Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ಚೀನಾದಲ್ಲಿ ವಿನಾಶವನ್ನುಂಟು ಮಾಡಿದ್ದ ಯಾಗಿ ಚಂಡಮಾರುತವು ಈಶಾನ್ಯ ಬಂಗಾಳ ಕೊಲ್ಲಿಯನ್ನು ತಲುಪಿದೆ, ಇದರ ಪರಿಣಾಮ ಭಾರತದಲ್ಲಿ ಗೋಚರಿಸುತ್ತದೆ. ಈ ಚಂಡಮಾರುತದಿಂದಾಗಿ, ಆಳವಾದ ಒತ್ತಡದ ಪ್ರದೇಶವು ರೂಪುಗೊಳ್ಳುತ್ತಿದೆ, ಅದು ದುರ್ಬಲಗೊಂಡಂತೆ ಗಾಳಿಯಾಗಿ ಬದಲಾಗುತ್ತದೆ. ಈ ಕಾರಣದಿಂದಾಗಿ, ದೇಶದಾದ್ಯಂತ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ, ಇದು ಅನೇಕ ರಾಜ್ಯಗಳಲ್ಲಿ ವಿನಾಶಕ್ಕೆ ಕಾರಣವಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಚಂಡಮಾರುತವು ಸೆಪ್ಟೆಂಬರ್ 15 ರಿಂದ ಪೂರ್ವ ಉತ್ತರ ಪ್ರದೇಶದಲ್ಲಿ ಸಕ್ರಿಯವಾಗಿದೆ ಮತ್ತು ಈಗ ಅದು ಜಾರ್ಖಂಡ್ ಸೇರಿದಂತೆ ದೇಶದ ಇತರ ರಾಜ್ಯಗಳತ್ತ ಚಲಿಸಬಹುದು. ಇದರಿಂದಾಗಿ ದೇಶದಾದ್ಯಂತ ಗಂಟೆಗೆ 30 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ. ಮುಂದಿನ 4 ದಿನಗಳ ಕಾಲ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನದ ಸ್ಥಿತಿ ಏನು ಎಂದು ನಮಗೆ ತಿಳಿಸಿ? ಹವಾಮಾನ ಇಲಾಖೆಯ ಪ್ರಕಾರ, ಸೆಪ್ಟೆಂಬರ್ ಮೊದಲ 12 ದಿನಗಳಲ್ಲಿ ರಾಜಧಾನಿ ದೆಹಲಿಯಲ್ಲಿ ಪ್ರತಿದಿನ ಮಳೆಯಾಗಿದೆ. ಕಳೆದ 2-3…
ಚೆನ್ನೈ : ಸೆಪ್ಟೆಂಬರ್ 17 ರ ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ. ಈಹಿನ್ನೆಲೆಯಲ್ಲಿ ಮೋದಿ ಹುಟ್ಟುಹಬ್ಬದ ಮೊದಲು ವಿದ್ಯಾರ್ಥಿಯೊಬ್ಬರಿಂದ ಅಮೂಲ್ಯವಾದ ಉಡುಗೊರೆಯನ್ನು ಸ್ವೀಕರಿಸಿದ್ದಾರೆ. ಚೆನ್ನೈನ 13 ವರ್ಷದ ವಿದ್ಯಾರ್ಥಿನಿ ಪ್ರೀಸ್ಲಿ ಶೇಖಿನಾ ಪ್ರಧಾನಿ ನರೇಂದ್ರ ಮೋದಿ ಅವರ ದೊಡ್ಡ ಭಾವಚಿತ್ರವನ್ನು ನಿರ್ಮಿಸುವ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾರೆ. ಈ ಅದ್ಭುತ ಪೇಂಟಿಂಗ್ ಅನ್ನು 800 ಕೆಜಿ ಧಾನ್ಯಗಳನ್ನು ಬಳಸಿ ತಯಾರಿಸಲಾಗಿದೆ ಮತ್ತು ಇದನ್ನು ರಚಿಸಲು 12 ಗಂಟೆಗಳನ್ನು ತೆಗೆದುಕೊಂಡರು. ಸೆ. 17 ರಂದು ಪ್ರಧಾನಿ ಮೋದಿಯವರ ಜನ್ಮದಿನದಂದು ಈ ವರ್ಣಚಿತ್ರವನ್ನು ಅನಾವರಣಗೊಳಿಸಲಾಗುತ್ತದೆ. ಪ್ರೀಸ್ಲಿ ತನ್ನ ಹೆತ್ತವರಾದ ಪ್ರತಾಪ್ ಸೆಲ್ವಂ ಮತ್ತು ಸಂಕಿರಾಣಿಯೊಂದಿಗೆ ಚೆನ್ನೈನ ಕೊಲಪಾಕ್ಕಂನಲ್ಲಿ ವಾಸಿಸುತ್ತಾಳೆ. ವೇಲಮ್ಮಾಳ್ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದಾಳೆ. ಅವರ ಸಮರ್ಪಣೆ ಮತ್ತು ಕಠಿಣ ಪರಿಶ್ರಮ ಸ್ಪಷ್ಟವಾಗಿ ಗೋಚರಿಸಿತು. ಪ್ರೀಸ್ಲಿಯು ಬೆಳಿಗ್ಗೆ 8:30 ಕ್ಕೆ ಚಿತ್ರಕಲೆ ಪ್ರಾರಂಭಿಸಿದ್ದು ಮತ್ತು ರಾತ್ರಿ 8:30 ಕ್ಕೆ ಅದನ್ನು ಪೂರ್ಣಗೊಳಿಸಿದ್ದಾರೆ. ಈ ವರ್ಣಚಿತ್ರವು 600 ಚದರ ಅಡಿಗಳಲ್ಲಿ ಹರಡಿದೆ. ಪ್ರೀಸ್ಲಿಯ…
ನವದೆಹಲಿ : ಒಂದು ದಿನ ಹೆಚ್ಚು ಕೆಲಸ ಮಾಡಿದ್ರೆ ಅಥವಾ ರಾತ್ರಿ ಯಾವುದೋ ಕಾರಣಕ್ಕೆ ನಿದ್ದೆ ಮಾಡದೇ ಇದ್ದಲ್ಲಿ ಬೆಳಗ್ಗೆ ಎದ್ದ ನಂತರ ಸುಸ್ತಾಗುವುದು ಸಹಜ, ಆದರೆ ಈ ಸುಸ್ತು ನಿಯಮಿತವಾಗಿದ್ದರೆ ಅದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಹಂಸಾ ರಿಸರ್ಚ್ ಗ್ರೂಪ್ ಇತ್ತೀಚೆಗೆ ಭಾರತದ 10 ನಗರಗಳಲ್ಲಿ ಒಂದು ಅಧ್ಯಯನವನ್ನು ನಡೆಸಿತು, ಅದರ ಆಧಾರದ ಮೇಲೆ ಭಾರತದ 85 ಪ್ರತಿಶತದಷ್ಟು ಯುವಕರು ಬೆಳಿಗ್ಗೆ ಎದ್ದ ತಕ್ಷಣ ಆಯಾಸದಿಂದ ಹೋರಾಡಲು ಪ್ರಾರಂಭಿಸುತ್ತಾರೆ ಎಂದು ಹೇಳಲಾಗಿದೆ ಬೆಳಿಗ್ಗೆ ಎದ್ದ ನಂತರ, ಆದರೆ ದೊಡ್ಡದು ಪರದೆಯ ಸಮಯ. ಕ್ಲಿನಿಕಲ್ ನ್ಯೂಟ್ರಿಷಿಯನ್ ಡಾ.ಪ್ರಿಯಾಂಕಾ ರೋಹಟಗಿ ಮಾತನಾಡಿ, ಯುವಕರು ಆರೋಗ್ಯಕರ ಜೀವನಶೈಲಿಯನ್ನು ಮಾಡಿಕೊಳ್ಳದಿದ್ದರೆ ಅದು ಅನೇಕ ಗಂಭೀರ ಪರಿಣಾಮಗಳನ್ನು ಉಂಟುಮಾಡುತ್ತದೆ. ಬೆಳಿಗ್ಗೆ ಎದ್ದ ನಂತರ ಆಯಾಸದಿಂದಾಗಿ ಬೆಳಗಿನ ಜಾವ ಆಯಾಸವಿದ್ದರೆ ನಂತರವೂ ಆಯಾಸ ಮುಂದುವರಿದರೆ ಅದಕ್ಕೆ ಹಲವು ಕಾರಣಗಳಿರಬಹುದು. ಮೊದಲನೆಯದಾಗಿ, ಇದು ಕೆಟ್ಟ ನಿದ್ರೆಯ ಅಭ್ಯಾಸವಾಗಿದೆ. ನೀವು ರಾತ್ರಿಯಲ್ಲಿ ಪದೇ ಪದೇ ಎಚ್ಚರಗೊಂಡರೆ ಅಥವಾ ಸಾಕಷ್ಟು ನಿದ್ರೆ ಮಾಡದಿದ್ದರೆ ಅಥವಾ…
