Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ರಾಯಚೂರು ಜಿಲ್ಲೆ ತಾಲ್ಲೂಕಿನಲ್ಲಿ ನೂತನ ಜವಳಿ ಪಾರ್ಕನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವ(ಪಿಪಿಪಿ) ಮಾದರಿಯಲ್ಲಿ ಒಟ್ಟು 24.50 ಕೋಟಿಗಳ ಮೊತ್ತದಲ್ಲಿ ಅಭಿವೃದ್ಧಿಪಡಿಸಲು ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ 17-07-2025 ರಂದು ನಡೆದ ಸಚಿವ ಸಂಪುಟಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು ಈ ಕೆಳಗಿನಂತಿವೆ· ರಾಯಚೂರು ಜಿಲ್ಲೆ ತಾಲ್ಲೂಕಿನಲ್ಲಿ ನೂತನ ಜವಳಿ ಪಾರ್ಕನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವ(ಪಿಪಿಪಿ) ಮಾದರಿಯಲ್ಲಿ ಒಟ್ಟು 24.50 ಕೋಟಿಗಳ ಮೊತ್ತದಲ್ಲಿ ಅಭಿವೃದ್ಧಿಪಡಿಸಲು ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ. · ಕರ್ನಾಟಕ ರಾಜ್ಯದಲ್ಲಿ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪಿಸಲು ತಾತ್ವಿಕ ಅನುಮೋದನೆ ಹಾಗೂ ಎನ್ ಟಿಪಿಸಿ ಸಂಸ್ಥೆಯು ಕರ್ನಾಟಕದಲ್ಲಿ ಪರಮಾಣು ವಿದ್ಯುತ್ ಸ್ಥಾಪನೆಗೆ ಗುರುತಿಸಿರುವ ಸಂಭಾವ್ಯ ಸ್ಥಳಗಳ್ಲಿ ಪ್ರಾಥಮಿಕ ಅಧ್ಯಯನ ನಡೆಸಲು ಅನುಮತಿ ನೀಡಲು ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. · ಆಯುಷ್ ಇಲಾಖೆಯ ಆಯುರ್ವೇದ, ಸಿದ್ದ ಮತ್ತು ಯುನಾನಿ ಔಷಧಗಳ ಅಮಲುಜಾರಿ ವಿಭಾಗ ಹಾಗೂ ಪರೀಕ್ಷಾ ಪ್ರಯೋಗಾಲಯವನ್ನು ಆಹಾರ ಸುರಕ್ಷತೆ ಮತ್ತು ಔಷಧ…
