Author: kannadanewsnow57

ಬೆಂಗಳೂರು: ಸಾರಿಗೆ ಇಲಾಖೆಯ ಮಹಿಳಾ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ ಇನ್ಮುಂದೆ ಋತುಚಕ್ರ ರಜೆಯನ್ನು ನೀಡಿ ಅಧಿಕೃತ ಆದೇಶವನ್ನು ಕೆ ಎಸ್ ಆರ್ ಟಿ ಸಿ ಹೊರಡಿಸಿದೆ. ಈ ಕುರಿತಂತೆ ಕೆ ಎಸ್ ಆರ್ ಟಿ ಸಿಯ ವ್ಯವಸ್ಥಾಪಕ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಅದರಲ್ಲಿ  ಕರ್ನಾಟಕ ಸರ್ಕಾರವು ಉಲ್ಲೇಖಿತ ಸರ್ಕಾರದ ಆದೇಶಗಳಲ್ಲಿ ಮಹಿಳಾ ನೌಕರರ ಮನೋಸ್ಥೆರ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ದಿನದ ಋತುಚಕ್ರ ರಜೆಯ ಸೌಲಭ್ಯವನ್ನು ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೂ ಕಲ್ಪಿಸಿ ಷರತ್ತು ಮತ್ತು ನಿಬಂಧನೆಗೊಳಪಟ್ಟು ರಜೆ ಮಂಜೂರು ಮಾಡಲು ಆದೇಶಿಸಿರುತ್ತದೆ ಎಂದಿದ್ದಾರೆ. ಸದರಿ ಆದೇಶವನ್ನು ನಿಗಮದಲ್ಲಿ ಅಳವಡಿಸಿಕೊಂಡಿದ್ದು, ಅದರಂತೆ ನಿಗಮದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ದಿನಾಂಕ: 01.01.2026 ರಿಂದ ಜಾರಿಗೆ ಬರುವಂತೆ ಪ್ರತಿ ತಿಂಗಳು ಒಂದು ದಿನದಂತೆ ಋತುಚಕ್ರ ರಜೆಯ ಸೌಲಭ್ಯವನ್ನು ಈ ಕೆಳಕಂಡ ಷರತ್ತುಗಳಿಗೊಳಪಟ್ಟು ಮಂಜೂರು ಮಾಡುವುದು ಎಂದು ಹೇಳಿದ್ದಾರೆ. 1. ಋತುಚಕ್ರ ಹೊಂದಿರುವ, 18 ರಿಂದ 52 ವಯಸ್ಸಿನ ನಿಗಮದ ಮಹಿಳಾ…

