Author: kannadanewsnow57

ಕಲಬುರಗಿ : ನವೆಂಬರ್ 1 ರ ಇಂದು ರಾಜ್ಯಾದ್ಯಂತ ಸಂಭ್ರಮದಿಂದ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದ್ದು, ಕಲಬುರಗಿಯಲ್ಲಿ ಪ್ರತ್ಯೇಕ ರಾಜ್ಯದ ಕೂಗು ಮೊಳಗಿದೆ. ಹೌದು, ರಾಜ್ಯೋತ್ಸವದ ದಿನ ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗಿದೆ. ಕಲಬುರಗಿಯ ಜಗತ್ ವೃತ್ತದಲ್ಲಿ ಹೋರಾಟಗಾರರು ಧರಣಿ ನಡೆಸಿದ್ದಾರೆ. ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಜಾಗೃತಿ ಸಮಿತಿ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದೆ. ಈ ವೇಳೆ ಪ್ರತ್ಯೇಕ ಧ್ವಜಾರೋಹಣಕ್ಕೆ ಹೋರಾಟಗಾರರು ಮುಂದಾಗಿದ್ದಾರೆ. 20 ಕ್ಕೂ ಅಧಿಕ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. https://twitter.com/ANI/status/1984486096445829213?ref_src=twsrc%5Egoogle%7Ctwcamp%5Eserp%7Ctwgr%5Etweet

Read More

ಬೆಂಗಳೂರು : ಇಂದು ರಾಜ್ಯಾದ್ಯಂತ 70 ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ನಾಡಿನ ಜನತೆಗೆ ಸಿಎಂ ಸಿದ್ದರಾಮಯ್ಯ ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ. ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕನ್ನಡದ ಕುರಿತ ವಿಶೇಷ ವಿಡಿಯೋ ಹಂಚಿಕೊಂಡಿದ್ದಾರೆ. ಕನ್ನಡದ ಭಾಷೆಗೆ ತನ್ನದೇ ಆದ ಅಸ್ಮಿತೆಯಿದೆ. ಅದು ಬಹುತ್ವವನ್ನು ಗೌರವಿಸುವ ಮತ್ತು ಒಕ್ಕೂಟದ ಹಿತವನ್ನು ಕಾಯುವ ಬಾಳನೋಟದ ಅಸ್ಮಿತೆ. ಇದು ಪಂಪನಿಂದ ಕುವೆಂಪು ವರೆಗೆ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಬೆಳೆದುಬಂದಿರುವ ಜೀವನದರ್ಶನ. ಇದನ್ನೇ ಪಂಪ “ಮಾನವ ಕುಲ ತಾನೊಂದೇ ವಲಂ” ಎಂದು ಹೇಳಿದ್ದು. ಕನ್ನಡ ಭಾಷೆ ಎನ್ನುವುದು ಕೇವಲ ವರ್ಣಮಾಲೆ ಅಲ್ಲ. ಅದು ಕೇವಲ ಶಬ್ದ-ವಾಕ್ಯಗಳಲ್ಲ. ಭಾಷೆಯಲ್ಲಿ ಅದನ್ನಾಡುವ ಮನುಷ್ಯನ ಆಳವಾದ ಭಾವನೆಗಳಿರುತ್ತವೆ, ಪರಸ್ಪರ ಸಂಬಂಧಗಳಿರುತ್ತವೆ, ತನ್ನತನದ ಪ್ರಜ್ಞೆ ಇರುತ್ತದೆ. ಅದು ನಮ್ಮ ಸಂಸ್ಕೃತಿ, ಇತಿಹಾಸ, ನೆಲ-ಜಲದ ಸಂಪತ್ತು ಸೇರಿದಂತೆ ಎಲ್ಲವನ್ನೂ ಒಳಗೊಂಡ ಅಸ್ಮಿತೆ. ಕನ್ನಡ ಭಾಷೆ ಈ ಅಸ್ಮಿತೆಯ ಜೀವಧಾತು ಎಂದು ಹೇಳಿದ್ದಾರೆ. ಕೇವಲ ಅಭಿಮಾನದಿಂದ ಭಾಷೆಯ…