ಕಲಬುರಗಿ: ಕಲ್ಯಾಣ ಕರ್ನಾಟಕದ ಭಾಗವಾದ ಕಲಬುರಗಿಯಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಸಲಾಗುತ್ತಿದ್ದು, ಈ ಭಾಗದ ಅಭಿವೃದ್ಧಿಗಾಗಿ ಪೂರಕ ಚರ್ಚೆ ಹಾಗೂ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಗಾಗಿ ಆಯವ್ಯಯದಲ್ಲಿ ರೂಪಿಸಲಾಗಿರುವ ಯೋಜನೆಗಳು ಹಾಗೂ ಇನ್ನಿತರ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಗುವುದು. ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿನ ಜನರಿಗೆ ಉದ್ಯೋಗಾವಕಾಶಗಳ ಬಗ್ಗೆ ಹಾಗೂ ಪ್ರತ್ಯೇಕ ಸಚಿವಾಲಯ ರಚನೆ ಬಗ್ಗೆಯೂ ಚರ್ಚಿಸಲಾಗುವುದು. ಕಾಂಗ್ರೆಸ್ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಯ ಪರವಾಗಿದೆ ಎಂದರು. 371 ಜೆ ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ: ಮನಮೋಹನ್ ಸಿಂಗ್ ನೇತೃತ್ವದ ಕೇಂದ್ರ ಸರ್ಕಾರದ ಅವಧಿಯಲ್ಲಿ 371 ಜೆ ಕಾನೂನು ತರಲಾಗಿದ್ದು,, ಇದಕ್ಕಾಗಿ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿಮುಖ್ಯಮಂತ್ರಿ ಧರಂಸಿಂಗ್ ಅವರು ಶ್ರಮವಹಿಸಿದ್ದರು. 2013 ರಲ್ಲಿ ಈ ಕಾನೂನನ್ನು ಕರ್ನಾಟಕದಲ್ಲಿ ಜಾರಿಗೆ ತರಲು ಕಾಂಗ್ರೆಸ್ ಸರ್ಕಾರ ಪ್ರಯತ್ನಿಸಿತೇ ಹೊರತರು ಬಿಜೆಪಿಯವರಲ್ಲ. ವಾಜಪೇಯಿಯವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಕೇಂದ್ರ…
ಬೆಂಗಳೂರು : ರಾಜ್ಯದ ನಿವೃತ್ತ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ನಿವೃತ್ತಿ ವೇತನ, ಇತರೆ ಭತ್ಯೆಗಳನ್ನು ಪರಿಷ್ಕರಿಸಿ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ನೀತಿ ನಿರ್ಣಯದಂತೆ, ಮೇಲೆ (2)ರ ಆದೇಶದಲ್ಲಿ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನಂತೆ ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿಗಳು ಮತ್ತು ಪಿಂಚಣಿಯನ್ನು ಪರಿಷ್ಕರಿಸಿ ಅನುಷ್ಠಾನಗೊಳಿಸಲು ಆದೇಶಗಳನ್ನು ಹೊರಡಿಸಲಾಗಿರುತ್ತದೆ. ಮುಂದುವರೆದು, ಕರ್ನಾಟಕ ನಾಗರೀಕ ಸೇವಾ (ಪರಿಷ್ಕೃತ ವೇತನ) ನಿಯಮಗಳು, 2024ರ ಅವಕಾಶಗಳಂತೆ ಪರಿಷ್ಕೃತ ವೇತನ ಶ್ರೇಣಿಗಳು ಮತ್ತು ಪರಿಷ್ಕೃತ ಪಿಂಚಣಿಯನ್ನು ಅನುಷ್ಠಾನಗೊಳಿಸಲು ಮೇಲೆ (4)ರಲ್ಲಿ ಓದಲಾದ ದಿನಾಂಕ: 23.08.2024ರಲ್ಲಿ ವಿಸ್ತ್ರತವಾದ ಆದೇಶಗಳನ್ನು ಹೊರಡಿಸಲಾಗಿರುತ್ತದೆ. ರಾಜ್ಯ ಸರ್ಕಾರವು ರಚಿಸಿದ 7ನೇ ರಾಜ್ಯ ವೇತನ ಆಯೋಗವು ಶಿಫಾರಸ್ಸು ಮಾಡಿರುವಂತೆ ರಾಜ್ಯ ಸರ್ಕಾರಿ ನೌಕರರಿಗೆ ಲಭ್ಯವಿರುವ ಕನಿಷ್ಠ ಮತ್ತು ಗರಿಷ್ಠ ಪಿಂಚಣಿಯನ್ನು ಈ ಕೆಳಕಂಡಂತೆ ಪರಿಷ್ಕರಿಸಲು ಸರ್ಕಾರವು ಹರ್ಷಿಸುತ್ತದೆ. 1. ಕನಿಷ್ಠ ನಿವೃತ್ತಿ ವೇತನ: ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಗಳು ಮತ್ತು ಕರ್ನಾಟಕ ನಾಗರೀಕ ಸೇವಾ (ಅಸಾಧಾರಣ…
ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿಗಳಲ್ಲೇ ಈಗ ಮರಣ ನೋಂದಣಿಗೆ ಅವಕಾಶ ನೀಡಲಾಗಿದೆ. ಜನನ-ಮರಣ ನೋಂದಣಿಗೆ ಅವಕಾಶ ನೀಡಲಾಗಿದ್ದು, ಅಲ್ಲಿಯೇ ಪ್ರಮಾಣಪತ್ರಗಳನ್ನು ಪಡೆಯಬಹುದಾಗಿದೆ. ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮಾಹಿತಿ ಹಂಚಿಕೊಂಡಿದ್ದು, ನಿಮ್ಮ ಗ್ರಾಮ ಪಂಚಾಯ್ತಿಯಲ್ಲೇ ಈಗ ಮರಣ ನೋಂದಣಿ ಸಾಧ್ಯವಿದೆ. ಮೊದಲ ಪ್ರಮಾಣ ಪತ್ರ ಉಚಿತವಾಗಿರುತ್ತದೆ ಎಂದಿದೆ. ಜನನ, ಮರಣ, ನಿರ್ಜೀವ ಜನನಗಳನ್ನು ನಿಮ್ಮ ಗ್ರಾಮ ಪಂಚಾಯ್ತಿಯಲ್ಲೇ ನೋಂದಣಿ ಮಾಡಿಸಿ, ಮೊದಲ ಪ್ರಮಾಣ ಪತ್ರವನ್ನು ಉಚಿತವಾಗಿ ಪಡೆಯಬಹುದಾಗಿದೆ. ಈ ಮೂಲಕ ಪ್ರತಿಯೊಂದು ಜನನ, ಮರಣ ನೋಂದಣಿಯನ್ನು ಖಚಿತಪಡಿಸಿಕೊಳ್ಳಿ ಅಂತ ತಿಳಿಸಿದೆ. ಈ ದಾಖಲೆಗಳು ಕಡ್ಡಾಯ ಆಧಾರ್ ಕಾರ್ಡ್ ಪಡಿತರ ಚೀಟಿ ವಾಹನ ಚಾಲನಾ ಪರವಾನಗಿ ಚುನಾವಣಾ ಗುರುತಿನ ಚೀಟಿ ಪಾಸ್ ಪೋರ್ಟ್ ಜನನ ಪ್ರಮಾಣ ಪತ್ರ SSLC, PUC ಅಂಕಪಟ್ಟಿ ವಿದ್ಯಾರ್ಥಿ ಗುರುತಿನ ಚೀಟಿ https://twitter.com/CommrPR/status/1835548751169282107?ref_src=twsrc%5Etfw%7Ctwcamp%5Etweetembed%7Ctwterm%5E1835548751169282107%7Ctwgr%5Ea7c6b14db1ff1df25e08a13ba1dc687c70804e36%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fkannada%2Fkannadanewsnow-epaper-dh71ad7b0a01d347d2a0a68e5f262fdb7d%2Fnimagidugottenimmagraamapanchaaytiyalleeegajananamaranapramaanapatralabhya-newsid-n631103579
ಬೆಂಗಳೂರು : ಯಜಮಾನಿಯರಿಗೆ ಸಚಿವೆ ಲಕ್ಷ್ಮಿಯರಿಗೆ ಸಿಹಿಸುದ್ದಿ ನೀಡಿದ್ದು, ಗೃಹಲಕ್ಷ್ಮಿ ಯೋಜನೆಯ ಜುಲೈ, ಆಗಸ್ಟ್ ತಿಂಗಳ ಕಂತಿನ ಹಣವನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಬಾಕಿ ಉಳಿದ ಎರಡು ತಿಂಗಳ ಹಣ ಒಟ್ಟಿಗೆ ಖಾತೆಗೆ ಜಮೆಯಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. ಇನ್ನು ಯೋಜನೆ ಸ್ಥಗಿತವಾಗುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಕರ್ನಾಟಕದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಎಂದಿಗೂ ಬಂದ್ ಆಗುವುದಿಲ್ಲ. 2 ತಿಂಗಳ ಬಾಕಿ ಹಣವನ್ನು ಒಂದೆರಡು ದಿನಗಳಲ್ಲಿ ಒಮ್ಮೆಗೆ ಖಾತೆ ಜಮೆ ಮಾಡಲಾಗುವುದು. ಗೃಹಲಕ್ಷ್ಮಿ ಹಣ ನಿತ್ಯ, ಸತ್ಯ, ನಿರಂತರ. ಕಳೆರಡು ತಿಂಗಳಿಂದ ಬರದಿರುವ ಹಣ ಒಂದೇ ಬಾರಿ ಅಕೌಂಟ್ಗೆ ಪಾವತಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಪಾಲಕರು ನಿರಾಕರಿಸಿದ ಕಾರಣ ಆರ್ಗ್ಯಾನಿಕ್ ಬೆಲ್ಲದ ಬದಲಿಗೆ ಗಟ್ಟಿ ಬೆಲ್ಲವನ್ನೇ…
