Subscribe to Updates
Get the latest creative news from FooBar about art, design and business.
Author: kannadanewsnow57
ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದು 11 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.ಸದ್ಯ ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಗೊರ್ಲತ್ತು ಗ್ರಾಮದ ಬಳಿ ಸೀಬರ್ಡ್ ಸ್ಲೀಪರ್ ಕೋಚ್ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಹೊತ್ತಿ ಉರಿದ ಪರಿಣಾಮ 11 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಅವಘಡ ಸಂಭವಿಸಿದ ಸ್ಥಳಕ್ಕೆ ಆ್ಯಂಬುಲೆನ್ಸ್ ತಲುಪುವುದಕ್ಕೂ ಕಷ್ಟವಾಗಿದೆ. ಸುಮಾರು ನಾಲ್ಕು ಕಿಲೋ ಮೀಟರ್ ನಷ್ಟು ಟ್ರಾಫಿಕ್ ಜಾಮ್ ಆಗಿದ್ದು, ಸ್ಥಳಕ್ಕೆ ಆಂಬುಲೆನ್ಸ್ ಗಳು ದೌಡಾಯಿಸುತ್ತಿವೆ. ಇನ್ನು ಭೀಕರ ಅಪಘಾತದಲ್ಲಿ ಬಸ್ ನಲ್ಲಿ 15 ಮಹಿಳೆಯರು, 14 ಪುರುಷರು ಪ್ರಯಾಣಿಸುತ್ತಿದ್ದ ಮಾಹಿತಿ ಲಭ್ಯವಾಗಿದೆ. ಮಂಜುನಾಥ್, ಸಂಧ್ಯಾ, ಶಶಾಂಕ್, ದಿಲೀಪ್, ಪ್ರೀತಿಶ್ವರನ್, ವಿ.ಬಿಂದು, ಕೆ.ಕವಿತಾ, ಅನಿರುದ್ಧ್ ಬೆನರ್ಜಿ, ಅಮೃತಾ, ಇಶಾ, ಸೂರಜ್, ಮಾನಸ, ಮಿಲನಾ, ಹೇಮರಾಜ್ ಕುಮಾರ್, ಕಲ್ಪನಾ ಪ್ರಜಾಪತಿ, ಎಂ.ಶಶಿಕಾಂತ್, ವಿಜಯ್ ಭಂಡಾರಿ, ನವ್ಯಾ, ಅಭಿಷೇಕ್,…
ಬೆಂಗಳೂರು :ಕಳೆದ ಕೆಲವು ದಿನಗಳ ಹಿಂದೆ ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಈ ಒಂದು ಸುದ್ದಿ ಹರಿದಾಡಿತ್ತು. ಅದರ ಬೆನ್ನಲ್ಲೇ ಆರೋಗ್ಯ ಇಲಾಖೆ ಮೊಟ್ಟೆಗಳನ್ನು ಲ್ಯಾಬ್ ಟೆಸ್ಟಿಗೆ ಪ್ರವಾಸಿ ಪರೀಕ್ಷೆಗೆ ಒಳಪಡಿಸಿದ್ದರು. ಇದೀಗ ಕೇಕ್ ನಲ್ಲಿ ಕೆಮಿಕಲ್ ಬಳಸುವುದರಿಂದ ಹಲವು ರೋಗಗಳು ಬರುವ ಸಾಧ್ಯತೆ ಇದೆ ಎಂದು ವೈದ್ಯರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರ್ಷ ವೇಳೆ ಕೇಕ್ ತಿನ್ನುವ ಮುನ್ನ ಎಚ್ಚರದಿಂದ ಇರಿ ಎಂದು ವೈದ್ಯರು ಸಲಹೆ ನೀಡಿದ್ದಾರೆ. ಡಿಸೆಂಬರ್ ಬಂದರೆ ಸಾಕು ಕ್ರಿಸ್ಮಸ್ ಹೊಸ ವರ್ಷಾಚರಣೆ ಎಲ್ಲೆಡೆ ಭರ್ಜರಿಯಾಗಿ ಮಾಡಲಾಗುತ್ತೆ. ಕ್ರಿಸ್ಮಸ್ ಮತ್ತು ನ್ಯೂ ಇಯರ್ ಹಿನ್ನೆಲೆಯಲ್ಲಿ ಬೇಕರಿ ಮಾಲೀಕರಿಗೆ ಈ ಒಂದು ಸೀಸನ್ ನಲ್ಲಿ ಭಾರಿ ವ್ಯಾಪಾರ ಆಗುತ್ತೆ. ಕೇಕ್ಗಳ ತಯಾರಿ ವೇಳೆ ಕೃತಕ ಬಣ್ಣಗಳ ಬಳಕೆ ಗಂಭೀರ ಕಾಯಿಲೆಗಳಿಗೆ ಕಾರಣವಾಗಬಹುದು. ಹೀಗಾಗಿ ಕಲರ್ ಕಲರ್ ಕೇಕ್ಗಳ ಖರೀದಿಗೂ ಮುನ್ನ ಎಚ್ಚರವಿರಲಿ. ಹೌದು ಈ ನಡುವೆ ವೈದ್ಯರು ನೀಡಿರೋ…
ಬೆಂಗಳೂರು : ಬೆಂಗಳೂರಿನಲ್ಲಿ ಲೈಂಗಿಕ ಕಿರುಕುಳದ ಆರೋಪದ ಮೇಲೆ ಆತಂಕಕಾರಿ ಘಟನೆ ವರದಿಯಾಗಿದ್ದು, ಆನ್ಲೈನ್ ಸ್ನೇಹಕ್ಕೆ ಸಂಬಂಧಿಸಿದ ಅಪಾಯಗಳನ್ನು ಎತ್ತಿ ತೋರಿಸುತ್ತದೆ. ಈ ಪ್ರಕರಣವು ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ದೂರಿನಲ್ಲಿ ತಿಳಿಸಿರುವ ಪ್ರಕಾರ, ಖಾಸಗಿ ಪೇಯಿಂಗ್ ಗೆಸ್ಟ್ (ಪಿಜಿ) ವಸತಿಗೃಹದಲ್ಲಿ ತಂಗಿದ್ದ ಸಂತ್ರಸ್ತ ಯುವತಿಯನ್ನು ಯುವಕನೊಬ್ಬ ಆಕೆಯ ಪಿಜಿ ಮುಂಭಾಗದ ರಸ್ತೆಯಲ್ಲಿಯೇ ಕಿರುಕುಳ ನೀಡಿದ್ದಾನೆ. ಈ ಘಟನೆ 22ನೇ ತಾರೀಖಿನ ಮಧ್ಯಾಹ್ನ 3.20 ರ ಸುಮಾರಿಗೆ ನಡೆದಿದ್ದು, ಆರೋಪಿಯು ಕಾರಿನಲ್ಲಿ ಸ್ಥಳಕ್ಕೆ ಬಂದು ಆಕೆಯನ್ನು ಎದುರಿಸಿದ್ದಾನೆ ಎಂದು ವರದಿಯಾಗಿದೆ. ಆರೋಪಿಯನ್ನು ನವೀನ್ ಕುಮಾರ್ ಎಂದು ಗುರುತಿಸಲಾಗಿದ್ದು, ಅವರು ಮೊದಲು ಸೆಪ್ಟೆಂಬರ್ 30, 2024 ರಂದು ಇನ್ಸ್ಟಾಗ್ರಾಮ್ ಮೂಲಕ ಯುವತಿಗೆ ಪರಿಚಯವಾಗಿದ್ದಾನೆ. ಕಾಲಕ್ರಮೇಣ, ಆರೋಪಿಯು ತನ್ನ ಪ್ರೇಮ ಪ್ರಸ್ತಾಪವನ್ನು ಸ್ವೀಕರಿಸುವಂತೆ ಯುವತಿಯ ಮೇಲೆ ಒತ್ತಡ ಹೇರಲು ಪ್ರಾರಂಭಿಸಿದನು ಎಂದು ಆರೋಪಿಸಲಾಗಿದೆ. ಯುವತಿ ನಿರಾಕರಿಸಿದಾಗ, ಆರೋಪಿಯು ಆಕೆಗೆ ನಿರಂತರವಾಗಿ ಕಿರುಕುಳ ನೀಡಲು ಪ್ರಾರಂಭಿಸಿದನು. ಆಕೆಯ ಸ್ಪಷ್ಟ ನಿರಾಕರಣೆಯ ಹೊರತಾಗಿಯೂ, ಅವನು ಆಕೆಯ…
