Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೆವಿನ್ಯೂ ಸೈಟ್ ಅಥವಾ ಕಟ್ಟಡಗಳಿಗೆ ಇ-ಖಾತಾ ನೀಡಲು ರಾಜ್ಯ ಸರ್ಕಾರ ಅಧಿಸೂಚನೆ ಅಂತಿಮಗೊಳಿಸಿದೆ. ಹೌದು, ಮ ಪಂಚಾಯಿತಿ ವ್ಯಾಪ್ತಿಯ ರೆವಿನ್ಯೂ ಸೈಟ್ಗಳಿಗೆ ಇ-ಖಾತಾ ನೀಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕಾಯ್ದೆಗೆ ತಿದ್ದುಪಡಿ ತಂದು ಇದೀಗ ಎಲ್ಲ ಆಸ್ತಿಗಳಿಗೆ ತಂತ್ರಾಂಶದಲ್ಲಿ ದಾಖಲಿಸಿ ನಮೂನೆ-11ಎ (ಇ-ಖಾತಾ) ನೀಡಲು ಅಂತಿಮ ಅಧಿಸೂಚನೆ ಸಿದ್ಧಪಡಿಸಿದ್ದು, ಅಧಿಕೃತ ಪ್ರಕಟಣೆ ಮಾತ್ರ ಬಾಕಿ ಉಳಿದಿದೆ. ಗ್ರಾಮ ಪಂಚಾಯಿತಿ ಗ್ರೇಡ್-1/ಗ್ರೇಡ್-2 ಕಾರ್ಯದರ್ಶಿಗಳು ಅರ್ಜಿಯನ್ನು ಸ್ವೀಕರಿಸಿದ ನಂತರ ಸ್ಥಳ ಪರಿಶೀಲನೆ ಕೈಗೊಂಡು 4 ಕರ್ತವ್ಯದ ದಿನಗಳಲ್ಲಿ ಪೂರ್ಣ ದಾಖಲೆಗಳನ್ನು ಪರಿಶೀಲನೆ ನಡೆಸಬೇಕು. ತಂತ್ರಾಂಶದಲ್ಲಿ ಮಾಹಿತಿಯನ್ನು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಸಲ್ಲಿಸಬೇಕು. ಅವರು ಎರಡು ದಿನಗಳಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಅನುಮೋದನೆಗೆ ಸಲ್ಲಿಸಿ ಅವರಿಂದ ಪ್ರಸ್ತಾವನೆಯನ್ನು ಸ್ವೀಕರಿಸಿದ ನಂತರ 4 ಕೆಲಸದ ದಿನಗಳ ಒಳಗಾಗಿ ತೀರ್ಮಾನ ತೆಗೆದುಕೊಳ್ಳಬೇಕು. ನಿಗದಿತ ದಾಖಲೆ ಸಲ್ಲಿಸಿದ್ದರೆ 15 ದಿನಗಳ ಒಳಗಾಗಿ ಡಿಜಿಟಲ್ ಸಹಿ ಮಾಡಿ ಇ-ಖಾತಾ ನೀಡಬೇಕೆಂದು ಅಧಿಸೂಚನೆಯಲ್ಲಿ…
ಈ ಚಿತ್ರವನ್ನು ಮನೆಯಲ್ಲಿಟ್ಟು ಪೂಜಿಸಿದರೆ ಸ್ವಂತ ಮನೆ, ಜಮೀನು ಖರೀದಿಸುವ ಯೋಗ ಬರುತ್ತದೆ. ಮನೆ ಮತ್ತು ಭೂಮಿಗೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳು ಸಂಪೂರ್ಣವಾಗಿ ಸರಳ ಪರಿಹಾರವಾಗಿದೆ. ಸ್ವಂತ ಮನೆ, ಜಮೀನು ಖರೀದಿಸುವುದು ಇಂದಿನ ಜನರ ಬಹುದಿನದ ಮಹತ್ವಾಕಾಂಕ್ಷೆಯಾಗಿದೆ. ಆದರೆ, ಚಿಕ್ಕ ಮನೆ ಕಟ್ಟಿಕೊಂಡು ವಾಸ ಮಾಡುವ ಹಂಬಲ ಹಲವರಿದ್ದಾರೆ. ಅಂತಹವರು ಈ ಒಂದು ಸರಳ ಉಪಾಯವನ್ನು ಮಾಡಿದಾಗ ಸ್ವಂತ ಜಮೀನು, ಮನೆ ಖರೀದಿಸಿ ನೆಲೆಸುವ ಅವಕಾಶ ಸಿಗುತ್ತದೆ ಎಂದು ಹೇಳಲಾಗುತ್ತದೆ. ಅಧ್ಯಾತ್ಮದ ಕುರಿತಾದ ಈ ಪೋಸ್ಟ್ನಲ್ಲಿ ಅದು ಏನೆಂದು ನೀವು ಕಂಡುಹಿಡಿಯಬಹುದು . ಮನೆ ಭೂಮಿ, ಪೂಜೆ ಮನೆ ಭೂಮಿಗೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳು ನಿವಾರಣೆಯಾಗಬೇಕಾದರೆ ಅಂಗಾರ ಕಾರಕನ ಕೃಪೆ ಖಂಡಿತಾ ಬೇಕು. ಮುರುಗನು ಆ ಗ್ರಹದ ಅಧಿದೇವತೆ. ಆದ್ದರಿಂದ ಮಂಗಳವಾರದಂದು ಮುರುಗನನ್ನು ಪೂಜಿಸುವುದರಿಂದ ಇಂತಹ ಸಮಸ್ಯೆಗಳು ನಿವಾರಣೆಯಾಗುತ್ತವೆ ಎಂಬುದು ಹಲವರಿಗೆ ತಿಳಿದಿರುವ ವಿಚಾರ. ಆದರೆ ಈಗ ನಾವು ಯಾವ ಚಿತ್ರವನ್ನು ಹೇಗೆ ಹಾಕಬೇಕೆಂದು ತಿಳಿಯಬಹುದು. ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ…
ನವದೆಹಲಿ : ನಟ ವಿಜಯ್ ಅವರ ರಾಜಕೀಯ ಪಕ್ಷವಾದ ತಮಿಳಗ ವೆಟ್ರಿ ಕಳಗಂ (TVK) ಮಾನ್ಯತೆ ಪಡೆದ ರಾಜಕೀಯ ಪಕ್ಷವಲ್ಲ ಎಂದು ಭಾರತೀಯ ಚುನಾವಣಾ ಆಯೋಗ (ECI) ಶುಕ್ರವಾರ ಮದ್ರಾಸ್ ಹೈಕೋರ್ಟ್ಗೆ ತಿಳಿಸಿದೆ. ಮುಖ್ಯ ನ್ಯಾಯಮೂರ್ತಿ ಮಣೀಂದ್ರ ಮೋಹನ್ ಶ್ರೀವಾಸ್ತವ ಮತ್ತು ನ್ಯಾಯಮೂರ್ತಿ ಜಿ ಅರುಲ್ ಮುರುಗನ್ ಅವರ ಪೀಠದ ಮುಂದೆ ಹಾಜರಾದ ವಕೀಲ ನಿರಂಜನ್ ರಾಜಗೋಪಾಲ್, ಇಸಿಐ ಮಾನದಂಡಗಳ ಪ್ರಕಾರ, ಟಿವಿಕೆ ಮಾನ್ಯತೆ ಪಡೆದ ರಾಜ್ಯ ಪಕ್ಷವಾಗಿ ಅರ್ಹತೆ ಪಡೆಯುವ ಮಾನದಂಡಗಳನ್ನು ಪೂರೈಸಿಲ್ಲ ಎಂದು ಸಲ್ಲಿಸಿದರು. ಮಾನ್ಯತೆ ಪಡೆಯಲು, ಲೈವ್ ಲಾ ವರದಿ ಮಾಡಿದಂತೆ, ಇಸಿಐ ನಿಗದಿಪಡಿಸಿದ ಇತರ ಮಾನದಂಡಗಳಲ್ಲಿ ಕನಿಷ್ಠ 6% ಮತಗಳು ಮತ್ತು ವಿಧಾನಸಭೆಯಲ್ಲಿ ಎರಡು ಸ್ಥಾನಗಳು ಅಥವಾ ಲೋಕಸಭೆಯಲ್ಲಿ ಒಂದು ಸ್ಥಾನವನ್ನು ಪಕ್ಷವು ಪಡೆಯಬೇಕು.