Read More

ಟರ್ಕಿ : ಟರ್ಕಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಲಿಬಿಯಾದ ಸೇನಾ ಮುಖ್ಯಸ್ಥ ಸೇರಿ 7 ಮಂದಿ ಸಾವನ್ನಪ್ಪಿದ್ದಾರೆ. ಜನರಲ್ ಮುಹಮ್ಮದ್ ಅಲಿ ಅಹ್ಮದ್ ಅಲ್ ಹದ್ದಾದ್ ಅವರನ್ನು ಹೊತ್ತೊಯ್ಯುತ್ತಿದ್ದ ಸಣ್ಣ ಖಾಸಗಿ ಜೆಟ್ ಅಂಕಾರಾ ಬಳಿ ಪತನಗೊಂಡ ನಂತರ ಅದರ ಅವಶೇಷಗಳು ಪತ್ತೆಯಾಗಿವೆ ಎಂದು ಟರ್ಕಿಶ್ ಸರ್ಕಾರ ತಿಳಿಸಿದೆ. ಲಿಬಿಯಾ ಪ್ರಧಾನಿ ಅಬ್ದುಲ್-ಹಮೀದ್ ದ್ಬೈಬೆಹ್ ಹೇಳಿಕೆಯೊಂದರಲ್ಲಿ, ಲಿಬಿಯಾ ಸೇನಾ ಮುಖ್ಯಸ್ಥ ಹದ್ದಾದ್ ಅವರ ನಷ್ಟವು “ತಾಯ್ನಾಡಿಗೆ ದೊಡ್ಡ ನಷ್ಟ” ಎಂದು ಹೇಳಿದ್ದಾರೆ. ಲಿಬಿಯಾದ ಮಿಲಿಟರಿ ಮುಖ್ಯಸ್ಥ, ಇತರ ನಾಲ್ವರು ಅಧಿಕಾರಿಗಳು ಮತ್ತು ಮೂವರು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಜೆಟ್ ಮಂಗಳವಾರ ಟರ್ಕಿಯ ರಾಜಧಾನಿ ಅಂಕಾರಾದಿಂದ ಹೊರಟ ಸ್ವಲ್ಪ ಸಮಯದ ನಂತರ ಪತನಗೊಂಡು, ವಿಮಾನದಲ್ಲಿದ್ದ ಏಳು ಜನರು ಸಾವನ್ನಪ್ಪಿದರು. ತಾಂತ್ರಿಕ ದೋಷದಿಂದಾಗಿ ವಿಮಾನ ಪತನಗೊಂಡಿದೆ ಎಂದು ಲಿಬಿಯಾದ ಅಧಿಕಾರಿಗಳು ತಿಳಿಸಿದ್ದಾರೆ. ಲಿಬಿಯಾ ಮತ್ತು ಟರ್ಕಿ ನಡುವಿನ ಮಿಲಿಟರಿ ಸಹಕಾರವನ್ನು ಬಲಪಡಿಸುವತ್ತ ಗಮನಹರಿಸಿದ ಉನ್ನತ ಮಟ್ಟದ ರಕ್ಷಣಾ ಮಾತುಕತೆಗಾಗಿ ಲಿಬಿಯಾದ ನಿಯೋಗ ಅಂಕಾರಾದಲ್ಲಿತ್ತು ಎಂದು…

Read More

ಬೆಂಗಳೂರು : ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸಂಭವಿಸುವ ಜನನ ಹಾಗೂ ಮರಣ ಘಟನೆಗಳನ್ನು 21 ದಿನಗಳೊಳಗಾಗಿ ಕಡ್ಡಾಯವಾಗಿ ನೋಂದಣಿ ಮಾಡಿ ಉಚಿತ ಪ್ರಮಾಣ ಪತ್ರವನ್ನು ನೀಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಜನನ ಮತ್ತು ಮರಣಗಳ ನೋಂದಣಿ ಕಾಯ್ದೆ 1969 (2023) ರಲ್ಲಿ ತಿದ್ದುಪಡಿ ಪ್ರಕಾರ ಜನನ ಮರಣ ನೋಂದಣಿ ಪ್ರಮಾಣ ಪತ್ರ ನೀಡಲು ಕ್ರಮವಹಿಸುವಂತೆ ಉಲ್ಲೇಖಿತ ಪತ್ರಗಳಲ್ಲಿ ಸೂಚಿಸಲಾಗಿದೆ ಅದರಂತೆ ಆಸ್ಪತ್ರೆಯಲ್ಲಿ ಆಗುವ ಜನನ & ಮರಣ ಘಟನೆಗಳನ್ನು ಕಡ್ಡಾಯವಾಗಿ ನೋಂದಣಿ ಮಾಡಿ 21 ದಿನಗಳೊಳಗಾಗಿ ಉಚಿತವಾಗಿ ಪ್ರಮಾಣ ಪತ್ರವನ್ನು ನೀಡಬೇಕಾಗಿರುತ್ತದೆ. ದಿನಾಂಕ 03/12/2025 ರಂದು ನಡೆದ ನಾಗರಿಕ ನೋಂದಣಿ ಪದ್ಧತಿಯ 32ನೇ ಅಂತರ ಇಲಾಖೆ ಸಮನ್ವಯ ಸಮಿತಿ (Inter Departmental Co Ordination committee-IDCC) ಸಭೆಯಲ್ಲಿ ಈ ಕುರಿತು ಚರ್ಚಿಸಲಾಗಿದೆ ಅದರಂತೆ ಈ ಅಂಶಗಳು ಕೆಳಕಂಡಂತಿರುತ್ತವೆ. 2025ನೇ ಸಾಲಿನಲ್ಲಿ ರಾಜ್ಯದಲ್ಲಿ (ದಿನಾಂಕ: 28/11/2025 ರವರೆಗೆ) ನೋಂದಣಿಯಾಗಿರುವ ಜನನ ಮತ್ತು ಮರಣ ಘಟನೆಗಳ ಶೇಕಡವಾರು ವಿವರಗಳು…

Read More

ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿ ಈ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ಸಿಕ್ಕಿದ್ದು, 2026ನೇ ಸಾಲಿನ ವರ್ಗಾವಣೆಯ ವೇಳಾಪಟ್ಟಿ ಪ್ರಕಟಿಸಲಾಗಿದೆ. 2026ನೇ ಸಾಲಿನ ವರ್ಗಾವಣೆಯನ್ನು ಉಲ್ಲೇಖಿತ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ವೈದ್ಯಾಧಿಕಾರಿಗಳು ಮತ್ತು ಇತರೆ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ) ಕಾಯ್ದೆ 2011 ಹಾಗೂ ತಿದ್ದುಪಡಿ ಕಾಯ್ದೆ 2025 ಉಲ್ಲೇಖಿತ(2)ರಲ್ಲಿ ರಚಿಸಲಾಗಿರುವ ನಿಯಮಾವಳಿಗಳನ್ನು ಹಾಗೂ ಉಲ್ಲೇಖ(3)ರ ಸರ್ಕಾರದ ಆದೇಶದಂತೆ ವರ್ಗಾವಣೆಯನ್ನು ನಡೆಸಲು ಆದೇಶಿಸಲಾಗಿದೆ. ಅದರಂತೆ, 2026ನೇ ಸಾಲಿನಲ್ಲಿ ವರ್ಗಾವಣೆ ಕಾಯ್ದೆ ಮತ್ತು ನಿಯಮ 6(1)ರನ್ವಯ ಸಾರ್ವಜನಿಕ ಹಿತದೃಷ್ಟಿಯಿಂದ ಕನಿಷ್ಠ ಸೇವಾವಧಿ ಪೂರೈಸಿರುವ ಮತ್ತು ನಿಯಮ 6 (3) ರನ್ವಯ ವಿಶೇಷ ವರ್ಗದ ಕೋರಿಕೆ ವರ್ಗಾವಣೆಗೆ ಸಂಬಂಧಿಸಿದಂತೆ ಎ, ಬಿ, ಸಿ ಮತ್ತು ಡಿ ವೃಂದದ ಅಧಿಕಾರಿ/ಸಿಬ್ಬಂದಿಗಳ ಮಾಹಿತಿಯನ್ನು ಸಲ್ಲಿಸುವ ವರ್ಗಾವಣೆಯ ವೇಳಾಪಟ್ಟಿಯನ್ನು ಉಲ್ಲೇಖ(3) ಸರ್ಕಾರದ ಆದೇಶದಲ್ಲಿ ಸೂಚಿಸಿರುವಂತೆ ಈ ಕೆಳಕಂಡ ದಿನಾಂಕಗಳಿಗೆ ನಿಗದಿಪಡಿಸಲಾಗಿದೆ.

