Author: kannadanewsnow57

2020-21, 2021-22, 2022-23, 2023-24, 2024-25 ಮತ್ತು 2025-26 ನೇ ಸಾಲಿನ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಕಾರ್ಯಕ್ರಮಕ್ಕಾಗಿ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಿರುವ ಕೆಲವೊಂದು ವಿದ್ಯಾರ್ಥಿಗಳಿಗೆ ತಾಂತ್ರಿಕ ಕಾರಣಗಳಿಂದ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ಮಾಡಲು ಸಾಧ್ಯವಾಗುತ್ತಿಲ್ಲ. ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಕೊಳ್ಳದೆ ಇರುವುದು. ವಿದ್ಯಾರ್ಥಿಗಳ ಶೈಕ್ಷಣಿಕ ದತ್ತಾಂಶದಲ್ಲಿ ಹಾಗೂ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ನಮೂದಿಸಿರುವ ಹೆಸರಿಗೂ ವ್ಯತ್ಯಾಸವಿರುವುದು. Counselling Course ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಸಂಧರ್ಭದಲ್ಲಿ Counselling ದತ್ತಾಂಶ ನಮೂದಿಸದೇ ಇರುವುದು. ವಿದ್ಯಾರ್ಥಿಗಳ ಹಿಂದಿನ ಶೈಕ್ಷಣಿಕ ವರ್ಷದ ದತ್ತಾಂಶವನ್ನು ವಿಶ್ವವಿದ್ಯಾಲಯಗಳು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದೊಂದಿಗೆ ಹಂಚಿಕೊಳ್ಳದೆ ಇರುವುದು. ಈ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿ, ಮಾಹಿತಿಯನ್ನು ಅಪ್ಡೇಯಟ್ ಮಾಡಲು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ವಿದ್ಯಾರ್ಥಿಗಳ ಲಾಗಿನ್, ತಾಲ್ಲೂಕು/ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಲಾಗಿನ್ನಂಲ್ಲಿ ಅವಕಾಶ ನೀಡಲಾಗಿದ್ದು. ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳುವಂತೆ…

Read More

2025-26ನೇ ಸಾಲಿನ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಪ್ರತಿ ಹನಿಗೆ ಅಧಿಕ ಬೆಳೆ ಕಾರ್ಯಕ್ರಮದಲ್ಲಿ ತೋಟಗಾರಿಕೆ ಬೆಳೆಗಳಲ್ಲಿ ನೀರಿನ ಬಳಕೆಯ ದಕ್ಷತೆಯನ್ನು ಹೆಚ್ಚಿಸುವ ಉದ್ದೇಶದಿಂದ ಸೂಕ್ಷ್ಮ ನೀರಾವರಿ ಪದ್ಧತಿ ಅಳವಡಿಕೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಎಲ್ಲಾ ವರ್ಗಗಳ ಆಸಕ್ತ ರೈತರಿಂದ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಿದೆ. ಈ ಯೋಜನೆಯಡಿ 5 ಎಕರೆವರೆಗಿನ ಪ್ರದೇಶಕ್ಕೆ ಶೇಕಡಾ 90% ರಷ್ಟು ಸಹಾಯಧನ ಹಾಗೂ ಮೇಲ್ಪಟ್ಟ ಪ್ರದೇಶಕ್ಕೆ ಶೇಕಡಾ 45% ರ ದರದಂತೆ ಸಹಾಯಧನವನ್ನು ಒಟ್ಟಾರೆ ಗರಿಷ್ಠ 12.50 ಎಕರೆ ಪ್ರದೇಶದವರೆಗೆ ನೀಡಲು ಅವಕಾಶವಿದ್ದು, ಈಗಾಗಲೇ 7 ವರ್ಷಗಳ ಹಿಂದೆ ಸೂಕ್ಷ್ಮ ನೀರಾವರಿ ಪದ್ಧತಿಯನ್ನು ಅಳವಡಿಸಿಕೊಂಡು ಸಹಾಯಧನ ಪಡೆದಿರುವ ರೈತರು ಅವುಗಳು ಹಾಳಾಗಿದ್ದಲ್ಲಿ ಪುನಃ ಸೂಕ್ಷ್ಮ ನೀರಾವರಿ ಅಳವಡಿಸಿಕೊಂಡಲ್ಲಿ ಅವರೂ ಸಹಾಯಧನ ಪಡೆಯಲು ಅರ್ಹರಾಗಿರುತ್ತಾರೆ. ಸಹಾಯಧನವನ್ನು ಯೋಜನೆಯ ಮಾರ್ಗಸೂಚಿ ಹಾಗೂ ಅನುದಾನ ಲಭ್ಯತೆ ಮತ್ತು ಜೇಷ್ಠತೆಯ ಅನುಸಾರ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಹೋಬಳಿ/ತಾಲೂಕು ಮಟ್ಟದ ತೋಟಗಾರಿಕಾ ಕಚೇರಿಯನ್ನು ಸಂಪರ್ಕಿಸುವAತೆ…