2025 ರಲ್ಲಿ ಚಿನ್ನ ಮತ್ತು ಬೆಳ್ಳಿ ಹೂಡಿಕೆದಾರರಿಗೆ ಲಾಭ ತಂದುಕೊಟ್ಟಿತು, ಆದರೆ ಈಗ ತಜ್ಞರು ತಾಮ್ರವು ಮುಂದಿನ ದೊಡ್ಡ ಹೂಡಿಕೆ ಆಯ್ಕೆಯಾಗಿದೆ ಎಂದು ನಂಬುತ್ತಾರೆ. ಕೃತಕ ಬುದ್ಧಿಮತ್ತೆ, ವಿದ್ಯುತ್ ವಾಹನಗಳು ಮತ್ತು ಹಸಿರು ಶಕ್ತಿಯಿಂದ ಹೆಚ್ಚುತ್ತಿರುವ ಬೇಡಿಕೆ ತಾಮ್ರದ ಬೇಡಿಕೆಯನ್ನು ಹೆಚ್ಚಿಸುತ್ತಿದೆ, ಆದರೆ ಪೂರೈಕೆ ಸೀಮಿತವಾಗಿದೆ. 2026 ರಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಗಳಲ್ಲಿ ಗಮನಾರ್ಹ ಏರಿಕೆ ಕಂಡುಬರುವ ನಿರೀಕ್ಷೆಯಿದೆ. ಎರಡೂ ಅಮೂಲ್ಯ ಲೋಹಗಳು ನಿರಂತರವಾಗಿ ಹೊಸ ದಾಖಲೆಗಳನ್ನು ಸ್ಥಾಪಿಸುತ್ತಿವೆ, ಹೂಡಿಕೆದಾರರಿಗೆ ಪ್ರಭಾವಶಾಲಿ ಆದಾಯವನ್ನು ಒದಗಿಸುತ್ತವೆ. ಆದಾಗ್ಯೂ, ಮುಂಬರುವ ವರ್ಷಗಳಲ್ಲಿ, ಚಿನ್ನ ಮತ್ತು ಬೆಳ್ಳಿ ಮಾತ್ರವಲ್ಲ, ಮತ್ತೊಂದು ಲೋಹವು ಮಾರುಕಟ್ಟೆಯ ಹೊಸ ರಾಜನಾಗಿ ಹೊರಹೊಮ್ಮುತ್ತದೆ ಎಂದು ತಜ್ಞರು ಹೇಳುತ್ತಾರೆ: ತಾಮ್ರ. ತಜ್ಞರ ಪ್ರಕಾರ, ತಾಮ್ರದ ಬೆಲೆಗಳು ಗಮನಾರ್ಹ ಏರಿಕೆಗೆ ಸಿದ್ಧವಾಗಿವೆ ಮತ್ತು ಇದರ ಹಿಂದೆ ಹಲವಾರು ಬಲವಾದ ಕಾರಣಗಳಿವೆ. ತಾಮ್ರವು ಮುಂದಿನ ದೊಡ್ಡ ಹೂಡಿಕೆಯಾಗುತ್ತಿರುವುದು ಏಕೆ? ಇಲ್ಲಿಯವರೆಗೆ, ತಾಮ್ರವನ್ನು ಸಾಮಾನ್ಯ ಕೈಗಾರಿಕಾ ಲೋಹವೆಂದು ಪರಿಗಣಿಸಲಾಗಿತ್ತು, ಆದರೆ ಪ್ರಸ್ತುತ ಪರಿಸ್ಥಿತಿಗಳು ಅದನ್ನು ಭವಿಷ್ಯಕ್ಕಾಗಿ…
ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 17 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ನಡೆದಿದೆ. ಗೊರ್ಲತ್ತು ಗ್ರಾಮದ ಬಳಿ ಸೀಬರ್ಡ್ ಸ್ಲೀಪರ್ ಕೋಚ್ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಹೊತ್ತಿ ಉರಿದ ಪರಿಣಾಮ 17 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಅವಘಡ ಸಂಭವಿಸಿದ ಸ್ಥಳಕ್ಕೆ ಆ್ಯಂಬುಲೆನ್ಸ್ ತಲುಪುವುದಕ್ಕೂ ಕಷ್ಟವಾಗಿದೆ. ಸುಮಾರು ನಾಲ್ಕು ಕಿಲೋ ಮೀಟರ್ ನಷ್ಟು ಟ್ರಾಫಿಕ್ ಜಾಮ್ ಆಗಿದ್ದು, ಸ್ಥಳಕ್ಕೆ ಆಂಬುಲೆನ್ಸ್ ಗಳು ದೌಡಾಯಿಸುತ್ತಿವೆ. ಇನ್ನು ಭೀಕರ ಅಪಘಾತದಲ್ಲಿ ಬಸ್ ನಲ್ಲಿ 15 ಮಹಿಳೆಯರು, 14 ಪುರುಷರು ಪ್ರಯಾಣಿಸುತ್ತಿದ್ದ ಮಾಹಿತಿ ಲಭ್ಯವಾಗಿದೆ. ಮಂಜುನಾಥ್, ಸಂಧ್ಯಾ, ಶಶಾಂಕ್, ದಿಲೀಪ್, ಪ್ರೀತಿಶ್ವರನ್, ವಿ.ಬಿಂದು, ಕೆ.ಕವಿತಾ, ಅನಿರುದ್ಧ್ ಬೆನರ್ಜಿ, ಅಮೃತಾ, ಇಶಾ, ಸೂರಜ್, ಮಾನಸ, ಮಿಲನಾ, ಹೇಮರಾಜ್ ಕುಮಾರ್, ಕಲ್ಪನಾ ಪ್ರಜಾಪತಿ, ಎಂ.ಶಶಿಕಾಂತ್, ವಿಜಯ್ ಭಂಡಾರಿ, ನವ್ಯಾ, ಅಭಿಷೇಕ್, ಹೆಚ್.ಕಿರಣ್ ಪಾಲ್, ಎಂ.ಕೀರ್ತನ್. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ…
SHOCKING : ಪ್ರತಿದಿನ ದಿನ ಪಿಜ್ಜಾ, ಬರ್ಗರ್ ತಿನ್ನುವವರೇ ಎಚ್ಚರ : ಕರುಳಿನಲ್ಲಿ ರಂಧ್ರವಾಗಿ 16 ವರ್ಷದ ಬಾಲಕಿ ಸಾವು.!
ನವದೆಹಲಿ : ಪ್ರತಿದಿನ ಜಂಕ್ ಫುಡ್ ತಿನ್ನುವವರೇ ಎಚ್ಚರ, ಕರುಳಿನಲ್ಲಿ ರಂಧ್ರವಾಗಿ 16 ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಅಮ್ರೋಹಾದ 16 ವರ್ಷದ ಅಹಾನಾ ದೆಹಲಿಯ ಏಮ್ಸ್ನಲ್ಲಿ ನಿಧನರಾದರು. ಆಕೆಯ ಸಾವಿಗೆ ಕಾರಣ ಯಾರಿಗಾದರೂ ಆಘಾತಕಾರಿಯಾಗಿದೆ – ಆಕೆ ಪ್ರತಿದಿನ ಬರ್ಗರ್, ಪಿಜ್ಜಾ ಮತ್ತು ಚೌಮಿನ್ನಂತಹ ಫಾಸ್ಟ್ ಫುಡ್ಗಳನ್ನು ಹೆಚ್ಚಿನ ಪ್ರಮಾಣದಲ್ಲಿ ತಿನ್ನುತ್ತಿದ್ದಳು. 11 ನೇ ತರಗತಿಯಲ್ಲಿ ಓದುತ್ತಿರುವ ಅಹಾನಾ, ಮನೆಯಲ್ಲಿ ತಯಾರಿಸಿದ ಊಟಕ್ಕಿಂತ ಹೊರಗಿನಿಂದ ಬರುವ ಜಂಕ್ ಫುಡ್ ಅನ್ನು ಇಷ್ಟಪಡುತ್ತಾಳೆ. ವೈದ್ಯರ ವರದಿಯ ಪ್ರಕಾರ, ದೀರ್ಘಕಾಲದವರೆಗೆ ಫಾಸ್ಟ್ ಫುಡ್ ಅನ್ನು ಮಾತ್ರ ಸೇವಿಸುವುದರಿಂದ ಅಹಾನಾಳ ಜೀರ್ಣಾಂಗ ವ್ಯವಸ್ಥೆಯು ಸಂಪೂರ್ಣವಾಗಿ ದುರ್ಬಲಗೊಂಡಿತು. ಆಕೆಯ ಕರುಳುಗಳು ರಂಧ್ರಗೊಂಡವು (ಕರುಳಿನ ರಂಧ್ರ) ಮತ್ತು ಅವು ಒಟ್ಟಿಗೆ ಅಂಟಿಕೊಂಡವು. ಸೆಪ್ಟೆಂಬರ್ನಿಂದ ಅವಳು ಹೊಟ್ಟೆ ನೋವು ಮತ್ತು ದೌರ್ಬಲ್ಯದಿಂದ ಬಳಲಲು ಪ್ರಾರಂಭಿಸಿದಳು. ಆಕೆಯ ಸ್ಥಿತಿ ಹದಗೆಟ್ಟ ನಂತರ ನವೆಂಬರ್ 30 ರಂದು ಆಕೆಗೆ ಶಸ್ತ್ರಚಿಕಿತ್ಸೆ ಮಾಡಲಾಯಿತು. ಶಸ್ತ್ರಚಿಕಿತ್ಸೆಯ ನಂತರ ಅವಳು ಚೇತರಿಸಿಕೊಳ್ಳುತ್ತಾಳೆ ಎಂದು…
ಬೆಂಗಳೂರು : ರಾಜ್ಯದಲ್ಲಿ ಸಿಎಂ ಕುರ್ಚಿ ಫೈಟ್ ಮಧ್ಯೆ ಅಹಿಂದ ಸಮಾವೇಶಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಜನವರಿ 25 ರಂದು ಮೈಸೂರಿನಲ್ಲಿ ಅಹಿಂದ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಘೋಷಣೆ ಮಾಡಿದೆ. ಸಿಎಂ ಸಿದ್ದರಾಮಯ್ಯ ಬೆನ್ನಿಗೆ ಅಹಿಂದ ಸಮುದಾಯಗಳು ನಿಂತಿದ್ದು, ಸಿದ್ದರಾಮಯ್ಯರನ್ನು ಬದಲಾಯಿಸದಂತೆ ಒತ್ತಡ ಹೇರಲು ಸಮಾವೇಶ ನಡೆಸಲು ಉದ್ದೇಶಿಸಲಾಗಿದೆ. ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಅಹಿಂದ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ. ಅಹಿಂದ ಸಮಾವೇಶಕ್ಕೆ ಮಹೂರ್ತಕ್ಕೆ ದಿನಾಂಕ ಫಿಕ್ಸ್ ಆಗಿದ್ದು ಈ ಮೂಲಕ ಸಿಎಂ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಂತುಕೊಳ್ಳುವುದಕ್ಕೆ ಅಹಿಂದ ನಾಯಕರು ಮುಂದಾಗಿದ್ದಾರೆ. ಕುರ್ಚಿ ಕದನದ ನಡುವೆ ಸಿದ್ದರಾಮಯ್ಯ ಬೆಂಬಲಿಗರ ಹೊಸ ಅಸ್ತ್ರ ಪ್ರಯೋಗ ಮಾಡಲಿದ್ದು, ಜನವರಿ 25 ಕ್ಕೆ ಅಹಿಂದ ಸಮಾವೇಶ ನಡೆಲಿದೆ ಎನ್ನಲಾಗಿದೆ. ಇಂದು ಅಹಿಂದ ಸಮಾವೇಶ ನಡೆಸಲು ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯಿಂದ ಸಿದ್ದತೆ ನಿಟ್ಟಿನಲ್ಲಿ ಪೂರ್ವಭಾವಿ ನಡೆಯಿತು, ಸಭೆಯಲ್ಲಿ ಎಲ್ಲರೂ ಕೂಡ ಜನವರಿ 25 ರಂದು ಅಹಿಂದ…
