Author: kannadanewsnow57

ಬೆಂಗಳೂರು :  2025-26ನೇ ಆರ್ಥಿಕ ವರ್ಷದಲ್ಲಿ ಸರ್ಕಾರಿ ನೌಕರರು ವೇತನದ ಆದಾಯದ ಮೇಲೆ ಪಾವತಿಸಬೇಕಾಗುವ ತೆರಿಗೆಯನ್ನು ವೇತನ ಆದಾಯ ಮೂಲದಿಂದ ವಸೂಲು ಮಾಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ದಿನಾಂಕ: 01-04-2020ರಿಂದ ಅನ್ವಯವಾಗುವಂತೆ ವರಮಾನ ತೆರಿಗೆ ಕಾಯಿದೆ ಕಲಂ 115BAC ರಡಿ ಆದಾಯ ತೆರಿಗೆ ದರದಲ್ಲಿ ರಿಯಾಯತಿ ನೀಡಿ ಹೊಸ ತೆರಿಗೆ ವಿಧಾನವನ್ನು ಜಾರಿಗೆ ತರಲಾಗಿರುತ್ತದೆ. ಅದರಂತೆ 2020-21 ನೇ ಆರ್ಥಿಕ ವರ್ಷದಿಂದ ಎರಡು ತೆರಿಗೆ ವಿಧಾನಗಳು ಜಾರಿಯಲ್ಲಿರುತ್ತದೆ. ಒಂದು ನಿಯಮಾನುಸಾರ ಅನ್ವಯವಾಗುವ ಕಡಿತ ಮತ್ತು ವಿನಾಯಿತಿಗಳನ್ನು ಮತ್ತು Finance Act 2020 ರಲ್ಲಿ ವಿಧಿಸಲಾಗಿರುವ ತೆರಿಗೆ ದರಗಳನ್ನು ಒಳಗೊಂಡ ಹಳೆ ಆದಾಯ ತರಿಗೆ ವಿಧಾನ. ಎರಡನೆಯ ವಿಧಾನ ಕಾಯಿದೆ ಕಲಂ 1I5BAC ರಡಿ ನಿರ್ದಿಷ್ಟ ಕಡಿತ ಮತ್ತು ವಿನಾಯಿತಿಗಳನ್ನು ಕೈ ಬಿಟ್ಟು ವಿಧಿಸಲಗಿರುವ ಹೊಸ ತೆರಿಗೆ ದರ. 2023-24 ನೇ ಆರ್ಥಿಕ ವರ್ಷದಿಂದ ವರಮಾನ ತೆರಿಗೆ ಕಾಯಿದೆ ಕಲಂ 115BAC ರಡಿ ಉಪನಿಯಮ (IA) ಸೇರಿಸಲಾಗಿದ್ದು ಅದರನ್ವಯ…

Read More

ಇಂಡಿಯಾ ಪೋಸ್ಟ್ ಭಾರತದಲ್ಲಿ 23 ವೃತ್ತಗಳನ್ನು ಹೊಂದಿರುವ ಸರ್ಕಾರಿ-ಚಾಲಿತ ಅಂಚೆ ವ್ಯವಸ್ಥೆಯಾಗಿದ್ದು, 2026 ರ ವರ್ಷಕ್ಕೆ ಇಲಾಖೆಯು ವಿವಿಧ ಅಂಚೆ ವೃತ್ತಗಳಲ್ಲಿ ಗ್ರಾಮೀಣ ಡಾಕ್ ಸೇವಕ್‌ಗಳು (GDS), ಶಾಖೆ ಪೋಸ್ಟ್‌ಮಾಸ್ಟರ್ (BPM) ಮತ್ತು ಸಹಾಯಕ ಶಾಖೆ ಪೋಸ್ಟ್‌ಮಾಸ್ಟರ್ (ABPM) ಹುದ್ದೆಗಳಿಗೆ 30,000 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ನಡೆಸಲಿದೆ.  ಅಧಿಕೃತ ಇಂಡಿಯಾ ಪೋಸ್ಟ್ ಗ್ರಾಮೀಣ ಡಾಕ್ ಸೇವಕ್ (GDS) ಅಧಿಸೂಚನೆ 2026 PDF ಅನ್ನು ಅಧಿಕೃತ ವೆಬ್‌ಸೈಟ್ https://indiapostgdsonline.gov.in/ ನಲ್ಲಿ ಬಿಡುಗಡೆ ಮಾಡಲಾಗುತ್ತದೆ. ಭಾರತ ಅಂಚೆ ಜಿಡಿಎಸ್ ನೇಮಕಾತಿ 2026 ಅಧಿಸೂಚನೆ ಭಾರತ ಅಂಚೆ ಕಚೇರಿಯ ಅಧಿಕೃತ ವೆಬ್‌ಸೈಟ್ https://indiapostgdsonline.gov.in/ ನಲ್ಲಿ ಪೋಸ್ಟ್ ಆಫೀಸ್ ಜಿಡಿಎಸ್ ಅಧಿಸೂಚನೆ 2026 ಪಿಡಿಎಫ್ ಅನ್ನು ಬಿಡುಗಡೆ ಮಾಡುತ್ತದೆ. ಜಿಡಿಎಸ್ ಹುದ್ದೆ 2026 ರಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ವಿವರವಾದ ಹುದ್ದೆಯ ಬಿಡುಗಡೆಯ ಸೂಚನೆಯನ್ನು ಪಡೆಯಲು ಈ ಪುಟವನ್ನು ಬುಕ್‌ಮಾರ್ಕ್ ಮಾಡಬೇಕು. ಅಂಚೆ ಕಚೇರಿ ಜಿಡಿಎಸ್ ನೇಮಕಾತಿ 2026- ಮುಖ್ಯಾಂಶಗಳು ಭಾರತ ಅಂಚೆ ಭಾರತದಲ್ಲಿ 23 ವಲಯಗಳನ್ನು…

Read More

ಇಂಡೋನೇಷ್ಯಾದ ಉತ್ತರ ಸುಲವೇಸಿ ಪ್ರಾಂತ್ಯದ ರಾಜಧಾನಿ ಮನಾಡೋದ ನರ್ಸಿಂಗ್ ಹೋಂನಲ್ಲಿ ಭಾನುವಾರ ಸಂಭವಿಸಿದ ಬೆಂಕಿಯಲ್ಲಿ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ ಎಂದು ಇಂಡೋನೇಷ್ಯಾದ ಅಧಿಕಾರಿಗಳನ್ನು ಉಲ್ಲೇಖಿಸಿ ಕ್ಸಿನ್ಹುವಾ ವರದಿ ಮಾಡಿದೆ. ಕ್ಸಿನ್ಹುವಾ ಪ್ರಕಾರ, ಉತ್ತರ ಸುಲವೇಸಿ ಪ್ರಾದೇಶಿಕ ಪೊಲೀಸ್ (ಪೋಲ್ಡಾ ಸುಲುಟ್) ನ ಸಾರ್ವಜನಿಕ ಸಂಪರ್ಕ ಮುಖ್ಯಸ್ಥ ಅಲಮ್ಸಿಯಾ ಪಿ ಹಸಿಬುವಾನ್ ಅವರನ್ನು ಉಲ್ಲೇಖಿಸಿ, ಬಲಿಪಶುಗಳ ಗುರುತಿಸುವಿಕೆ ಪ್ರಕ್ರಿಯೆಯು ಪ್ರಸ್ತುತ ಭಯಂಗ್ಕಾರ ಆಸ್ಪತ್ರೆಯಲ್ಲಿ ನಡೆಯುತ್ತಿದೆ, ಅಲ್ಲಿ ಅಧಿಕಾರಿಗಳು ಸಂತ್ರಸ್ತರ ಕುಟುಂಬಗಳೊಂದಿಗೆ ಸಮನ್ವಯ ಸಾಧಿಸುವ ಮೊದಲು. ಸ್ಥಳೀಯ ಸಮಯ ಭಾನುವಾರ ರಾತ್ರಿ 8:36 ರ ಸುಮಾರಿಗೆ ಮನಾಡೋದ ಪಾಲ್ ದುವಾ ಜಿಲ್ಲೆಯ ರಾನೊಮುಟ್ ಉಪ ಜಿಲ್ಲೆಯಲ್ಲಿರುವ ಪಂಟಿ ವರ್ಧಾ ದಮೈ ನರ್ಸಿಂಗ್ ಹೋಂನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಕ್ಸಿನ್ಹುವಾ ವರದಿ ಮಾಡಿದೆ. ಮನಾಡೊ ನಗರ ಸರ್ಕಾರವು ಕಳುಹಿಸಿದ ಮೂರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಬಂದ ನಂತರ ರಾತ್ರಿ 9:30 ರ ವೇಳೆಗೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. ಪೊಲೀಸ್ ಅಧಿಕಾರಿಗಳು ಈ ಪ್ರದೇಶವನ್ನು ಭದ್ರಪಡಿಸಲು…