ಕೆಎನ್ಎನ್ಡಿಜಿಟಲ್ ಡೆಸ್ಕ್ : ಭಾರತೀಯ ಆಹಾರಗಳು ಪ್ರಪಂಚದಾದ್ಯಂತ ಬಹಳ ಜನಪ್ರಿಯವಾಗಿವೆ. ಆದಾಗ್ಯೂ, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯು ಭಾರತೀಯರು ಸೇವಿಸುವ ಆಹಾರವು ಅನಾರೋಗ್ಯಕರ ಎಂದು ಹೇಳಿದೆ. ಭಾರತೀಯರು ಸೇವಿಸುವ ಆಹಾರದಲ್ಲಿ ಕಾರ್ಬೋಹೈಡ್ರೇಟ್’ಗಳು ಅಧಿಕ ಮತ್ತು ಪ್ರೋಟೀನ್ ಕಡಿಮೆ ಇರುತ್ತದೆ. ಇದು ದೇಶದಲ್ಲಿ ಬೊಜ್ಜು, ಮಧುಮೇಹ ಮತ್ತು ಸ್ನಾಯು ದೌರ್ಬಲ್ಯದಂತಹ ಸಮಸ್ಯೆಗಳಿಗೆ ಕಾರಣವಾಗಿದೆ. ರಾಷ್ಟ್ರೀಯ ಪೌಷ್ಟಿಕಾಂಶ ಸಂಸ್ಥೆಯಾದ ಐಸಿಎಂಆರ್ (ಐಸಿಎಂಆರ್ -ಟಿಪ್ಸ್) ನಡೆಸಿದ ಈ ಸಂಶೋಧನೆಯು ಭಾರತೀಯ ಆಹಾರಗಳ ಕುರಿತು ಸಂಶೋಧನೆ ನಡೆಸಿದೆ. ಭಾರತೀಯ ಆಹಾರವು 65 ರಿಂದ 70 ಪ್ರತಿಶತ ಕಾರ್ಬೋಹೈಡ್ರೇಟ್’ಗಳನ್ನು ಮತ್ತು ಕೇವಲ 10 ಪ್ರತಿಶತ ಪ್ರೋಟೀನ್ ಹೊಂದಿರುತ್ತದೆ ಎಂದು ವರದಿ ಹೇಳಿದೆ. ಇದರರ್ಥ ಜನರು ತಮ್ಮ ನೆಚ್ಚಿನ ಆಹಾರವನ್ನ ಸೇವಿಸುತ್ತಾರೆ ಮತ್ತು ಅವರ ಹಸಿವನ್ನ ನೀಗಿಸುತ್ತಾರೆ. ಆದರೆ ಅವರು ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಸೇವಿಸುವುದಿಲ್ಲ. ಭಾರತೀಯರು ಹೆಚ್ಚಾಗಿ ಅಕ್ಕಿ, ರೊಟ್ಟಿ ಮತ್ತು ಆಲೂಗಡ್ಡೆಯಂತಹ ಕಾರ್ಬೋಹೈಡ್ರೇಟ್’ಗಳಲ್ಲಿ ಸಮೃದ್ಧವಾಗಿರುವ ಆಹಾರವನ್ನ ಸೇವಿಸುತ್ತಾರೆ. ಇವುಗಳನ್ನು ಹೆಚ್ಚು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟದಲ್ಲಿ ಭಾರಿ…
ಅಮೃತಸರ : ಅಮೃತಸರದಿಂದ ಸಹರ್ಸಾಗೆ ತೆರಳುತ್ತಿದ್ದ `ಗರೀಬ್ ರಥ್ ಎಕ್ಸ್ಪ್ರೆಸ್’ ರೈಲಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಪಂಜಾಬ್ನ ಸಿರ್ಹಿಂದ್ ನಿಲ್ದಾಣದಲ್ಲಿ ಇಂದು ಮುಂಜಾನೆ ಅಮೃತಸರ-ಸಹರ್ಸಾ ರೈಲು ಸಂಖ್ಯೆ 12204 ರ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಬೆಂಕಿಯನ್ನು ನಂದಿಸಲಾಗಿದೆ ಎಂದು ರೈಲ್ವೆ ಸಚಿವಾಲಯ ತಿಳಿಸಿದೆ. ಪಂಜಾಬ್ನ ಸಿರ್ಹಿಂದ್ ರೈಲು ನಿಲ್ದಾಣದಲ್ಲಿ ಗರೀಬ್ ರಥ ಎಕ್ಸ್ಪ್ರೆಸ್ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತು. ಬೆಂಕಿಯ ಅವಘಡದಿಂದ ರೈಲಿನಲ್ಲಿ ಭಯಭೀತ ವಾತಾವರಣ ನಿರ್ಮಾಣವಾಯಿತು. ಆದಾಗ್ಯೂ, ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂಬುದು ಸಮಾಧಾನಕರ ಸಂಗತಿ. ರೈಲ್ವೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ತಂಡಗಳು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದವು. ರೈಲಿನ ಒಂದು ಬೋಗಿಯಿಂದ ಹೊಗೆ ಬರುತ್ತಿರುವುದನ್ನು ಜನರು ಗಮನಿಸಿದರು, ಇದರಿಂದಾಗಿ ರೈಲು ನಿಲ್ಲಿಸಲಾಯಿತು ಎಂದು ಸಿರ್ಹಿಂದ್ ಜಿಆರ್ಪಿ ಎಸ್ಎಚ್ಒ ರತನ್ ಲಾಲ್ ಹೇಳಿದರು. https://twitter.com/ANI/status/1979395291070763426?ref_src=twsrc%5Egoogle%7Ctwcamp%5Eserp%7Ctwgr%5Etweet
BREAKING : ವಿಜಯಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು : ಪೊಲೀಸರ ಎನ್ಕೌಂಟರ್ ನಲ್ಲಿ ನಟೋರಿಯಸ್ ರೌಡಿಶೀಟರ್ ಬಲಿ.!
ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿಸಿದ್ದು, ಪೊಲೀಸರ ಗುಂಡೇಟಿಗೆ ನಟೋರಿಯಸ್ ರೌಡಿಶೀಟರ್ ಯೂನೂಸ್ ಇಕ್ಲಾಸ್ ಬಲಿಯಾಗಿದ್ದಾನೆ. ವಿಜಯಪುರ ಜಿಲ್ಲೆಯ ಸಿಂಧಗಿಯಲ್ಲಿ ಪೊಲೀಸರ ಫೈರಿಂಗ್ ನಲ್ಲಿ ನಟೋರಿಯಸ್ ಹಂತಕನಾಗಿದ್ದ ಯೂನುಸ್ ಇಕ್ಲಾಸ್ ಪಟೇಲ್ ಸಾವನ್ನಪ್ಪಿದ್ದಾನೆ. ರೌಡಿಶೀಟರ್ ಯೂನುಸ್ ಇಕ್ಲಾಸ್ ನಿನ್ನೆ ವ್ಯಕ್ತಿಯೋರ್ವರಿಗೆ ಚಾಕು ತೋರಿಸಿ 25 ಸಾವಿರ ಹಣ ಕಸಿದು ಆತನ ಬೈಕ್ ಕಸಿದುಕೊಂಡು ಪರಾರಿ ಆಗಿದ್ದನು. ಈ ಸಂಬಂಧ ವಿಜಯಪುರದ ಗಾಂಧಿಚೌಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಖಚಿತ ಮಾಹಿತಿ ಆಧರಿಸಿ ಆರೋಪಿಯನ್ನು ಪೊಲೀಸರು ಮುಂದಾಗಿದ್ದರು. ಈ ವೇಳೆ ಪೊಲೀಸರ ಮೇಲೆ ಚಾಕು ಇರಿದು ಹಲ್ಲೆಗೆ ಯತ್ನಿಸಿದ್ದಾನೆ . ಪೊಲೀಸರು ಶರಣಾಗುವಂತೆ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೆ ಆತನ ಪರಾರಿಯಾಗಲು ಯತ್ನಿಸಿದ ಹಿನ್ನೆಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಆತನನ್ನು ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ ಎಂದು ವೈದ್ಯರು ಧೃಡಪಡಿಸಿದ್ದಾರೆ.
ಪ್ರಪಂಚದಾದ್ಯಂತದ ಭಾರತೀಯರು 2025 ರ ಧನ್ ತೇರಸ್ ಹಬ್ಬವನ್ನು ಆಚರಿಸುತ್ತಿದ್ದಾರೆ. ಹಿಂದೂ ಸಮುದಾಯವು ಹೆಚ್ಚಾಗಿ ಆಚರಿಸುವ ಧನ್ ತೇರಸ್ ಚಿನ್ನ, ಬೆಳ್ಳಿ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಖರೀದಿಸಲು ವರ್ಷದ ಅತ್ಯಂತ ಶುಭ ಸಮಯವಾಗಿದೆ. ಇದು ಸಮೃದ್ಧಿ ಮತ್ತು ಅದೃಷ್ಟವನ್ನು ತರುತ್ತದೆ ಎಂದು ನಂಬಲಾದ ಹಳೆಯ ಆಚರಣೆಯಾಗಿದೆ. ಧಂತ್ರಯೋದಶಿಯಂದು ನಿಮ್ಮ ಚಿನ್ನ ಮತ್ತು ಬೆಳ್ಳಿಯ ಖರೀದಿಗಳನ್ನು ಮಾಡಲು ಜ್ಯೋತಿಷಿಗಳು ಶುಭ ಮುಹೂರ್ತವನ್ನು ಹಂಚಿಕೊಂಡಿದ್ದಾರೆ. ಧನ್ ತೇರಸ್ 2025 ಚಿನ್ನದ ಖರೀದಿ ಮುಹೂರ್ತ ಚಿನ್ನ ಮತ್ತು ಬೆಳ್ಳಿಯನ್ನು ಖರೀದಿಸಲು ಧನ್ತ್ರಯೋದಶಿ ಮುಹೂರ್ತವು ಅಕ್ಟೋಬರ್ 18 ರಂದು ಮಧ್ಯಾಹ್ನ 12:18 ಕ್ಕೆ ಪ್ರಾರಂಭವಾಗುತ್ತದೆ ಮತ್ತು ಅಕ್ಟೋಬರ್ 19 ರಂದು ಬೆಳಿಗ್ಗೆ 6:10 ರವರೆಗೆ ಮುಂದುವರಿಯುತ್ತದೆ, ಇದು ಶಾಪರ್ ಗಳಿಗೆ 17 ಗಂಟೆ, 52 ನಿಮಿಷಗಳ ವಿಂಡೋವನ್ನು ಒದಗಿಸುತ್ತದೆ. ಚಿನ್ನದ ನಾಣ್ಯಗಳು, ಆಭರಣಗಳು, ಬೆಳ್ಳಿಯ ಪಾತ್ರೆಗಳು ಮತ್ತು ಬೆಳ್ಳಿಯ ಇಟ್ಟಿಗೆಗಳು ಅಥವಾ ಚಿನ್ನದ ಸರಳುಗಳಂತಹ ಅಮೂಲ್ಯ ಹೂಡಿಕೆಗಳನ್ನು ಖರೀದಿಸಲು ಈ ಸುಭ್ ಮುಹೂರ್ತವು ಸೂಕ್ತವಾಗಿದೆ. ಜ್ಯೋತಿಷ್ಯಶಾಸ್ತ್ರದ…
ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎಂಬಂತೆ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ 1ರಿಂದ 10ನೇ ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡಲು ಶಿಕ್ಷಣ ಇಲಾಖೆ ಸಿದ್ದತೆ ನಡೆದಿದೆ. ಈ ಸಂಬಂಧ 10 ಚಟುವಟಿಕಾ ಪುಸ್ತಕ ರಚಿಸಿದ್ದು, ಸಿಎಂ ಸಿದ್ದರಾಮಯ್ಯ ಕನ್ನಡ ರಾಜ್ಯೋತ್ಸವದ ದಿನ ಬಿಡುಗಡೆ ಮಾಡಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ, ಅನುಭೂತಿ ಮತ್ತು ಪ್ರಾಮಾಣಿಕತೆ ಮತ್ತು ಬದ್ಧತೆ, ಸುಸ್ಥಿರ ಜೀವನ ಮತ್ತು ಪರಿಸರ ಜಾಗೃತಿ, ನಾಗರಿಕ ಜವಾಬ್ದಾರಿ, ವೈವಿಧ್ಯತೆ, ಸಮತೆ ಮತ್ತು ಒಳಗೊಳ್ಳುವಿಕೆ, ಭಾವನಾತ್ಮಕ ಬುದ್ಧಿವಂತಿಕೆ ಮತ್ತು ಸ್ಥಿತಿಸ್ಥಾಪಕತ್ವ, ವೈಜ್ಞಾನಿಕ ಮನೋ ಭಾವ ಮತ್ತು ಸೃಜನಶೀಲ ಕಲ್ಪನೆ, ಸುರಕ್ಷತೆ ಮತ್ತು ಲಿಂಗ ಸಮಾನತೆ ಈ 10 ಮೂಲ ಮೌಲ್ಯಗಳು ಮತ್ತು ಇತರೆ ಉಪ ಮೌಲ್ಯಗಳನ್ನು ಆಧರಿಸಿದ ಚಟುವಟಿಕಾ ಪುಸ್ತಕಗಳನ್ನು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ(ಡಿಎಸ್ಇಆರ್ಟಿ) ರಚಿಸಿದೆ. ಇವುಗಳ ಡಿಜಿಟಲ್ ಅವತರಣಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡು ಗಡೆ…
ಬೆಳಗಾವಿ : ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್ ಆಗಿದ್ದು, ಕಂಡಕ್ಟರ್ ಆಗಿದ್ದ ಮಹಿಳೆಯನ್ನು ಪತಿಯೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು,ರಸ್ತೆ ಸಾರಿಗೆ ಸಂಸ್ಥೆಯಲ್ಲಿ ನಿರ್ವಾಹಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾಶವ್ವ ಕರೀಕಟ್ಟಿ (34) ಅವರನ್ನು ಅವರ ಪತಿ ನಿಪ್ಪಾಣಿ ಠಾಣೆ ಕಾನ್ಸ್ಟೆಬಲ್ ಸಂತೋಷ ಕಾಂಬಳೆ (35) ಕೊಲೆ ಮಾಡಿದ್ದಾರೆ. ಬೈಲಹೊಂಗಲ ತಾಲೂಕಿನ ಬೆಳವಡಿ ಗ್ರಾಮದ ಕಾಶವ್ವ ಮತ್ತು ಸಂತೋಷ 2013ರಲ್ಲಿ ವಿವಾಹವಾಗಿದ್ದರು. ಕಾಶವ್ವ ಅವರು ನಿಪ್ಪಾಣಿಯಿಂದ ಸವದತ್ತಿ ಡಿಪೊಗೆ ವರ್ಗಾವಣೆ ಪಡೆದುಕೊಂಡಿದ್ದರು. ಸವದತ್ತಿಯ ರಾಮಾಪುರ ಬಡಾವಣೆ ಮನೆಯಲ್ಲಿ ವಾಸವಾಗಿದ್ದರು. ಪತಿ ಸಂತೋಷನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಹೀಗಾಗಿ ಸಂತೋಷ್ ಅವರನ್ನು ಪೊಲೀಸ್ ಸೇವೆಯಿಂದ ಅಮಾನತು ಮಾಡಲಾಗಿತ್ತು. ಆಕ್ಟೋಬರ್ 13 ರಂದು ಸಂತೋಷ್ ಕಾಶವ್ವ ಮನೆಗೆ ಹೋಗಿದ್ದ ವೇಳೆ ಇಬ್ಬರ ನಡುವೆ ಜಗಳವಾಗಿತ್ತು. ಬಳಿಕ ಮಾರಕಾಸ್ತ್ರದಿಂದ ಕಾಶವ್ವಗೆ ಇರಿದು ಕೊಲೆ ಮಾಡಿ ಬೀಗ ಹಾಕಿಕೊಂಡು ಸಂತೋಷ್ ಪರಾರಿಯಾಗಿದ್ದ. ನಾಲ್ಕೈದು…
ಚಾಮರಾಜನಗರ : ಗ್ರಾಮಪಂಚಾಯಿತಿ ಕಚೇರಿ ಎದುರೇ ವಾಟರ್ ಮ್ಯಾನ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸಂಬಳ ನೀಡಿಲ್ಲ ಎಂದು ಮನನೊಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಾಮರಾಜನಗರ ತಾಲೂಕಿನ ಹೊಂಗನೂರು ಗ್ರಾಮದಲ್ಲಿ ಗ್ರಾಮಪಂಚಾಯಿತಿ ಕಚೇರಿ ಮುಂದೆಯೇ ವಾಟರ್ ಮ್ಯಾನ್ ಚಿಕ್ಕಸು ನಾಯಕ (65) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊಂಗನೂರು ಗ್ರಾಮಪಂಚಾಯಿತಿನಲ್ಲಿ ಚಿಕ್ಕಸು ವಾಟರ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು. ಮುಂಜಾನೆ ಗ್ರಾಮಸ್ಥರು ಗ್ರಾ.ಪಂ.ಕಚೇರಿಗೆ ಬಂದಾಗ ಚಿಕ್ಕಸು ಗ್ರಾ.ಪಂ. ಬಾಗಿಲು ಬಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಚಕ್ಕಸು, ಸಂಬಳಕ್ಕಾಗಿ ಎಷ್ಟೇ ಮನವಿ ಮಾಡಿಕೊಂಡಿದ್ದರೂ ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ರೂಪಾ ಮತ್ತು ಪಿಡಿಓ ರಾಮೇಗೌಡ ಚಿಕ್ಕಸು ಅವರನ್ನು ಗದರಿಸಿ ಕಳುಹಿಸುತ್ತಿದ್ದರು. ಇದರಿಂದ ಬೇಸತ್ತ ವಾಟರ್ಮ್ಯಾನ್ ಚಿಕ್ಕಸು ಡೆತ್ ನೋಟ್ ಬರೆದಿಟ್ಟು, ಗ್ರಾಮ ಪಂಚಾಯಿತಿ ಕಚೇರಿ ಬಾಗಿಲಿನ ಮುಂದೆಯೇ ನೇಣು ಬಿಗಿಕೊಂಡು ಸಾವನ್ನಪ್ಪಿದ್ದಾರೆ. ಈ ಕುರಿತು ಚಾಮರಾಜ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














