Subscribe to Updates
Get the latest creative news from FooBar about art, design and business.
Author: kannadanewsnow57
ಮೈಸೂರು : ಮೈಸೂರಿನ ಅರಮನೆಯ ಎದುರು ಜಯ ಮಾರ್ಯಾಂಡ ದ್ವಾರದ ಬಳಿ ಬಲೂನ್ ಗೆ ಹೀಲಿಯಂ ತುಂಬುವ ಸಿಲಿಂಡರ್ ಸ್ಫೋಟ ದುರಂತದಲ್ಲಿ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮತ್ತೊಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ಮೃತಪಟ್ಟವರ ಸಂಖ್ಯೆ 3 ಕ್ಕೆ ಏರಿಕೆಯಾಗಿದೆ. ಸ್ಪೋಟದಿಂದ ಗಾಯಗೊಂಡಿದ್ದ ನಂಜನಗೂಡಿನ ಚಾಮಲಾಪುರ ಬೀದಿ ನಿವಾಸಿ ಮಂಜುಳಾ(28), ಬೆಂಗಳೂರಿನ ಬ್ಯಾಡರಹಳ್ಳಿ ಲಕ್ಷ್ಮಿ(41) ಶುಕ್ರವಾರ ಸಾವನ್ನಪ್ಪಿದ್ದಾರೆ. ಈ ಮೂಲಕ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಉತ್ತರ ಪ್ರದೇಶದ ಜಿಲ್ಲೆಯ ತೋಫಿಯಾ ಗ್ರಾಮದ ಸಲೀಂ(40) ಅರಮನೆ ಸಮೀಪ ಸೈಕಲ್ ನಲ್ಲಿ ಹೀಲಿಯಂ ಬಲೂನ್ ಮಾರುತಿದ್ದಾಗ ಸ್ಪೋಟ ಸಂಭವಿಸಿ ಮೃತಪಟ್ಟಿದ್ದರು. ಘಟನೆಯ ಬಗ್ಗೆ ವಿಸ್ತೃತ ತನಿಖೆ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಮೈಸೂರು ಅರಮನೆ ಮುಂಭಾಗದಲ್ಲಿ ಹೀಲಿಯಂ ಗ್ಯಾಸ್ ತುಂಬಿದ್ದ ಸಿಲಿಂಡರ್ ಸ್ಪೋಟಗೊಂಡು ಬಲೂನ್ ವ್ಯಾಪಾರಿ ಸಲೀಂ ಮೃತಪಟ್ಟ ಘಟನೆಯ ಅಸಲಿ ಕಾರಣ ಈಗ ಬಹಿರಂಗವಾಗಿದೆ. ಸಲೀಂ ಸತತವಾಗಿ ಬಲೂನ್ಗಳಿಗೆ ಹೀಲಿಯಂ…
BREAKING : ಬೆಂಗಳೂರಿನಲ್ಲಿ ನವವಿವಾಹಿತೆ `ಗಾನವಿ’ ಸೂಸೈಡ್ ಕೇಸ್ ಗೆ ಬಿಗ್ ಟ್ವಿಸ್ಟ್ : ಪತಿ ಸೂರಜ್ ಕೂಡ ಆತ್ಮಹತ್ಯೆ.!
ಬೆಂಗಳೂರು : ಬೆಂಗಳೂರಿನಲ್ಲಿ ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪತ್ನಿ ಗಾನವಿ ಆತ್ಮಹತ್ಯೆ ಬೆನ್ನಲ್ಲೇ ಪತಿ ಸೂರಜ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಹಾರಾಷ್ಟ್ರದ ನಾಗಪುರದ ತನ್ನ ಮನೆಯಲ್ಲಿ ಪತಿ ಸೂರಜ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸೂರಜ್ ತಾಯಿ ಜಯಂತಿ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಬೆಂಗಳೂರಿನ ರಾಮಮೂರ್ತಿ ನಗರದ ಬಿ ಚೆನ್ನಸಂದ್ರದಲ್ಲಿ ಮನೆಯಲ್ಲಿ ನೇಣು ಬಿಗಿದುಕೊಂಡು ಗಾನವಿ (26) ಆತ್ಮಹತ್ಯೆ ಮಾಡಿಕೊಂಡಿದ್ದರು. ಹನಿಮೂನ್ ಗೆ ಶ್ರೀಲಂಕಾಗೆ ಗಾನವಿ ಹಾಗು ಸೂರಜ್ ತೆರಳಿದ್ದಾರೆ. ಆದರೆ ದಂಪತಿ ಅರ್ಧಕ್ಕೆ ಹಿಂದಿರುಗಿದ್ದಾರೆ. ವರದಕ್ಷಿಣೆ ಕಿರುಕುಳದಿಂದ ಬೆಸತ್ತು ಗಾನವಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎನ್ನುವ ಆರೋಪ ಕೇಳಿ ಬಂದಿದೆ. ಕಳೆದ ಅಕ್ಟೋಬರ್ 29ರಂದು ಗಾನ್ವಿ ಮತ್ತು ಸೂರಜ್ ಮದುವೆಯಾಗಿತ್ತು. ಸೂರಜ್ ಮನೆಯವರ ಬೇಡಿಕೆಯಂತೆ ಅದ್ದೂರಿಯಾಗಿ ಆರತಕ್ಷತೆ ನಡೆದಿತ್ತು. ಈಗ ಚಿಕಿತ್ಸೆ ಫಲಕಾರಿ ಆಗಲೇ ಗಾನವಿ ಸಾವನ್ನಪ್ಪಿದ್ದರು. ಇದೀಗ ಪತಿ ಸೂರಜ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬೆಂಗಳೂರು : ಮಾಹಿತಿ ಕೊರತೆ ಅಥವಾ ತಾಂತ್ರಿಕ ತೊಂದರೆಗಳಿಂದಾಗಿ ಅರ್ಹ ರೈತರು ಕುಸುಮ್-ಬಿ ಯೋಜನೆಯಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತವು ನಾಗರಬಾವಿಯ ಕೇಂದ್ರ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರ ಸ್ಥಾಪಿಸಿದೆ. 