Read More

ಬೆಂಗಳೂರು : ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಬಿಗ್ ಶಾಕ್, ನಾಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ದೆಹಲಿ ಮತ್ತು ಆಂಧ್ರಪ್ರದೇಶ ನಡುವಿನ ವಿಜಯ್ ಹಜಾರೆ  ಟೂರ್ನಿಯ ಪಂದ್ಯಕ್ಕೆ ಅನುಮತಿ ನೀಡಲು ಪೊಲೀಸರು ನಿರಾಕರಿಸಿದ್ದಾರೆ. ಹೌದು, ನಾಳೆ ಮ್ಯಾಚ್‌ಗೆ ವಿರಾಟ್ ಕೊಹ್ಲಿ ಆಗಮಿಸುವುದರಿಂದ ಹೊರಭಾಗದಲ್ಲಿ ಅಭಿಮಾನಿಗಳು ಸೇರುವ ಆತಂಕ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ನಾಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ದೆಹಲಿ ಮತ್ತು ಆಂಧ್ರಪ್ರದೇಶ ನಡುವಿನ ವಿಜಯ್ ಹಜಾರೆ  ಟೂರ್ನಿಯ ಪಂದ್ಯಕ್ಕೆ ಅನುಮತಿ ನೀಡಲು ಪೊಲೀಸರು ನಿರಾಕರಿಸಿದ್ದಾರೆ. ಆರ್‌ಸಿಬಿ ವಿಜಯೋತ್ಸವ ವೇಳೆ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಮಂದಿ ಅಭಿಮಾನಿಗಳು ಸಾವನ್ನಪ್ಪಿದ್ದ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯಗಳನ್ನ ಸ್ಥಗಿತಗೊಳಿಸಲಾಗಿದೆ.

Read More

ಹಬ್ಬದ ಋತು ಆರಂಭವಾಗಿದೆ ಮತ್ತು ಅನೇಕ ಹೊಸ ಚಲನಚಿತ್ರಗಳು ಈಗಾಗಲೇ ಥಿಯೇಟರ್‌ಗಳಿಗೆ ಬಂದಿವೆ. ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿ ಉಚಿತ ಚಲನಚಿತ್ರವನ್ನು ವೀಕ್ಷಿಸಲು ನೀವು ಯೋಜಿಸುತ್ತಿದ್ದರೆ, ಅದು ದುಬಾರಿಯಾಗಬಹುದು. ಹೌದು, ಈ ಉದ್ದೇಶಕ್ಕಾಗಿ ಅನೇಕ ಮೊಬೈಲ್ ಬಳಕೆದಾರರು ಪಿಕಾಶೋನಂತಹ ಅಪ್ಲಿಕೇಶನ್‌ಗಳನ್ನು ಆಶ್ರಯಿಸುತ್ತಾರೆ. ಗೃಹ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿರುವ ಏಜೆನ್ಸಿಯಾದ ಸೈಬರ್ ದೋಸ್ತ್ I4C, ಉಚಿತ ಚಲನಚಿತ್ರಗಳನ್ನು ವೀಕ್ಷಿಸುವ ಪ್ರಲೋಭನೆಯು ದುಬಾರಿಯಾಗಬಹುದು ಎಂದು ಹೇಳಿದೆ. ಉಚಿತ ಚಲನಚಿತ್ರಗಳ ಆಮಿಷದಿಂದಾಗಿ ನಿಮ್ಮ ಡೇಟಾ ಮತ್ತು ಸುರಕ್ಷತೆಯನ್ನು ಅಪಾಯಕ್ಕೆ ತೆಗೆದುಕೊಳ್ಳುವುದರ ವಿರುದ್ಧ ಸಲಹೆ ನೀಡುವ ಮೂಲಕ ಸೈಬರ್ ದೋಸ್ತ್ I4C X ಪ್ಲಾಟ್‌ಫಾರ್ಮ್‌ನಲ್ಲಿ ಪೋಸ್ಟ್ ಮಾಡಿದೆ. ಪೋಸ್ಟ್ ಅದನ್ನು ಅಪರಾಧ ಎಂದು ಕರೆಯುವವರೆಗೂ ಹೋಗುತ್ತದೆ. ಬಳಕೆದಾರರ ಸುರಕ್ಷತೆಯ ದೃಷ್ಟಿಯಿಂದ, ಪೈರೇಟೆಡ್ ಚಲನಚಿತ್ರಗಳನ್ನು ಒದಗಿಸುವ ಪಿಕಾಶೋನಂತಹ ಅಪ್ಲಿಕೇಶನ್‌ಗಳು ಅಸುರಕ್ಷಿತವೆಂದು ಸೈಬರ್ ದೋಸ್ತ್ ಹೇಳಿದೆ. ಲಕ್ಷಾಂತರ ಬಳಕೆದಾರರು ತಮ್ಮ ಡೇಟಾವನ್ನು ಬಳಸುವ ಮೂಲಕ ಅಪಾಯಕ್ಕೆ ಸಿಲುಕಿಸುತ್ತಿದ್ದಾರೆ ಎಂದು ಪೋಸ್ಟ್ ಹೇಳುತ್ತದೆ. ಸೈಬರ್ ದೋಸ್ತ್‌ನ ಪೋಸ್ಟ್ https://twitter.com/Cyberdost/status/2002311648355496213?s=20 ಈ ಅಪ್ಲಿಕೇಶನ್‌ಗಳು ನಿಮ್ಮನ್ನು ಹೇಗೆ…

Read More

“ವೈಕುಂಠ” ಎಂದರೆ ವಿಷ್ಣುಲೋಕ. ವಿಷ್ಣುವಿಗೆ ವೈಕುಂಠ ಎಂಬ ಹೆಸರಿದೆ ಎಂದು ತಿಳಿದುಬರುತ್ತದೆ, ಕಾರಣ ಒಂದು ಮನ್ವಂತರದಲ್ಲಿ ವಿಷ್ಣುವು ವಿಕುಂಠೆಯೆಂಬ “ಸ್ತ್ರೀ”ಯಲ್ಲಿ ಅವತರಿಸಿದನು, ಇದರಿಂದ ನಾರಾಯಣನಿಗೆ ವೈಕುಂಠನೆಂಬ ಹೆಸರು ಬಂತು ಎಂದು ಮಹಾಭಾರತದ ಶಾಂತಿಪರ್ವದಿಂದ ತಿಳಿದುಬರುತ್ತದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ…

Read More

ಬೆಂಗಳೂರು: ಕರ್ನಾಟಕ ಶಿಕ್ಷಣ ಇಲಾಖೆಯು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗಳ ಫಲಿತಾಂಶವನ್ನು ಶೀಘ್ರದಲ್ಲೇ ಪ್ರಕಟಿಸುವ ನಿರೀಕ್ಷೆಯಿದೆ. ಡಿಸೆಂಬರ್ 7 ರಂದು ಪ್ರಾಥಮಿಕ ಮತ್ತು ಪ್ರಾಥಮಿಕ ಹಂತದ ಶಿಕ್ಷಕರ ನೇಮಕಾತಿಗಾಗಿ ಪ್ರವೇಶಾತಿ ನಡೆಸಲಾಗಿತ್ತು. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಅಗತ್ಯವಿರುವ ರುಜುವಾತುಗಳನ್ನು ಬಳಸಿಕೊಂಡು ಆನ್‌ಲೈನ್ ಪೋರ್ಟಲ್‌ನಿಂದ ಅದನ್ನು ಪರಿಶೀಲಿಸಬಹುದು ಮತ್ತು ಡೌನ್‌ಲೋಡ್ ಮಾಡಬಹುದು. ಫಲಿತಾಂಶಗಳ ಪ್ರಕಟಣೆಗೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ಅಧಿಸೂಚನೆ ಇಲ್ಲ,  ಆದಾಗ್ಯೂ, ಹಿಂದಿನ ಪ್ರವೃತ್ತಿಗಳ ಪ್ರಕಾರ, ಇದು ಡಿಸೆಂಬರ್ ಅಂತ್ಯದ ವೇಳೆಗೆ ನಿರೀಕ್ಷಿಸಲಾಗಿದೆ. ಆಡಳಿತಾತ್ಮಕ ಕಾರಣಗಳಿಂದಾಗಿ ಯಾವುದೇ ವಿಳಂಬವಾದರೆ, ಅಭ್ಯರ್ಥಿಗಳು 2026 ರ ಜನವರಿ 1 ನೇ ವಾರದೊಳಗೆ ಫಲಿತಾಂಶವನ್ನು ಪರಿಶೀಲಿಸಬಹುದು ಎನ್ನಲಾಗಿದೆ. ಕರ್ನಾಟಕ TET ಫಲಿತಾಂಶ 2025 ರ ಪ್ರಕಟಣೆಗಾಗಿ ನಾವು ನಿರೀಕ್ಷಿತ ಬಿಡುಗಡೆ ದಿನಾಂಕವನ್ನು ಒದಗಿಸಿದ್ದೇವೆ. ನಿರೀಕ್ಷಿತ ದಿನಾಂಕ 1 KARTET ಫಲಿತಾಂಶ: ಡಿಸೆಂಬರ್ 22 ರಿಂದ 25, 2025 ನಿರೀಕ್ಷಿತ ದಿನಾಂಕ 2 KARTET ಫಲಿತಾಂಶ: ಜನವರಿ 2026 ರ 1 ರಿಂದ 2 ನೇ ವಾರ…