Read More

ನವದೆಹಲಿ : ದೇಶದ ಒಂದು ಶತಕೋಟಿಗೂ ಹೆಚ್ಚು ಆಧಾರ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಸುದ್ದಿ ಇದೆ. ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) 2025 ರ ವರ್ಷಕ್ಕೆ ಹಲವಾರು ಆಧಾರ್ ಸಂಬಂಧಿತ ಸೇವೆಗಳು ಮತ್ತು ನಿಯಮಗಳಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡಿದೆ. ಅಕ್ಟೋಬರ್ 1 ರಿಂದ ನವೀಕರಣ ಶುಲ್ಕಗಳು ಹೆಚ್ಚಿದ್ದರೂ, ನವೆಂಬರ್ 1 ರಿಂದ ಡಿಜಿಟಲ್ ಸೇವೆಗಳಲ್ಲಿ ಪ್ರಮುಖ ಬದಲಾವಣೆ ಬರಲಿದ್ದು, ಸಾರ್ವಜನಿಕರಿಗೆ ಗಮನಾರ್ಹ ಪರಿಹಾರ ದೊರೆಯಲಿದೆ. ನವೆಂಬರ್ 1 ರಿಂದ ವ್ಯವಸ್ಥೆಯನ್ನು ಸಂಪೂರ್ಣವಾಗಿ ಡಿಜಿಟಲ್ ನವೀಕರಣ ವ್ಯವಸ್ಥೆ ನವೆಂಬರ್ 1, 2025 ರಿಂದ, ಯುಐಡಿಎಐ ಹೊಸ ಡಿಜಿಟಲ್ ನವೀಕರಣ ವ್ಯವಸ್ಥೆಯನ್ನು ಪ್ರಾರಂಭಿಸುತ್ತಿದೆ, ಇದು ಆಧಾರ್ ಹೊಂದಿರುವವರಿಗೆ ಪ್ರಮುಖ ಪರಿಹಾರವಾಗಿರುತ್ತದೆ. ಸೇವಾ ಕೇಂದ್ರಗಳಿಗೆ ಇನ್ನು ಮುಂದೆ ಭೇಟಿ ನೀಡುವುದಿಲ್ಲ: ಈ ವ್ಯವಸ್ಥೆಯಡಿಯಲ್ಲಿ, ಹೆಸರು, ವಿಳಾಸ, ಜನ್ಮ ದಿನಾಂಕ, ಲಿಂಗ ಮತ್ತು ಮೊಬೈಲ್ ಸಂಖ್ಯೆಯಂತಹ ಮಾಹಿತಿಯನ್ನು ಈಗ ಸಂಪೂರ್ಣವಾಗಿ ಆನ್ಲೈನ್ನಲ್ಲಿ ನವೀಕರಿಸಬಹುದು. ಸ್ವಯಂಚಾಲಿತ ಪರಿಶೀಲನೆ: ಹೊಸ ವ್ಯವಸ್ಥೆಯು ಸರ್ಕಾರಿ ಡೇಟಾಬೇಸ್ಗಳ ಮೂಲಕ ಮಾಹಿತಿಯನ್ನು ಸ್ವಯಂಚಾಲಿತವಾಗಿ…

