Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ರಾಜ್ಯದ ಸರ್ಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಂತ ಅಧಿಕಾರಿ, ನೌಕರರು ಕಚೇರಿಯ ವೇಳೆಯಲ್ಲಿ ಈ ಮುಖ್ಯ ಸೂಚನೆಗಳನ್ನು ಪಾಲನೆ ಮಾಡಬೇಕು ಎಂಬುದಾಗಿ ಸರ್ಕಾರ ಖಡಕ್ ಆದೇಶ ಮಾಡಿದೆ. ಈ ಸಂಬಂಧ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಆದೇಶ ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗಳು ಸಮಯ ಪಾಲನ ಮಾಡದಿರುವುದು, ಚಲನ-ವಲನ ವಹಿಯನ್ನು ನಿರ್ವಹಿಸದಿರುವುದು, ಕರ್ತವ್ಯದ ಅವಧಿಯಲ್ಲಿ ಗುರುತಿನ ಚೀಟಿಯನ್ನು ಧರಿಸದಿರುವುದು, ಅಧಿಕಾರಿ/ಸಿಬ್ಬಂದಿಗಳ ಹೆಸರು ಮತ್ತು ಹುದ್ದೆಯ ನಾಮ ಫಲಕಗಳನ್ನು ಅಳವಡಿಸದಿರುವ ಬಗ್ಗೆ ದೂರುಗಳು ಸ್ವೀಕೃತವಾಗಿರುವುದರಿಂದ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಈ ಕಳಕಂಡ ಸೂಚನಗಳನ್ನು ಪಾಲಿಸಲು ಸೂಚಿಸಿದ್ದಾರೆ. 1. ನಿಯಮಗಳ ಪುಕಾರ ಕಛೇರಿಗೆ ಬರುವ ವೇಳೆ ಹಾಗೂ ಕಛೇರಿಯಿಂದ ಹೊರಡುವ ವೇಳೆಯನ್ನು ಪಾಲನೆ ಮಾಡುವುದು. 2. ಕಛೇರಿ ಅವಧಿ ಪೂರ್ಣವಾಗುವವರೆಗೆ ತಮಗೆ ನಿಗದಿಪಡಿಸಿದ ಸ್ಥಾನದಲ್ಲಿ ಇದ್ದು ಕರ್ತವ್ಯ ನಿರ್ವಹಿಸತಕ್ಕದ್ದು. 3. ಕಛೇರಿ ಸಮಯದಲ್ಲಿ ನೌಕರರು/ಅಧಿಕಾರಿಗಳು ಕಛೇರಿ ಕೆಲಸದ ನಿಮಿತ್ತ…
ಮೂತ್ರದ ಬಣ್ಣವನ್ನು ಅವಲಂಬಿಸಿ, ನಮ್ಮ ದೇಹದಲ್ಲಿ ಯಾವ ರೀತಿಯ ಸಮಸ್ಯೆಗಳಿವೆ ಎಂದು ನಾವು ತಿಳಿಯಬಹುದು. ನಾವು ಪ್ರತಿದಿನ ಸೇವಿಸುವ ಆಹಾರ ಪದ್ಧತಿಯು ಮೂತ್ರದ ಬಣ್ಣವನ್ನು ಬದಲಾಯಿಸಲು ಕಾರಣವಾಗಬಹುದು. ಅಂತೆಯೇ, ನಮ್ಮ ದೇಹದಿಂದ ಹೊರಬರುವ ಮೂತ್ರದ ಬಣ್ಣವು ನಾವು ಕುಡಿಯುವ ನೀರಿನ ಪ್ರಮಾಣ ಮತ್ತು ನಾವು ಪ್ರತಿದಿನ ತೆಗೆದುಕೊಳ್ಳುವ ಔಷಧಿಗಳನ್ನು ಅವಲಂಬಿಸಿ ಬದಲಾಗುತ್ತದೆ. ಬಿಳಿ ಬಣ್ಣದ ಮೂತ್ರ ಮೂತ್ರ ನಾವು ಮೂತ್ರ ವಿಸರ್ಜಿಸುವಾಗ, ಮೂತ್ರವು ಸ್ಪಷ್ಟ ಮತ್ತು ಬಣ್ಣರಹಿತವಾಗಿದ್ದರೆ, ಅದು ಮಧುಮೇಹದ ಸಂಕೇತವಾಗಿರಬಹುದು. ಮಧುಮೇಹದ ಇತರ ಲಕ್ಷಣಗಳೆಂದರೆ ಆಗಾಗ್ಗೆ ಬಾಯಾರಿಕೆ ಮತ್ತು ಆಗಾಗ್ಗೆ ಮೂತ್ರವಿಸರ್ಜನೆ. ಕಂದು ಮೂತ್ರ ಸಾಮಾನ್ಯವಾಗಿ, ನಮಗೆ ಇತರ ದೈಹಿಕ ಸಮಸ್ಯೆಗಳಿದ್ದರೆ, ಮೂತ್ರವು ಕಂದು ಬಣ್ಣದಲ್ಲಿರುತ್ತದೆ. ಮತ್ತು ಶ್ವಾಸಕೋಶದ ಕಾಯಿಲೆ ಇರುವವರಲ್ಲಿ, ಮೂತ್ರವು ಕಂದು ಬಣ್ಣದ್ದಾಗಿರಬಹುದು. ಆದ್ದರಿಂದ, ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳುವುದು ಸೂಕ್ತ. ಕೆಂಪು ಮೂತ್ರ ನಮ್ಮ ಮೂತ್ರದಲ್ಲಿ ರಕ್ತವು ಬೆರೆತಾಗ ಮೂತ್ರವು ಕೆಂಪು ಬಣ್ಣದಲ್ಲಿರುತ್ತದೆ. ಮತ್ತು ಮೂತ್ರವು ಕೆಂಪು ಬಣ್ಣದಲ್ಲಿದ್ದರೆ, ನೀವು ಮೂತ್ರನಾಳದ ಸೋಂಕುಗಳು, ಮೂತ್ರಪಿಂಡ ಮತ್ತು ಮೂತ್ರಕೋಶದ…
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಹತ್ಯೆ ನಡೆದಿದ್ದು, ಸ್ನೇಹಿತರೇ ಗೆಳಯನನ್ನು ಕೊಲೆ ಮಾಡಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿ ತಾಲೂಕಿನ ವಾಜರಹಳ್ಳಿ ಗ್ರಾಮದ ಬಳಿ ಜೊತೆಗಿದ್ದ ಸ್ನೇಹಿತರೇ ವಿನೋದ್ ಕುಮಾರ್ (26) ಕೆರೆಯಲ್ಲಿ ಮುಳುಗಿಸಿ ಹತ್ಯೆ ಮಾಡಲಾಗಿದೆ. ಸ್ನೇಹಿತರು ಜನವರಿ 1 ರಂದು ಪಾರ್ಟಿಗೆ ತೆರಳಿದ್ದರು. ಡ್ರಿಂಕ್ಸ್ ಗೆ ಎಳನೀರು ಬೆರೆಸಲು ವಿನೋದ್ ಮರ ಹತ್ತಿದ್ದ. ಈ ವೇಳೆ ಮರದಿಂದ ಬಿದ್ದ ವಿನೋದ್ ಕುಮಾರ್ ಬೆನ್ನುಮೂಳೆ ಮುರಿದುಹೋಗಿತ್ತು. ಹೀಗಾಗಿ ಚಿಕಿತ್ಸೆಗೆ ಲಕ್ಷಾಂತರ ರೂ. ಖರ್ಚಾಗುತ್ತದೆ ಎಂದು ಮನೆಗೆ ಕರೆದೊಯ್ಯುವುದಾಗಿ ಕೆರೆಯಲ್ಲಿ ಮುಳುಗಿಸಿ ಕೊಲೆ ಮಾಡಲಾಗಿದೆ. ಪೊಲೀಸರ ತನಿಖೆಯಿಂದ ಕೊಲೆ ಪ್ರಕರಣ ಬಹಿರಂಗವಾಗಿದ್ದು, ಸದ್ಯ ಸ್ನೇಹಿತನನ್ನು ಕೊಲೆ ಮಾಡಿದ ಸುದೀಪ್, ಪ್ರಜ್ವಲ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಕುರಿತು ಇಂದು ಸುಪ್ರೀಂಕೋರ್ಟ್ ನಲ್ಲಿ ಮಹಾರಾಷ್ಟ್ರದ ಅರ್ಜಿ ವಿಚಾರಣೆ ನಡೆಯಲಿದೆ. ಮಹಾರಾಷ್ಟ್ರ ಸರ್ಕಾರವು ಬೆಳಗಾವಿ ಸೇರಿದಂತೆ ಕರ್ನಾಟಕದಲ್ಲಿರುವ 865 ನಗರ, ಪಟ್ಟಣ, ಗ್ರಾಮಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎನ್ನುವ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಬೇಕೇ ಅಥವಾ ತಿರಸ್ಕರಿಸಬೇಕೆ ಎನ್ನುವ ಬಗ್ಗೆ ಸುಪ್ರೀಂ ಕೋರ್ಟ್ ನಿಂದ ಮಹತ್ವದ ನಿರ್ಣಯ ಹೊರಬೀಳುವ ಸಾಧ್ಯತೆ ಇದೆ. ಸುಪ್ರೀಂ ಕೋರ್ಟ್ನಲ್ಲಿ ಕರ್ನಾಟಕ ಪರವಾಗಿ ಹಿರಿಯ ನ್ಯಾಯವಾದಿ ನಿಶಾಂತ ಪಾಟೀಲ ವಕಾಲತ್ತು ವಹಿಸಲಿದ್ದಾರೆ. ಮಹಾರಾಷ್ಟ್ರ ಸರ್ಕಾರ ಸಲ್ಲಿಸಿರುವ ಅರ್ಜಿಯನ್ನು ತಿರಸ್ಕರಿಸುವಂತೆ ಕರ್ನಾಟಕ ಸರ್ಕಾರ ಮನವಿ ಮಾಡುವ ಸಾಧ್ಯತೆ ಇದೆ. 2004ರಲ್ಲಿ ಮಹಾರಾಷ್ಟ್ರ ಸುಪ್ರೀಂ ಕೋರ್ಟ್ ಗೆ ಗಡಿ ವಿವಾದ ಬಗ್ಗೆ ಅರ್ಜಿ ಸಲ್ಲಿಸಿದೆ. ಇದಕ್ಕೆ ಕರ್ನಾಟಕ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಒಂದು ವೇಳೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿದರೆ ಎರಡು ರಾಜ್ಯಗಳ ವಾದ, ಪ್ರತಿವಾದಕ್ಕೆ ಚಾಲನೆ ಸಿಗಲಿದೆ.
ನವದೆಹಲಿ : ಲಿವ್-ಇನ್ ಸಂಬಂಧಗಳ ಹೆಚ್ಚುತ್ತಿರುವ ಪ್ರವೃತ್ತಿಯ ಬಗ್ಗೆ ಮದ್ರಾಸ್ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಇದನ್ನು ಸಾಂಸ್ಕೃತಿಕ ಆಘಾತ ಎಂದು ಕರೆದ ನ್ಯಾಯಾಲಯವು, ಅಂತಹ ಸಂಬಂಧಗಳಲ್ಲಿರುವ ಮಹಿಳೆಯರಿಗೆ ಹೆಂಡತಿಯ ಸ್ಥಾನಮಾನವನ್ನು ನೀಡಬೇಕು ಮತ್ತು ರಕ್ಷಿಸಬೇಕು ಎಂದು ಹೇಳಿದೆ. ನ್ಯಾಯಾಧೀಶ ಎಸ್. ಶ್ರೀಮತಿ ತಮ್ಮ ತೀರ್ಪಿನಲ್ಲಿ, “ಲಿವ್-ಇನ್ ಸಂಬಂಧಗಳು ಭಾರತೀಯ ಸಮಾಜಕ್ಕೆ ಸಾಂಸ್ಕೃತಿಕ ಆಘಾತವಾಗಿದೆ, ಆದರೆ ಅವು ಎಲ್ಲೆಡೆ ದೊಡ್ಡ ಪ್ರಮಾಣದಲ್ಲಿ ಸಂಭವಿಸುತ್ತಿವೆ. ಹುಡುಗಿಯರು ತಾವು ಆಧುನಿಕರು ಎಂದು ಭಾವಿಸುತ್ತಾರೆ ಮತ್ತು ಲಿವ್-ಇನ್ ಸಂಬಂಧಗಳಲ್ಲಿ ವಾಸಿಸಲು ನಿರ್ಧರಿಸುತ್ತಾರೆ. ಆದರೆ ಸ್ವಲ್ಪ ಸಮಯದ ನಂತರ, ಈ ಸಂಬಂಧವು ಮದುವೆಯಂತೆಯೇ ರಕ್ಷಣೆಯನ್ನು ಒದಗಿಸುವುದಿಲ್ಲ ಎಂದು ಅವರು ಅರಿತುಕೊಳ್ಳುತ್ತಾರೆ.” ಲಿವ್-ಇನ್ ಸಂಬಂಧಗಳಲ್ಲಿರುವ ಮಹಿಳೆಯರಿಗೆ ಹೆಂಡತಿಯ ಸ್ಥಾನಮಾನವನ್ನು ನೀಡಬೇಕು ಮತ್ತು ರಕ್ಷಿಸಬೇಕು ಎಂದು ನ್ಯಾಯಾಧೀಶರು ಹೇಳಿದರು, ಇದರಿಂದಾಗಿ ಸಂಬಂಧವು ಕಷ್ಟಕರ ಸಮಯಗಳನ್ನು ಎದುರಿಸುತ್ತಿದ್ದರೂ ಸಹ ಅವರು ಹೆಂಡತಿಯ ಹಕ್ಕುಗಳನ್ನು ಆನಂದಿಸಬಹುದು. ಲಿವ್-ಇನ್ ಸಂಬಂಧಗಳಲ್ಲಿ ಮಹಿಳೆಯರಿಗೆ ಯಾವುದೇ ಕಾನೂನು ರಕ್ಷಣೆ ಇಲ್ಲ ಎಂದು ಗಮನಿಸಿದ ನ್ಯಾಯಾಧೀಶರು, ಮಹಿಳೆಯರ ಒಂದು ಭಾಗವು…
ವಿವಿಧ ಕಾರ್ಮಿಕ ಕಾಯ್ದೆಗಳ ಅಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಅವರ ಋತು ಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯವನ್ನು ಉದ್ಯೋಗದಾತರು ನೀಡಬೇಕು ಎಂದು ಧಾರವಾಡ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತ ಸಚಿನ್ ವಾಯ್. ಹಳೇಮನಿ ಅವರು ತಿಳಿಸಿದ್ದಾರೆ. ಕಾರ್ಖಾನೆಗಳ ಕಾಯ್ದೆ 1948, ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ 1961, ಗುತ್ತಿಗೆ ಕಾರ್ಮಿಕ(ನಿ&ರ)ಕಾಯ್ದೆ 1970, ಬೀಡಿ ಮತ್ತು ಸಿಗಾರ ಕಾರ್ಮಿಕರ ಕಾಯ್ದೆ 1966, ಮತ್ತು ಮೋಟಾರ ಸಾರಿಗೆ ಕಾರ್ಮಿಕರ ಕಾಯ್ದೆ 1961ರಡಿ ನೋಂದಣಿಯಾಗಿರುವ ಎಲ್ಲಾ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 18 ರಿಂದ 52 ವರ್ಷದ ವಯೋಮಿತಿಯ ಒಳಗಿನ ಎಲ್ಲಾ ಖಾಯಂ, ಗುತ್ತಿಗೆ, ಹೊರ ಗುತ್ತಿಗೆ ಮಹಿಳಾ ಕಾರ್ಮಿಕರಿಗೆ ಅವರ ಋತು ಚಕ್ರದ ಸಮಯದಲ್ಲಿ ಪ್ರತಿ ಮಾಸಿಕ ಒಂದು ದಿನದ ರಜೆಯಂತೆ ವಾರ್ಷಿಕ 12 ದಿನಗಳ ವೇತನ ಸಹಿತ ರಜೆಯ ಸೌಲಭ್ಯವನ್ನು ಉದ್ಯೋಗದಾತರು ಒದಗಿಸುವಂತೆ ಸರ್ಕಾರವು ಆದೇಶಿಸಿದೆ. ಯಾವುದೇ ವೈದ್ಯಕೀಯ ಪ್ರಮಾಣಪತ್ರ,…
ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೃಷಿ ಯಂತ್ರೋಪಕರಣಗಳ ಖರೀದಿಗೆ 3 ಲಕ್ಷ ರೂ.ಸಹಾಯಧನ ನೀಡಲಿದೆ. ರೈತರು ಸಕಾಲದಲ್ಲಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವುದನ್ನು ಅನುವು ಮಾಡಿಕೊಡಲು ಹಾಗೂ ಕೂಲಿ ಕಾರ್ಮಿಕರ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು, ಸದರಿ ಕೃಷಿ ಯಾಂತ್ರೀಕರಣ ಯೋಜನೆಉಡಿ ಕೃಷಿ ಯಂತ್ರೋಪಕರಣಗಳಿಗೆ ಸಾಮಾನ್ಯ ವರ್ಗದ ರೈತರಿಗೆ ಶೇ. 50 ಹಾಗೂ ಪ.ಜಾ/ಪ.ಪಂ. ರೈತರಿಗೆ ಶೇ.90 ರಂತ ಎಲ್ಲಾ ವರ್ಗದ ರೈತರಿಗೆ ಗರಿಷ್ಠ ರೂ.3.00 ಲಕ್ಷಕ್ಕೆ ಮಿತಿಗೊಳಪಟ್ಟು ಸಹಾಯಧನವನ್ನು ಒದಗಿಸಲಾಗುತ್ತಿದೆ. ಕೃಷಿ ಸಂಸ್ಕರಣಾ ಘಟಕಗಳು ಮತ್ತು ಟಾರ್ಪಾಲಿನ್ಗಳನ್ನು ಪ.ಜಾ/ಪ.ಪಂ ರೈತರಿಗೆ 90% ಸಬ್ಸಿಡಿಯಲ್ಲಿ ಮತ್ತು ಸಾಮಾನ್ಯ ರೈತರಿಗೆ 50% ಸಬ್ಸಿಡಿಯಲ್ಲಿ ವಿತರಿಸಲಾಗುತ್ತದೆ. ಉದ್ದೇಶಗಳು ಕೂಲಿ ಕಾರ್ಮಿಕರ ಕೊರತೆಯನ್ನು ಪೂರೈಸಲು ಮತ್ತು ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವಲ್ಲಿ ಪರಿಶ್ರಮವನ್ನು ಕಡಿಮೆಗೊಳಿಸುವುದು. ಸಕಾಲದಲ್ಲಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಪ್ರೋತ್ಸಾಹ, ಸಮಯವನ್ನು ಉಳಿಸಲು ಹಾಗೂ ಕಡಿಮೆ ಅವಧಿಯಲ್ಲಿ ಹೆಚ್ಚಿನ ಪ್ರದೇಶವನ್ನು ಆವರಿಸುವುದು. ಕೃಷಿ ಚಟುವಟಿಕೆಗಳ ಸಮರ್ಥತೆಯನ್ನು ಹೆಚ್ಚಿಸುವುದರ ಮೂಲಕ ಉತ್ಪಾದನೆ ಮತ್ತು…
