Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ಪ್ರಾಥಮಿಕ ಮಹಿಳಾ ಶಿಕ್ಷಕರಿಗೆ ಶಿಶುಪಾಲನಾ ರಜೆಗೆ ಚೆಕ್ ಲಿಸ್ಟ್ ಬಗ್ಗೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲೆ ಓದಲಾದ ನಿರ್ದೇಶಕರು (ಪ್ರಾಥಮಿಕ ಶಿಕ್ಷಣ), ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರು ಇವರ ಪ್ರಸ್ತಾವನೆಯಲ್ಲಿ, ಬುದ್ದಿ ಮಾಂದ್ಯ/ಅಂಗವಿಕಲ ಮಕ್ಕಳನ್ನು ನೋಡಿಕೊಳ್ಳಲು ರಾಜ್ಯ ಸರ್ಕಾರಿ ಮತ್ತು ನೌಕರರಿಗೆ ಶಿಶುಪಾಲನ ರಜೆಯನ್ನು ಈಗಾಗಲೇ ಸರ್ಕಾರವು ಮಂಜೂರು ಮಾಡಿದೆ. ಹಾಗೆಯೇ 2020-21ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-37 ರಲ್ಲಿ ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ಚಾಲ್ತಿಯಲ್ಲಿರುವ ಪ್ರಸೂತಿ ರಜೆಯೊಂದಿಗೆ ಒಟ್ಟು ಸೇವಾವಧಿಯಲ್ಲಿ ಆರು ತಿಂಗಳವರೆಗೆ ಅಂದರೆ 180 ದಿನಗಳ ಶಿಶುಪಾಲನ ರಜೆಯನ್ನು ಸರ್ಕಾರಿ ಆದೇಶ ಸಂಖ್ಯೆ:ಆಇ 4(ಇ)ಸೇನಿಸೇ 2021 ಬೆಂಗಳೂರು, ದಿನಾಂಕ:21-06-2021 ಶಿಶುಪಾಲನ ರಜೆಯ ಮಂಜೂರು ಮಾಡಲಾಗಿರುತ್ತದೆ. ರಾಜ್ಯದ ಎಲ್ಲಾ ಮಹಿಳಾ ನೌಕರರಿಗೆ ಸರ್ಕಾರದ ಆದೇಶ ಸಂಖ್ಯೆ:ಆಇ 4(ಇ) ಸೇನಿಸೇ 2021 ಬೆಂಗಳೂರು, ದಿನಾಂಕ:21-06-2021 ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ಕೆಲವೊಂದು ಷರತ್ತಿಗೊಳಪಟ್ಟು ಇಡೀ ಸೇವಾವಧಿಯಲ್ಲಿ ಗರಿಷ್ಟ…
ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಪಂಗಡದ ಯುವಕ / ಯುವತಿಯರಲ್ಲಿ ಸ್ವ-ಉದ್ಯೋಗವನ್ನು ಉತ್ತೇಜಿಸಲು ಸ್ವಾವಲಂಬಿ ಸಾರಥಿ ಯೋಜನೆ ಆರಂಭಿಸಿದ್ದು, ಈ ಯೋಜನೆ ಮೂಲಕ ಟ್ರ್ಯಾಕ್ಟರ್, ಸರಕು, ಸಾರಿಗೆ ವಾಹನ ಖರೀದಿಗೆ 4 ಲಕ್ಷ ರೂ.ಗಳ ಸಹಾಯಧನ ಸಿಗಲಿದೆ. ಸರಕು ಸಾಗಾಣಿಕೆ ವಾಹನ, ಸಾರಿಗೆ ವಾಹನ, ಟ್ರಾಕ್ಟರ್ ಹಾಗೂ ಇತರೆ ವ್ಯಾಪಾರ ಉದ್ದೇಶಗಳಿಗೆ ನೆರವು ಸಿಗಲಿದ್ದು, ಘಟಕ ವೆಚ್ಚದ 70% ರಷ್ಟು ಅಥವಾ ಗರಿಷ್ಠ ರೂ. 