Subscribe to Updates
Get the latest creative news from FooBar about art, design and business.
Author: kannadanewsnow57
ಪಿರಿಯಾಪಟ್ಟಣ : ರಾಜ್ಯದಲ್ಲಿ ಮತ್ತೊಂದು ಘೋರ ದುರಂತವೊಂದು ನಡೆದಿದ್ದು, ಡೆತ್ ನೋಟ್ ಬರೆದಿದ್ದು ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಎಚ್.ಮಠದ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಗಂಡ, ಅತ್ತೆ, ಮೈದುನ ಕಿರುಕುಳ ನೀಡುತ್ತಿದ್ದರು ಎಂದು ಡೆತ್ ನೋಟ್ ಬರೆದಿಟ್ಟು ತಾಯಿ ತನ್ನ ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಚ್.ಮಠದ ಕೊಪ್ಪಲು ಗ್ರಾಮದ ನಿವಾಸಿ ಮಹದೇವ ಎಂಬುವರ ಪತ್ನಿ ಹೇಮಲತಾ (38), ಮಗಳು ಅನು (15) ಮಗ ಚೇತನ್ (13) ಮೃತಪಟ್ಟವರು. ಮನೆಯ ತಂಬಾಕು ಬ್ಯಾರನ್ ಪೋಲ್ ನಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿವೆ. ಹೇಮಲತಾ ಡೆತ್ ನೋಟ್ಬರೆದಿದ್ದು, ಅದರಲ್ಲಿ ಗಂಡ ಮಹದೇವ, ಮೈದುನ, ಅತ್ತೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ. ಘಟನೆ ಸಂಬಂಧ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ 2 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾನುವಾರದಿಂದಲೇ ಮೋಡ ಕವಿದ ವಾತಾವರಣ ಕಾಣಿಸಿಕೊಂಡಿದ್ದು, ಕೆಲ ಭಾಗಗಳಲ್ಲಿ ತುಂತುರು ಮಳೆಯಾಗಿದೆ. ಜ.26, 27ರಂದು ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇನ್ನು ರಾಜ್ಯದಲ್ಲಿ ಇಳಿಮುಖವಾಗಿದ್ದ ಚಳಿ 2 ದಿನದಿಂದ ಮತ್ತೆ ಹೆಚ್ಚಳವಾಗಿದೆ. ಮೋಡ ಕವಿದ ವಾತಾವರಣ, ತಂಪಾದ ಗಾಳಿ ಬೀಸುತ್ತಿರುವುದು ಸೇರಿ ಇತರ ಕಾರಣಗಳು ಚಳಿ ತೀವ್ರತೆಯನ್ನು ಮತ್ತಷ್ಟು ಹೆಚ್ಚಿಸಿದೆ.
ನವದೆಹಲಿ : ಇಂದು ರಾಷ್ಟ್ರವು ತನ್ನ 77 ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. ನವದೆಹಲಿಯ ಕರ್ತವ್ಯ ಪಥದಿಂದ ರಾಷ್ಟ್ರದ ನೇತೃತ್ವವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ವಹಿಸಲಿದ್ದಾರೆ. ಗಣರಾಜ್ಯೋತ್ಸವದ ಮೆರವಣಿಗೆ ಬೆಳಿಗ್ಗೆ 10:30 ಕ್ಕೆ ಪ್ರಾರಂಭವಾಗಿ ಸುಮಾರು 90 ನಿಮಿಷಗಳ ಕಾಲ ನಡೆಯಲಿದೆ. ಕರ್ತವ್ಯ ಪಥದಲ್ಲಿ ನಡೆಯುವ ಗಣರಾಜ್ಯೋತ್ಸವದ ಮೆರವಣಿಗೆ ಭಾರತದ ಸಾಂಸ್ಕೃತಿಕ ವೈವಿಧ್ಯತೆ ಮತ್ತು ಮಿಲಿಟರಿ ಪರಾಕ್ರಮದ ವಿಶಿಷ್ಟ ಮಿಶ್ರಣವಾಗಿರುತ್ತದೆ. ಈ ವರ್ಷದ ವಿಷಯ ‘ಸ್ವತಂತ್ರ ಕಾ ಮಂತ್ರ: ವಂದೇ ಮಾತರಂ’ ಮತ್ತು ‘ಸಮೃದ್ಧಿ ಕಾ ಮಂತ್ರ: ಆತ್ಮನಿರ್ಭರ ಭಾರತ’. ಗಣರಾಜ್ಯೋತ್ಸವದ ಮೆರವಣಿಗೆ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಪುಷ್ಪಗುಚ್ಛ ಇಡುವುದರೊಂದಿಗೆ ಪ್ರಾರಂಭವಾಗುತ್ತದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಕರ್ತವ್ಯ ಪಥಕ್ಕೆ ಆಗಮಿಸಲಿದ್ದು, ಸಶಸ್ತ್ರ ಪಡೆಗಳು, ಅರೆಸೈನಿಕ ಪಡೆಗಳು, ಸಹಾಯಕ ನಾಗರಿಕ ಪಡೆಗಳು, ಎನ್ಸಿಸಿ ಮತ್ತು ಎನ್ಎಸ್ಎಸ್ನ ಘಟಕಗಳನ್ನು ಒಳಗೊಂಡ ವಿಧ್ಯುಕ್ತ ಮೆರವಣಿಗೆಯ ಸಮಯದಲ್ಲಿ ಗೌರವ ವಂದನೆ ಸ್ವೀಕರಿಸಲಿದ್ದಾರೆ. ಯುರೋಪಿಯನ್ ಕೌನ್ಸಿಲ್ನ ಅಧ್ಯಕ್ಷೆ ಆಂಟೋನಿಯೊ ಕೋಸ್ಟಾ ಮತ್ತು ಯುರೋಪಿಯನ್ ಆಯೋಗದ…
ನವದೆಹಲಿ: ಬಿಸಿಸಿಐನ ಮಾಜಿ ಅಧ್ಯಕ್ಷ ಮತ್ತು ಅನುಭವಿ ಕ್ರಿಕೆಟ್ ಆಡಳಿತಗಾರ ಇಂದರ್ಜಿತ್ ಸಿಂಗ್ ಬಿಂದ್ರಾ ಭಾನುವಾರ ಸಂಜೆ ನವದೆಹಲಿಯ ತಮ್ಮ ನಿವಾಸದಲ್ಲಿ ನಿಧನರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು. ದಶಕಗಳ ಕಾಲ ಭಾರತೀಯ ಕ್ರಿಕೆಟ್ ಆಡಳಿತದಲ್ಲಿ ಅತ್ಯುನ್ನತ ವ್ಯಕ್ತಿಯಾಗಿದ್ದ ಬಿಂದ್ರಾ, ಮಧ್ಯಾಹ್ನದ ಆರಂಭದಲ್ಲಿ ಅವರ ಆರೋಗ್ಯ ಹದಗೆಟ್ಟ ನಂತರ ಸಂಜೆ 6:30 ರ ಸುಮಾರಿಗೆ ಕೊನೆಯುಸಿರೆಳೆದರು ಎಂದು ಬಹು ವರದಿಗಳು ತಿಳಿಸಿವೆ.ಅವರ ಅಂತ್ಯಕ್ರಿಯೆ ಸೋಮವಾರ ನವದೆಹಲಿಯ ಲೋಧಿ ಚಿತಾಗಾರದಲ್ಲಿ ನಡೆಯಲಿದೆ. ಬಿಂದ್ರಾ ಭಾರತೀಯ ಕ್ರಿಕೆಟ್ ಕಂಡ ಅತ್ಯಂತ ಪ್ರಭಾವಶಾಲಿ ಆಡಳಿತಗಾರರಲ್ಲಿ ಒಬ್ಬರು. ಅವರು 1993 ರಿಂದ 1996 ರವರೆಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು ಮತ್ತು ದೇಶದಲ್ಲಿ ಕ್ರೀಡೆಯ ಆಧುನಿಕ ಆಡಳಿತ ರಚನೆಯನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಐಸಿಸಿ ಅಧ್ಯಕ್ಷ ಜಯ್ ಶಾ ಸಂತಾಪ ಐಸಿಸಿ ಅಧ್ಯಕ್ಷ ಜಯ್ ಶಾ ತಮ್ಮ ಹೃತ್ಪೂರ್ವಕ ಸಂತಾಪವನ್ನು ಹಂಚಿಕೊಂಡರು, “ಬಿಸಿಬಿಐನ ಮಾಜಿ ಅಧ್ಯಕ್ಷ ಮತ್ತು ಭಾರತೀಯ ಕ್ರಿಕೆಟ್…
ಬೆಂಗಳೂರು : ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್.ಕೆ.ಜಿ.,ಯುಕೆಜಿ, ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯಪುಸ್ತಕ ವಿತರಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿಗಳು, ಎಲ್.ಕೆ.ಜಿ., ಯುಕೆಜಿ ಮಕ್ಕಳಿಗೆ ಸರ್ಕಾರದಿಂದ ಉಚಿತವಾಗಿ ಪಠ್ಯಪುಸ್ತಕ ವಿತರಿಸಲಾಗುವುದು. ಈಗಾಗಲೇ 1-10ನೇ ತರಗತಿ ಮಕ್ಕಳಿಗೆ ಉಚಿತ ಪಠ್ಯ ಪುಸ್ತಕ ನೀಡಲಾಗುತ್ತಿದೆ. ಮುಂದಿನ ಶೈಕ್ಷಣಿಕ ಸಾಲಿನಿಂದ ಉಚಿತ ನೋಟ್ ಪುಸ್ತಕಗಳನ್ನು ನೀಡಲು ತೀರ್ಮಾನಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಅಂತಿಮಗೊಳಿಸಲಾಗುವುದು ಎಂದು ಹೇಳಿದ್ದಾರೆ. ನಿಗದಿತ ವೇಳಾಪಟ್ಟಿಯಂತೆ ಎಸ್ ಎಸ್ ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಫಲಿತಾಂಶ ಹೆಚ್ಚಳಕ್ಕೆ ಹಲವು ಕ್ರಮ ಕೈಗೊಳ್ಳಲಾಗಿದೆ. ಸಂಪನ್ಮೂಲ ವ್ಯಕ್ತಿಗಳ ಮೂಲಕ ಮಕ್ಕಳಿಗೆ ಮಾರ್ಗದರ್ಶನ ನೀಡಲಾಗಿದೆ ಎಂದು ಹೇಳಿದ್ದಾರೆ. 4 ಸಾವಿರ ಬೋಧಕರಿಗೆ ಬಡ್ತಿ ಭಾಗ್ಯ ರಾಜ್ಯದಲ್ಲಿ 2017ರಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರು 1-5 ನೇ ತರಗತಿಗೆ ಮಾತ್ರ ಪಾಠ…
ಬೆಂಗಳೂರು : ರಾಜ್ಯ ಜನತೆಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ದರಖಾಸ್ತು, ಪೋಡಿ ಪ್ರಕರಣಗಳ ಶೀಘ್ರ ವಿಲೇವಾರಿಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ದರಖಾಸ್ತು, ಪೋಡಿ ಪ್ರಕರಣಗಳ ಶೀಘ್ರ ವಿಲೇವಾರಿಗೆ ಸರ್ಕಾರ ಕೈಗೊಂಡ ಕ್ರಮಗಳು ಈ ಕೆಳಕಂಡಂತಿವೆ: 1) ಇಲಾಖೆಯಲ್ಲಿ ಅಳತೆ ಕೋರಿ ಸ್ವೀಕೃತವಾಗುವ ಎಲ್ಲಾ ಅರ್ಜಿಗಳನ್ನು