Read More

ಯಶಸ್ವಿನಿ ಸಹಕಾರಿಗಳ ಆರೋಗ್ಯ ರಕ್ಷಣಾ ಯೋಜನೆಯ ಶಸ್ತ್ರಚಿಕಿತ್ಸಾ ಯೋಜನೆಯಾಗಿದ್ದು, ಈ ಯೋಜನೆಯಡಿ 2025-26ನೇ ಸಾಲಿಗೆ ನೋಂದಾಯಿಸಲು ಅರ್ಹ ಫಲಾನುಭವಿಗಳಿಗೆ ಸೂಚಿಸಿದೆ. ಕರ್ನಾಟಕ ಸೌಹಾರ್ದ ಸಹಕಾರಿ, ಕರ್ನಾಟಕ ಸಹಕಾರ ಸಂಘದ ಸದಸ್ಯರು ಮತ್ತು ಅವರ ಕುಟುಂಬ ವರ್ಗದವರಿಗೆ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ವತಿಯಿಂದ ಸಂಘಟಿಸಲ್ಪಟ್ಟಿರುವ ಎಲ್ಲಾ ಗ್ರಾಮೀಣ ಸ್ವ-ಸಹಾಯ ಗುಂಪುಗಳ ಸದಸ್ಯರು, ಸಹಕಾರಿ ಮೀನುಗಾರರು ಮತ್ತು ಸಹಕಾರಿ ನೇಕಾರರು ಕೂಡ ಈ ಯೋಜನೆಯ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸದಸ್ಯರಿಗೆ ಅವರ ವಾರ್ಷಿಕ ಸದಸ್ಯತ್ವದ ವಂತಿಗೆಯನ್ನು ಸರ್ಕಾರವೇ ಭರಿಸುತ್ತದೆ. ಯಶಸ್ವಿನಿ ಪ್ರೋಟೋಕಾಲ್‌ನಂತೆ ನಿಗದಿಪಡಿಸಿರುವ ಚಿಕಿತ್ಸೆಗಳ ಪ್ಯಾಕೇಜಿನ ದರದ ಮಿತಿಗೊಳ್ಳಪಟ್ಟು ಫಲಾನುಭವಿ ಮತ್ತು ಅವರ ಕುಟುಂಬಕ್ಕೆ ವಾರ್ಷಿಕ ಗರಿಷ್ಠ ರೂ.5 ಲಕ್ಷ ವೈದ್ಯಕೀಯ ಚಿಕಿತ್ಸಾ ವೆಚ್ಚದ ಮಿತಿಯೊಂದಿಗೆ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ಇರುತ್ತದೆ. ಸಹಕಾರ ಸಂಘಗಳಲ್ಲಿ ಕುಟುಂಬದ ಒಬ್ಬ ವ್ಯಕ್ತಿ ಸದಸ್ಯನಾಗಿ 1 ತಿಂಗಳು ಗತಿಸಿದ್ದಲ್ಲಿ ಈ ಯೋಜನೆಯಡಿಯಲ್ಲಿ ನೋಂದಾಯಿಸಬಹುದಾಗಿದೆ ಹಾಗೂ ವಯೋಮಿತಿಯ…