Read More

ವರ್ತಕರಿಗೆ ಹಾಗೂ ಬಳಕೆದಾರರು ಪ್ಲಾಸ್ಟಿಕ್ ತ್ಯಾಜ್ಯವಸ್ತುಗಳ (ವ್ಯವಸ್ಥಾಪನೆ ಮತ್ತು ನಿರ್ವಹಣೆ) ನಿಯಮ-2016ರನ್ವಯ ಘನತ್ಯಾಜ್ಯ ನಿರ್ವಹಣಾ ಉಪನಿಯಮಗಳು-2019ನ್ನು ಹಾಸನ ಮಹಾನಗರ ಪಾಲಿಕೆಯಲ್ಲಿ ಹಾಗೂ ಅಳವಡಿಸಿಕೊಳ್ಳಲಾಗಿದೆ. ಇದರ ಅನ್ವಯ ಹಾಸನ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಏಕಬಳಕೆಯ ಪ್ಲಾಸ್ಟಿಕ್ ಸಾಮಗ್ರಿಗಳನ್ನು ನಿಷೇಧಿಸಲಾಗಿದ್ದು ಸಾರ್ವಜನಿಕರು ಪ್ಲಾಸ್ಟಿಕ್ ವಸ್ತುಗಳ ಸಂಗ್ರಹಣೆ, ಬಳಕೆ ಸಾಗಾಣಿಕೆ ಮಾಡುವುದು ಕಂಡು ಬಂದಲ್ಲಿ ನಿಯಮಗಳ ಅನ್ವಯ ದಂಡ ವಿಧಿಸಲಾಗುವುದು. ಮಹಾನಗರ ಪಾಲಿಕೆಯಿಂದ ಪ್ಲಾಸ್ಟಿಕ್ ಬಳಕೆ, ಸಂಗ್ರಹಣೆ ಮತ್ತು ಸಾಗಾಣಿಕೆ ಕಂಡುಬಂದಲ್ಲಿ ರೂ. 1000 ದಿಂದ 10,000 ವರಗೂ ದಂಡ ವಿಧಿಸಲಾಗುವುದಲ್ಲದೇ ಕಾನೂನು ಕ್ರಮ ಜರುಗಿಸಲು ಅವಕಾಶವಿರುತ್ತದೆ. ಆದ್ದರಿಂದ ಸಾರ್ವಜನಿಕರು ಪ್ಲಾಸ್ಟಿಕ್ ಬಳಕೆ ತ್ಯಜಿಸಿ ನಗರವನ್ನು ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿಸಲು ಸಹಕರಿಸುವಂತೆ ಎಂದು ಮಹಾನಗರ ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.

