Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ರಾಜ್ಯ ಸರ್ಕಾರವು ಬೆಂಗಳೂರಿನಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ- 2025 ಸಮೀಕ್ಷೆ ಕಾರ್ಯವನ್ನು ಕೈಗೊಂಡಿದ್ದು, ಸದ್ರಿ ಸಮೀಕ್ಷೆಯಲ್ಲಿ ಸಾರ್ವಜನಿಕರು ಈ ಕೆಳಕಂಡ QR Code ಅಥವಾ ಲಿಂಕ್ ನ್ನು ಉಪಯೋಗಿಸಿಕೊಂಡು ತಮ್ಮ ಮೊಬೈಲ್ ನಲ್ಲಿ ನಾಗರಿಕ ಲಾಗಿನ್ ಮೂಲಕ ಸಮೀಕ್ಷಾ ಕಾರ್ಯದಲ್ಲಿ ಭಾಗವಹಿಸಬಹುದು. ಕರ್ನಾಟಕದ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯಲ್ಲಿ ಆನ್ಲೈನ್ ಮೂಲಕ ಮನೆಯಿಂದಲೇ ಭಾಗವಹಿಸಿ- ಆನ್ಲೈನ್ ಪೋರ್ಟಲ್ – https://KSCBCSelfDeclaration.karnataka.gov.in ಪ್ರತಿಯೊಬ್ಬರ ಕಲ್ಯಾಣವನ್ನು ಗುರಿಯಾಗಿಸಿಕೊಂಡು ಸಮೀಕ್ಷೆಯನ್ನು ಕೈಗೊಳ್ಳುತ್ತಿದ್ದು ಸಮೀಕ್ಷೆಯಲ್ಲಿ ನಿಮ್ಮಭಾಗವಹಿಸುವಿಕೆಯನ್ನು ಕೋರಲಾಗಿದೆ. ಮೇಲಿನ ಕ್ರಮದ ಹೊರತಾಗಿಯೂ ನಮ್ಮಗಣತಿದಾರರು ಸಮೀಕ್ಷೆಗಾಗಿ ಮನೆ – ಮನೆಗೆ ಭೇಟಿ ನೀಡುತ್ತಿದ್ದು, ಅಲ್ಲಿಯೂ ಸಹ ನೀವು ಮಾಹಿತಿಗಳನ್ನು ನೀಡಿ ಸಮೀಕ್ಷೆಯಲ್ಲಿ ಭಾಗವಹಿಸಬಹುದು.
ಕಲಬುರಗಿ: ಕಳೆದ 3 ತಿಂಗಳಿನಿಂದ ಸಂಬಳ ನೀಡದ ಕಾರಣಕ್ಕೆ ಡೆತ್ ನೋಟ್ ಬರೆದಿಟ್ಟು ಗ್ರಂಥಪಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಗ್ರಂಥಪಾಲಕಿ ಭಾಗ್ಯವತಿ ವಿಶ್ವೇಶ್ವರಯ್ಯ ಅಗ್ಗಿಮಠ (38) ಡೆತ್ ನೋಟ್ ಬರೆದಿಟ್ಟು ಗ್ರಂಥಾಲಯ ದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆತ್ ನೋಟ್ ನಲ್ಲಿ ಏನಿದೆ? 20 ವರ್ಷಗಳಿಂದ ಗ್ರಂಥಾಲಯ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದು, ಸಕಾಲಕ್ಕೆ ವೇತನ ಪಾವತಿಯಾಗದ ಕಾರಣಕ್ಕೆ ಸಾಲ ಮಾಡಿಕೊಂಡಿದ್ದೆ. ಸಾಲ ಪಾವತಿಸದೇ, ಮಕ್ಕಳ ಫೀಸ್ ಕಟ್ಟದೆ ಮಾನಸಿಕವಾಗಿ ಕುಗ್ಗಿ ಹೋಗಿದ್ದೇನೆ,ವೇತನ ಕೇಳಲು ತೆರಳಿದಾಗ ಕೀಳಾಗಿ ಕಾಣುತ್ತಿದ್ದರು. ಸಂಬಂಧಿಸಿದ ಅಧಿಕಾರಿಗಳ ಕೈ, ಕಾಲು ಮುಗಿದರೂ ಕರುಣೆ ಬರಲಿಲ್ಲ. ನನ್ನ ಪರಿಸ್ಥಿತಿ ಬೇರೆ ಗ್ರಂಥಪಾಲಕರಿಗೆ ಬರಬಾರದು. ಹೀಗಾಗಿ ಇಂತಹ ನಿರ್ಧಾರ ಮಾಡಿರುವೆ ‘ ಎಂದು ಭಾಗ್ಯವತಿ ಡೆತ್ ನೋಟ್ನಲ್ಲಿ ಬರೆದಿದ್ದಾರೆ.
ಬೆಂಗಳೂರು: ರಾಜ್ಯ ಸರ್ಕಾರದಿಂದ 10 ಕೆಜಿ ಅಕ್ಕಿ ಬದಲಾಗಿ 5 ಕೆಜಿ ಅಕ್ಕಿ ನೀಡಿ, ಇನ್ನುಳಿದ ಐದು ಕೆಜಿ ಅಕ್ಕಿಯ ಬದಲಾಗಿ ಇಂದಿರಾ ಆಹಾರದ ಕಿಟ್ ವಿತರಣೆಗೆ ನಿರ್ಧರಿಸಿದೆ. ಹಾಗಾದರೇ ಆ ಆಹಾರದ ಕಿಟ್ ನಲ್ಲಿ ಏನಿರಲಿದೆ ಎನ್ನುವ ಬಗ್ಗೆ ಮುಂದಿದೆ ಓದಿ. ರಾಜ್ಯ ಸರ್ಕಾರದ ವತಿಯಿಂದ ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿಯಾಗಿ ಐದು ಕೆಜಿ ಅಕ್ಕಿಯ ಬದಲಾಗಿ ಪ್ರತಿ ಪಡಿತರ ಚೀಟಿಗೆ ಇಂದಿರಾ ಆಹಾರದ ಕಿಟ್ ಅಂದರೆ ಪೌಷ್ಠಿಕ ಆಹಾರದ ಕಿಟ್ ಅನ್ನು ನೀಡಲು ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. INDIRA ಅಂದರೇ Integrated Nutrition and Dietary Initiative For Realizing Annabhagya Beneficiaries ಎಂಬುದಾಗಿದೆ. ಅಂದರೆ ಅನ್ನಭಾಗ್ಯ ಫಲಾನುಭವಿಗಳನ್ನು ಪುನರುಜ್ಜೀವನಗೊಳಿಸಲು ಸಮಗ್ರ ಪೋಷಣೆ ಮತ್ತು ಆಹಾರ ಉಪಕ್ರಮದ ಕಿಟ್ ಎಂದು ನಾಮೀಕರಿಸಿ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಇಂದಿರಾ ಆಹಾರದ ಕಿಟ್ ನಲ್ಲಿ ಏನಿರಲಿದೆ? ತೊಗರಿ ಬೇಳೆ – 1 ಕೆಜಿ ಹೆಸರುಕಾಳು- 1 ಕೆಜಿ ಅಡುಗೆ ಎಣ್ಣೆ…
ಬೆಂಗಳೂರು : ಸರ್ಕಾರಿ ನೌಕರರ ಹಾಗೂ ಸರ್ಕಾರಿ ಆಸ್ತಿಯ ಸಂರಕ್ಷಣೆಗೆ ಸಂಭಂದಿಸಿದ ಭಾರತೀಯ ನ್ಯಾಯ ಸಂಹಿತೆ 2023 (ಜಿಎನ್ ಎಸ್ – 2023) ರ ಅಡಿಯಲ್ಲಿ ಇರುವ ಕಾಲಂ ಮತ್ತು ನಿಯಮಗಳು ಹಾಗೂ ಸರ್ಕಾರಿ ನೌಕರರು ಕರ್ತವ್ಯ ನಿರ್ವಹಿಸುತ್ತಿರುವಾಗ, ಆದ ಅಪರಾಧಗಳಿಗೆ ಪೋಲಿಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸುವ ಸಲುವಾಗಿ, ದೂರು ಕೊಡಲು ಇರುವ ಕಾಯ್ದೆ – ಕಾಲಂಗಳ ವಿವರ. ರಾಜ್ಯ ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಹಲ್ಲೆ ನಡೆಸಿದರೆ ಯಾವ ಶಿಕ್ಷೆ ಇದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಸರ್ಕಾರಿ ನೌಕರರು ಕರ್ತವ್ಯ ನಿರ್ವಹಿಸುತ್ತಿರುವಾಗ ಸರ್ಕಾರಿ ಕೆಲಸಕ್ಕೆ ಅಡಚಣೆ ಮತ್ತು ನೌಕರರ ಮೇಲೆ ಹಲ್ಲೆ ಮಾಡುವುದು- ಕಾಲಂ ಮತ್ತು ಕಾಯ್ದೆ ೧೩೨ ಬಿ.