ಮೋಜಿಣಿ ತಂತ್ರಾಂಶದ ಮುಖಾಂತರ ಆನ್ ಲೈನ್ ನಲ್ಲಿ ಸ್ವೀಕರಿಸಲಾಗುತ್ತಿದ್ದು ತಂತ್ರಾಂಶದ ಪ್ರತಿ ಹಂತದಲ್ಲಿಯೂ FIFO (ಸರದಿ ಸಾಲಿನಂತೆ) ಅಳವಡಿಸಲಾಗಿದೆ. ಸರದಿ ಸಾಲಿನಂತೆ ಅಳತೆಗಾಗಿ ಭೂಮಾಪಕರಿಗೆ ತಂತ್ರಾಂಶದ ಮೂಲಕ ಆನ್ಲೈನ್ ನಲ್ಲಿ ವಿತರಿಸಲಾಗುತ್ತಿದೆ. ಪ್ರಕರಣದಲ್ಲಿ ಅಳತೆಯಾದ ನಂತರ ಭೂಮಾಪಕರುಗಳಿಗೆ ಕಡತಗಳು ಹಂಚಿಕೆಯಾದಂತೆ ಸರದಿ ಸಾಲಿನಂತೆ ಆನ್ಲೈನ್ ನಲ್ಲಿ ಅಪ್ಲೋಡ್ ಮಾಡಲು ಹಾಗೂ ಅಪ್ಲೋಡ್ ಮಾಡಿರುವ ಕಡತಗಳ ಪರಿಶೀಲನೆ ಮತ್ತು ಅನುಮೋದನೆಯನ್ನು ಸಹಾ ತಂತ್ರಾಂಶದ ಮುಖಾಂತರ ಆನ್ಲೈನ್ ನಲ್ಲೇ ಸರದಿ ಸಾಲಿನಂತೆ ನಿರ್ವಹಿಸುವ ಮೂಲಕ ಪ್ರಕರಣಗಳ ವಿಲೆವಾರಿ ಯಲ್ಲಿ ಯಾವುದೇ ವಿಳಂಬಕ್ಕೆ ಅವಕಾಶವಿಲ್ಲದಂತೆ ಕ್ರಮವಹಿಸಲಾಗುತ್ತಿದೆ. ಇಂತಹ ಪ್ರಕರಣಗಳ ಪೈಕಿ ದರಖಾಸ್ತು ಪೋಡಿ ಪ್ರಕರಣಗಳನ್ನು ಪ್ರತ್ಯೇಕಿಸಿ, ಪ್ರತ್ಯೇಕವಾಗಿ…
ಬೆಂಗಳೂರು: ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆ 2 ಮತ್ತು 3ರ ಸಮಯವನ್ನು ಬೆಳಿಗ್ಗೆ 11 ಗಂಟೆಗೆ ಆರಂಭಿಸುವುದಾಗಿ ಹೇಳಿದ್ದ ಶಾಲಾ ಶಿಕ್ಷಣ ಇಲಾಖೆ ಸಮಯವನ್ನು ಪರಿಷ್ಕರಿಸಿದ್ದು, ಬೆಳಗ್ಗೆ 10.30 ರಿಂದ ಪೂರ್ವ ಸಿದ್ಧತಾ ಪರೀಕ್ಷೆ ಆರಂಭಿಸುವಂತೆ ಸುತ್ತೋಲೆ ಹೊರಡಿಸಿದೆ. ಬೆಳಗ್ಗೆ 11 ಗಂಟೆಗೆ ಪರೀಕ್ಷೆ ಆರಂಭಿಸುವುದರಿಂದ ಭೋಜನ ಸಮಯಕ್ಕೆ ತೊಡಕಾಗುತ್ತದೆ ಎನ್ನುವ ಕಾರಣಕ್ಕೆ ಸಮಯ ಪರಿಷ್ಕರಣೆ ಮಾಡಲಾಗಿದೆ. ಪರೀಕ್ಷೆಯ ದಿನದಂದು ವಿದ್ಯಾರ್ಥಿಗಳು 9 ಗಂಟೆಗೆ ತರಗತಿಗೆ ಹಾಜರಾಗಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಬೆಳಗ್ಗೆ 9:15ಕ್ಕೆ ಪ್ರಶ್ನೆ ಪತ್ರಿಕೆಯನ್ನು ಶಾಲಾ ಲಾಗಿನ್ ನಿಂದ ಡೌನ್ಲೋಡ್ ಮಾಡಿಕೊಳ್ಳಬೇಕು. 9:15 ರಿಂದ 10 20 ರವರೆಗೆ ಪ್ರಶ್ನೆ ಪತ್ರಿಕೆ ಮುದ್ರಣ ಮಾಡಿಕೊಳ್ಳಬೇಕು. ಬೆಳಿಗ್ಗೆ 10.30 ರಿಂದ ಪರೀಕ್ಷೆ ಆರಂಭಿಸಬೇಕು ಎಂದು ತಿಳಿಸಲಾಗಿದೆ. ಏನಿದೆ ಶಿಕ್ಷಣ ಇಲಾಖೆ ಆದೇಶದಲ್ಲಿ? 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪೂರ್ವ ಸಿದ್ದತಾ ಪರೀಕ್ಷೆ-2 ಮತ್ತು 3 ನ್ನು ನಡೆಸಲು ಉಲ್ಲೇಖ(1) ರಲ್ಲಿನ ಪ್ರಮಾಣಿತ ಕಾರ್ಯಾಚರಣಾ…