ಕೊಬ್ಬಿನ ಗಡ್ಡೆಗಳು ಎದೆ, ಕಂಕುಳು, ಬೆನ್ನು, ತೊಡೆಗಳು, ಕೈಗಳು ಮತ್ತು ಕುತ್ತಿಗೆ ಸೇರಿದಂತೆ ದೇಹದ ಮೇಲೆ ಸಣ್ಣ ಉಂಡೆಗಳಾಗಿ ಕಾಣಿಸಿಕೊಳ್ಳುತ್ತವೆ. ಈ ಕೊಬ್ಬಿನ ಗಡ್ಡೆಗಳು ಸ್ಪರ್ಶಿಸಿದಾಗ ನೋವು ಉಂಟು ಮಾಡುವುದಿಲ್ಲ. ಈ ಕೊಬ್ಬಿನ ಗಡ್ಡೆ ಯಾವುದೇ ಹಾನಿಯನ್ನು ಉಂಟುಮಾಡದಿದ್ದರೂ, ನಾವು ಅವುಗಳಿಗೆ ಚಿಕಿತ್ಸೆ ಪಡೆಯುವುದು ಸೂಕ್ತ. ಕೊಬ್ಬಿನ ಗಡ್ಡೆಗಳನ್ನು ಕರಗಿಸಲು ಅತ್ಯುತ್ತಮ ಮನೆಮದ್ದು.! 1) ಕಪ್ಪು ಜೀರಿಗೆ – 1 ಟೀಸ್ಪೂನ್ 2) ಅರಿಶಿನ ಪುಡಿ – 5 ಗ್ರಾಂ ನೀರು – 1 ಲೋಟ ಮಾಡುವ ವಿಧಾನ :- ಒಂದು ಲೋಟದಲ್ಲಿ ನೀರನ್ನು ಸುರಿಯಿರಿ ಮತ್ತು ಅದಕ್ಕೆ ಒಂದು ಟೀಸ್ಪೂನ್ ಕಪ್ಪು ಜೀರಿಗೆಯನ್ನ ಸೇರಿಸಿ. ನಂತರ, ಐದು ಗ್ರಾಂ ಅರಿಶಿನ ಪುಡಿಯನ್ನ ಸೇರಿಸಿ ಮತ್ತು ರಾತ್ರಿಯಿಡೀ ನೆನೆಸಿಡಿ. ಮರುದಿನ, ಈ ಕಪ್ಪು ಜೀರಿಗೆ ನೀರನ್ನ ಒಂದು ಬಟ್ಟಲಿನಲ್ಲಿ ತೆಗೆದುಕೊಂಡು ಒಲೆಯ ಮೇಲೆ ಕಡಿಮೆ ಶಾಖದಲ್ಲಿ ಎರಡು ನಿಮಿಷಗಳ ಕಾಲ ಕುದಿಸಿ. ನಂತರ, ನೀವು ಈ ಪಾನೀಯವನ್ನು ಸೋಸಿ ಕುಡಿದರೆ, ಕೊಬ್ಬಿನ…
ಆಹಾರ ಭದ್ರತಾ ಕಾಯ್ದೆಯು ಪರಿಣಾಮಕಾರಿಯಾಗಿ ಜಾರಿಯಾಗಬೇಕು. ಇದನ್ನು ಖಾತ್ರಿಪಡಿಸುವ ಉದ್ದೇಶದಿಂದ ನಾಲ್ಕು ದಿನಗಳ ಜಿಲ್ಲಾ ಭೇಟಿ ಕೈಗೊಂಡಿದ್ದು ಪರಿಶೀಲನೆ ನಡೆಸಿ, ಸರ್ಕಾರಕ್ಕೆ ವರದಿ ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ.ಹೆಚ್ ಕೃಷ್ಣ ತಿಳಿಸಿದರು. ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ರಾಜ್ಯ ಆಹಾರ ಆಯೋಗದ ಜಿಲ್ಲೆಯ ಭೇಟಿ ಮತ್ತು ಪರಿಶೀಲನೆ ಕುರಿತು ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿದರು. ಹಿಂದೆ ಆಹಾರದ ಕೊರತೆ ಇತ್ತು. ಇದೀಗ ಕೊರತೆ ಇಲ್ಲ, ಆಹಾರ ನಮ್ಮ ಹಕ್ಕಾಗಿದ್ದು ಆಹಾರ ಭದ್ರತೆ ಒದಗಿಸಲಾಗಿದೆ. ಆಹಾರ ಭದ್ರತಾ ಕಾಯ್ದೆಯು ಕಾನೂನಾತ್ಮಕ ಭದ್ರತೆ ನೀಡಿದ್ದು ಸರ್ಕಾರದ ವಿವಿಧ ಆಹಾರ ಯೋಜನೆಗಳ ಪರಿಣಾಮಕಾರಿ ಅನುಷ್ಟಾನದ ಕುರಿತು ಪರಿಶೀಲನೆ ನಡೆಸಲಾಗುವುದು. ಗ್ರಾಮ ಮಟ್ಟದಿಂದ ರಾಜ್ಯ ಮಟ್ಟದ ವರೆಗೆ ಎಲ್ಲಾ ಹಂತದಲ್ಲಿಯೂ ಕಾಯ್ದೆಯು ಸಮರ್ಪಕವಾಗಿ ಅನುಷ್ಟಾನವಾಗಬೇಕು. ಅಧಿಕಾರಿಗಳು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದರು. ನ್ಯಾಯಬೆಲೆ ಅಂಗಡಿಗಳ ಕುರಿತು ಹೆಚ್ಚಿನ ದೂರುಗಳಿವೆ. ನ್ಯಾಯಬೆಲೆ ಅಂಗಡಿಗಳು ಸಮರ್ಪಕವಾಗಿ ಪಡಿತರ ವಿತರಣೆ ಮಾಡಬೇಕು. ತಿಂಗಳಲ್ಲಿ…
ಬೆಂಗಳೂರು : ದೃಷ್ಟಿದೋಷವುಳ್ಳವರಿಗೆ ಅನುಕೂಲವಾಗುವಂತೆ ಔಷಧಗಳ ಮೇಲೆ ಕ್ಯೂಆರ್ ಕೋಡ್ ಆಧಾರಿತ ಮಾಹಿತಿ ವ್ಯವಸ್ಥೆ ಜಾರಿಗೊಳಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ. ಫಾರ್ಮಸಿಸ್ಟ್ಗಳಾಗಿ ಕೆಲಸ ಮಾಡುವ ಅಂಧರು, ಔಷಧಿ ಲೇಬಲ್ಗಳು, ಸೂಚನೆಗಳು ಮತ್ತು ಪ್ಯಾಕೇಜಿಂಗ್ನ ಕಾರಣದಿಂದ ಎದುರಿಸುವ ತೊಂದರೆಗಳನ್ನು ಎದುರಿಸುತ್ತಾರೆ. ಈ ತಂತ್ರಜ್ಞಾನ ಅವರ ಸಮಸ್ಯೆಗೆ ಪರಿಹಾರ ನೀಡಲಿದೆ. ಐದು ರಾಜ್ಯಗಳಲ್ಲಿ ಸಂಗ್ರಹಿಸಿದ ಸಂಶೋಧನಾ ಮಾಹಿತಿಯನ್ನು ನೋಡಿದಾಗ ಮತ್ತು ತಂತ್ರಜ್ಞಾನದ ಮೂಲಕ ಔಷಧಿ ಸುರಕ್ಷತೆ ಮತ್ತು ಅಂಧರು ಸ್ವಾವಲಂಬನೆಯನ್ನು ಹೇಗೆ ಸುಧಾರಿಸಬಹುದಾಗಿದೆ ಎಂಬುದು ತಿಳಿಯುತ್ತದೆ. ಅಂಧರ ಅನುಭವಗಳು ಮತ್ತು ಸಂಶೋಧನಾ ಫಲಿತಾಂಶಗಳನ್ನು ನೋಡಿದಾಗ ರಾಜ್ಯ ಮಟ್ಟದಲ್ಲಿ ಇದನ್ನು ಅಳವಡಿಸಬಹುದಾಗಿದೆ. ಜಪಾನ್ನ ಎಕ್ಸ್ಪೋರ್ಟ್ ಜಪಾನ್ ಇಂಕ್ ಮತ್ತು ಡೆಲಾಯಿಟ್ ತೊಮಾತ್ಸು ಫೈನಾನ್ಶಿಯಲ್ ಅಡ್ವೈಸರಿ ಪ್ರತಿನಿಧಿಗಳು, ಅಂಧರಿಗೆ ಅನುಕೂಲವಾಗುವ ಮಾಹಿತಿಯ ತಂತ್ರಜ್ಞಾನಗಳು ಔಷಧಿಗಳ ನಿರ್ವಹಣೆಯನ್ನು ಹೇಗೆ ಸುಲಭಗೊಳಿಸಬಹುದು ಎಂಬುದನ್ನು ವಿವರಿಸಿದರು. ಜೆಎಸ್ಎಸ್ ಸಂಶೋಧಕರು ಹಾಗೂ ಅಂಧರು ತಮ್ಮ ಅನುಭವಗಳನ್ನು ಹಂಚಿಕೊಂಡರು. IMPACT-VIP ಯೋಜನೆಯ ಅಡಿಯಲ್ಲಿ…