2025ರ ಡಿಸೆಂಬರ್ 23ರಿಂದ 2025ರ ಡಿಸೆಂಬರ್ 31ರವರೆಗೆ ಸಹಾಯವಾಣಿ ಕೇಂದ್ರ ಕಾರ್ಯನಿರ್ವಹಿಸಲಿದ್ದು, ಕುಸುಮ್ ಬಿ ಯೋಜನೆ ಕುರಿತಂತೆ ರೈತರು ತಮ್ಮ ಸಮಸ್ಯೆಗಳನ್ನು ದೂರವಾಣಿ ಕರೆಯ ಮೂಲಕ ಪರಿಹರಿಸಿಕೊಳ್ಳಬಹುದಾಗಿದೆ. ರಾಜ್ಯದ ಎಲ್ಲ ರೈತರು ಇದರ ನೆರವು ಪಡೆದುಕೊಳ್ಳಬಹುದಾಗಿದ್ದು, ಇದಕ್ಕಾಗಿ ಕ್ರೆಡಲ್ ಸಿಬ್ಬಂದಿ, ಪ್ರತಿದಿನ ಬೆಳಿಗ್ಗೆ 6.00 ರಿಂದ ರಾತ್ರಿ 9.00ರವರೆಗೆ ರಜೆ ಇಲ್ಲದೆ ಎರಡು ಪಾಳಿಗಳಲ್ಲಿ ಕೆಲಸ ನಿರ್ವಹಿಸಲಿದ್ದಾರೆ. ಸಹಾಯವಾಣಿಯಲ್ಲಿ ಕುಸುಮ್ ಯೋಜನೆಯ ಕಾಂಪೊನೆಂಟ್ ಬಿ ಅಡಿ ಸೋಲಾರ್ ಪಂಪ್ಸೆಟ್ ಹಾಕಿಸಿಕೊಳ್ಳುವ ಕುರಿತು ಮಾಹಿತಿ, ಆನ್ಲೈನ್ ಪಾವತಿ ಮತ್ತು ಇತರ ಸಂಬಂಧಿತ ಪ್ರಶ್ನೆಗಳಿಗೆ ಉತ್ತರ ಸಿಗಲಿದೆ. ರೈತರು ಮಧ್ಯವರ್ತಿಗಳನ್ನು ಸಂಪರ್ಕಿಸದೆ ಸಹಾಯವಾಣಿಯ ಅಧಿಕೃತ ಫೋನ್ ಸಂಖ್ಯೆ 080-22202100 ಮತ್ತು 8095132100ಅನ್ನು ನೇರವಾಗಿ ಸಂಪರ್ಕಿಸಬಹುದು. ಸೋಲಾರ್ ವಿದ್ಯುತ್ ಚಾಲಿತ ನೀರಾವರಿ…
ನವದೆಹಲಿ : ಈ ವರ್ಷ ಮುಗಿದ ನಂತರ ನೀವು ಮನೆ ಕಟ್ಟಲು ಅಥವಾ ವಸತಿ ಯೋಜನೆಯಲ್ಲಿ ಕೆಲಸ ಪ್ರಾರಂಭಿಸಲು ಯೋಜಿಸುತ್ತಿದ್ದೀರಾ? ಹೌದು ಎಂದಾದರೆ, ಅದು ನಿಮಗೆ ಸ್ವಲ್ಪ ದುಬಾರಿಯಾಗಬಹುದು. ಏಕೆಂದರೆ ಜನವರಿ 2026ರಿಂದ ದೇಶದಲ್ಲಿ ಸಿಮೆಂಟ್ ಬೆಲೆಗಳು ಏರಿಕೆಯಾಗುವ ನಿರೀಕ್ಷೆಯಿದೆ. ಆದ್ದರಿಂದ, ಹೊಸ ಮನೆ ಕಟ್ಟಲು ಅಥವಾ ನಿರ್ಮಾಣ ಕಾರ್ಯವನ್ನು ಕೈಗೊಳ್ಳಲು ಯೋಜಿಸುತ್ತಿರುವವರು ಮುಂಬರುವ ಸಮಯದಲ್ಲಿ ಹೆಚ್ಚಿನ ವೆಚ್ಚವನ್ನ ಎದುರಿಸಬೇಕಾಗುತ್ತದೆ. ಸಿಸ್ಟಮ್ಯಾಟಿಕ್ಸ್ ರಿಸರ್ಚ್ನ ವರದಿಯ ಪ್ರಕಾರ, ಜನವರಿ 2026ರಿಂದ ಸಿಮೆಂಟ್ ಬೆಲೆಗಳು ಹೆಚ್ಚಾಗಬಹುದು. ಸಿಮೆಂಟ್ ಬೆಲೆಗಳಲ್ಲಿ ಇತ್ತೀಚಿನ ಕುಸಿತದ ನಂತರ, ಬೇಡಿಕೆ ಸುಧಾರಿಸುವ ಸಾಧ್ಯತೆಯಿದೆ, ಇದರಿಂದಾಗಿ ಕಂಪನಿಗಳು ಬೆಲೆಗಳನ್ನ ಹೆಚ್ಚಿಸಬಹುದು ಎಂದು ವರದಿ ಹೇಳುತ್ತದೆ. ಕುಸಿತದ ನಂತರ ಬೆಲೆಗಳು ಏರಿಕೆಯಾಗುವ ನಿರೀಕ್ಷೆ.! ಸಿಸ್ಟಮ್ಯಾಟಿಕ್ಸ್ ರಿಸರ್ಚ್ ವರದಿಯ ಪ್ರಕಾರ, ಕಳೆದ ತಿಂಗಳು ಅಖಿಲ ಭಾರತ ಸರಾಸರಿ ಸಿಮೆಂಟ್ ಬೆಲೆಗಳು ಪ್ರತಿ ಚೀಲಕ್ಕೆ ₹6 ರಷ್ಟು ಕುಸಿದಿವೆ. ಈ ಕುಸಿತವು ಮುಖ್ಯವಾಗಿ ದಕ್ಷಿಣ ಮತ್ತು ಪೂರ್ವ ಭಾರತದಲ್ಲಿ ಬೆಲೆ ಇಳಿಕೆಯಿಂದಾಗಿ ಸಂಭವಿಸಿದೆ. ಆದಾಗ್ಯೂ, ಸಿಸ್ಟಮ್ಯಾಟಿಕ್ಸ್…