ಭಾರತೀಯ ಅಂಚೆ ಇಲಾಖೆ (ಇಂಡಿಯಾ ಪೋಸ್ಟ್) ದೇಶಾದ್ಯಂತ ಗ್ರಾಮೀಣ ಡಾಕ್ ಸೇವಕ್ (ಜಿಡಿಎಸ್) ಹುದ್ದೆಗಳ ನೇಮಕಾತಿಗಾಗಿ ಬೃಹತ್ ಅಧಿಸೂಚನೆಯನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಒಟ್ಟು 28,740 (ನಿರೀಕ್ಷಿತ) ಹುದ್ದೆಗಳ ಭರ್ತಿಗೆ ಜನವರಿ 31 ರಂದು ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗುವುದು ಎಂದು ಅದು ಪ್ರಕಟಿಸಿದೆ. ಒಟ್ಟು ಹುದ್ದೆಗಳು: 28,740 (ಅಂದಾಜು) ಹುದ್ದೆಗಳ ಹೆಸರು: ಗ್ರಾಮೀಣ ಡಾಕ್ ಸೇವಕ್ (ಜಿಡಿಎಸ್), ಬ್ರಾಂಚ್ ಪೋಸ್ಟ್ ಮಾಸ್ಟರ್ (ಬಿಪಿಎಂ), ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ (ಎಬಿಪಿಎಂ). ಆಯ್ಕೆ ಪ್ರಕ್ರಿಯೆ: ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. 10 ನೇ ತರಗತಿಯಲ್ಲಿ ಪಡೆದ ಅಂಕಗಳ (ಮೆರಿಟ್) ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ತರಗತಿ ಉತ್ತೀರ್ಣರಾಗಿರಬೇಕು. ವಯೋಮಿತಿ: ಅಭ್ಯರ್ಥಿಗಳು 18 ರಿಂದ 40 ವರ್ಷ ವಯಸ್ಸಿನವರಾಗಿರಬೇಕು. (ನಿಯಮಗಳ ಪ್ರಕಾರ ಎಸ್ಸಿ, ಎಸ್ಟಿ ಮತ್ತು ಬಿಸಿಗಳಿಗೆ ವಯಸ್ಸಿನ ಸಡಿಲಿಕೆ ನೀಡಲಾಗುತ್ತದೆ). ಅಧಿಸೂಚನೆ ಮತ್ತು ಅರ್ಜಿ ಸಲ್ಲಿಕೆ ಆರಂಭ: ಜನವರಿ 31, 2026.…
ಈ ವರ್ಷ, ಭಾರತವು ತನ್ನ 77ನೇ ಗಣರಾಜ್ಯೋತ್ಸವವನ್ನು 2026ರ ಜನವರಿ 26ರ ಸೋಮವಾರದಂದು ಆಚರಿಸಲಿದೆ. ದ್ವಿತೀಯ ಮಹಾಯುದ್ಧದ ಸಮಯದಲ್ಲಿ ಜಪಾನ್ ಮಿತ್ರಪಡೆಗಳಿಗೆ ಶರಣಾದ ಎರಡನೇ ವಾರ್ಷಿಕೋತ್ಸವದ ನೆನಪಿಗಾಗಿ ಲಾರ್ಡ್ ಲೂಯಿಸ್ ಮೌಂಟ್ಬ್ಯಾಟನ್ ಅವರು ನಿಗದಿಪಡಿಸಿದ ದಿನಾಂಕದಂತೆ, ಭಾರತವು ಆಗಸ್ಟ್ 15, 1947 ರಂದು ಸ್ವಾತಂತ್ರ್ಯವನ್ನು ಪಡೆಯಿತು. ಸ್ವಾತಂತ್ರ್ಯ ಬಂದ ನಂತರ ಭಾರತಕ್ಕೆ ತನ್ನದೇ ಆದ ಸಂವಿಧಾನವಿರಲಿಲ್ಲ. ಅಂದಿನ ಕಾನೂನುಗಳು ಸಾಮಾನ್ಯ ಕಾನೂನು ವ್ಯವಸ್ಥೆ ಮತ್ತು ಬ್ರಿಟಿಷ್ ಸರ್ಕಾರದ “ಭಾರತ ಸರ್ಕಾರದ ಕಾಯ್ದೆ, 1935” ರ ಮಾರ್ಪಡಿಸಿದ ಆವೃತ್ತಿಯನ್ನು ಆಧರಿಸಿದ್ದವು. ಸುಮಾರು ಎರಡು ವಾರಗಳ ನಂತರ, ಭಾರತೀಯ ಸಂವಿಧಾನವನ್ನು ರೂಪಿಸಲು ಡಾ. ಬಿ.