ಬೀದರ್: ರಾಜ್ಯದ ಬಿಜೆಪಿಯ ಮಾಜಿ ಸಚಿವ ಪ್ರಭು ಚವ್ಹಾಣ್ ಪುತ್ರನ ವಿರುದ್ಧ ಮದುವೆಯಾಗುವುದಾಗಿ ನಂಬಿಸಿ ವಂಚನೆ ಮಾಡಿದ ಸಂಬಂಧ ರಾಜ್ಯ ಮಹಿಳಾ ಆಯೋಗಕ್ಕೆ ಯುವತಿ ದೂರು ನೀಡಿದ್ದಾರೆ. ಬಿಜೆಪಿ ಮಾಜಿ ಸಚಿವ ಪ್ರಭು ಚವ್ಹಾಣ್ ಪತ್ರ ಪ್ರತೀಕ್ ಚವ್ಹಾಣ್ ಹಾಗೂ ಯುವತಿಯ ಜೊತೆಗೆ 2 ವರ್ಷಗಳ ಹಿಂದೆ ಮದುವೆಗೆ ನಿಶ್ಚಿತಾರ್ಥ ನೆರವೇರಿತ್ತು. ಆ ಬಳಿಕ ಮದುವೆಯಾಗಲು ವಿಳಂಬ ಮಾಡಲಾಗಿತ್ತು. ಎರಡು ಮನೆಯ ಕುಟುಂಬಸ್ಥರು ಒಪ್ಪಿ ಪ್ರತೀಕ್ ಚವ್ಹಾಣ್ ಹಾಗೂ ಯುವತಿಯ ನಿಶ್ಚಿತಾರ್ಥ ನೆರವೇರಿಸಿದ್ದರು. ಈ ಬಳಿಕ ಪ್ರತೀಕ್ ಯುವತಿಯೊಂದಿಗೆ ದೈಹಿಕ ಸಂಪರ್ಕವನ್ನು ಬೆಳೆಸಿದ್ದರು ಎಂಬುದಾಗಿ ದೂರಿನಲ್ಲಿ ಆರೋಪಿಸಲಾಗಿದೆ. ನಿಶ್ಚಿತಾರ್ಥದ ಬಳಿಕ ದೈಹಿಕ ಸಂಪರ್ಕವನ್ನೂ ಬೆಳಸಿದಂತ ಮಾಜಿ ಸಚಿವ ಪ್ರಭು ಚವ್ಹಾಣ್ ಅವರ ಪುತ್ರ ಪ್ರತೀಕ್ ಚೌವ್ಹಾಣ್ ಮದುವೆಯಾಗಲು ವಿಳಂಬ ಮಾಡುತ್ತಿದ್ದಾರೆ. ಈ ಮೂಲಕ ತಮಗೆ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾರೆ. ಈ ಬಗ್ಗೆ ಪೊಲೀಸರಿಗೆ ದೂರು ಸ್ವೀಕರಿಸದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬುದಾಗಿ ದೂರಿನಲ್ಲಿ ಸಂತ್ರಸ್ತೆ ಉಲ್ಲೇಖಿಸಿದ್ದಾರೆ. ತಾನು ಬೀದರ್ ಜಿಲ್ಲೆಯ ಹೊಕ್ರಾಣೆ…
ಬೆಂಗಳೂರು : ರಾಜ್ಯದ “ ಸರ್ಕಾರಿ ಶಾಲೆ ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳ ಆಸ್ತಿ ಸಂರಕ್ಷಣಾ ಅಭಿಯಾನ / ಆಂದೋಲನ “ವನ್ನು ಜುಲೈ – 2025 ರಿಂದ ಸೆಪ್ಟೆಂಬರ್-2025 ರವರೆಗಿನ ತ್ರೈಮಾಸಿಕ ಅವಧಿಯಲ್ಲಿ ಹಮ್ಮಿಕೊಳ್ಳುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಸರ್ಕಾರಿ ಶಾಲೆಗಳಿಗೆ ಸರ್ಕಾರದಿಂದ ಮಂಜೂರಾಗಿರುವ ಜಾಗಗಳು, ಜಮೀನುಗಳು ಹಾಗೂ ಅನೇಕ ದಾನಿಗಳು, ಶಿಕ್ಷಣ ಪ್ರೇಮಿಗಳು ಸರ್ಕಾರಿ ಶಾಲೆಗಳಿಗೆ ದಾನವಾಗಿ ನೀಡಿರುವ ನಿವೇಶನ, ಜಾಗ, ಜಮೀನು ಆಯಾ ಸರ್ಕಾರಿ ಶಾಲೆಯ ಹೆಸರಿಗೆ ಖಾತೆ ಆಗದೇ ಕೆಲವು ಸಂದರ್ಭಗಳಲ್ಲಿ ಒತ್ತುವರಿಗೊಂಡು, ಅತಿಕ್ರಮಣಗೊಂಡು ಸರ್ಕಾರಿ ಶಾಲಾ ಆಸ್ತಿ ಇತರರ ಪಾಲಾಗುವ ಸಂಭವ ಇರುತ್ತದೆ. ಸರ್ಕಾರಿ ಶಾಲೆಗಳ ಸದರಿ ಆಸ್ತಿಗಳು ಕಾನೂನು ಪ್ರಕಾರ ಆಯಾ ಸರ್ಕಾರಿ ಶಾಲೆಯ ಹೆಸರಿಗೆ ಸಕಾಲದಲ್ಲಿ ಖಾತೆಯಾಗದೇ ಇರುವುದರಿಂದ ಅನೇಕ ಸಂದರ್ಭಗಳಲ್ಲಿ ನ್ಯಾಯಾಲಯದಲ್ಲಿ ಪ್ರಕರಣಗಳು ಸಹ ದಾಖಲಾಗುವ ಸನ್ನಿವೇಶ ನಿರ್ಮಾಣವಾಗುತ್ತದೆ. ಈಗಿನ ಮತ್ತು ಮುಂದಿನ ಪೀಳಿಗೆಗೆ ಕಡ್ಡಾಯವಾಗಿ ಉಚಿತವಾದ ಹಾಗೂ ಗುಣಮಟ್ಟದ ಶಿಕ್ಷಣವನ್ನು ನೀಡಬೇಕೆನ್ನುವ…
ಬೆಂಗಳೂರು: ಯುಪಿಐ ಬಳಕೆ ನಿಲ್ಲಿಸಿದ ವರ್ತಕರಿಗೆ ವಾಣಿಜ್ಯ ತೆರಿಗೆ ಇಲಾಖೆ ಶಾಕ್ ನೀಡಿದೆ. ಫೋನ್ ಪೇ ಬಿಟ್ಟು ಕ್ಯಾಶ್ ಪಡೆದರೂ ತೆರಿಗೆ ಕಟ್ಟಬೇಕು. ಯುಪಿಐ ಬದಲು ನಗದು ರೂಪದಲ್ಲಿ ಹಣ ಸ್ವೀಕರಿಸಿದರೂ ಜಿ.ಎಸ್.ಟಿ. ಸಂಗ್ರಹಿಸಲು ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ವಾಣಿಜ್ಯ ತೆರಿಗೆ ಇಲಾಖೆ ವರ್ತಕರಿಗೆ ಎಚ್ಚರಿಕೆ ನೀಡಿದೆ. ಹಣ ಸ್ವೀಕಾರಕ್ಕೆ ಯುಪಿಐ ಒಂದು ವಿಧಾನ ಮಾತ್ರ. ಯಾವುದೇ ರೂಪದಲ್ಲಿ ಹಣ ಸ್ವೀಕರಿಸಿದರೂ ತೆರಿಗೆ ಅನ್ವಯವಾಗುತ್ತದೆ ಎಂದು ವರ್ತಕರಿಗೆ ವಾಣಿಜ್ಯ ಇಲಾಖೆಯಿಂದ ಎಚ್ಚರಿಕೆ ನೀಡಲಾಗಿದೆ. ವರ್ತಕರು ಮಾಡಿದ ವ್ಯಾಪಾರಕ್ಕೆ ಯುಪಿಐ ಮೂಲಕ ಹಣ ಸ್ವೀಕರಿಸುವುದು ಒಂದು ಮಾರ್ಗ ಮಾತ್ರ. ಯುಪಿಐ, ಕಾರ್ಡು, ನಗದು ಸೇರಿದಂತೆ ಯಾವುದೇ ರೂಪದಲ್ಲಿ ಹಣ ಪಡೆದರೂ ಜಿಎಸ್ಟಿ ಕಾಯ್ದೆ ಅನ್ವಯಿಸುತ್ತದೆ ಎಂದು ವಾಣಿಜ್ಯ ತೆರಿಗೆ ಇಲಾಖೆ ಹೇಳಿದೆ. ಜಿ.ಎಸ್.ಟಿ. ನೋಂದಣಿ ಮಾಡಿಕೊಳ್ಳದೆ ಜಿಎಸ್ಟಿ ವಿನಾಯಿತಿ ಮೇಲೆ ವ್ಯಾಪಾರ ಮಾಡಿದ 5500ಕ್ಕೂ ಅಧಿಕ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ನೀಡಿದ್ದು, ಕೆಲವು ವರ್ತಕರು ಯುಪಿಐ ಮೂಲಕ ಹಣ ಪಡೆಯುವುದನ್ನು…
