Author: kannadanewsnow57

ಬೆಂಗಳೂರು : ದ್ವೇಷಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ತಡೆ ನೀಡಿದ್ದಾರೆ. ಪ್ರತಿಪಕ್ಷಗಳ ವಿರೋಧದ ನಡುವೆಯೇ ಸರ್ಕಾರ ಕರ್ನಾಟಕ ದ್ವೇಷಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆಯನ್ನು ಚಳಿಗಾಲದ ಅಧಿವೇಶನದಲ್ಲಿ ಅಂಗೀಕರಿಸಿ ಲೋಕಭವನಕ್ಕೆ ಕಳುಹಿಸಿತ್ತು. ಬಳಿಕ ಬಿಜೆಪಿ, ಜೆಡಿಎಸ್ ಮುಖಂಡರು, ಸಹಿ ಮಾಡದಂತೆ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದ್ದರು. ಆದ್ದರಿಂದ ರಾಜ್ಯಪಾಲರು ಕೆಲ ಆಕ್ಷೇಪಗಳ ಬಗ್ಗೆ ಸ್ಪಷ್ಟನೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ. ಬೆಳಗಾವಿಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ದ್ವೇಷ ಭಾಷಣ ತಡೆ ಮಸೂದೆ ಸೇರಿದಂತೆ ಹಲವು ಮಹತ್ವದ ಮಸೂದೆಗಳಿಗೆ ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಅಂಕಿತ ಹಾಕಲಾಗಿತ್ತು. ಈ ಮಸೂದೆಗಳನ್ನು ರಾಜ್ಯಪಾಲರ ಒಪ್ಪಿಗೆಗೆ ಕಳುಹಿಸಲಾಗಿತ್ತು. ಆದರೇ ಇನ್ನೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿಲ್ಲ. ರಾಜ್ಯಪಾಲರ ಪರಿಶೀಲನೆಯಲ್ಲೇ ದ್ವೇಷ ಭಾಷಣ ತಡೆ ಮಸೂದೆ ಇದೆ. ಇದಲ್ಲದೇ ಎಸ್ಸಿ ಒಳಮೀಸಲಾತಿ ಮಸೂದೆಯನ್ನು ರಾಜ್ಯಪಾಲರು ವಾಪಾಸ್ ಕಳುಹಿಸಿದ್ದಾರೆ. ಮಸೂದೆ ಕುರಿತು ಹೆಚ್ಚಿನ…

Read More

ಬೆಂಗಳೂರು : ಮುಂಬರುವ ಬೇಸಿಗೆಯಲ್ಲಿ ಬೇಡಿಕೆಗೆ ಅನುಸಾರವಾಗಿ ಸಮರ್ಪಕ ವಿದ್ಯುತ್ ಸರಬರಾಜಿಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್‌ಗೆ ಅವಕಾಶವಾಗದಂತೆ ನೋಡಿಕೊಳ್ಳಬೇಕು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಇಂಧನ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ ಬೆಸ್ಕಾಂನ ಬೆಳಕು ಭವನದಲ್ಲಿ ಶುಕ್ರವಾರ ಇಲಾಖೆ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದ ಸಚಿವರು, ಇಲಾಖೆ ಕೈಗೊಂಡಿರುವ ಪೂರ್ವ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದರಲ್ಲದೆ, “ಬೇಡಿಕೆ ಮತ್ತು ಪೂರೈಕೆಯಲ್ಲಿ ಸಮನ್ವಯತೆ ಸಾಧಿಸಲು ಅಗತ್ಯವಿರುವ ವಿದ್ಯುತ್ ಉತ್ಪಾದನೆ ಮತ್ತು ಖರೀದಿಗೆ ಕ್ರಮ ಕೈಗೊಳ್ಳಬೇಕು,” ಎಂದು ತಿಳಿಸಿದರು. “ಬೇಸಿಗೆಯಲ್ಲಿ ಅದರಲ್ಲೂ ಮುಖ್ಯವಾಗಿ ಮಾರ್ಚ್‌ನಿಂದ ಮೇ ಅಂತ್ಯದವರೆಗೆ ಮೂರು ತಿಂಗಳಲ್ಲಿ ವಿದ್ಯುತ್ ಬೇಡಿಕೆ ಎಷ್ಟಾಗಬಹುದು ಎಂಬುದನ್ನು ಈಗಲೇ ಲೆಕ್ಕಾಚಾರ ಮಾಡಿ ಅದಕ್ಕೆ ತಕ್ಕಂತೆ ಪೂರೈಸಲು ವಿದ್ಯುತ್ ಬ್ಯಾಂಕಿಂಗ್ ವ್ಯವಸ್ಥೆ ಮಾಡಿಕೊಳ್ಳಬೇಕು. ಹಗಲು ವೇಳೆ ಸೌರ ವಿದ್ಯುತ್ ಹೇರಳವಾಗಿ ಲಭ್ಯವಿರುವುದರಿಂದ ಅದನ್ನು ಬಳಸಿಕೊಂಡು ರಾತ್ರಿ ವೇಳೆ ಜಲ ಮತ್ತು ಕಲ್ಲಿದ್ದಲು ಆಧಾರಿತ ವಿದ್ಯುತ್…