Read More

ಬೆಂಗಳೂರು : ರಾಜ್ಯದ ಇತಿಹಾಸದಲ್ಲಿ ಯಾರೂ ಮಾಡದ ಸಾಹಸಕ್ಕೆ ಸಚಿವ ಕೃಷ್ಣ ಬೈರೇಗೌಡರು ಕೈಹಾಕಿದ್ದು, ಈ ವರ್ಷ ಇನ್ನೂ 1.11 ಲಕ್ಷ ಬಡವರಿಗೆ ಹಕ್ಕುಪತ್ರ ನೀಡಲು ಸಿದ್ಧತೆ ನಡೆಸಲಾಗದೆ. ಅಧಿಕಾರಕ್ಕೆ ಏರುತ್ತಿದ್ದಂತೆ ಮನೆ, ಜಮೀನು ಇಲ್ಲದ ಲಕ್ಷಾಂತರ ಬಡವರಿಗೆ ಹಕ್ಕುಪತ್ರ ನೀಡುವ ಸಂಕಲ್ಪ ಹೊಂದಿರುವ ಸಚಿವರು, ಕಳೆದ ಎರಡೂವರೆ ವರ್ಷದಿಂದ ರಾಜ್ಯಾದ್ಯಂತ ಓಡಾಡಿ ಅಧಿಕಾರಿಗಳ ಬೆನ್ನುಬಿದ್ದು ಅರ್ಹ ಫಲಾನುಭವಿಗಳನ್ನು ಗುರುತಿಸಲು ಸೂಚನೆ ನೀಡಿದ್ದಾರೆ. ಕಳೆದ ವರ್ಷ ವಿಜಯನಗರದಲ್ಲಿ ಐತಿಹಾಸಿಕ ಕಾರ್ಯಕ್ರಮ ಜರುಗಿಸಿ 1.11 ಲಕ್ಷ ಬಡವರಿಗೆ ಹಕ್ಕುಪತ್ರ ನೀಡಿದ್ದು,ಈ ವರ್ಷ ಇನ್ನೂ 1.11 ಲಕ್ಷ ಬಡವರಿಗೆ ಹಕ್ಕುಪತ್ರ ನೀಡಲು ಸಿದ್ಧತೆ ನಡೆಸಲಾಗಿದೆ. ಫೆಬ್ರವರಿ.13 ರಂದು ಹಾವೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಲಾಗುತ್ತದೆ. ದಶಕಗಳ ಕಾಲ ಮನೆ-ಜಮೀನು ಇಲ್ಲದವರಿಗೆ ಬಡವರಿಗೆ ವರದಾನವಾದ ಸಚಿವ ಕೃಷ್ಣ ಬೈರೇಗೌಡರ ನಿರ್ಧಾರ. ರಾಜ್ಯದಲ್ಲಿರುವ ಹಾಡಿ, ಹಟ್ಟಿ, ತಾಂಡಾ ವ್ಯಾಪ್ತಿಯಲ್ಲಿ ವಾಸಿಸುವ ನಿವಾಸಿಗಳು ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಹೀಗಾಗಿ ಇಂಥ ವಸತಿ ಪ್ರದೇಶಗಳಿಗೆ ಕಂದಾಯ ಗ್ರಾಮಗಳ…

Read More

ಬೆಂಗಳೂರು: 2026-31ನೇ ಸಾಲಿನ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳಲು ಸರ್ಕಾರ ಸೂಚಿಸಿದೆ. ಆ ಮೂಲಕ ರಾಜ್ಯದಲ್ಲಿ ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯ್ತಿಗಳ ಚುನಾವಣೆಗೆ ಶೀಘ್ರವೇ ದಿನಾಂಕ ಘೋಷಣೆಯ ಸುಳಿವು ಹೊರಬಿದ್ದಿದೆ. ಈ ಕುರಿತಂತೆ ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದು, ಅದರಲ್ಲಿ 2020-25ನೇ ಅವಧಿಯ ಗ್ರಾಮ ಪಂಚಾಯಿತಿಗಳ ಅವಧಿಯು 2026 ರ ಜನವರಿ ಮಾಹೆಯಿಂದ ಪೂರ್ಣಗೊಳ್ಳಲು ಪ್ರಾರಂಭವಾಗಿದ್ದು, ಸದರಿ ಅವಧಿಯು ಮುಕ್ತಾಯಗೊಳ್ಳುವ ಗ್ರಾಮ ಪಂಚಾಯಿತಿಗಳಿಗೆ 2025ರ ಡಿಸೆಂಬರ್ ಮಾಹೆಯಲ್ಲಿ ಸಾರ್ವತ್ರಿಕ ಚುನಾವಣೆಯನ್ನು ನಡೆಸಬೇಕಾಗಿದ್ದು, ಸಾರ್ವತ್ರಿಕ ಚುನಾವಣೆ ನಡೆಸುವ ಆರು ತಿಂಗಳು ಮುಂಚಿತವಾಗಿ ಮತದಾರರ ಪಟ್ಟಿ ಮುದ್ರಣ ಒಳಗೊಂಡಂತೆ, ಇತರ ಎಲ್ಲಾ ಪೂರ್ವಭಾವಿ ಸಿದ್ಧತೆಗಳನ್ನು ಆಯೋಗವು ಮಾಡಿಕೊಳ್ಳಬೇಕಾಗಿರುತ್ತದೆ. ಆದುದರಿಂದ ನಿಗಧಿತ ಕಾಲಮಿತಿಯಲ್ಲಿ ಮೀಸಲಾತಿಯ ಅಧಿಸೂಚನೆಯನ್ನು ಹೊರಡಿಸಿ, ಅದರ ಪ್ರತಿಗಳನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಒದಗಿಸುವಂತೆ ಆಯುಕ್ತರು, ರಾಜ್ಯ ಚುನಾವಣಾ ಆಯೋಗ, ಕರ್ನಾಟಕರವರು ಕೋರಿರುತ್ತಾರೆ ಎಂದಿದ್ದಾರೆ. ಪುಸ್ತುತ ಬಹುತೇಕ ಗ್ರಾಮ ಪಂಚಾಯಿತಿಗಳ ಅವಧಿಯು…

Read More

ನೀವು ಕೇಂದ್ರ ಸರ್ಕಾರದ ದೊಡ್ಡ ಮತ್ತು ವಿಶ್ವಾಸಾರ್ಹ ಇಲಾಖೆಯಲ್ಲಿ ಕೆಲಸ ಮಾಡುವ ಕನಸು ಕಾಣುತ್ತಿದ್ದರೆ, ಆದಾಯ ತೆರಿಗೆ ಇಲಾಖೆ ನಿಮಗೆ ಉತ್ತಮ ಅವಕಾಶವಾಗಬಹುದು. ಆದಾಯ ತೆರಿಗೆ ಇಲಾಖೆಯು ದೇಶದಲ್ಲಿ ಮಹತ್ವದ ಇಲಾಖೆಯಾಗಿದ್ದು, ಸ್ಥಿರ ಉದ್ಯೋಗ, ಉತ್ತಮ ಸಂಬಳ ಮತ್ತು ಪ್ರಯೋಜನಗಳನ್ನು ನೀಡುತ್ತದೆ. ಈ ನೇಮಕಾತಿ ಅಭಿಯಾನವು ತೆರಿಗೆ ಸಹಾಯಕ, ಸ್ಟೆನೋಗ್ರಾಫರ್ ಮತ್ತು ಮಲ್ಟಿ-ಟಾಸ್ಕಿಂಗ್ ಸ್ಟಾಫ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಗಮನಾರ್ಹವಾಗಿ, 10 ನೇ, 12 ನೇ ಮತ್ತು ಇತರ ವಿದ್ಯಾವಂತ ವ್ಯಕ್ತಿಗಳನ್ನು ಹೊಂದಿರುವ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ, ಇದು ಸರ್ಕಾರಿ ಉದ್ಯೋಗಕ್ಕೆ ಹೆಚ್ಚಿನ ಅವಕಾಶಗಳನ್ನು ಒದಗಿಸುತ್ತದೆ. ಅರ್ಜಿಗಳ ಅಂತಿಮ ದಿನಾಂಕ ಜನವರಿ 31, 2026, ಆದ್ದರಿಂದ ಆಸಕ್ತ ಅಭ್ಯರ್ಥಿಗಳು ಅಂತಿಮ ದಿನಾಂಕಕ್ಕಾಗಿ ಕಾಯದೆ ಮತ್ತು ತಮ್ಮ ಫಾರ್ಮ್‌ಗಳನ್ನು ಸಮಯಕ್ಕೆ ಸಲ್ಲಿಸುವಂತೆ ಸೂಚಿಸಲಾಗಿದೆ. ಈ ಆದಾಯ ತೆರಿಗೆ ಇಲಾಖೆಯ ನೇಮಕಾತಿ ಅಭಿಯಾನದಲ್ಲಿ ಒಟ್ಟು 97 ಹುದ್ದೆಗಳನ್ನು ಪ್ರಕಟಿಸಲಾಗಿದೆ. ಅತಿ ಹೆಚ್ಚು ಹುದ್ದೆಗಳು, 47, ತೆರಿಗೆ ಸಹಾಯಕರಿಗೆ, 38,…