4.00 ಲಕ್ಷ ಸಹಾಯಧನ ನೀಡಲಿದೆ. ಉಳಿದ ಮೊತ್ತವನ್ನು ಬ್ಯಾಂಕ್ ಸಾಲದ ಮೂಲಕ ಭರಿಸಲಾಗುತ್ತದೆ ಸ್ವಂತ ವಾಹನ ಖರೀದಿ ಮೂಲಕ ಸ್ವಂತ ಉದ್ಯಮ ಆರಂಭಿಸುವ ಅವಕಾಶ. ಯುವಕರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ನೆರವಾಗುವ ಯೋಜನೆ ಇದಾಗಿದೆ. ಸ್ವಾವಲಂಬಿ ಸಾರಥಿ ಯೋಜನೆ ಈ ಯೋಜನೆ ಅಡಿಯಲ್ಲಿ ಒಬ್ಬ ವ್ಯಕ್ತಿಯು ಕಾರು ಅಥವಾ ಗೂಡ್ ವಾಹನಗಳಂತಹ ನಾಲ್ಕು ಚಕ್ರದ ವಾಹನಗಳನ್ನು ಖರೀದಿಸುವ ಮೂಲಕಸ್ವಂತ ಉದ್ಯೋಗವನ್ನು ಪ್ರಾರಂಭಿಸಬಹುದು. ಯೋಜನೆಗೆ ಸಬ್ಸಿಡಿ ಪಡೆಯಲು ಅರ್ಹತೆಗಳು ಈ ಯೋಜನೆಗೆ ಅರ್ಜಿ ಸಲ್ಲಿಸುವ ಅರ್ಜಿದಾರನು ಕನಿಷ್ಠ…
ಬೆಂಗಳೂರು : ರಾಜ್ಯದ ಸಾರಿಗೆ ಸಂಸ್ಥೆಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರು, ಅಂಗವಿಕಲರು, ಅಂಧರು, ಪತ್ರಕರ್ತರು, ಅಂಗವಿಕಲರು ಸೇರಿದಂತೆ ಹಲವರಿಗೆ ಉಚಿತ ಬಸ್ ಪಾಸ್ ಸೌಲಭ್ಯಗಳನ್ನು ನೀಡಲಾಗಿದೆ. ರಾಜ್ಯದಲ್ಲಿ ಯಾರಿಗೆಲ್ಲಾ ಉಚಿತ ಬಸ್ ಪಾಸ್ ಇದೆ ಎಂಬ ಮಾಹಿತಿ ಇಲ್ಲಿದೆ ಎಂಡೋಸಲ್ಫಾನ್ ಪೀಡಿತ ಸಂತ್ರಸ್ತರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಈ ಯೋಜನೆಗೆ ರೂ.8.04 ಕೋಟಿಗಳನ್ನು ಒದಗಿಸಲಾಗಿದ್ದು. ಈ ಯೋಜನೆಯನ್ನು 2013ರಲ್ಲಿ ಪ್ರಾರಂಭಿಸಲಾಯಿತು. ರಾಜ್ಯದ ಕರಾವಳಿ ಪ್ರದೇಶದಲ್ಲಿ ಸಾಮಾನ್ಯವಾಗಿ ಕಂಡುಬರುವ ಎಂಡೋಸಲ್ಫಾನ್ ಕಾಯಿಲೆಯಿಂದ ಬಳಲುತ್ತಿರುವ ಜನರ ಯೋಗಕ್ಷೇಮದ ದೃಷ್ಟಿಯಿಂದ ಎಂಡೋಸಲ್ಫಾನ್ ಪೀಡಿತರಿಗೆ ಅವರ ಸಹಾಯಕರೊಂದಿಗೆ ಪ್ರಯಾಣಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ 4300 ಫಲಾನಿಭವಿಗಳಿಗೆ ಉಚಿತ ಬಸ್ ಪಾಸ್ಗಳನ್ನು ವಿತರಿಸಿದೆ. ನಾಲ್ಕು ರಸ್ತೆ ಸಾರಿಗೆ ನಿಗಮಗಳು ನಗರ, ಉಪನಗರ, ಸಾಮಾನ್ಯ ಮತ್ತು ವೇಗದೂತ ಬಸ್ಗಳಲ್ಲಿ ರಾಜ್ಯದೊಳಗೆ ಎಲ್ಲಿ ಬೇಕಾದರೂ ಪ್ರಯಾಣಿಸಲು ಅನುಮತಿಸಲಾಗಿದೆ. ಪತ್ರಕರ್ತರಿಗೆ ಉಚಿತ ಬಸ್ ಈ ಯೋಜನೆಗೆ ರೂ.0.50 ಕೋಟಿಯನ್ನು ಒದಗಿಸಲಾಗಿದ್ದು. ದಿನಾಂಕ:19.10.2010 ರಿಂದ (2010-11ನೇ ಸಾಲಿನಿಂದ) ವಾರ್ತಾ ಇಲಾಖೆಯಿಂದ ಗುರುತಿಸಲ್ಪಟ್ಟ…