Read More

ಗುಟ್ಕಾ ತಿನ್ನುವವರೇ ಎಚ್ಚರ, ಗುಟ್ಕಾ ಹಾಕುವವರು ಗಂಭೀರ ಕಾಯಿಲೆಗಳಿಗೆ ಬಲಿಯಾಗುತ್ತಾರೆ. ಇದರ ಹೊರತಾಗಿಯೂ, ಗುಟ್ಕಾ ಸೇವಿಸುವ ಮೊದಲು ಅಥವಾ ಅಭ್ಯಾಸವನ್ನು ಬೆಳೆಸಿಕೊಳ್ಳುವ ಮೊದಲು, ಜನರು ಅದರ ಹಾನಿಕಾರಕ ಪರಿಣಾಮಗಳನ್ನು ಮರೆತುಬಿಡುತ್ತಾರೆ. ಮದ್ಯಪಾನ ಅಥವಾ ಸಿಗರೇಟ್ ಸೇದುವುದರಿಂದ ಮಾತ್ರ ಈ ಗಂಭೀರ ಕಾಯಿಲೆಗಳು ಉಂಟಾಗಬಹುದು ಮತ್ತು ಗುಟ್ಕಾ ಅಗಿಯುವುದರಿಂದ ಅಷ್ಟೊಂದು ಹಾನಿಕಾರಕವಲ್ಲ ಎಂದು ಅವರು ಭಾವಿಸುತ್ತಾರೆ. ಆದರೆ ಅಗಿಯುವುದು ಎಷ್ಟು ಅಪಾಯಕಾರಿ ಮತ್ತು ಗುಟ್ಕಾ ತಿನ್ನುವುದರಿಂದ ಯಾವ ಪರಿಣಾಮಗಳು ಉಂಟಾಗಬಹುದು ಎಂಬುದನ್ನು ತಿಳಿಯಿರಿ. ಗುಟ್ಕಾ ತಿನ್ನುವುದರಿಂದಾಗುವ ಹಾನಿಗಳು ಗುಟ್ಕಾ ತಿನ್ನುವುದರಿಂದಾಗುವ ಪರಿಣಾಮಗಳು ರಹಸ್ಯವಲ್ಲ. ಒಬ್ಬ ವ್ಯಕ್ತಿಯು ಯಾವುದೇ ಗುಟ್ಕಾ ಅಗಿಯುವಾಗಲೆಲ್ಲಾ ಅದು ಅವರ ದೇಹಕ್ಕೆ ಎರಡು ರೀತಿಯಲ್ಲಿ ಹಾನಿ ಮಾಡಲು ಪ್ರಾರಂಭಿಸುತ್ತದೆ. ತಕ್ಷಣದ ಹಾನಿಯೆಂದರೆ ಗುಟ್ಕಾದಲ್ಲಿರುವ ನಿಕೋಟಿನ್ ಮಾನವ ದೇಹವನ್ನು ಪ್ರವೇಶಿಸಿದಾಗ, ಅದು ರಕ್ತಪ್ರವಾಹಕ್ಕೆ ಪ್ರವೇಶಿಸಿ ಹೃದಯ ಬಡಿತ ಮತ್ತು ರಕ್ತದೊತ್ತಡವನ್ನು ಹೆಚ್ಚಿಸುತ್ತದೆ. ಗುಟ್ಕಾದಲ್ಲಿರುವ ರಾಸಾಯನಿಕಗಳು ಒಸಡುಗಳು, ನಾಲಿಗೆ ಮತ್ತು ಕೆನ್ನೆಯ ಒಳಭಾಗಕ್ಕೆ ಹೆಚ್ಚು ಆಕ್ರಮಣಕಾರಿಯಾಗಿದ್ದು, ಗಾಯಗಳು ಮತ್ತು ಹುಣ್ಣುಗಳನ್ನು ಉಂಟುಮಾಡುತ್ತವೆ. ದೀರ್ಘಕಾಲೀನ…