Read More

ಬೆಂಗಳೂರು : ಭಾರತದಲ್ಲಿ UPI ಅತ್ಯಂತ ವೇಗವಾದ ಮತ್ತು ಸುಲಭವಾದ ಡಿಜಿಟಲ್ ಪಾವತಿ ವಿಧಾನವಾಗಿದೆ. ಜನರು ತಮ್ಮ ದೈನಂದಿನ ಜೀವನದಲ್ಲಿ ದಿನಸಿ, ಸಾರಿಗೆ, ಬಿಲ್‌ಗಳು ಮತ್ತು ಆನ್‌ಲೈನ್ ಶಾಪಿಂಗ್‌ಗಾಗಿ Google Pay, PhonePe, Paytm ನಂತಹ UPI ಅಪ್ಲಿಕೇಶನ್‌ಗಳನ್ನು ಬಳಸುತ್ತಾರೆ. ಈ ಅಪ್ಲಿಕೇಶನ್‌ಗಳೊಂದಿಗೆ ಪಾವತಿಗಳನ್ನು ಬಹಳ ಸುಲಭವಾಗಿ ಮಾಡಲಾಗುತ್ತದೆ. ಆದರೆ ಕೆಲವೊಮ್ಮೆ ಪಾವತಿ ವಿಫಲಗೊಳ್ಳುತ್ತದೆ. ಇದರಿಂದಾಗಿ, ಬಳಕೆದಾರರು ತುಂಬಾ ಚಿಂತಿತರಾಗುತ್ತಾರೆ. ವಿಶೇಷವಾಗಿ ಖಾತೆಯಿಂದ ಹಣವನ್ನು ಕಡಿತಗೊಳಿಸಿದರೆ ಮತ್ತು ಸ್ವೀಕರಿಸುವವರನ್ನು ತಲುಪದಿದ್ದರೆ. ಹಣ ಹೋಗಿದೆ ಎಂದು ಅವರು ಚಿಂತೆ ಮಾಡುತ್ತಾರೆ. ಆದರೆ ಈ ನಿಟ್ಟಿನಲ್ಲಿ, ಭಾರತೀಯ ರಿಸರ್ವ್ ಬ್ಯಾಂಕ್ (RBI) ಸ್ಪಷ್ಟ ನಿಯಮಗಳನ್ನು ಹೊರಡಿಸಿದೆ. ಈ ನಿಯಮಗಳು UPI ಬಳಕೆದಾರರನ್ನು ರಕ್ಷಿಸುತ್ತವೆ. ಮರುಪಾವತಿಗಳ ಜೊತೆಗೆ, ವಿಫಲ ಪಾವತಿಗಳಿಗೆ ಹೆಚ್ಚುವರಿ ಪರಿಹಾರವೂ ಲಭ್ಯವಿದೆ. ಪಾವತಿ ವಿಫಲವಾದಾಗ ಏನಾಗುತ್ತದೆ? UPI ವಹಿವಾಟು ವಿಫಲವಾದರೆ ನಿಮ್ಮ ಖಾತೆಯಿಂದ ಹಣವನ್ನು ಕಡಿತಗೊಳಿಸಲಾಗುತ್ತದೆ ಆದರೆ ವ್ಯಾಪಾರಿ (ಅಂಗಡಿ ಮಾಲೀಕರು) ಅಥವಾ ಸ್ವೀಕರಿಸುವವರನ್ನು ತಲುಪುವುದಿಲ್ಲ. ಅಂತಹ ಸಮಯದಲ್ಲಿ, ಬ್ಯಾಂಕುಗಳು ಅಥವಾ UPI…