ಬೆಂಗಳೂರು : ‘ಶುಚಿತ್ವದ ನಡಿಗೆ – ಹೆಣ್ಣುಮಕ್ಕಳ ಆತ್ಮವಿಶ್ವಾಸದ ಕಡೆಗೆ’ ಎಂಬ ಘೋಷವಾಕ್ಯದೊಂದಿಗೆ ರಾಜ್ಯ ಸರ್ಕಾರವು ಹೆಣ್ಣುಮಕ್ಕಳ ಸಬಲೀಕರಣಕ್ಕೆ ಬದ್ಧವಾಗಿದ್ದು, ರಾಜ್ಯದ ಹದಿಹರೆಯದ ಹೆಣ್ಣುಮಕ್ಕಳ ಋತುಚಕ್ರದ ನೈರ್ಮಲ್ಯವನ್ನು ಕಾಪಾಡುವ ನಿಟ್ಟಿನಲ್ಲಿ 71.83 ಕೋಟಿ ರೂ ಅನುದಾನ ಬಿಡುಗಡೆ ಮಾಡುವ ಮೂಲಕ ‘ಶುಚಿ’ ಯೋಜನೆಗೆ ಮರುಚಾಲನೆ ನೀಡಿದೆ. ನಾಡಿನ ಸುಮಾರು 19 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಈ ಯೋಜನೆಯ ಫಲಾನುಭವಿಗಳು. ‘ಶುಚಿ’ ಯೋಜನೆಯ ಪರಿಣಾಮಕಾರಿ ಅನುಷ್ಠಾನದಿಂದ 2,35,74,084 ಸ್ಯಾನಿಟರಿ ಪ್ಯಾಡ್ ಯುನಿಟ್ಗಳ ವಿತರಣೆ ಮಾಡಲಾಗುತ್ತಿದೆ. 10,38,912 ಸುಸ್ಥಿರ ‘ಮುಟ್ಟಿನ ಕಪ್’ (Menstrual Cups) ವಿತರಿಸಲಾಗುತ್ತಿದೆ. ಸರ್ಕಾರಿ ಹಾಗೂ ಅನುದಾನಿತ ಶಾಲೆ, ಕಾಲೇಜು ಮತ್ತು ಹಾಸ್ಟೆಲ್ಗಳ ಎಲ್ಲಾ ನೋಂದಾಯಿತ ವಿದ್ಯಾರ್ಥಿನಿಯರಿಗೆ ಇದರ ಸೌಲಭ್ಯ ತಲುಪುತ್ತದೆ. 6 ರಿಂದ 8ನೇ ತರಗತಿ ಮಕ್ಕಳಿಗೆ ಸ್ಯಾನಿಟರಿ ಪ್ಯಾಡ್ ಹಾಗೂ 9ನೇ ತರಗತಿಯಿಂದ ಪಿಯುಸಿ ವಿದ್ಯಾರ್ಥಿನಿಯರಿಗೆ ಪ್ಯಾಡ್ಗಳ ಜೊತೆಗೆ ಪರಿಸರ ಸ್ನೇಹಿ ಮುಟ್ಟಿನ ಕಪ್ ನೀಡಲಾಗುತ್ತಿದೆ. ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ…
ಬೆಂಗಳೂರು : ವರದಕ್ಷಿಣೆ ಕಿರುಕುಳದಿಂದ ಅದೆಷ್ಟೋ ಹೆಣ್ಣುಮಕ್ಕಳು ಬಲಿಯಾಗಿದ್ದಾರೆ ಬಲಿಯಾಗುತ್ತಿದ್ದಾರೆ. ಇದೀಗ ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಪಟ್ಟಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪನ್ನು ನೀಡಿದೆ. ಕರ್ನಾಟಕ ಹೈಕೋರ್ಟ್ ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಮಹತ್ವದ ತೀರ್ಪು ನೀಡಿದೆ. ಐಪಿಸಿ ಸೆಕ್ಷನ್ 498ಎ ಅಡಿಯಲ್ಲಿ ನೆರೆಹೊರೆಯವರ ಮೇಲೆ ದೂರು ದಾಖಲಿಸುವಂತಿಲ್ಲ ಎಂದು ಸ್ಪಷ್ಟಪಡಿಸಿದೆ. ಕುಟುಂಬ ಸದಸ್ಯರಲ್ಲದವರನ್ನು ಈ ಕಾಯ್ದೆಯಡಿ ಸೇರಿಸಲು ಸಾಧ್ಯವಿಲ್ಲ ಎಂದಿದೆ. ಪಕ್ಕದ ಮನೆಯವರ ಮೇಲೆ 498ಎ ಅಡಿ ಕೇಸ್ ದಾಖಲಿಸುವಂತಿಲ್ಲ ಎಂದಿರುವ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಪೀಠ, ತಮ್ಮ ಮೇಲೆ ದಾಖಲಾಗಿರುವ ಕೇಸ್ ರದ್ದುಪಡಿಸುವಂತೆ ಮಹಿಳೆ ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯಮಾಡಿ ದೂರು ರದ್ದುಗೊಳಿಸಿದೆ. ಮುನಿರತ್ನಮ್ಮ ಎಂಬಾಕೆ ಪತಿ, ಅತ್ತೆ, ಮಾವ, ನಾದಿನಿ ಹಾಗೂ ಪಕ್ಕದ ಮನೆ ಮಹಿಳೆ ಮೇಲೆಯೂ ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾರೆಂದು ದೂರು ದಾಖಲಿಸಿದ್ದರು. ವೈವಾಹಿಕ ವಿವಾದದಲ್ಲಿ ಪತಿ, ಪತ್ನಿ ಅಥವಾ ಇತರ ಕುಟುಂಬ ಸದಸ್ಯರ ನಡುವಿನ ವಿಷಯದಲ್ಲಿ ಪರಿಚಿತವಲ್ಲದ ವ್ಯಕ್ತಿ ಅಥವಾ ನೆರೆಹೊರೆಯವರನ್ನು IPC ಸೆಕ್ಷನ್ 498A ಅಡಿಯಲ್ಲಿ ಪ್ರಕರಣಕ್ಕೆ…
ನವದೆಹಲಿ : ದೇಶದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ ನಡೆದಿದ್ದು, ಸ್ನೇಹಿತನನ್ನೇ ಕೊಂದು ಬಳಿಕ ಶವವನ್ನು ಮೂರು ತುಂಡುಗಳಾಗಿ ಕತ್ತರಿಸಿ ಡ್ರಮ್ ನಲ್ಲಿ ತುಂಬಿರುವ ಘಟನೆ ಪಂಜಾಬ್ ನ ಲುಧಿಯಾನದಲ್ಲಿ ನಡೆದಿದೆ. ಲುಧಿಯಾನದ ಖಾಸಗಿ ಶಾಲೆಯ ಸಮೀಪವಿರುವ ಖಾಲಿ ಜಾಗದಲ್ಲಿ 30 ವರ್ಷದ ವ್ಯಕ್ತಿಯ ವಿರೂಪಗೊಂಡ ಅವಶೇಷಗಳು ಗುರುವಾರ ಪತ್ತೆಯಾಗಿವೆ. ನಂತರ ಅಧಿಕಾರಿಗಳು ಮೃತಪಟ್ಟ ವ್ಯಕ್ತಿಯನ್ನು ದವೀಂದರ್ ಎಂದು ಗುರುತಿಸಿದ್ದಾರೆ. ಶವವನ್ನು ಮೂರು ಭಾಗಗಳಾಗಿ ಕತ್ತರಿಸಲಾಗಿದೆ. ಒಂದು ಭಾಗವು ಭಾಗಶಃ ಸುಟ್ಟುಹೋಗುವ ಚಿಹ್ನೆಗಳನ್ನು ತೋರಿಸಿದರೆ, ಇತರ ಭಾಗಗಳನ್ನು ಸ್ಥಳದಲ್ಲಿ ಎಸೆಯಲಾದ ಬಿಳಿ ಪ್ಲಾಸ್ಟಿಕ್ ಬ್ಯಾರೆಲ್ ಒಳಗೆ ಮರೆಮಾಡಲಾಗಿದೆ. ತನಿಖಾಧಿಕಾರಿಗಳ ಪ್ರಕಾರ, ಮೃತನನ್ನು