Read More

ಬೆಂಗಳೂರು: ನವೆಂಬರ್ 1 ರ ಇಂದು ರಾಜ್ಯಾದ್ಯಂತ 70ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಕಂಠೀರವ ಕ್ರೀಡಾಂಗಣದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದ್ದಾರೆ. 70ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದರು. ಕನ್ನಡ ರಾಜ್ಯೋತ್ಸವ ಎನ್ನುವುದು ಕೇವಲ ಉತ್ಸವ ಅಲ್ಲ. ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿರುವ ಕನ್ನಡಿಗರು ಕನ್ನಡದ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನ. ಇಂತಹದ್ದೊಂದು ಕನ್ನಡದ ಕನಸು ಸಾಕಾರಗೊಳ್ಳಲು ನಿಸ್ವಾರ್ಥದಿಂದ ಶ್ರಮಿಸಿದ ಲಕ್ಷಾಂತರ ಕನ್ನಡಾಭಿಮಾನಿಗಳ ಶ್ರಮ, ತ್ಯಾಗ, ಬಲಿದಾನಗಳನ್ನು ಈ ದಿನ ಹೆಮ್ಮೆಯಿಂದ ಸ್ಮರಿಸೋಣ ಎಂದು ಹೇಳಿದ್ದಾರೆ. ಹೊರ ರಾಜ್ಯಗಳಿಂದ, ಹೊರ ದೇಶಗಳಿಂದ ಶಿಕ್ಷಣ, ಉದ್ಯೋಗ ಇನ್ನಿತರೆ ಕಾರಣಗಳಿಗಾಗಿ ಇಲ್ಲಿ ನೆಲೆಸಿರುವ, ಬದುಕು ಕಟ್ಟಿಕೊಂಡಿರುವ ಎಲ್ಲರೂ ಕನ್ನಡಿಗರೇ, ನಮ್ಮವರೇ. ನಾವು – ನೀವು ಎಲ್ಲರೂ ಸೇರಿ ಕನ್ನಡವನ್ನು ಬಳಸುವ, ಬೆಳೆಸುವ ಸಂಕಲ್ಪವನ್ನು ಈ ದಿನ ಸ್ವೀಕರಿಸೋಣ. ನೆಲದ ಭಾಷೆ ಮನದ ಭಾಷೆಯಾಗಲಿ, ಕನ್ನಡದ ಚಿಗುರು ಎಲ್ಲರೆದೆಯೊಳಗೆ ಮೊಳಕೆಯೊಡೆಯಲಿ ಎಂದು ಹೇಳಿದ್ದಾರೆ. ಕನ್ನಡ ಮಣ್ಣಿನಲ್ಲೇ ಹುಟ್ಟಿ ಬೆಳೆದವರು,…

Read More

ಬೆಂಗಳೂರು: ನವೆಂಬರ್ 1 ರ ಇಂದು ರಾಜ್ಯಾದ್ಯಂತ 70ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಕಂಠೀರವ ಕ್ರೀಡಾಂಗಣದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದ್ದಾರೆ. 70ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದರು. ಕನ್ನಡ ರಾಜ್ಯೋತ್ಸವ ಎನ್ನುವುದು ಕೇವಲ ಉತ್ಸವ ಅಲ್ಲ. ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿರುವ ಕನ್ನಡಿಗರು ಕನ್ನಡದ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನ. ಇಂತಹದ್ದೊಂದು ಕನ್ನಡದ ಕನಸು ಸಾಕಾರಗೊಳ್ಳಲು ನಿಸ್ವಾರ್ಥದಿಂದ ಶ್ರಮಿಸಿದ ಲಕ್ಷಾಂತರ ಕನ್ನಡಾಭಿಮಾನಿಗಳ ಶ್ರಮ, ತ್ಯಾಗ, ಬಲಿದಾನಗಳನ್ನು ಈ ದಿನ ಹೆಮ್ಮೆಯಿಂದ ಸ್ಮರಿಸೋಣ ಎಂದು ಹೇಳಿದ್ದಾರೆ. ಹೊರ ರಾಜ್ಯಗಳಿಂದ, ಹೊರ ದೇಶಗಳಿಂದ ಶಿಕ್ಷಣ, ಉದ್ಯೋಗ ಇನ್ನಿತರೆ ಕಾರಣಗಳಿಗಾಗಿ ಇಲ್ಲಿ ನೆಲೆಸಿರುವ, ಬದುಕು ಕಟ್ಟಿಕೊಂಡಿರುವ ಎಲ್ಲರೂ ಕನ್ನಡಿಗರೇ, ನಮ್ಮವರೇ. ನಾವು – ನೀವು ಎಲ್ಲರೂ ಸೇರಿ ಕನ್ನಡವನ್ನು ಬಳಸುವ, ಬೆಳೆಸುವ ಸಂಕಲ್ಪವನ್ನು ಈ ದಿನ ಸ್ವೀಕರಿಸೋಣ. ನೆಲದ ಭಾಷೆ ಮನದ ಭಾಷೆಯಾಗಲಿ, ಕನ್ನಡದ ಚಿಗುರು ಎಲ್ಲರೆದೆಯೊಳಗೆ ಮೊಳಕೆಯೊಡೆಯಲಿ ಎಂದು ಹೇಳಿದ್ದಾರೆ.