ಬೆಂಬಲ ಯೋಜನೆಯಡಿ 2025-26 ನೇ ಸಾಲಿನ ಮುಂಗಾರು ಹಂಗಾಮಿನ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಖರೀದಿಸಲಾಗುವುದು ಎಂದು ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ. ಕೇಂದ್ರ ಸರ್ಕಾರ ನಿಗಧಿಪಡಿಸಿದ ಬೆಂಬಲ ಬೆಲೆ ಪ್ರತಿ ಕ್ವಿಂಟಾಲ್ ಗೆ ರೂ.8000 ರಂತೆ ಖರೀದಿಸಲಾಗುತ್ತಿದ್ದು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತವು ಖರೀದಿ ಏಜೆನ್ಸಿಯಾಗಿದೆ. ಖರೀದಿ ಕೇಂದ್ರಗಳ ವಿವರ: ಬಳ್ಳಾರಿ ನಗರದ ಎಸ್.ಪಿ ವೃತ್ತದ ಬಳಿಯ ಮಾರುತಿ ನಗರದ 2ನೇ ಕ್ರಾಸ್ ನ ರೈತರ ಸೇವಾ ಸಹಕಾರ ಸಂಘ ನಿಯಮಿತ (ದೂ.08392266489, ಮೊ.9035829283). ಬಳ್ಳಾರಿ ನಗರದ ಹರಿಶ್ಚಂದ್ರ ಘಾಟ್ ರಸ್ತೆಯ ಮಿಲ್ಲರ್ ಪೇಟೆಯ ನಂ:124 ರ ಟಿಎಪಿಸಿಎಂಎಸ್ (ಮೊ.9535151619, 6361665722). ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ, ಬೆಂಗಳೂರು, ಬಳ್ಳಾರಿ (ಮೊ.9449664453). ಬೇಕಾದ ದಾಖಲೆ: 2025-26ನೇ ಸಾಲಿನ ಪಹಣಿ ಪತ್ರ, ರೈತರು ತಮ್ಮ ಹೆಸರನ್ನು ಫ್ರೂಟ್ಸ್ ತಂತ್ರಾAಶದಲ್ಲಿ ನೋಂದಾಯಿಸಿರಬೇಕು ಹಾಗೂ ಎಫ್ಐಡಿ ಪಡೆಯುವುದು ಕಡ್ಡಾಯ,…
ಬೆಂಗಳೂರು : ಸಾರ್ವಜನಿಕ ಸಾರಿಗೆಗಳಲ್ಲಿ ತುರ್ತು ನಿರ್ಗಮದ ಬಾಗಿಲುಗಳಿಲ್ಲದಿದ್ದರೆ ಭೌತಿಕ ಕ್ಷಮತೆ ದೃಢೀಕರಣ ಪತ್ರ – ಎಫ್ಸಿ ಮಾಡದಂತೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ. ಬಸ್ಗಳಲ್ಲಿ ಯಾವುದೇ ರೀತಿಯ ಸ್ಫೋಟಕಗಳನ್ನು ಸಾಗಿಸಬಾರದು ಎಂದು ಕಟ್ಟಪ್ಪಣೆ ಮಾಡಿದ್ದೇವೆ. ಪ್ರಯಾಣಿಕರನ್ನು ಹೊರತುಪಡಿಸಿ ಅನಗತ್ಯವಾದ ಲಗೇಜ್ಗಳನ್ನು ಸಾಗಿಸದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದ್ದಾರೆ. https://twitter.com/KarnatakaVarthe/status/2004525422034427913?s=20
ಬೆಂಗಳೂರು : ಬಹುಕಾಲದಿಂದ ತಾಂಡ, ಹಟ್ಟಿ ಗೊಲ್ಲರಹಟ್ಟಿಗಳಲ್ಲಿ ವಾಸ ಮಾಡುತ್ತಿದ್ದ ನಿವಾಸಿಗಳಿಗೆ ದಾಖಲೆ ಇಲ್ಲದೆ ನೆಮ್ಮದಿಯ ಜೀವನ ಅಸಾಧ್ಯವಾಗಿತ್ತು. ಇಂತಹವರಿಗೆ ಹಕ್ಕುಪತ್ರ ಮತ್ತು ದಾಖಲೆಯನ್ನು ಒದಗಿಸಿಕೊಡಲು ಕರ್ನಾಟಕ ಭೂ ಸುಧಾರಣಾ ಕಾಯ್ದೆಗೆ 2017ರಲ್ಲಿ ಕಾನೂನು ತಿದ್ದುಪಡಿ ಮಾಡಲಾಗಿದೆ. ಇದರ ಮುಖಾಂತರ ಕಾಲಾನುಕಾಲದಿಂದ ಅತಂತ್ರದಲ್ಲಿ ಬದುಕುತ್ತಿದ್ದ ಕುಟುಂಬಗಳ ಸೂರಿಗೆ ದಾಖಲೆಗಳ ಗ್ಯಾರಂಟಿ ನೀಡುವ ಕೆಲಸ ಪ್ರಗತಿಯಲ್ಲಿದೆ. ಈ ಕಾನೂನು 2017ರಲ್ಲಿ ತಿದ್ದುಪಡಿ ಆದ ನಂತರ 2023ರ ಮೇ ವರೆಗೆ 6 ವರ್ಷಗಳಲ್ಲಿ 1.08 ಲಕ್ಷ ನಿವಾಸಿಗಳಿಗೆ ಹಕ್ಕುಪತ್ರಗಳನ್ನು ನೀಡಲಾಗಿತ್ತು. ಮೇ 2023 ರಿಂದ 2025ರವರೆಗೆ 1.11 ಲಕ್ಷ ಹಕ್ಕುಪತ್ರಗಳನ್ನು ನೀಡಲಾಗಿದೆ. ಮೇ 2025ರ ನಂತರ 1.10 ಲಕ್ಷ ಹಕ್ಕುಪತ್ರಗಳನ್ನು ನೀಡುವ ಪ್ರಕ್ರಿಯೆ ಕೂಡಲೇ ಪೂರ್ಣಗೊಳಿಸಿ, 2026ರ ಫೆಬ್ರವರಿ ತಿಂಗಳ ಒಳಗಾಗಿ 1.10 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಸರ್ಕಾರ ತೀರ್ಮಾನಿಸಿದೆ. ದಶಕಗಳ ಸಮಸ್ಯೆಗೆ ಪರಿಹಾರ ನೀಡುವ ಕಾರ್ಯ ಕಂದಾಯ ಗ್ರಾಮ ರಚನೆ ಅಭಿಯಾನದ ಮುಖಾಂತರ ನಡೆಯುತ್ತಿದೆ. ದಾಖಲೆ ರಹಿತ ವಸತಿ ಪ್ರದೇಶ ಮತ್ತು…
ಸರಕಾರವು ಮನೆಯಲ್ಲಿಯೇ ಅತಿ ಸರಳವಾಗಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ, ನಿಗದಿತ ಕಾಲಾವಧಿಯಲ್ಲಿ ಇ-ಖಾತಾ ಸೇವೆಯನ್ನು ಪಡೆಯಲು ತಂತ್ರಾಂಶ ರೂಪಿಸಿದ್ದು, ಅದರಂತೆ ಆಸ್ತಿ ಕಣಜದಲ್ಲಿನ ಮಾಹಿತಿ ಆಧಾರದ ಮೇಲೆ ಕರಡು ಇ-ಖಾತಾವನ್ನು ಪ್ರಕಟಿಸಲಾಗಿರುತ್ತದೆ. ಸಾರ್ವಜನಿಕರು ಈ ಮಾಹಿತಿಯನ್ನು ನೇರವಾಗಿ ವೀಕ್ಷಿಸಬಹುದಾಗಿದೆ. ಮಾಹಿತಿಗಳ ಬಗ್ಗೆ ತಕರಾರು ಇದ್ದಲ್ಲಿ ಸಾರ್ವಜನಿಕರು ಇ-ಆಸ್ತಿ ತಂತ್ರಾಂಶದಲ್ಲಿನ ಹೆಚ್ಚಿನ ಮಾಹಿತಿಯನ್ನು ನೇರವಾಗಿ ನಮೂದಿಸಬಹುದಾಗಿದೆ. ನಮೂದಿಸಿದ ಮಾಹಿತಿಯ ನಿಖರತೆಯನ್ನು ನಗರಸಭೆಯು ಪರಿಶೀಲಿಸಿ ಅನುಮೋದಿಸಲಾಗುವುದು. ಅಂತಿಮ ಇ-ಖಾತಾವನ್ನು ಸಾರ್ವಜನಿಕರು ತಮ್ಮ ಮನೆಗಳಲ್ಲಿ ಕುಳಿತು ಪಡೆಯಬಹುದಾಗಿದೆ. ಈ-ಖಾತಾ ಪಡೆಯಲು ಮಾಲೀಕರ ಭಾವಚಿತ್ರ , ಆಸ್ತಿ ತೆರಿಗೆ ಹಾಗೂ ನೀರಿನ ಕರದ ಚಲನ್, ಸ್ವತ್ತಿನ ದಾಖಲೆಗಳು ಕ್ರಯಪತ್ರ, ದಾನಪತ್ರ, ಹಕ್ಕು ಬಿಡುಗಡೆ ಪತ್ರ, ವಾರಸಾ ಪ್ರಮಾಣ ಪತ್ರ, ವಿದ್ಯುತ್ ಆರ್.ಆರ್. ನಂಬರ್, ಸ್ವತ್ತಿನ ಛಾಯಾಚಿತ್ರ, ಋಣಭಾರ ನಮೂನೆ-15/16 (ಇಆ), ಆಧಾರ್ ಕಾರ್ಡ ಪ್ರತಿ, ಪಹಣಿ ಪತ್ರಿಕೆ, ಮ್ಯುಟೇಶನ ಪ್ರತಿ, ಸರ್ವೆ ನಕ್ಷೆ ಹಾಗೂ ಸ್ವತ್ತಿಗೆ ಸಂಬಂಧಿಸಿದ ಇತರೆ ಪೂರಕ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. ಕರ್ನಾಟಕ-1 ಕೇಂದ್ರಗಳಲ್ಲಿ…
ರೂ. 250 ಬಜೆಟ್, 100GB ಡೇಟಾ, BiTV ಮೂಲಕ ಟಿವಿ ಚಾನೆಲ್ಗಳು, OTT ಸೇವೆಗಳು, ಉಚಿತ ಧ್ವನಿ ಕರೆಗಳು ಮತ್ತು SMS.. ಈ ಎಲ್ಲಾ ಪ್ರಯೋಜನಗಳನ್ನು ನೀವು ಒಂದೇ ಪ್ಯಾಕೇಜ್ನಲ್ಲಿ ಪಡೆದರೆ, ದುಬಾರಿ ಕೇಬಲ್ ಟಿವಿ ಸಂಪರ್ಕ ಅಥವಾ ದುಬಾರಿ ಪ್ರಿಪೇಯ್ಡ್ ರೀಚಾರ್ಜ್ಗಳು ಯಾರಿಗೆ ಬೇಕು? ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪನಿ BSNL ನಿಖರವಾಗಿ ಈ ಪ್ರಯೋಜನಗಳೊಂದಿಗೆ ಅದ್ಭುತ ಯೋಜನೆಯನ್ನು ತಂದಿದೆ. BSNL ರೂ. 251 ಯೋಜನೆಯ ವಿವರಗಳು ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ತನ್ನ ಗ್ರಾಹಕರಿಗೆ ಕೇವಲ ರೂ. 