Read More

ಹೃದಯಾಘಾತದ ಹಲವು ಲಕ್ಷಣಗಳು ಬಹಳ ಸಾಮಾನ್ಯ. ಜನರು ಅವುಗಳನ್ನು ಹಗುರವಾಗಿ ಪರಿಗಣಿಸುತ್ತಾರೆ. ಈ ಚಿಹ್ನೆಗಳು ವಾರಗಳು ಅಥವಾ ತಿಂಗಳುಗಳ ಮೊದಲೇ ಕಾಣಿಸಿಕೊಳ್ಳಬಹುದು. ಅಂತಹ ಲಕ್ಷಣಗಳ ಮೇಲೆ ನಿಗಾ ಇರಿಸಿ ಸರಿಯಾದ ಸಮಯದಲ್ಲಿ ವೈದ್ಯರನ್ನು ಸಂಪರ್ಕಿಸಲು ತಜ್ಞರು ಸೂಚಿಸುತ್ತಾರೆ. ಆಯಾಸ, ಅನಿಲ, ಒತ್ತಡ ಅಥವಾ ವೃದ್ಧಾಪ್ಯದ ಕಾರಣದಿಂದಾಗಿ ಹೃದಯಾಘಾತದ ಲಕ್ಷಣಗಳನ್ನು ನಿರ್ಲಕ್ಷಿಸಲಾಗುತ್ತದೆ. ಈ ಅಜಾಗರೂಕತೆಯು ನಂತರ ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು. ಹೃದಯ ಸಮಸ್ಯೆಗಳು ಇದ್ದಕ್ಕಿದ್ದಂತೆ ಬೆಳೆಯುವುದಿಲ್ಲ, ಆದರೆ ಕ್ರಮೇಣ ಬೆಳೆಯುತ್ತವೆ ಎಂಬುದನ್ನು ನೆನಪಿಡಿ. ಹೃದಯ ಅಪಧಮನಿಗಳಲ್ಲಿ ಅಡಚಣೆಗಳು ಬೆಳೆಯಲು ಪ್ರಾರಂಭಿಸಿದಾಗ ಅಥವಾ ಹೃದಯ ಸ್ನಾಯುವಿಗೆ ಸಾಕಷ್ಟು ಆಮ್ಲಜನಕ ಸಿಗದಿದ್ದಾಗ, ದೇಹವು ವಿವಿಧ ರೀತಿಯಲ್ಲಿ ಎಚ್ಚರಿಸುತ್ತದೆ. ಈ ಆರಂಭಿಕ ಚಿಹ್ನೆಗಳನ್ನು ಸಮಯಕ್ಕೆ ಸರಿಯಾಗಿ ಗುರುತಿಸಿ ಸೂಕ್ತ ಚಿಕಿತ್ಸೆಯನ್ನು ಪ್ರಾರಂಭಿಸಿದರೆ, ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡಬಹುದು ಮಾತ್ರವಲ್ಲದೆ ಜೀವಗಳನ್ನು ಸಹ ಉಳಿಸಬಹುದು. ಹಿರಿಯ ಹೃದ್ರೋಗ ತಜ್ಞ ಡಾ. ಅಲೋಕ್ ಚೋಪ್ರಾ ಅವರ ಪ್ರಕಾರ, ಹಠಾತ್ ಹೃದಯಾಘಾತದ ಮೊದಲು ಕಾಣಿಸಿಕೊಳ್ಳುವ ಕೆಲವು ಮೌನ, ಸೂಕ್ಷ್ಮ ಎಚ್ಚರಿಕೆ ಚಿಹ್ನೆಗಳು…