Read More

ತುಮಕೂರು: ಅರ್ಹತೆ ಇದ್ದರೂ ಇದ್ದ ಜಾತಿ ಕಾರಣಕ್ಕೆ ಮುಖ್ಯಮಂತ್ರಿ ಹುದ್ದೆ ನೀಡದೇ ವಂಚಿಸಲಾಗುತ್ತಿದೆ, ಅರ್ಹತೆ ಇರುವ ಅದೆಷ್ಟು ಮಂದಿ ಉನ್ನತ ಹುದ್ದೆಗಳಿಂದ ವಂಚಿತರಾಗಿದ್ದಾರೆ ಎಂದು ಡಾ.ಜಿ.ಪರಮೇಶ್ವರ್ ಅಸ ಮಾಧಾನ ವ್ಯಕ್ತಪಡಿಸಿದರು. ನಗರದ ಶ್ರೀದೇವಿ ಶಿಕ್ಷಣ ಸಂಸ್ಥೆಯಲ್ಲಿ ನಡೆದ “ತಲ್ಲಣ ಸದಿರುವ ಮನವೇ” ಸಂಸ್ಕೃತಿ ಚಿಂತನ ಚಾರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಭಾರತೀಯ ಸಂಸ್ಕೃತಿ, ಪರಂಪರೆಯ ಹೆಸರಿನಲ್ಲಿ ಸಮಾಜದ ಕಟ್ಟಕಡೆಯ ವ್ಯಕ್ತಿಅನುಭವಿಸುವ ನೋವು, ಸಂಕಷ್ಟಗಳ ಬಗ್ಗೆ ಮಾತನಾಡದಿರುವುದು, ಯಾವ ಭಾ ರತೀಯತೆ ಎಂದು ಪ್ರಶ್ನಿಸಿದರು. ದೇಶದ ಸ್ವಾತಂತ್ರ, ಸಮಾನತೆಗಾಗಿ ಹೋರಾಟ ಮಾಡಿದ ಗಾಂಧೀಜಿಯ ಹೆಸರನ್ನು ಹೇಳಲು ಹಿಂಜರಿಯು ವಂ ತಹ ಮಟ್ಟಕ್ಕೆ ಇಳಿದಿದ್ದೇವೆ. ಇದು ಯಾವ ಭಾರತ ಬುದ್ದ, ಬಸವ, ಗಾಂಧಿ ಹೇಳಿದ ಸಮಾನತೆಯ ಬಗ್ಗೆ ಮಾತನಾಡುತಿದ್ದೇವೆಯೇ ಹೊರತು ಅದನ್ನು ಅನುಸ ರಿಸುತ್ತಿಲ್ಲ ವಿದ್ಯಾವಂತರು, ಪದವಿಧರರ ಸಂಖ್ಯೆ ಹೆಚ್ಚಾ ದಂತೆ ಅಸಮಾನತೆ ತೊಲಗಬೇಕಿತ್ತು ಆದರೆ ಮತ್ತೊಂದು ರೂಪದಲ್ಲಿ ನಮ್ಮೊಳಗೆ ಬೇರೂರುತ್ತಿದೆ ಎಂದರು. ಸಮಾಜದಲ್ಲಿ ಸಮಾನತೆತರಲು ಹಲವರು ನಿರಂತರ ವಾಗಿ ಶ್ರಮಿಸಿದ್ದಾರೆ. ಅವರ…

Read More

ಮೈಸೂರು : ಕೆಎಸ್ಆಕರ್ ಟಿಸಿ ಬಸ್ ನಲ್ಲಿ ಬೆಕ್ಕಿನ ಮರಿಗೂ ನಿರ್ವಾಹಕ ಟಿಕೆಟ್ ನೀಡಿರುವ ಘಟನೆ ನಡೆದಿದೆ. ಹೌದು, ಮೈಸೂರು – ಮಡಿಕೇರಿಗೆ ಹೋಗುವ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಪ್ರಯಾಣಿಕ ತನ್ನ ಜೊತೆ ಬೆಕ್ಕಿನ ಮರಿಯನ್ನು ತೆಗೆದುಕೊಂಡು ಹೋಗುತ್ತಿದ್ದರು. ಈ ವೇಳೆ ನಿರ್ವಾಹಕ ಬೆಕ್ಕಿನ ಮರಿಗೂ ಆಫ್ ಟಿಕೆಟ್ ನೀಡಿದ್ದಾರೆ. ಮೈಸೂರು – ಮಡಿಕೇರಿ KSRTC ಬಸ್ಸಿನಲ್ಲಿ ಬರುವಾಗ ಬೆಕ್ಕಿನ ಮರಿಗೆ ಟಿಕೇಟ್ ಕೇಳಿ, ಕಂಡೆಕ್ಟರ್ “ಅದು ಬೆಕ್ಕಿನ ಮರಿನೆ ಆಗಲಿ ಮಕ್ಕಳೆ ಆಗಲಿ ಆಫ್ ಟಿಕೆಟ್ ತೆಗೆದುಕೊಳ್ಳುವಂತೆ ಹೇಳಿದ್ದಾರೆ. ಈಗ ಬೆಕ್ಕಿಗೆ ಕ್ಯಾಟ್ ಪಾಸ್ ಮಾಡಬೇಕಾ. ಅದು ಅಲ್ಲದೆ ದುಡ್ಡು ತೆಗೆದು ಸೀಟು ಕೂಡಾ ಕೊಟ್ಟಿಲ್ಲ. ಇದು ನ್ಯಾಯನಾ ಎಂದು ಸೋಶಿಯಲ್ ಮೀಡಿಯಾದಲ್ಲಿ ಬಳಕೆದಾರರೊಬ್ಬರು ಬರೆದುಕೊಂಡಿದ್ದಾರೆ. ಈ ಪೋಸ್ಟ್ ಅನ್ನು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರಿಗೂ ಟ್ಯಾಗ್ ಮಾಡಿದ್ದಾರೆ.