Read More

ನವದೆಹಲಿ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1, 2026 ರಂದು (ಭಾನುವಾರ) ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಮಧ್ಯಮ ವರ್ಗ ಮತ್ತು ಆದಾಯ ತೆರಿಗೆದಾರರು ಬಜೆಟ್‌ನಿಂದ ಹೆಚ್ಚಿನ ನಿರೀಕ್ಷೆಗಳನ್ನು ಹೊಂದಿದ್ದಾರೆ. ಪ್ರತಿ ತಿಂಗಳ ಮೊದಲ ದಿನದಂದು, ಬ್ಯಾಂಕಿಂಗ್, ಕ್ರೆಡಿಟ್ ಕಾರ್ಡ್‌ಗಳು, ಉಳಿತಾಯ ಖಾತೆಗಳು, ರೈಲ್ವೆಗಳು ಮತ್ತು ಅನಿಲ ಮತ್ತು ಇಂಧನ ಬದಲಾವಣೆಗೆ ಸಂಬಂಧಿಸಿದ ಕೆಲವು ನಿಯಮಗಳು ಮತ್ತು ಕೆಲವು ಹೊಸ ನಿಯಮಗಳು ಜಾರಿಗೆ ಬರುತ್ತವೆ. ಈ ಬಾರಿ, ಫೆಬ್ರವರಿ 1 ರಂದು ಬಜೆಟ್ ಮಂಡಿಸುವುದರ ಜೊತೆಗೆ, ಐದು ಹಣಕಾಸು ನಿಯಮಗಳು ಜಾರಿಗೆ ಬರುತ್ತಿವೆ. 1. ನಿಷ್ಕ್ರಿಯ ಬ್ಯಾಂಕ್ ಖಾತೆಗಳು ಆರ್‌ಬಿಐ ಆದೇಶದ ಪ್ರಕಾರ, ಆರು ರಿಂದ ಒಂದು ವರ್ಷದಿಂದ ಯಾವುದೇ ವಹಿವಾಟುಗಳನ್ನು ನೋಡದ ಶೂನ್ಯ-ಸಮತೋಲನ ಖಾತೆಗಳನ್ನು ಫೆಬ್ರವರಿ 1 ರಿಂದ ನಿಷ್ಕ್ರಿಯಗೊಳಿಸಲಾಗುತ್ತದೆ. 2. ಫಾಸ್ಟ್‌ಟ್ಯಾಗ್ ನಿಯಮಗಳು ಭಾರತದಲ್ಲಿ ಟೋಲ್ ತೆರಿಗೆ ಸಂಗ್ರಹಕ್ಕಾಗಿ ಫಾಸ್ಟ್‌ಟ್ಯಾಗ್ ವ್ಯವಸ್ಥೆಯನ್ನು ಸರಳಗೊಳಿಸಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ.…