ದೇವಿಂದರ್ ಎಂದು ಗುರುತಿಸಲಾಗಿದ್ದು, ಎರಡು ದಿನಗಳ ಹಿಂದೆ ಮುಂಬೈನಿಂದ ಲುಧಿಯಾನಕ್ಕೆ ಆಗಮಿಸಿದ್ದರು. ಆರಂಭಿಕ ತನಿಖೆಯಲ್ಲಿ ಹತ್ತಿರದ ಬೀದಿಯಲ್ಲಿ ವಾಸಿಸುವ ನಿಕಟ ಪರಿಚಯಸ್ಥ ಶೆರಾ ನನ್ನು ಮುಖ್ಯ ಶಂಕಿತನೆಂದು ಸೂಚಿಸುತ್ತವೆ. ಸಿಸಿಟಿವಿ ರೆಕಾರ್ಡಿಂಗ್ ಗಳಲ್ಲಿ ಶೇರಾ ಮತ್ತು ಇನ್ನೊಬ್ಬ ವ್ಯಕ್ತಿ ದವೀಂದರ್ ಶವವನ್ನು ಹೊಂದಿರುವ ಡ್ರಮ್ ಅನ್ನು ಖಾಲಿ ನಿವೇಶನದತ್ತ…
ಬೆಂಗಳೂರು : ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವ ಕೇರಳ ಸರ್ಕಾರದ ನಡೆಗೆ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಪ್ರಸ್ತಾಪಿತ ಮಲೆಯಾಳಿ ಭಾಷಾ ಮಸೂದೆ-2025 ಸಂವಿಧಾನ ಖಾತರಿ ಮಾಡಿರುವ ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರವಾಗಿದೆ ಎಂದು ಹೇಳಲು ವಿಷಾಧಿಸುತ್ತೇನೆ. ಇಂತಹದ್ದೊಂದು ಕಾನೂನು ಜಾರಿಗೆ ಬಂದರೆ ಕೇರಳದ ಗಡಿಜಿಲ್ಲೆಗಳಲ್ಲಿ ಮುಖ್ಯವಾಗಿ ಕಾಸರಗೋಡಿನಲ್ಲಿ ವಾಸಿಸುತ್ತಿರುವ ಕನ್ನಡಿಗರು ಮಾತೃಭಾಷೆಯನ್ನು ಕಲಿಯುವ ಅವಕಾಶದಿಂದ ವಂಚಿತರಾಗಲಿದ್ದಾರೆ. ಭಾಷಾ ಅಲ್ಪಸಂಖ್ಯಾತರ ಮೂಲಭೂತ ಹಕ್ಕನ್ನು ದಮನ ಮಾಡುವ ಇಂತಹ ನಡೆಯನ್ನು ಕೇರಳದ ಕಮ್ಯುನಿಸ್ಟ್ ಸರ್ಕಾರದಿಂದ ನಾವು ನಿರೀಕ್ಷಿಸಿರಲಿಲ್ಲ. ಕಾಸರಗೋಡು ಇಂದು ಆಡಳಿತಾತ್ಮಕವಾಗಿ ಕೇರಳ ರಾಜ್ಯಕ್ಕೆ ಸೇರಿದ್ದರೂ ಅದು ಭಾವನಾತ್ಮಕವಾಗಿ ಕರ್ನಾಟಕ ರಾಜ್ಯಕ್ಕೆ ಸೇರಿದ್ದಾಗಿದೆ. ಅಲ್ಲಿನ ಜನ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯದ ಜೊತೆ ಮಿಳಿತವಾಗಿದ್ದಾರೆ. ಅವರು ಕರ್ನಾಟಕದ ಕನ್ನಡಿಗರಿಗಿಂತ ಕಡಿಮೆ ಕನ್ನಡಿಗರೇನಲ್ಲ.…
ಬದುಕಿರುವ ಪ್ರತಿಯೊಬ್ಬ ವ್ಯಕ್ತಿಗೆ ಜನನ ಪ್ರಮಾಣ ಪತ್ರ ತುಂಬಾ ಅಗತ್ಯವಾದ ದಾಖಲೆಯಾಗಿದೆ ಮತ್ತು ವ್ಯಕ್ತಿಯ ಮರಣದ ನಂತರ ಕುಟುಂಬದವರಿಗೆ ಮರಣ ಪ್ರಮಾಣಪತ್ರ ಉಪಯುಕ್ತವಾದ ದಾಖಲೆಯಾಗಿದ್ದು, ಜನನ ಮತ್ತು ಮರಣ ಪ್ರಮಾಣ ಪತ್ರಗಳು ಜನರಿಗೆ ಸಕಾಲದಲ್ಲಿ ಸಿಗುವಂತಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು. ಅವರು ಶುಕ್ರವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಸಾಂಖ್ಯಿಕ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ನಾಗರೀಕ ನೋಂದಣಿ ಪದ್ದತಿಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. “ಜನನ ಮರಣ ನೋಂದಣಿ ಅಧಿನಿಯಮಗಳು-1969” ಹಾಗೂ “ಕರ್ನಾಟಕ ಜನನ ಮರಣ ನೋಂದಣಿ ನಿಯಮಗಳು 1999” ರನ್ವಯ ಜನನ, ಮರಣ ಮತ್ತು ನಿರ್ಜೀವ ಜನನಗಳ ನೋಂದಣಿ ಕಡ್ಡಾಯವಾಗಿದೆ. ನಿಗದಿತ ಅವಧಿಯೊಳಗೆ ಯಾವುದೇ ಶುಲ್ಕವಿಲ್ಲದೆ ಜನನ ಮರಣ ನೋಂದಣಿ ಮಾಡಲು ಅವಕಾಶವಿದ್ದು, ಆ ಅವಧಿಯೊಳಗೆ ಜನನ ಮರಣ ಮಾಹಿತಿಯು ಸಂಬಂಧಿಸಿದ ತಂತ್ರಾಶದಲ್ಲಿ ದಾಖಲಿಸಬೇಕು. ಜನನ-ಮರಣ ನೋಂದಣಿಯನ್ನು ಅಧಿನಿಯಮ ಮತ್ತು ನಿಯಮಗಳಂತೆ ಹಾಗೂ 2024ರ ತಿದ್ದುಪಡಿ ನಿಯಮದಂತೆ ಅನುಷ್ಠಾನಕ್ಕೆ ಕ್ರಮವಹಿಸಬೇಕು. ಶೇ.100…
ಬೆಂಗಳೂರು : ನಿಮ್ಮ ಜಮೀನಿಗೆ ಇ-ಖಾತಾ ಪಡೆಯುವುದು ಈಗ ಸುಲಭ, ಮನೆಯಲ್ಲೇ ಕುಳಿತು ಆನ್ಲೈನ್ ಮೂಲಕ ಕೃಷಿಯೇತರ ಜಮೀನಿನ ಇ-ಖಾತಾ ಪಡೆದುಕೊಳ್ಳಿ. https://eswathu.karnataka.gov.in/ ಪೋರ್ಟಲ್ನಲ್ಲಿಯೇ ಸಿಗಲಿದೆ ನಮೂನೆ 9 ಮತ್ತು ನಮೂನೆ 11. ಗ್ರಾಮೀಣ ಜನರು ದಾಖಲೆಗಾಗಿ ಅಲೆದಾಡುವ ಅಗತ್ಯ ಇನ್ನಿಲ್ಲ, ಗ್ರಾಮೀಣ ಪ್ರದೇಶದ ಜನರು https://eswathu.karnataka.gov.in ವೆಬ್ಸೈಟ್ಗೆ ಲಾಗಿನ್ ಆಗುವ ಮೂಲಕ ಮನೆಯಲ್ಲಿಯೇ ಕುಳಿತು ತಮ್ಮ ಕೃಷಿಯೇತರ ಜಮೀನಿಗೆ ಇ-ಖಾತಾ ಪಡೆಯಲು ಅವಕಾಶ ನೀಡಲಾಗಿದೆ. ಇ-ಸ್ವತ್ತು ಸಹಾಯವಾಣಿ ಸಂಖ್ಯೆ- 9483476000 ಇ-ಸ್ವತ್ತು ತಂತ್ರಾಂಶದಲ್ಲಿನ ಬದಲಾವಣೆಗಳು ಸಾರ್ವಜನಿಕರು ಮನೆಯಲ್ಲಿದ್ದೇ ಆಸ್ತಿ ದಾಖಲೆಗಳನ್ನು ಪಡೆಯಬಹುದು. ಇ-ಸ್ವತ್ತು ನಮೂನೆಗಳನ್ನು ನಿಗದಿತ ಕಾಲಾವಧಿಯೊಳಗೆ ಪಡೆಯಬಹುದು. ನಿಗದಿತ ಅವಧಿಯಲ್ಲಿ ಅಧಿಕಾರಿಗಳು ಅನುಮೋದನೆ ನೀಡದಿದ್ದಲ್ಲಿ ಸ್ವಯಂಚಾಲಿತ ಅನುಮೋದನೆಗೆ ಅವಕಾಶ. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ತೆರಿಗೆಗೆ ಒಳಪಡದ ಎಲ್ಲ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ಒಳಪಡಿಸಲು ಅವಕಾಶ. ಇ-ಖಾತಾ ವಿತರಣೆಯಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರ ಅನುಮೋದನೆಗೆ ಅವಕಾಶ. ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಏಕರೂಪದ/ಮಾದರಿಯ ತೆರಿಗೆ ಹಾಗೂ ಶುಲ್ಕಗಳ ನಿಗದಿ. ಗ್ರಾಮ ಪಂಚಾಯತಿ…
ಬೆಂಗಳೂರು : ಭಾರತೀಯ ಸಿನಿಮಾ ಮತ್ತೊಮ್ಮೆ ಜಾಗತಿಕ ಆಸ್ಕರ್ ಪ್ರಶಸ್ತಿಗೆ ಸದ್ದಿಲ್ಲದೆ ಹೆಜ್ಜೆ ಹಾಕಿದೆ. 98ನೇ ಅಕಾಡೆಮಿ ಪ್ರಶಸ್ತಿಗಳಿಗೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆ, ಎರಡು ಭಾರತೀಯ ಚಿತ್ರಗಳಾದ ಕಾಂತಾರಾ: ಎ ಲೆಜೆಂಡ್ – ಅಧ್ಯಾಯ 1 ಮತ್ತು ತನ್ವಿ ದಿ ಗ್ರೇಟ್, ಅತ್ಯುತ್ತಮ ಚಿತ್ರಕ್ಕಾಗಿ ಅಧಿಕೃತ ಅರ್ಹತಾ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, ಈ ವರ್ಷ ಸ್ಪರ್ಧೆಯಲ್ಲಿರುವ 201 ಚಲನಚಿತ್ರಗಳಲ್ಲಿ ಸ್ಥಾನ ಪಡೆದಿವೆ. ವರದಿಗಳ ಪ್ರಕಾರ, ಅಕಾಡೆಮಿ ಆಫ್ ಮೋಷನ್ ಪಿಕ್ಚರ್ ಆರ್ಟ್ಸ್ ಅಂಡ್ ಸೈನ್ಸಸ್ (AMPAS) ಅತ್ಯುತ್ತಮ ಚಿತ್ರ ರೇಸ್ಗೆ ನೇರವಾಗಿ ಅರ್ಹತೆ ಪಡೆಯುವ ಚಲನಚಿತ್ರಗಳ ಪಟ್ಟಿಯನ್ನು ದೃಢಪಡಿಸಿದೆ. ಎರಡೂ ಭಾರತೀಯ ಶೀರ್ಷಿಕೆಗಳು ಅಕಾಡೆಮಿಯ ಹೆಚ್ಚುವರಿ ಅರ್ಹತಾ ನಿಯಮಗಳನ್ನು ಪೂರೈಸಿವೆ, ಅದು ಪ್ರಮಾಣಿತ ಪ್ರವೇಶ ಅವಶ್ಯಕತೆಗಳನ್ನು ಮೀರಿದೆ. ಚಲನಚಿತ್ರಗಳು ಅಕಾಡೆಮಿಯ ನಾಲ್ಕು ಸೇರ್ಪಡೆ ಮಾನದಂಡಗಳಲ್ಲಿ ಕನಿಷ್ಠ ಎರಡನ್ನು ಪೂರೈಸಬೇಕಾಗಿತ್ತು. ಇದರ ಜೊತೆಗೆ, 2025 ರಲ್ಲಿ ಬಿಡುಗಡೆಯಾದ 45 ದಿನಗಳ ಒಳಗೆ ಅಮೆರಿಕದ 50 ಪ್ರಮುಖ ಮಾರುಕಟ್ಟೆಗಳಲ್ಲಿ ಕನಿಷ್ಠ 10 ಚಿತ್ರಗಳಲ್ಲಿ ನಾಟಕ ಪ್ರದರ್ಶನವನ್ನು…