Read More

ವಿಜಯಪುರ : ರಾಜ್ಯದಲ್ಲಿ 71 ವೈದ್ಯಕೀಯ ಕಾಲೇಜುಗಳಿದ್ದು ಈ ಪೈಕಿ 22 ಸರ್ಕಾರಿ ವೈದ್ಯಕೀಯ ಕಾಲೇಜುಗಳಿವೆ. ಉಳಿದ ಜಿಲ್ಲೆಗಳಲ್ಲಿಯೂ ಟ್ರಾಮಾ ಸೆಂಟರ್, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಇಂದು ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭದಲ್ಲಿ ಮಾತನಾಡಿದ ಅವರು, ದೇವರಾಜ ಅರಸು ಅವರ 7 ವರ್ಷ 239 ದಿನಗಳ ಸುದೀರ್ಘ ಅವಧಿಗೆ ಮುಖ್ಯಮಂತ್ರಿ ಆಗಿದ್ದ ದಾಖಲೆಯನ್ನು ಮುರಿದು ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ಎಂಬ ದಾಖಲೆ ಮಾಡಲು ಸಾಧ್ಯವಾಗಿದ್ದು ಜನರ ಆಶೀರ್ವಾದದಿಂದ. ಅದಕ್ಕಾಗಿ ರಾಜ್ಯದ ಜನತೆಗೆ ಕೃತಜ್ಞತೆಗಳನ್ನು ತಿಳಿಸಿದರು. ವಿಜಯಪುರದ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಆರು ಕ್ಷೇತ್ರಗಳನ್ನು ಗೆದ್ದಿದ್ದು, ಚುನಾವಣೆಯಲ್ಲಿ 135 ಕ್ಷೇತ್ರಗಳಲ್ಲಿ ಗೆಲ್ಲಬೇಕಾದರೆ ವಿಜಯಪುರ ಜನರ ಆಶೀರ್ವಾದ ಬಹಳ ಮುಖ್ಯ ಪಾತ್ರ ವಹಿಸಿದೆ. 45 ವರ್ಷಗಳಿಂದ ಇಡೀ ರಾಜ್ಯ ಸುತ್ತಾಡಿದ್ದೇನೆ. ವಿಜಯಪುರ ಜಿಲ್ಲೆಯ ಜನ ಆಶೀರ್ವಾದ ನನ್ನ ಮೇಲಿದೆ ಎಂದರು. ವಿಜಯಪುರ ಜಿಲ್ಲೆಯಲ್ಲಿ ₹800 ಕೋಟಿಗೂ ಹೆಚ್ಚು ಮೊತ್ತದ…

Read More

ನವದೆಹಲಿ : ಭಾರತ ಕೇಂದ್ರ ಸರ್ಕಾರವು ದೇಶದ ಆರ್ಥಿಕವಾಗಿ ದುರ್ಬಲ ಜನರಿಗಾಗಿ ವಿವಿಧ ರೀತಿಯ ಯೋಜನೆಗಳನ್ನು ನಡೆಸುತ್ತಿದೆ, ಈ ಜನರ ಜೀವನವನ್ನು ಉನ್ನತೀಕರಿಸುವುದು ಇದರ ಉದ್ದೇಶವಾಗಿದೆ, ಅಂತಹ ಒಂದು ಯೋಜನೆ ಉಜ್ವಲ ಯೋಜನೆಯಾಗಿದ್ದು, ಇದರ ಅಡಿಯಲ್ಲಿ ಮೋದಿ ಸರ್ಕಾರವು ದೇಶದ ಮಹಿಳೆಯರಿಗೆ ಉಚಿತ ಅನಿಲ ಮತ್ತು ಸಿಲಿಂಡರ್ಗಳನ್ನು ಒದಗಿಸುತ್ತದೆ. ಸರ್ಕಾರವು ಉಜ್ವಲ ಯೋಜನೆ 2.0 ಅನ್ನು ತಂದಿದೆ, ಅದರ ನೋಂದಣಿ ಪ್ರಾರಂಭವಾಗಿದೆ, ಇದರ ಅಡಿಯಲ್ಲಿ ಅರ್ಹ ಕುಟುಂಬಗಳಿಗೆ ಉಚಿತ ದೇಶೀಯ ಅನಿಲ ಸಿಲಿಂಡರ್ಗಳು ಮತ್ತು ಒಲೆಗಳನ್ನು ನೀಡಲಾಗುವುದು. ಹೊಸದಾಗಿ ರೂಪುಗೊಂಡ ಕುಟುಂಬಗಳು: ಈ ಯೋಜನೆಯು ಹೊಸದಾಗಿ ಮದುವೆಯಾದ ಕುಟುಂಬಗಳಿಗೆ ಮತ್ತು ಹೊಸದಾಗಿ ಸೇರಿದ ಕುಟುಂಬಗಳಿಗೆ ವಿಶೇಷವಾಗಿ ಪ್ರಯೋಜನಕಾರಿಯಾಗಿದೆ, ಈ ಕುಟುಂಬಗಳು ಈಗ ಉಜ್ವಲ ಯೋಜನೆ 2.0 ಅಡಿಯಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಒಲೆಗಳನ್ನು ಪಡೆಯಲು ನೋಂದಾಯಿಸಿಕೊಳ್ಳಬಹುದು. ಒಂದು ಬಾರಿಯ ಪ್ರಯೋಜನ: ಉಜ್ವಲ ಯೋಜನೆಯ ಲಾಭವನ್ನು ಪ್ರತಿ ಕುಟುಂಬಕ್ಕೆ ಒಮ್ಮೆ ಮಾತ್ರ ಪಡೆಯಬಹುದು. ನಿಮ್ಮ ಕುಟುಂಬದ ಯಾವುದೇ ಸದಸ್ಯರು ಈ ಹಿಂದೆ…

Read More

ಬೆಂಗಳೂರು : ಮಹಾತ್ಮ‌ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತೆ ಜಾರಿಗೆ ತರುವಂತೆ ಒತ್ತಾಯಿಸಿ ನಿರ್ಣಯ ಅಂಗೀಕರಿಸಲು ಶೀಘ್ರವೇ ವಿದಾನ ಮಂಡಲದ ವಿಶೇಷ ಅಧಿವೇಶನ ಕರೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಮನಮೋಹನ ಸಿಂಗ್ ಅವರು ಪ್ರಧಾನಿ ಆಗಿದ್ದಾಗ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಗೆ ತಂದು, ಕೋಟ್ಯಂತರ ಕುಟುಂಬಗಳಿಗೆ ಆರ್ಥಿಕ ಬಲ ನೀಡಿದರು. ಮನರೇಗಾ ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿಸುವ ಯೋಜನೆ. ದಲಿತರು, ಮಹಿಳೆಯರು, ರೈತರಿಗೆ ಉದ್ಯೋಗ ಒದಗಿಸುವುದು ಯೋಜನೆಯ ಉದ್ದೇಶ. ಇದರಿಂದ ವರ್ಷದಲ್ಲಿ ನೂರು ದಿನ ಕಡ್ಡಾಯವಾಗಿ ಉದ್ಯೋಗ ಸಿಗುತ್ತಿತ್ತು. ಈಗ ಈ ಉದ್ಯೋಗದ ಹಕ್ಕನ್ನೇ ಕಸಿಯುವ ಕೆಲಸಕ್ಕೆ ಕೇಂದ್ರ ಸರ್ಕಾರ ಕೈ ಹಾಕಿದೆ ಎಂದು ಹೇಳಿದ್ದಾರೆ. ಮಹಾತ್ಮ ಗಾಂಧಿಯವರ ಹೆಸರು ತೆಗೆದು ಗೊಂದಲ ಸೃಷ್ಟಿ ಮಾಡುವ ಹುನ್ನಾರ ಇದಾಗಿದೆ. ಈ ಮೂಲಕ ಮತ್ತೆ ಗಾಂಧಿಯವರನ್ನು ಕೊಲೆ ಮಾಡಲಾಗಿದೆ. ಯುಪಿಎ ಜಾರಿಗೆ ತಂದ ಕಾರ್ಯಕ್ರಮವನ್ನು ರದ್ದು ಮಾಡಿ ಉದ್ಯೋಗದ ಹಕ್ಕು ಕಸಿದುಕೊಂಡಿರುವುದು ಸಂವಿಧಾನ…

