Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕೆಪಿಎಸ್ ಸಿ ಯು ಪರೀಕ್ಷೆಗೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಸ್ಥಗಿತಗೊಂಡಿದ್ದ 400 (342+58 Back Log) ಪಶುವೈದ್ಯಾಧಿಕಾರಿ ( VETERINARY DOCTORS ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಕನ್ನಡ ಭಾಷಾ ಪರೀಕ್ಷೆ & ಸ್ಪರ್ಧಾತ್ಮಕ ಪರೀಕ್ಷೆಯನ್ನು ಕ್ರಮವಾಗಿ 2026 ಜನವರಿ 08 & 09 ರಂದು ನಡೆಸಲು ಉದ್ದೇಶಿಸಿ KPSC ಇದೀಗ ವೇಳಾಪಟ್ಟಿಯನ್ನು ಕೂಡಾ ಪ್ರಕಟಿಸಿದೆ. 29-07-2024 ರಂದು ಅಧಿಸೂಚಿಸಲಾದ ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿನ ಪಶು ವೈದ್ಯಾಧಿಕಾರಿಗಳು ಹುದ್ದೆಗಳ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷಾ ವೇಳಾಪಟ್ಟಿ.
ಬೆಂಗಳೂರು: ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗಾಗಿ ಭೂ ಪರಿವರ್ತಿಸುವುದಕ್ಕೆ ಸರ್ಕಾರ ಅವಕಾಶ ನೀಡಿದೆ. ಆದರೇ ಈ ಉದ್ದೇಶಗಳಿಗಾಗಿ ಕೆಲವು ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ. ಈ ಸಂಬಂಧ ಕಂದಾಯ ಇಲಾಖೆಯ ಭೂಮಂಜೂರಾತಿ ವಿಭಾಗದ ಸರ್ಕಾರದ ಅಧೀನ ಕಾರ್ಯದರ್ಶಿಯವರು ದಿನಾಂಕ 20-02-2019ರಲ್ಲೇ ಹೊರಡಿಸಿರುವಂತ ನಡವಳಿಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅದರಲ್ಲಿ ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95(2) ರಡಿಯಲ್ಲಿ ಕೃಷಿ ಉದ್ದೇಶಕ್ಕಾಗಿ ಹೊಂದಿರುವ ಭೂಮಿಯ ಅಧಿಭೋಗದಾರನು ಅಂತಹ ಜಮೀನನ್ನು ಅಥವಾ ಅದರ ಯಾವುದೇ ಭಾಗವನ್ನು ಕೃಷಿಯೇತರ ಉದ್ದೇಶಕ್ಕಾಗಿ ಪರಿವರ್ತಿಸಲು ಇಚ್ಚಿಸಿದರೆ ಜಿಲ್ಲಾಧಿಕಾರಿಯವರಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಮೇಲೆ ಓದಲಾದ ಕ್ರಮ ಸಂಖ್ಯೆ(1)ರ ಸರ್ಕಾರದ ಸುತ್ತೋಲೆ ದಿನಾಂಕ: 17-10-2008 ರನ್ವಯ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ, 1961 (ಕೆಟಿಪಿಪಿ) ಅನ್ವಯ ಕೃಷಿ ಜಮೀನನ್ನು ಭೂ ಪರಿವರ್ತಿಸಲಾದ ಯಾವುದೇ ಕಾನೂನಿನ ಉಪಬಂಧಗಳನ್ನು ಉಲ್ಲಂಘಿಸುತ್ತಿಲ್ಲವೆಂಬುದನ್ನು ಹಾಗೂ ಭೂ ಉಪಯೋಗ ಬದಲಾವಣೆಗೆ ಸಂಬಂಧಿಸಿದ ಓಡಿಪಿ ಮತ್ತು ಸಿಡಿಪಿ ಅನ್ವಯ ಇದೆಯೇ ಎನ್ನುವ ಕುರಿತು ದೃಢೀಕರಿಸಿಕೊಳ್ಳುವ…