ಬೆಂಗಳೂರು : ಮಂಗನ ಕಾಯಿಲೆ ತಡೆ ಮತ್ತು ಮುನ್ನೆಚ್ಚರಿಕೆ ಕುರಿತು ವಿಕಾಸಸೌಧದಲ್ಲಿ ಆರೋಗ್ಯ ಇಲಾಖೆ ಆಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಈಗ ಶಿವಮೊಗ್ಗದಲ್ಲಿ ಒಂದು ಲ್ಯಾಬ್ ಕೆಲಸ ಮಾಡುತ್ತಿದ್ದು, ಒತ್ತಡ ಹೆಚ್ಚಾಗಿರುವುದರಿಂದ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನೂತನ ಲ್ಯಾಬ್ ಪ್ರಾರಂಭಕ್ಕೆ ಎಲ್ಲ ಉಪಕರಣ ಖರೀದಿಸಲಾಗಿದ್ದು ಶೀಘ್ರದಲ್ಲಿ ಕಾರ್ಯಾರಂಭಮಾಡಲಿದೆ ಎಂದು ತಿಳಿಸಿದರು. ಇದರಿಂದ ಸಿರಸಿ, ಸಿದ್ದಾಪುರ ಭಾಗದ ಜನರಿಗೆ ಹೆಚ್ಚು ಉಪಯೋಗ ಆಗಲಿದೆ. ಬೇಗ ರೋಗವನ್ನು ಗುರುತಿಸಲು ಮತ್ತು ಸಾವಿನ ಪ್ರಮಾಣವನ್ನು ಶೂನ್ಯಕ್ಕೆ ಇಳಿಸಲು ಇದು ಸಹಕಾರಿ ಆಗಲಿದೆ. ಮಂಗನ ಕಾಯಲೆ ಎಂದು ಕರೆಸಿಕೊಳ್ಳುವ ಈ ಕಾಯಿಲೆ ಪ್ರತಿ ವರ್ಷ ಅಕ್ಟೊಬರ್ ನಿಂದ ಜೂನ್ ವರೆಗೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು, ಉಡುಪಿ ಜಿಲ್ಲೆಗಳಲ್ಲಿ ಕಂಡುಬರುವ ಈ ಕಾಯಿಲೆ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಸನ್ನಧ್ದವಾಗಿದೆ. ಸರಿಯಾದ ರೀತಿಯ ತಪಾಸಣೆಯನ್ನು ನಿಯಮಿತವಾಗಿ ಮಾಡಲಾಗುತ್ತಿದೆ. ಈವರೆಗೆ ಶಿವಮೊಗ್ಗ -1163, ಚಿಕ್ಕಮಗಳೂರು- 124, ಉತ್ತರ ಕನ್ನಡ- 368,…
ಮಧುಮೇಹ ಚಿಕಿತ್ಸೆಯಲ್ಲಿ ಭಾರತವು ಒಂದು ಪ್ರಮುಖ ಹೆಜ್ಜೆಯನ್ನು ಹೊಂದಿದೆ. ಔಷಧೀಯ ಕಂಪನಿ ಸಿಪ್ಲಾ ಇನ್ಹೇಲಬಲ್ ಇನ್ಸುಲಿನ್ ಪೌಡರ್ ಅನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದೆ. ಸಾಂಪ್ರದಾಯಿಕ ಇಂಜೆಕ್ಷನ್ ಆಧಾರಿತ ಇನ್ಸುಲಿನ್ ಚಿಕಿತ್ಸೆಗೆ ಸೂಜಿ-ಮುಕ್ತ, ಅನುಕೂಲಕರ ಪರ್ಯಾಯವನ್ನು ನೀಡುವ ವೇಗವಾಗಿ ಕಾರ್ಯನಿರ್ವಹಿಸುವ ಮೌಖಿಕವಾಗಿ ಇನ್ಹೇಲಡ್ ಇನ್ಸುಲಿನ್ ಅಫ್ರೆಝಾವನ್ನು ಬಿಡುಗಡೆ ಮಾಡುವುದಾಗಿ ಕಂಪನಿ ಘೋಷಿಸಿದೆ. ಮಧುಮೇಹ ಚಿಕಿತ್ಸಾ ವಿಧಾನಗಳನ್ನು ಆಧುನೀಕರಿಸುವತ್ತ ಸಿಪ್ಲಾ ಈ ಕ್ರಮವನ್ನು ಮಹತ್ವದ ಹೆಜ್ಜೆಯಾಗಿ ನೋಡುತ್ತದೆ. ಕಂಪನಿಯ ಪ್ರಕಾರ, ಅಫ್ರೆಝಾ ಕಳೆದ ವರ್ಷದ ಕೊನೆಯಲ್ಲಿ ವಿಶೇಷ ವಿತರಣೆ ಮತ್ತು ಮಾರುಕಟ್ಟೆಗಾಗಿ ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (CDSCO) ನಿಂದ ನಿಯಂತ್ರಕ ಅನುಮೋದನೆಯನ್ನು ಪಡೆದುಕೊಂಡಿದೆ. ಇದರ ಬಿಡುಗಡೆಯು ಈಗ ಭಾರತದಲ್ಲಿ ಮಧುಮೇಹ ಚಿಕಿತ್ಸೆಗೆ ಹೊಸ ಆಯ್ಕೆಯನ್ನು ಒದಗಿಸುತ್ತದೆ. ಭಾರತದಲ್ಲಿ ಈ ಉತ್ಪನ್ನವನ್ನು ಬಿಡುಗಡೆ ಮಾಡುವುದರಿಂದ ದೇಶದಲ್ಲಿ ಮಧುಮೇಹದಿಂದ ಬಳಲುತ್ತಿರುವ ಸುಮಾರು 100 ಮಿಲಿಯನ್ ಜನರಿಗೆ ಪ್ರಯೋಜನವಾಗುತ್ತದೆ ಎಂದು ಸಿಪ್ಲಾ ಹೇಳಿದೆ. ಮಧುಮೇಹ ರೋಗಿಗಳಿಗೆ, ದೈನಂದಿನ ಇನ್ಸುಲಿನ್ ಇಂಜೆಕ್ಷನ್ ತೆಗೆದುಕೊಳ್ಳುವುದು ದೈಹಿಕವಾಗಿ ಮಾತ್ರವಲ್ಲದೆ ಮಾನಸಿಕವಾಗಿಯೂ…
ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 17 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ನಡೆದಿದೆ. ಗೊರ್ಲತ್ತು ಗ್ರಾಮದ ಬಳಿ ಸೀಬರ್ಡ್ ಸ್ಲೀಪರ್ ಕೋಚ್ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಹೊತ್ತಿ ಉರಿದ ಪರಿಣಾಮ 17 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಅವಘಡ ಸಂಭವಿಸಿದ ಸ್ಥಳಕ್ಕೆ ಆ್ಯಂಬುಲೆನ್ಸ್ ತಲುಪುವುದಕ್ಕೂ ಕಷ್ಟವಾಗಿದೆ. ಸುಮಾರು ನಾಲ್ಕು ಕಿಲೋ ಮೀಟರ್ ನಷ್ಟು ಟ್ರಾಫಿಕ್ ಜಾಮ್ ಆಗಿದ್ದು, ಸ್ಥಳಕ್ಕೆ ಆಂಬುಲೆನ್ಸ್ ಗಳು ದೌಡಾಯಿಸುತ್ತಿವೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಲಾರಿ ಡಿಕ್ಕಿ ಸಂಭವಿಸಿದ್ದು, ಈ ವೇಳೆ ಬಸ್ ನಲ್ಲಿದ್ದ 17 ಕ್ಕೂ ಹೆಚ್ಚು ಜನರು ಸಜೀವ ದಹನವಾಗಿದ್ದಾರೆ. ಹಲವರು ಗಾಯಗೊಂಡಿದ್ದು, ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಬಸ್ ಅತಿವೇಗದಿಂದ ಕಂಟೈನರ್ ಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡದ ರಭಸಕ್ಕೆ ನೋಡ ನೋಡುತ್ತಿದ್ದಂತೆ…