Read More

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿಗಳಲ್ಲಿ ಗ್ರಾಮೀಣ ಜನತೆಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ವಿವಿಧ ಸೇವೆಗಳನ್ನು ಒದಗಿಸಲಾಗುತ್ತಿದೆ. ಆ ಮೂಲಕ ಗ್ರಾಮೀಣ ಜನರು ತಾಲ್ಲೂಕು, ಜಿಲ್ಲಾ ಮಟ್ಟಕ್ಕೆ ಅಲೆಯುವುದನ್ನು ಸರ್ಕಾರ ತಪ್ಪಿಸಿದೆ. ಹಾಗಾದ್ರೇ ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ ಎನ್ನುವಂತೆ ರಾಜ್ಯದ ಗ್ರಾಮ ಪಂಚಾಯ್ತಿಗಳಲ್ಲಿ ಸಿಗುವಂತ ಸೇವೆಗಳ ಸಂಪೂರ್ಣ ಮಾಹಿತಿ ಮುಂದಿದೆ ಓದಿ ತಿಳಿದುಕೊಳ್ಳಿ. ಬಾಪೂಜಿ ಸೇವಾ ಕೇಂದ್ರ (ಬಿ.ಎಸ್.ಕೆ.)(bsk.karnataka.gov.in) ಗ್ರಾಮೀಣ ಜನತೆಗೆ ತಮ್ಮ ಸಾಮಾಜಿಕ, ಶೈಕ್ಷಣಿಕ, ವಾಣಿಜ್ಯ ಹಾಗೂ ಕೃಷಿ ಚಟುವಟಿಕೆಗಳಗಾಗಿ ವಿವಿಧ ಇಲಾಖೆಗಳಿಂದ ಹಲವಾರು ದಾಖಲೆಗಳು ಬೇಕಾಗುತ್ತವೆ. ಇವುಗಳನ್ನು ತ್ವರಿತವಾಗಿ ಒಂದೇ ಸೂರಿನಡಿ ಪಡೆದುಕೊಳ್ಳಲು ಅನುಕೂಲವಾಗುವಂತೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸ್ಥಾಪಿಸಿರುವ ಕೇಂದ್ರವೇ ‘ಬಾಪೂಜಿ ಸೇವಾ ಕೇಂದ್ರ’. ಪಂಚತಂತ್ರ, ನಾಡಕಛೇರಿ ತಂತ್ರಾಂಶ ಹಾಗೂ ಭೂಮಿ ತಂತ್ರಾಂಶಗಳನ್ನು ಸಮ್ಮಿಲನಗೊಳಸಿ ಗ್ರಾಮ ಪಂಚಾಯಿತಿಗಳು ಈ ಸೇವೆಯನ್ನು ನೀಡುತ್ತಿವೆ. ಈಗ ನೀಡುತ್ತಿರುವ 19 ಸೇವೆಗಳ ಜೊತೆಗೆ ಕಂದಾಯ ಇಲಾಖೆಯಿಂದ ಪಹಣಿ ಪತ್ರ ಒಳಗೊಂಡಂತೆ 40 ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲಾಗುತ್ತದೆ.ಇದರಿಂದ ಸಾರ್ವಜನಿಕರು ತಮ್ಮ ದಾಖಲೆಗಳಗಾಗಿ ಕಛೇರಿಯಿಂದ…