ಬೆಂಗಳೂರು : ಅಂಗನವಾಡಿ ಕೇಂದ್ರಗಳಲ್ಲಿ ಓದುತ್ತಿರುವ ಮಕ್ಕಳಿಗೆ ಅಪಾರ್ ಐಡಿ (ಸ್ವಯಂಚಾಲಿತ ಶಾಶ್ವತ ಶೈಕ್ಷಣಿಕ ಖಾತೆ ನೋಂದಣಿ -APAAR) ನೀಡಲು ಸರ್ಕಾರ ಈಗ ಯೋಜಿಸುತ್ತಿದೆ. ಈ ಮೂಲಕ ದೇಶದಲ್ಲೇ ಈ ಯೋಜನೆ ಜಾರಿಗೆ ತರುತ್ತಿರುವ ಮೊದಲ ರಾಜ್ಯ ಎಂಬ ಹೆಗ್ಗಳಿಕೆ ಕರ್ನಾಟಕ ಪಾತ್ರವಾಗಲಿದೆ. ಹೌದು, ಶಿಕ್ಷಣ ಸಚಿವಾಲಯ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಜಂಟಿ ಪ್ರಯತ್ನಗಳ ಭಾಗವಾಗಿದ್ದು, ಇದರ ಅಡಿಯಲ್ಲಿ ಅಂಗನವಾಡಿಯ ಮೂಲಕ ಮೂರು ರಿಂದ ಆರು ವರ್ಷದೊಳಗಿನ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸಲಾಗುತ್ತಿದೆ. ಇಲ್ಲಿಯವರೆಗೆ ಈ ಐಡಿಯನ್ನು ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣದವರೆಗಿನ ಮಕ್ಕಳಿಗೆ ಮಾತ್ರ ನೀಡಲಾಗುತ್ತಿತ್ತು, ಆದರೆ ಇದೀಗ ಅಂಗನವಾಡಿ ಮಕ್ಕಳಿಗೂ ಅಪಾರ್ ಐಡಿಯನ್ನು ಶೀಘ್ರವೇ ಜಾರಿಗೆ ತರಲಾಗುತ್ತಿದೆ. ಅಪಾರ್ ಐಡಿ ಆಧಾರ್ ಸಂಖ್ಯೆಯಂತೆಯೇ ಒಂದು ವಿಶಿಷ್ಟ ಶೈಕ್ಷಣಿಕ ಗುರುತಾಗಿದ್ದು, ಇದು ಮಗುವಿನ ಶೈಕ್ಷಣಿಕ ಪ್ರಯಾಣದ ಸಂಪೂರ್ಣ ದಾಖಲೆಯನ್ನು ಇಡುತ್ತದೆ. ಈ ಐಡಿ ಮಗುವಿನ ಮಾಸಿಕ, ತ್ರೈಮಾಸಿಕ, ಅರ್ಧ ವಾರ್ಷಿಕ ಮತ್ತು ವಾರ್ಷಿಕ ಪರೀಕ್ಷಾ ಫಲಿತಾಂಶಗಳು,…
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಸ್ತಿ ಮಾಲೀಕರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. ಅದೇ ಇನ್ಮುಂದೆ ಬಿ ಖಾತಾ ಆಸ್ತಿಗಳಿಗೂ ಎ ಖಾತಾ ರೀತಿಯಲ್ಲಿ ಅಧಿಕೃತ ಮಾನ್ಯತೆ ನೀಡಲು ಸಿಎಂ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ 17-07-2025 ರಂದು ನಡೆದ ಸಚಿವ ಸಂಪುಟಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು ಈ ಕೆಳಗಿನಂತಿವೆ. · ರಾಯಚೂರು ಜಿಲ್ಲೆ ತಾಲ್ಲೂಕಿನಲ್ಲಿ ನೂತನ ಜವಳಿ ಪಾರ್ಕನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವ(ಪಿಪಿಪಿ) ಮಾದರಿಯಲ್ಲಿ ಒಟ್ಟು 24.50 ಕೋಟಿಗಳ ಮೊತ್ತದಲ್ಲಿ ಅಭಿವೃದ್ಧಿಪಡಿಸಲು ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ. · ಕರ್ನಾಟಕ ರಾಜ್ಯದಲ್ಲಿ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪಿಸಲು ತಾತ್ವಿಕ ಅನುಮೋದನೆ ಹಾಗೂ ಎನ್ ಟಿಪಿಸಿ ಸಂಸ್ಥೆಯು ಕರ್ನಾಟಕದಲ್ಲಿ ಪರಮಾಣು ವಿದ್ಯುತ್ ಸ್ಥಾಪನೆಗೆ ಗುರುತಿಸಿರುವ ಸಂಭಾವ್ಯ ಸ್ಥಳಗಳ್ಲಿ ಪ್ರಾಥಮಿಕ ಅಧ್ಯಯನ ನಡೆಸಲು ಅನುಮತಿ ನೀಡಲು ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. · ಆಯುಷ್ ಇಲಾಖೆಯ ಆಯುರ್ವೇದ, ಸಿದ್ದ ಮತ್ತು ಯುನಾನಿ ಔಷಧಗಳ…
ಬೆಂಗಳೂರು: ಮುಂದಿನ ತಿಂಗಳಿನಿಂದ ಪ್ರಾರಂಭವಾಗುವ ಹಬ್ಬದ ಋತುವಿನಲ್ಲಿ 2.16 ಲಕ್ಷಕ್ಕೂ ಹೆಚ್ಚು ಕಾಲೋಚಿತ ಉದ್ಯೋಗಗಳು ಸೃಷ್ಟಿಯಾಗಲಿವೆ. ಅಲ್ಲದೆ, 2025 ರ ಎರಡನೇ ತ್ರೈಮಾಸಿಕದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಗಿಗ್ ಮತ್ತು ತಾತ್ಕಾಲಿಕ ಉದ್ಯೋಗಕ್ಕಾಗಿ ನೇಮಕಾತಿ ಬೇಡಿಕೆ 15-20% ಹೆಚ್ಚಾಗುತ್ತದೆ. ಇ-ಕಾಮರ್ಸ್ ದೈತ್ಯ ಕಂಪನಿಗಳಾದ ಫ್ಲಿಪ್ಕಾರ್ಟ್ ಮತ್ತು ಅಮೆಜಾನ್ ಈಗಾಗಲೇ ತಮ್ಮ ಮಾರಾಟವನ್ನು ಘೋಷಿಸಿವೆ ಮತ್ತು ರಕ್ಷಾ ಬಂಧನ ಮತ್ತು ದಸರಾ ಸಮೀಪಿಸುತ್ತಿರುವುದರಿಂದ, ಚಿಲ್ಲರೆ ವ್ಯಾಪಾರ, ಇ-ಕಾಮರ್ಸ್, ಬಿಎಫ್ಎಸ್ಐ, ಲಾಜಿಸ್ಟಿಕ್ಸ್ ಮತ್ತು ಆತಿಥ್ಯದಂತಹ ವಲಯಗಳಲ್ಲಿ ನೇಮಕಾತಿ ವೇಗವನ್ನು ಪಡೆಯುತ್ತಿದೆ. ಬೇಡಿಕೆಗಿಂತ ಮುಂದೆ ಉಳಿಯಲು ಮತ್ತು ಸಾಮಾನ್ಯಕ್ಕಿಂತ ಬಲವಾದ ಹಬ್ಬದ ಅವಧಿಗೆ ಕಾರ್ಯಾಚರಣೆಯ ಸಿದ್ಧತೆಯನ್ನು ಖಚಿತಪಡಿಸಿಕೊಳ್ಳಲು ಅನೇಕ ಕಂಪನಿಗಳು ತಮ್ಮ ನೇಮಕಾತಿ ಚಕ್ರಗಳನ್ನು ಮುಂದಕ್ಕೆ ಸಾಗಿಸುತ್ತಿವೆ ಎಂದು ಅಡೆಕೊ ಇಂಡಿಯಾ ಹೇಳಿದೆ. ಈ ವರ್ಷದ ನೇಮಕಾತಿ ಏರಿಕೆಯು ಸುಧಾರಿತ ಗ್ರಾಹಕರ ಭಾವನೆ, ಗ್ರಾಮೀಣ ಬೇಡಿಕೆಯನ್ನು ಹೆಚ್ಚಿಸುವ ಅನುಕೂಲಕರ ಮಾನ್ಸೂನ್, ಚುನಾವಣೆಯ ನಂತರದ ಆರ್ಥಿಕ ಆಶಾವಾದ ಮತ್ತು ಆಕ್ರಮಣಕಾರಿ ಕಾಲೋಚಿತ ಪ್ರಚಾರಗಳಿಂದ ನಡೆಸಲ್ಪಡುತ್ತಿದೆ ಎಂದು ಅದು…
ಕಳೆದ ಕೆಲವು ವರ್ಷಗಳಲ್ಲಿ, ಸೈಬರ್ ಅಪರಾಧ ಪ್ರಕರಣಗಳಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ. ತಡೆಗಟ್ಟುವಿಕೆಗಾಗಿ ಸರ್ಕಾರ ಮತ್ತು ತಂತ್ರಜ್ಞಾನ ಕಂಪನಿಗಳು ವಿವಿಧ ಮಾರ್ಗಸೂಚಿಗಳನ್ನು ಹೊರಡಿಸಿವೆ. ನಿರ್ಲಕ್ಷ್ಯ ವಹಿಸಿದರೆ ವೈಯಕ್ತಿಕ ಮಾಹಿತಿ ಸೋರಿಕೆಯಾಗಬಹುದು ಎಂದು ಎಲ್ಲರೂ ತಿಳಿದುಕೊಳ್ಳುವುದು ಬಹಳ ಮುಖ್ಯ. ಬ್ಯಾಂಕ್ ಖಾತೆಯನ್ನು ಸಹ ಖಾಲಿ ಮಾಡಬಹುದು. ಜನರನ್ನು ವಂಚಿಸಲು ಸೈಬರ್ ಅಪರಾಧಿಗಳು ವಿಭಿನ್ನ ವಿಧಾನಗಳನ್ನು ಅಳವಡಿಸಿಕೊಳ್ಳುತ್ತಾರೆ. ಮೊಬೈಲ್ ಫೋನ್ ಬಳಕೆದಾರರಿಗೆ ಬೆದರಿಕೆಗಿಂತ ಕಡಿಮೆಯಿಲ್ಲದ ಕೆಲವು ಅಪಾಯಕಾರಿ ಅಪ್ಲಿಕೇಶನ್ಗಳು ಸಂಶೋಧನೆಯಲ್ಲಿ ಬಹಿರಂಗಗೊಂಡಿವೆ. ಸಂಶೋಧನೆಯಲ್ಲಿ ನಕಲಿ ಅಪ್ಲಿಕೇಶನ್ಗಳು ಬಹಿರಂಗಗೊಂಡಿವೆ ಸೈಬಲ್ ರಿಸರ್ಚ್ ಮತ್ತು ಇಂಟೆಲಿಜೆನ್ಸ್ ಲ್ಯಾಬ್ಸ್ (CRIL) ತನ್ನ ಒಂದು ಸಂಶೋಧನೆಯ ಮೂಲಕ ಸುಮಾರು 20 ಅಪ್ಲಿಕೇಶನ್ಗಳನ್ನು ಬಹಿರಂಗಪಡಿಸಿದೆ. ಈ ಎಲ್ಲಾ ಅಪ್ಲಿಕೇಶನ್ಗಳು ಬಳಕೆದಾರರ ವೈಯಕ್ತಿಕ ಡೇಟಾವನ್ನು ಕದಿಯುತ್ತಿವೆ ಎಂದು ಹೇಳಲಾಗುತ್ತಿದೆ. ಅಂತಹ ಪರಿಸ್ಥಿತಿಯಲ್ಲಿ, ಬಳಕೆದಾರರ ಗೌಪ್ಯತೆಯು ಅಪಾಯದಲ್ಲಿದೆ. ಬಹಿರಂಗಪಡಿಸುವುದರ ಜೊತೆಗೆ, ಈ ಅಪ್ಲಿಕೇಶನ್ಗಳನ್ನು ಫೋನ್ನಿಂದ ತೆಗೆದುಹಾಕಲು ಸೂಚಿಸಲಾಗಿದೆ. ಯಾವ ರೀತಿಯ ಅಪ್ಲಿಕೇಶನ್ಗಳು ಅಪಾಯಕಾರಿ? CRIL ಪ್ರಕಾರ, ಬಳಕೆದಾರರ ವೈಯಕ್ತಿಕ ಡೇಟಾ ಮತ್ತು ಗೌಪ್ಯತೆಗೆ ಅಪಾಯಕಾರಿಯಾದ…