ಆರ್. ಅಂಬೇಡ್ಕರ್ ಅವರ ಅಧ್ಯಕ್ಷತೆಯಲ್ಲಿ ಕರಡು ಸಮಿತಿಯನ್ನು ರಚಿಸಲಾಯಿತು. ಭಾರತೀಯ ಸಂವಿಧಾನವು ಅಂತಿಮವಾಗಿ ನವೆಂಬರ್ 26, 1949 ರಂದು ಪೂರ್ಣಗೊಂಡು ಅಂಗೀಕರಿಸಲ್ಪಟ್ಟಿತು. ಈ ದಿನವನ್ನು ನಾವು “ಸಂವಿಧಾನ ದಿನ” ಎಂದು ಆಚರಿಸುತ್ತೇವೆ. ಸಂವಿಧಾನವು ಎರಡು ತಿಂಗಳ ನಂತರ, ಅಂದರೆ ಜನವರಿ 26, 1950 ರಂದು ಜಾರಿಗೆ ಬಂದಿತು. ಭಾರತದ ಸಂವಿಧಾನವು…
ಬೆಂಗಳೂರು : ಗಣರಾಜ್ಯೋತ್ಸವ ಧ್ವಜಾರೋಹಣ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಧ್ವಜ ಕಂಬಕ್ಕೆ ಹತ್ತಿಸುವಂತಿಲ್ಲ ಎಂದು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಹಿಂದೆ ಗಣರಾಜ್ಯೋತ್ಸವ ಧ್ವಜಾರೋಹಣ ಸಂದರ್ಭ ಧ್ವಜಸ್ತಂಭದಲ್ಲಿ ಸಿಲುಕಿದ ಧ್ವಜ ಬಿಡಿಸಲು ಕಂಬವನ್ನೇರಿದಾಗ ಸಂಭವಿಸಿದಂತಹ ಅವಘಡಗಳ ತಡೆಯಲು ವಿದ್ಯಾರ್ಥಿಗಳಿಂದ ಕಂಭ ಹತ್ತಿಸುವುದಕ್ಕೆ ನಿರ್ಬಂಧ ಹೇರಿ ಶಿಕ್ಷಣ ಇಲಾಖೆಯು ಸುತ್ತೋಲೆ ಹೊರಡಿಸಿದೆ. ಮಕ್ಕಳ ಕವಾಯತು, ಪಥ ಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮಗಳ ವೇಳೆ ಪಾಲಿಸಬೇಕಾದ ಅಂಶಗಳು ವಿದ್ಯುತ್ ಸಂಪರ್ಕ ಜಾಲದ ಬಗ್ಗೆ ವಿಶೇಷ ನಿಗಾ ಇಡಬೇಕು. ಸುವ್ಯವಸ್ಥಿತ ವಾಹನಗಳನ್ನು ಬಳಸಬೇಕು. ಚಾಲಕರು ಮದ್ಯಪಾನ ಮಾಡಿಲ್ಲ ಎನ್ನುವುದನ್ನು ಖಚಿತಪಡಿಸಿಕೊಳ್ಳಬೇಕು. ವೇಗ ಮಿತಿಯ ಮೇಲೆ ನಿಗಾವಹಿಸಬೇಕು. ವಾಹನಗಳ ನಿಲುಗಡೆ ಕಾರ್ಯಕ್ರಮ ನಡೆಯುವ ಸ್ಥಳದಿಂದ 100 ಮೀಟರ್ ಅಂತರದಲ್ಲಿರಬೇಕು. ತುರ್ತು ಪರಿಸ್ಥಿತಿ ಎದರಿಸಲು ಮಕ್ಕಳಿಗೆ ಅಗತ್ಯ ತರಬೇತಿ, ಜಾಗೃತಿ ಮೂಡಿಸಬೇಕು. ಮಕ್ಕಳ ಕಾರ್ಯಕ್ರಮ ಕುರಿತು ಸ್ಥಳೀಯ ಸಂಸ್ಥೆಗಳು, ಪೊಲೀಸ್, ವೈದ್ಯಕೀಯ, ಅಗ್ನಿಶಾಮಕ ಸೇವೆಗಳಿಗೆ ಮಾಹಿತಿ ನೀಡಬೇಕು. ಮಕ್ಕಳಿಗೆ ನೀಡುವ ಆಹಾರ ಪದಾರ್ಥಗಳನ್ನು ಪರಿಶೀಲನೆಗೆ ಒಳಪಡಿಸಬೇಕು. ಶಾಲಾಭಿವೃದ್ಧಿ ಸಮಿತಿಯ ಸದಸ್ಯರನ್ನು…