ಬೆಂಗಳೂರು: ಇಂದು ನಗರದಲ್ಲಿ ಬೆಸ್ಕಾಂ ಇಲಾಖೆಯಿಂದ ತುರ್ತು ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಸೆ.17ರ ಇಂದು ಬೆಂಗಳೂರಿನ ಕೆಲ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ. ಈ ಕುರಿತಂತೆ ಬೆಸ್ಕಾಂನಿಂದ ( BESCOM ) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ದಿನಾಂಕ 17.09.2024 (ಮಂಗಳವಾರ) ಬೆಳಗ್ಗೆ 11:00 ಗಂಟೆಯಿAದ ಮದ್ಯಾಹ್ನ 04:00 ಗಂಟೆಯವರೆಗೆ “220/66/11 ಕೆ.ವಿ ಹೆಬ್ಬಾಳ ಸ್ವೀಕರಣಾ ಕೇಂದ್ರ” ದಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು ಎಂದಿದೆ. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: “ಜಯಮಹಲ್ ವಿಸ್ತರಣೆ, ನಂದಿ ದರ್ಗ, ದೂರರ್ಶನ, ಜಯಮಹಲ್ ರಸ್ತೆ, ಮುನಿರೆಡ್ಡಿ ಪಾಳ್ಯ, ಜೆ.ಸಿ.ನಗರ, ಮಾರಪ್ಪ ಗರ್ಡನ್, ಚಿನಪ್ಪ ಗರ್ಡನ್, ಎನ್.ಡಿ.ರಸ್ತೆ, ಏರ್ ಟೆಲ್, ದೂರರ್ಶನ” ಪ್ರದೇಶದಲ್ಲಿ ಕರೆಂಟ್ ಇರೋದಿಲ್ಲ ಎಂದು ತಿಳಿಸಿದೆ. ಸಾರ್ವಜನಿಕರು ವಿದ್ಯುತ್ ವ್ಯತ್ಯಯಕ್ಕಾಗಿ ಸಹಕರಿಸುವಂತೆ ಮನವಿ ಮಾಡಿದೆ. ಅಲ್ಲದೇ ವಿದ್ಯುತ್ ದೂರಿಗಾಗಿ ಬೆ.ವಿ.ಕಂ ಸಹಾಯವಾಣಿ ಸಂಖ್ಯೆ ‘1912’ ಗೆ ಸಂಪರ್ಕಿಸವಂತೆ ಕೋರಿದೆ.
ಕಲಬುರಗಿ : 10 ವರ್ಷಗಳ ಬಳಿಕ ಇಂದು ಕಲಬುರಗಿಯಲ್ಲಿ ಮಹತ್ವದ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ. 2014ರಲ್ಲಿ ಸಿದ್ದರಾಮಯ್ಯ ಸಚಿವ ಸಂಪುಟ ಸಭೆ ನಡೆಸಿದ್ದರು. ಇಂದು ಸಂಜೆ 4 ಗಂಟೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಐತಿಹಾಸಿಕ ಸಚಿವ ಸಂಪುಟ ಸಭೆ ನಡೆಯಲಿದ್ದು, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಲಾಗುವುದು. ಹಿಂದುಳಿದ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಗಮನದಲ್ಲಿಟ್ಟುಕೊಂಡು ದಶಕದ ನಂತರ ಸಚಿವ ಸಂಪುಟ ಸಭೆ ನಡೆಯಲಿದ್ದು, ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಸೇರಿ ಹಲವು ಮಹತ್ವದ ಘೋಷಣೆಗಳ ಪ್ರಕಟಿಸುವ ನಿರೀಕ್ಷೆ ಇದೆ. ನಗರಾಭಿವೃದ್ದಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಕಲ್ಯಾಣ ಕರ್ನಾಟಕ ಭಾಗದ ಜನರ ಬಹು ನಿರೀಕ್ಷೆಯಂತೆ ಸಿಎಂ ಸಿದ್ದರಾಮಯ್ಯ ನವರ ನೇತೃತ್ವದಲ್ಲಿ ಕಲಬುರಗಿ ಯಲ್ಲಿ ಸೆಪ್ಟೆಂಬರ್ 17 ರಂದು ಸಚಿವ ಸಂಪುಟ ಸಭೆ ನಡೆಸಲಾಗುತ್ತಿದೆ. ಈ ಭಾಗದ ಇಲಾಖಾವಾರು ಸಮಗ್ರ ಅಭಿವೃದ್ದಿಯ ಕುರಿತು ಚರ್ಚಿಸಿ ನೀಲಿ ನಕ್ಷೆ ತಯಾರಿಸುವ ಬಗ್ಗೆಯೂ ಕೂಡಾ ನಿರ್ಧರಿಸಲಾಗುವುದು…
ಬೆಂಗಳೂರು : ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ 2500 ಕಿ.ಮೀ. ಉದ್ದದ ಮಾನವ ಸರಪಳಿಗೆ ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿ ಮಾತನಾಡಿದ್ದಾರೆ. ಹೀಗಿದೆ ಸಿಎಂ ಸಿದ್ದರಾಮಯ್ಯ ಭಾಷಣದ ಮುಖ್ಯಾಂಶಗಳು ಏಕತೆ ನೆಪದಲ್ಲಿ ಸಮಾಜವನ್ನು ಒಡೆಯುವ, ಮನುಷ್ಯರನ್ನು ವಿಭಜಿಸುವ ವಿಚ್ಚಿದ್ರಕಾರಕ ದುಷ್ಟ ಶಕ್ತಿಗಳನ್ನು ನಾಶ ಮಾಡಲು ಪ್ರಜಾಪ್ರಭುತ್ವವಾದಿಗಳು ಎದ್ದುನಿಲ್ಲಿ. ನಮ್ಮ ಸಂವಿಧಾನ ಎತ್ತಿ ಹಿಡಿದಿರುವ ಬಹುತ್ವವನ್ನು ನಾವು ಬದುಕಿನಲ್ಲಿ ಆಚರಿಸೋಣ. ಆ ಮೂಲಕ ಸಮಾಜ ಒಡೆಯುವ ದುಷ್ಟರ ಷಡ್ಯಂತ್ರ ಸೋಲಿಸೋಣ. ಪ್ರಜಾಪ್ರಭುತ್ವ ಗಟ್ಟಿಗೊಳಿಸೋಣ. ಬುದ್ಧ, ಬಸವಣ್ಣನ ಕಾಲದಲ್ಲೇ ನಮ್ಮಲ್ಲಿ ಪ್ರಜಾಪ್ರಭುತ್ವ, ಸಂಸದೀಯ ವ್ಯವಸ್ಥೆ ಇತ್ತು. ಅನುಭವ ಮಂಟಪ ಮೊದಲ ಪ್ರಜಾಪ್ರಭುತ್ವದ ಸಾಂಸ್ಥಿಕ ಸಂಕೇತವಾಗಿದೆ. 1949ರ ನವೆಂಬರ್ 25ನೇ ತಾರೀಕಿನಂದು ಬಾಬಾ ಸಾಹೇಬರು ಮಾಡಿದ ಭಾಷಣ ಅತ್ಯಂತ ಅರ್ಥಪೂರ್ಣವಾಗಿದೆ. ನಾವೀಗ ವೈರುಧ್ಯತೆಯಿರುವ ಸಮಾಜಕ್ಕೆ ಕಾಲಿಡುತ್ತಿದ್ದೇವೆ, ಜನರಿಗೆ ಕೇವಲ ರಾಜಕೀಯ ಸ್ವಾತಂತ್ರ್ಯ ನೀಡಿದರೆ ಸಾಲದು, ಅದರ ಜೊತೆಗೆ ಸಾಮಾಜಿಕ ಹಾಗೂ ಆರ್ಥಿಕ ಸ್ವಾತಂತ್ರ್ಯವನ್ನು ನೀಡಬೇಕು. ಇಲ್ಲದಿದ್ದರೆ ಜನರೇ ಪ್ರಜಾಪ್ರಭುತ್ವದ ಸೌಧವನ್ನು ಧ್ವಂಸ…