Read More

ಬೆಳಗಾವಿ : ಪಡಿತರ ಚೀಟಿಯಲ್ಲಿ ಅರ್ಹರ ಹೆಸರು ಡಿಲೀಟ್ ಆಗಿದ್ದರೆ ತಕ್ಷಣವೇ 45 ದಿನದೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಸಂಬಂಧಪಟ್ಟ ತಾಲ್ಲೂಕಿನ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದಲ್ಲಿ ಸದರಿ ಮನವಿಯನ್ನು ಪರಿಶೀಲಿಸಿ ಆದ್ಯತಾ ಪಡಿತರ ಚೀಟಿ ಹೊಂದಲು ನಿಯಮಾನುಸಾರ ಅರ್ಹರಿದ್ದಲ್ಲಿ ಅಂತಹವರ ಆದ್ಯತಾ ಪಡಿತರ ಚೀಟಿಯನ್ನು (PHH) ಮರುಸ್ಥಾಪಿಸಲು ಕ್ರಮವಹಿಸಲಾಗುತ್ತದೆ. ಮಾನದಂಡಗಳ ಆಧಾರದ ಮೇಲೆ ಅನರ್ಹವೆಂದು ಕಂಡುಬAದ ಆದ್ಯತಾ ಪಡಿತರ ಚೀಟಿಗಳನ್ನು ((PHH) ) ಆದ್ಯತೇತರ ಪಡಿತರ ಚೀಟಿಗಳನ್ನಾಗಿ (NPHH) ಪರಿವರ್ತಿಸಲು ಕ್ರಮವಹಿಸಲಾಗುತ್ತಿದೆ. ಈ ರೀತಿ ತಾತ್ಕಾಲಿಕವಾಗಿ ಆದ್ಯತೇತರ ಪಡಿತರ ಚೀಟಿಯನ್ನಾಗಿ (NPHH) ಪರಿವರ್ತಿಸಲಾದ ಪಡಿತರ ಚೀಟಿದಾರರು ಆದ್ಯತಾ ಪಡಿತರ ಚೀಟಿ ಹೊಂದಲು PHH) ಅರ್ಹರಾಗಿದ್ದಲ್ಲಿ 45 ದಿನದೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಸಂಬAಧಪಟ ತಾಲ್ಲೂಕಿನ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದಲ್ಲಿ ಸದರಿ ಮನವಿಯನ್ನು ಪರಿಶೀಲಿಸಿ ಆದ್ಯತಾ ಪಡಿತರ ಚೀಟಿ ಹೊಂದಲು ನಿಯಮಾನುಸಾರ ಅರ್ಹರಿದ್ದಲ್ಲಿ ಅಂತಹವರ ಆದ್ಯತಾ ಪಡಿತರ ಚೀಟಿಯನ್ನು (PHH) ಮರುಸ್ಥಾಪಿಸಲು ಕ್ರಮವಹಿಸಲಾಗುತ್ತದೆ. ಅದರಂತೆ ಒಂದು ವೇಳೆ ಅರ್ಹ ಫಲಾನುಭವಿಯ ಆದ್ಯತಾ ಪಡಿತರ ಚೀಟಿಯನ್ನು ರದ್ದು…

Read More