Read More

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಹಬ್ಬದ ಮುಂಗಡ ಪಡೆಯಲು ಅಧಿಸೂಚಿಸಿರುವ ಹಬ್ಬಗಳೊಂದಿಗೆ ಹೆಚ್ಚುವರಿಯಾಗಿ ಕೆಲವು ಹಬ್ಬಗಳನ್ನು ಸೇರ್ಪಡೆಗೊಳಿಸಿ ಸರ್ಕಾರ ಆದೇಶಿಸಿದೆ. ಆ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿಯನ್ನು ನೀಡಿದೆ. ಇಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಸರ್ಕಾರದ ಆದೇಶಗಳ ಅನುಸಾರ ಹಬ್ಬಗಳಿಗಾಗಿ ಮುಂಗಡ ಹಣವನ್ನು ರಾಜ್ಯ ಸರ್ಕಾರಿ ನೌಕರರಿಗೆ ಮಂಜೂರು ಮಾಡಲು ನಿಗದಿಪಡಿಸಿದ ಅರ್ಜಿಯಲ್ಲಿ ಈ ಕೆಳಕಂಡ ಹಬ್ಬಗಳಿಗೆ ಮಾತ್ರ ಹಬ್ಬದ ಮುಂಗಡ ಹಣವನ್ನು ಮಂಜೂರು ಮಾಡಲಾಗುತ್ತಿದೆ ಎಂದಿದ್ದಾರೆ. ಪಟ್ಟಿ-1 1. ಸೌರಮಾನ ಯುಗಾದಿ ಅಥವಾ ಚಾಂದ್ರಮಾನ ಯುಗಾದಿ 2. ಮಕರ ಸಂಕ್ರಾಂತಿ 3. ದೀಪಾವಳಿ 4. ಗಣೇಶ ಚತುರ್ಥಿ 5. ರಂಜಾನ್ 6. ಬಕ್ರೀದ್ 7. ಈದ್-ಎ-ಮಿಲಾದ್ 8. ಈಸ್ಟರ್ 9. ಗಣತಂತ್ರ ದಿನ 10. ಸ್ವಾತಂತ್ರ್ಯ ದಿನ 11. ದಸರಾ ಪ್ರಸ್ತುತ ರಾಜ್ಯ ಸರ್ಕಾರಿ ನೌಕರರು ಹಬ್ಬದ ಮುಂಗಡವನ್ನು ಪಡೆಯಲು ಅಧಿಸೂಚಿಸಿರುವ ಹಬ್ಬಗಳೊಂದಿಗೆ ಈ ಕೆಳಕಂಡ ಹಬ್ಬಗಳನ್ನು ಹೆಚ್ಚುವರಿಯಾಗಿ…

Read More

ನವದೆಹಲಿ :ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ (ಜನವರಿ 29, 2026) ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಲೋಕಸಭೆಯಲ್ಲಿ 2025-26 ರ ಆರ್ಥಿಕ ಸಮೀಕ್ಷೆಯನ್ನು ಮಂಡಿಸಿದರು. ಸಮೀಕ್ಷೆಯ ಮೊದಲ ಮುಂಗಡ ಅಂದಾಜುಗಳು FY26 ರ ನೈಜ GDP ಬೆಳವಣಿಗೆಯನ್ನು 7.4% ಮತ್ತು ಒಟ್ಟು ಮೌಲ್ಯವರ್ಧಿತ (GVA) ಬೆಳವಣಿಗೆಯನ್ನು 7.3% ಎಂದು ಹೇಳುತ್ತವೆ, ಇದು “ಸತತ ನಾಲ್ಕನೇ ವರ್ಷವೂ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ಭಾರತದ ಸ್ಥಾನಮಾನವನ್ನು ಪುನರುಚ್ಚರಿಸುತ್ತದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ 2025-26ರ ಆರ್ಥಿಕ ಸಮೀಕ್ಷೆಯನ್ನು ಮಂಡಿಸಿದರು. ಫೆಬ್ರವರಿ 1 ರ ಭಾನುವಾರದಂದು ಬಜೆಟ್ ಮಂಡಿಸುವ ಮೊದಲು, ದೇಶದ ಆರ್ಥಿಕತೆಯ ಸ್ಥಿತಿಯನ್ನು ವಿವರಿಸುವ ಪ್ರಮುಖ ದಾಖಲೆ ಇದಾಗಿದೆ. ಈ ಬಾರಿ, ನಿರ್ಮಲಾ ಸೀತಾರಾಮನ್ ಸತತ ಒಂಬತ್ತನೇ ಬಾರಿಗೆ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆಯನ್ನು ಸ್ಥಾಪಿಸಲಿದ್ದಾರೆ. ಆರ್ಥಿಕ ಸಮೀಕ್ಷೆ ಎಂದರೇನು? ನೀವು ಇದನ್ನು ದೇಶದ ಆರ್ಥಿಕತೆಯ “ವಾರ್ಷಿಕ ವರದಿ ಕಾರ್ಡ್” ಎಂದು ಪರಿಗಣಿಸಬಹುದು. ಶಾಲೆಯಲ್ಲಿ ನಮ್ಮ ಹಿಂದಿನ ವರ್ಷದ…

Read More