ಎನ್.ಎಸ್. 2 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ. ಸರ್ಕಾರಿ ನೌಕರರಿಗೆ ಭಯಪಡಿಸಿ ಹಣ ವಸೂಲಿ ಮಾಡುವುದು -308 (2) ಬಿ.ಎನ್.ಎಸ್. 3 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ. ಸರ್ಕಾರಿ ನೌಕರರಿಂದ ಇತರೆ ಕಾರಣಗಳಿಂದ ಹಣ…
ಬೆಂಗಳೂರು: ರಾಜ್ಯ ಸರ್ಕಾರವು ಮತ್ತೆ ಐವರು ಐಎಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐದು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ. ಪಂಚಾಯತ್ರಾಜ್ ಇಲಾಖೆ ಕಾರ್ಯದರ್ಶಿ ಡಿ.ರಂದೀಪ್ ಅವರಿಗೆ ಹೆಚ್ಚುವರಿಯಾಗಿ ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ. ಎಂ.ಎಸ್.ದಿವಾಕರ್ ಅವರಿಗೆ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (ಕೆಎಸ್ಎನ್ಡಿಎಂಸಿ) ನಿರ್ದೇಶಕ ಹುದ್ದೆಗೆ ಹೆಚ್ಚುವರಿಯಾಗಿ ಅಟಲ್ ಜನ ಸ್ನೇಹಿ ಕೇಂದ್ರದ ನಿರ್ದೇಶಕ ಹುದ್ದೆ ನೀಡಲಾಗಿದೆ. ನಿತೇಶ್ ಪಾಟೀಲ್-ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು, ಆರ್.ರಾಮಚಂದ್ರನ್-ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ನ ಕಾರ್ಯಕಾರಿ ನಿರ್ದೇಶಕ, ಡಾ.ಬಿ.ಸಿ.ಸತೀಶ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕಾ ನಿರ್ದೇಶಕ ಹುದ್ದೆಗೆ ಸರಕಾರ ವರ್ಗಾವಣೆ ಮಾಡಿದೆ.
ನವದೆಹಲಿ : ಪ್ರತಿ ವರ್ಷ ಸುಮಾರು 1.5 ಲಕ್ಷ ವಿದ್ಯಾರ್ಥಿಗಳು AISSEE ಗೆ ಹಾಜರಾಗುತ್ತಾರೆ. ಸೈನಿಕ ಶಾಲೆಗಳು ತಮ್ಮ ಗುಣಮಟ್ಟದ ಶಿಕ್ಷಣಕ್ಕೆ ಪ್ರಸಿದ್ಧವಾಗಿವೆ. ಸೈನಿಕ ಶಾಲೆಯಲ್ಲಿ ಪಡೆದ ತರಬೇತಿಯಿಂದ ಭವಿಷ್ಯದಲ್ಲಿ ಸೇನೆಯಲ್ಲಿ ಕೆಲಸ ಮಾಡಲು ಬಯಸುವ ವಿದ್ಯಾರ್ಥಿಗಳು ಸಾಕಷ್ಟು ಪ್ರಯೋಜನಗಳನ್ನು ಪಡೆಯಬಹುದು. ಸೈನಿಕ್ ಶಾಲೆಯ ಪ್ರವೇಶ ಮಾನದಂಡ: ಸೈನಿಕ ಶಾಲೆಯ 6 ಮತ್ತು 9 ನೇ ತರಗತಿಗಳಿಗೆ ಪ್ರವೇಶಕ್ಕಾಗಿ, ಅಖಿಲ ಭಾರತ ಸೈನಿಕ ಶಾಲೆಗಳ ಪ್ರವೇಶ ಪರೀಕ್ಷೆಯಲ್ಲಿ (AISSEE) ಉತ್ತೀರ್ಣರಾಗುವುದು ಅವಶ್ಯಕ. ಭಾರತದಲ್ಲಿ ಒಟ್ಟು 33 ಸೈನಿಕ ಶಾಲೆಗಳಿವೆ. ಇವೆಲ್ಲವನ್ನೂ ನಿರ್ವಹಿಸುವ ಜವಾಬ್ದಾರಿ ಸೈನಿಕ್ ಸ್ಕೂಲ್ ಸೊಸೈಟಿಯ ಮೇಲಿದೆ. ಅದರ ವಿವರಗಳನ್ನು sainikschoolsociety.in ನಲ್ಲಿ ಪರಿಶೀಲಿಸಬಹುದು. ಸೈನಿಕ ಶಾಲೆಯ 6 ನೇ ತರಗತಿಗೆ ಪ್ರವೇಶಕ್ಕಾಗಿ, ಅಭ್ಯರ್ಥಿಯ ವಯಸ್ಸು 10-11 ವರ್ಷಗಳು ಮತ್ತು 9, 13-14 ವರ್ಷಗಳು. ನೀವು 6 ನೇ ತರಗತಿಗೆ ಪ್ರವೇಶ ಪಡೆಯುತ್ತಿದ್ದರೆ, ನಂತರ 5 ನೇ ತರಗತಿಯಲ್ಲಿ ಉತ್ತೀರ್ಣರಾಗುವುದು ಅವಶ್ಯಕ. ಅದೇ ರೀತಿ ಸೈನಿಕ ಶಾಲೆಯ 9ನೇ ತರಗತಿ…
ಬೆಂಗಳೂರು : ರಾಜ್ಯದಲ್ಲಿ ಇನ್ಮುಂದೆ 10 ಕೆಜಿಯ ಅಕ್ಕಿ ಬದಲು 5 ಕೆಜಿ ಅಕ್ಕಿ ಕೊಟ್ಟು, ಇನ್ನುಳಿದ 5 ಕೆಜಿಯ ಲೆಕ್ಕದಲ್ಲಿ ದಿನಸಿ ಪದಾರ್ಥಗಳನ್ನು ವಿತರಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಹಸಿವುಮುಕ್ತ ಕರ್ನಾಟಕ ನಿರ್ಮಾಣವೇ ನಮ್ಮ ಮುಖ್ಯ ಉದ್ದೇಶವಾಗಿರುವುದರಿಂದ ಅನ್ನಭಾಗ್ಯದ ಅಕ್ಕಿಯ ಜೊತೆಗೆ ಇಂದಿರಾ ಕಿಟ್ ವಿತರಿಸಲು ನಮ್ಮ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಅನ್ನಭಾಗ್ಯದ 10 ಕೆಜಿಯ ಅಕ್ಕಿಯ ಬದಲು ಇನ್ಮುಂದೆ 5 ಕೆಜಿ ಅಕ್ಕಿ ಕೊಟ್ಟು, ಇನ್ನುಳಿದ 5 ಕೆಜಿಯ ಲೆಕ್ಕದಲ್ಲಿ ದಿನಸಿ ಪದಾರ್ಥಗಳನ್ನು ವಿತರಿಸಲಿದ್ದೇವೆ. ಯಾರೊಬ್ಬರೂ ಹಸಿವಿನಿಂದ ಇರಬಾರದು ಎಂಬುದೇ ನಮ್ಮ ಸರ್ಕಾರದ ಕಾಳಜಿಯಾಗಿದೆ ಎಂದು ಹೇಳಿದ್ದಾರೆ. ಇಂದಿರಾ ಆಹಾರದ ಕಿಟ್ ನಲ್ಲಿ ಏನಿರಲಿದೆ? ತೊಗರಿ ಬೇಳೆ – 1 ಕೆಜಿ ಹೆಸರುಕಾಳು- 1 ಕೆಜಿ ಅಡುಗೆ ಎಣ್ಣೆ – 1 ಲೀಟರ್ ಸಕ್ಕರೆ – 1 ಕೆಜಿ ಉಪ್ಪು- 1 ಕೆಜಿ ಅನ್ನಭಾಗ್ಯ ಯೋಜನೆಯಡಿ 5…