Read More

ಬೆಂಗಳೂರು : ರಾಜ್ಯದ  ಪೊಲೀಸ್ ಇಲಾಖೆಯು ಹೊಸ ವರ್ಷದ ಸಂಭ್ರಮಾಚರಣೆ ಸಂದರ್ಭದಲ್ಲಿ ಸುರಕ್ಷತೆಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಹೊಸ ವರ್ಷದ ಸಂಭ್ರಮಾಚರಣೆಯು ಮದ್ಯಪಾನದ ಪರಿಣಾಮವಾಗಿ ಜನಸಮೂಹದ ಮನಸ್ಥಿತಿಯು ತೀವ್ರಗೊಳ್ಳುವ ಸಾಧ್ಯತೆ ಇರುತ್ತದೆ. ಮದ್ಯಪಾನವು ಜನರ ವಿವೇಕಶಕ್ತಿಯನ್ನು ದುರ್ಬಲಗೊಳಿಸುತ್ತದೆ ಹಾಗೂ ಸಂಕೋಚತಾ/ಹಿಂಜರಿಕಾ ಮನೋಭಾವವನ್ನು ಮೀರುವಂತೆ ಮಾಡುತ್ತದೆ. ಕೌಂಟ್‌ಡೌನ್‌ಗಳು ಮತ್ತು ಸಂಭ್ರಮದ ಕ್ಷಣಗಳಿಂದ ಉಂಟಾಗುವ ಉಲ್ಲಾಸವು ಜನಸಮೂಹದಲ್ಲಿ ಸಾಮೂಹಿಕ ಪ್ರೇರೇಪಣೆಯನ್ನು ಸೃಷ್ಟಿಸಿ, ದಟ್ಟ ಗುಂಪಿನೊಳಗಿರುವ ಕಾರಣ ಯಾವ ನಡೆಗೂ ಅಪಾಯವಿಲ್ಲವೆಂಬ ತಪ್ಪು ಕಲ್ಪನೆಯನ್ನು ಉಂಟುಮಾಡುತ್ತದೆ. ವೇದಿಕೆಗಳಲ್ಲಿ ಜನಸ್ತೋಮದ ಹರಿವು ಅಥವಾ ಪಟಾಕಿ ಸಿಡಿಸುವಂತಹ ಪ್ರದರ್ಶನಗಳು ಮುಂತಾದ ಹಲವು ಕಾರಣಗಳಿಂದಾಗಿ ಅಪ್ರಜ್ಞಾತ್ಮಕ ವರ್ತನೆಗಳು ಕಂಡುಬರುತ್ತವೆ. ಜನಸಮೂಹದ ಹರಿವನ್ನು ಒಮ್ಮೆಲೇ ಪ್ರೇರೇಪಿಸಿ ಅಪಾಯಕರ ಅಲೆಗಳಂತೆ ರೂಪುಗೊಳ್ಳಬಹುದಾದಂತಹ ಸಂಗೀತದ ತೀವ್ರತೆಯ ಘಟನಾವಳಿಗಳನ್ನು ಪೊಲೀಸ್ ಅಧಿಕಾರಿಗಳು ಗಮನಿಸಬೇಕಿದೆ. ಪಟಾಕಿ ಸಿಡಿಯುವಲ್ಲಿ ವಿಳಂಬವಾದರೆ ನಿರಾಶೆ ಉಂಟಾಗಿ, ಜನಸಮೂಹದ ಸಂಭ್ರಮವು ತಕ್ಷಣವೇ ಅಸಹನೆ ಮತ್ತು ಕೋಪಕ್ಕೆ ತಿರುಗುವ ಸಾಧ್ಯತೆ ಇರುತ್ತದೆ. ಗುಂಪಿನಲ್ಲಿ ವದಂತಿಗಳು ವೇಗವಾಗಿ ಹರಡಿ, ಅಪಾಯದ ಭ್ರಮೆಯು…

Read More

ಬೆಂಗಳೂರು: ನಟ, ನಿರ್ದೇಶಕ ಪ್ರೇಮ್ ಗೂ ವಿವಾದಗಳಿಗೂ ಗಳಸ್ಯ ಕಂಠಸ್ಯ ಸಂಬಂಧ ಎನ್ನುವುದು ಹಲವು ಬಾರಿ ಕಂಡು ಬರುತ್ತಿದೆ. ತಮ್ಮ ಹೊಸ ಸಿನಿಮಾ ಕೆಡಿಯ ಜೋಡೆತ್ತು ಸಾಂಗ್ ರಿಲೀಸ್ ಆಗಿದ್ದು, ಹಾಡಿನಲ್ಲಿ ಬಳಕೆ ಮಾಡಿರುವ ಕೆಲವು ಪದಗಳಿಗೆ ಸಾಮಾಜಿಕ ಜಾಲತಾಣದಲ್ಲಿ ಕೆಲವು ಮಂದಿ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಹಾಡಿನಲ್ಲಿ ಬರುವ ರಂಡೆ-ಮುಂಡೆಯರು ಪದದ ಬಗ್ಗೆ ಹಲವು ಮಂದಿ ವಿರೋಧ ವ್ಯಕ್ತಪಡಿಸಿದ್ದಾರೆ. ಈ ನಡುವೆ ಕಂಟ್ರೋಲ್ ಆಲ್ಟ್ ಡಿಲಿಟ್ ಎನ್ನುವ ಪೇಸ್‌ಬುಕ್‌ ಪೇಜಿನಲ್ಲಿ ತಗಡ್ ನನ್ಮಕ್ಕಳಿಗೆ ಅರ್ಥವೇ ಆಗಲ್ಲ ಅದ್ರಲ್ಲೇನ್ ತಪ್ಪದೆ ಅಂತ. ಮುಂಡೆ ಅನ್ನೋದು ತಪ್ಪಾಗಲ್ಲ. ವಿದವೆ ಅನ್ನೋದು ಅಲಂಕಾರಿಕ ಪದ, ಮುಂಡೆ ಅನ್ನೋದು ಆಡುಸೊಗಡು ಅಂತ ಒಪ್ಕೊಳೋಣ‌. ಅವಳು ಮುಂಡೆ ಎಂಬುದಕ್ಕೂ, ಆ ಮುಂಡೆ ಕಣ್ಣು ಬೀಳಬಾರದು ಎಂಬುದಕ್ಕೂ ವ್ಯತ್ಯಾಸವಿದೆ ಅನ್ನೋದು ಅನೇಕರಿಗೆ ಗೊತ್ತಿಲ್ಲ. ರಂಡೆ-ಮುಂಡೆಯರು ಸಮಾಜದಲ್ಲಿ ಜನರ ನಡುವೆ ಬೆರೆಯಬಾರದು, ಅವರ ಕಣ್ಣು ಯಾರ ಮೇಲೂ ಬೀಳಬಾರದು ಎಂದು ಅವರನ್ನು ದೂರವಿಡುತ್ತಿದ್ದ ಕಾಲದ ಕಿಡಿನುಡಿಗಳನ್ನು ಈ ಕಾಲಕ್ಕೆ ತರಬಾರದು. ‘ಊರು…