ನಮಸ್ಕಾರ ಸ್ನೇಹಿತರೆ ಸಾಮಾನ್ಯವಾಗಿ ಅಶ್ವಿನಿ ಕುಮಾರರ ಹೆಸರನ್ನು ಕೇಳಿರುತ್ತೀರಿ ಇವರು ವೈದ್ಯ ದೇವತೆಗಳು ಋಗ್ವೇದದಲ್ಲಿ ದೈವಿಕ ಅವಳಿ ಕುದುರೆ ಸವಾರರು, ಮೋಡಗಳ ದೇವತೆಗಳು ಇವರು ಸೂರ್ಯೋದಯ ಮತ್ತು ಸೂರ್ಯಾಸ್ತದ ಹೊಳಪನ್ನು ಸಂಕೇತಿಸುತ್ತಾರೆ, ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ…
ಅಹಮದಾಬಾದ್ : ಇಂಧನ ಸ್ವಿಚ್ ಆಫ್ ನಿಂದ `ಏರ್ ಇಂಡಿಯಾ ಬೋಯಿಂಗ್ 787 ವಿಮಾನ ಪತಗೊಂಡಿಲ್ಲ ಎಂದು ಏರ್ ಇಂಡಿಯಾ ಅಧಿಕೃತ ಮಾಹಿತಿ ನೀಡಿದೆ. ಬೋಯಿಂಗ್ 787 ವಿಮಾನಗಳ ಫ್ಲೀಟ್ನಲ್ಲಿ ಇಂಧನ ನಿಯಂತ್ರಣ ಸ್ವಿಚ್ಗಳ (FCS) ಲಾಕಿಂಗ್ ಕಾರ್ಯವಿಧಾನದ ಮುನ್ನೆಚ್ಚರಿಕೆ ಪರಿಶೀಲನೆಗಳನ್ನು ಏರ್ ಇಂಡಿಯಾ ಪೂರ್ಣಗೊಳಿಸಿದೆ ಮತ್ತು ಯಾವುದೇ ಸಮಸ್ಯೆಗಳಿಲ್ಲ ಎಂದು ಬುಧವಾರ ವಿಮಾನಯಾನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೋಯಿಂಗ್ 787 ಮತ್ತು 737 ವಿಮಾನಗಳನ್ನು ನಿರ್ವಹಿಸುವ ಎಲ್ಲಾ ವಿಮಾನಯಾನ ಸಂಸ್ಥೆಗಳು ಇಂಧನ ಸ್ವಿಚ್ ಲಾಕಿಂಗ್ ವ್ಯವಸ್ಥೆಗಳನ್ನು ಪರೀಕ್ಷಿಸುವಂತೆ ವಾಯುಯಾನ ನಿಯಂತ್ರಕ DGCA ಈ ವಾರದ ಆರಂಭದಲ್ಲಿ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ಈ ತಪಾಸಣೆ ನಡೆದಿದೆ. ಅಧಿಕಾರಿಯ ಪ್ರಕಾರ, ವಿಮಾನಯಾನದ ಎಂಜಿನಿಯರಿಂಗ್ ತಂಡವು ವಾರಾಂತ್ಯದಲ್ಲಿ ತಪಾಸಣೆಗಳನ್ನು ನಡೆಸಿ ಆಂತರಿಕ ಸಂದೇಶದ ಮೂಲಕ ಪೈಲಟ್ಗಳಿಗೆ ಫಲಿತಾಂಶವನ್ನು ತಿಳಿಸಿತು. “ತಪಾಸಣೆಗಳು ಪೂರ್ಣಗೊಂಡಿವೆ, ಮತ್ತು ಯಾವುದೇ ಸಮಸ್ಯೆಗಳು ಕಂಡುಬಂದಿಲ್ಲ” ಎಂದು ಅಧಿಕಾರಿ ಹೇಳಿದರು, ಎಲ್ಲಾ ಬೋಯಿಂಗ್ 787-8 ವಿಮಾನಗಳು ಈಗಾಗಲೇ ಬೋಯಿಂಗ್ನ ನಿರ್ವಹಣಾ ವೇಳಾಪಟ್ಟಿಯ ಪ್ರಕಾರ ಥ್ರೊಟಲ್…