ಬಾಲ್ಯ ವಿವಾಹ ಮುಕ್ತವಾಗಿಸುವ ನಿಟ್ಟಿನಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಬಾಲ್ಯವಿವಾಹ ನಿಷೇಧ ಕಾನೂನು, ಅಪರಾಧಕ್ಕಿರುವ ಶಿಕ್ಷೆ ಪ್ರಮಾಣ ಮುಂತಾದವುಗಳ ಕುರಿತು ವಿವಾಹಗಳು ನಡೆಯುವ ದೇವಸ್ಥಾನ, ಶಾದಿಮಹಲ್, ಕಲ್ಯಾಣ ಮಂಟಪ ಹಾಗೂ ಫಂಕ್ಷನ್ ಹಾಲ್ಗಳಲ್ಲಿ ಶಾಶ್ವತ ಫಲಕ ಹಾಗೂ ಗೋಡೆಬರಹವನ್ನು ಕಡ್ಡಾಯವಾಗಿ ಬರೆಯಿಸಿ, ಪ್ರದರ್ಶಿಸಬೇಕು. ಬಾಲ್ಯವಿವಾಹ ನಿಷೇಧ ಕಾಯ್ದೆ-2006, ಕರ್ನಾಟಕ ತಿದ್ದುಪಡಿ ಕಾಯ್ದೆ-2016 ರನ್ವಯ 18 ವರ್ಷದೊಳಗಿನ ಹೆಣ್ಣು ಮಕ್ಕಳ ಹಾಗೂ 21 ವರ್ಷದೊಳಗಿನ ಗಂಡು ಮಕ್ಕಳ ವಿವಾಹವು ಶಿಕ್ಷಾರ್ಹ ಅಪರಾಧವಾಗಿದೆ. ಕಾಯ್ದೆಯ ಕಲಂ 9 ರನ್ವಯ ಅಪ್ರಾಪ್ತ ವಯಸ್ಸಿನ ಹೆಣ್ಣು ಮಗುವನ್ನು ವಿವಾಹ ಮಾಡಿಕೊಂಡ ಪುರುಷ, ಕಲಂ 10 ಮತ್ತು 11 ರನ್ವಯ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ವಿವಾಹವನ್ನು ಆಯೋಜಿಸಿದವರು, ಆಯೋಜಿಸಲು ಉತ್ತೇಜನ ಅಥವಾ ಪ್ರೋತ್ಸಾಹ ನೀಡುವವರು ಮತ್ತು ಬಾಲ್ಯವಿವಾಹದಲ್ಲಿ ಭಾಗವಹಿಸುವವರಿಗೆ 1 ವರ್ಷದಿಂದ 2 ವರ್ಷದವರೆಗೆ ಕಠಿಣ ಜೈಲು ಶಿಕ್ಷೆ ಮತ್ತು ರೂ. 1 ಲಕ್ಷಗಳ ದಂಡ ವಿಧಿಸಬಹುದಾಗಿರುತ್ತದೆ. ಮಾನ್ಯ ಸರ್ವೋಚ್ಛ ನ್ಯಾಯಾಲಯವು…
ನವದೆಹಲಿ : ಕಳೆದ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರಿನ ಮಹದೇವಪುರ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದಾಖಲೆ ಸಮೇತ ಬಿಡುಗಡೆ ಮಾಡಿ ಆರೋಪ ಮಾಡಿದ್ದರು. ಈ ಕುರಿತು ಎಸ್ಐಟಿ ತನಿಖೆ ನಡೆಸುವಂತೆ ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದ್ದು SIT ರಚನೆಗೆ ಸುಪ್ರೀಂಕೋರ್ಟ್ ನಕಾರ ವ್ಯಕ್ತಪಡಿಸಿದೆ. ಹೌದು 2024ರ ಲೋಕಸಭಾ ಚುನಾವಣೆ ವೇಳೆ ಬೆಂಗಳೂರು ಕೇಂದ್ರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ದೊಡ್ಡ ಮಟ್ಟದ ಅಕ್ರಮ ನಡೆದಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ಈ ಸಂಬಂಧ ವಿಶೇಷ ತನಿಖೆ ನಡೆಸಬೇಕು ಎಂದು ಸುಪ್ರೀಂಕೋರ್ಟ್ ಮುಂದೆ ಅರ್ಜಿ ಸಲ್ಲಿಕೆಯಾಗಿತ್ತು. ಆದರೆ, ಎಸ್ಐಟಿ ತನಿಖೆಗೆ ಕೋರ್ಟ್ ನಕಾರ ವ್ಯಕ್ತಪಡಿಸಿದ್ದು, ಅರ್ಜಿದಾರರು ಚುನಾವಣಾ ಆಯೋಗಕ್ಕೆ ದೂರು ನೀಡಬೇಕೆಂದು ಸೂಚಿಸಿದೆ. ರಾಹುಲ್ ಗಾಂಧಿ ಸೇರಿದಂತೆ ವಿಪಕ್ಷಗಳು ಮತದಾರರ ಪಟ್ಟಿಯಲ್ಲಿ ಅಕ್ರಮವಾಗಿದೆ ಎಂದು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಮನವಿಯನ್ನು ಆಲಿಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜಯಮಾಲ್ಯ ಬಾಗಚಿ ಅವರಿದ್ದ ಸರ್ವೋಚ್ಚ…
ಮಂಗಳೂರು : ಖ್ಯಾತ ಪೋಷಕ, ಹಾಸ್ಯ ನಟ ರಾಜು ತಾಳಿಕೋಟೆ ಅವರು ಹೃದಯಘಾತದಿಂದ ನಿಧನರಾಗಿದ್ದು, ಇಂದು ಅಂತ್ಯಕ್ರಿಯೆಗೆ ಕುಟುಂಬಸ್ಥರು ನಿರ್ಧರಿಸಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಚಿಕ್ಕ ಸಿಂದಗಿ ಗ್ರಾಮದ ತೋಟದಲ್ಲಿ ಇಂದು ಅಂತ್ಯಕ್ರಿಯೆಗೆ ನಿರ್ಧಾರ ಮಾಡಲಾಗಿದೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮದ ಮೂಲದವರಾಗಿದ್ದ ರಾಜು, ಚಲನಚಿತ್ರದಲ್ಲಿ ಪ್ರಸಿದ್ಧರಾದ ನಂತ್ರ ತಾಳಿಕೋಟಿ ನಗರದಲ್ಲಿ ವಾಸವಾಗಿದ್ದರು. ರಾಜು ತಾಳಿಕೋಟಿಯವರ ನಿಧನಕ್ಕೆ ಕನ್ನಡ ಚಿತ್ರರಂಗ ಮತ್ತು ಉತ್ತರ ಕರ್ನಾಟಕದ ರಂಗಭೂಮಿ ಕಂಬನಿ ಮಿಡಿದಿದೆ. ಅಂದ್ಹಾಗೆ, ರಾಜು ತಾಳಿಕೋಟಿಯವರ ಮೂಲ ಹೆಸರು ರಾಜೇಸಾಬ ಮಕ್ತುಮಸಾಬ್ ತಾಳಿಕೋಟಿ. ತಾಳಿಕೋಟಿಯ ಪ್ರಸಿದ್ಧ ಖಾಸ್ಗತೇಶ್ವರ ನಾಟಕ ಮಂಡಳಿಯ ಮಾಲಿಕರೂ ಆಗಿದ್ದು, ಉತ್ತರ ಕರ್ನಾಟಕದ ಹಳ್ಳಿಗಳಲ್ಲಿ ನಾಟಕಗಳ ಮೂಲಕ ಜನರನ್ನ ರಂಜಿಸುತ್ತಿದ್ದರು.














