗ ಹೊಸ ವರ್ಷಕ್ಕೆ ಹೊರಗೆ ಹೋಗುವುದಕ್ಕೆ ಪ್ಲ್ಯಾನ್‌ ಮಾಡುತ್ತಿದ್ದಾರೆ. ಅದರಲ್ಲೂ ಹೆಚ್ಚಾಗಿ ಬೆಟ್ಟದ ಕಡೆ ಹೋಗಿ ಸಮಯ ಕಳೆಯುವುದಕ್ಕೆ ನೋಡುತ್ತಾರೆ. ಆದರೆ ಹೊಸ ವರ್ಷಾಚರಣೆಗೆ ನಂದಿಬೆಟ್ಟದಲ್ಲಿ ನಿರ್ಬಂಧ ಹೇರಲಾಗಿದೆ.ಡಿ.31ಸಂಜೆ 6 ಗಂಟೆಯಿಂದ ಜ.1 ಬೆಳಿಗ್ಗೆ7 ಗಂಟೆವರೆಗೂ ನಿರ್ಬಂಧ ವಿಧಿಸಲಾಗಿದೆ. ಸಾರ್ವಜನಿಕರ ಪ್ರವೇಶ ಹಾಗೂ ಸಂಭ್ರಮಾಚರಣೆಗೆ ನಿರ್ಬಂಧ ವಿಧಿಸುವುದಾಗಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Read More