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಒಂದೇ ಗ್ರಾಮದ 6 ಜನರಲ್ಲಿ ಮಂಗನ ಕಾಯಿಲೆ ದೃಢಪಟ್ಟಿದ್ದು, ಜನರಲ್ಲಿ ಆತಂಕ ಸೃಷ್ಠಿಯಾಗಿದೆ. ಹೌದು, ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿಕ್ಕೋಡಿ ಗ್ರಾಮದ 5 ಜನರಲ್ಲಿ ಮಂಗನ ಕಾಯಿಲೆ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ಗ್ರಾಮದಲ್ಲಿ ಒಂದೇ ವಾರದಲ್ಲಿ 6 ಜನರಲ್ಲಿ ಸೋಂಕು ಕಾಣಿಸಿಕೊಂಡು ಭಾರಿ ಆತಂಕ ಸೃಷ್ಟಿಯಾಗಿದೆ. ಹೊಸನಗರ ತಾಲೂಕಿನ ಬಿಳ್ಕೊಡಿ ಗ್ರಾಮದಲ್ಲಿ 55 ವರ್ಷದ ಮಹಿಳೆ ಯಲ್ಲಿ ಕೆಎಫ್ಡಿ ಸೋಂಕು ಕಾಣಿಸಿಕೊಂಡಿತ್ತು. ಈಗ ಅದೇ ಊರಿನಲ್ಲಿ ಮತ್ತೆ ಐವರಲ್ಲಿ ಸೋಂಕು ಕಾಣಿಸಿಕೊಂಡಿದೆ. ಜ್ವರದಿಂದ ಬಳಲುತ್ತಿರುವವರು ಯಾವುದೇ ನಿರ್ಲಕ್ಷ್ಯ ಮಾಡದೆ ಆಸ್ಪತ್ರೆಗೆ ತೆರಳಿ ರಕ್ತ ಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯಬೇಕು. ಜೊತೆಗೆ ಮಂಗಗಳು ಮೃತಪಟ್ಟಲ್ಲಿ ಕಡ್ಡಾಯವಾಗಿ ಮಾಹಿತಿ ನೀಡಲು ತಿಳಿಸಲಾಗಿದೆ.
ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಭಾರತೀಯ ರೈಲ್ವೆ ಇಲಾಖೆಯು ಭರ್ಜರಿ ಸಿಹಿಸುದ್ದಿ ನೀಡಿದ್ದು, ರೈಲ್ವೆ ಮಂಡಳಿಯು 2026 ರ ಭಾರತೀಯ ರೈಲ್ವೆ ಮಟ್ಟದಲ್ಲಿ ನೇಮಕಾತಿಗಳಿಗಾಗಿ ವಾರ್ಷಿಕ ಕ್ಯಾಲೆಂಡರ್ ಅನ್ನು ಬಿಡುಗಡೆ ಮಾಡಿದೆ. 22,000 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಒಂಬತ್ತು ರೈಲ್ವೆ ನೇಮಕಾತಿ ಮಂಡಳಿಗಳನ್ನು (RRBs) ನೋಡಲ್ ಏಜೆನ್ಸಿಗಳಾಗಿ ನೇಮಿಸಲಾಗಿದೆ. ಮಂಡಳಿಯ ಕಾರ್ಯನಿರ್ವಾಹಕ ನಿರ್ದೇಶಕರು (RRB) ಎಲ್ಲಾ ವಲಯಗಳ ಮುಖ್ಯ ಸಿಬ್ಬಂದಿ ಅಧಿಕಾರಿಗಳಿಗೆ ಈ ನಿಟ್ಟಿನಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ. ಹೊಸ ವರ್ಷದಲ್ಲಿ ರೈಲ್ವೆ ನೇಮಕಾತಿ ಮಂಡಳಿಗಳು ನಡೆಸುವ ನೇಮಕಾತಿಗಳಿಗೆ ವಾರ್ಷಿಕ ಕ್ಯಾಲೆಂಡರ್ ಅನ್ನು ಅನುಸರಿಸಬೇಕು ಎಂದು ಮಂಡಳಿಯು ಹೇಳಿದೆ. ಎಲ್ಲಾ ವಲಯ ರೈಲ್ವೆಗಳು ಮತ್ತು ಉತ್ಪಾದನಾ ಘಟಕಗಳು ನಿಗದಿತ ಸಮಯದೊಳಗೆ ತಮ್ಮ ಖಾಲಿ ಹುದ್ದೆಗಳನ್ನು ನಿರ್ಣಯಿಸಬೇಕು. ಇದಲ್ಲದೆ, 2025 ರ ವರ್ಷಕ್ಕೆ ಭಾರತೀಯ ರೈಲ್ವೆ ಮಟ್ಟದಲ್ಲಿ 22,000 ಲೆವೆಲ್-1 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಮಂಡಳಿಯು ಅನುಮೋದನೆ ನೀಡಿದೆ. ರೈಲ್ವೆ ಮಂಡಳಿಯ ಕಾರ್ಯನಿರ್ವಾಹಕ ನಿರ್ದೇಶಕ ರಾಜೀವ್ ಗಾಂಧಿ ಅವರು, ಸಕ್ಷಮ ಪ್ರಾಧಿಕಾರದ ಅನುಮೋದನೆಯ…
ಬೆಂಗಳೂರು : ರಾಜ್ಯದ ಜನತೆಗೆ ಬಹುಮುಖ್ಯ ಮಾಹಿತಿ ಇಲ್ಲಿದೆ. ಕಂದಾಯ ಇಲಾಖೆಯಲ್ಲಿ ವೃದ್ಧಾಪ್ಯ ವೇತನ, ವಿಧವಾ ವೇತನ ಸೇರಿದಂತೆ ಹಲವು ಪಿಂಚಣಿ ಸೌಲಭ್ಯಗಳು ಸಿಗಲಿವೆ. ಕಂದಾಯ ಇಲಾಖೆಯಿಂದ ಸಿಗುವ ಸೇವೆಗಳ ಸಂಪೂರ್ಣ ಪಟ್ಟಿ ಇಲ್ಲಿದೆ. ವೃದ್ಧಾಪ್ಯ ವೇತನ ಬಡತನ ರೇಖೆಗಿಂತ ಕೆಳಲರುವ ಸಂಕಷ್ಟದಲ್ಲಿರುವ ಹಿರಿಯ ನಾಗರೀಕರಿಗೆ ನೆರವು ನೀಡಿ ಸಮಾಜದ ಮುಖ್ಯವಾಹಿನಿಗೆ ತರುವುದು ಅರ್ಹತೆ : ಯೋಜನೆ ಸೌಲಭ್ಯ ಪಡೆಯಲು ಫಲಾನುಭವಿಗಳಿಗೆ ಇರಬೇಕಾದ ಅರ್ಹತೆ 60 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಕುಟುಂಬದ ಆದಾಯ ರೂ. 32,000/-ಗಳಿಗಿಂತ ಕಡಿಮೆ ಇರಬೇಕು. (ಪರಿಷ್ಕೃತ ವಾರ್ಷಿಕ ಆದಾಯ ಮಿತಿ ದಿನಾಂಕ: 10.02.2021 ) ಸಲ್ಲಿಸಬೇಕಾದ ದಾಖಲೆಗಳು ಆಧಾರ್ಕಾರ್ಡ್ ಪ್ರತಿ ವಯಸ್ಸಿನ ದೃಢೀಕೃತ ದಾಖಲೆ ವಿಳಾಸಕ್ಕೆ ಸಂಬಂಧಿಸಿದ ದೃಢೀಕೃತ ದಾಖಲೆ ಬ್ಯಾಂಕ್/ಅಂಚೆ ಖಾತೆ ಪ್ರತಿ ವಿಧವಾ ವೇತನ ಯೋಜನೆಯ ಉದ್ದೇಶ : ನಿರ್ಗತಿಕ ವಿಧವೆಯರಿಗೆ ಆರ್ಥಿಕ ಸಹಾಯ ಒದಗಿಸುವುದು ಅರ್ಹತೆ 18 ವರ್ಷ ಮೇಲ್ಪಟ್ಟ ವಿಧವೆಯರು ಗ್ರಾಮೀಣ ಹಾಗೂ ನಗರ…
ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ(94) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ಇಂದು ಲಿಂಗಾಯತ ಸಂಪ್ರದಾಯದಂತೆ ದಾವಣಗೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ನಿರ್ಧರಿಸಲಾಗಿದೆ. ಶಾಮನೂರು ಶಿವಶಂಕರಪ್ಪ ಪಾರ್ಥೀವ ಶರೀರವನ್ನು ಇಂದು ಬೆಳಗ್ಗೆ 9 ಗಂಟೆಗೆ ಆಸ್ಪತ್ರೆಯಿಂದ ವೀರಶೈವ ಮಹಾಸಭಾ ಕಚೇರಿಗೆ ತರಲಾಗುತ್ತಿದೆ. ಬೆಳಗ್ಗೆ 10 ಗಂಟೆಯಿಂದ 10.30ರವರೆಗೆ ಅಲ್ಲಿಯೇ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗುತ್ತಿದೆ, ಬಳಿಕ ಸಂಜೆ 4 ಗಂಟೆಗೆ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ. ಶಾಮನೂರು ಶಿವಶಂಕರಪ್ಪ ನಿಧನ ಹಿನ್ನಲೆ: ಇಂದು ಎಲ್ಲಾ ಶಾಲೆ – ಕಾಲೇಜುಗಳಿಗೆ ರಜೆ ಘೋಷಣೆ.! ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನ ಹಿನ್ನಲೆಯಲ್ಲಿ ದಾವಣಗೆರೆ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಣೆ ಮಾಡಲಾಗಿದೆ.ದಾವಣಗೆರೆ ವಿವಿಯ ಎಲ್ಲಾ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ. ದಾವಣಗೆರೆ ವಿಶ್ವ ವಿದ್ಯಾಲಯಕ್ಕೆ ರಜೆಯನ್ನು ಘೋಷಣೆ ಮಾಡಲಾಗಿದೆ. ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ…
ದಾವಣಗೆರೆ: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನ ಹಿನ್ನಲೆಯಲ್ಲಿ ದಾವಣಗೆರೆ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ದಾವಣಗೆರೆ ವಿವಿಯ ಎಲ್ಲಾ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ. ದಾವಣಗೆರೆ ವಿಶ್ವ ವಿದ್ಯಾಲಯಕ್ಕೆ ರಜೆಯನ್ನು ಘೋಷಣೆ ಮಾಡಲಾಗಿದೆ. ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ನಿಧನರಾದ ಹಿನ್ನಲೆಯಲ್ಲಿ ದಾವಣಗೆರೆ ವಿವಿಯ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ. ಇಂದು ವಿವಿ, ಸ್ವಾಯತ್ತ, ಸ್ನಾತಕೋತ್ತರ ಕೇಂದ್ರಗಳಿಗೂ ರಜೆಯನ್ನು ಘೋಷಿಸಿ ವಿವಿಯ ಕುಲಪತಿ ಪ್ರೊ.ಬಿ.ಡಿ ಕುಂಬಾರ್ ಆದೇಶಿಸಿದ್ದಾರೆ. ಶಾಮನೂರು ಶಿವಶಂಕರಪ್ಪನವರು ನಿಧನ ಹಿನ್ನೆಲೆ ಅವರ ಗೌರವಾರ್ಥವಾಗಿ ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಡಿಸೆಂಬರ್ 15 ರಂದು ದಾವಣಗೆರೆ ಜಿಲ್ಲೆ ವ್ಯಾಪ್ತಿಯ ಎಲ್ಲಾ ಸರ್ಕಾರಿ ಅನುದಾನಿತ ಅನುದಾನ ರಹಿತ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ರಜೆಯನ್ನು ಮುಂದಿನ ಶನಿವಾರ ಡಿಸೆಂಬರ್ 27 ರಂದು ಪೂರ್ತಿ ದಿನ ಶಾಲೆಯನ್ನು ನಡೆಸಿ ಸರಿದೂಗಿಸಲು ಸೂಚಿಸಲಾಗಿದೆ.
ಬೆಳಿಗ್ಗೆ ಎದ್ದ ತಕ್ಷಣ ಹಲ್ಲುಜ್ಜುವುದು ನಮ್ಮ ದಿನಚರಿಯ ಒಂದು ಭಾಗ. ಆದಾಗ್ಯೂ, ಪ್ರತಿದಿನ ಹಲ್ಲುಜ್ಜುವಾಗ ಎಷ್ಟು ಟೂತ್ ಪೇಸ್ಟ್ ಬಳಸಬೇಕು ಎಂಬುದರ ಬಗ್ಗೆ ಅನೇಕ ಜನರಿಗೆ ಸರಿಯಾದ ತಿಳುವಳಿಕೆ ಇರುವುದಿಲ್ಲ. ಟಿವಿ ಜಾಹೀರಾತುಗಳಲ್ಲಿ ತೋರಿಸಿರುವಂತೆ, ಟೂತ್ ಪೇಸ್ಟ್ ತುಂಬಿದ ಬ್ರಷ್ ಅನ್ನು ಹಾಕಿಕೊಳ್ಳುವುದು ಹಣ ವ್ಯರ್ಥ ಮಾಡುವುದಲ್ಲದೆ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತದೆ. ವಿಶೇಷವಾಗಿ, ಪೇಸ್ಟ್ ನಲ್ಲಿ ಫ್ಲೋರೈಡ್ ಅಂಶವು ತುಂಬಾ ಹೆಚ್ಚಿದ್ದರೆ, ಅದು ಅಪಾಯಕಾರಿ. ಟೂತ್ ಪೇಸ್ಟ್ ನಲ್ಲಿರುವ ಫ್ಲೋರೈಡ್ ಹೆಚ್ಚಿನ ಪ್ರಮಾಣದಲ್ಲಿ ದೇಹವನ್ನು ಪ್ರವೇಶಿಸಿದರೆ, ಮಕ್ಕಳು ದಂತ ಫ್ಲೋರೋಸಿಸ್ ಎಂಬ ಸಮಸ್ಯೆಯನ್ನು ಬೆಳೆಸಿಕೊಳ್ಳಬಹುದು. ಇದು ಹಲ್ಲುಗಳ ಮೇಲೆ ಬಿಳಿ ಚುಕ್ಕೆಗಳು ರೂಪುಗೊಳ್ಳಲು ಕಾರಣವಾಗುತ್ತದೆ ಮತ್ತು ಹಲ್ಲುಗಳನ್ನು ದುರ್ಬಲಗೊಳಿಸುತ್ತದೆ. ಇದಕ್ಕೆ ಮುಖ್ಯ ಕಾರಣವೆಂದರೆ ಚಿಕ್ಕ ಮಕ್ಕಳು ಪೇಸ್ಟ್ ಅನ್ನು ನುಂಗುವ ಸಾಧ್ಯತೆ ಹೆಚ್ಚು. ಟೂತ್ ಪೇಸ್ಟ್ ಬಳಕೆ ವಯಸ್ಸಿಗೆ ಅನುಗುಣವಾಗಿ ಬದಲಾಗಬೇಕು ಮಕ್ಕಳಿಗೆ: ಚಿಕ್ಕ ಮಕ್ಕಳಿಗೆ, 3 ವರ್ಷದೊಳಗಿನ ಮಕ್ಕಳು ಅಕ್ಕಿ ಧಾನ್ಯದ ಗಾತ್ರದ ಪೇಸ್ಟ್ ಅನ್ನು ಮಾತ್ರ ಬಳಸಬೇಕು. ಇದು…
ಬೆಂಗಳೂರು: ಕನ್ನಡ ನ್ಯೂಸ್ ನೌ ಡಿಜಿಟಲ್ ಮಾಧ್ಯಮದಲ್ಲಿ ಕಾರ್ಯ ನಿರ್ವಹಿಸಲು ಬಯಸುವ ಯುವ ಹಾಗೂ ಅನುಭವಿ ಪತ್ರಕರ್ತರು ಬೇಕಾಗಿದ್ದಾರೆ. ಕನ್ನಡನ್ಯೂಸ್ನೌ ನಲ್ಲಿ ಡೆಸ್ಕ್ ಗೆ ಉಪ ಸಂಪಾದಕ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಅರ್ಹತೆ: * ಇಂಟರ್ನೆಟ್ ಬಗ್ಗೆ ಆಸಕ್ತಿ, ದೈನಂದಿನ ಆಗು ಹೋಗು, ಸುದ್ದಿ ಸಂಗ್ರಹದಲ್ಲಿ ನಿಪುಣತೆ ಹಾಗೂ ತ್ವರಿತಗತಿ ಕಾರ್ಯನಿರ್ವಹಿಸುವ ಉತ್ಸಾಹವಿರಬೇಕು. * ಪತ್ರಿಕೋದ್ಯಮದಲ್ಲಿ ಪದವಿ ಹಾಗೂ ಅನುಭವ ಉಳ್ಳವರಿಗೆ ಆದ್ಯತೆ. * ಸುದ್ದಿಗೆ ಸಂಬಂಧಿಸಿದ ಫೋಟೋ, ವಿಡಿಯೋ ಮಾಡುವ ಅನುಭವ ಇದ್ದರೆ ಒಳ್ಳೆಯದು. ಆಡಿಯೋ, ವಿಡಿಯೋ ಸಾಧ್ಯತೆಗಳನ್ನು ತನ್ನದಾಗಿಸಿಕೊಂಡ ಮೇಲೆ ಸಿನಿಮಾ ಸುದ್ದಿ, ಸಮಾಚಾರ ಮಾಡುವ ಸಾಮಾರ್ಥ್ಯ ಇರಬೇಕು. * ಪ್ರಚಲಿತ ವಿದ್ಯಮಾನ, ವಿಶೇಷ ಸುದ್ದಿ/ವರದಿ ಹಾಗೂ ಇತರ ವಿಷಯಗಳ ಬಗ್ಗೆ ಸುದ್ದಿ ಮಾಡೋ ರೀತಿ ಇರಬೇಕು. * ಇಂಗ್ಲೀಶ್ನಿಂದ ಕನ್ನಡಕ್ಕೆ ಟ್ರಾನ್ಸಲೇಟ್ ಮಾಡುವುದು ತಿಳಿದಿದರ ಬೇಕು * ಶಿಫ್ಟ್ನಲ್ಲಿ ಕೆಲಸ ಮಾಡಲು ಸಿದ್ದರಿರಬೇಕು. * ಮನೆಯಿಂದಲೇ ಕೆಲಸ ಮಾಡುವವರಿಗೆ ಮತ್ತು ಸ್ವತಃ ಲ್ಯಾಪ್ಟಾಪ್ ಇಲ್ಲವೇ ಡೆಸ್ಕ್…
ಚಿಕ್ಕಮಗಳೂರು : ಯುವಕನೊಬ್ಬ ಮೊದಲನೇ ಪತ್ನಿಗೆ ಡಿವೋರ್ಸ್ ಕೊಟ್ಟು ಮತ್ತೊಬ್ಬ ಯುವತಿಯನ್ನು ಪ್ರೀತಿಸಿ 5 ಲಕ್ಷ ಹಣ ಪಡೆದು ಕೈ ಕೊಟ್ಟು ಇದೀಗ ಬೇರೆ ಯುವತಿಯ ಜೊತೆಗೆ ಮದುವೆ ಆಗೋಕೆ ರೆಡಿ ಆಗಿದ್ದಾನೆ. ಈ ವೇಳೆ ಮದುವೆ ಮಂಟಪಕ್ಕೆ ನುಗ್ಗಿ ಪ್ರಿಯತಮೆ ಗಲಾಟೆ ಮಾಡಿದ್ದಾಳೆ. ಯುವಕನ ಮದುವೆಯ ವೇಳೆ ಯುವತಿ ರಂಪಾಟ ಮಾಡಿರುವ ಘಟನೆ ಚಿಕ್ಕಮಗಳೂರಲ್ಲಿ ನಡೆದಿದೆ. ಚಿಕ್ಕಮಗಳೂರಲ್ಲಿ ಯುವತಿ ಅಶ್ವಿನಿ ರಣಚಂಡಿ ಅವತಾರ ತಾಳಿದ್ದು, ದೊಡ್ಡೇಗೌಡ ಕಲ್ಯಾಣ ಮಂಟಪದಲ್ಲಿ ಯುವತಿ ಮದುವೆ ಮನೆಗೆ ನುಗ್ಗಿ ಗಲಾಟೆ ಮಾಡಿದ್ದಾಳೆ. ಪ್ರೀತಿಸಿ ಮೋಸ ಮಾಡಿದ್ದಾಗಿ ಶರತ್ ವಿರುದ್ಧ ಅಶ್ವಿನಿ ಆರೋಪ ಮಾಡಿದ್ದಾಳೆ ಶರತ್ ಮತ್ತು ಫ್ಯಾಮಿಲಿ ವಿರುದ್ಧ ಯುವತಿ ಅಶ್ವಿನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿನ್ನೆ ಮನೆಯ ಮುಂದೆ ಇವತ್ತು ನೇರವಾಗಿ ಮದುವೆ ಮಂಟಪಕ್ಕೆ ನುಗ್ಗಿ ಗಲಾಟೆ ಮಾಡಿದ್ದಾರೆ. ಚಿಕ್ಕಮಂಗಳೂರು ನಗರದ ಕಲ್ಯಾಣ ನಗರದ ಯುವಕ ಶರತ್ ಅಶ್ವಿನಿಯನ್ನು ಪ್ರೀತಿ ಮಾಡುತ್ತಿದ್ದನಂತೆ ಆದರೆ ಈಗ ಪ್ರೀತಿಸಿ ಕೈ ಕೊಟ್ಟು ಬೇರೆಯವರೊಂದಿಗೆ ಮದುವೆಯಾಗಲು ಶರತ್ ಮುಂದಾಗಿದ್ದ.…