Read More

ಕಲಬುರಗಿ : ಕಲಬುರಗಿಯಲ್ಲಿ ಭೀಮ್ ಆರ್ಮಿ ಮುಖಂಡನ ಕಾರಿಗೆ ಬೆಂಕಿ ಹಚ್ಚಿ ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಕಲಬುರಗಿ ನಗರದ ಶಹಾಬಾದ್ ರಿಂಗ್ ರಸ್ತೆ ಬಳಿ ತಡರಾತ್ರಿ ಮನೆಮುಂದೆ ನಿಲ್ಲಿಸಿದ್ದ ಕಾರಿಗೆ ಬೆಂಕಿ ಹಚ್ಚಿ ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಭೀಮ್ ಆರ್ಮಿ ಪ್ರಧಾನ ಕಾರ್ಯದರ್ಶಿ ಸತೀಶ್ ಹುಗ್ಗಿ ಕಾರಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. Rss ಪಥ ಸಂಚಲನದ ವಿರುದ್ಧ ಹೋರಾಟ ಮುಂದಾಳತ್ವ ವಹಿಸಿದ್ದ ಸತೀಶ್ ಕಾರಿಗೆ ಬೆಂಕಿ ಹಚ್ಚಲಾಗಿದೆ. ಗುಲಬರ್ಗಾ ವಿಶ್ವವಿದ್ಯಾಲಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ನವದೆಹಲಿ : ಇಂದು ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದ್ದು, ನಾಡಿನ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ,ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ. ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ರಾಜ್ಯದ ಜನರು ಸಂತೋಷ ಮತ್ತು ಆರೋಗ್ಯದಿಂದ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ. https://twitter.com/narendramodi/status/1984458915870822909?ref_src=twsrc%5Etfw%7Ctwcamp%5Etweetembed%7Ctwterm%5E1984458915870822909%7Ctwgr%5Ef25725e12dc1067bba2c51a1654c767a08f6417f%7Ctwcon%5Es1_&ref_url=https%3A%2F%2Fkannadadunia.com%2Fbreaking-pm-modi-wishes-kannada-on-kannada-rajyotsava-cm-siddaramaiah-dcm-dk-also-extend-greetings-to-the-nation%2F

Read More

ಬೆಂಗಳೂರು : ಇಂದು ರಾಜ್ಯಾದ್ಯಂತ 70ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ ನಾಡಿನ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕನ್ನಡ ರಾಜ್ಯೋತ್ಸವ ಎನ್ನುವುದು ಕೇವಲ ಉತ್ಸವ ಅಲ್ಲ. ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿರುವ ಕನ್ನಡಿಗರು ಕನ್ನಡದ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನ. ಇಂತಹದ್ದೊಂದು ಕನ್ನಡದ ಕನಸು ಸಾಕಾರಗೊಳ್ಳಲು ನಿಸ್ವಾರ್ಥದಿಂದ ಶ್ರಮಿಸಿದ ಲಕ್ಷಾಂತರ ಕನ್ನಡಾಭಿಮಾನಿಗಳ ಶ್ರಮ, ತ್ಯಾಗ, ಬಲಿದಾನಗಳನ್ನು ಈ ದಿನ ಹೆಮ್ಮೆಯಿಂದ ಸ್ಮರಿಸೋಣ. ಹೊರ ರಾಜ್ಯಗಳಿಂದ, ಹೊರ ದೇಶಗಳಿಂದ ಶಿಕ್ಷಣ, ಉದ್ಯೋಗ ಇನ್ನಿತರೆ ಕಾರಣಗಳಿಗಾಗಿ ಇಲ್ಲಿ ನೆಲೆಸಿರುವ, ಬದುಕು ಕಟ್ಟಿಕೊಂಡಿರುವ ಎಲ್ಲರೂ ಕನ್ನಡಿಗರೇ, ನಮ್ಮವರೇ. ನಾವು – ನೀವು ಎಲ್ಲರೂ ಸೇರಿ ಕನ್ನಡವನ್ನು ಬಳಸುವ, ಬೆಳೆಸುವ ಸಂಕಲ್ಪವನ್ನು ಈ ದಿನ ಸ್ವೀಕರಿಸೋಣ. ನೆಲದ ಭಾಷೆ ಮನದ ಭಾಷೆಯಾಗಲಿ, ಕನ್ನಡದ ಚಿಗುರು ಎಲ್ಲರೆದೆಯೊಳಗೆ ಮೊಳಕೆಯೊಡೆಯಲಿ. ನಾಡಬಂಧುಗಳಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.ಜೈ ಭುವನೇಶ್ವರಿ, ಜೈ ಕರ್ನಾಟಕ. https://twitter.com/CMofKarnataka/status/1984468976269967720

Read More

ನವದೆಹಲಿ : ಇಂದು ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದ್ದು, ನಾಡಿನ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುವಾಗ, ಕರ್ನಾಟಕದ ಜನರು ಸಮಾನಾರ್ಥಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ಆಚರಿಸುತ್ತೇವೆ. ಕರ್ನಾಟಕದ ಅತ್ಯುತ್ತಮ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ, ಅದು ಅದರ ಸಾಹಿತ್ಯ, ಕಲೆ, ಸಂಗೀತ ಮತ್ತು ಇತರವುಗಳಲ್ಲಿ ಪ್ರತಿಫಲಿಸುತ್ತದೆ. ರಾಜ್ಯವು ಬುದ್ಧಿವಂತಿಕೆಯಲ್ಲಿ ಬೇರೂರಿರುವ ಪ್ರಗತಿಯ ಮನೋಭಾವವನ್ನು ಸಾಕಾರಗೊಳಿಸುತ್ತದೆ. ರಾಜ್ಯದ ಜನರು ಸಂತೋಷ ಮತ್ತು ಆರೋಗ್ಯವಾಗಿರಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ. https://twitter.com/narendramodi/status/1984458428282978408?ref_src=twsrc%5Egoogle%7Ctwcamp%5Eserp%7Ctwgr%5Etweet

Read More

ಬೆಂಗಳೂರು : ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣನವರ್ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮೇಲಿನ ಅಭಿಮಾನ ಪ್ರದರ್ಶಿಸಿದ್ದು. ತಮ್ಮ ಪುತ್ರನಿಗೆ ‘ಶಿವಕುಮಾರ್’ ಎಂದು ಡಿ.ಕೆ. ಶಿವಕುಮಾರ್ ಅವರ ಮೂಲಕವೇ ನಾಮಕರಣ ಮಾಡಿಸಿದ್ದಾರೆ. ಈ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್ ಟ್ವೀಟ್ ಮಾಡಿದ್ದು, ಇದು ಭಾಗ್ಯ, ಇದು ಭಾಗ್ಯ, ಇದು ಭಾಗ್ಯವಯ್ಯ!ನನ್ನ ಗೃಹಕಚೇರಿಯಲ್ಲಿಂದು ಕುಡಚಿ ಶಾಸಕರಾದ ಮಹೇಂದ್ರ ತಮ್ಮಣ್ಣನವರ್ ಅವರ ಮಗನಿಗೆ “ಶಿವಕುಮಾರ್” ಎಂದು ನಾಮಕರಣ ಮಾಡುವ ಭಾಗ್ಯ ನನ್ನದಾಯಿತು. ನನ್ನ ಹೆಸರನ್ನು ಮಗುವಿಗೆ ಇಡಲು ನಿರ್ಧರಿಸಿದ ಶಾಸಕರ ಈ ನಡೆಗೆ ನಾನು ಧನ್ಯ ಎಂದು ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಈ ಮುದ್ದಾದ ಮಗು ನನಗಿಂತಲೂ ಎತ್ತರಕ್ಕೆ ಬೆಳೆಯಲಿ, ತಂದೆ-ತಾಯಿಗಳಿಗೆ ಒಳ್ಳೆಯ ಹೆಸರು ತರುವಂತಾಗಲಿ ಎಂದು ಶುಭಹಾರೈಸಿದೆ. ಕನ್ನಡ ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ, ಈ “ಶಿವಕುಮಾರ” ಕರುನಾಡ ಬೆಳಗುವ ಕುವರನಾಗಲಿ ಎಂದು ಮನತುಂಬಿ ಹಾರೈಸಿದ್ದಾರೆ. https://twitter.com/DKShivakumar/status/1984267950153711929?ref_src=twsrc%5Etfw%7Ctwcamp%5Etweetembed%7Ctwterm%5E1984267950153711929%7Ctwgr%5Ea5da2598b2ae9232ff95a545f3bf9079fb162a7b%7Ctwcon%5Es1_&ref_url=https%3A%2F%2Fkannadadunia.com%2Fcongress-mlas-son-named-shivakumar-for-showing-admiration-for-dcm-dk%2F

Read More