Read More

ಬೆಂಗಳೂರು: ತಾಂತ್ರಿಕ ಶಿಕ್ಷಣ, ಬಿಡಿಎ, ಬೆಂಗಳೂರು ಜಲಮಂಡಳಿ, ಕೆಎಸ್ ಡಿಎಲ್, ಕೃಷಿ ಮಾರಾಟ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನೇಮಕಾತಿಗೆ ಜನವರಿ 10 ಇಂದು ಮತ್ತು 11ರ ನಾಳೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಲಿಖಿತ ಪರೀಕ್ಷೆ ನಡೆಸುತ್ತಿದ್ದು, ಸಕಲ ಸಿದ್ಧತೆ ಮಾಡಿಕೊಂಡಿದೆ. ಜ.10ರ ಇಂದು ಬೆಂಗಳೂರು, ಕಲ್ಬುರ್ಗಿ ಮತ್ತು ಧಾರವಾಡದ 25 ಕೇಂದ್ರಗಳಲ್ಲಿ ನಡೆಯುವ ಪರೀಕ್ಷೆಯನ್ನು 9,936 ಮಂದಿ ಹಾಗೂ ಜ.11ರಂದು 12 ಜಿಲ್ಲೆಗಳ 259 ಕೇಂದ್ರಗಳಲ್ಲಿ ನಡೆಯುವ ಪರೀಕ್ಷೆಯನ್ನು 1.03 ಲಕ್ಷ ಮಂದಿ ಬರೆಯುತ್ತಿದ್ದಾರೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದರು. ಅತ್ಯಂತ ಪಾರದರ್ಶಕ ಹಾಗೂ ಅಕ್ರಮಗಳಿಗೆ ಅವಕಾಶ ಇಲ್ಲದಂತೆ ಪರೀಕ್ಷೆಗಳನ್ನು ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪರೀಕ್ಷಾ ಕೊಠಡಿಯಲ್ಲಿ ಸಿಸಿಟಿವಿ ಜತೆಗೆ ಜಾಮರ್ ಕೂಡ ಹಾಕಿದ್ದು, ಎಲೆಕ್ಟ್ರಾನಿಕ್ ವಸ್ತುಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಮುಖಚಹರೆ ಪತ್ತೆ ತಂತ್ರಜ್ಞಾನ ಬಳಸಿಯೇ ಅಭ್ಯರ್ಥಿಗಳನ್ನು ಪರೀಕ್ಷಾ ಕೇಂದ್ರದ ಒಳಗೆ ಬಿಡಲಾಗುತ್ತದೆ. ವಸ್ತ್ರ ಸಂಹಿತೆ ಇದ್ದು ಅಭ್ಯರ್ಥಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು…