251 ಕ್ಕೆ ಹೊಸ ಪ್ರಿಪೇಯ್ಡ್ ಯೋಜನೆಯನ್ನು ಮತ್ತೆ ಪರಿಚಯಿಸಿದೆ. ಇದು ಮೊದಲು ಅದೇ ಬೆಲೆಯಲ್ಲಿ ವಿಭಿನ್ನ ಪ್ರಯೋಜನಗಳನ್ನು ಹೊಂದಿದ್ದರೂ, ಅದು ಈಗ ಅದನ್ನು ಹೆಚ್ಚು ಆಕರ್ಷಕವಾಗಿಸಿದೆ. ಈ ಯೋಜನೆಯ ಮೂಲಕ ಲಭ್ಯವಿರುವ ಪ್ರಯೋಜನಗಳು: ಡೇಟಾ: 100GB ಹೈ-ಸ್ಪೀಡ್ ಡೇಟಾ ಲಭ್ಯವಿದೆ. ಮನರಂಜನೆ (BiTV): BSNL ನ ಸ್ವಂತ OTT ಪ್ಲಾಟ್ಫಾರ್ಮ್ BiTV ಗೆ ಪ್ರವೇಶ. ಇದರ ಮೂಲಕ, ನೀವು…
ಬೆಂಗಳೂರು : ರಾಜ್ಯ ಸರ್ಕಾರವು ಕೆಲವು ಇಲಾಖೆಗಳ ಟ್ಯಾಕ್ಸ್ ಡಿಡಕ್ಷೆಡ್ ಅಟ್ ಸೋರ್ಸ್ (TDS) ಪಾವತಿ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರದ ಕೆಲವು ಇಲಾಖೆಗಳಲ್ಲಿ ಟ್ಯಾಕ್ಸ್ ಡಿಡಕ್ಷೆಡ್ ಅಟ್ ಸೋರ್ಸ್ (TDS) ಮೊತ್ತವನ್ನು ಆದಾಯ ತೆರಿಗೆ ಇಲಾಖೆಗೆ ವಿಳಂಬವಾಗಿ ಪಾವತಿಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಇಂತಹುದೆ ಪ್ರಕರಣವಾದ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಮುಖ್ಯ ಲೆಕ್ಕಾಧಿಕಾರಿಗಳ ಕಛೇರಿಯಲ್ಲಿ 2010-11ರವರೆಗಿನ ಅವಧಿಯಲ್ಲಿ ಟ್ಯಾಕ್ಸ್ ಡಿಡಕ್ಷೆಡ್ ಅಟ್ ಸೋರ್ಸ್ (TDS) ಮೊತ್ತವನ್ನು ಆದಾಯ ತೆರಿಗೆ ಇಲಾಖೆಗೆ ಪಾವತಿಸಿ ಫೈಲ್ ಮಾಡಲು ವಿಳಂಬಿಸಿದ್ದರಿಂದ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟಾಗಿದ್ದು, ಈ ವಿಷಯವನ್ನು ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ಗಂಭೀರವಾಗಿ ಪರಿಗಣಿಸಿರುತ್ತದೆ. ಆದ್ದರಿಂದ, ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಅಧಿಕಾರಿ /ಸಿಬ್ಬಂದಿಗಳು ಇನ್ನು ಮುಂದೆ ಇಂತಹ ಸನ್ನಿವೇಶಗಳಿಗೆ ಆಸ್ಪದೇ ನೀಡದೇ, ಟ್ಯಾಕ್ಸ್ ಡಿಡಕ್ಷೆಡ್ ಅಟ್ ಸೋರ್ಸ್ (TDS) ಮೊತ್ತವನ್ನು ಆದಾಯ ತೆರಿಗೆ ಇಲಾಖೆಗೆ ಸಕಾಲದಲ್ಲಿ ಪಾವತಿಸಲು ಕ್ರಮವಹಿಸತಕ್ಕದ್ದು.…