Read More

ಬೆಂಗಳೂರು : ದೃಷ್ಟಿದೋಷವುಳ್ಳ/ದೃಷ್ಟಿಮಾಂದ್ಯ (Visually Impaired) ವಿದ್ಯಾರ್ಥಿಗಳಿಗೆ 2025-26 ನೇ ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಡಿಜಿಟಲ್ ರೂಪದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ದೃಷ್ಟಿದೋಷವುಳ್ಳ/ದೃಷ್ಟಿಮಾಂದ್ಯ (Visually Impaired) ವಿದ್ಯಾರ್ಥಿಗಳಿಗೆ ಸಿ.ಬಿ.ಎಸ್.ಇ ಮಂಡಳಿಯಲ್ಲಿ ಕಂಪ್ಯೂಟರ್ಗಳನ್ನು ಬಳಸಿ 12ನೇ ತರಗತಿಯ ಬೋರ್ಡ್ ಪರೀಕ್ಷೆ ಬರೆಯಲು ಅವಕಾಶವಿದ್ದು, ಅದೇ ರೀತಿ ರಾಜ್ಯ ಪಠ್ಯಕ್ರಮದ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ದೃಷ್ಟಿದೋಷವುಳ್ಳ/ದೃಷ್ಟಿಮಾಂದ್ಯ (Visually Impaired) ವಿದ್ಯಾರ್ಥಿಗಳಿಗೆ 2025-26ನೇ ಸಾಲಿನಿಂದ ಅವಕಾಶ ಕಲ್ಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸದರಿ ವಿದ್ಯಾರ್ಥಿಗಳಿರುವ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಪರೀಕ್ಷಾ ಕೇಂದ್ರದ ಮುಖ್ಯ ಅಧಿಕ್ಷಕರು ಪರೀಕ್ಷಾ ಪೂರ್ವ ಹಾಗೂ ಪರೀಕ್ಷಾ ದಿನಗಳಂದು ಕೆಳಕಂಡಂತೆ ಕ್ರಮವಹಿಸಲು ತಿಳಿಸಿದೆ. 1. ಪರೀಕ್ಷಾ ಕೇಂದ್ರದಲ್ಲಿ ದೃಷ್ಟಿದೋಷವುಳ್ಳ/ದೃಷ್ಟಿಮಾಂದ್ಯ (Visually Impaired) ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಪ್ರತ್ಯೇಕ ಕೊಠಡಿಯ ವ್ಯವಸ್ಥೆಯನ್ನು ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಮಾಡುವುದು. 2. ದೃಷ್ಟಿದೋಷವುಳ್ಳ/ದೃಷ್ಟಿಮಾಂದ್ಯ ಕಾಲೇಜುಗಳಲ್ಲಿ (Visually Impaired) ವಿದ್ಯಾರ್ಥಿಗಳಿರುವ ಕಾರ್ಯನಿರ್ವಹಿಸುವ ಮೇಲ್ವಿಚಾರಕರಾಗಿ ನೇಮಿಸಿಕೊಳ್ಳುವುದು. ವಿಶೇಷ ಉಪನ್ಯಾಸಕರನ್ನು…

Read More

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ವಿವರಗಳನ್ನು ಪ್ರಕಟಿಸಿದೆ. ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ 14677 ಹುದ್ದೆಗಳು ಖಾಲಿ ಇವೆ. ಕರ್ನಾಟಕದ ಮೈಸೂರು ವಿಶ್ವವಿದ್ಯಾಲಯದಲ್ಲಿ 747 ಹುದ್ದೆಗಳು ಖಾಲಿ ಇವೆ, ಹಾಸನ ವಿಶ್ವವಿದ್ಯಾಲಯದಲ್ಲಿ 272, ಮಂಡ್ಯ ವಿಶ್ವವಿದ್ಯಾಲಯದಲ್ಲಿ 245 ಹುದ್ದೆಗಳು, ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿ 598 ಹುದ್ದೆಗಳು ಸೇರಿದಂತೆ ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 14,677 ಹುದ್ದೆಗಳು ಖಾಲಿ ಇವೆ. ಇಲ್ಲಿದೆ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ವಿವರ

Read More