Read More

ಬೆಂಗಳೂರು : ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಗೃಹ ಇಲಾಖೆಯು ಸಹಯೋಗದೊಂದಿಗೆ “ಅಕ್ಕ ಪಡೆ” ಎಂಬ ಒಂದು ನೂತನ ಯೋಜನೆಯನ್ನು ಜಾರಿಗೆ ತರಲಾಗಿದೆ. ರಾಜ್ಯದಲ್ಲಿ ಅಕ್ಕ ಪಡೆ ರಚನೆ ಮತ್ತು ಕಾರ್ಯ ವಿಧಾನಗಳ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಪ್ರಸ್ತುತ ಆಧುನಿಕ ಮತ್ತು ಮಾಹಿತಿ ತಂತ್ರಜ್ಞಾನ ಯುಗದಲ್ಲಿ ಮಹಿಳೆಯರು ಮತ್ತು ಮಕ್ಕಳ ವಿರುದ್ಧ ನಡೆಯುವ ದೌರ್ಜನ್ಯ (ಅತ್ಯಾಚಾರ, ಲೈಂಗಿಕ ಕಿರುಕುಳ, ಮಾನವ ಕಳ್ಳ ಸಾಗಣೆ, ವರದಕ್ಷಿಣೆ ಕಿರುಕುಳ, ಬಾಲ್ಯ ವಿವಾಹ & ಪೋಕ್ಸ್) ಅಂತಹ ಪ್ರಕರಣಗಳಿಂದ ಮಹಿಳೆಯರು ಮತ್ತು ಮಕ್ಕಳ ಮೇಲೆ ಮಾನಸಿಕ, ದೈಹಿಕವಾಗಿ ಮತ್ತು ಸಾಮಾಜಿಕವಾಗಿ ಹಿಂಸೆಗೊಳಪಟ್ಟಿರುತ್ತಾರೆ.. ಆದುದರಿಂದ ಕರ್ನಾಟಕ ರಾಜ್ಯ ಸರ್ಕಾರವು ಮಹಿಳೆಯರು ಮತ್ತು ಮಕ್ಕಳ ವಿರುದ್ಧ ಪ್ರಖರವಾಗಿ ನಡೆಯುವ ಅಪರಾಧಗಳ ಬಗ್ಗೆ ಕಾನೂನು ಅರಿವು & ಜಾಗೃತಿ ಮೂಡಿಸಲು ಶಿಕ್ಷಣ ನೀಡುವುದು, ಜೊತೆಗೆ ಸಂಕಷ್ಟದಲ್ಲಿ ಇರುವ ಮಹಿಳಾ ಮತ್ತು…

Read More

ರಾಮನಗರ: ಇಂದಿರಾ ಕಿಟ್ ಸೌಲಭ್ಯ ಮುಂದಿನ ಯುಗಾದಿ ಹಬ್ಬದ ವೇಳೆಗೆ ಜನರಿಗೆ ಸಿಗಲಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ  ಯಲುವಳ್ಳಿ ಎನ್. ರಮೇಶ್ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ನಡೆದ “ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ”ಯ ಅಧ್ಯಕ್ಷತೆ ವಹಿಸಿ ಪ್ರಗತಿ ಪರಿಶೀಲನೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಒಬ್ಬ ವ್ಯಕ್ತಿಗೆ 10 ಕೆ.ಜಿ. ಅಕ್ಕಿಯನ್ನು ಕೊಟ್ಟರೆ ಒಂದು ಕುಟುಂಬಕ್ಕೆ 30 ರಿಂದ 40 ಕೆ.ಜಿ. ಅಕ್ಕಿ ಮಾಸಿಕ ಸಿಗುವುದರಿಂದ ಅಷ್ಟು ಪ್ರಮಾಣದ ಅಕ್ಕಿಯನ್ನು ಜನರು ಸದುಪಯೋಗಪಡಿಸಿಕೊಳ್ಳುತ್ತಿಲ್ಲ, ದುರ್ಬಳಕೆಗೆ ಅವಕಾಶವಾಗುತ್ತದೆ. ಕೆಲವರು ಅವಶ್ಯಕತೆಗಿಂತ ಹೆಚ್ಚಿಗೆ ಅನ್ನ ಮಾಡಿ ನಾಯಿಗಳಿಗೆ ಅನ್ನ ಹಾಕುವುದನ್ನು ನನ್ನ ಸ್ವಗ್ರಾಮದಲ್ಲೆ ಗಮನಿಸಿದ್ದೇನೆ. ಈ ಬಗ್ಗೆ ದೃಶ್ಯಾವಳಿಗಳನ್ನು ಮಾಡಿಕೊಂಡು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಗಮನಕ್ಕೆ ನಾನು ತಂದಿದ್ದೆ ಇದನ್ನು ಪರಿಗಣಿಸಿದ ಸಮಿತಿಯು ಈ ಮಾಹೆಯಿಂದ ಇಂದಿರಾ ಕಿಟ್ ಸೌಲಭ್ಯ ಜನರಿಗೆ ನೀಡಲು ನಿರ್ಧಾರ ಮಾಡಲಾಗಿತ್ತು ಆದರೆ ಅನಿವಾರ್ಯ…

Read More